Headlines

‘ಉರಿ’ ಸಿನಿಮಾನಲ್ಲೇ ಇದೆ ‘ಧುರಂಧರ್’ ಸಿನಿಮಾದ ಹಿಂಟ್

‘ಧುರಂಧರ್ 2’ (Dhurandhar 2) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಕಳೆದ ವರ್ಷ ಬಿಡುಗಡೆ ಆಗಿದ್ದ ‘ಧುರಂಧರ್’ ಸಿನಿಮಾ ಭಾರಿ ದೊಡ್ಡ ಹಿಟ್ ಆದ್ದರಿಂದ ‘ಧುರಂಧರ್ 2’ ಸಿನಿಮಾದ ಮೇಲೆ ಭಾರಿ ನಿರೀಕ್ಷೆಗಳಿವೆ. ಸಿನಿಮಾದ ನಾಯಕ ‘ಹಂಝಾ’ ಮುಂದೇನು ಮಾಡುತ್ತಾನೆ ಎಂಬುದು ಪ್ರೇಕ್ಷಕರ ಕುತೂಹಲಕ್ಕೆ ಕಾರಣವಾಗಿದೆ. ಸಿನಿಮಾವನ್ನು ಆದಿತ್ಯ ಧರ್ ನಿರ್ದೇಶಿಸಿದ್ದು, ‘ಧುರಂಧರ್’ಗೆ ಮುಂದೆ ಆದಿತ್ಯ ನಿರ್ದೇಶಿಸಿದ್ದು ಒಂದೇ ಫೀಚರ್ ಫಿಲಂ ಅದುವೇ ‘ಉರಿ; ದಿ ಸರ್ಜಿಕಲ್ ಸ್ಟ್ರೈಕ್’. 2019 ರಲ್ಲಿ ಬಿಡುಗಡೆ ಆಗಿದ್ದ ‘ಉರಿ’ ಸಿನಿಮಾ ದೊಡ್ಡ…

Read More

ಗದಗದಲ್ಲಿ ನಕಲಿ ಲಾಟರಿ ಜಾಲ ಸಕ್ರಿಯ: ಕೇರಳ ಸರ್ಕಾರದ ಚಿಹ್ನೆ ದುರ್ಬಳಕೆ ಮಾಡಿ ವಂಚನೆ ಆರೋಪ

ಗದಗ, ಮಾರ್ಚ್​​ 12: ನಕಲಿ ಲಾಟರಿ ಯೋಜನೆಯ ಮೂಲಕ ಜನರನ್ನು ಮೋಸಗೊಳಿಸುತ್ತಿರುವ ವಂಚಕ ಜಾಲ ಗದಗ ಜಿಲ್ಲೆಯಲ್ಲಿ ಸಕ್ರಿಯವಾಗಿದೆ ಎಂಬ ಆರೋಪ ಕೇಳಿಬಂದಿದೆ. ಖದೀಮರು ಕೇರಳ ಸರ್ಕಾರದ ಹೆಸರು ಮತ್ತು ಚಿಹ್ನೆಯನ್ನು ದುರುಪಯೋಗಪಡಿಸಿಕೊಂಡು ಲಾಟರಿ ಯೋಜನೆಯ ಹೆಸರಲ್ಲಿ ರ‍್ಯಾಂಡಮ್‌ ಮೊಬೈಲ್​​ ಸಂಖ್ಯೆಗಳಿಗೆ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ. ನೀವು 15 ಲಕ್ಷ ರೂ. ಲಾಟರಿ ಬಹುಮಾನ ಗೆದ್ದಿದ್ದೀರಿ ಎಂಬ ಮಾಹಿತಿ ಮೆಸೇಜ್​​ನಲ್ಲಿ ಇರಲಿದ್ದು, ಜೊತೆಗೆ ಕೇರಳ ಸರ್ಕಾರದ ಚಿಹ್ನೆ ಹೊಂದಿರುವ PDF ಪ್ರಮಾಣಪತ್ರವನ್ನೂ ಕಳುಹಿಸಲಾಗುತ್ತಿದೆ. ಇದರಿಂದ ಲಾಟರಿ ನಿಜವಾದದ್ದು ಎಂಬ…

Read More

ಇಲ್ಲಿಲ್ಲ ಗ್ಯಾಸ್ ಸಿಲಿಂಡರ್ ಟೆನ್ಶನ್! ಪ್ರತಿನಿತ್ಯ 70 ಸಾವಿರ ಮಕ್ಕಳಿಗೆ ಸಿಗುತ್ತೆ ಬಿಸಿ ಬಿಸಿ ಊಟ

ಬೆಂಗಳೂರು, ಮಾರ್ಚ್​ 12: ಅಮೆರಿಕ, ಇರಾನ್ ಹಾಗೂ ಇಸ್ರೇಲ್ ಯುದ್ಧದ ಪರಿಣಾಮವಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ವಿವಿಧೆಡೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಕೊರತೆ (Gas Cylinder Crisis) ತೀವ್ರವಾಗಿದ್ದು, ಹೋಟೆಲ್ ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿಲಿಂಡರ್ ಸಿಗದೆ ಅಡುಗೆ ಮಾಡುವುದು ಹೇಗೆ, ಹೋಟೆಲ್ ನಡೆಸುವುದು ಹೇಗೆ ಎಂಬ ಆತಂಕ ಎಲ್ಲೆಡೆ ವ್ಯಾಪಿಸಿದೆ. ಗ್ಯಾಸ್ ಸರಬರಾಜಿನಲ್ಲಿ ಉಂಟಾದ ವ್ಯತ್ಯಯದಿಂದ ಹಲವು ಹೋಟೆಲ್‌ಗಳು ಮತ್ತು ಸಣ್ಣ ಉಪಹಾರ ಗೃಹಗಳು ಸಂಕಷ್ಟ ಅನುಭವಿಸುತ್ತಿವೆ. ಆದರೆ ಬೆಂಗಳೂರಿನ ಸಾಮಾಜಿಕ ಸಂಸ್ಥೆಯೊಂದಕ್ಕೆ ಮಾತ್ರ…

Read More

Video: ದುಡಿಮೆಯಲ್ಲಿ ಖುಷಿ ಕಾಣುವ ಹಿರಿಜೀವಕ್ಕೆ ಹೆಗಲಾದ ಶ್ವಾನ

ನಿಯತ್ತು ಎಂದರೆ ಮೊದಲು ನೆನಪಾಗುವುದೇ ಈ ಶ್ವಾನ (dog). ಮನುಷ್ಯರಿಗೆ ನಾಯಿಗಿಂತ ಹೆಚ್ಚು ಆಪ್ತರು ಬೇರಾರೂ ಇರಲಿಕ್ಕೆ ಸಾಧ್ಯವಿಲ್ಲ. ಶ್ವಾನಗಳು ಸ್ವಾಮಿ ನಿಷ್ಠೆಗೆ ಹೆಸರುವಾಸಿಯಾದ ಪ್ರಾಣಿ. ಮನೆಯ ಸದಸ್ಯರಂತೆ ಇರುವ ಈ ಶ್ವಾನವು ಒಂದು ತುತ್ತು ಹಾಕಿದ್ರೆ ಸಾಕು, ಜೀವನ ಪರ್ಯಂತ ಮಾಲೀಕನಿಗೆ ಋಣಿಯಾಗಿರುತ್ತದೆ ಎನ್ನುವುದಕ್ಕೆ ಈ ದೃಶ್ಯವೇ ಸಾಕ್ಷಿ. ತನ್ನ ಮೇಲೆ ಕಾಳಜಿ ತೋರುವ ವ್ಯಕ್ತಿ ಹೂವಿನ ಮಾಲೆ ಮಾರುತ್ತಿದ್ದರೆ, ಶ್ವಾನವು ಆ ಹಿರಿಜೀವಕ್ಕೆ ಸಹಾಯ ಮಾಡಿದೆ. ಈ ಹೃದಯ ಸ್ಪರ್ಶಿ ವಿಡಿಯೋ ನೆಟ್ಟಿಗರ ಕಣ್ಣಂಚಲಿ…

Read More

ಗ್ಲಾಮರ್ ಕ್ವೀನ್ ತಮನ್ನಾ ಈಗ ಅಪ್ಪಟ ಗೃಹಿಣಿ: 11 ವರ್ಷದ ಬಳಿಕ ರವಿತೇಜ ಜೊತೆ

ತಮನ್ನಾ ಭಾಟಿಯಾ (Tamannah Bhatia), ಪ್ರಸ್ತುತ ಭಾರತೀಯ ಚಿತ್ರರಂಗದ ನಂಬರ್ 1 ‘ಐಟಂ ಗರ್ಲ್’. ತಮನ್ನಾ ಭಾಟಿಯಾ ಐಟಂ ಹಾಡಿಗೆ ಡ್ಯಾನ್ಸ್ ಮಾಡಿದರೆಂದರೆ ಆ ಸಿನಿಮಾ ಸೂಪರ್ ಹಿಟ್, ಆ ಹಾಡು ಸಹ ಸೂಪರ್ ಹಿಟ್ ಆಗಿಯೇ ತೀರುತ್ತದೆ ಎಂಬುದು ನಿರ್ಮಾಪಕ, ನಿರ್ದೇಶಕರುಗಳ ನಂಬಿಕೆ. ಇದೇ ಕಾರಣಕ್ಕೆ ತಮನ್ನಾಗೆ ಈಗ ಸಿನಿಮಾಗಳಿಗಿಂತಲೂ ಐಟಂ ಹಾಡುಗಳ ಆಫರ್ ಹೆಚ್ಚು ಬರುತ್ತಿದೆ. ಅದು ಮಾತ್ರವೇ ಅಲ್ಲ, ತಮನ್ನಾ ಭಾಟಿಯಾ ಈಗ ಐಟಂ ಹಾಡಿಗೆ ಅತಿ ಹೆಚ್ಚು ಸಂಭಾವನೆ ಪಡೆವ ನಟಿ…

Read More

ಇರಾಕ್‌ ಬಳಿ ತೈಲ ಟ್ಯಾಂಕರ್ ಮೇಲೆ ಇರಾನ್ ದಾಳಿ; ಗಲ್ಫ್ ಯುದ್ಧಕ್ಕೆ ಮತ್ತೋರ್ವ ಭಾರತೀಯ ಬಲಿ

ಟೆಹ್ರಾನ್, ಮಾರ್ಚ್ 12: ಇರಾಕ್‌ನ ಖೋರ್ ಅಲ್ ಜುಬೈರ್ ಬಂದರಿನ ಬಳಿ ಇರಾನ್​ನ ಹಡಗು ಅಮೆರಿಕದ ಒಡೆತನದ ಕಚ್ಚಾ ತೈಲ ಟ್ಯಾಂಕರ್ (Oil Tanker) ಸಫೀಯಾ ವಿಷ್ಣುವನ್ನು (Safesea Vishnu) ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇದರ ಜೊತೆಗೆ ಮಾಲ್ಡೀವ್ಸ್​​ನ ಇನ್ನೊಂದು ಟ್ಯಾಂಕರ್ ಮೇಲೂ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಭಾರತೀಯ ಪ್ರಜೆ ಪ್ರಾಣ ಕಳೆದುಕೊಂಡಿದ್ದಾರೆ. ಈ ಮೂಲಕ ಗಲ್ಫ್ ಪ್ರದೇಶದಲ್ಲಿ ನಡೆಯುತ್ತಿರುವ ಯುದ್ಧ ಮತ್ತೋರ್ವ ಭಾರತೀಯನನ್ನು ಬಲಿ ತೆಗೆದುಕೊಂಡಿದೆ. ಈ ದಾಳಿಯಲ್ಲಿ ಒಬ್ಬ ಭಾರತೀಯ ಪ್ರಜೆ ಪ್ರಾಣ…

Read More

‘ನಾನು 25 ಬಿ-ಗ್ರೇಡ್ ಚಿತ್ರಗಳಲ್ಲಿ ನಟಿಸಿದ್ದೇನೆ’; ನೊಂದುಕೊಂಡ ನಟಿ

ನಟ-ನಟಿಯರ ಜೀವನ ತುಂಬಾ ಐಷಾರಾಮಿ ಎಂದು ಅನೇಕ ಜನರು ಭಾವಿಸುತ್ತಾರೆ. ಆದರೆ ಅನೇಕರು ಹೋರಾಟಗಳನ್ನು ಎದುರಿಸುತ್ತಾರೆ. ಕೆಲವು ನಟರು ಈ ಹೋರಾಟಗಳ ಬಗ್ಗೆ ಬಹಿರಂಗವಾಗಿ ಮಾತನಾಡುತ್ತಾರೆ. ಆದರೆ ಇತರರು ಅವುಗಳ ಬಗ್ಗೆ ಮಾತನಾಡುವುದಿಲ್ಲ. ಪ್ರಸಿದ್ಧ ಭೋಜ್‌ಪುರಿ ನಟಿ ಮೊನಾಲಿಸಾ ಇತ್ತೀಚೆಗೆ ಸಂದರ್ಶನವೊಂದರಲ್ಲಿ ತಮ್ಮ ವೈಯಕ್ತಿಕ ಜೀವನದ ಸಮಸ್ಯೆಗಳ ಬಗ್ಗೆ ಮಾತನಾಡಿದ್ದಾರೆ. ಮೊನಾಲಿಸಾ ಅವರ (Monasalisa) ಖ್ಯಾತಿ ಮತ್ತು ಜೀವನಶೈಲಿಯನ್ನು ನೋಡಿ, ಅವರಿಗೆ ಏನೂ ಕೊರತೆಯಿಲ್ಲ ಎಂದು ಹಲವರು ಭಾವಿಸುತ್ತಾರೆ. ಆದರೆ ಅವರು ಹಣಕ್ಕಾಗಿ 25 ಬಿ-ಗ್ರೇಡ್ ಚಿತ್ರಗಳಲ್ಲಿ…

Read More

ಒಳ ಉಡುಪಿನಲ್ಲಿ ಗಾಂಜಾ ತಂದು ಕೈದಿಗಳಿಗೆ ಸಪ್ಲೈ! ಪರಪ್ಪನ ಅಗ್ರಹಾರದಲ್ಲಿ ವಾರ್ಡನ್​ನಿಂದಲೇ ಕಳ್ಳಾಟ

ಬೆಂಗಳೂರು, ಮಾರ್ಚ್​ 12: ಹಲವು ತಿಂಗಳುಗಳಿಂದ ಒಂದಲ್ಲಾ ಒಂದು ರೀತಿಯ ಅಕ್ರಮಗಳಿಂದ ಸುದ್ದಿಯಾಗುತ್ತಿರುವ ನಗರದ ಪರಪ್ಪನ ಅಗ್ರಹಾರ (Parappana Agrahara)ಕೇಂದ್ರ ಕಾರಾಗೃಹ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಗಾಂಜಾ ಅಕ್ರಮ ಸಾಗಾಟದ ಪ್ರಕರಣ ಬೆಳಕಿಗೆ ಬಂದಿದ್ದು, ಜೈಲಿನಲ್ಲಿರುವ ಆರೋಪಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಜೈಲು ವಾರ್ಡನ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪ್ರಕಾಶ್ ಗಾವಡೆ ಎಂದು ಗುರುತಿಸಲಾಗಿದೆ. ಗಾಂಜಾ ತಂದರೆ 10 ಸಾವಿರ ಕೊಡ್ತೀನಿ ಎಂದಿದ್ದ ಕೈದಿ ಮಾರ್ಚ್ 9 ರಂದು ರಾತ್ರಿ ಸುಮಾರು 8.15ರ ಸುಮಾರಿಗೆ ಈ…

Read More

ಬೆಂಗಳೂರಿಗೆ ಆಗಾಗ ಯಶ್ ಬಂದು ಹೋಗ್ತಿದ್ರು ಯಾರಿಗೂ ಕಾಣಿಸಿಕೊಳ್ಳದೆ ಇದ್ದಿದ್ದು ಹೇಗೆ?

ನಟ ರಾಕಿಂಗ್ ಸ್ಟಾರ್ ಯಶ್ (Yash) ಅವರು ಸದ್ಯ ಬೆಂಗಳೂರು ಹಾಗೂ ಮುಂಬೈ ಮಧ್ಯೆ ಓಡಾಟ ನಡೆಸುತ್ತಿದ್ದಾರೆ. ಮುಂಬೈನಲ್ಲಿ ‘ಟಾಕ್ಸಿಕ್’ ಸಿನಿಮಾ ಹಾಗೂ ‘ರಾಮಾಯಣ’ ಚಿತ್ರದ ಡಬ್ಬಿಂಗ್ ಕೆಲಸಗಳು ನಡೆಯುತ್ತಿವೆ. ಈ ಕಾರಣದಿಂದ ಅವರು ಮುಂಬೈಗೆ ತೆರಳುತ್ತಿದದಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿದ್ದು, ಅವರು ಮತ್ತಷ್ಟು ಯಂಗ್ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆಜಿಎಫ್’ ಚಿತ್ರಕ್ಕಾಗಿ ಯಶ್ ಅವರು ಉದ್ದನೆಯ ಕೂದಲು ಹಾಗೂ ಗಡ್ಡ ಬಿಟ್ಟಿದ್ದರು. ಮೊದಲ ಭಾಗ ರಿಲೀಸ್ ಆಗುತ್ತಿದ್ದಂತೆ ಇದಕ್ಕೆ ಕತ್ತರಿ ಹಾಕಿದರು. ಆ…

Read More

ಬೆಂಗಳೂರಿಗರಿಗೆ ಗುಡ್​​ ನ್ಯೂಸ್​​: ದ್ವಿಚಕ್ರ ವಾಹನಗಳಿಗೆ ನೈಸ್​​ ರಸ್ತೆ ಶೀಘ್ರ ಟೋಲ್​​ ಮುಕ್ತ?

ಬೆಂಗಳೂರು, ಮಾರ್ಚ್​​ 12: ನಗರದ ಪ್ರಮುಖ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇ ಆಗಿರುವ ನೈಸ್​​ ರಸ್ತೆಯು, ಸಂಚಾರ ದಟ್ಟಣೆಯನ್ನು ತಪ್ಪಿಸಲು ಮತ್ತು ಪ್ರಮುಖ ಹೆದ್ದಾರಿಗಳನ್ನು ಸಂಪರ್ಕಿಸುವ ನಿಟ್ಟಿನಲ್ಲಿ ಬಹಳ ಉಪಯುಕ್ತ ಎಂದೇ ಭಾವಿಸಲಾಗಿದೆ. ಮೈಸೂರು ರಸ್ತೆಯ ದೀಪಾಂಜಲಿ ನಗರ ಜಂಕ್ಷನ್‌ನಿಂದ ಹೊಸಕೆರೆಹಳ್ಳಿಯ PES ಕಾಲೇಜು ಬಳಿ ನೈಸ್ ರಸ್ತೆಗೆ ಸಂಪರ್ಕ ಕಲ್ಪಿಸುವ 1.5 ಕಿ.ಮೀ ಉದ್ದದ ಹೊಸ ರೋಡ್​​ ಶೀಘ್ರದಲ್ಲೇ ಉದ್ಘಾಟನೆಯಾಗುವ ನಿರೀಕ್ಷೆ ಇರುವ ನಡುವೆ ರಾಜ್ಯ ಸರ್ಕಾರ ಮತ್ತೊಂದು ಗುಡ್​​ ನ್ಯೂಸ್​​ ನೀಡಿದೆ. ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳಿಂದ…

Read More