Headlines

ಡಾಲರ್ ಎದುರು 96 ದಾಟಿ ಸಾರ್ವಕಾಲಿಕ ಕೆಳಮಟ್ಟಕ್ಕೆ ಕುಸಿದ ರೂಪಾಯಿ; ಭಾರತೀಯ ಕರೆನ್ಸಿಯ ಐತಿಹಾಸಿಕ ಕಳಪೆ ಸಾಧನೆ – Kannada News | Rupee Hits Record Low: Drops 20 Paise to cross 96 Against US Dollar

ನವದೆಹಲಿ, ಮೇ 18: ಜಾಗತಿಕ ಆರ್ಥಿಕ ಮಾರುಕಟ್ಟೆಯಲ್ಲಿನ ತಲ್ಲಣಗಳು ಮತ್ತು ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಭಾರತೀಯ ಮಾರುಕಟ್ಟೆಯಿಂದ ಸತತವಾಗಿ ಬಂಡವಾಳವನ್ನು ಹಿಂತೆಗೆದುಕೊಳ್ಳುತ್ತಿರುವುದು ದೇಶೀಯ ಕರೆನ್ಸಿಯ ಮೇಲೆ ತೀವ್ರ ನಕಾರಾತ್ಮಕ ಪರಿಣಾಮ ಬೀರಿದೆ. ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಅಮೆರಿಕನ್ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯವು (Indian Rupee value) ತೀವ್ರ ಕುಸಿತವನ್ನು ಕಾಣುವ ಮೂಲಕ ಇತಿಹಾಸದಲ್ಲೇ ಅತ್ಯಂತ ಕನಿಷ್ಠ ಮಟ್ಟವನ್ನು ತಲುಪಿದೆ. ಸೋಮವಾರದ ಫಾರೆಕ್ಸ್ ವಹಿವಾಟು ವೇಳೆ ಡಾಲರ್ ಎದುರು ರುಪಾಯಿ 96.27 ಮಟ್ಟಕ್ಕೆ ಕುಸಿದಿತ್ತು. ಇದು…

Read More

ಬೇಸಿಗೆಯಲ್ಲಿ ಖಾಲಿ ಹೊಟ್ಟೆಯಲ್ಲಿ ವಾಕ್ ಮಾಡುವ ಅಭ್ಯಾಸವಿದ್ಯಾ? ತಜ್ಞರು ಈ ಬಗ್ಗೆ ಏನ್ ಹೇಳ್ತಾರೆ ನೋಡಿ – Kannada News | Walking on Empty Stomach in Hot Weather: Do’s and Don’ts

ದೇಶದ ಹಲವು ಭಾಗಗಳಲ್ಲಿ ಬೇಸಿಗೆ ಶಾಖ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಕೊಡುವುದು ಅನಿವಾರ್ಯವಾಗಿದೆ. ಅದರಲ್ಲಿಯೂ ಖಾಲಿ ಹೊಟ್ಟೆಯಲ್ಲಿ ಬೆಳಗಿನ ವಾಕ್ ಮಾಡುವವರು ಕೆಲವು ಸಲಹೆಗಳನ್ನು ಅನುಸರಿಸುವುದು ಅನಿವಾರ್ಯವಾಗಿದೆ. ಏಕೆಂದರೆ ಬೇಸಿಗೆ ಎಲ್ಲಾ ಸಮಯದ ಹಾಗಲ್ಲ. ಎಷ್ಟು ಕಾಳಜಿ ವಹಿಸಿದರೂ ಸಾಲುವುದಿಲ್ಲ. ಹಾಗಾದರೆ ಖಾಲಿ ಹೊಟ್ಟೆಯಲ್ಲಿ ವಾಕ್ (Walking) ಮಾಡುವುದು ಸುರಕ್ಷಿತವೇ, ಆರೋಗ್ಯ ತಜ್ಞರ ಅಭಿಪ್ರಾಯವೇನು, ಯಾರು ಹೆಚ್ಚು ಅಪಾಯದಲ್ಲಿದ್ದಾರೆ, ಹೀಗೆ ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ. ಖಾಲಿ ಹೊಟ್ಟೆಯಲ್ಲಿ…

Read More

ಸುಡುವ ಬಿಸಿಲಿನ ನಡುವೆ ಎಲ್ ನಿನೋ ಆತಂಕ: ಮುಂಗಾರು ಮಳೆಗೆ ಕಂಟಕ, ದೇಶಾದ್ಯಂತ ಬರಗಾಲದ ಭೀತಿ! – Kannada News | El Nino Threat in Karnataka, India: IMD Warns of Drought and Monsoon Failure Amid Rising Temperatures

ಬೆಂಗಳೂರು, ಏಪ್ರಿಲ್ 22: ಕರ್ನಾಟಕದಲ್ಲಿ (Karnataka) ಸೂರ್ಯನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಇಂತಹ ಸಮಯದಲ್ಲಿ ಹವಾಮಾನ ಇಲಾಖೆಯು ‘ಎಲ್ ನಿನೋ (El Nino)’ ಸುಳಿವು ನೀಡಿದ್ದು, ಜನರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ. ಪೆಸಿಫಿಕ್ ಸಾಗರದ ಉಷ್ಣಾಂಶದಲ್ಲಿನ ಏರಿಕೆಯಿಂದ ಉಂಟಾಗುವ ಈ ಹವಾಮಾನ ವೈಪರೀತ್ಯವು ಭಾರತದ ಮುಂಗಾರು ಮಳೆಯ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಎಲ್ ನಿನೋ ಎಂದರೇನು? ಪೆಸಿಫಿಕ್ ಸಾಗರದ ಮೇಲ್ಮೈ ಉಷ್ಣಾಂಶವು ವಾಡಿಕೆಗಿಂತ ಹೆಚ್ಚಾಗುವುದನ್ನೇ ‘ಎಲ್…

Read More

ರಣವೀರ್ ಸಿಂಗ್ ಎಕ್ಸಿಟ್ ಎಫೆಕ್ಟ್: ಅಧಿಕೃತವಾಗಿ ‘ಡಾನ್ 3’ ಕೈಬಿಟ್ಟ ಫರ್ಹಾನ್ ಅಖ್ತರ್? – Kannada News

ಬಾಲಿವುಡ್‌ನ ಬಹುನಿರೀಕ್ಷಿತ ಆಕ್ಷನ್ ಫ್ರಾಂಚೈಸಿ ‘ಡಾನ್ 3’ ಸಿನಿಮಾ ಶೂಟಿಂಗ್ ಆರಂಭಕ್ಕೂ ಮುನ್ನವೇ ದೊಡ್ಡ ಸಂಕಷ್ಟಕ್ಕೆ ಸಿಲುಕಿದೆ. ಚಿತ್ರದಿಂದ ನಟ ರಣವೀರ್ ಸಿಂಗ್ ಹೊರನಡೆದ ಮೇಲೆ ‘ಡಾನ್ 3’ ಸದ್ಯಕ್ಕಂತೂ ಸೆಟ್ಟೇರುವುದು ಅನುಮಾನ ಎಂಬ ಮಾತು ಕೇಳಿಬರುತ್ತಿತ್ತು. ಆ ಮಾತು ಈಗ ನಿಜವಾಗುವ ಸಮಯ ಬಂದಿದ್ದು, ನಿರ್ದೇಶಕ ಹಾಗೂ ನಟ ಫರ್ಹಾನ್ ಅಖ್ತರ್ ಈ ಪ್ರಾಜೆಕ್ಟ್ ಅನ್ನು ಸದ್ಯಕ್ಕೆ ಬದಿಗೆ ತಳ್ಳಿದ್ದಾರೆ. ಇದರ ಬೆನ್ನಲ್ಲೇ ಅವರು ಹೊಸದೊಂದು ಬಿಗ್ ಪ್ರಾಜೆಕ್ಟ್‌ಗೆ ಕೈಹಾಕಿದ್ದಾರೆ. ಹೊಸ ವರ್ದಿಗಳ ಪ್ರಕಾರ ಫರ್ಹಾನ್…

Read More

Kumkumarchana: ಕುಂಕುಮಾರ್ಚನೆಯನ್ನು ಮಹಿಳೆಯರು ಮಾಡಿಸಬಹುದಾ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Kumkumarchana: Who Can Perform This Devotional Practice and Its Benefits

ಕುಂಕುಮಾರ್ಚನೆಯ ಮಹತ್ವ ಮತ್ತು ಅದನ್ನು ಯಾರು ಆಚರಿಸಬಹುದು ಎಂಬ ಕುರಿತು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ದೇವಸ್ಥಾನಗಳಲ್ಲಿ, ಮನೆಯಲ್ಲಿ ದೇವಿಗೆ ಕುಂಕುಮಾರ್ಚನೆ ಮಾಡಿಸುವುದು ಸಾಮಾನ್ಯ. ಆದರೆ ಈ ಪೂಜಾ ವಿಧಿಯನ್ನು ವಯಸ್ಸಾದವರು, ದೇವ ಭಕ್ತಿ ಇರುವವರು ಅಥವಾ ಆಧ್ಯಾತ್ಮಿಕ ಕ್ಷೇತ್ರದಲ್ಲಿ ಇರುವವರು ಮಾತ್ರ ಮಾಡಬೇಕೇ ಎಂಬ ಪ್ರಶ್ನೆ ಹಲವರಲ್ಲಿದೆ. ಇದಕ್ಕೆ ಗುರೂಜಿಯವರು ‘ಕುಂಕುಮಾರ್ಚನೆಯನ್ನು ಎಲ್ಲರೂ ಮಾಡಿಸಬಹುದು’ ಎಂದು ಸ್ಪಷ್ಟ ಉತ್ತರವನ್ನು ನೀಡಿದ್ದಾರೆ. ವಿದ್ಯಾರ್ಥಿಗಳು, ವ್ಯಾಪಾರಸ್ಥರು,…

Read More

‘ಜನ ನಾಯಗನ್’ ಬಳಿಕ ಈಗ ‘ಪರಾಶಕ್ತಿ’ಗೂ ಸಿಬಿಎಫ್​​ಸಿ ಸಂಕಟ – Kannada News | CBFC suggests 23 cuts to Sivakarthikeyan’s Parashakti movie

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ನಾಳೆ (ಜನವರಿ 09) ಬಿಡುಗಡೆ ಆಗಬೇಕಿತ್ತು. ಆದರೆ ಸಿಬಿಎಫ್​​ಸಿ ಪ್ರಮಾಣ ಪತ್ರ ಸಿಗದ ಕಾರಣ ಸಿನಿಮಾ ಬಿಡುಗಡೆಯನ್ನು ಮುಂದೂಡಲಾಗಿದೆ. ‘ಜನ ನಾಯಗನ್’ ಎದುರಾಗಿ ಶಿವಕಾರ್ತಿಕೇಯನ್, ಶ್ರೀಲೀಲಾ ನಟನೆಯ ‘ಪರಾಶಕ್ತಿ’ ಸಿನಿಮಾ ಬಿಡುಗಡೆ ಆಗುತ್ತಿತ್ತು. ಆದರೆ ಈಗ ಅದೂ ಸಹ ಸಂಕಷ್ಟದಲ್ಲಿ ಸಿಲುಕಿದೆ. ಸಿನಿಮಾಕ್ಕೆ ಬರೋಬ್ಬರಿ 23 ಕಟ್​​ಗಳನ್ನು ಸಿಬಿಎಫ್​​ಸಿ ಸೂಚಿಸಿದ್ದು, ‘ಪರಾಶಕ್ತಿ’ ನಿರ್ಮಾಪಕರು ಸಿಬಿಎಫ್​​ಸಿ ವಿರುದ್ಧ ನ್ಯಾಯಾಲಯ ಮೊರೆ ಹೋಗುವ ಸಾಧ್ಯತೆ ಇದೆ. ಶಿವಕಾರ್ತಿಕೇಯನ್ ಮತ್ತು…

Read More

ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ

ಹಂಸಲೇಖ (Hamsalekha) ಮತ್ತು ರವಿಚಂದ್ರನ್ ಅವರದ್ದು ಎವರ್​ಗ್ರೀನ್ ಕಾಂಬಿನೇಷನ್. ಅವರಿಬ್ಬರು ಜೋಡಿಯಾಗಿ ಅನೇಕ ಸೂಪರ್ ಹಿಟ್ ಹಾಡುಗಳನ್ನು ನೀಡಿದ್ದಾರೆ. ಒಂದಷ್ಟು ವರ್ಷಗಳ ಹಿಂದೆ ಅವರ ನಡುವೆ ಮುನಿಸು ಉಂಟಾಗಿತ್ತು. ಆದರೆ ಈಗ ಅವರು ಒಂದಾಗಿದ್ದಾರೆ. ವೇದಿಕೆಯಲ್ಲಿ ಒಟ್ಟಿಗೆ ಕುಳಿತು ಆ ದಿನಗಳನ್ನು ಮೆಲುಕು ಹಾಕಿದ್ದಾರೆ. ‘ಸೋನೆ ಸೋನೆ’ ಹಾಡು ರಚಿಸುವಾಗ ಹಂಸಲೇಖ ಮತ್ತು ರವಿಚಂದ್ರನ್ ನಡುವೆ ವೈಮನಸ್ಸು ಉಂಟಾಗಿತ್ತು. ಆ ಸಂದರ್ಭವನ್ನು ರವಿಚಂದ್ರನ್ (Ravichandran) ಅವರು ಈಗ ವಿವರಿಸಿದ್ದಾರೆ. ‘ಆಗಲೇ ನನ್ನ ಮತ್ತು ಇವರ ನಡುವೆ ಚಿಕ್ಕ…

Read More

ಅಯೋಧ್ಯೆಯ ರಾಮನ ದರ್ಶನಕ್ಕೆ 450 ಕಿ.ಮೀ ಸ್ಕೇಟಿಂಗ್ ಮಾಡಿದ 9 ವರ್ಷದ ಬಾಲಕಿ – Kannada News | Viral Video 9 Year Old Vanshika Yadav Skates 450 Km To Ayodhya For Ram Lalla Darshan

ಅಯೋಧ್ಯೆ, ಜನವರಿ 10: ಉತ್ತರ ಪ್ರದೇಶದಲ್ಲಿ ತೀವ್ರವಾದ ಚಳಿಯಿದೆ. ಈ ಚಳಿಯಲ್ಲೂ ಫಿರೋಜಾಬಾದ್​​ನಿಂದ 450 ಕಿ.ಮೀ ದೂರದವರೆಗೆ ಸ್ಕೇಟಿಂಗ್ ಮಾಡಿ 9 ವರ್ಷದ ಬಾಲಕಿ ವಂಶಿಕಾ ಯಾದವ್ ಎಂಬಾಕೆ ಅಯೋಧ್ಯೆಯ (Ayodhya) ರಾಮ ಲಲ್ಲಾನ ದರ್ಶನ ಪಡೆದಿದ್ದಾಳೆ. ಈ ಮೂಲಕ 9 ವರ್ಷದ ವಂಶಿಕಾ ಭಗವಾನ್ ರಾಮನ ಮೇಲಿನ ತನ್ನ ಭಕ್ತಿಯನ್ನು ವಿಭಿನ್ನ ರೀತಿಯಲ್ಲಿ ವ್ಯಕ್ತಪಡಿಸಿದ್ದಾಳೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೋ ನೋಡಿದ ಜನರು ಈ ಬಾಲಕಿಯ ಭಕ್ತಿಯನ್ನು ಮೆಚ್ಚುತ್ತಿದ್ದಾರೆ. ವಂಶಿಕಾ…

Read More

‘ಟಾಕ್ಸಿಕ್’ ಟೀಸರ್ ನೋಡಿ ಆ ತಮಿಳು ಸಿನಿಮಾ ನೆನಪಿಸಿಕೊಳ್ಳುತ್ತಿರುವುದೇಕೆ? – Kannada News | Toxic movie teaser released, Some people comparing it with Mahaan movie story

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ಇಂದು (ಫೆಬ್ರವರಿ 20) ಬಿಡುಗಡೆ ಆಗಿದೆ. ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಟೀಸರ್ ಬಿಡುಗಡೆ ಆಗಿದ್ದು, ಕೆಲವೇ ಗಂಟೆಗಳಲ್ಲಿ ಕೋಟ್ಯಂತರ ವೀವ್ಸ್​ಗಳನ್ನು ಪಡೆದುಕೊಂಡಿದೆ. ಈ ಹಿಂದೆ ಬಿಡುಗಡೆ ಆಗಿದ್ದ ಯಶ್ ಅವರ ಕ್ಯಾರೆಕ್ಟರ್ ಟೀಸರ್ ರೀತಿಯೇ ಈ ಟೀಸರ್ ಸಹ ಮಾಸ್ ಆಗಿ ಮೂಡಿಬಂದಿದೆ. ಟೀಸರ್​​ನಲ್ಲಿ ಯಶ್ ಅವರ ಎರಡು ಭಿನ್ನ ಲುಕ್​​ಗಳನ್ನು ತೋರಿಸಲಾಗಿದ್ದು, ಅಭಿಮಾನಿಗಳು ಯಶ್ ಅವರ ಲುಕ್​​ಗಳಿಗೆ ಮಾಸ್ ಅಪೀಲ್​​ಗೆ…

Read More

ಹಾವೇರಿ: ಶಾಲೆ ಆವರಣದಲ್ಲೇ ಪುಂಡರಂತೆ ಹೊಡೆದಾಡಿಕೊಂಡ ಅತಿಥಿ ಶಿಕ್ಷಕ, ಎಸ್‌ಡಿಎಂಸಿ ಅಧ್ಯಕ್ಷ, ವಿಡಿಯೋ ವೈರಲ್ – Kannada News | Guest Teacher, SDMC President Clash Inside Government School in Haveri; Fight Video Goes Viral

ಹಾವೇರಿ, ಜನವರಿ 14: ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿರುವ ಶಾಸಕರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕ ಮತ್ತು ಶಾಲಾ ಅಭಿವೃದ್ಧಿ ಹಾಗೂ ಮೇಲ್ವಿಚಾರಣಾ ಸಮಿತಿ (ಎಸ್‌ಡಿಎಂಸಿ) ಅಧ್ಯಕ್ಷರ ನಡುವೆ ನಡೆದ ಹೊಡೆದಾಟವು ತೀವ್ರ ಚರ್ಚೆಗೆ ಕಾರಣವಾಗಿದೆ. ಕೈಕೈ ಮಿಲಾಯಿಸಿ, ಶರ್ಟ್ ಹಿಡಿದು ಪರಸ್ಪರ ಪುಂಡರಂತೆ ಹೊಡೆದಾಡಿಕೊಂಡ ಘಟನೆ ಶಾಲಾ ಆವರಣದಲ್ಲೇ ನಡೆದಿದ್ದು, ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಾಹಿತಿಯ ಪ್ರಕಾರ, ಅತಿಥಿ ಶಿಕ್ಷಕ ಗಂಟೇರ್ ಹಾಗೂ ಎಸ್‌ಡಿಎಂಸಿ ಅಧ್ಯಕ್ಷ ಸತೀಶ್ ಬೋಸ್ಲೆ…

Read More