VHT 2025-26: 2 ಪಂದ್ಯಗಳನ್ನಾಡಿ ಡೆಲ್ಲಿ ತಂಡವನ್ನು ತೊರೆದ ವಿರಾಟ್ ಕೊಹ್ಲಿ – Kannada News | Virat Kohli’s Vijay Hazare Trophy Exit: Star’s Stellar Performance, Break and Return

ವಿಜಯ್ ಹಜಾರೆ ಟ್ರೋಫಿಯಲ್ಲಿ ಡೆಲ್ಲಿ ತಂಡದ ಪರ ಎರಡು ಪಂದ್ಯಗಳಲ್ಲಿ ಕಣಕ್ಕಿಳಿದು ಅಮೋಘ ಪ್ರದರ್ಶನ ನೀಡಿದ್ದ ವಿರಾಟ್ ಕೊಹ್ಲಿ ಇದೀಗ ತಂಡವನ್ನು ತೊರೆದು ಮನೆಗೆ ವಾಪಸ್ಸಾಗಿದ್ದಾರೆ. ಕೊಹ್ಲಿ ತಂಡದಿಂದ ಬೇರ್ಪಟ್ಟು, ದೆಹಲಿಗೆ ಮರಳಲು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಬಿಸಿಸಿಐ ಆದೇಶದ ಪ್ರಕಾರ ಈ ಟೂರ್ನಿಯಲ್ಲಿ 2 ಪಂದ್ಯಗಳನ್ನಾಡಿದ ವಿರಾಟ್, ಮನೆಗೆ ವಾಪಸ್ಸಾಗಿದ್ದಾರೆ. ಆದಾಗ್ಯೂ ಕೊಹ್ಲಿ ಮುಂದಿನ ದಿನಗಳಲ್ಲಿ ಈ ಟೂರ್ನಿಯಲ್ಲಿ ಮತ್ತೆ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ವಾಸ್ತವವಾಗಿ ಡೆಲ್ಲಿ ತಂಡದ ಮುಂದಿನ 3 ಪಂದ್ಯಗಳಲ್ಲಿ ಕೊಹ್ಲಿ ಆಡುವುದಿಲ್ಲ. ಕುಟುಂಬದೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಳ್ಳುವ ಸಲುವಾಗಿ ವಿರಾಮ ತೆಗೆದುಕೊಂಡಿದ್ದಾರೆ.

ಆ ಬಳಿಕ ಜನವರಿ 6 ರಂದು ಡೆಲ್ಲಿ ತಂಡ ರೈಲ್ವೇಸ್ ವಿರುದ್ಧ ತನ್ನ ಪಂದ್ಯವನ್ನು ಆಡಲಿದ್ದು, ಆ ಪಂದ್ಯದಲ್ಲಿ ವಿರಾಟ್ ಆಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ವಿಜಯ್ ಹಜಾರೆ ಟ್ರೋಫಿಯಲ್ಲಿ ಎರಡು ಪಂದ್ಯಗಳನ್ನಾಡಿದ ವಿರಾಟ್ ಕೊಹ್ಲಿ 104 ಸರಾಸರಿಯಲ್ಲಿ 208 ರನ್ ಗಳಿಸಿದರು. ಆಂಧ್ರಪ್ರದೇಶ ವಿರುದ್ಧದ ಪಂದ್ಯದಲ್ಲಿ 131 ರನ್ ಬಾರಿಸಿದ್ದ ವಿರಾಟ್, ಗುಜರಾತ್ ವಿರುದ್ಧದ ಪಂದ್ಯದಲ್ಲಿ ಶತಕ ಗಳಿಸಲು ವಿಫಲರಾದರೂ 77 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿ ಪಂದ್ಯಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ – Kannada News | Ranveer Singh starrer Dhurandhar movie action scene BTS video

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ (Dhurandhar) ಸಿನಿಮಾಗೆ ‘ಎ’ ಪ್ರಮಾಣಪತ್ರ ನೀಡಲಾಗಿದೆ. ಈ ಚಿತ್ರದಲ್ಲಿ ಕ್ರೌರ್ಯದ ದೃಶ್ಯಗಳು ಇರುವುದು ಕೂಡ ‘ಎ’ ಪ್ರಮಾಣಪತ್ರ ಸಿಗಲು ಕಾರಣ. ರಣವೀರ್ ಸಿಂಗ್ (Ranveer Singh), ಅಕ್ಷಯ್ ಖನ್ನಾ, ಸಾರಾ ಅರ್ಜುನ್, ಸಂಜಯ್ ದತ್, ಅರ್ಜುನ್ ರಾಮ್​​ಪಾಲ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ನೈಜ ಘಟನೆಗಳನ್ನು ಆಧರಿಸಿ ಈ ಸಿನಿಮಾ ತಯಾರಾಗಿದೆ. ಸಿನಿಮಾದಲ್ಲಿನ ಕೌರ್ಯದ ದೃಶ್ಯಗಳ ಬಗ್ಗೆ ಜನರು ಮಾತನಾಡುತ್ತಿದ್ದಾರೆ. ಆ ಪೈಕಿ ಒಂದು ದೃಶ್ಯದ ಶೂಟಿಂಗ್ ಯಾವ ರೀತಿ ನಡೆದಿತ್ತು ಎಂಬುದನ್ನು ಈ ವಿಡಿಯೋದಲ್ಲಿ ನೋಡಬಹುದು. ‘ಧುರಂಧರ್’ ಸಿನಿಮಾ ವಿಶ್ವಾದ್ಯಂತ 1000 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ರಣವೀರ್ ಸಿಂಗ್ ಅವರಿಗೆ ಈ ಚಿತ್ರರಿಂದ ದೊಡ್ಡ ಗೆಲುವು ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮೈಸೂರು ಸ್ಫೋಟ ಪ್ರಕರಣ: ಮುಂದುವರೆದ ಸಾವಿನ ಸರಣಿ, ಮರ್ತೋವ ಮಹಿಳೆ ಸಾವು – Kannada News | Mysuru Balloon Gas Cylinder Blast: Death Toll Rises to Three

ಮೈಸೂರು, ಡಿಸೆಂಬರ್​ 26: ಮೈಸೂರು ಅರಮನೆ ಬಳಿ ಹೀಲಿಯಂ​ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ (cylinder Blast case) ಸಂಬಂಧಿಸಿದಂತೆ ಇದೀಗ ಮೃತರ ಸಂಖ್ಯೆ 3ಕ್ಕೆ ಏರಿಕೆ ಆಗಿದೆ. ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಂಗಳೂರು ಮೂಲದ ಲಕ್ಷ್ಮೀ ಎನ್ನುವವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ (death). ಲಕ್ಷ್ಮೀ ಕುಟುಂಬದವರ ಜೊತೆಗೆ ಮೈಸೂರು ಪ್ರವಾಸಕ್ಕೆ ಬಂದಿದ್ದ ವೇಳೆ ದುರಂತ ಸಂಭವಿಸಿತ್ತು. ಇನ್ನು ಲಕ್ಷ್ಮೀ ಅವರ ಮಗಳು ಡಿಂಪಲ್​​ ದುರಂತದಿಂದ ಬಚಾವ್‌ ಆಗಿದ್ದಾರೆ. ಸದ್ಯ ತಾಯಿ ಮೃತಪಟ್ಟ ಹಿನ್ನೆಲೆ ಪುತ್ರಿ ಕಣ್ಣೀರು ಹಾಕಿದ್ದಾಳೆ.

ಮೈಸೂರು ಅರಮನೆ ಎದುರಲ್ಲೇ ಘೋರ ದುರಂತ

ಕ್ರಿಸ್‌ಮಸ್‌ ರಜೆ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ವ್ಯಾಪಾರ ಕೂಡಾ ಜೋರಾಗಿತ್ತು. ಅದ್ರಂತೆ ಗುರುವಾರ ರಾತ್ರಿ 8.30 ರ ಹೊತ್ತಲ್ಲಿ ಉತ್ತರ ಪ್ರದೇಶ ಮೂಲದ ಸಲೀಂ, ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಹೀಲಿಯಂ ಬಲೂನ್‌ ಮಾರಾಟ ಮಾಡುತ್ತಿದ್ದ. ಬಲೂನ್‌ಗೆ ಗ್ಯಾಸ್‌ ತುಂಬಿಸುತ್ತಿದ್ದ ವೇಳೆ ಏಕಾಏಕಿ ಸಿಲಿಂಡರ್‌ ಸ್ಫೋಟವಾಗಿದ್ದು, ಸಲೀಂ ಅಲ್ಲೇ ಪ್ರಾಣ ಬಿಟ್ಟಿದ್ದ. ನಾಲ್ಕೈದು ಜನ ಗಾಯಗೊಂಡು ಆಸ್ಪತ್ರೆ ಸೇರಿದ್ದರು.

ಇದನ್ನೂ ಓದಿ: ಮೈಸೂರು ಪ್ಯಾಲೆಸ್ ಮುಂಭಾಗ ಸ್ಫೋಟ: ಸಾವಿನ ಸಂಖ್ಯೆ 2ಕ್ಕೆ ಏರಿಕೆ, ಪ್ರಕರಣದ ಸುತ್ತ ಅನುಮಾದ ಹುತ್ತ

ಸ್ಫೋಟದ ತೀವ್ರತೆಗೆ ಸಲೀಂ ಸ್ಥಳದಲ್ಲೇ ಪ್ರಾಣ ಬಿಟ್ಟರೆ, ನಂಜನಗೂಡಿನ ಮಂಜುಳ ಇಂದು ಆಸ್ಪತ್ರೆಯಲ್ಲಿ ಉಸಿರು ನಿಲ್ಲಿಸಿದ್ದಾರೆ. ಮೈಸೂರಿನಲ್ಲಿ ಹೂವು ಮಾರಾಟ ಮಾಡುತ್ತಿದ್ದ ಮಂಜುಳ ವ್ಯಾಪಾರ ಮುಗಿಸಿಕೊಂಡು ಬಸ್‌ ಹತ್ತಲು ಹೋಗುತ್ತಿದ್ದರು. ಹೀಗೆ ಹೋಗುವಾಗಲೇ ಸಿಲಿಂಡ್ ಸ್ಫೋಟಕ್ಕೆ ಬಲಿ ಆಗಿದ್ದಾರೆ.

ಸ್ಫೋಟದ ಹಿಂದೆ ಬಿದ್ದ ಎನ್‌ಐಎ!

ಸ್ಫೋಟಕ್ಕೆ ಬಲಿ ಆಗಿರುವ ಸಲೀಂ 15 ದಿನಗಳ ಹಿಂದಷ್ಟೇ ಮೈಸೂರಿಗೆ ಬಂದಿದ್ದ. ಲಷ್ಕರ್ ಮೊಹಲ್ಲಾದ ಷರೀಫ್ ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದ. ಮೂರು ಜನ ಸ್ನೇಹಿತರು ಜತೆಗೆ ಬಲೂನ್‌ ಮಾರಾಟ ಮಾಡುತ್ತಿದ್ದರು. ಆದರೆ ಗುರುವಾರ ರಾತ್ರಿ ಸಲೀಂ ಒಬ್ಬನೇ ಬಂದು ಮಾರಾಟ ಮಾಡಿರೋದು ಹತ್ತಾರು ಅನುಮಾನ ಮೂಡಿಸಿದೆ. ಕ್ರಿಸ್‌ಮಸ್‌ ಹೊತ್ತಲ್ಲೇ ದುರಂತ ಆಗಿರೋದ್ರಿಂದ ಎನ್‌ಐಎ ಕೂಡಾ ಮಾಹಿತಿ ಪಡೆದಿದೆ. ಇನ್ನು ಸಲೀಂ ಜತೆಗಿದ್ದ ಇಬ್ಬರನ್ನ ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಿದ್ದಾರೆ. ಆಸ್ಪತ್ರೆಗೆ ಸಂಸದ ಯದುವೀರ್‌, ಸಚಿವ ಮಹಾದೇವಪ್ಪ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

2 ಕೋಟಿಯಿಂದ 21 ಕೋಟಿ ರೂಪಾಯಿಗೆ ಏರಿಕೆ ಆಯ್ತು ಅಕ್ಷಯ್ ಖನ್ನಾ ಸಂಬಳ – Kannada News | Dhurandhar actor Akshaye Khanna reportedly demands Rs 21 Cr for Drishyam 3

ಈ ವರ್ಷ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ಎಂಬ ಖ್ಯಾತಿಗೆ ‘ಧುರಂಧರ್’ (Dhurandhar) ಚಿತ್ರ ಪಾತ್ರವಾಗಿದೆ. ಈ ಸಿನಿಮಾದಲ್ಲಿ ನಟಿಸಿದ ಎಲ್ಲ ಕಲಾವಿದರೂ ಹೈಲೈಟ್ ಆಗಿದ್ದಾರೆ. ಹೀರೋ ಆಗಿ ರಣವೀರ್ ಸಿಂಗ್ ಅವರು ಮಿಂಚಿದ್ದಾರೆ. ವಿಲನ್ ಪಾತ್ರದಲ್ಲಿ ಅಕ್ಷಯ್ ಖನ್ನಾ (Akshaye Khanna) ಅವರು ಅಭಿನಯಿಸಿದ್ದಾರೆ. ಈ ಸಿನಿಮಾ ಬಿಡುಗಡೆ ಆದ ಬಳಿಕ ರಣವೀರ್ ಸಿಂಗ್​​ಗಿಂತಲೂ ಅಕ್ಷಯ್ ಖನ್ನಾ ಅವರ ಬಗ್ಗೆಯೇ ಪ್ರೇಕ್ಷಕರು ಹೆಚ್ಚಾಗಿ ಮಾತನಾಡುತ್ತಿದ್ದಾರೆ. ‘ಧುರಂಧರ್’ ಚಿತ್ರದಿಂದ ಈ ಪರಿ ಯಶಸ್ಸು ಸಿಕ್ಕಿದ್ದಕ್ಕಾಗಿ ಅಕ್ಷಯ್ ಖನ್ನಾ ಅವರು ಸಂಭಾವನೆ (Akshaye Khanna Remuneration) ಹೆಚ್ಚಿಸಿಕೊಂಡಿದ್ದಾರೆ.

ಪೋಷಕ ಪಾತ್ರಗಳ ಮೂಲಕ ಅಕ್ಷಯ್ ಖನ್ನಾ ಅವರು ಜನರಿಗೆ ಹತ್ತಿರ ಆಗಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ವಿಲನ್ ಪಾತ್ರಗಳನ್ನು ಮಾಡುವ ಮೂಲಕವೂ ಸೈ ಎನಿಸಿಕೊಂಡಿದ್ದಾರೆ. ‘ಧುರಂಧರ್’ ಸಿನಿಮಾದಲ್ಲಿ ಅವರು ರೆಹಮಾನ್ ಡಕಾಯಿತ್ ಎಂಬ ಪಾಕ್ ಗಾಂಗ್​ಸ್ಟರ್ ಪಾತ್ರ ಮಾಡಿದ್ದಾರೆ. ಈ ಸಿನಿಮಾಗಾಗಿ ಅವರು ಪಡೆದ ಸಂಭಾವನೆ 2.5 ಕೋಟಿ ರೂಪಾಯಿ ಎನ್ನಲಾಗಿದೆ. ಈಗ ಏಕಾಏಕಿ ಅವರು 20 ಕೋಟಿ ರೂಪಾಯಿ ಹೆಚ್ಚು ಕೇಳಲು ಆರಂಭಿಸಿದ್ದಾರೆ.

ಮೊದಲಿನ ಪ್ಲ್ಯಾನ್ ಪ್ರಕಾರ, ಅಕ್ಷಯ್ ಖನ್ನಾ ಅವರು ‘ದೃಶ್ಯಂ 3’ ಸಿನಿಮಾದಲ್ಲಿ ನಟಿಸಬೇಕಿತ್ತು. ‘ದೃಶ್ಯಂ 2’ ಚಿತ್ರದಲ್ಲಿ ಅವರ ಪಾತ್ರ ಗಮನ ಸೆಳೆದಿತ್ತು. ಹಾಗಾಗಿ 3ನೇ ಪಾರ್ಟ್​​ನಲ್ಲಿ ಕೂಡ ಅವರು ಮುಂದುವರಿಯುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಅವರು ‘ದೃಶ್ಯಂ 3’ ಸಿನಿಮಾದಿಂದ ಹೊರನಡೆದಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಅದಕ್ಕೆ ಕಾರಣ ಆಗಿರುವುದೇ ದುಬಾರಿ ಸಂಭಾವನೆ.

ಅಕ್ಷಯ್ ಖನ್ನಾ ಅವರು ಈಗ ಬರೋಬ್ಬರಿ 21 ಕೋಟಿ ರೂಪಾಯಿ ಸಂಭಾವನೆ ಕೇಳುತ್ತಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ‘ದೃಶ್ಯಂ 3’ ಸಿನಿಮಾದ ನಿರ್ಮಾಪಕರಿಗೆ ಶಾಕ್ ಆಗಿದೆ. ಇಷ್ಟು ದೊಡ್ಡ ಮೊತ್ತದ ಸಂಭಾವನೆ ಕೊಟ್ಟರೆ ಸಿನಿಮಾದ ಬಜೆಟ್ ದುಬಾರಿ ಆಗುತ್ತದೆ. ಹಾಗಾಗಿ 21 ಕೋಟಿ ರೂಪಾಯಿ ನೀಡಲು ನಿರ್ಮಾಪಕರು ಒಪ್ಪಿಕೊಂಡಿಲ್ಲ ಎನ್ನಲಾಗಿದೆ. ಹಾಗಾಗಿ ಅಕ್ಷಯ್ ಖನ್ನಾ ಅವರು ‘ದೃಶ್ಯಂ 3’ ಚಿತ್ರತಂಡದಿಂದ ಹೊರನಡೆದಿದ್ದಾರೆ.

ಇದನ್ನೂ ಓದಿ: ಮಾರ್ಕ್, 45, ಡೆವಿಲ್ ಬಂದರೂ ತಗ್ಗಿಲ್ಲ ‘ಧುರಂಧರ್’ ಹವಾ; 21ನೇ ದಿನವೂ 26 ಕೋಟಿ ರೂ. ಗಳಿಕೆ

ಸಂಭಾವನೆ ವಿಷಯ ಮಾತ್ರವಲ್ಲದೇ ಇನ್ನೂ ಕೆಲವು ವಿಚಾರಗಳಲ್ಲಿ ಅಕ್ಷಯ್ ಖನ್ನಾ ಅವರಿಗೆ ‘ದೃಶ್ಯಂ 3’ ಚಿತ್ರತಂಡದ ಜೊತೆ ಒಮ್ಮತ ಮೂಡಿಲ್ಲ. ಈ ಸಿನಿಮಾದಲ್ಲಿ ತಾವು ವಿಗ್ ಧರಿಸಬೇಕು ಎಂದು ಅಕ್ಷಯ್ ಖನ್ನಾ ಬೇಡಿಕೆ ಇಟ್ಟಿದ್ದಾರಂತೆ. ಆದರೆ ‘ದೃಶ್ಯಂ 2’ ಚಿತ್ರದಲ್ಲಿ ಅವರ ಪಾತ್ರಕ್ಕೆ ವಿಗ್ ಇರಲಿಲ್ಲ. ಈಗ ಇಂಥ ಬದಲಾವಣೆ ಮಾಡಲು ನಿರ್ದೇಶಕರು ಒಪ್ಪಿಲ್ಲ ಎನ್ನಲಾಗಿದೆ. ಈ ಕಾರಣದಿಂದಲೂ ಅಕ್ಷಯ್ ಖನ್ನಾ ‘ದೃಶ್ಯಂ 3’ ಚಿತ್ರತಂಡಕ್ಕೆ ವಿದಾಯ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಅಮೆರಿಕದೊಂದಿಗೆ ಟ್ರೇಡ್ ಡೀಲ್; ಅಂತಿಮ ಪ್ರಸ್ತಾಪ ಸಲ್ಲಿಸಿದ ಭಾರತ; ಕೃಷಿ ತಂಟೆ ಬೇಡ, ಟ್ಯಾರಿಫ್ ನಿಲ್ಲಿಸಿ ಎಂಬುದು ಭಾರತದ ಬೇಡಿಕೆ – Kannada News | India tables final trade proposal to US, demands tariff cut to 15pc and wants Agriculture out of negotiation

ನವದೆಹಲಿ, ಡಿಸೆಂಬರ್ 26: ಭಾರತ ಹಾಗೂ ಅಮೆರಿಕ ನಡುವೆ ವ್ಯಾಪಾರ ಒಪ್ಪಂದಕ್ಕಾಗಿ (India US trade deal) ನಡೆಯುತ್ತಿರುವ ಮಾತುಕತೆ ಮತ್ತು ಸಂಧಾನಗಳು ಫಲಪ್ರದವಾಗುವಂತೆ ಕಾಣುತ್ತಿವೆ. ಸರ್ವಸಮ್ಮತವಾದ ಮತ್ತು ನ್ಯಾಯಯುತವಾದ ಒಪ್ಪಂದದತ್ತ ಸಾಗುತ್ತಿದ್ದೇವೆ ಎಂದು ಸಂಧಾನದ ನೇತೃತ್ವದ ವಹಿಸಿರುವ ವಾಣಿಜ್ಯ ಕಾರ್ಯದರ್ಶಿ ರಾಜೇಶ್ ಅಗರ್ವಾಲ್ ಹೇಳಿದ್ದಾರೆ. ಭಾರವು ತನ್ನ ಒಪ್ಪಂದ ಅಂತಿಮ ಪ್ರಸ್ತಾಪವನ್ನು ಅಮೆರಿಕದ ಮುಂದಿಟ್ಟಿದೆಯಂತೆ. ಟ್ಯಾರಿಫ್ ಕಡಿತಗೊಳಿಸಬೇಕು, ಕೃಷಿ ಸಂಬಂಧಿತ ಉತ್ಪನ್ನಗಳನ್ನು ಈ ಒಪ್ಪಂದದಿಂದ ಹೊರಗಿಡಬೇಕು ಎಂಬುದು ಭಾರತ ಸಲ್ಲಿಸಿರುವ ಪ್ರಸ್ತಾವದಲ್ಲಿರುವ ಪ್ರಮುಖ ಅಂಶ.

ಶೇ. 50ರಷ್ಟಿರುವ ಟ್ಯಾರಿಫ್ ಅನ್ನು ಶೇ. 15ಕ್ಕೆ ಇಳಿಸಿ

ರಷ್ಯನ್ ತೈಲವನ್ನು ಖರೀದಿಸುತ್ತಿರುವುದಕ್ಕೆ ಶಿಕ್ಷೆಯಾಗಿ ಭಾರತದ ಮೇಲೆ ಅಮೆರಿಕ ಶೇ. 25ರಷ್ಟು ಹೆಚ್ಚು ಸುಂಕ ಹಾಕುತ್ತಿದೆ. ಇದನ್ನು ತೆಗೆದುಹಾಕುವಂತೆ ಭಾರತವು ತನ್ನ ಟ್ರೇಡ್ ಡೀಲ್ ಪ್ರಸ್ತಾಪದಲ್ಲಿ ಕೋರಿಕೊಂಡಿದೆ. ದಂಡ ರೂಪದ ಶೇ. 25 ಸುಂಕವೂ ಸೇರಿದಂತೆ ಒಟ್ಟು ಶೇ. 50ರಷ್ಟು ಸುಂಕವನ್ನು ಅಮೆರಿಕ ಹಾಕುತ್ತಿದೆ. ಇದನ್ನು ಶೇ. 15ಕ್ಕೆ ಇಳಿಸಬೇಕೆಂದು ಭಾರತ ಡಿಮ್ಯಾಂಡ್ ಮಾಡಿರುವುದು ತಿಳಿದುಬಂದಿದೆ. ಅಮೆರಿಕ ಸಕಾರಾತ್ಮಕವಾಗಿ ಸ್ಪಂದಿಸಿದರೆ 2026ರಲ್ಲಿ ಒಪ್ಪಂದಕ್ಕೆ ಅಂತಿಮ ಮುದ್ರೆ ಬೀಳಬಹುದು.

ಇದನ್ನೂ ಓದಿ: ಈ ವರ್ಷ 1 ಟ್ರಿಲಿಯನ್ ಡಾಲರ್ ರಫ್ತು ಗುರಿ ಅಸಾಧ್ಯ; ಭಾರತಕ್ಕಿರುವ ಪ್ರಮುಖ ತೊಡಕುಗಳಿವು…

ಅಮೆರಿಕದ ಡೈರಿ ಮತ್ತು ಕುಲಾಂತರಿ ಬೆಳೆಗಳು ಭಾರತಕ್ಕೆ ಬೇಡ

ಅಮೆರಿಕದೊಂದಿಗಿನ ಟ್ರೇಡ್ ಡೀಲ್​ಗೆ ಭಾರತ ಸಲ್ಲಿಸಿದ ಪ್ರಸ್ತಾಪದಲ್ಲಿ ಮತ್ತೊಂದು ಪ್ರಮುಖ ಅಂಶ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ್ದು. ಅಮೆರಿಕದ ಡೈರಿ ಉತ್ಪನ್ನಗಳು ಹಾಗೂ ಕುಲಾಂತರಿ ಬೆಳೆ ಉತ್ಪನ್ನಗಳು (GM crops- Genetically modified crops) ಭಾರತಕ್ಕೆ ಬೇಡ ಎಂಬುದು ಭಾರತದ ಗಟ್ಟಿ ನಿಲುವು. ಕೋಟ್ಯಂತರ ಭಾರತೀಯ ರೈತರನ್ನು ರಕ್ಷಿಸುವ ದೃಷ್ಟಿಯಿಂದ ಸರ್ಕಾರ ಈ ನಿಲುವು ತೆಗೆದುಕೊಂಡಿದೆ.

ಭಾರತದ ಈ ಪ್ರಸ್ತಾಪಕ್ಕೆ ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಸಿಕ್ಕಿಲ್ಲ. ಎರಡೂ ದೇಶಗಳ ನಡುವೆ ಸುದೀರ್ಘ ಕಾಲದಿಂದ ಒಪ್ಪಂದಕ್ಕಾಗಿ ಮಾತುಕತೆಗಳು ನಡೆಯುತ್ತಿವೆಯಾದರೂ ಕೃಷಿ ಉತ್ಪನ್ನಗಳ ವಿಚಾರವು ಪ್ರಮುಖ ತೊಡಕಾಗಿದೆ. ಭಾರತ ಈಗ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿರುವ ಹಿನ್ನೆಲೆಯಲ್ಲಿ ಅಮೆರಿಕದ ಮುಂದಿನ ನಡೆ ಏನು ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಎಫ್ ಅಂಡ್ ಒ ಕರ್ಮಕಾಂಡ; ಭಾರತದಿಂದ ಅಮೆರಿಕಕ್ಕೆ ಹರಿದುಹೋಗುತ್ತಿದೆಯಾ ವರ್ಷಕ್ಕೆ ಲಕ್ಷ ಕೋಟಿ ರೂ?

ಭಾರತ ಈ ಒಂದೇ ವರ್ಷದಲ್ಲಿ ಮೂರು ವ್ಯಾಪಾರ ಒಪ್ಪಂದಗಳನ್ನು ಮಾಡಿಕೊಂಡಿದೆ. ಕಳೆದ ಕೆಲ ವರ್ಷಗಳಲ್ಲಿ ಏಳು ಎಫ್​ಟಿಎಗಳು ಕೈಗೂಡಿವೆ. ಈ ಒಪ್ಪಂದಗಳು ಭಾರತದ ರಫ್ತಿಗೆ ಹೆಚ್ಚಿನ ವೈವಿಧ್ಯತೆ ಮತ್ತು ಆಯ್ಕೆಗಳನ್ನು ನೀಡುತ್ತವೆ. ಭಾರತಕ್ಕೆ ಅಮೆರಿಕ ಅತಿದೊಡ್ಡ ಮಾರುಕಟ್ಟೆಯಾಗಿರುವುದರಿಂದ ಆ ದೇಶದೊಂದಿಗೆ ಎಫ್​ಟಿಎ ಆಗಿಬಿಟ್ಟರೆ ರಫ್ತಿಗೆ ಮತ್ತಷ್ಟು ಉತ್ತೇಜನ ಸಿಕ್ಕಂತಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಕುಡಿದ ಮತ್ತಲ್ಲಿ ಕಿರಿಕ್​​: ಬಾಯಿ ಚಪಲಕ್ಕೆ ಬಿಹಾರ ಮೂಲದ ಕಾರ್ಮಿಕ ಬಲಿ! – Kannada News | Drunken Brawl Turns Fatal, Laborer Killed Over Verbal Spat in Kolar

ಕೋಲಾರ, ಡಿಸೆಂಬರ್​​ 26: ಕುಡಿದ ಮತ್ತಲ್ಲಿ ಕಾರ್ಮಿಕರ ನಡುವೆ ನಡೆದ ಕಿರಿಕ್​​ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೋಲಾರದ ವೇಮಗಲ್​ ಕೈಗಾರಿಕಾ ಪ್ರದೇಶದ ಬಳಿ ಇರುವ ಕುರುಗಲ್ ಗೇಟ್​ನಲ್ಲಿ ನಡೆದಿದೆ. ಬಿಹಾರ ಮೂಲದ ಕಾರ್ಮಿಕ ಸಂದೀಪ್​ ಸಿಂಗ್ ಮೃತ ದುರ್ದೈವಿಯಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ ರಾತ್ರಿ ಕುರುಗಲ್ ಗೇಟ್ ಬಳಿ ಕಾರ್ಮಿಕ ಸಂದೀಪ್ ಸಿಂಗ್​, ಅಡುಗೆ ಕೆಲಸ ಮಾಡುತ್ತಿದ್ದ ಬಳ್ಳಾರಿ ಮೂಲದ ರಾಜಾ ರೆಡ್ಡಿ, ಲೇಬರ್ ಕಾಂಟ್ರಾಕ್ಟ್ ಏಜೆಂಟ್ ಆಗಿದ್ದ ಅನಿರುದ್ ಮತ್ತು ಬೆಂಗಳೂರು ಮೂಲದ ಮನೋಜ್​ ಎಲ್ಲರೂ ಸೇರಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಸಂದೀಪ್​ ಸಿಂಗ್​ ಹಾಗೂ ರಾಜಾರೆಡ್ಡಿ ನಡುವೆ ಗಲಾಟೆ ಆರಂಭವಾಗಿದೆ. ಸಂದೀಪ್​ ಸಿಂಗ್ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪರಿಣಾಮ ರೊಚ್ಚಿಗೆದ್ದ ರಾಜಾರೆಡ್ಡಿ ಹಾಗೂ ಮನೋಜ್​ ಇಬ್ಬರೂ ಸೇರಿ ಸಂದೀಪ್​ ಸಿಂಗ್ ಮೇಲೆ ಹಲ್ಲೆ ಮಾಡಿದ್ದಾರೆ. ಚಾಕುವಿನಿಂದ ಇರಿದಿದ್ದಾರೆ. ಬಳಿಕ ಗಾಯಾಳುವನ್ನು ಅವರೇ ಬೈಕ್​​ ಮೂಲಕ ಆಸ್ಪತ್ರೆಗೆ ಕರೆದುಕೊಂಡು ಹೊರಟ್ಟಿದ್ದರು. ಈ ವೇಳೆ ಸಂದೀಪ್​ ಸಿಂಗ್​ ಬಾಯಿ ಚಪಲ ಆತನ ಪ್ರಾಣಕ್ಕೇ ಕುತ್ತು ತಂದಿದೆ.

ಇದನ್ನೂ ಓದಿ: ಮರ್ಡರ್​​ ಕೇಸ್​​ ತನಿಖೆ ವೇಳೆ ಖಾಕಿಗೇ ಶಾಕ್​​; ಬಯಲಾಗಿದ್ದು ಎರಡು ಪ್ರಕರಣ!

ನಾನು ಹುಷಾರಾದ ಮೇಲೆ ನಿಮ್ಮನ್ನು, ನಿಮ್ಮ ಕುಟುಂಬದವರನ್ನು ಬಿಡೋದಿಲ್ಲ ಎಂದು ಸಂದೀಪ್​​ ಸಿಂಗ್​​ ಧಮ್ಕಿ ಹಾಕಿದ್ದಾನೆ. ಆಸ್ಪತ್ರೆಗೆ ತೆರಳುತ್ತಿದ್ದ ಮಾರ್ಗಮಧ್ಯೆ ಈತ ಆಡಿದ  ಮಾತುಗಳು ಆರೋಪಿಗಳನ್ನು ಮತ್ತೆ ಕೆರಳಿಸಿದೆ. ಕೂಡಲೇ ಸಂದೀಪ್​​ ಸಿಂಗ್​​ನ ಬೈಕ್​​ನಿಂದ ಇಳಿಸಲಾಗಿದ್ದು, ರಾಜಾರೆಡ್ಡಿ, ಮನೋಜ್​ ಮತ್ತು ಅನಿರುದ್​​ ಆತನ ಕುತ್ತಿಗೆ ಕೊಯ್ದಿದ್ದಾರೆ. ಬಳಿಕ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ. ನಂತರ ತಾವೇ ಕರೆ ಮಾಡಿ ವಿಷಯ ತಿಳಿಸಿ ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ರಾಹುಲ್ ಗಾಂಧಿ, ಸಿದ್ದರಾಮಯ್ಯ ಡ್ರಾಮಾ ಬಿಟ್ಟು ವಾಸ್ತವತೆ ಒಪ್ಪಿಕೊಳ್ಳಲಿ; ಪ್ರಲ್ಹಾದ್ ಜೋಶಿ ತಿರುಗೇಟು – Kannada News | Congress Leaders should stop pretending and start acknowledging reality Pralhad Joshi Hits Back

ನವದೆಹಲಿ, ಡಿಸೆಂಬರ್ 26: ಪ್ರಧಾನಿ ನರೇಂದ್ರ ಮೋದಿ ಅವರ ‘ಮೇಕ್ ಇನ್ ಇಂಡಿಯಾ’ ಬಗ್ಗೆ ರಾಹುಲ್ ಗಾಂಧಿ ಟೀಕಿಸಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರು ಸಹ ಅದೇ ಧಾಟಿಯಲ್ಲಿ ಮಾತನಾಡುತ್ತಿದ್ದಾರೆ. ಇಬ್ಬರೂ ವಾಸ್ತವವನ್ನು ಒಪ್ಪಿಕೊಳ್ಳುವ ಅಗತ್ಯವಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಕಿಡಿ ಕಾರಿದ್ದಾರೆ. ದೇಶದಲ್ಲಿ ಫಾಕ್ಸ್‌ಕಾನ್‌ನಂತಹ ಜಾಗತಿಕ ಪ್ರಮುಖ ಕಂಪನಿಗಳ ವಿಸ್ತರಣೆಗೆ ಕೇಂದ್ರ ಪ್ರೋತ್ಸಾಹಿಸುತ್ತಿದೆ. ಕರ್ನಾಟಕದಲ್ಲಿ ಸಹ ಈ ಕಾರ್ಖಾನೆಯನ್ನು ಸ್ಥಾಪಿಸಲು ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೇ ಭೂಮಿ ಹಂಚಿಕೆ ಮಾಡಲಾಗಿತ್ತು ಎಂಬುದನ್ನು ಕಾಂಗ್ರೆಸ್ ಮರೆತುಬಿಟ್ಟಿದೆ ಎಂದು ಸಿಎಂಗೆ ಪ್ರಲ್ಹಾದ್ ಜೋಶಿ ತಿರುಗೇಟು ಕೊಟ್ಟಿದ್ದಾರೆ.

ಕಾಂಗ್ರೆಸ್ ನಟಿಸುವುದನ್ನು ನಿಲ್ಲಿಸಿ, ವಾಸ್ತವವನ್ನು ಒಪ್ಪಿಕೊಳ್ಳಬೇಕು. ಭಾರತದ ಉತ್ಪಾದನಾ ಬೆಳವಣಿಗೆ ಪ್ರಧಾನಿ ಮೋದಿಯವರ ಕಲ್ಪನೆಯಂತೆ ಮೇಕ್ ಇನ್ ಇಂಡಿಯಾ’ ದ ಫಲಿತಾಂಶವೇ ಆಗಿದೆ ಎಂದು ಪ್ರಲ್ಹಾದ್ ಜೋಶಿ ಪ್ರತಿಪಾದಿಸಿದ್ದಾರೆ.

ಪ್ರಧಾನಿ ಮೋದಿ ಅವರು ಪರಿಚಯಿಸಿದ ಪಿಎಲ್‌ಐ ಯೋಜನೆಯ ನೇರ ಫಲಾನುಭವಿ ಆಗಿದೆ ಫಾಕ್ಸ್‌ಕಾನ್ ಕಂಪನಿ. ಈ PLI ಯೋಜನೆಯಡಿಯೇ 14,065 ಕೋಟಿ ಹೂಡಿಕೆಗಳನ್ನು ಆಕರ್ಷಿಸಲಾಗಿದೆ. ಅಕ್ಟೋಬರ್ 2025ರ ವೇಳೆಗೆ ಸುಮಾರು 1.32 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಾಗಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಸಿಎಂಗೆ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: Video: ವೋಟ್ ಚೋರಿಯಾಗಿಲ್ಲ, ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ

ಭಾರತ ಇದೀಗ ದೇಶೀಯವಾಗಿ ಚಿಪ್‌ಗಳು, ಎಲೆಕ್ಟ್ರಾನಿಕ್ ಘಟಕಗಳು ಮತ್ತು ಉಪ-ಮಾಡ್ಯೂಲ್‌ಗಳನ್ನು ಅಭಿವೃದ್ಧಿಪಡಿಸುತ್ತಿದೆ. 2014-15ರಲ್ಲಿ 0.18 ಲಕ್ಷ ಕೋಟಿ ರೂ. ಇದ್ದ ಮೊಬೈಲ್ ಫೋನ್ ಉತ್ಪಾದನೆ ಇಂದು 5.5 ಲಕ್ಷ ಕೋಟಿ ರೂ.ಗೆ ಏರಿದೆ. ಇದು 28 ಪಟ್ಟು ಹೆಚ್ಚಾಗಿದೆ. ರಫ್ತು 0.01 ಲಕ್ಷ ಕೋಟಿ ರೂ.ನಿಂದ 2 ಲಕ್ಷ ಕೋಟಿಗೆ ಬೆಳೆದಿದೆ. ಇದು 127 ಪಟ್ಟು ಹೆಚ್ಚಾಗಿದೆ. ಇದು ಮೇಕ್ ಇನ್ ಇಂಡಿಯಾದ ಫಲವಲ್ಲವೇ? ಎಂದು ಸಿಎಂಗೆ ಚಾಟಿ ಬೀಸಿದ್ದಾರೆ.

ರಫ್ತು 0.01 ಲಕ್ಷ ಕೋಟಿಯಿಂದ 2 ಲಕ್ಷ ಕೋಟಿ ರೂ.ಗೆ ಬೆಳೆದಿದೆ. ಇದು 127 ಪಟ್ಟು ಹೆಚ್ಚಾಗಿದೆ. ವಿಪರ್ಯಾಸವೆಂದರೆ, ಈ ಹಿಂದೆ ರಾಹುಲ್ ಗಾಂಧಿ, ಭಾರತದಲ್ಲಿ ಫೋನ್‌ಗಳನ್ನು “ತಯಾರಿಸಲಾಗುವುದಿಲ್ಲ, ಜೋಡಿಸಲಾಗುತ್ತದೆ” ಎಂದಿದ್ದರು. ಆದರೆ NDA ಸರ್ಕಾರದ ಪ್ರೋತ್ಸಾಹದಲ್ಲಿ ಸ್ಮಾರ್ಟ್ ಫೋನ್ ಉತ್ಪಾದನಾ ಘಟಕಗಳು ಇದಕ್ಕೆ ತಕ್ಕುತ್ತರ ಕೊಟ್ಟಿವೆ ಎಂದಿದ್ದಾರೆ ಪ್ರಲ್ಹಾದ್ ಜೋಶಿ.

ಇದನ್ನೂ ಓದಿ: ಅಧಿವೇಶನ ನಡೆಯುವಾಗಲೇ ರಾಹುಲ್ ಗಾಂಧಿ ವಿದೇಶ ಪ್ರವಾಸ ಮಾಡ್ತಾರೆ; ಪ್ರಲ್ಹಾದ್ ಜೋಶಿ ಟೀಕೆ

ಬಿಜೆಪಿ ನೇತೃತ್ವದ ಸುಧಾರಣೆಗಳ ಫಲಿತಾಂಶಗಳನ್ನು ಪ್ರಶ್ನಿಸುವುದು ಕಾಂಗ್ರೆಸ್‌ನ ಹತಾಶೆಯನ್ನು ತೋರಿಸುತ್ತದೆ. ಆದರೆ, ವಾಸ್ತವದಲ್ಲಿ ಭಾರತದ ಉತ್ಪಾದಕ, ಆರ್ಥಿಕತೆ ನಿರ್ಣಾಯಕ ನಾಯಕತ್ವದ ಪ್ರತಿಫಲವೇ ಹೊರತು ಎರವಲು ಪಡೆದ ನಿರೂಪಣೆಗಳಲ್ಲ ಎಂದು ಸಚಿವ ಪ್ರಲ್ಹಾದ್ ಜೋಶಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ನಕಲಿ ಸುದ್ದಿ ಮಸೂದೆಯಡಿ “ಹೆಸರು ಮತ್ತು ಅವಮಾನ”ದ ಸ್ವಯಂ ಘೋಷಿತ ಪ್ರತಿಪಾದಕ ಪ್ರಿಯಾಂಕ ಖರ್ಗೆ ಈಗ ಸ್ವತಃ ನಕಲಿ ಸುದ್ದಿಗಳನ್ನು ಸೃಷ್ಟಿಸಿ ಸಿಕ್ಕಿಬಿದ್ದಿದ್ದಾರೆ ಎಂದು ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ. ಜನರನ್ನು ದಾರಿ ತಪ್ಪಿಸಲು, ಅವ್ಯವಸ್ಥೆ ಸೃಷ್ಟಿಸಲು ಮತ್ತು ವಿಕೃತ ನಿರೂಪಣೆಯನ್ನು ಮುಂದಿಡಲು ಕರ್ನಾಟಕ ಐಟಿ ಸಚಿವರು AI- ರಚಿತ ಚಿತ್ರವನ್ನು ಹಂಚಿಕೊಳ್ಳುತ್ತಿರುವುದು ಸ್ಪಷ್ಟ ದುರುದ್ದೇಶವನ್ನು ಬಹಿರಂಗಪಡಿಸುತ್ತದೆ ಎಂದು ಅವರು ಟೀಕಿಸಿದ್ದಾರೆ.

ಜನರನ್ನು ದಾರಿ ತಪ್ಪಿಸಿ, ಶಾಂತಿ ಸುವ್ಯವಸ್ಥೆಯನ್ನು ಹದಗೆಡಿಸಿ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಲು ಕರ್ನಾಟಕದ ಐಟಿ ಸಚಿವರು AI ರಚಿತ ಫೋಟೊವನ್ನು ಹಂಚಿಕೊಂಡಿರುವುದು, ಸಮಾಜದಲ್ಲಿ ಸೌಹಾರ್ದತೆಗೆ ಭಂಗ ತರುವ ದುರುದ್ದೇಶ ಬಹಿರಂಗವಾಗಿದೆ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND-W vs SL-W: ಮತ್ತೆ ಸಿಡಿದ ಶಫಾಲಿ; ಭಾರತದ ಕೈಸೇರಿದ ಟಿ20 ಸರಣಿ – Kannada News | India Women Dominate Sri Lanka in 3rd T20I: Series Win Secured in Thiruvananthapuram

ತಿರುವನಂತಪುರದಲ್ಲಿ ನಡೆದ ಶ್ರೀಲಂಕಾ ಮಹಿಳಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಆತಿಥೇಯ ಭಾರತ ಮಹಿಳಾ ತಂಡವು ಏಕಪಕ್ಷೀಯ ಗೆಲುವು ಸಾಧಿಸಿ ಇನ್ನೂ ಎರಡು ಪಂದ್ಯಗಳು ಬಾಕಿ ಇರುವಂತೆಯೇ ಸರಣಿಯನ್ನು ವಶಪಡಿಸಿಕೊಂಡಿದೆ. ಮೂರನೇ ಟಿ20 ಪಂದ್ಯವನ್ನು 8 ವಿಕೆಟ್‌ಗಳಿಂದ ಗೆದ್ದುಕೊಂಡ ಟೀಂ ಇಂಡಿಯಾ ಗೆಲುವಿನಲ್ಲಿ ರೇಣುಕಾ ಸಿಂಗ್, ದೀಪ್ತಿ ಶರ್ಮಾ ಮತ್ತು ಶೆಫಾಲಿ ವರ್ಮಾ ಪ್ರಮುಖ ಪಾತ್ರವಹಿಸಿದರು. ಈ ಮೂವರ ಅದ್ಭುತ ಪ್ರದರ್ಶನದಿಂದಾಗಿ ಹರ್ಮನ್ ಪಡೆ ಸರಣಿಯಲ್ಲಿ 3-0 ಅಂತರದ ಮುನ್ನಡೆ ಪಡೆದುಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ಕೇವಲ 112 ರನ್ ಕಲೆಹಾಕಿತು. ಇದಕ್ಕೆ ಪ್ರತಿಕ್ರಿಯೆಯಾಗಿ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 14 ನೇ ಓವರ್‌ನಲ್ಲಿ ಜಯದ ನಗೆ ಬೀರಿತು. ತಂಡದ ಪರ ಶೆಫಾಲಿ ವರ್ಮಾ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಮಿಂಚಿದರು.

Source link

ಹೊಸ ವರ್ಷಾಚರಣೆ: ಹೋಟೆಲ್, ಬಾರ್-ಪಬ್‌ ಎಷ್ಟು ಗಂಟೆ ತನಕ ಓಪನ್? ಕಮಿಷನರ್ ಕೊಟ್ಟ 30 ಸೂಚನೆಗಳು – Kannada News | New Year 2026: Until What Time Are Hotels, Bars, and Pubs Open, Commissioner Issues 30 instructions

ಹೊಸ ವರ್ಷಾಚರಣೆ, ಪೊಲೀಸ್ ಆಯುಕ್ತ ಸೀಮಂತ್ ಕುಮಾರ್

ಬೆಂಗಳೂರು, ಡಿಸೆಂಬರ್​ 26: ಹೊಸ ವರ್ಷವನ್ನು (New Year) ಭರ್ಜರಿಯಾಗಿ ವೆಲ್​ಕಂ ಮಾಡಲು ಜನರು ತುದಿಗಾಲಲ್ಲಿ ನಿಂತಿದ್ದಾರೆ. ಅದರಲ್ಲೂ ಬೆಂಗಳೂರಿನ ಎಂಜಿ ರೋಡ್‌ನಲ್ಲಿ ಕುಣಿದು ಕುಪ್ಪಳಿಸಲು ಯುವ ಸಮೂಹ ಸಜ್ಜಾಗಿದೆ. ಇತ್ತ ಪೊಲೀಸರು ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ. ಇಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ (Seemanth Kumar) ನೇತೃತ್ವದಲ್ಲಿ ಹೋಟೆಲ್, ಪಬ್ ಮತ್ತು ಬಾರ್ ಮಾಲೀಕರ ಜೊತೆ ಸಭೆ ನಡೆಯಿತು. ಸಿಸಿಕ್ಯಾಮರಾ ಅಳವಡಿಕೆ, ಶಬ್ದ ಮಾಲಿನ್ಯ ಮತ್ತು ಹೆಣ್ಮಕ್ಕಳ ಸುರಕ್ಷತೆ ಸೇರಿದಂತೆ 30 ಸೂಚನೆಗಳನ್ನು ಕೊಟ್ಟಿದ್ದಾರೆ. ಇನ್ನು ಬಾರ್​​ ಮತ್ತು ಪಬ್​​ಗಳಿಗೆ ರಾತ್ರಿ 1 ಗಂಟೆವರೆಗೆ ಅವಕಾಶ ನೀಡಲಾಗಿದೆ.

ಹೋಟೆಲ್, ಪಬ್ ಮತ್ತು ಬಾರ್ ಮಾಲೀಕರಿಗೆ ಸೀಮಂತ್ ಕುಮಾರ್​ ಖಡಕ್​ ಸೂಚನೆ 

ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್, ಈಗಾಗಲೇ ಉಪವಿಭಾಗ, ಠಾಣಾ ವ್ಯಾಪ್ತಿಯಲ್ಲಿ ಎಲ್ಲಾ ಹೋಟೆಲ್, ಪಬ್ ಮತ್ತು ಬಾರ್ ಮಾಲೀಕರನ್ನು ಕರೆಸಿ ಮೀಟಿಂಗ್​ ಮಾಡಲಾಗಿದೆ. ಜನದಟ್ಟಣೆ ನಿಯಂತ್ರಣ, ವಯೋಮಿತಿ, ಸಮಯ, ಸಿಸಿಕ್ಯಾಮರಾ ಅಳವಡಿಕೆ, ಶಬ್ದ ಮಾಲಿನ್ಯ, ಹೆಣ್ಮಕ್ಕಳ ಸುರಕ್ಷತೆ, ಎಂಟ್ರಿ, ಎಕ್ಸಿಟ್, ಫೈರ್ ಸೇಫ್ಟಿ, ಪಾರ್ಕಿಂಗ್ ಮತ್ತು ಮ್ಯಾನೇಜರ್, ಸಿಬ್ಬಂದಿ ಮದ್ಯಪಾನ‌ ಮಾಡಿರಬಾರದು ಎಂದು ಮಾಲೀಕರಿಗೆ ಸೂಚಿಸಲಾಗಿದೆ ಎಂದರು.

ಇದನ್ನೂ ಓದಿ: ನ್ಯೂ ಇಯರ್ ಹೆಸರಲ್ಲಿ ರೇವ್ ಪಾರ್ಟಿ ಮಾಡಿದ್ರೆ ಹುಷಾರ್! ಬೆಂಗಳೂರಿನಾದ್ಯಂತ ಖಾಕಿ ಸರ್ಪಗಾವಲು

ಎಮರ್ಜೆನ್ಸಿ ಕಾಂಟ್ಯಾಕ್ಟ್, ರೇವ್ ಪಾರ್ಟಿ, ಕಾನೂನುಬಾಹಿರ ಪಾರ್ಟಿ ಬಗ್ಗೆ ಪ್ರದರ್ಶನ  ಮಾಡಬಾರದು. ಫೈರ್ ಕ್ರಾಕರ್ಸ್, ಆಯುಧಗಳು ಇರಬಾರದು. ಹೋಗಿ ಬರುವ ಜನರಿಗೆ ಸರದಿ ಸಾಲು ಇರಬೇಕು. ಹೀಗೆ ಎಲ್ಲದರ ಬಗ್ಗೆಯೂ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಪ್ರಚೋದನಕಾರಿ ಹಾಡು ಹಾಕುವಂತ್ತಿಲ್ಲ

ಪ್ರಚೋದನಕಾರಿ ಹಾಡುಗಳನ್ನು ಹಾಕಬಾರದು. ಕುಟುಂಬ ಸದಸ್ಯರಿಗೆ, ಸ್ನೇಹಿತರಿಗೆ ಬೇರೆ ವ್ಯವಸ್ಥೆ ಇರಬೇಕು. ಲಿಕ್ಕರ್ ಸ್ಟಾಕ್ ಬಗ್ಗೆ ಎಲ್ಲಾ ನೀಟಾಗಿ ಇರಬೇಕು.  ಕಾರ್ಯಕ್ರಮದ ಪ್ಲ್ಯಾನ್ ಬಗ್ಗೆ ಪೊಲೀಸರಿಗೆ ತಿಳಿಸಬೇಕು. ಬಾರ್, ಪಬ್​ನವರು ಹೆಚ್ಚುವರಿ ಸಮಯ ಕೇಳಿದ್ದರು, ಆದರೆ ರಾತ್ರಿ 1 ಗಂಟೆಗೆ ಬಂದ್​ ಆಗಬೇಕೆಂದು ಸೂಚಿಸಿದ್ದೇನೆ. ಜವಾಬ್ದಾರಿಯಿಂದ ಹೊಸ ವರ್ಷಾಚರಣೆ ಮಾಡಬೇಕು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸೂಚನೆ ನಿಡಿದ್ದಾರೆ.

ವರದಿ: ವಿಕಾಸ್​​ ಟಿವಿ9 ಕ್ರೈಂ 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 6:20 pm, Fri, 26 December 25

Source link

ಹೈವೇಯಲ್ಲಿ ಸಿನಿಮೀಯ ದರೋಡೆ; ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು – Kannada News | Accountant carrying Rs 85 lakh on scooter robbed by bikers on Delhi–Lucknow highway

ನವದೆಹಲಿ, ಡಿಸೆಂಬರ್ 26: ದೆಹಲಿ- ಲಕ್ನೋ ಹೆದ್ದಾರಿಯಲ್ಲಿ ಸ್ಕೂಟರ್​​ನಲ್ಲಿ ಹೋಗುತ್ತಿದ್ದ ಅಕೌಂಟೆಂಟ್​​ ಬಳಿ ಇದ್ದ 85 ಲಕ್ಷ ರೂ. ಹಣವನ್ನು ಬೈಕ್ ಸವಾರರು ದೋಚಿದ್ದಾರೆ. ಈ ಸಿನಿಮೀಯ ದರೋಡೆ (Robbery) ಹೈವೇಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಲ್ಲೆಕೋರರು ಆತನ ಬಳಿ ಇದ್ದ ದುಡ್ಡಿನ ಚೀಲವನ್ನು ಕಸಿದುಕೊಂಡಿದ್ದಾರೆ. ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ತನಿಖೆ ಆರಂಭಿಸಲಾಗಿದೆ. ನೋಯ್ಡಾ ಮೂಲದ ಉದ್ಯಮಿಯೊಬ್ಬರಿಗೆ ಅಕೌಂಟೆಂಟ್​ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಹಣವನ್ನು ಸ್ಕೂಟರ್​​ನಲ್ಲಿ ಇಟ್ಟುಕೊಂಡು ಹೋಗುತ್ತಿದ್ದ. ಈ ಬಗ್ಗೆ ತಿಳಿದ ದರೋಡೆಕೋರರು ಆತನಿಗೆ ಅಡ್ಡಹಾಕಿ ದುಡ್ಡು ಕಸಿದುಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version