ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್

ಸಚಿನ್ ತೆಂಡೂಲ್ಕರ್ ಅವರು ತಮ್ಮ ನಿವೃತ್ತಿ ಜೀವನವನ್ನು ಎಂಜಾಯ್ ಮಾಡುತ್ತಿದ್ದಾರೆ. ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ. ಆದರೆ, ಕ್ರಿಕೆಟ್ ಮೇಲಿನ ಪ್ರೀತಿ ಅವರಿಗೆ ಕಡಿಮೆ ಆಗಿಲ್ಲ. ಇದಕ್ಕೆ ಸಾಕ್ಷಿ ಎಂಬಂತಹ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಕುಟುಂಬದ ಜೊತೆ ವಿಮಾನದಲ್ಲಿ ಕ್ರಿಕೆಟ್ ಆಡಿದ್ದಾರೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ಜೀವನ ಅಂದ್ರೆ ಈ ರೀತಿ ಇರಬೇಕು ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ರಿಯಲ್ ಹೀರೋ: 7ನೇ ಮಹಡಿಯ ಗ್ರಿಲ್ ಹತ್ತಿ ಹೋಗಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಪ್ರಾಣ ಉಳಿಸಿದ ಸೂರತ್ ಪೊಲೀಸ್ – Kannada News | Gujarat Constable’s Swift Action Saves Man From Tragic Leap at High Rise Building

ಸೂರತ್, ಜೂನ್ 12: ಯಾರೋ ಒಬ್ಬರು ಕಷ್ಟದಲ್ಲಿದ್ದಾರೆ ಎಂದಾಗ ತಮ್ಮ ಜೀವವನ್ನೂ ಪಣಕ್ಕಿಟ್ಟು ಕಾಪಾಡುವವರನ್ನು ದೇವದೂತರು ಎಂದು ಕರೆಯಲಾಗುತ್ತದೆ. ಹಾಗೆಯೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಪೊಲೀಸ್(Police) ಅಧಿಕಾರಿಯೊಬ್ಬರು ದೇವರಂತೆ ಕಾಪಾಡಿರುವ ಘಟನೆ ಸೂರತ್​ನಲ್ಲಿ ನಡೆದಿದೆ. ಜೂನ್ 8ರಂದು ಈ ಘಟನೆ ನಡೆದಿದೆ.

ಸೂರತ್‌ನ ಲಸ್ಕಾನಾ ಪ್ರದೇಶದ ವಸತಿ ಕಟ್ಟಡವೊಂದರ 7ನೇ ಮಹಡಿಯ ಫ್ಲಾಟ್‌ನಲ್ಲಿ ವ್ಯಕ್ತಿಯೊಬ್ಬರು ತೀವ್ರ ಮಾನಸಿಕ ಒತ್ತಡದಿಂದಾಗಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರ ಪತ್ನಿ ಗಾಬರಿಯಿಂದ ತಕ್ಷಣವೇ ಪೊಲೀಸರ ತುರ್ತು ಸಂಖ್ಯೆ ‘ಡಯಲ್ 112’ ಗೆ ಕರೆ ಮಾಡಿ ಸಹಾಯ ಕೋರಿದ್ದರು.

ಮಾಹಿತಿ ಸಿಗುತ್ತಿದ್ದಂತೆಯೇ ಲಸ್ಕಾನಾ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದವು. ಆದರೆ ಅಪಾರ್ಟ್​​ಮೆಂಟ್​ನ ಮುಖ್ಯ ಬಾಗಿಲೇ ಒಳಗಿನಿಂದ ಲಾಕ್ ಆದ ಕಾರಣ ಯಾರಿಗೂ ಒಳಬರಲು ಸಾಧ್ಯವಾಗಲಿಲ್ಲ. ಪರಿಸ್ಥಿತಿಯ ಗಂಭೀರತೆ ಅರಿತ ಪೊಲೀಸ್ ಕಾನ್‌ಸ್ಟೆಬಲ್ ಶೈಲೇಶ್ ಚುಡಾಸಮಾ ಮತ್ತು ಚಾಲಕ ಕೃಪಾಲ್‌ಸಿನ್ಹ್ ಗೋಹಿಲ್ ತಕ್ಷಣವೇ ಒಂದು ಉಪಾಯ ಮಾಡಿದ್ದಾರೆ.

ಪಕ್ಕದ ಫ್ಲಾಟ್‌ನ ನಿವಾಸಿಗಳ ಸಹಾಯ ಪಡೆದ ಕಾನ್‌ಸ್ಟೆಬಲ್ ಶೈಲೇಶ್, 7ನೇ ಮಹಡಿಯ ಕಟ್ಟಡದ ಹೊರಭಾಗದಲ್ಲಿದ್ದ ಕಿರಿದಾದ ಸುರಕ್ಷತಾ ಗ್ರಿಲ್ (Safety Grill) ಅನ್ನು ಯಾವುದೇ ಸಪೋರ್ಟ್ ಇಲ್ಲದೆ ಅತ್ಯಂತ ಎಚ್ಚರಿಕೆಯಿಂದ ಹತ್ತಲಾರಂಭಿಸಿದರು.

ಮತ್ತಷ್ಟು ಓದಿ: ಹೃದಯಸ್ಪರ್ಶಿ ಘಟನೆ: ಮಳೆಯಲ್ಲಿ ರಸ್ತೆ ದಾಟಲು ಪರದಾಡುತ್ತಿದ್ದ ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಸಣ್ಣ ತಪ್ಪು ಹೆಜ್ಜೆಯೂ ಪ್ರಾಣಕ್ಕೆ ಕುತ್ತು ತರಬಹುದಾಗಿದ್ದ ಆ ಎತ್ತರದಲ್ಲಿ ಧೈರ್ಯವಾಗಿ ಸಾಗಿದ ಅವರು, ಕಿಟಕಿಯ ಮೂಲಕ ಫ್ಲಾಟ್‌ನ ಒಳಗೆ ಪ್ರವೇಶಿಸುವಲ್ಲಿ ಯಶಸ್ವಿಯಾದರು. ನಾನು ಒಳಗೆ ಹೋದಾಗ ಆ ವ್ಯಕ್ತಿ ವಿಷ ಸೇವಿಸಿ ವಾಂತಿ ಮಾಡುತ್ತಿದ್ದ. ತಕ್ಷಣವೇ ಆತನ ಕೈಯಲ್ಲಿದ್ದ ಉಳಿದ ವಿಷದ ವಸ್ತುವನ್ನು ಕಿತ್ತುಕೊಂಡು, ಒಳಗಿನಿಂದ ಬಾಗಿಲು ತೆರೆದು ನಮ್ಮ ತಂಡವನ್ನು ಒಳಗೆ ಕರೆಸಿಕೊಂಡೆ ಎಂದು ಕಾನ್‌ಸ್ಟೆಬಲ್ ಶೈಲೇಶ್ ಆ ಕ್ಷಣವನ್ನು ನೆನಪಿಸಿಕೊಂಡಿದ್ದಾರೆ.

ವಿಡಿಯೋ

ಮಗುವನ್ನು ಎತ್ತಿಕೊಳ್ಳುವಂತೆ ಆ ವ್ಯಕ್ತಿಯನ್ನು ತಕ್ಷಣವೇ 7ನೇ ಮಹಡಿಯಿಂದ ಕೆಳಗೆ ಕರೆತಂದ ಪೊಲೀಸರು, ಆಂಬ್ಯುಲೆನ್ಸ್‌ಗಾಗಿ ಕಾಯುತ್ತಾ ಸಮಯ ವ್ಯರ್ಥ ಮಾಡದೆ ತಮ್ಮದೇ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅದೃಷ್ಟವಶಾತ್, ದಾರಿಯ ಮಧ್ಯದಲ್ಲೇ ಆಂಬ್ಯುಲೆನ್ಸ್ ಎದುರಾಗಿದ್ದರಿಂದ ತಕ್ಷಣವೇ ಆತನಿಗೆ ತುರ್ತು ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸಲಾಯಿತು. ಆ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಕ್ಷಣಾ ಕಾರ್ಯಾಚರಣೆಯ ವಿಡಿಯೋ ಇಂಟರ್ನೆಟ್‌ನಲ್ಲಿ ವೈರಲ್ ಆಗುತ್ತಿದ್ದಂತೆಯೇ, ಗುಜರಾತ್ ಗೃಹ ಸಚಿವ ಹರ್ಷ ಸಾಂಘವಿ ಅವರು ಪೊಲೀಸ್ ಅಧಿಕಾರಿಗಳ ಈ ಅಪ್ರತಿಮ ಸೇವೆ ಮತ್ತು ಧೈರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿ, ಅಧಿಕೃತವಾಗಿ ಅಭಿನಂದಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ದೆಹಲಿಯಲ್ಲಿ ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆ ಶಿವಕುಮಾರ್ – Kannada News | Karnataka CM D.K. Shivakumar Meets President Droupadi Murmu and Vice President in Delhi

ನವದೆಹಲಿ, ಜೂನ್​​ 12: ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದಾರೆ. ಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರನ್ನು ಕೂಡ ಭೇಟಿಯಾಗಿ ಡಿಕೆ ಶಿವಕುಮಾರ್ ಅವರು ಚರ್ಚೆ ನಡೆಸಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ದೆಹಲಿಗೆ ತೆರಳಿರುವ ಡಿಕೆ ಶಿವಕುಮಾರ್ ಅವರು , ದೇಶದ ಗಣ್ಯಾತಿಗಣ್ಯ ನಾಯಕರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸುತ್ತಿದ್ದಾರೆ. ಇದಕ್ಕೂ ಮೊದಲು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನೂ ಡಿಕೆಶಿ ಭೇಟಿಯಾಗಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಅತ್ಯಾಚಾರ ನಡೆಸಿದ ತಂದೆ ವಿರುದ್ಧ ಒಬ್ಬಂಟಿಯಾಗಿ ಕಾನೂನು ಹೋರಾಟ ಗೆದ್ದ ಅಪ್ರಾಪ್ತೆ!: ಆರೋಪಿಗೆ 20 ವರ್ಷ ಜೈಲು ಶಿಕ್ಷೆ – Kannada News | Minor Fights Alone Against Father in POCSO Case, Bengaluru Court Sentences Accused to 20 Years Jail

ಬೆಂಗಳೂರು, ಜೂನ್​​ 12: ಮದ್ಯದ ಅಮಲಿನಲ್ಲಿ ತನ್ನ ಮೇಲೆ ಅತ್ಯಾಚಾರ ನಡೆಸಿದ್ದ ತಂದೆಯ ವಿರುದ್ಧವೇ ಕಾನೂನು ಹೋರಾಟ ಮಾಡಿ ಆತನಿಗೆ ಶಿಕ್ಷೆ ಕೊಡಿಸುವಲ್ಲಿ ಅಪ್ರಾಪ್ತೆ ಸಫಲವಾಗಿರುವ ಘಟನೆ ಬೆಂಗಳೂರಲ್ಲಿ (Bengaluru) ನಡೆದಿದೆ. 16 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ದಿನಗೂಲಿ ಕಾರ್ಮಿಕನಿಗೆ ನಗರದ ವಿಶೇಷ ನ್ಯಾಯಾಲಯವು 20 ವರ್ಷಗಳ ಸರಳ ಕಾರಾಗೃಹ ಶಿಕ್ಷೆ ವಿಧಿಸಿದ್ದು, ಮೂರು ವರ್ಷಗಳ ಕಾಲ ನಡೆದ ಕಾನೂನು ಹೋರಾಟದಲ್ಲಿ ತಾಯಿ ಹಾಗೂ ಕುಟುಂಬದ ಬೆಂಬಲವಿಲ್ಲದಿದ್ದರೂ ಬಾಲಕಿ ಧೈರ್ಯದಿಂದ ಹೋರಾಡಿ ನ್ಯಾಯ ಪಡೆದಿದ್ದಾಳೆ.

ಆರೋಪಿ ಬಿಹಾರ ಮೂಲದ ದಿನಗೂಲಿ ಕಾರ್ಮಿಕನಾಗಿದ್ದು, ಪತ್ನಿ ಹಾಗೂ ನಾಲ್ವರು ಮಕ್ಕಳೊಂದಿಗೆ ಉತ್ತರ ಬೆಂಗಳೂರಿನಲ್ಲಿ ವಾಸಿಸುತ್ತಿದ್ದ. ಸಂತ್ರಸ್ತೆ ಆತನ ಹಿರಿಯ ಮಗಳಾಗಿದ್ದು, 9ನೇ ತರಗತಿಯ ಬಳಿಕ ಶಾಲೆ ತೊರೆದಿದ್ದಳು. ತಂದೆ ಮದುವೆಗೆ ಒತ್ತಾಯಿಸುತ್ತಿದ್ದ ಕಾರಣ ಉತ್ತರ ಪ್ರದೇಶದಲ್ಲಿರುವ ಸಂಬಂಧಿಕರ ಮನೆಯಲ್ಲಿ ವಾಸಕ್ಕೆ ತೆರಳಿದ್ದಳು. ಈ ನಡುವೆ 2023ರ ಜೂನ್ 12ರಂದು ಆರೋಪಿಯ ತಾಯಿ ಬಿಹಾರದಲ್ಲಿ ನಿಧನರಾದ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರೆಲ್ಲರೂ ಅಂತ್ಯಕ್ರಿಯೆಗಾಗಿ ಊರಿಗೆ ತೆರಳಿದ್ದರು. ಈ ವೇಳೆ ಮಗಳನ್ನು ಇನ್ನು ಮುಂದೆ ಮದುವೆಗೆ ಒತ್ತಾಯಿಸುವುದಿಲ್ಲ ಎಂದು ಆರೋಪಿ ಭರವಸೆ ನೀಡಿದ್ದ. ಬಳಿಕ ಆತ ಬೆಂಗಳೂರಿಗೆ ಹಿಂದಿರುಗಿದ್ದರೆ, ಮಗಳು ನಂತರ ಬೆಂಗಳೂರಿಗೆ ಬಂದಿದ್ದಳು.

ಇದನ್ನೂ ಓದಿ: ಪ್ರೇಯಸಿಯನ್ನು ಸೇತುವೆಯಿಂದ ತಳ್ಳಿ ಕೊಂದು, ಅಪಘಾತವೆಂದು ಬಿಂಬಿಸಿದ ಪ್ರೇಮಿ!

ಆಟೋ ಚಾಲಕನ ಸಹಾಯ ಪಡೆದು ದೂರು

2023ರ ಜೂನ್ 27ರ ರಾತ್ರಿ ಮದ್ಯದ ಅಮಲಿನಲ್ಲಿದ್ದ ಆರೋಪಿ, ಉತ್ತರ ಪ್ರದೇಶದಲ್ಲಿದ್ದಾಗ ಮಗಳಿಗೆ ಪ್ರೇಮ ಸಂಬಂಧವಿತ್ತು ಎಂಬ ಅನುಮಾನ ವ್ಯಕ್ತಪಡಿಸಿ, ಆಕೆಯನ್ನು ಪರೀಕ್ಷೆ ಮಾಡಬೇಕೆಂಬ ನೆಪದಲ್ಲಿ ಅತ್ಯಾಚಾರ ಎಸಗಿದ್ದ. ರಾತ್ರಿ ವೇಳೆ ಊಟ ತರಲು ಮನೆಬಿಟ್ಟು ಹೊರಗೆ ಹೋದ ಸಂದರ್ಭದಲ್ಲಿ ಬಾಲಕಿ ಅಲ್ಲಿಂದ ತಪ್ಪಿಸಿಕೊಂಡು ಸಮೀಪದ ಉದ್ಯಾನವನದಲ್ಲಿ ರಾತ್ರಿ ಕಳೆದಿದ್ದಳು. ಮರುದಿನ ಬೆಳಗ್ಗೆ ಆಟೋ ರಿಕ್ಷಾ ಚಾಲಕನೊಬ್ಬನನ್ನು ಕಂಡು ಸಮೀಪದ ಪೊಲೀಸ್ ಠಾಣೆಗೆ ಕರೆದೊಯ್ಯುವಂತೆ ಮನವಿ ಮಾಡಿದ್ದಳು. ಬಳಿಕ ಆಕೆ ಪೊಲೀಸರಿಗೆ ದೂರು ನೀಡಿದ್ದಳು.

ದೂರು ದಾಖಲಿಸಿಕೊಂಡ ಪೊಲೀಸರು ತಕ್ಷಣವೇ ತನಿಖೆ ಆರಂಭಿಸಿ ಆರೋಪಿಯನ್ನು ಬಂಧಿಸಿದ್ದರು. ಬಾಲಕಿಯನ್ನು ರಕ್ಷಣೆಗಾಗಿ ಸರ್ಕಾರಿ ಮಹಿಳಾ ಆಶ್ರಯ ಕೇಂದ್ರಕ್ಕೆ ಸ್ಥಳಾಂತರಿಸಲಾಗಿತ್ತು. ಪೊಲೀಸರು ತಾಯಿಯನ್ನು ಬೆಂಗಳೂರಿಗೆ ಕರೆಸಿದಾಗ, ಮಗಳಿಗೆ ಬೆಂಬಲ ನೀಡುವ ಬದಲು ತಂದೆಯ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದಕ್ಕೆ ಆಕೆಯನ್ನು ಗದರಿಸಿದ್ದಳು ಎಂದು ತಿಳಿದುಬಂದಿದೆ. ಸಂತ್ರಸ್ತೆ ಈ ಹೋರಾಟವನ್ನು ಸಂಪೂರ್ಣವಾಗಿ ಒಬ್ಬಳೇ ನಡೆಸಿದ್ದು, ಕಿನಿಷ್ಠ ಆಕೆಯ ತಾಯಿಯೂ ಬೆಂಬಲ ನೀಡಿಲ್ಲ ಎನ್ನಲಾಗಿದೆ. ಅಂತಿಮವಾಗಿ ಪ್ರಕರಣ ಸಂಬಂಧ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆಯೊಂದಿಗೆ 1.10 ಲಕ್ಷ ರೂ. ದಂಡವನ್ನು ನ್ಯಾಯಾಲಯ ವಿಧಿಸಿದೆ. 2023ರ ಜೂನ್‌ನಲ್ಲಿ ಬಂಧನಕ್ಕೊಳಗಾದ ಆರೋಪಿಯು ಅಂದಿನಿಂದಲೂ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿದ್ದ. ಪ್ರಸ್ತುತ 19 ವರ್ಷದ ಯುವತಿಯಾಗಿರುವ ಸಂತ್ರಸ್ತೆ ಟೈಲರಿಂಗ್ ಕೆಲಸ ಮಾಡುತ್ತಿದ್ದಾಳೆ ಎಂದು ದಿ ಟೈಮ್ಸ್​​ ಆಫ್​​ ಇಂಡಿಯಾ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ರಾಘವ್ ಲಾರೆನ್ಸ್ ರಾಜಕೀಯ ಪ್ರವೇಶ, ನಿರ್ಧಾರ ಅಭಿಮಾನಿಗಳ ಕೈಯಲ್ಲಿ – Kannada News | Raghava Lawrence interested in joining politics leaved decision to fans

ಸಿನಿಮಾ ನಟ, ನಿರ್ದೇಶಕ ಮತ್ತು ಜನಪ್ರಿಯ ಕೋರಿಯೋಗ್ರಾಫರ್ ರಾಘವ್ ಲಾರೆನ್ಸ್ (Raghav Lawrence) ಸಿನಿಮಾಗಳ ಜೊತೆಗೆ ತಮ್ಮ ಸಾಮಾಜಿಕ ಕಾರ್ಯದಿಂದಲೂ ಬಲು ಜನಪ್ರಿಯರು. ದಶಕಕ್ಕೂ ಹೆಚ್ಚು ಸಮಯದಿಂದಲೂ ರಾಘವ್ ಲಾರೆನ್ಸ್ ತಮ್ಮನ್ನು ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಹಲವಾರು ಮಕ್ಕಳಿಗೆ ಶಿಕ್ಷಣ ಕೊಡಿಸಿದ್ದಾರೆ. ಅಂಗವಿಕಲರಿಗೆ ಬದುಕಲು ಆಸರೆ ಒದಗಿಸಿದ್ದಾರೆ. ಹಲವು ಮಹಿಳೆಯರಿಗೆ ಆಟೊ ರಿಕ್ಷಾ ಕೊಡಿಸಿ ಜೀವನ ಸಾಗಿಸಲು ನೆರವಾಗಿದ್ದಾರೆ. ಇನ್ನೂ ಅನೇಕ ಸಾಮಾಜಿಕ ಸೇವೆಗಳನ್ನು ಅವರು ಮಾಡುತ್ತಾ ಬಂದಿದ್ದಾರೆ. ಇದೀಗ ರಾಘವ್ ಲಾರೆನ್ಸ್ ರಾಜಕೀಯಕ್ಕೆ ಕಾಲಿರಿಸಲು ಮುಂದಾಗಿದ್ದು, ನಿರ್ಧಾರ ತೆಗೆದುಕೊಳ್ಳುವ ಜನವಾಬ್ದಾರಿಯನ್ನು ಅಭಿಮಾನಿಗಳಿಗೆ ವಹಿಸಿದ್ದಾರೆ.

ರಾಘವ್ ಲಾರೆನ್ಸ್ ಅವರು ರಾಜಕೀಯ ಪ್ರವೇಶದ ಬಗ್ಗೆ ಕಳೆದ ಕೆಲ ದಿನಗಳಿಂದಲೂ ಸುದ್ದಿಗಳು ಹರಿದಾಡುತ್ತಿದ್ದು, ತಮಿಳುನಾಡು ಸಿಎಂ ವಿಜಯ್ ಅವರು, ಎರಡು ಕ್ಷೇತ್ರದಿಂದ ಚುನಾವಣೆ ಎದುರಿಸಿ ಗೆದ್ದು ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದಾರೆ. ಆ ಕ್ಷೇತ್ರದಿಂದ (ತಿರುಚ್ಚೀರ್ ಈಸ್ಟ್) ರಾಘವ್ ಲಾರೆನ್ಸ್ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ವಿಜಯ್ ಅವರ ಪಕ್ಷದಿಂದಲೇ ಅವರು ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ಇದರ ನಡುವೆ ಖುದ್ದು ರಾಘವ್ ಲಾರೆನ್ಸ್ ಅವರೇ ರಾಜಕೀಯ ಎಂಟ್ರಿಯ ಸುಳಿವು ನೀಡಿದ್ದಾರೆ.

ರಾಘವ್ ಲಾರೆನ್ಸ್ ಅವರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ತಾವು ರಜನೀಕಾಂತ್ ಅವರು ರಾಜಕೀಯ ಪ್ರವೇಶಿಸುವಾಗಲೇ ಅವರೊಟ್ಟಿಗೆ ರಾಜಕೀಯ ಪ್ರವೇಶಕ್ಕೆ ಉತ್ಸುಕರಾಗಿದ್ದಾಗಿ ಹೇಳಿಕೊಂಡಿದ್ದಾರೆ. ಆದರೆ ತಮ್ಮ ತಾಯಿ ಬೇಡ ಎಂದಿದ್ದ ಕಾರಣಕ್ಕಾಗಿ ಆಗಲೂ ಮತ್ತು ವಿಜಯ್ ಅವರು ಮೊದಲ ಬಾರಿ ಸಿಎಂ ಆದಾಗಲೂ ರಾಜಕೀಯದಿಂದ ದೂರ ಇದ್ದಿದ್ದಾಗಿ ಹೇಳಿದ್ದಾರೆ. ಆದರೆ ವಿಜಯ್ ಅವರ ಗೆಲುವು ಅವರ ತಾಯಿಯವರ ಮನಸ್ಥಿತಿಯನ್ನು ಬದಲಾಯಿಸಿದ್ದು, ಈಗ ತಾಯಿಯ ಅನುಮತಿ ಪಡೆದು ರಾಜಕೀಯಕ್ಕೆ ಬರುವ ಮನಸ್ಸು ಮಾಡಿರುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ:ದೊಡ್ಡ ಸಿನಿಮಾ ಅವಕಾಶ ನಿರಾಕರಿಸಿದ ರಾಘವ್ ಲಾರೆನ್ಸ್, ಆದರೆ ಒಳ್ಳೆಯ ಕಾರಣಕ್ಕೆ

ವಿಜಯ್ ಅವರ ಟಿವಿಕೆ ಪಕ್ಷದಿಂದ, ವಿಜಯ್ ಅವರ ಕ್ಷೇತ್ರವೇ ಆಗಿರುವ ತಿರುಚ್ಚಿ ಈಸ್ಟ್​​ನಿಂದ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿರುವುದಾಗಿ ರಾಘವ್ ಲಾರೆನ್ಸ್ ಹೇಳಿದ್ದಾರೆ. ಆದರೆ ತಾವು ರಾಜಕೀಯ ಪ್ರವೇಶಿಸಬೇಕೊ ಬೇಡವೊ ಎಂಬ ನಿರ್ಧಾರವನ್ನು ಅಭಿಮಾನಿಗಳ ಮೇಲೆ ಬಿಟ್ಟಿರುವುದಾಗಿ ಹೇಳಿರುವ ರಾಘವ್ ಲಾರೆನ್ಸ್, ತಾವು ರಾಜಕೀಯಕ್ಕೆ ಬರುವುದು ಇಷ್ಟವಾದರೆ ಎಸ್ ಎಂದೂ, ಇಷ್ಟವಿಲ್ಲವಾದರೆ ನೋ ಎಂದೂ ಕಮೆಂಟ್ ಮಾಡಿರೆಂದು ಹೇಳಿದ್ದಾರೆ. ಈಗಾಗಲೇ ಸಾಕಷ್ಟು ಮಂದಿ ಲಾರೆನ್ಸ್ ವಿಡಿಯೋಕ್ಕೆ ‘ಎಸ್’ ಎಂದು ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ನೋ ಎಂದು ಸಹ ಕಮೆಂಟ್ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸೇವಾ ಸಿಂಧು ಪೋರ್ಟಲ್​ನಲ್ಲಿ ಉಚಿತ ಬಸ್ ಪಾಸ್​ಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ – Kannada News | Karnataka Free Student Bus Pass: How to Apply for bus pass Online via Seva Sindhu Portal

ಸೇವಾ ಸಿಂಧು ಪೋರ್ಟಲ್​ನಲ್ಲಿ ಉಚಿತ ಬಸ್ ಪಾಸ್​ಗಾಗಿ ಅರ್ಜಿ ಸಲ್ಲಿಸಿImage Credit source: Deccan herald

ಬೆಂಗಳೂರು, ಜೂನ್ 12: ಪ್ರಸ್ತುತ ಶೈಕ್ಷಣಿಕ ಸಾಲಿನ ಉಚಿತ ವಿದ್ಯಾರ್ಥಿ ಬಸ್ ಪಾಸ್‌ಗಾಗಿ (Student Bus Pass) ಇಂದಿನಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ. ಈ ಕುರಿತು ಸಾರಿಗೆ ಇಲಾಖೆಯು ಈಗಾಗಲೇ ಸ್ಪಷ್ಟ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಸೇವಾ ಸಿಂಧು ಪೋರ್ಟಲ್​ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಈಗಾಗಲೇ ಹೆಣ್ಣುಮಕ್ಕಳು ಉಚಿತ ಬಸ್ ಪ್ರಯಾಣದ ಲಾಭ ಪಡೆಯುತ್ತಿದ್ದು, ಈ ಹೊಸ ಉಚಿತ ಬಸ್ ಪಾಸ್ ಸೌಲಭ್ಯವು ಕೇವಲ ಗಂಡು ಮಕ್ಕಳಿಗೆ ಅನ್ವಯಿಸಲಿದೆ. ಸೇವಾ ಸಿಂಧುವಿನಲ್ಲಿ ಉಚಿತ ಪಾಸ್​ಗೆ ಅರ್ಜಿ ಹೇಗೆ ಸಲ್ಲಿಸಬೇಕೆಂಬ ಹಂತ ಹಂತದ ಮಾಹಿತಿ ಇಲ್ಲಿದೆ.

ಮುಖ್ಯಾಂಶಗಳು

  • ಪ್ರಸಕ್ತ ಸಾಲಿನ ಉಚಿತ ವಿದ್ಯಾರ್ಥಿ ಬಸ್ ಪಾಸ್ ಅರ್ಜಿ ಸಲ್ಲಿಕೆ ಇಂದಿನಿಂದ ಆರಂಭವಾಗಿದೆ.
  • ಶಕ್ತಿ ಯೋಜನೆ ಇರುವುದರಿಂದ ಈ ಬಸ್ ಪಾಸ್ ಸೌಲಭ್ಯ ಗಂಡುಮಕ್ಕಳಿಗೆ ಮಾತ್ರ ಅನ್ವಯಿಸುತ್ತದೆ.
  • ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಸುಲಭವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

1. ಪೋರ್ಟಲ್‌ಗೆ ಭೇಟಿ ನೀಡಿ

ಮೊದಲಿಗೆ ಸೇವಾಸಿಂಧು ಅಧಿಕೃತ ವೆಬ್‌ಸೈಟ್‌ಗೆ ಲಾಗಿನ್ ಆಗಿ.

2. ಲಾಗಿನ್ ಅಥವಾ ನೋಂದಣಿ

ನೀವು ಈಗಾಗಲೇ ಖಾತೆ ಹೊಂದಿದ್ದರೆ, ನಿಮ್ಮ ಮೊಬೈಲ್ ಸಂಖ್ಯೆ/ಇಮೇಲ್ ಐಡಿ ಮತ್ತು ಒಟಿಪಿ (OTP) ಬಳಸಿ ಲಾಗಿನ್ ಆಗಿ. ಒಂದು ವೇಳೆ ನೀವು ಹೊಸ ಬಳಕೆದಾರರಾಗಿದ್ದರೆ, ನ್ಯೂ ಯೂಸರ್? ರಿಜಿಸ್ಟರ್ ಹಿಯರ್ (New User? register here) ಕ್ಲಿಕ್ ಮಾಡಿ, ನಿಮ್ಮ ಆಧಾರ್ ಸಂಖ್ಯೆ ನೀಡಿ ಹೊಸ ಖಾತೆ ತೆರೆಯಿರಿ.

3. ಅಪ್ಲೈ ಫಾರ್ ಸರ್ವಿಸಸ್

ಲಾಗಿನ್ ಆದ ನಂತರ ಹೋಮ್ ಪೇಜ್‌ನಲ್ಲಿ ಅಪ್ಲೈ ಫಾರ್ ಸರ್ವಿಸಸ್ (Apply for Services) ಮೇಲೆ ಕ್ಲಿಕ್ ಮಾಡಿ, ನಂತರ ವ್ಯೂ ಆಲ್ ಅವೈಲೆಬಲ್ ಸರ್ವಿಸಸ್ (View all available services)ಆಯ್ಕೆಮಾಡಿ. ಸರ್ಚ್ ಬಾಕ್ಸ್‌ನಲ್ಲಿ ಸ್ಟೂಡೆಂಟ್ ಬಸ್ ಪಾಸ್ ಅಥವಾ ನಿಮ್ಮ ಭಾಗದ ಸಾರಿಗೆ ಸಂಸ್ಥೆ ಹೆಸರನ್ನು (KSRTC, BMTC, NWKRTC, KKRTC) ಟೈಪ್ ಮಾಡಿ ಹುಡುಕಿ.

4. ಅರ್ಜಿ ನಮೂನೆ ಭರ್ತಿ ಮಾಡಿ

ಸ್ಕ್ರೀನ್ ಮೇಲೆ ಕಾಣಿಸುವ ಬಸ್ ಪಾಸ್ ಲಿಂಕ್ ಕ್ಲಿಕ್ ಮಾಡಿದಾಗ ಅರ್ಜಿ ತೆರೆದುಕೊಳ್ಳುತ್ತದೆ. ಅದರಲ್ಲಿ ಈ ಕೆಳಗಿನ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ:

ವಿದ್ಯಾರ್ಥಿಯ ವೈಯಕ್ತಿಕ ವಿವರಗಳು: ಹೆಸರು, ತಂದೆಯ ಹೆಸರು, ಜನ್ಮ ದಿನಾಂಕ, ಮತ್ತು ಆಧಾರ್ ಸಂಖ್ಯೆ.
ಶೈಕ್ಷಣಿಕ ವಿವರಗಳು: ಶಾಲಾ/ಕಾಲೇಜಿನ ಹೆಸರು, ತರಗತಿ, ಮತ್ತು ಪ್ರಸ್ತುತ ವರ್ಷದ ದಾಖಲಾತಿ ಸಂಖ್ಯೆ (Admission Number).
ಪ್ರಯಾಣದ ವಿವರಗಳು: ನೀವು ಬಸ್ ಹತ್ತುವ ನಿಲ್ದಾಣ (From) ಮತ್ತು ಇಳಿಯುವ ನಿಲ್ದಾಣದ (To) ಹೆಸರು.

5: ದಾಖಲೆಗಳನ್ನು ಅಪ್‌ಲೋಡ್ ಮಾಡಿ

ಕೇಳಲಾಗಿರುವ ಜಾಗದಲ್ಲಿ ನಿಮ್ಮ ಫೋಟೋ, ಕಾಲೇಜು ರಶೀದಿ/ಐಡಿ ಕಾರ್ಡ್ ಮತ್ತು ಆಧಾರ್ ಕಾರ್ಡ್‌ಗಳನ್ನು ಸ್ಕ್ಯಾನ್ ಮಾಡಿ (JPEG ಅಥವಾ PDF ಫಾರ್ಮ್ಯಾಟ್‌ನಲ್ಲಿ) ಅಪ್‌ಲೋಡ್ ಮಾಡಿ.

6. ಪರಿಶೀಲನೆ ಮತ್ತು ಸಲ್ಲಿಕೆ

ಎಲ್ಲಾ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ. ತಪ್ಪುಗಳಿಲ್ಲದಿದ್ದರೆ ಕ್ಯಾಪ್ಚಾ (Captcha) ಕೋಡ್ ನಮೂದಿಸಿ ಸಬ್ಮಿಟ್ (Submit) ಬಟನ್ ಕ್ಲಿಕ್ ಮಾಡಿ.

7. ಸ್ವೀಕೃತಿ ಪತ್ರ ಡೌನ್‌ಲೋಡ್ ಮಾಡಿ

ಅರ್ಜಿ ಸಲ್ಲಿಕೆ ಯಶಸ್ವಿಯಾದ ನಂತರ, ಸ್ಕ್ರೀನ್ ಮೇಲೆ ಒಂದು ಅರ್ಜಿ ಸಂಖ್ಯೆ (Application Reference Number) ಇರುವ ಸ್ವೀಕೃತಿ ಪತ್ರ ಕಾಣಿಸುತ್ತದೆ. ಅದನ್ನು ಪ್ರಿಂಟ್ ಅಥವಾ ಪಿಡಿಎಫ್ ರೂಪದಲ್ಲಿ ಸೇವ್ ಮಾಡಿಟ್ಟುಕೊಳ್ಳಿ.

ಇದನ್ನೂ ಓದಿ ವಿದ್ಯಾರ್ಥಿಗಳ ಫ್ರೀ ಬಸ್ ಪಾಸ್​ಗೆ ಇಂದಿನಿಂದ ಅರ್ಜಿ ಸಲ್ಲಿಕೆ ಶುರು: ಈ ದಾಖಲೆಗಳು ಕಡ್ಡಾಯ

ನಿಮ್ಮ ಅರ್ಜಿಯನ್ನು ಕೃಷಿ/ಸಾರಿಗೆ ಇಲಾಖೆ ಮತ್ತು ನಿಮ್ಮ ಕಾಲೇಜಿನವರು ಆನ್‌ಲೈನ್‌ನಲ್ಲೇ ಪರಿಶೀಲಿಸುತ್ತಾರೆ. ಅರ್ಜಿ ಅನುಮೋದನೆಯಾದ (Approve) ನಂತರ ನಿಮ್ಮ ಮೊಬೈಲ್‌ಗೆ ಎಸ್‌ಎಂಎಸ್ ಬರಲಿದ್ದು, ನಿಗದಿತ ಸಾರಿಗೆ ಕೌಂಟರ್ ಅಥವಾ ಬೆಂಗಳೂರಾಗಿದ್ದರೆ ಒನ್ ಕರ್ನಾಟಕ/ಬೆಂಗಳೂರು ಒನ್ ಕೇಂದ್ರಗಳಿಗೆ ಹೋಗಿ ಪಾಸ್ ಪಡೆದುಕೊಳ್ಳಬಹುದು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದೆಹಲಿ: ಮಾದಕ ದ್ರವ್ಯ ವಿರೋಧಿ ಕಾರ್ಯಾಚರಣೆ ವೇಳೆ ನಾಲ್ಕನೇ ಮಹಡಿಯಿಂದ ಹಾರಿ ನೈಜೀರಿಯಾ ಮಹಿಳೆ ಸಾವು – Kannada News | Delhi Drug Raid: Nigerian Woman Dies Jumping from 4th Floor; Meth Lab Suspected

ನವದೆಹಲಿ, ಜೂನ್ 12: ಮಾದಕದ್ರವ್ಯ ವಿರೋಧಿ ದಾಳಿ ವೇಳೆ ಭಯದಿಂದ ನೈಜೀರಿಯಾ ಮಹಿಳೆಯೊಬ್ಬಳು ಅಪಾರ್ಟ್​ಮೆಂಟ್​(Apartment)ನ ನಾಲ್ಕನೇ ಮಹಡಿಯಿಂದ ಹಾರಿ ಪ್ರಾಣ ಕಳೆದುಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ ಉತ್ತರ ಜಿಲ್ಲೆಯ ಮಾದಕವಸ್ತು ವಿರೋಧಿ ದಳದ ದಾಳಿಯ ಸಮಯದಲ್ಲಿ ಸ್ವರೂಪ್ ನಗರದಲ್ಲಿ ತನ್ನ ನಾಲ್ಕನೇ ಮಹಡಿಯ ಫ್ಲಾಟ್‌ನ ಬಾಲ್ಕನಿಯಿಂದ ಹಾರಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮೃತ ಮಹಿಳೆಯನ್ನು ಸ್ಟೆಲ್ಲಾ ಪಯಸ್ ಎಂದು ಗುರುತಿಸಲಾಗಿದ್ದು, ಬುರಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ. ನಡೆಯುತ್ತಿರುವ ಮಾದಕ ದ್ರವ್ಯಗಳು ಮತ್ತು ಮನೋವಿಕೃತ ವಸ್ತುಗಳ (NDPS) ತನಿಖೆಯ ಭಾಗವಾಗಿ ನಡೆಸಲಾದ ಈ ಕಾರ್ಯಾಚರಣೆಯು ಶಂಕಿತ ಮೆಥಾಂಫೆಟಮೈನ್ ಉತ್ಪಾದನೆ ಮತ್ತು ಕಚ್ಚಾ ವಸ್ತುಗಳ ಸಂಗ್ರಹಣಾ ಸೌಲಭ್ಯವನ್ನು ಪತ್ತೆಹಚ್ಚಲು ಕಾರಣವಾಯಿತು.

ಆಕೆ ಇದ್ದ ಆವರಣದಲ್ಲಿ ರಾಸಾಯನಿಕಗಳು, ಪೈಪ್‌ಗಳು ಮತ್ತು ತೂಕದ ಯಂತ್ರಗಳು ಪತ್ತೆಯಾಗಿದ್ದು, ಆ ಕೊಠಡಿಯನ್ನು ‘ಮೆಥಾಂಫೆಟಮೈನ್’ ಎಂಬ ಮಾದಕ ದ್ರವ್ಯ (ಡ್ರಗ್ಸ್) ತಯಾರಿಸಲು ಬಳಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: 15 ದಿನದಲ್ಲಿ 65 ಕೋಟಿ ಮೌಲ್ಯದ ಡ್ರಗ್ಸ್ ಸೀಜ್!: ಬೆಂಗಳೂರಿಗೆ ಡ್ರಗ್ಸ್ ಹರಿದು ಬರುತ್ತಿರುವುದು ಏಕೆ? ಪೊಲೀಸರು ಪತ್ತೆಹಚ್ಚಿದ 11 ಶಾಕಿಂಗ್ ಕಾರಣಗಳು!

ಗುರುವಾರ ಪೊಲೀಸರು ಸೈಬರ್ ವಂಚನೆ ಪ್ರಕರಣದ ಆರೋಪಿಗಳನ್ನು ಕೂಡ ಬಂಧಿಸಿದ್ದಾರೆ. ಕಾರ್ಯಾಚರಣೆಯ ಸಮಯದಲ್ಲಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರಲ್ಲಿ ಮೂವರು ಕಂಪನಿಯ ಒಳಗಿನ ನೌಕರರಾಗಿದ್ದರೆ, ಮತ್ತೊಬ್ಬ ಕದ್ದ ಮಾಲನ್ನು ಖರೀದಿಸುತ್ತಿದ್ದ ವ್ಯಕ್ತಿಯಾಗಿದ್ದಾನೆ. ಬಂಧಿತರಿಂದ ಸುಮಾರು 6.5 ಲಕ್ಷ ರೂಪಾಯಿ ಮೌಲ್ಯದ ಕೃತಕ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಫ್ಲಿಪ್‌ಕಾರ್ಟ್‌ನ ಲಾಜಿಸ್ಟಿಕ್ಸ್ ಪಾಲುದಾರ ಸಂಸ್ಥೆಯಾದ ‘ವರ್ಕಟಲಿಸ್ಟ್ ಪ್ರೈವೇಟ್ ಲಿಮಿಟೆಡ್’ ನೀಡಿದ ದೂರಿನ ಮೇರೆಗೆ ಈ ತನಿಖೆ ನಡೆದಿತ್ತು. ಓಖ್ಲಾ ಗೋದಾಮಿನಲ್ಲಿ ನಡೆದ ಆಂತರಿಕ ತನಿಖೆಯ ವೇಳೆ, ಗ್ರಾಹಕರು ವಾಪಸ್ ಕಳುಹಿಸಿದ ಹೆಚ್ಚಿನ ಮೌಲ್ಯದ ಆಭರಣಗಳ ಪಾರ್ಸೆಲ್‌ಗಳು ಖಾಲಿ ಇರುವುದು ಅಥವಾ ಅವುಗಳಲ್ಲಿ ಹಾನಿಗೊಳಗಾದ ವಸ್ತುಗಳು ಇರುವುದು ಪತ್ತೆಯಾಗಿತ್ತು. ಇದರ ಆಧಾರದ ಮೇಲೆ ಪೊಲೀಸರು ಓಖ್ಲಾ ಕೈಗಾರಿಕಾ ಪ್ರದೇಶದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ ಕಳ್ಳರನ್ನು ಹಿಡಿದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಶಿವಮೊಗ್ಗ-ಬೆಂಗಳೂರು ವಿಮಾನ ಸೇವೆ ಪುನರಾರಂಭಕ್ಕೆ ಆಗ್ರಹಿಸಿ ಕೇಂದ್ರಕ್ಕೆ ಸಚಿವ ಎಂ.ಬಿ. ಪಾಟೀಲ್​​ ಪತ್ರ – Kannada News | Resuming Shivamogga Bengaluru Flights: Minister MB Patil Writes to Centre Requesting Inclusion in UDAN Scheme

ಶಿವಮೊಗ್ಗ ವಿಮಾನ ನಿಲ್ದಾಣImage Credit source: BS Yediyurappa X Account

ಬೆಂಗಳೂರು, ಜೂನ್​​ 12: ಶಿವಮೊಗ್ಗ ಮತ್ತು ಬೆಂಗಳೂರಿನ (Bengaluru) ನಡುವಿನ ವಿಮಾನ ಸೇವೆಯನ್ನು ಪುನರಾರಂಭಿಸುವಂತೆ ಹಾಗೂ ಈ ಮಾರ್ಗವನ್ನು ಮುಂದಿನ ಉಡಾನ್ (UDAN) ಯೋಜನೆಯ ಟೆಂಡರ್ ಪ್ರಕ್ರಿಯೆಯಲ್ಲಿ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಸಚಿವ ಎಂ.ಬಿ. ಪಾಟೀಲ್ ಮನವಿ ಮಾಡಿದ್ದಾರೆ. ಮಲೆನಾಡು ಪ್ರದೇಶ ಹಾಗೂ ಮಧ್ಯ ಕರ್ನಾಟಕದ ಹಲವು ಜಿಲ್ಲೆಗಳ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಈ ವಿಮಾನ ಸೇವೆ ಅತ್ಯಂತ ಮಹತ್ವದ್ದಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಾಪು ರಾಮ್ ಮೋಹನ್ ನಾಯ್ಡು ಅವರಿಗೆ ಬರೆದ ಪತ್ರದಲ್ಲಿ ಎಂ.ಬಿ. ಪಾಟೀಲ್ ಮನವರಿಕೆ ಮಾಡಿದ್ದಾರೆ.

ಸಂಚಾರ ನಿಲ್ಲಿಸಿರುವ ಇಂಡಿಗೋ

ಬೆಂಗಳೂರು–ಶಿವಮೊಗ್ಗ ಮಾರ್ಗವನ್ನು ಉಡಾನ್ ಯೋಜನೆಯಡಿ ಸೇರಿಸಿ, ಅಗತ್ಯವಿದ್ದರೆ ವೈಬಿಲಿಟಿ ಗ್ಯಾಪ್ ಫಂಡಿಂಗ್ (VGF) ನೆರವು ನೀಡುವ ಮೂಲಕ ಸೇವೆ ಪುನರಾರಂಭಿಸಲು ಕ್ರಮ ಕೈಗೊಳ್ಳುವಂತೆ ಅವರು ಕೋರಿದ್ದಾರೆ. ಶಿವಮೊಗ್ಗ ಏರ್​​ಪೋರ್ಟ್​​ನಲ್ಲಿ 2023ರ ಫೆಬ್ರವರಿಯಲ್ಲಿ ವಾಣಿಜ್ಯ ವಿಮಾನ ಸಂಚಾರ ಆರಂಭವಾಗಿದ್ದು, ಇಂಡಿಗೋ ಸಂಸ್ಥೆ ಬೆಂಗಳೂರು ಮತ್ತು ಶಿವಮೊಗ್ಗ ನಡುವಿನ ವಿಮಾನ ಸೇವೆ ನೀಡುತ್ತಿತ್ತು. ಆದರೆ ಆರ್ಥಿಕ ನಷ್ಟದ ಕಾರಣದಿಂದ ಕಳೆದ ಕೆಲವು ತಿಂಗಳುಗಳಿಂದ ಈ ಸೇವೆ ಸ್ಥಗಿತಗೊಂಡಿದೆ. ಕೃಷಿ, ಪ್ರವಾಸೋದ್ಯಮ, ಕೈಗಾರಿಕೆ ಹಾಗೂ ವ್ಯಾಪಾರ ಸೇರಿದಂತೆ ವಿವಿಧ ಕ್ಷೇತ್ರಗಳ ಬೆಳವಣಿಗೆಗೆ ಈ ಮಾರ್ಗ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಪಾಟೀಲ್ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ; ಜೂನ್ 15 ರಿಂದಲೇ ಆದೇಶ ಜಾರಿ, ಪರ್ಯಾಯ ಮಾರ್ಗ ಇಲ್ಲಿದೆ

ಇದಲ್ಲದೆ, ದೇಶೀಯ ಹಾಗೂ ಅಂತಾರಾಷ್ಟ್ರೀಯ ಪ್ರಯಾಣಗಳಿಗೆ ಬೆಂಗಳೂರನ್ನು ಪ್ರಮುಖ ಸಂಪರ್ಕ ಕೇಂದ್ರವಾಗಿ ಬಳಸುವ ಪ್ರಯಾಣಿಕರಿಗೂ ಸೇವೆ ಸ್ಥಗಿತದಿಂದ ತೊಂದರೆಯಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ರಾತ್ರಿ ವೇಳೆ ವಿಮಾನ ಇಳಿಯುವ ಸೌಲಭ್ಯ ಕಲ್ಪಿಸುವ ಕಾಮಗಾರಿ ಕೂಡ ವೇಗವಾಗಿ ಸಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ ಎಂದು ಡೆಕ್ಕನ್​​ ಹೆರಾಲ್ಡ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ಮಾಲೀಕನ ವಿರುದ್ಧ ಪ್ರತಿಭಟನೆ – Kannada News | Unhygienic Food Sparks Outrage at Basaveshwara Nagar Ladies PG

ಬೆಂಗಳೂರು, ಜೂನ್​​ 12: ಬಸವೇಶ್ವರ ನಗರದಲ್ಲಿರುವ ಅಂಜನಾದ್ರಿ ಮಹಿಳಾ ಪಿಜಿಯ ಊಟದಲ್ಲಿ ಹುಳ ಪತ್ತೆಯಾಗಿದ್ದು, ಇದರಿಂದ ಆಕ್ರೋಶಗೊಂಡ ಯುವತಿಯರು ಪ್ರತಿಭಟನೆ ನಡೆಸಿದ್ದಾರೆ. ಊಟದಲ್ಲಿ ಹುಳ ಪತ್ತೆಯಾದ ಬಗ್ಗೆ ಪ್ರಶ್ನಿಸಿದ್ದಕ್ಕೆ, ಪಿಜಿ ಮಾಲೀಕರು ಯುವತಿಯರೊಂದಿಗೆ ಕಿರಿಕ್ ಮಾಡಿ, ಪಿಜಿ ಖಾಲಿ ಮಾಡುವಂತೆ ಎಚ್ಚರಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಕೆಲವು ದಿನಗಳ ಹಿಂದೆಯೂ ಸಹ ಇದೇ ಪಿಜಿಯ ಊಟದಲ್ಲಿ ಹುಳ ಪತ್ತೆಯಾಗಿತ್ತು. ಪದೇ ಪದೇ ಇಂತಹ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿರುವುದನ್ನು ಪ್ರಶ್ನಿಸಿದ ಯುವತಿಯರಿಗೆ, ಮಾಲೀಕರು ನೀವು ಕೊಡುವ 5,000 ರೂಪಾಯಿಗೆ ನಾವು ಉತ್ತಮ ಆಹಾರ ನೀಡಬೇಕೇ? ಎಂದು ಉತ್ತರಿಸಿದ್ದಾರೆ ಎನ್ನಲಾಗಿದೆ. ನಿನ್ನೆ ಬೆಳಿಗ್ಗೆ ದೋಸೆ ಬೇಯದಿದ್ದ ಕುರಿತು ಪ್ರಶ್ನಿಸಿದಾಗಲೂ ಮಾಲೀಕರು ಯುವತಿಯರೊಂದಿಗೆ ಸರಿಯಾಗಿ ಮಾತನಾಡಿಲ್ಲ ಎಂದು ಯುವತಿಯರು ಹೇಳಿದ್ದಾರೆ. ಮಾಲೀಕರ ವರ್ತನೆಯಿಂದ ಬೇಸತ್ತ ಯುವತಿಯರು ತಡರಾತ್ರಿ ಪಿಜಿಯಿಂದ ಹೊರಬಂದು ಧರಣಿ ಕುಳಿತಿದ್ದಾರೆ. ಆಹಾರದ ಗುಣಮಟ್ಟ ಸುಧಾರಿಸುವಂತೆ ಮತ್ತು ಮಾಲೀಕರ ದುರ್ವರ್ತನೆಗೆ ಕಡಿವಾಣ ಹಾಕುವಂತೆ ಯುವತಿಯರು ಆಗ್ರಹಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಶಿಗೆಲ್ಲೋಸಿಸ್ ಸೋಂಕಿನ ಭೀತಿ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೈ ಹೈಅಲರ್ಟ್, ಆರೋಗ್ಯ ಇಲಾಖೆಯಿಂದ ಮಹತ್ವದ ಸೂಚನೆ – Kannada News | Shigella Bacteria Alert in Karnataka: Check Symptoms, Preventive Measures for Children by Health department adivse

ಆರೋಗ್ಯ ಸಚಿವ ಯುಟಿ ಖಾದರ್Image Credit source: tv9

ಬೆಂಗಳೂರು, ಜೂನ್ 12: ನೆರೆಯ ರಾಜ್ಯ ಕೇರಳದಲ್ಲಿ ಮಾರಣಾಂತಿಕ ಶಿಗೆಲ್ಲೋಸಿಸ್ (Shigella) ಸೋಂಕು ತೀವ್ರವಾಗಿ ಹರಡುತ್ತಿದ್ದು, ಪೋಷಕರಲ್ಲಿ ಭಾರಿ ಆತಂಕ ಮೂಡಿಸಿದೆ. ಕರುಳಿನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಈ ಅಪಾಯಕಾರಿ ಬ್ಯಾಕ್ಟೀರಿಯಾ ಸೋಂಕಿಗೆ ಈಗಾಗಲೇ ಕೇರಳದ ಕೋಝಿಕ್ಕೋಡ್‌ನಲ್ಲಿ ನಾಲ್ಕು ವರ್ಷದ ಬಾಲಕಿ ಬಲಿಯಾಗಿದ್ದಾಳೆ. ವಯನಾಡು ಸೇರಿದಂತೆ ವಿವಿಧ ಜಿಲ್ಲೆಗಳ ಶಾಲಾ ಮಕ್ಕಳಲ್ಲಿ ಈ ಸೋಂಕು ವೇಗವಾಗಿ ಹರಡುತ್ತಿದ್ದು, ಇದುವರೆಗೆ 300ಕ್ಕೂ ಹೆಚ್ಚು ಮಕ್ಕಳಲ್ಲಿ ಶಿಗೆಲ್ಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿವೆ. ಕೇರಳದ ಈ ಆತಂಕಕಾರಿ ಬೆಳವಣಿಗೆಯ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕರ್ನಾಟಕ ಆರೋಗ್ಯ ಇಲಾಖೆಯು ಗಡಿ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಹೈಅಲರ್ಟ್ ಘೋಷಿಸಿದೆ.

ಮುಖ್ಯಾಂಶಗಳು

  • ಕೇರಳದಲ್ಲಿ ಶಿಗೆಲ್ಲಾ ಸೋಂಕಿಗೆ ಬಾಲಕಿ ಬಲಿ.
  • ಮಕ್ಕಳ ಕರುಳಿನ ಮೇಲೆ ಬ್ಯಾಕ್ಟೀರಿಯಾ ದಾಳಿ.
  • ಕರ್ನಾಟಕ ಆರೋಗ್ಯ ಇಲಾಖೆಯಿಂದ ತೀವ್ರ ನಿಗಾ.

ಏನಿದು ಶಿಗೆಲ್ಲೋಸಿಸ್ ಸೋಂಕು? ಇದು ಹರಡುವುದು ಹೇಗೆ?

ವೈದ್ಯರ ಪ್ರಕಾರ, ಶಿಗೆಲ್ಲಾ ಎಂಬುದು ಯಾವುದೇ ವೈರಸ್ ಅಲ್ಲ, ಇದೊಂದು ಅತ್ಯಂತ ಸಾಂಕ್ರಾಮಿಕ ಬ್ಯಾಕ್ಟೀರಿಯಾ (Bacterial Infection) ಆಗಿದೆ. ಇದು ಮುಖ್ಯವಾಗಿ ಮನುಷ್ಯನ ಜೀರ್ಣಾಂಗ ವ್ಯವಸ್ಥೆ ಹಾಗೂ ಕರುಳಿನ ಮೇಲೆ ತೀವ್ರವಾಗಿ ದಾಳಿ ಮಾಡುತ್ತದೆ. ಅನೈರ್ಮಲ್ಯ ಹೊಂದಿರುವ ಪ್ರದೇಶಗಳಲ್ಲಿ ಇದು ಅತಿ ವೇಗವಾಗಿ ಹರಡುತ್ತದೆ. ಕಲುಷಿತ ನೀರು, ಕಲುಷಿತ ಆಹಾರ ಸೇವನೆ ಹಾಗೂ ಶೌಚಾಲಯ ಬಳಕೆಯ ನಂತರ ಕೈಗಳನ್ನು ಸರಿಯಾಗಿ ಸ್ವಚ್ಛಗೊಳಿಸದಿದ್ದರೆ ಈ ಬ್ಯಾಕ್ಟೀರಿಯಾ ಒಬ್ಬರಿಂದ ಮತ್ತೊಬ್ಬರಿಗೆ ಹರಡಬಹುದು. ವಿಶೇಷವಾಗಿ 5 ವರ್ಷದೊಳಗಿನ ಚಿಕ್ಕ ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಈ ಸೋಂಕು ಬೇಗನೆ ಅಟ್ಯಾಕ್ ಮಾಡುತ್ತದೆ. ಆರಂಭದಲ್ಲೇ ಪೋಷಕರು ನಿರ್ಲಕ್ಷ್ಯ ವಹಿಸಿದರೆ ಇದು ಮಕ್ಕಳ ಜೀವಕ್ಕೇ ಕಂಟಕವಾಗುವ ಸಾಧ್ಯತೆ ಇರುತ್ತದೆ ಎಂದು ಕೆಸಿಜಿ ಆಸ್ಪತ್ರೆಯ ಡೀನ್ ಮತ್ತು ನಿರ್ದೇಶಕರಾದ ಡಾ. ಲಕ್ಷ್ಮೀಪತಿ ಎಚ್ಚರಿಕೆ ನೀಡಿದ್ದಾರೆ.

ಶಿಗೆಲ್ಲೋಸಿಸ್ ಸೋಂಕಿನ ಪ್ರಮುಖ ಲಕ್ಷಣಗಳು

  • ತೀವ್ರ ಜ್ವರ ಮತ್ತು ಅತಿಯಾದ ಆಯಾಸ, ದೌರ್ಬಲ್ಯ.
  • ಹೊಟ್ಟೆ ನೋವು ಮತ್ತು ಹೊಟ್ಟೆ ತೊಳಸುವಿಕೆ (ಸೆಳೆತ).
  • ನಿರಂತರ ವಾಂತಿ ಹಾಗೂ ತೀವ್ರ ರಕ್ತ ಮಿಶ್ರಿತ ಅತಿಸಾರ (ಭೇದಿ).
  • ದೇಹದಲ್ಲಿ ನೀರಿನಂಶ ಸಂಪೂರ್ಣ ಕಡಿಮೆಯಾಗಿ ತೀವ್ರ ನಿರ್ಜಲೀಕರಣ (Dehydration) ಉಂಟಾಗುವುದು.

ಸೋಂಕು ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮಗಳು

  • ಮಕ್ಕಳಿಗೆ ಹೊರಗಿನ ಹಾಗೂ ಕಲುಷಿತ ನೀರು ಮತ್ತು ತೆರೆದಿಟ್ಟ ಆಹಾರ ನೀಡಬೇಡಿ.
  • ಮಕ್ಕಳು ಆಹಾರ ಸೇವಿಸುವ ಮುನ್ನ ಹಾಗೂ ಶೌಚಾಲಯ ಬಳಕೆಯ ನಂತರ ಸಾಬೂನು ಬಳಸಿ 20 ಸೆಕೆಂಡುಗಳ ಕಾಲ ಕೈಗಳನ್ನು ಚೆನ್ನಾಗಿ ತೊಳೆಯುವುದನ್ನು ರೂಢಿಸಿ.
  • ಕುಡಿಯಲು ಯಾವಾಗಲೂ ಸುರಕ್ಷಿತ ಹಾಗೂ ಚೆನ್ನಾಗಿ ಕಾಯಿಸಿ ಆರಿಸಿದ ಶುದ್ಧ ನೀರನ್ನೇ ಬಳಸಿ.
  • ಹಸಿ ಅಥವಾ ಸರಿಯಾಗಿ ಬೇಯಿಸದ ಮಾಂಸ ಹಾಗೂ ಹಳಸಿದ ಆಹಾರ ಪದಾರ್ಥಗಳ ಸೇವನೆ ಬೇಡ.
  • ಮಕ್ಕಳಲ್ಲಿ ಜ್ವರ ಅಥವಾ ಅತಿಸಾರದಂತಹ ಸಣ್ಣ ಲಕ್ಷಣಗಳು ಕಂಡುಬಂದರೂ ಸ್ವಯಂ ಚಿಕಿತ್ಸೆ ಮಾಡದೆ ತಕ್ಷಣವೇ ವೈದ್ಯರನ್ನು ಸಂಪರ್ಕಿಸಿ.

ಆರೋಗ್ಯ ಇಲಾಖೆ ಅಲರ್ಟ್

ರಾಜ್ಯದಲ್ಲಿ ಶಿಗೆಲ್ಲೋಸಿಸ್ ಆತಂಕ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯ ರಕ್ಷಣೆಗಾಗಿ ಆರೋಗ್ಯ ಇಲಾಖೆಯು ಎಲ್ಲಾ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ (DHO) ಮತ್ತು ಸರ್ಕಾರಿ ಆಸ್ಪತ್ರೆಗಳ ವೈದ್ಯರಿಗೆ ಮುನ್ನೆಚ್ಚರಿಕೆ ವಹಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಇಲಾಖೆ ಸಚಿವ ಯುಟಿ ಖಾದರ್, ಗಡಿ ಭಾಗಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿದ್ದು, ಪರಿಸ್ಥಿತಿಯ ಬಗ್ಗೆ ತಜ್ಞರೊಂದಿಗೆ ಸೂಕ್ತ ಚರ್ಚೆ ನಡೆಸಿ ರಾಜ್ಯದಲ್ಲಿ ಸೋಂಕು ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಏನಿದು ಶಿಗೆಲ್ಲೋಸಿಸ್ ಸೋಂಕು? ಕೇರಳದಲ್ಲಿ ಹೊಸ ವೈರಲ್ ಸೋಂಕಿಗೆ ಜನ ಹೆದರುತ್ತಿರುವುದಕ್ಕೆ ಕಾರಣವೇನು?

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version