ಜೂನಿಯರ್ ಎನ್​ಟಿಆರ್​ ಅಥವಾ ಅಲ್ಲು ಅರ್ಜುನ್? ಜನ್ಮದಿನಕ್ಕೆ ಸಿಗಲಿದೆ ಕ್ಲ್ಯಾರಿಟಿ – Kannada News | Allu Arjun Or Jr NTR Trivikram Srinivas God of War Movie Need clarity

ನಿರ್ದೇಶಕರು ಸಿನಿಮಾನ ನಿರ್ಧರಿಸಿದ ಬಳಿಕ ಅದಕ್ಕೆ ಹೀರೋ ಯಾರು ಎಂಬ ಚರ್ಚೆ ನಡೆಯುತ್ತದೆ. ಕೆಲವೊಮ್ಮೆ ಹೀರೋಗಳ ಬದಲಾವಣೆ ಆದ ಉದಾಹರಣೆ ಕೂಡ ಇದೆ. ಈಗ ತ್ರಿವಿಕ್ರಂ ಶ್ರೀನಿವಾಸ್ ಅವರ ‘ಗಾಡ್ ಆಫ್ ವಾರ್’ ಸಿನಿಮಾ ಕಥೆಯೂ ಹಾಗೆಯೇ ಆಗಿದೆಯೇ ಎಂಬ ಪ್ರಶ್ನೆ ಮೂಡಿದೆ. ಅಲ್ಲು ಅರ್ಜನ್ ಅಥವಾ ಜೂನಿಯರ್ ಎನ್​ಟಿಆರ್​ ಪೈಕಿ ಯಾರಿಗೆ ಸಿನಿಮಾ ಸಿಗಲಿದೆ ಎನ್ನುವ ಚರ್ಚೆ ಶುರುವಾಗಿದೆ. ಮೇ 20ರಂದು ಇದಕ್ಕೆ ಕ್ಲ್ಯಾರಿಟಿ ಸಿಗುವ ಸಾಧ್ಯತೆ ಇದೆ.

ಮೇ 20ರಂದು ಜೂನಿಯರ್ ಎನ್ಟಿಆರ್ ಬರ್ತ್ಡೇ. ಅಂದು ಪ್ರಶಾಂತ್ ನೀಲ್ ಜೊತೆಗಿನ ಸಿನಿಮಾದ ಬಗ್ಗೆ ಅಧಿಕೃತ ಘೋಷಣೆ ಆಗುವ ಸಾಧ್ಯತೆ ಇದೆ. ಅಂದು ಟೀಸರ್ ಕೂಡ ನಿರೀಕ್ಷಿಸಬಹುದು. ಪ್ರಶಾಂತ್ ನೀಲ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದರು. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ‘ವಾರ್ 2’ ಬಳಿಕ ಅವರು ಒಪ್ಪಿಕೊಂಡ ಚಿತ್ರ ಇದಾಗಿದೆ.

‘ಗಾಡ್ ಆಫ್ ವಾರ್’ ಎಂಬುದು ತ್ರಿವಿಕ್ರಂ ಶ್ರೀನಿವಾಸ್ ಅವರ ಡ್ರೀಮ್ ಪ್ರಾಜೆಕ್ಟ್ಗಳಲ್ಲಿ ಒಂದು. ಇದಕ್ಕಾಗಿ ಅವರು ಸಾಕಷ್ಟು ಶ್ರಮಹಾಕಿರುವುದನ್ನು ಕಾಣಬಹುದು. ಈ ಚಿತ್ರಕ್ಕೆ ಯಾರನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬ ಗೊಂದಲದಲ್ಲಿ ತ್ರಿವಿಕ್ರಂ ಶ್ರೀನಿವಾಸ್ ಅವರು ಇದ್ದಾರೆ ಎಂದು ಹೇಳಲಾಗುತ್ತಾ ಇದೆ. ಈ ಗೊಂದಲಕ್ಕೆ ಇನ್ನೂ ತೆರೆ ಬಿದ್ದಿಲ್ಲ.

ಈಗ ಎಲ್ಲರ ದೃಷ್ಟಿ ಮೇ 20ರ ಮೇಲೆ ನೆಟ್ಟಿದೆ. ಅಂದು ಜೂನಿಯರ್ ಎನ್​ಟಿಆರ್ ಜನ್ಮದಿನ. ಅಂದು ಈ ಸಿನಿಮಾ ಬಗ್ಗೆ ಘೋಷಣೆ ಆಗದೆ ಇದ್ದರೆ ಈ ಪ್ರಾಜೆಕ್ಟ್ ನಿಂತಿದೆ ಎಂದು ಊಹಿಸಬಹುದು ಅಥವಾ ಅಲ್ಲು ಅರ್ಜುನ್ ಅವರು ಈ ಸಿನಿಮಾಗೆ ಹೀರೋ ಆಗಬಹುದು ಎಂದು ಊಹಿಸಬಹುದು. ಈ ಮೊದಲು ತ್ರಿವಿಕ್ರಂ ಶ್ರೀನಿವಾಸ್ ಅವರು ಜೂನಿಯರ್ ಎನ್​ಟಿಆರ್ ಹಾಗೂ ಅಲ್ಲು ಅರ್ಜುನ್ ಜೊತೆ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: ‘ನಿರ್ಮಿಸಿದ್ದು, ಖರೀದಿಸಿದ್ದಲ್ಲ’; ಕಟ್ಟುಮಸ್ತಾದ ದೇಹದ ಫೋಟೋ ಹಂಚಿಕೊಂಡ ಜೂನಿಯರ್ ಎನ್​​​ಟಿಆರ್

ಜೂನಿಯರ್ ಎನ್​ಟಿಆರ್ ಅವರು ಸದ್ಯ ‘ಡ್ರ್ಯಾಗನ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕಾಗಿ ಅವರು ಕಟ್ಟುಮಸ್ತಾದ ದೇಹ ಮಾಡಿಕೊಂಡಿದ್ದಾರೆ. ಈ ಮೊದಲು ತೆಳ್ಳಗಾಗಿದ್ದ ಅವರು ದಪ್ಪ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಇಂದು ಆದಿಚುಂಚನಗಿರಿ ಕ್ಷೇತ್ರಕ್ಕೆ ಬರ್ತಿದ್ದಾರೆ ಪ್ರಧಾನಿ ಮೋದಿ! ಮಠದ ಸುತ್ತಲೂ ಸೆಕ್ಯೂರಿಟಿ ಹೇಗಿದೆ ನೋಡಿ! – Kannada News | PM Modis Historic Visit to Adichunchanagiri: Bhairavaikya Mandira Inauguration and High Security

ಮಂಡ್ಯ, ಏಪ್ರಿಲ್ 15: ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಲು ಸಕಲ ಸಿದ್ಧತೆಗಳು ನಡೆದಿವೆ. ಪ್ರಧಾನಿಗಳು ಶ್ರೀ ಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಲಿದ್ದಾರೆ. ಇದು ಆದಿಚುಂಚನಗಿರಿಗೆ ಮೋದಿಯ ಮೊದಲ ಭೇಟಿಯಾಗಿದೆ. ಪ್ರಧಾನಿಯ ಸ್ವಾಗತಕ್ಕಾಗಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳ ಮುಖಂಡರು ಫ್ಲೆಕ್ಸ್ ಹಾಕಿ ಸ್ವಾಗತ ಕೋರಿದ್ದಾರೆ. ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆಯಿದೆ.

ಪ್ರಧಾನಿಗಳ ಭೇಟಿಯ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಆರು ಎಸ್ಪಿಗಳು, ಎಂಟು ಎಎಸ್ಪಿಗಳು, 53 ಇನ್ಸ್‌ಪೆಕ್ಟರ್‌ಗಳು, 18 ಡಿವೈಎಸ್‌ಪಿಗಳು ಸೇರಿದಂತೆ ಒಟ್ಟು 1700ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಮಠಕ್ಕೆ ಹೋಗುವ ರಸ್ತೆಗಳನ್ನು ಸಾರ್ವಜನಿಕರಿಗೆ ನಿರ್ಬಂಧಿಸಲಾಗಿದ್ದು, ಎಸ್ಪಿಜಿ ಭದ್ರತೆಯ ಅಡಿಯಲ್ಲಿ ಸಂಪೂರ್ಣ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link

ನೀವಂದುಕೊಂಡತಿಲ್ಲ ‘ಟಾಕ್ಸಿಕ್’, ಕಾಣುವುದೇ ಒಂದು, ಇರುವುದೇ ಒಂದು ಎಂದ ಯಶ್ – Kannada News | Yash talks about Toxic movie says it is not normal gangster movie

ಯಶ್ (Yash) ನಟನೆಯ ‘ಟಾಕ್ಸಿಕ್’ ಭಾರತದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಮಾರ್ಚ್ 19ರಂದೇ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಯುದ್ಧ ಭೀತಿಯ ಕಾರಣ ಸಿನಿಮಾದ ಬಿಡುಗಡೆ ಮುಂದೂಡಲ್ಪಟ್ಟಿದ್ದು, ಜೂನ್ 04 ರಂದು ಅದ್ಧೂರಿಯಾಗಿ ‘ಟಾಕ್ಸಿಕ್’ ಸಿನಿಮಾ ತೆರೆಗೆ ಅಪ್ಪಳಿಸಲಿದೆ. ಸಿನಿಮಾದ ಪ್ರಚಾರವನ್ನು ಸಕ್ರಿಯವಾಗಿ ಯಶ್ ಇನ್ನೂ ಪ್ರಾರಂಭಿಸಿಲ್ಲವಾದರೂ, ಇದೀಗ ಲಾಸ್ ಏಂಜಲ್ಸ್​​ನಲ್ಲಿ ನಡೆದ ಸಿನಿಮಾಕಾನ್ 2026 ನಲ್ಲಿ ‘ರಾಮಾಯಣ’ ಸಿನಿಮಾ ಪ್ರಚಾರದಲ್ಲಿ ಭಾಗವಹಿಸಿ, ಅಲ್ಲಿಯೇ ‘ಟಾಕ್ಸಿಕ್’ ಸಿನಿಮಾ ಬಗ್ಗೆಯೂ ಅಪರೂಪದ ವಿಷಯಗಳನ್ನು ಯಶ್ ಹಂಚಿಕೊಂಡಿದ್ದಾರೆ.

ಹಾಲಿವುಡ್​​ನ ಫ್ಯಾಂಡಾಂಗೊ ಮತ್ತು ರೋಟನ್ ಟೊಮೆಟೊ ಜೊತೆಗೆ ಮಾತನಾಡಿರುವ ನಟ ಯಶ್, ‘ರಾಮಾಯಣ’ ಸಿನಿಮಾದ ಬಗ್ಗೆ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಅದರ ಜೊತೆಗೆ ‘ಟಾಕ್ಸಿಕ್’ ಸಿನಿಮಾ ಬಗ್ಗೆಯೂ ಮಾತನಾಡಿದ್ದಾರೆ. ‘ಟಾಕ್ಸಿಕ್’ ಬಹಳ ಮಹಾತ್ವಾಕಾಂಕ್ಷೆಯ ಸಿನಿಮಾ. ಮೊದಲ ಬಾರಿಗೆ ನಾವು ಆ ಸಿನಿಮಾವನ್ನು ಭಾರತೀಯ ಭಾಷೆಗಳ ಜೊತೆಗೆ ಇಂಗ್ಲೀಷ್​​ನಲ್ಲೂ ಚಿತ್ರೀಕರಣ ಮಾಡಿದ್ದೇವೆ’ ಎಂದಿದ್ದಾರೆ.

‘ಸಿನಿಮಾದ ವಸ್ತು ವಿಷಯದ ಬಗ್ಗೆ ಹೇಳುವುದಾದರೆ ಹಲವು ಪದರಗಳನ್ನು ಒಳಗೊಂಡ ಸೂಕ್ಷ್ಮವಾದ ಕತೆಯನ್ನು ‘ಟಾಕ್ಸಿಕ್’ ಹೊಂದಿದೆ. ಮೇಲ್ನೋಟಕ್ಕೆ ಗ್ಯಾಂಗ್​​ಸ್ಟರ್ ಎನಿಸಬಹುದಾದರೂ ಆಳದಲ್ಲಿ ಅದು ಬೇರೆಯದ್ದೇ ಅಂಶವನ್ನು ಒಳಗೊಂಡಿದೆ. ಮೇಲ್ನೋಟಕ್ಕೆ ಹಿಂಸಾತ್ಮಕ, ಆಕ್ಷನ್ ಸಿನಿಮಾ ಎನಿಸಿದರೂ ಸಹ ಅದು ಒಂದು ಸೈಕಾಲಜಿಕಲ್ ಥ್ರಿಲ್ಲರ್ ಸಹ ಆಗಿದೆ. ಜೊತೆಗೆ ಮಾನವೀಯ ಅಂಶಗಳನ್ನು ಸಾರುವ ಕತೆಯನ್ನು ಸಿನಿಮಾ ಒಳಗೊಂಡಿದೆ’ ಎಂದಿದ್ದಾರೆ.

ಇದನ್ನೂ ಓದಿ:ರಣ್​​ಬೀರ್ ಕಪೂರ್ ಜೊತೆ ನಟನೆ, ಯಶ್ ಹೇಳಿದ್ದೇನು?

‘ಟಾಕ್ಸಿಕ್’ ಸಿನಿಮಾ ಒಂದು ಡಾರ್ಕ್ ಅಥವಾ ಋಣಾತ್ಮಕ ಪಾತ್ರವನ್ನು ಬಹಳ ಭಿನ್ನ ರೀತಿಯಲ್ಲಿ ಪ್ರೆಸೆಂಟ್ ಮಾಡುವ ಸಿನಿಮಾ. ಕೆಲವು ಅದ್ಭುತವಾದ ತಂತ್ರಜ್ಞರು ಆ ಸಿನಿಮಾಕ್ಕಾಗಿ ಕೆಲಸ ಮಾಡಿದ್ದಾರೆ. ನನ್ನ ನಿರ್ದೇಶಕಿ ಗೀತು ಮೋಹನ್​​ದಾಸ್, ಗ್ಯಾಂಗ್​​ಸ್ಟರ್ ಸಿನಿಮಾವನ್ನು ಸಂಪೂರ್ಣ ಭಿನ್ನ ದೃಷ್ಟಿಕೋನದಿಂದ ಕಟ್ಟಿಕೊಟ್ಟಿದ್ದಾರೆ. ನಾನಂತೂ ಆ ಸಿನಿಮಾನಲ್ಲಿ ನಟಿಸುವುದನ್ನು ಎಂಜಾಯ್ ಮಾಡಿದ್ದೇನೆ. ಸಿನಿಮಾ ಕಣ್ಣಿಗೆ ಹಬ್ಬವೇ ಆಗಲಿದೆ. ಜೊತೆಗೆ ಸಿನಿಮಾ ನೋಡುವ ಪ್ರೇಕ್ಷಕರ ಮನಸ್ಸಿನ ಮೇಲೂ ಸಹ ಗಾಢ ಪರಿಣಾಮವನ್ನು ಆ ಸಿನಿಮಾ ಬೀರಲಿದೆ’ ಎಂದಿದ್ದಾರೆ ಯಶ್.

ಇದೀಗ ಬಿಡುಗಡೆ ಆಗಿರುವ ಟೀಸರ್​​ಗಳಲ್ಲಿ ಹಿಂಸಾಚಾರ, ಲೈಂಗಿಕತೆಗೆ ಹೆಚ್ಚು ಒತ್ತು ನೀಡಿದಂತೆ ಕಾಣಿಸುತ್ತಿದೆ. ಆದರೆ ಯಶ್ ಅವರು ಇದೀಗ ಹೇಳಿರುವಂತೆ ಅದೆಲ್ಲ ಮೇಲ್ನೋಟದ ಕತೆಯಷ್ಟೆ. ಕತೆಯ ಅಂತರಾಳ ಬೇರೆಯೇ ಇದೆ. ಗೀತು ಮೋಹನ್​​ದಾಸ್ ಈ ಹಿಂದೆ ನಿರ್ದೇಶಿಸಿದ ಸಿನಿಮಾಗಳಲ್ಲಿ ಮಾನವೀಯ ಅಂಶಗಳಿಗೆ ಹೆಚ್ಚು ಒತ್ತು ಇತ್ತು. ಅದರಂತೆ ಈ ಸಿನಿಮಾನಲ್ಲಿಯೂ ಇರುವುದು ಖಾತ್ರಿ ಆಗಿದೆ. ಸಿನಿಮಾ ಜೂನ್ 04 ರಂದು ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

KKR ಇತಿಹಾಸದಲ್ಲೇ ಕಪ್ಪು ಚುಕ್ಕೆ: ಗೆಲುವಿಲ್ಲದೆ ದಾಖಲೆ ಬರೆದ ನೈಟ್ ರೈಡರ್ಸ್! – Kannada News | For the first time in history, KKR remain winless after the first 5 matches

IPL 2026: ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾದ ಕೋಲ್ಕತ್ತಾ ನೈಟ್ ರೈಡರ್ಸ್ (KKR), 2026ರ ಸೀಸನ್‌ನಲ್ಲಿ ಎಂದೂ ಕಂಡಿರದಂತಹ ಹೀನಾಯ ಸ್ಥಿತಿಗೆ ತಲುಪಿದೆ. ಸೀಸನ್ ಆರಂಭವಾಗಿ 5 ಪಂದ್ಯಗಳು ಕಳೆದಿದ್ದರೂ, ಕೆಕೆಆರ್ ಖಾತೆಯಲ್ಲಿ ಈವರೆಗೆ ಒಂದೂ ಗೆಲುವು ದಾಖಲಾಗಿಲ್ಲ. ಇದು ಕೊಲ್ಕತ್ತಾ ನೈಟ್ ರೈಡರ್ಸ್​ ತಂಡದ ಇತಿಹಾಸದಲ್ಲೇ ಅತ್ಯಂತ ಕಳಪೆ ಆರಂಭ ಎಂಬುದು ವಿಶೇಷ.

ಇತಿಹಾಸದಲ್ಲಿ ಇದೇ ಮೊದಲು!

ಹಿಂದಿನ ಸೀಸನ್‌ಗಳಲ್ಲಿ ಕೆಕೆಆರ್ ಸತತ ಸೋಲುಗಳನ್ನು ಕಂಡಿದ್ದ ನಿದರ್ಶನಗಳಿವೆ (ಉದಾಹರಣೆಗೆ 2009ರಲ್ಲಿ ಸತತ 9 ಸೋಲು). ಆದರೆ, ಸೀಸನ್‌ನ ಮೊದಲ 5 ಪಂದ್ಯಗಳಲ್ಲಿ ಯಾವುದೇ ಗೆಲುವು ಸಾಧಿಸದಿರುವುದು ಇದೇ ಮೊದಲು. ಹೀಗಾಗಿ ಐಪಿಎಲ್ 2026ರ ಕೆಕೆಆರ್ ಪಾಲಿನ ಅತ್ಯಂತ ಕೆಟ್ಟ ಸೀಸನ್​ ಎಂದು ವಿಶ್ಲೇಷಿಸಲಾಗುತ್ತಿದೆ.

ಕೆಕೆಆರ್ ಪ್ರದರ್ಶನ:

  • ಮುಂಬೈ ಇಂಡಿಯನ್ಸ್ ವಿರುದ್ಧ 6 ವಿಕೆಟ್‌ಗಳ ಸೋಲು.
  • ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 65 ರನ್‌ಗಳ ಬೃಹತ್ ಸೋಲು.
  • ಪಂಜಾಬ್ ಕಿಂಗ್ಸ್ ವಿರುದ್ಧ  ಮಳೆಯಿಂದಾಗಿ ಪಂದ್ಯ ರದ್ದು.
  • ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 3 ವಿಕೆಟ್‌ಗಳ ಸೋಲು.
  • ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 32 ರನ್‌ಗಳ ಸೋಲು.

ತಂಡದ ಹಿನ್ನಡೆಗೆ ಪ್ರಮುಖ ಕಾರಣಗಳು:

ಬ್ಯಾಟಿಂಗ್ ವೈಫಲ್ಯ: ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಸ್ಥಿರ ಪ್ರದರ್ಶನ ನೀಡಲು ವಿಫಲರಾಗುತ್ತಿದ್ದಾರೆ. ವಿಶೇಷವಾಗಿ ಪವರ್‌ಪ್ಲೇ ಅವಧಿಯಲ್ಲಿ ವಿಕೆಟ್ ಕಳೆದುಕೊಳ್ಳುತ್ತಿರುವುದು ತಂಡಕ್ಕೆ ದೊಡ್ಡ ಹೊಡೆತ ನೀಡುತ್ತಿದೆ.

ಬೌಲಿಂಗ್‌ನಲ್ಲಿ ಲಯದ ಕೊರತೆ: ಡೆತ್ ಓವರ್‌ಗಳಲ್ಲಿ ರನ್ ನಿಯಂತ್ರಿಸಲು ಬೌಲರ್‌ಗಳು ಪರದಾಡುತ್ತಿದ್ದಾರೆ.

ನಾಯಕತ್ವದ ಒತ್ತಡ: ನಾಯಕ ಅಜಿಂಕ್ಯ ರಹಾನೆ ತಂಡದಲ್ಲಿ ಸಮತೋಲನ ತರಲು ಪ್ರಯತ್ನಿಸುತ್ತಿದ್ದರೂ, ಮೈದಾನದಲ್ಲಿ ಅದು ಫಲ ನೀಡುತ್ತಿಲ್ಲ.

ಸ್ಟಾರ್ ಆಟಗಾರರ ವೈಫಲ್ಯ: ಕೆಕೆಆರ್ ತಂಡದಲ್ಲಿ ಕ್ಯಾಮರೋನ್ ಗ್ರೀನ್, ಸುನಿಲ್ ನರೈನ್, ಫಿನ್ ಅಲೆನ್​ನಂತಹ ಸ್ಟಾರ್ ಆಟಗಾರರಿದ್ದರೂ ಯಾರಿಂದಲೂ ಕೂಡ ನಿರೀಕ್ಷಿತ ಪ್ರದರ್ಶನ ಮೂಡಿ ಬರುತ್ತಿಲ್ಲ.

ಮುಂದಿರುವ ಸವಾಲು:

ಸದ್ಯ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಕೆಕೆಆರ್, ಪ್ಲೇ-ಆಫ್ ರೇಸ್‌ನಲ್ಲಿ ಉಳಿಯಬೇಕಾದರೆ ಮುಂದಿನ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿದೆ. ಏಪ್ರಿಲ್ 17ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯ ತಂಡಕ್ಕೆ ಮಾಡು ಇಲ್ಲವೇ ಮಡಿ ಎಂಬಂತಿದೆ.

ಇದನ್ನೂ ಓದಿ: RCB vs LSG ಪಂದ್ಯಕ್ಕೆ 4 ಆಟಗಾರರು ಅಲಭ್ಯ..!

ಇತ್ತ ಮೊದಲ ಐದು ಮ್ಯಾಚ್​ಗಳಲ್ಲಿ 4 ರಲ್ಲಿ ಸೋತಿದ್ದರೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಮುಂದಿನ ಮ್ಯಾಚ್​ಗಳಲ್ಲಿ ಗೆಲ್ಲುವ ಮೂಲಕ ಫೈನಲ್​ಗೇರುವ ವಿಶ್ವಾಸದಲ್ಲಿದ್ದಾರೆ ಕೆಕೆಆರ್​ ಅಭಿಮಾನಿಗಳು. ಅದರಲ್ಲೂ 2012 ರಲ್ಲಿ ಮೊದಲೆರಡು ಮ್ಯಾಚ್​ಗಳಲ್ಲಿ ಸೋತು ಟ್ರೋಫಿ ಎತ್ತಿ ಹಿಡಿದಿದ್ದ ಕೆಕೆಆರ್ ತಂಡದ ಇತಿಹಾಸ ಮರುಕಳಿಸಲು ಎಂದು ಅಭಿಮಾನಿಗಳು
ಆಶಿಸುತ್ತಿದ್ದಾರೆ. ಅದರಂತೆ ಕಳಪೆ ಆರಂಭದ ನಡುವೆಯೂ ಟ್ರೋಫಿ ಗೆದ್ದಿದ್ದ ಕೆಕೆಆರ್, ಈ ಬಾರಿಯೂ ಅದೇ ರೀತಿ ಫೀನಿಕ್ಸ್‌ನಂತೆ ಎದ್ದು ಬರಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

Published On – 8:23 am, Wed, 15 April 26

Source link

ಸಮಂತಾ ಫಿಟ್ ಆಗಿರಲು ಇದೇ ಕಾರಣ; ಈ ಟಿಪ್ಸ್ ಅನುಸರಿಸಿ

ಸಮಂತಾ ಮೊದಲಿನಷ್ಟು ವೇಗವಾಗಿ ಸಿನಿಮಾ ಮಾಡುತ್ತಿಲ್ಲವಾದರೂ ಅವರ ಬಗೆಗಿನ ಕ್ರೇಜ್ ಸ್ವಲ್ಪವೂ ಕಡಿಮೆಯಾಗಿಲ್ಲ. ಅವರು ಸುಮಾರು 16 ವರ್ಷಗಳಿಂದ ಚಿತ್ರರಂಗದಲ್ಲಿದ್ದಾರೆ. ಚಲನಚಿತ್ರಗಳ ಜೊತೆಗೆ, ಮೊದಲಿನಿಂದಲೂ ಫಿಟ್‌ನೆಸ್‌ಗೆ ಆದ್ಯತೆ ನೀಡುತ್ತಿದ್ದಾರೆ. ಇತ್ತೀಚೆಗೆ, ಮೈಯೋಸಿಟಿಸ್ ಇರುವುದು ಪತ್ತೆಯಾದ ನಂತರ, ಅವರು ಫಿಟ್‌ನೆಸ್ ಅನ್ನು ಹೆಚ್ಚು ಗಂಭೀರವಾಗಿ ಪರಿಗಣಿಸಿದ್ದಲ್ಲದೆ, ಸ್ವತಃ ಫಿಟ್‌ನೆಸ್ ಬಗ್ಗೆ ಜಾಗೃತಿ ಮೂಡಿಸಲು ಪ್ರಾರಂಭಿಸಿದರು.

ಸಮಂತಾ ಅವರು ಪಾಡ್‌ಕ್ಯಾಸ್ಟ್‌ಗಳನ್ನು ಮಾಡುತ್ತಿದ್ದಾರೆ. ಅವರು ಇತರ ಜನರ ಪಾಡ್‌ಕ್ಯಾಸ್ಟ್‌ಗಳಲ್ಲಿ ಭಾಗವಹಿಸುತ್ತಿದ್ದಾರೆ ಮತ್ತು ಫಿಟ್‌ನೆಸ್‌ನ ಮಹತ್ವದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಈಗ ಸಮಂತಾ ಫಿಟ್ ಆಗಿರಲು ಮತ್ತು ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿದಿನ ಮಾಡುವ ಎಂಟು ಕೆಲಸಗಳನ್ನು ವಿವರಿಸಿದ್ದಾರೆ. ಸ್ಯಾಮ್ ‘ಪವರ್ ಮಾರ್ನಿಂಗ್’ ಎಂಬ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಸಮಂತಾ ಪ್ರತಿದಿನ ಮಾಡುವ ಎಂಟು ಕೆಲಸಗಳು

  1. ಬೆಳಿಗ್ಗೆ ಎದ್ದ ನಂತರ ಮೊದಲ ಒಂದು ಗಂಟೆ ಮೊಬೈಲ್ ಫೋನ್, ಇಮೇಲ್ ಅಥವಾ ಸುದ್ದಿಗಳಿಂದ ದೂರವಿರಿ. ಇದು ಮೆದುಳಿನ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ.
  2. ಎಚ್ಚರವಾದ ನಂತರ, ಕನಿಷ್ಠ ಐದು ನಿಮಿಷಗಳ ಕಾಲ ಶಾಂತವಾಗಿ ಕುಳಿತು ಆಳವಾಗಿ ಉಸಿರಾಡಿ. ಇದು ನರಮಂಡಲವನ್ನು ಶಾಂತಗೊಳಿಸುತ್ತದೆ ಮತ್ತು ದೇಹವು ಕೊಬ್ಬನ್ನು ವೇಗವಾಗಿ ಸುಡಲು ಸಹಾಯ ಮಾಡುತ್ತದೆ.
  3. ಬೆಳಿಗ್ಗೆ ಎದ್ದ 10 ನಿಮಿಷಗಳ ಒಳಗೆ ನಿಮ್ಮ ಮುಖವನ್ನು ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳಿ. ಇದು ದೇಹಕ್ಕೆ ಹಲವು ಪ್ರಯೋಜನಗಳನ್ನು ಹೊಂದಿದೆ.
  4. ಬೆಳಿಗ್ಗೆ ಎದ್ದು ಬೆಚ್ಚಗಿನ ನೀರಿನಲ್ಲಿ ನಿಂಬೆ ರಸ, ಅರಿಶಿನ, ಆಪಲ್ ಸೈಡರ್ ವಿನೆಗರ್ ಮತ್ತು ಸ್ವಲ್ಪ ಆಲಿವ್ ಎಣ್ಣೆಯನ್ನು ಬೆರೆಸಿ ಕುಡಿಯಿರಿ. ಇದು ದೇಹದಲ್ಲಿನ ಆಮ್ಲೀಯತೆಯನ್ನು ಕಡಿಮೆ ಮಾಡುತ್ತದೆ.
  5. ಪ್ರೋಟೀನ್ ಮತ್ತು ಫೈಬರ್ ಅಧಿಕವಾಗಿರುವ ಉಪಾಹಾರ ಸೇವಿಸಿ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರವಾಗಿರಿಸುತ್ತದೆ. ಇದು ಜಂಕ್ ಫುಡ್‌ನ ಹಂಬಲವನ್ನು ಕಡಿಮೆ ಮಾಡುತ್ತದೆ. ಜಂಕ್ ಫುಡ್ ಅನ್ನು ಎಂದಿಗೂ ತಿನ್ನಬೇಡಿ ಎಂಬುದು ಸಮಂತಾ ಅವರ ಮನವಿ.
  6. ಬೆಳಿಗ್ಗೆ 11 ಗಂಟೆಯೊಳಗೆ ನಿಮ್ಮ ವ್ಯಾಯಾಮಗಳನ್ನು ಪೂರ್ಣಗೊಳಿಸಿ. ಇವು ನಿಮ್ಮ ದೇಹವನ್ನು ಫಿಟ್ ಆಗಿ ಇಡುತ್ತವೆ. ಸಮಂತಾ ಪ್ರತಿದಿನ ಎರಡು ಗಂಟೆಗಳ ಕಾಲ ಜಿಮ್‌ನಲ್ಲಿ ಕಳೆಯುತ್ತಾರೆ.
  7. ಬೆಳಗಿನ ಉಪಾಹಾರದ ನಂತರವೇ ಕಾಫಿ ಅಥವಾ ಟೀ ಕುಡಿಯಿರಿ. ಖಾಲಿ ಹೊಟ್ಟೆಯಲ್ಲಿ ಕೆಫೀನ್ ಸೇವಿಸುವುದನ್ನು ತಪ್ಪಿಸಿ. ಆ ದಿನ ನೀವು ಪೂರ್ಣಗೊಳಿಸಬೇಕಾದ ಕೆಲಸಗಳನ್ನು ಮೊದಲೇ ನಿರ್ಧರಿಸಿ ಬರೆಯಿರಿ. ಇದು ನಿಮ್ಮ ಮನಸ್ಸನ್ನು ಅನಗತ್ಯ ವಿಷಯಗಳಿಗೆ ಅಲೆದಾಡದಂತೆ ತಡೆಯುತ್ತದೆ ಮತ್ತು ನಿಮ್ಮ ಏಕಾಗ್ರತೆಯನ್ನು ಹೆಚ್ಚಿಸುತ್ತದೆ.
  8. ಕನಿಷ್ಠ 21 ದಿನಗಳ ಕಾಲ ನಿಯಮಿತವಾಗಿ ಈ ವಿಧಾನಗಳನ್ನು ಅನುಸರಿಸಲು ಸಮಂತಾ ಸಲಹೆ ನೀಡುತ್ತಾರೆ. ಇದು ನಿಮ್ಮ ತೂಕ ಇಳಿಸಿಕೊಳ್ಳಲು ಸಹಾಯ ಮಾಡುವುದಲ್ಲದೆ, ನಿಮ್ಮ ಮಾನಸಿಕ ಆರೋಗ್ಯ ಮತ್ತು ಚರ್ಮದ ಬಣ್ಣವನ್ನು ಸುಧಾರಿಸುತ್ತದೆ ಎಂದು ಅವರು ಹೇಳುತ್ತಾರೆ.ಗಮನಿಸಿ : ಇದು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ. ಕಂಪನಿಯು ಇದಕ್ಕೆ ಜವಾಬ್ದಾರನಾಗಿರುವುದಿಲ್ಲ. ಈ ಲೇಖನದ ವಿಷಯವು ಆರೋಗ್ಯ ತಜ್ಞರ ಸಲಹೆ ಮತ್ತು ಲಭ್ಯವಿರುವ ಸಂಶೋಧನೆಯನ್ನು ಆಧರಿಸಿದೆ. ಆರೋಗ್ಯ ಕಾಳಜಿ ಇರುವವರು ಈ ಮಾರ್ಗಸೂಚಿಗಳನ್ನು ಅನುಸರಿಸುವ ಮೊದಲು ವೈದ್ಯರನ್ನು ಸಂಪರ್ಕಿಸಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ಟರ್ಕಿಯ ಹೈಸ್ಕೂಲ್ ಒಳಗೆ ಗುಂಡಿನ ದಾಳಿ, 16 ಮಂದಿಗೆ ಗಂಭೀರ ಗಾಯ, ಶಾಲಾ ಅಂಗಳದಲ್ಲೇ ದಾಳಿಕೋರ ಆತ್ಮಹತ್ಯೆ – Kannada News | Gunman opens fire at high school in S. Türkiye, injures 16

ಟರ್ಕಿ, ಏಪ್ರಿಲ್ 15: ಆಗ್ನೇಯ ಟರ್ಕಿಯ ಶಾನ್ಲಿಯುರ್ಫಾ ಪ್ರಾಂತ್ಯದ ಪ್ರೌಢಶಾಲೆಯೊಂದು ಮಂಗಳವಾರ ಬೆಳಗ್ಗೆ ಗುಂಡಿನ ದಾಳಿ ನಡೆದಿದೆ. ಉದ್ದನೆಯ ಬ್ಯಾರೆಲ್ ಆಯುಧ ಹಿಡಿದು ಶಾಲೆಗೆ ನುಗ್ಗಿದ ಯುವಕನೊಬ್ಬ ನಡೆಸಿದ ಮನಬಂದಂತೆ ಗುಂಡಿನ ದಾಳಿಯಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 16 ಜನರು ಗಾಯಗೊಂಡಿದ್ದಾರೆ. ಸಿವೆರೆಕ್ ಜಿಲ್ಲೆಯ ಅಹ್ಮೆತ್ ಕೊಯುಂಕು ವೃತ್ತಿಪರ ಮತ್ತು ತಾಂತ್ರಿಕ ಅನಟೋಲಿಯನ್ ಪ್ರೌಢಶಾಲೆಯಲ್ಲಿ ಬೆಳಗ್ಗೆ ತರಗತಿಗಳು ಆರಂಭವಾಗುವ ಹೊತ್ತಿಗೆ ಈ ಘಟನೆ ನಡೆದಿದೆ.

ಸುಮಾರು 17-18 ವರ್ಷದ ಅಪರಿಚಿತ ಯುವಕನೊಬ್ಬ ಮಾರಕಾಸ್ತ್ರದೊಂದಿಗೆ ಶಾಲಾ ಆವರಣಕ್ಕೆ ನುಗ್ಗಿದ್ದಾನೆ. ಮೊದಲು ಅಂಗಳದಲ್ಲಿ ಯಾದೃಚ್ಛಿಕವಾಗಿ ಗುಂಡು ಹಾರಿಸಿದ ಆತ, ನಂತರ ಕಿರುಚುತ್ತಾ ಶಾಲಾ ಕಟ್ಟಡದೊಳಗೆ ನುಗ್ಗಿದ್ದಾನೆ. ಇದರಿಂದ ಭಯಭೀತರಾದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಪ್ರಾಣ ಉಳಿಸಿಕೊಳ್ಳಲು ದಿಕ್ಕಾಪಾಲಾಗಿ ಓಡಿದ್ದಾರೆ. ದಾಳಿಕೋರ ಯುವಕ ತನ್ನ ಆಯುಧದಿಂದ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಗವರ್ನರ್ ದೃಢಪಡಿಸಿದ್ದಾರೆ. ಸಣ್ಣ ವಯಸ್ಸಿನ ಹುಡುಗ ಇಂಥಾ ದೊಡ್ಡ ದಾಳಿ ನಡೆಸಿದ್ದೇಕೆ, ಆಯುದ್ಧ ಸಿಕ್ಕಿದ್ದೆಲ್ಲಿಂದ ಎನ್ನುವ ಕುರಿತು ತನಿಖೆ ನಡೆಯುತ್ತಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Source link

ರಣ್​​ಬೀರ್ ಕಪೂರ್ ಜೊತೆ ನಟನೆ, ಯಶ್ ಹೇಳಿದ್ದೇನು? – Kannada News | Yash talks about chemistry with Ranbir Kapoor in Ramayana movie

ರಾಮಾಯಣ’ (Ramayana) ಸಿನಿಮಾ ಭಾರತದ ಅತಿ ದೊಡ್ಡ ಬಜೆಟ್​​ನ ಸಿನಿಮಾ ಎನಿಸಿಕೊಂಡಿದ್ದು. ವಿಶ್ವ ಚಿತ್ರರಂಗಕ್ಕಾಗಿ ಭಾರತದಿಂದ ನಿರ್ಮಾಣ ಆಗಿರುವ ಸಿನಿಮಾ ಇದಾಗಿದೆ. ಸಿನಿಮಾವನ್ನು ಭಾರತದಲ್ಲಿ ಮಾತ್ರವಲ್ಲದೆ ಹಾಲಿವುಡ್​​ನಲ್ಲೂ ಪ್ರಚಾರ ಮಾಡಲಾಗುತ್ತಿದೆ. ಇತ್ತೀಚೆಗಷ್ಟೆ ನಟ ಯಶ್ ಅವರು ‘ರಾಮಾಯಣ’ ಸಿನಿಮಾದ ಪ್ರಚಾರಕ್ಕಾಗಿ ನಿರ್ಮಾಪಕ ನಮಿತ್ ಮಲ್ಹೋತ್ರಾ ಜೊತೆಗೆ ಲಾಸ್ ಏಂಜಲ್ಸ್​​ನಲ್ಲಿ ನಡೆದ ಸಿನಿಮಾಕಾನ್ 2026 ನಲ್ಲಿ ಭಾಗಿ ಆಗಿದ್ದರು. ಅಲ್ಲಿ ಹಾಲಿವುಡ್ ಟಿವಿ ಒಂದಕ್ಕೆ ಸಂದರ್ಶನ ನೀಡಿರುವ ನಟ ಯಶ್ ಅವರು, ‘ರಾಮಾಯಣ’ ಸಿನಿಮಾನಲ್ಲಿ ರಣ್​​ಬೀರ್ ಕಪೂರ್ ಅವರೊಟ್ಟಿಗೆ ನಟಿಸಿದ ಅನುಭವದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದರು.

‘ಆಸಕ್ತಿಕರ ವಿಷಯವೆಂದರೆ ಈ ಸಿನಿಮಾನಲ್ಲಿ ನಾನು ಹಾಗೂ ರಣ್​​ಬೀರ್ ಕಪೂರ್ ತೆರೆಯ ಮೇಲೆ ಎದುರಾಗುವುದೇ ಇಲ್ಲ. ಎಲ್ಲರಿಗೂ ಗೊತ್ತಿರುವಂತೆ ಇದು ಎರಡು ಪಾರ್ಟ್​​ಗಳಲ್ಲಿ ಬರಲಿರುವ ಸಿನಿಮಾ. ಮೊದಲ ಭಾಗದಲ್ಲಿ ‘ರಾವಣ’ನಾನಿ ನನಗೆ ಪ್ರತ್ಯೇಕ ಸಾಮ್ರಾಜ್ಯ ಇರುತ್ತದೆ, ರಾಮನಿಗೆ ಪ್ರತ್ಯೇಕ ಸಾಮ್ರಾಜ್ಯ ಇರುತ್ತದೆ. ಆದರೆ ಕತೆ ಮುಂದುವರೆದಂತೆ ಪರಿಸ್ಥಿತಿಗಳು ನಮ್ಮಿಬ್ಬರನ್ನು ಎದುರು-ಬದುರು ಮಾಡುತ್ತವೆ’ ಎಂದಿದ್ದಾರೆ.

ಇದನ್ನೂ ಓದಿ:‘ರಾಮಾಯಣ’ ಸಿನಿಮಾ ಅವಧಿ 6 ಗಂಟೆ; ಚಿತ್ರತಂಡದ ಎದುರಿಗೆ ಇದೆ ದೊಡ್ಡ ಸವಾಲು

‘ರಣ್​​ಬೀರ್ ಕಪೂರ್ ಹಾಗೂ ನಾನು ಹಲವು ಭಾರಿ ಭೇಟಿ ಆಗಿದ್ದೇವೆ. ಅವರು ಅದ್ಭುತ ನಟ, ಇಬ್ಬರ ನಡುವೆ ಪರಸ್ಪರರ ಬಗ್ಗೆ ಇರುವ ಗೌರವ, ಪ್ರೀತಿ ನಮ್ಮ ಕೆಲಸವನ್ನು ಹೆಚ್ಚು ಸುಲಭ ಮಾಡಿದೆ. ನಾವು ‘ರಾಮಾಯಣ’ದಂಥಹಾ ಒಂದು ಅದ್ಭುತವನ್ನು ಸೃಷ್ಟಿ ಮಾಡುವಾಗ ಎಲ್ಲ ಗಮನ ಅದರ ಮೇಲೆ ಕೇಂದ್ರೀಕೃತವಾಗಿರುತ್ತದೆ. ಎಲ್ಲರಿಗೂ ಸಹ ಒಂದೇ ಗುರಿ ಇದ್ದಿದ್ದು, ನಾವು ಅದ್ಭುತವಾಗಿ ‘ರಾಮಾಯಣ’ ಮಾಡಬೇಕು ಎಂಬುದು. ನಮ್ಮ ಅತ್ಯುತ್ತಮವಾದುದನ್ನು ಈ ಸಿನಿಮಾಕ್ಕೆ ನೀಡಬೇಕು ಎಂಬುದು ನಮ್ಮ ಗುರಿ ಆಗಿತ್ತು. ನಮ್ಮ ಎಲ್ಲರ ದೃಷ್ಟಿಕೋನಗಳು ಒಟ್ಟಿಗೆ ಬೆರೆತು ಈಗ ‘ರಾಮಾಯಣ’ ಸಿನಿಮಾ ನಾವಂದುಕೊಂಡಂತೆ ಅದ್ಭುತವಾಗಿ ರೆಡಿಯಾಗಿದೆ. ಇಬ್ಬರ ನಡುವಿನ ಕೆಮಿಸ್ಟ್ರಿ ದೊಡ್ಡ ಪ್ರಶ್ನೆಯೇ ಆಗಲಿಲ್ಲ, ಏಕೆಂದರೆ ಸಿನಿಮಾ ನಿರ್ಮಾಣದ ಪ್ರತಿ ಹಂತವನ್ನೂ ನಾವು ಎಂಜಾಯ್ ಮಾಡಿದ್ದೇವೆ’ ಎಂದಿದ್ದಾರೆ ಯಶ್.

‘ರಾಮಾಯಣ’ ಸಿನಿಮಾನಲ್ಲಿ ಯಶ್ ಅವರು ರಾವಣನ ಪಾತ್ರದಲ್ಲಿ ನಟಿಸಿದ್ದಾರೆ. ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ, ರಾಮನ ಪಾತ್ರದಲ್ಲಿ ರಣ್​​ಬೀರ್ ಕಪೂರ್ ನಟಿಸಿದ್ದಾರೆ. ಹನುಮಂತನ ಪಾತ್ರದಲ್ಲಿ ಸನ್ನಿ ಡಿಯೋಲ್ ನಟಿಸಿದ್ದಾರೆ. ಸಿನಿಮಾಕ್ಕೆ ನಮಿತ್ ಮಲ್ಹೋತ್ರಾ ಬಂಡವಾಳ ಹೂಡಿದ್ದು, ಅವರ ಜೊತೆಗೆ ಯಶ್ ಅವರು ಸಹ ನಿರ್ಮಾಣ ಮಾಡಿದ್ದಾರೆ. ಸಿನಿಮಾಕ್ಕೆ ಆಸ್ಕರ್ ವಿಜೇತರಾದ ಎಆರ್ ರೆಹಮಾನ್ ಮತ್ತು ಹಾನ್ಸ್ ಜೀಮರ್ ಸಂಗೀತ ನೀಡಿದ್ದಾರೆ. ಸಿನಿಮಾ ನಿರ್ದೇಶನ ಮಾಡಿರುವುದು ‘ದಂಗಲ್’ ಖ್ಯಾತಿಯ ನಿತೀಶ್ ತಿವಾರಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕ ಹವಾಮಾನ ವರದಿ: ರಾಯಚೂರು, ಕೊಪ್ಪಳ ಸೇರಿದಂತೆ ಕರಾವಳಿಯಲ್ಲಿ ಹೆಚ್ಚಾಯ್ತು ಬಿಸಿಲ ಧಗೆ! 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ – Kannada News | Karnataka Weather Forecast: Heat wave alert all over Karnataka, Yellow alert for 9 districts

ರಾಯಚೂರು, ಕೊಪ್ಪಳ ಸೇರಿದಂತೆ ಕರಾವಳಿಯಲ್ಲಿ ಹೆಚ್ಚಾಯ್ತು ಬಿಸಿಲ ಧಗೆ!

ಬೆಂಗಳೂರು, ಏಪ್ರಿಲ್ 15: ಬೆಂಗಳೂರು ಸೇರಿದಂತೆ ಇಂದು ಹಲವು ಜಿಲ್ಲೆಗಳಲ್ಲಿ ಶುಷ್ಕ  (Weather Forecast) ವಾತಾವರಣವಿರಲಿದ್ದು, ಕೆಲ ಜಿಲ್ಲೆಗಳಲ್ಲಿ ಇಂದೂ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ಇಂದು ತಾಪಮಾನ ಹೆಚ್ಚಳದ ಸಾಧ್ಯತೆಯಿದ್ದು, ಹೀಟ್ ವೇವ್ ಅಲರ್ಟ್​ ನೀಡಲಾಗಿದೆ. ಇನ್ನುಳಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆಯ ಜೊತೆಗೆ ಕೆಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. ಒಟ್ಟಾರೆ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ.

ಎಲ್ಲೆಲ್ಲಿ ಯೆಲ್ಲೋ ಅಲರ್ಟ್​?

ಯಾದಗಿರಿ, ರಾಯಚೂರು, ಕೊಪ್ಪಳ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉಷ್ಣ ಅಲೆ ಹೆಚ್ಚಾಗಿರಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಸೂಚಿಸಿದೆ.

ಎಲ್ಲೆಲ್ಲಿ ಹೀಟ್​ ವೇವ್, ಒಣ ಹವೆ?

ಕರಾವಳಿಯಲ್ಲಿಂದು ಬಿಸಿ ವಾತಾವರಣದ ಜೊತೆ ಒಣ ಹವೆಯೂ ಇರಲಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿಯೂ ಶುಷ್ಕ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಾಮರಾಜನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉಳಿದೆಡೆ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

ಉಷ್ಣಾಘಾತದಿಂದ ರಕ್ಷಣೆ ಹೇಗೆ?

ಉಷ್ಣ ಅಲೆ ಹಾಗೂ ಉಷ್ಣಾಘಾತದಿಂದ (ಹೀಟ್ ಸ್ಟ್ರೋಕ್) ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಕೆಲವು ಸಲಹೆ ಸೂಚನೆಗಳನ್ನು ನೀಡಿದೆ. ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ಸೂರ್ಯನ ಬೆಳಕಿಗೆ ನೇರ ಮೈಯೊಡ್ಡುವುದನ್ನು ಆದಷ್ಟು ತಪ್ಪಿಸಿ. ನಿಯಮಿತವಾಗಿ ನೀರು ಕುಡಿಯಿರಿ. ಎಳನೀರು, ಮಜ್ಜಿಗೆ ಅಥವಾ ಮನೆಯಲ್ಲಿ ತಯಾರಿಸಿದ ಹಣ್ಣಿನ ರಸಗಳನ್ನು ಸೇವಿಸಿ. ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಿ. ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿಯನ್ನು ಬಳಸಿ. ಕೆಫೀನ್ (ಕಾಫಿ/ಟೀ) ಮತ್ತು ಹೆಚ್ಚಿನ ಸಕ್ಕರೆಯುಕ್ತ ಪಾನೀಯಗಳ ಸೇವನೆ ಕಡಿಮೆ ಮಾಡಿ, ಇವು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

IPL 2026: SRH ತಂಡಕ್ಕೆ ಎಡಗೈ ವೇಗಿ ಎಂಟ್ರಿ..!

Source link

Karnataka SSLC Results: ಎಸ್‌ಎಸ್‌ಎಲ್‌ಸಿ ರಿಸಲ್ಟ್ ಇಂದು ಬರುತ್ತಾ? ವಿದ್ಯಾರ್ಥಿಗಳಿಗೆ KSEAB ಹೇಳಿದ್ದೇನು? – Kannada News | Karnataka SSLC Results 2026: Official Update and Expected Release Date

ಬೆಂಗಳೂರು, ಏ.15: ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳು ಸಂಪೂರ್ಣ ಸುಳ್ಳು ಎಂದು ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸ್ಪಷ್ಟಪಡಿಸಿದೆ. ಈ ಕುರಿತು ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ಮಂಡಳಿ ಮನವಿ ಮಾಡಿದೆ. ಯಾವುದೇ ಕಾರಣಕ್ಕೂ ಇಂದು ಫಲಿತಾಂಶ ಪ್ರಕಟ ಮಾಡಲ್ಲ ಎಂದು ಮಂಡಳಿ ಹೇಳಿದೆ. ಇನ್ನು ಫಲಿತಾಂಶ ತಯಾರಿಗಳು ನಡೆಯುತ್ತಿದೆ ಎಂದು ಹೇಳಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳು ಹರಿಬಿಡುತ್ತಿರುವ ಸುಳ್ಳು ಸುದ್ದಿಗಳಿಗೆ ಮಂಡಳಿ ಅಧಿಕೃತವಾಗಿ ತೆರೆ ಎಳೆದಿದೆ. ಇಂದು ಯಾವುದೇ ಫಲಿತಾಂಶ ಪ್ರಕಟವಾಗುತ್ತಿಲ್ಲ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯು ಈಗಷ್ಟೇ ಆರಂಭವಾಗಿದ್ದು, ಪೂರ್ಣಗೊಳ್ಳಲು ಕಾಲಾವಕಾಶ ಬೇಕಿದೆ.

ಇದನ್ನೂ ಓದಿ: ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ; ಮೇ.29ರಿಂದ ಶಾಲೆ ಆರಂಭ, ಈ ಬಾರಿ ದಸರಾ ರಜೆ ಎಷ್ಟು ಗೊತ್ತಾ?

ಮಂಡಳಿಯ ಮಾಹಿತಿಯ ಪ್ರಕಾರ, ಮುಂದಿನ ವಾರ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಬಹುಶಃ ಏಪ್ರಿಲ್ 23ರ ನಂತರ ಅಧಿಕೃತವಾಗಿ ಫಲಿತಾಂಶ ಹೊರಬೀಳಬಹುದು ಎಂದು ಅಂದಾಜಿಸಲಾಗಿದೆ. ಪೋಷಕರು ಮತ್ತು ವಿದ್ಯಾರ್ಥಿಗಳು ಕೇವಲ ಅಧಿಕೃತ ವೆಬ್‌ಸೈಟ್‌ಗಳು ಅಥವಾ ಮಂಡಳಿಯ ಪ್ರಕಟಣೆಗಳನ್ನು ಮಾತ್ರ ನಂಬಬೇಕು. ಕಿಡಿಗೇಡಿಗಳ ಹಾದಿತಪ್ಪಿಸುವ ಸುದ್ದಿಗಳ ಬಗ್ಗೆ ಎಚ್ಚರವಿರಲಿ ಎಂದು ಮಂಡಳಿ ತಿಳಿಸಿದೆ.

ಫಲಿತಾಂಶ ವೀಕ್ಷಿಸುವುದು ಹೇಗೆ?

ವೆಬ್‌ಸೈಟ್‌ಗೆ ಭೇಟಿ ನೀಡಿ: ಸಿಬಿಎಸ್ಇ ಅಧಿಕೃತ ವೆಬ್‌ಸೈಟ್ results.cbse.nic.in ಅಥವಾ cbse.gov.in ಗೆ ಲಾಗ್ ಇನ್ ಆಗಿ.

ಲಿಂಕ್ ಕ್ಲಿಕ್ ಮಾಡಿ: ಮುಖಪುಟದಲ್ಲಿ ಕಾಣುವ ‘Secondary School Examination (Class X) Results 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ.

ವಿವರಗಳನ್ನು ಭರ್ತಿ ಮಾಡಿ: ನಿಮ್ಮ ರೋಲ್ ನಂಬರ್ (Roll Number), ಸ್ಕೂಲ್ ನಂಬರ್ (School Number) ಮತ್ತು ಅಡ್ಮಿಟ್ ಕಾರ್ಡ್ ಐಡಿ (Admit Card ID) ಅನ್ನು ನಿಖರವಾಗಿ ನಮೂದಿಸಿ.

ಸಬ್ಮಿಟ್ ನೀಡಿ: ವಿವರಗಳನ್ನು ಸಲ್ಲಿಸಿದ ತಕ್ಷಣ ನಿಮ್ಮ ಅಂಕಪಟ್ಟಿ ಪರದೆಯ ಮೇಲೆ ಮೂಡುತ್ತದೆ.

ಡೌನ್‌ಲೋಡ್: ಭವಿಷ್ಯದ ಬಳಕೆಗಾಗಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.

ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:08 am, Wed, 15 April 26

Source link

Exit mobile version