ಮಹಿಳೆಯ ಆಭರಣಗಳನ್ನು ಕದ್ದು ಆಕೆಯನ್ನು ಬಾವಿಗೆ ತಳ್ಳಿದ ಕಳ್ಳ, 21 ಗಂಟೆಗಳ ಬಳಿಕ ಬದುಕಿ ಬಂದ ಧೀರ ಮಹಿಳೆ – Kannada News | Woman Survives 21 Hours in Well After Robbery: Karimnagar’s Lakshmi Defies Death
ಕರೀಂನಗರ, ಜುಲೈ 05: ಕಳ್ಳನೊಬ್ಬ ಒಡವೆ, ಹಣ ದೋಚಿ ಸಾಕ್ಷಿ ನಾಶಪಡಿಸಲು 55 ವರ್ಷದ ಮಹಿಳೆಯೊಬ್ಬರನ್ನು ಕೃಷಿ ಬಾವಿ(Well)ಗೆ ತಳ್ಳಿದ ಘಟನೆ ತೆಲಂಗಾಣದ ಕರೀಂನಗರ ಜಿಲ್ಲೆಯಲ್ಲಿ ನಡೆದಿದೆ. ಆದರೆ, ಸಾವಿನ ದವಡೆಯಿಂದ ಪಾರಾದ ಮಹಿಳೆ ಸುಮಾರು 21 ಗಂಟೆಗಳ ಕಾಲ ಬಾವಿಯಲ್ಲೇ ಹೋರಾಟ ನಡೆಸಿ ಪವಾಡಸದೃಶವಾಗಿ ಬದುಕುಳಿದಿದ್ದಾರೆ. ಆಕೆಯ ಧೈರ್ಯದಿಂದಾಗಿ ಪೊಲೀಸರು 21 ವರ್ಷದ ಆರೋಪಿ ವಿದ್ಯಾರ್ಥಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೆಲಸದ ಆಮಿಷ ಒಡ್ಡಿ ದರೋಡೆ ದಿನಗೂಲಿ ಕಾರ್ಮಿಕರಾದ ತಂಗರಾಲ ಲಕ್ಷ್ಮೀ ಎಂಬುವವರು ಜುಲೈ 1 ರಂದು…