Headlines

ಕಿರುಕುಳ ಕೊಟ್ಟು ಯುವತಿ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿ, ಹೆಣಕ್ಕೆ ತಾಳಿ ಕಟ್ಟಿದ ವ್ಯಕ್ತಿ – Kannada News | Jharkhand: Fiance Marries Deceased Bride Amid Ongoing Questions Around Her Death

ಗಿರಿದಿಹ್ , ಮೇ 19: ತನ್ನ ಕಿರುಕುಳಕ್ಕೆ ಬಲಿಯಾಗಿ ಹೆಣವಾಗಿ ಮಲಗಿದ್ದ ಯುವತಿ ಕತ್ತಿಗೆ ವ್ಯಕ್ತಿಯೊಬ್ಬ ತಾಳಿ ಕಟ್ಟಿರುವ ಘಟನೆ ಜಾರ್ಖಂಡ್​ನ ಗಿರಿದಿಹ್​ನಲ್ಲಿ ನಡೆದಿದೆ. ಆಕೆಯನ್ನು ಆತ್ಮಹತ್ಯೆ(Suicide)ಗೆ ತಳ್ಳಿದ ಆರೋಪಿ ಯುವಕನೇ ಪೊಲೀಸರ ಸಮ್ಮುಖದಲ್ಲಿ ಮದುವೆಯಾಗಿರುವ ವಿಲಕ್ಷಣ ಪ್ರಸಂಗ ನಡೆದಿದೆ. ಮೃತರ ಹಣೆಗೆ ಸಿಂಧೂರ ಹಚ್ಚಿ, ಸಾಂಕೇತಿಕವಾಗಿ ವಿವಾಹ ವಿಧಿವಿಧಾನಗಳನ್ನು ಮುಗಿಸಿದ ನಂತರವೇ ಆಕೆಯ ಅಂತ್ಯಕ್ರಿಯೆ ನಡೆಸಲು ಸಾಧ್ಯವಾಗಿದೆ. ಪೊಲೀಸರ ಮಾಹಿತಿಯ ಪ್ರಕಾರ, ಆರೋಪಿ ಯುವಕ ಮನೀಶ್ ಮುರ್ಮು ಮತ್ತು ಮೃತ ಯುವತಿಗೆ ಸುಮಾರು ನಾಲ್ಕು ತಿಂಗಳ…

Read More

ದಾಖಲೆಯ ಶತಕದೊಂದಿಗೆ ವಿಶ್ವ ದಾಖಲೆಯತ್ತ ಮುನ್ನುಗ್ಗಿದ ಜೋ ರೂಟ್ – Kannada News | Joe Root goes level with Ricky Ponting on 41 Test hundreds

ಆ್ಯಶಸ್ ಸರಣಿಯ 5ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಜೋ ರೂಟ್ ಭರ್ಜರಿ ಶತಕ ಸಿಡಿಸಿದ್ದಾರೆ. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 57 ರನ್ ಗಳಿಸುವಷ್ಟರಲ್ಲಿ ಅಗ್ರ ಕ್ರಮಾಂಕದ ಮೂವರು ಬ್ಯಾಟರ್ ಗಳು ಪೆವಿಲಿಯನ್ ಗೆ ಮರಳಿದ್ದರು. ಈ ಹಂತದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ…

Read More

ಶಾಲೆಗಳಲ್ಲಿ ಕನ್ನಡ ದಿನಪತ್ರಿಕೆ ಓದುವುದು ಇನ್ನು ಕಡ್ಡಾಯ! ಸರ್ಕಾರದ ಮಹತ್ವದ ಆದೇಶ – Kannada News | Mandatory Kannada Newspaper Reading in Karnataka Schools

ಶಾಲೆಗಳಲ್ಲಿ ಕನ್ನಡ ದಿನಪತ್ರಿಕೆ ಓದುವುದು ಇನ್ನು ಕಡ್ಡಾಯ!Image Credit source: google Gemini ಬೆಂಗಳೂರು, ಏಪ್ರಿಲ್ 26: ರಾಜ್ಯದಾದ್ಯಂತ ಇರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿದಿನ ಕನಿಷ್ಠ 10 ನಿಮಿಷಗಳ ಕಾಲ ಕನ್ನಡ ದಿನಪತ್ರಿಕೆಗಳನ್ನು (Kannada Newspaper) ಓದುವುದನ್ನು ಶಿಕ್ಷಣ ಇಲಾಖೆ ಕಡ್ಡಾಯಗೊಳಿಸಿದೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಶಿಫಾರಸಿನ ಮೇರೆಗೆ ಈ ಆದೇಶ ಹೊರಡಿಸಲಾಗಿದೆ. ಪ್ರತಿದಿನ ಬೆಳಗಿನ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಪತ್ರಿಕೆ ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು…

Read More

ನನಗೆ ಯಶಸ್ವಿ ವ್ಯಕ್ತಿಗಳೆಂದರೆ ಇಷ್ಟವಿಲ್ಲ; ಅಮೆರಿಕ ಅಧ್ಯಕ್ಷ ಟ್ರಂಪ್​ಗೆ ಸೋತವರ ಸ್ನೇಹವೇ ಖುಷಿಯಂತೆ

ವಾಷಿಂಗ್ಟನ್, ಮಾರ್ಚ್ 28: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಸೋತವರೊಂದಿಗೆ ಸುತ್ತಾಡಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ. ಏಕೆಂದರೆ ಯಶಸ್ವಿ ಜನರು ತಮ್ಮ ಸಾಧನೆಗಳ ಬಗ್ಗೆ ಮಾತನಾಡುವುದನ್ನು ಕೇಳಲು ಅವರಿಗೆ ಇಷ್ಟವಾಗುವುದಿಲ್ಲವಂತೆ. ಇಂದು ಮಿಯಾಮಿಯಲ್ಲಿ ನಡೆದ ಭವಿಷ್ಯದ ಹೂಡಿಕೆ ಉಪಕ್ರಮದಲ್ಲಿ ಮಾತನಾಡಿದ ಟ್ರಂಪ್,”ನಾನು ಯಾವಾಗಲೂ ಸೋತವರೊಂದಿಗೆ ಇರಲು ಇಷ್ಟಪಡುತ್ತೇನೆ. ಏಕೆಂದರೆ ಅದು ನನಗೆ ಉತ್ತಮ ಭಾವನೆ ನೀಡುತ್ತದೆ. ನಾನು ತುಂಬಾ ಯಶಸ್ವಿ ವ್ಯಕ್ತಿಗಳನ್ನು ದ್ವೇಷಿಸುತ್ತೇನೆ. ಅವರ ಜೊತೆಗಿದ್ದರೆ ನೀವು ಅವರ ಯಶಸ್ಸಿನ ಕಥೆಗಳನ್ನು ಕೇಳಬೇಕಾಗುತ್ತದೆ. ಆದರೆ,…

Read More

ಭಾರತದ ಹಡಗಿನ ಮೇಲೆ ಗುಂಡು ಹಾರಿಸಿದ್ದಕ್ಕೆ ಇರಾನ್​ಗೆ ಸಮನ್ಸ್ ಜಾರಿ – Kannada News | India summons Iranian envoy After Gunfire on Indian Vessels In Hormuz

ಟೆಹ್ರಾನ್, ಏಪ್ರಿಲ್ 18: ಇರಾನ್ ಇಂದು ಹಾರ್ಮುಜ್ ಜಲಸಂಧಿಯನ್ನು (Strait Of Hormuz) ದಾಟುತ್ತಿದ್ದ ಗುಂಡಿನ ದಾಳಿ ನಡೆಸಿದ್ದ 2 ಹಡಗುಗಳಲ್ಲಿ ಭಾರತದ 1 ಹಡಗು ಕೂಡ ಸೇರಿತ್ತು. ಈ ತೈಲ ಟ್ಯಾಂಕರ್ ಸುಮಾರು 2 ಮಿಲಿಯನ್ ಬ್ಯಾರೆಲ್ ಇರಾಕ್ ತೈಲವನ್ನು ಸಾಗಿಸುತ್ತಿತ್ತು. ಇದರ ಮೇಲೆ ಓಮನ್‌ನ ಉತ್ತರಕ್ಕೆ ಇರಾನ್ ನೌಕಾಪಡೆ ಗುಂಡಿನ ದಾಳಿ ನಡೆಸಿತ್ತು. ಈ ದಾಳಿಯಿಂದ 2 ಭಾರತೀಯ ಹಡಗುಗಳು ಹಾರ್ಮುಜ್ ಜಲಸಂಧಿಯಲ್ಲಿ ಯು-ಟರ್ನ್ ತೆಗೆದುಕೊಂಡಿದ್ದವು. ಈ ಹಿನ್ನೆಲೆಯಲ್ಲಿ ಭಾರತ ಇರಾನ್​ಗೆ ಸಮನ್ಸ್ ಜಾರಿ…

Read More

Shubman Gill: ಮಳೆ ಬಂದಿದ್ದರಿಂದ ಪಂದ್ಯ ಸೋತೆವು..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ನಾಲ್ಕನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ರೋಚಕ ಜಯ ಸಾಧಿಸಿದೆ. ಮುಲ್ಲನ್​ಪುರ್​ನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಶುಭ್​ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ 20 ಓವರ್​ಗಳಲ್ಲಿ 162 ರನ್ ಕಲೆಹಾಕಿದ್ದರು. ಈ ಗುರಿಯನ್ನು ಪಂಜಾಬ್ ಕಿಂಗ್ಸ್ 19.1 ಓವರ್​​ಗಳಲ್ಲಿ ಚೇಸ್ ಮಾಡಿ ಮೂರು ವಿಕೆಟ್​ಗಳ ರೋಚಕ ಜಯ ಸಾಧಿಸಿತು. ಈ ರೋಚಕ…

Read More

ರಷ್ಯಾದಿಂದ ತೈಲ ಖರೀದಿಸಬೇಡಿ ಎಂದು ಭಾರತಕ್ಕೆ ಯಾರೂ ಹೇಳಿಲ್ಲ; ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ – Kannada News

ನವದೆಹಲಿ, ಜೂನ್ 8: ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ಅವರು ರಷ್ಯಾದಿಂದ ಕಚ್ಚಾ ತೈಲ ಖರೀದಿ ಮತ್ತು ಪಾಶ್ಚಿಮಾತ್ಯ ದೇಶಗಳ ನಿರ್ಬಂಧಗಳ ಕುರಿತು ನೀಡಿರುವ ಮಹತ್ವದ ಹೇಳಿಕೆ ನೀಡಿದ್ದಾರೆ. ‘ಭಾರತವು ರಷ್ಯಾದಿಂದ ಕಚ್ಚಾ ತೈಲವನ್ನು ಖರೀದಿಸಬಾರದು ಎಂದು ಯಾವುದೇ ದೇಶ ಅಥವಾ ಜಾಗತಿಕ ಶಕ್ತಿಯು ನಮಗೆ ಅಧಿಕೃತವಾಗಿ ಆದೇಶಿಸಿಲ್ಲ ಅಥವಾ ನಿರ್ಬಂಧ ಹೇರಿಲ್ಲ. ಭಾರತವು ಒಂದು ಸಾರ್ವಭೌಮ ರಾಷ್ಟ್ರವಾಗಿದ್ದು, ತನ್ನ ಇಂಧನ ಭದ್ರತೆ ಮತ್ತು ಅಗತ್ಯಕ್ಕೆ…

Read More

ಕೇವಲ 2 ದಿನಗಳಲ್ಲಿ 16 ವಿಕೆಟ್ ಕಳೆದುಕೊಂಡ ಟೀಮ್ ಇಂಡಿಯಾ

ಪರ್ತ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತ ಮಹಿಳಾ ತಂಡ ಕಳಪೆ ಪ್ರದರ್ಶನ ಮುಂದುವರೆಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ ಕೇವಲ 198 ರನ್​ಗಳಿಸಿ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಆಸ್ಟ್ರೇಲಿಯಾ ಎರಡನೇ ದಿನದಾಟದಲ್ಲಿ 323 ರನ್​ಗಳಿಸಿ ಆಲೌಟ್ ಆಯಿತು. 125 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ 2ನೇ…

Read More

Gold Rates: ಚಿನ್ನದ ಬೆಲೆ ಗುರುವಾರವೂ ಕುಸಿತ; ಈ ತಿಂಗಳು 10 ಗ್ರಾಮ್ ಬೆಲೆ 17,000 ರೂ ಇಳಿಕೆ

ಬೆಂಗಳೂರು, ಮಾರ್ಚ್ 19: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಸತತ ಇಳಿಕೆ ಮುಂದುವರಿದಿದೆ. ಯುಗಾದಿ ಹಬ್ಬದ ದಿನವಾದ ಇಂದು ಗುರುವಾರ ಚಿನ್ನದ ಬೆಲೆ (Gold Rates) ಒಂದು ಗ್ರಾಮ್​ಗೆ 265 ರೂಗಳಷ್ಟು ಇಳಿಕೆ ಆಗಿದೆ. ಕಳೆದ 10 ದಿನದಲ್ಲಿ ಅದರ ಬೆಲೆ ಗ್ರಾಮ್​ಗೆ 700 ರೂಗೂ ಅಧಿಕ ಮೊತ್ತದಷ್ಟು ಕಡಿಮೆಗೊಂಡಿದೆ. ಮಾರ್ಚ್ ತಿಂಗಳ ಈ 19 ದಿನದಲ್ಲಿ ಇದರ ಬೆಲೆಯಲ್ಲಿ ಬರೋಬ್ಬರಿ 1,700 ರೂಗಳಷ್ಟು ತಗ್ಗಿದೆ. ಅಂದರೆ 10 ಗ್ರಾಮ್ ಆಭರಣ ಚಿನ್ನದ ಬೆಲೆಯಲ್ಲಿ 17,000 ರೂಗಳಷ್ಟು…

Read More

ಬೆಂಗಳೂರು ಬಿಟ್ಟು 40 ಕಿಮೀ ಹೋದ್ರೆ ಸೌದೆ ಸಿಗುತ್ತೆ: ಕಟ್ಟಿಗೆ ಬಳಸುವಂತೆ ಸಚಿವ ಮುನಿಯಪ್ಪ ಕರೆ

ಬೆಂಗಳೂರು, ಮಾರ್ಚ್​ 29: ಗಲ್ಫ್ ಯುದ್ಧವೂ 30ನೇ ದಿನಕ್ಕೆ ಕಾಲಿಟ್ಟಿದೆ. ಇತ್ತ ಕರುನಾಡಲ್ಲಿ ಸಮರದ ಎಫೆಕ್ಟ್ ಬೀರಿದ್ದು, ಅಡುಗೆ ಅನಿಲ ಅಭಾವ (Gas Cylinder Crisis) ಮುಂದುವರಿದಿದೆ. ವಾಣಿಜ್ಯ ಸಿಲಿಂಡರ್ ಸಿಗದೇ ಹೋಟೆಲ್, ಕೈಗಾರಿಕೆಗಳು ಥಂಡಾ ಹೊಡೆದಿವೆ. ಜನರು ಖಾಲಿ ಗ್ಯಾಸ್​ ಸಿಲಿಂಡರ್​ ಹಿಡಿದು ಏಜೆನ್ಸಿಗಳತ್ತ ಧಾವಿಸುತ್ತಿದ್ದಾರೆ. ಈ ಮಧ್ಯೆ ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ ಸಿಲಿಂಡರ್​ ಅಭಾವ ಇರುವುದರಿಂದ ಸೌದೆ ಒಲೆ ಬಳಸುವಂತೆ ಕರೆ ನೀಡಿದ್ದಾರೆ. ಸೌದೆ ಒಲೆಗಳನ್ನು ಬಳಸುವಂತೆ ಸಚಿವ ಕೆ.ಹೆಚ್ ಮುನಿಯಪ್ಪ ಮನವಿ ಬೆಂಗಳೂರಿನಲ್ಲಿರುವ…

Read More