Headlines

ನಾಕೌಟ್​ನಲ್ಲಿ ನಾಲ್ಕು ತಂಡಗಳು: ಇಲ್ಲಿದೆ ವೇಳಾಪಟ್ಟಿ

T20 World Cup 2026:  20 ತಂಡಗಳೊಂದಿಗೆ ಶುರುವಾದ ಟಿ20 ವಿಶ್ವಕಪ್​ನಲ್ಲಿ ಈಗ ಉಳಿದಿರುವುದು ಕೇವಲ 4 ತಂಡಗಳು ಮಾತ್ರ. ಇನ್ನುಳಿದ 16 ತಂಡಗಳ ವಿಶ್ವಕಪ್​ ಅಭಿಯಾನ ಅಂತ್ಯವಾಗಿದೆ. ಈ ನಾಲ್ಕು ತಂಡಗಳು ನಾಕೌಟ್ ಪಂದ್ಯಗಳಲ್ಲಿ ಮುಖಾಮುಖಿಯಾಗಲಿದೆ. ಅಂದರೆ ಸೆಮಿಫೈನಲ್​​​ನಲ್ಲಿ ಕಣಕ್ಕಿಳಿಯಲಿದೆ. ಸೆಮಿಫೈನಲ್ ಪಂದ್ಯಗಳು ಮಾರ್ಚ್ 4 ಮತ್ತು 5 ರಂದು ನಡೆಯಲಿದ್ದು, ಇಲ್ಲಿ ಭಾರತ, ಇಂಗ್ಲೆಂಡ್, ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ತಂಡಗಳು ಕಣಕ್ಕಿಳಿಯಲಿವೆ. ಅಂದರೆ ಗ್ರೂಪ್- 1 ರಿಂದ ಸೆಮಿಫೈನಲ್​ಗೇರಿರುವ ತಂಡಗಳು ಗ್ರೂಪ್-2 ನಿಂದ…

Read More

PBKS vs LSG: ಪಂದ್ಯ ಸೋತರೂ ಪ್ರೇಕ್ಷಕರ ಮನ ಗೆದ್ದ ಪಂತ್ ಬಾರಿಸಿದ ಸಿಕ್ಸರ್ – Kannada News | IPL 2026: PBKS Dominates LSG by 54 Runs; Rishabh Pant’s Epic One Handed Six!

ಐಪಿಎಲ್ 2026 ರ 29ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್​ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ ದಾಖಲೆಯ 254 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಲಕ್ನೋ ತಂಡ 200 ರನ್ ಕಲೆಹಾಕಲಷ್ಟೇ ಶಕ್ತವಾಗಿ 54 ರನ್​​ಗಳಿಂದ ಪಂದ್ಯ ಸೋತಿತು. ಆದಾಗ್ಯೂ ಲಕ್ನೋ ತಂಡದ ಪರ ಏಕಾಂಗಿ ಹೋರಾಟ ನೀಡಿದ ನಾಯಕ ರಿಷಭ್ ಪಂತ್ 23 ಎಸೆತಗಳಲ್ಲಿ 4 ಸಿಕ್ಸರ್ ಸಹಿತ 43 ರನ್ ಬಾರಿಸಿ ಔಟಾದರು. ಇನ್ನಿಂಗ್ಸ್​ನ…

Read More

ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ; ಯುವತಿಯರ ಗಾಯನಕ್ಕೆ ಮೆಚ್ಚುಗೆ – Kannada News | PM Narendra Modi visited Kali temple near Dehradun before inaugurating expressway

ಡೆಹ್ರಾಡೂನ್, ಏಪ್ರಿಲ್ 14: ದೆಹಲಿ, ಉತ್ತರಾಖಂಡ ಮತ್ತು ಉತ್ತರ ಪ್ರದೇಶಗಳನ್ನು ಸಂಪರ್ಕಿಸುವ ಪ್ರಮುಖ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ದೇಶದ ಸಮೃದ್ಧಿ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತಾ ಪ್ರಧಾನಿ ಮೋದಿ ಸುಮಾರು 15 ನಿಮಿಷಗಳ ಕಾಲ ದೇವಾಲಯದಲ್ಲಿ ಸಮಯ ಕಳೆದರು. ಪ್ರಧಾನಿ ಮೋದಿ ಭೇಟಿಗಾಗಿ ದೇವಾಲಯವನ್ನು ಹೂವುಗಳಿಂದ ಅಲಂಕರಿಸಲಾಗಿತ್ತು. ಪ್ರಧಾನಿ ಮೋದಿ ಆಗಮಿಸುತ್ತಿದ್ದಂತೆ ದೇವಾಲಯದ ಎದುರು ಯುವತಿಯರು ಅಯಿಗಿರಿ ನಂದಿನಿ ಭಕ್ತಿಗೀತೆಯನ್ನು ಹಾಡಿದರು….

Read More

ಹೊಸ ರೂಲ್ಸ್​: ಮಲೆ ಮಹದೇಶ್ವರಬೆಟ್ಟಕ್ಕೆ ತೆರಳುವ ಭಕ್ತಾದಿಗಳಿಗೆ ಮಹತ್ವದ ಸೂಚನೆ – Kannada News | Chamarajanagar: Mahadeshwara Betta Bans Night Padyatra After Deadly Leopard Incident

ಚಾಮರಾಜನಗರ, ಜನವರಿ 23: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟದಲ್ಲಿ ಚಿರತೆ (Leopard) ದಾಳಿಗೆ ಭಕ್ತ (Devotees) ಪ್ರವೀಣ್ ಬಲಿ ಪ್ರಕರಣ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ ಪಾದಯಾತ್ರಿಗಳಿಗೆ ಹೊಸ ನಿಯಮ ಜಾರಿ ಮಾಡಿದೆ. ಇನ್ಮುಂದೆ ರಾತ್ರಿ ವೇಳೆ ಬೆಟ್ಟಕ್ಕೆ ಪಾದಯಾತ್ರೆಗೆ ನಿರ್ಬಂಧ ಹೇರಲಾಗಿದೆ. ಕಾಡುಪ್ರಾಣಿಗಳ ಕಾಟ ಹಿನ್ನೆಲೆ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಪಾದಯಾತ್ರೆ ನಿರ್ಬಂಧಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ನೇತೃತ್ವದಲ್ಲಿ ನಿನ್ನೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಘಟನೆ ಹಿನ್ನೆಲೆ …

Read More

ಬಿಜೆಪಿ ವಿರುದ್ಧ ಅಪಪ್ರಚಾರ ಕೇಸ್: ಕರ್ನಾಟಕ ಹೈಕೋರ್ಟ್​ನಲ್ಲಿ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ – Kannada News | Big Relief for Rahul Gandhi in Karnataka High Court Over BJP Defamation Case During Assembly Elections

ಕರ್ನಾಟಕ ಹೈಕೋರ್ಟ್​ನಲ್ಲಿ ರಾಹುಲ್ ಗಾಂಧಿಗೆ ಬಿಗ್ ರಿಲೀಫ್Image Credit source: tv9 ಬೆಂಗಳೂರು, ಫೆಬ್ರವರಿ 17: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ಅವರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ರದ್ದುಪಡಿಸಿ ಆದೇಶಿಸಿದೆ. ಇದರೊಂದಿಗೆ ರಾಹುಲ್ ಗಾಂಧಿ ನಿರಾಳರಾದಂತಾಗಿದೆ. ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್…

Read More

ಮಗುವಿನ ಪಾಲಿಗೆ ರಾಕ್ಷಸಿಯಾದ ಚಿಕ್ಕಮ್ಮ; ಪಾರ್ಕ್​ನಲ್ಲೇ 2 ವರ್ಷದ ಕೂಸನ್ನು ಕೊಂದ ಮಹಿಳೆ – Kannada News | Delhi Crime News 2 Year Old Baby Strangled To Death By Aunt in Park

ನವದೆಹಲಿ, ಫೆಬ್ರವರಿ 20: ದೆಹಲಿಯ ಮುಖರ್ಜಿ ನಗರದಲ್ಲಿ 2 ವರ್ಷದ ಗಂಡು ಮಗುವನ್ನು ಅವನ ಚಿಕ್ಕಮ್ಮ ಕೊಲೆ (Killing) ಮಾಡಿದ್ದಾಳೆ. ಪಾರ್ಕ್​ವೊಂದರಲ್ಲಿ ಈ ಕೊಲೆ ನಡೆದಿದೆ. ಮಗುವನ್ನು ಕತ್ತು ಹಿಸುಕಿ ಕೊಂದು ಆ ಶವದೊಂದಿಗೆ ಆಕೆ ಪಾರ್ಕ್​ನಲ್ಲಿ ಕುಳಿತಿದ್ದಳು. ಮಗು ರಂಜಾನ್ ಹಬ್ಬಕ್ಕೆ ತನ್ನ ತಾಯಿಯೊಂದಿಗೆ ತನ್ನ ಅಜ್ಜಿಯ ಮನೆಗೆ ಹೋಗಿತ್ತು. ಆಗ ಅಲ್ಲಿಗೆ ಬಂದಿದ್ದ ಆ ಮಗುವಿನ ತಾಯಿಯ ತಂಗಿ ಮಗುವನ್ನು ಕರೆದುಕೊಂಡು ಪಾರ್ಕ್​ಗೆ ಹೋಗಿ ಕೊಲೆ ಮಾಡಿದ್ದಾಳೆ. ನಂತರ ಆಕೆ ಉದ್ಯಾನವನದಲ್ಲಿ ಕುಳಿತು ಮಗುವಿನ…

Read More

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ? ಇಲ್ಲಿದೆ ಮಾಹಿತಿ – Kannada News | CJ Roy Death Case: Bengaluru Police Commissioner Orders SIT Probe

ಬೆಂಗಳೂರು, ಜನವರಿ 31: ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ತನಿಖೆಗಾಗಿ ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿ ಆದೇಶಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಆದೇಶದ ಮೇರೆಗೆ ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ನೇತೃತ್ವದಲ್ಲಿ ಈ ತಂಡ ಕಾರ್ಯನಿರ್ವಹಿಸಲಿದೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್,  ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್,  ಹಲಸೂರು ಗೇಟ್ ಎಸಿಪಿ ಸುಧೀರ್, ಸಿಸಿಆರ್​ಬಿ ಎಸಿಪಿ ರಾಮಚಂದ್ರ, ಅಶೋಕನಗರ ಠಾಣೆ ಇನ್ಸ್​ಪೆಕ್ಟರ್…

Read More

ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ – Kannada News | Short Circuit Causes Blaze, Destroys Car at Bengalurus Majestic Railway Parking

ಬೆಂಗಳೂರು, ಫೆ.19: ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ ಕಾರಿಗೆ  ಬೆಂಕಿ ಹೊತ್ತಿಕೊಂಡ ಘಟನೆಯೊಂದು. ಹಲವು ದಿನಗಳಿಂದ ಪಾರ್ಕಿಂಗ್ ಲಾಟ್‌ನಲ್ಲಿ ನಿಂತಿದ್ದ ಈ ಕಾರಿಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ. ಅಗ್ನಿ ಕೆನ್ನಾಲಿಗೆಗೆ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆ ನಡೆದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದಾವಿಸಿದ್ದಾರೆ. ಬೆಂಕಿ ಪಕ್ಕದಲ್ಲಿದ್ದ ಇತರ ಕಾರುಗಳಿಗೂ ಹರಡುವ ಸಾಧ್ಯತೆಯಿದ್ದುದರಿಂದ, ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ಯಶಸ್ವಿಯಾಗಿ ನಂದಿಸಿದ್ದಾರೆ. ಆದರೂ, ಅಗ್ನಿ ಅವಘಡದಿಂದ…

Read More

ಬೆಳಗ್ಗೆ ಉರಿ ಬಿಸಿಲು: ರಾತ್ರಿಯಾದ್ರೆ ಸಾಕು ಸೆಕೆ; ಬೆಂಗಳೂರಿಗರ ಸುಖ ನಿದ್ರೆಗೆ ಭಂಗ!

ಬೆಂಗಳೂರು, ಏಪ್ರಿಲ್​ 12: ಈ ಬಾರಿ ಬೇಸಿಗೆಯ ಬಿರುಬಿಸಿಲು ಸಿಲಿಕಾನ್ ಸಿಟಿ ಜನರನ್ನ ಬಿಡದೆ ಕಾಡುತ್ತಿದೆ. ಮನೆಯಲ್ಲಿದ್ದರೆ ಬಿಸಿಲ ಧಗೆ (heatwave). ಇನ್ನು ಹೊರಗೆ ಬಂದರೆ ಸುಡೋ ಬಿಸಿಲು. ಹೀಗಾಗಿ ಜನರು ಕೂಲ್ ಡ್ರಿಂಕ್ಸ್, ಎಳನೀರು ಮೊರೆ ಹೋಗುತ್ತಿದ್ದಾರೆ. ಆದರೆ ರಾತ್ರಿ ನಿದ್ದೆ ಮಾಡುವುದಕ್ಕೆ ಸಂಕಷ್ಟ ಶುರುವಾಗಿದೆ. ಮತ್ತೊಂದೆಡೆ ಏರ್ ಕೂಲರ್ ಹಾಗೂ ಎಸಿಗೆ ಡಿಮ್ಯಾಂಡ್​ ಕೂಡ ಶುರುವಾಗಿದೆ. ರಾತ್ರಿ ನಿದ್ದೆಗೆ ಬಿಸಿಲು ಅಡ್ಡಿ ಸದ್ಯ ಬೆಂಗಳೂರಿನಲ್ಲಿ 35 ರಿಂದ 36 ಡಿಗ್ರಿ ತಾಪಮಾನ ದಾಖಲಾಗುತ್ತಿದೆ. ಏಪ್ರಿಲ್​…

Read More

ದಾವಣಗೆರೆ: ಗೋಗುದ್ದು ಗ್ರಾಮದಲ್ಲಿ ಹೃದಯಾಘಾತದಿಂದ 9ನೇ ತರಗತಿ ಬಾಲಕ ಸಾವು – Kannada News | Class 9 Student Dies of Suspected Heart Attack in Davanagere’s Goguddu Village

ದಾವಣಗೆರೆ, ಫೆಬ್ರವರಿ 24: ಕರ್ನಾಟಕದಲ್ಲಿ (Karnataka) ಇತ್ತೀಚೆಗೆ ಕಿರಿಯ ವಯಸ್ಸಿನವರಲ್ಲಿ ಹೃದಯಾಘಾತ (Heart Attack), ಅದರಿಂದಾಗಿ ಸಾವುಗಳು ಸಂಭವಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಆತಂಕ ಜೋರಾಗಿದೆ. ಇದರ ನಡುವೆಯೇ, ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ 15 ವರ್ಷದ ಬಾಲಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಗೋಗುದ್ದು ಗ್ರಾಮದ ಚಮನ್‌ಸಾಬ್ ಮತ್ತು ಫಾತಿಮಾ ದಂಪತಿಯ ಪುತ್ರ ಮುಜಾಮಿಲ್ (15) ಮೃತ ಬಾಲಕ. ಆತ ರಾಜೀವ್ ಗಾಂಧಿ ವಸತಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಶಾಲೆಗೆ ರಜೆ ಹಿನ್ನೆಲೆ…

Read More