ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ: ಸಚಿವ ಪ್ರಹ್ಲಾದ್ ಜೋಶಿ
ಧಾರವಾಡ, ಏ.11: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸ್ ಇಲಾಖೆಯಲ್ಲಿನ ವರ್ಗಾವಣೆ ದಂಧೆ ಮತ್ತು ವ್ಯಾಪಕ ಭ್ರಷ್ಟಾಚಾರದಿಂದಾಗಿ ಈ ಪರಿಸ್ಥಿತಿ ಉದ್ಭವಿಸಿದೆ ಎಂದು ಅವರು ಹೇಳಿದರು. ಇತ್ತೀಚೆಗೆ ಒಬ್ಬ ಕಾಂಗ್ರೆಸ್ ಮುಖಂಡ ಇನ್ನೊಬ್ಬ ಕಾಂಗ್ರೆಸ್ ಮುಖಂಡನನ್ನು ಕೊಲೆ ಮಾಡಿರುವ ಘಟನೆ ಕಾನೂನು ಸುವ್ಯವಸ್ಥೆಯ ದುಸ್ಥಿತಿಗೆ ಉದಾಹರಣೆಯಾಗಿದೆ. ಕಾಂಗ್ರೆಸ್ ಮುಖಂಡರಿಗೆ ರಕ್ಷಣೆಯಿಲ್ಲದಂತಹ ಸ್ಥಿತಿ ಬಂದಿರುವುದು ಆತಂಕಕಾರಿಯಾಗಿದೆ ಎಂದು ಜೋಶಿ ತಿಳಿಸಿದರು. ಲವ್ ಜಿಹಾದ್ ಪ್ರಕರಣಗಳು…