ಕಟ್ ಆದ ಬಾಯ್ಕಾಟ್: ಭಾರತ vs ಪಾಕಿಸ್ತಾನ್ ಪಂದ್ಯ ಕನ್ಫರ್ಮ್​ – Kannada News | T20 World Cup 2026: Pakistan to play against India

ಫೆಬ್ರವರಿ 15 ಕ್ಕೆ ನಿಗದಿಯಾಗಿರುವ ಟಿ20 ವಿಶ್ವಕಪ್​ನ 27ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗುಬುದು ಖಚಿತವಾಗಿದೆ. ಇದಕ್ಕೂ ಮುನ್ನ ಈ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಹೇಳಿಕೊಂಡಿತ್ತು. ಇದೀಗ ಪಿಸಿಬಿಯ ಮನವೊಲಿಸುವಲ್ಲಿ ಐಸಿಸಿ ಯಶಸ್ವಿಯಾಗಿದ್ದು, ಅದರಂತೆ ಫೆ.15 ರಂದು ಉಭಯ ತಂಡಗಳು ಕಣಕ್ಕಿಳಿಯಲಿವೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿಳಿಸಿದೆ.

ಟಿ20 ವಿಶ್ವಕಪ್​ನಿಂದ ಬಾಂಗ್ಲಾದೇಶ್ ತಂಡವನ್ನು ಕೈ ಬಿಟ್ಟಿರುವುದನ್ನು ಖಂಡಿಸಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ತಿಳಿಸಿತ್ತು. ಆಟಗಾರರ ಸುರಕ್ಷತೆಯ ದೃಷ್ಟಿಯಿಂದ ಬಾಂಗ್ಲಾದೇಶ್ ತಂಡದ ಪಂದ್ಯಗಳನ್ನು ಭಾರತದಿಂದ ಶ್ರೀಲಂಕಾಗೆ ಸ್ಥಳಾಂತರ ಮಾಡಬೇಕೆಂದು ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ಆಗ್ರಹಿಸಿತ್ತು.

ಆದರೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ನ ಈ ಮನವಿಯನ್ನು ಐಸಿಸಿ ತಿರಸ್ಕರಿಸಿತ್ತು. ಅಲ್ಲದೆ ಬಾಂಗ್ಲಾ ತಂಡವು ಭಾರತದಲ್ಲೇ ಆಡಬೇಕೆಂದು ಸೂಚಿಸಿದ್ದರು. ಐಸಿಸಿಯ ಈ ಸೂಚನೆಯನ್ನು ತಿರಸ್ಕರಿಸಿದ್ದರಿಂದ ಬಾಂಗ್ಲಾದೇಶ್ ತಂಡವನ್ನು ಟಿ20 ವಿಶ್ವಕಪ್​ನಿಂದ ಕೈ ಬಿಡಲಾಯಿತು.

ಇತ್ತ ಬಾಂಗ್ಲಾದೇಶ್ ತಂಡವನ್ನು ಕೈ ಬಿಟ್ಟಿರುವ ಐಸಿಸಿ ಹಾಗೂ ಬಿಸಿಸಿಐ ಕ್ರಮಕ್ಕೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ ಈ ನಡೆಯನ್ನು ಖಂಡಿಸುವ ಸಲುವಾಗಿ  ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಿಸಿಬಿ ತಿಳಿಸಿತ್ತು.

ಇತ್ತ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯ ನಡೆಯದೇ ಇದ್ದರೆ ಐಸಿಸಿ ಆದಾಯಕ್ಕೆ ಆರ್ಥಿಕ ನಷ್ಟ ಉಂಟಾಗಲಿದೆ. ಹೀಗಾಗಿ ಇದೀಗ ಐಸಿಸಿ ಅಧಿಕಾರಿಗಳು ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಮನವೊಲಿಸುವ ಕಾಯಕಕ್ಕೆ ಕೈ ಹಾಕಿದ್ದರು. ಅದರಂತೆ ಇದೀಗ ಕೆಲ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡುವ ಮೂಲಕ ಐಸಿಸಿ ಪಿಸಿಬಿಯ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದರೊಂದಿಗೆ ಫೆಬ್ರವರಿ 15 ರಂದು ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ನಡೆಯುವುದು ಖಚಿತವಾಗಿದೆ. ಅದರಂತೆ ಮುಂದಿನ ಭಾನುವಾರ ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಇಂಡೊ-ಪಾಕ್ ಮುಖಾಮುಖಿಯಾಗಲಿದ್ದು, ಈ ಮ್ಯಾಚ್​ನಲ್ಲಿ ಗೆದ್ದರೆ ಟೀಮ್ ಇಂಡಿಯಾ ಸೂಪರ್-8 ಹಂತಕ್ಕೇರುವುದು ಬಹುತೇಕ ಖಚಿತವಾಗಲಿದೆ.

ಇದನ್ನೂ ಓದಿ: ಮುಂದಿನ ವಿಶ್ವಕಪ್‌ನಲ್ಲಿ ವೈಭವ್ ಸೂರ್ಯವಂಶಿಗೆ ಇಲ್ಲ ಅವಕಾಶ..!

ಏಕೆಂದರೆ ಪಾಕಿಸ್ತಾನ್ ವಿರುದ್ಧದ ಪಂದ್ಯದ ಬಳಿಕ ಟೀಮ್ ಇಂಡಿಯಾ ನೆದರ್​ಲೆಂಡ್ಸ್ ವಿರುದ್ಧ ಆಡಬೇಕಿದೆ. ಹೀಗಾಗಿ ಈ ಮ್ಯಾಚ್​ಗೂ ಮುನ್ನ ಭಾರತ ತಂಡವು ದ್ವಿತೀಯ ಸುತ್ತಿಗೆ ಪ್ರವೇಶಿಸುವುದು ಬಹುತೇಕ ಖಚಿತವಾಗಲಿದೆ.

Source link

‘ದೊಡ್ಮನೆ ಹಬ್ಬ’ದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು? – Kannada News | I never Met Ashwini Gowda After Bigg Boss Kannada Says Gilli Nata

ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಹಾಗೂ ಗಿಲ್ಲಿ ನಟ ಸಾಕಷ್ಟು ಬಾರಿ ಕಿತ್ತಾಡಿಕೊಂಡಿದ್ದರು. ಆ ಬಳಿಕ ಗಿಲ್ಲಿ ನಟ ಅವರು ಕಪ್ ಗೆದ್ದ ಬಳಿಕ ಅಶ್ವಿನಿ ಗೌಡ ಅಸಮಾಧಾನ ಹೊರಹಾಕಿದರು. ಈಗ ಅಶ್ವಿನಿ ಗೌಡ ಹಾಗೂ ಗಿಲ್ಲಿ ಕಲರ್ಸ್​​ನ ‘ದೊಡ್ಮನೆ ಹಬ್ಬ’ದಲ್ಲಿ ಒಟ್ಟಿಗೆ ಭಾಗಿ ಆಗಿದ್ದರು. ಆದರೆ, ಪರಸ್ಪರ ಭೇಟಿ ಆಗಿಲ್ಲ ಎಂದು ಗಿಲ್ಲಿ ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IPL 2026: ಬೆಂಗಳೂರು ಯುನೈಟೆಡ್ ಆಗಲಿದೆಯಾ RCB?

Source link

ರಿಷಬ್ ಶೆಟ್ಟಿ-ಪ್ರಗತಿ ದಾಂಪತ್ಯಕ್ಕೆ 9 ವರ್ಷ; ಮುದ್ದಾದ ವಿಡಿಯೋ ಹಂಚಿಕೊಂಡ ದಂಪತಿ – Kannada News | Rishab Shetty And Pragathi Shetty Celebrate 9th Wedding Anniversary cute video is here

ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ದಾಂಪತ್ಯಕ್ಕೆ ಈಗ 9 ವರ್ಷ ತುಂಬಿದೆ. ಈ ಸಂದರ್ಭದಲ್ಲಿ ಮುದ್ದಾದ ವಿಡಿಯೋನ ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ವಿವಾಹ ಆದ ಸಂದರ್ಭದಲ್ಲಿನ ಪ್ರಯಾಣದಿಂದ ಈವರೆಗಿನ ಪ್ರಯಾಣದವರೆಗಿನ ವಿಡಿಯೋ ಇದೆ. ಈ ವಿಡಿಯೋ ಗಮನ ಸೆಳೆದಿದೆ. ದಂಪತಿಗೆ ಎಲ್ಲರೂ ಶುಭ ಕೋರುತ್ತಿದ್ದಾರೆ. ನೂರು ವರ್ಷ ಈ ಜೋಡಿ ಹೀಗೆಯೇ ಬಾಳಲಿ ಎಂದು ಹಾರೈಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ! – Kannada News | Video Recording of Women During Village Fair to Attract Rs 30000 Fine: Strict Warning in Nanjangud Goluru Festival

ಮೈಸೂರು, ಫೆಬ್ರವರಿ 10: ನಂಜನಗೂಡು ತಾಲೂಕು ಗೋಳೂರು ಗ್ರಾಮದಲ್ಲಿ ನಡೆಯಲಿರುವ ಗ್ರಾಮ ದೇವತೆ ಜಾತ್ರೆ ಹಿನ್ನೆಲೆ ಗ್ರಾಮಸ್ಥರು ಕಟ್ಟುನಿಟ್ಟಿನ ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಜಾತ್ರೆಯ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ, ವಿಡಿಯೋ ಚಿತ್ರೀಕರಣ ಹಾಗೂ ಕುಡಿದು ಗಲಾಟೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಲಾಗಿದೆ. ವಿಶೇಷವೆಂದರೆ, ಮಹಿಳೆಯರು ಹಾಗೂ ಯುವತಿಯರ ವಿಡಿಯೋ ತೆಗೆದರೆ ಅಥವಾ ಕುಡಿದು ಗಲಾಟೆ ಮಾಡಿದರೆ 30 ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ಡಂಗುರ ಸಾರಿಸಿದ್ದಾರೆ.

ಇಂದಿನಿಂದ (ಫೆಬ್ರವರಿ 10) ಮೂರು ದಿನಗಳ ಕಾಲ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ಸಂಬಂಧಿಸಿ ಗ್ರಾಮದಲ್ಲಿ ಡಂಗುರ ಬಾರಿಸಿ ಜಾಗೃತಿ ಮೂಡಿಸಲಾಗಿದೆ. ಗ್ರಾಮದ ನಿವಾಸಿ ಜವರ ಎಂಬುವರ ಮೂಲಕ ತಮಟೆ ಬಾರಿಸಿ ಗ್ರಾಮಾದ್ಯಂತ ಈ ನಿಯಮಗಳನ್ನು ಪ್ರಕಟಿಸಲಾಗಿದ್ದು, ಜಾತ್ರೆ ಶಾಂತಿಯುತವಾಗಿ ನಡೆಯಬೇಕು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Bengaluru Air Quality: ಇಂದೂ ರಾಜ್ಯದಲ್ಲಿ ಕಳಪೆ ಏರ್ ಕ್ವಾಲಿಟಿ; ಶಿವಮೊಗ್ಗ, ಬಳ್ಳಾರಿಯ ವಾಯು ಗುಣಮಟ್ಟ ಇನ್ನಷ್ಟು ಕುಸಿತ – Kannada News | Bangalore Air Pollution Crisis: Bengaluru, Manglore, Ballari and Shivamogga Air quality has gotten worse

ಇಂದೂ ರಾಜ್ಯದಲ್ಲಿ ಕಳಪೆ ಏರ್ ಕ್ವಾಲಿಟಿ; ಶಿವಮೊಗ್ಗ, ಬಳ್ಳಾರಿಯ ವಾಯು ಗುಣಮಟ್ಟ ಇನ್ನಷ್ಟು ಕುಸಿತ

ಬೆಂಗಳೂರು, ಫೆಬ್ರವರಿ 10: ಕೆಲ ದಿನಗಳಿಂದ ಏರಿಕೆಯಾಗುತ್ತಿದ್ದ ಶಿವಮೊಗ್ಗದ AQI (Bengaluru Air Quality) ಇಂದು ಹಠಾತ್ತನೆ ಕಳಪೆ ಮಟ್ಟ ತಲುಪಿದೆ. ನಿನ್ನೆ ತಕ್ಕ ಮಟ್ಟಿಗೆ ಸುಧಾರಿಸಿತೆಂದು ಎಂದುಕೊಂಡ ಬೆಂಗಳೂರಿನ ವಾಯು ಗುಣಮಟ್ಟವೀಗ ಮತ್ತೊಮ್ಮೆ ಕುಸಿತ ಕಂಡಿದೆ. ಅದರೊಂದಿಗೆ ಮಂಗಳೂರು, ಮೈಸೂರು ಮತ್ತು ಬೆಳಗಾವಿಯಲ್ಲೂ ಸಹ ಗಾಳಿಯ ಗುಣಮಟ್ಟ 170ಕ್ಕಿಂತ ಜಾಸ್ತಿಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 169ಕ್ಕೆ ತಲುಪಿದೆ. ಅದಕ್ಕಿಂತ ಹೆಚ್ಚಾಗಿ ಶಿವಮೊಗ್ಗದ ಏರ್ ಕ್ವಾಲಿಟಿ 183 ಆಗಿದೆ. ಜೊತೆಗೆ ಬಳ್ಳಾರಿಯ ವಾಯು ಗುಣಮಟ್ಟವೂ ಸಹ 173 ಆಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –169
  • ಮಂಗಳೂರು-174
  • ಮೈಸೂರು –164
  • ಬೆಳಗಾವಿ – 168
  • ಕಲಬುರ್ಗಿ-150
  • ಶಿವಮೊಗ್ಗ – 183
  • ಬಳ್ಳಾರಿ – 173
  • ಹುಬ್ಬಳ್ಳಿ- 148
  • ಉಡುಪಿ –164
  • ವಿಜಯಪುರ –151

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Video: ಜಾರ್ಜಿಯಾದ ಜನನಿಬಿಡ ರಸ್ತೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ, ಬಹು ವಾಹನಗಳಿಗೆ ಡಿಕ್ಕಿ – Kannada News | Small Plane Touches Down on Georgia Street, Crashes Into Parked Vehicles

ಜಾರ್ಜಿಯಾ, ಫೆಬ್ರವರಿ 10: ಜಾರ್ಜಿಯಾದ ಗೈನೆಸ್​​​ವಿಲ್ಲೆಯಲ್ಲಿ ಜನದಟ್ಟಣೆಯ ರಸ್ತೆಯಲ್ಲಿ ಸಣ್ಣ ವಿಮಾನವೊಂದನ್ನು ತುರ್ತು ಭೂಸ್ಪರ್ಶ ಮಾಡಲಾಗಿದ್ದು, ಇದರ ಪರಿಣಾಮ ವಿಮಾನವು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿರುವ ವಿಡಿಯೋ ವೈರಲ್ ಆಗಿದೆ. ಒಂದೇ ಎಂಜಿನ್ ಹೊಂದಿರುವ ವಿಮಾನವು ಜನನಿಬಿಡ ರಸ್ತೆಯಲ್ಲಿ ಅಪಘಾತಕ್ಕೀಡಾಗಿ ಮೂರು ವಾಹನಗಳಿಗೆ ಡಿಕ್ಕಿ ಹೊಡೆದಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ಬಳಿಕ ಎಂಜಿನ್​ನಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು. ವಿಮಾನವು ನಿಲ್ದಾಣಕ್ಕೆ ಹಿಂದಿರುಗಲು ಸಾಕಷ್ಟು ಶಕ್ತಿಯನ್ನು ಹೊಂದಿರಲಿಲ್ಲ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಫೆಡರಲ್ ವಿಮಾನಯಾನ ಆಡಳಿತ ಮತ್ತು ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿಯು ಘಟನೆಯ ಬ್ಗಗೆ ತನಿಖೆ ನಡೆಸುತ್ತಿವೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಬಾಲಿವುಡ್​ನ ಸ್ಟಾರ್ ನಿರ್ದೇಶಕನ ಜೊತೆ ಅಲ್ಲು ಅರ್ಜುನ್ ಸಿನಿಮಾ? – Kannada News | Allu Arjun’s Bollywood Debut with Sanjay Leela Bhansali? Pan India Star’s Next Big Move

‘ಪುಷ್ಪ 2’ ಚಿತ್ರದ ಮೂಲಕ ಅಲ್ಲು ಅರ್ಜುನ್ (Allu Arjun) ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿದ್ದಾರೆ. ಈ ಸಿನಿಮಾ ಭಾರತದ ಬಾಕ್ಸ್ ಆಫೀಸ್​ ಬಳಿಕ ಜಪಾನಿನ ಬಾಕ್ಸ್ ಆಫೀಸ್‌ನಲ್ಲಿ ಈಗಾಗಲೇ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದೆ. ಈಗ ಭಾರತೀಯ ಚಿತ್ರರಂಗವನ್ನು ಸ್ಟಾರ್ ನಿರ್ದೇಶಕರೊಂದಿಗೆ ಅವರು ಕೈಜೋಡಿಸಲಿದ್ದಾರೆ ಎಂದು ವರದಿ ಆಗಿದೆ.

ಅಲ್ಲು ಅರ್ಜುನ್ ಅವರು ತೆಲುಗು ನಿರ್ದೇಶಕರೊಂದಿಗೆ ಮಾತ್ರ ಕೆಲಸ ಮಾಡಿದ್ದಾರೆ. ಆದರೆ ಈಗ ಅವರು ನಿರ್ಧಾರಗಳನ್ನು ಬದಲಾಯಿಸುತ್ತಿದ್ದಾರೆ. ಈಗಾಗಲೇ ಅವರು ತಮಿಳು ನಿರ್ದೇಶಕ ಅಟ್ಲಿ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಈಗ ಅವರು ಒಪ್ಪಿಕೊಳ್ಳಿರುವ ಸಿನಿಮಾ ಸಂಚಲನ ಸೃಷ್ಟಿಸಿದೆ.

‘ಪುಷ್ಪ’ ಚಿತ್ರದ ನಂತರ ಅಲ್ಲು ಅರ್ಜುನ್ ಪ್ಯಾನ್ ಇಂಡಿಯಾ ತಾರೆಯಾದರು. ಹಿಂದಿ ಬೆಲ್ಟ್‌ನಲ್ಲಿ ಅವರ ಕ್ರೇಜ್ ಹೆಚ್ಚಿದೆ. ಅವರು ಹಲವಾರು ದೊಡ್ಡ ಯೋಜನೆಗಳಲ್ಲಿ ನಿರತರಾಗಿದ್ದಾರೆ. ಆದಾಗ್ಯೂ, ಕಳೆದ ಕೆಲವು ದಿನಗಳಲ್ಲಿ, ಅಲ್ಲು ಅರ್ಜುನ್ ಬಾಲಿವುಡ್‌ಗೆ ನೇರವಾಗಿ ಪ್ರವೇಶ ಮಾಡುತ್ತಿದ್ದಾರೆ ಎಂಬ ವರದಿಗಳಿವೆ. ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ನಿರ್ದೇಶನದಲ್ಲಿ ಅಲ್ಲು ಅರ್ಜುನ್ ತಮ್ಮ ಮೊದಲ ಹಿಂದಿ ಚಿತ್ರವನ್ನು ಮಾಡಲಿದ್ದಾರೆ ಎಂಬ ಮಾಹಿತಿ ಹರಿದಾಡಿದೆ. ಈ ಪ್ರತಿಷ್ಠಿತ ಯೋಜನೆಯ ಸ್ಕ್ರಿಪ್ಟ್ ಈಗಾಗಲೇ ಲಾಕ್ ಆಗಿದೆ ಎಂದು ಹೇಳಲಾಗುತ್ತಾ ಇದೆ.

ಸಂಜಯ್ ಲೀಲಾ ಬನ್ಸಾಲಿ ಭವ್ಯ ದೃಶ್ಯಗಳನ್ನು ಕಟ್ಟಲ್ಲು ಹೆಸರುವಾಸಿ. ಅವರು ಐತಿಹಾಸಿಕ ಸಿನಿಮಾ ನಿರ್ಮಿಸುವಲ್ಲಿ ನಿಪುಣರು. ಅಂತಹ ನಿರ್ದೇಶಕರು ಅಲ್ಲು ಅರ್ಜುನ್ ಜೊತೆ ಸಿನಿಮಾ ಮಾಡುತ್ತಿರುವುದು ವಿಶೇಷ. ಈಗ ನೇರ ಹಿಂದಿ ಚಿತ್ರದೊಂದಿಗೆ ಅಲ್ಲಿ ತಮ್ಮ ಮಾರುಕಟ್ಟೆಯನ್ನು ಮತ್ತಷ್ಟು ವಿಸ್ತರಿಸಲು ಯೋಜಿಸುತ್ತಿದ್ದಾರೆ. ಈ ಯೋಜನೆಯ ಬಗ್ಗೆ ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆಯಿದೆ ಎಂದು ಚಲನಚಿತ್ರ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ದುಬೈನಲ್ಲಿ ಸಹೋದರನ ಜೊತೆ ಅದ್ಧೂರಿ ಪಾರ್ಟಿ ಮಾಡಿದ ಅಲ್ಲು ಅರ್ಜುನ್

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಬಳಿಕ ಹೆಚ್ಚು ಎಚ್ಚರಿಕೆಯಿಂದ ಸಿನಿಮಾ ಮಾಡುತ್ತಿದ್ದಾರೆ. ಹಲವು ಸ್ಟಾರ್​​ಗಳ ಜೊತೆ ಅವರು ಕೈ ಜೋಡಿಸುತ್ತಾ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 8:17 am, Tue, 10 February 26

Source link

ಮಂಗಗಳ ದಾಳಿಯಿಂದ ತಪ್ಪಿಸಿಕೊಳ್ಳುವಾಗ ತಾರಸಿಯಿಂದ ಕೆಳಗೆ ಬಿದ್ದು ವೃದ್ಧೆ ಸಾವು – Kannada News | Elderly Woman Dies After Falling From Terrace While Fleeing Monkey Attack in Uttar Pradesh

ಅಮ್ರೋಹಾ, ಫೆಬ್ರವರಿ 10: ಮಂಗ(Monkey)ಗಳ ದಾಳಿಯಿಂದ ತಪ್ಪಿಸಿಕೊಳ್ಳಲು ವೃದ್ಧೆಯೊಬ್ಬರು ಛಾವಣಿಯಿಂದ ಹಾರಿ ಪ್ರಾಣಬಿಟ್ಟಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ. ಈ ದುರಂತ ಘಟನೆ ಆದಂಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪಾಪ್ಸರಾ ಗ್ರಾಮದಲ್ಲಿ ಸಂಭವಿಸಿದೆ.  ವರದಿಗಳ ಪ್ರಕಾರ, ಪಪ್ಸರಾ ಗ್ರಾಮದ ನಿವಾಸಿ ಮುನ್ನಾ ಎಂಬುವವರು ತಮ್ಮ ಮನೆಯ ಛಾವಣಿಯ ಮೇಲೆ ಕುಳಿತಿದ್ದರು. ಮಧ್ಯಾಹ್ನ 2 ಗಂಟೆ ಸುಮಾರಿಗೆ ಪರಸ್ಪರ ಜಗಳವಾಡುತ್ತಿದ್ದ ಕೋತಿಗಳ ಗುಂಪು ಇದ್ದಕ್ಕಿದ್ದಂತೆ ಛಾವಣಿಯ ಮೇಲೆ ಓಡಿ ಬಂದಿದ್ದವು, ಆಗ ಮಹಿಳೆ ಭಯಭೀತರಾಗಿ ಎದ್ದು ನಿಂತಿದ್ದರು.

ಅಷ್ಟರಲ್ಲಿ ಕೋತಿಗಳು ಅವರ ಮೇಲೆ ದಾಳಿ ಮಾಡಿದ್ದವು, ಗಾಬರಿಗೊಂಡ ಮಹಿಳೆ ಚಮೇಲಿ ಓಡಲು ಪ್ರಯತ್ನಿಸಿದ್ದಾರೆ, ಸಮತೋಲನ ಕಳೆದುಕೊಂಡು ನೇರವಾಗಿ ಕೆಳಗೆ ಬಿದ್ದಿದ್ದಾರೆ. ಬಿದ್ದ ಪರಿಣಾಮ ಅವರ ದೇಹದ ಹಲವು ಭಾಗಗಳು ಮತ್ತು ತಲೆಗೆ ಗಂಭೀರ ಗಾಯಗಳಾಗಿದ್ದವು. ಅವರ ಕುಟುಂಬವು ಕೂಡಲೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದಿತ್ತು, ಆದರೆ ಮಾರ್ಗಮಧ್ಯದಲ್ಲೇ ಅವರು ಮೃತಪಟ್ಟಿದ್ದರು.

ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ವಿಷಯದ ಬಗ್ಗೆ ಮಾಹಿತಿ ಪಡೆದರು. ಆದರೆ ಕುಟುಂಬವು ಯಾವುದೇ ಕಾನೂನು ಕ್ರಮ ಕೈಗೊಳ್ಳಲು ನಿರಾಕರಿಸಿತು. ಅಗತ್ಯ ವಿಧಿವಿಧಾನಗಳನ್ನು ಪೂರ್ಣಗೊಳಿಸಿದ ನಂತರ, ಪೊಲೀಸರು ಹಿಂತಿರುಗಿದರು.

ಮತ್ತಷ್ಟು ಓದಿ: ಕ್ರಿಕೆಟ್ ಆಡುತ್ತಿದ್ದವರಿಗೆ ಕ್ವಾಟ್ಲೆ ಕೊಟ್ಟ ಮಂಗ: ದಿಕ್ಕಾಪಾಲಾಗಿ ಓಡಿದ ಯುವಕರು

ಮತ್ತೊಂದು ಘಟನೆ
ಮುಂಬೈನ ವಿಲೇ ಪಾರ್ಲೆ (ಪೂರ್ವ) ಪ್ರದೇಶದ ಬಹುಮಹಡಿ ಕಟ್ಟಡದಲ್ಲಿ ಸೋಮವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿತ್ತು. ಈ ದುರಂತ ಘಟನೆಯಲ್ಲಿ 63 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಲೇ ಪಾರ್ಲೆಯ ಸುವಿಧಾ ಪರ್ಲ್ ಕಟ್ಟಡದಲ್ಲಿ ಈ ಘಟನೆ ಸಂಭವಿಸಿದೆ.

ಅಧಿಕಾರಿಗಳ ಪ್ರಕಾರ, ಬೆಳಗ್ಗೆ 9.51 ರ ಸುಮಾರಿಗೆ ಕಟ್ಟಡದ 13 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೊಗೆ ಮತ್ತು ಜ್ವಾಲೆಯ ದಟ್ಟಣೆ ವೇಗವಾಗಿ ಹರಡಿತ್ತು, ಇದು ನಿವಾಸಿಗಳಲ್ಲಿ ಭಯಭೀತಿಯನ್ನುಂಟುಮಾಡಿತು. ಬೆಂಕಿಯ ಬಗ್ಗೆ ಮಾಹಿತಿ ಪಡೆದ ತಕ್ಷಣ, ಕನಿಷ್ಠ ಐದು ಅಗ್ನಿಶಾಮಕ ದಳದ ವಾಹನಗಳು ತಕ್ಷಣ ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆಗಳನ್ನು ಪ್ರಾರಂಭಿಸಿದವು. ಗಣನೀಯ ಪ್ರಯತ್ನದ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 8:01 am, Tue, 10 February 26

Source link

ಪಾಕಿಸ್ತಾನದ 7 ಬೇಡಿಕೆಗಳಲ್ಲಿ ಮೂರನ್ನು ತಿರಸ್ಕರಿಸಿದ ಐಸಿಸಿ – Kannada News | ICC has rejected several major conditions set by the Pakistan Cricket Board

ಟಿ20 ವಿಶ್ವಕಪ್​ನಲ್ಲಿ ಭಾರತದ ವಿರುದ್ಧ ಪಂದ್ಯವಾಡಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಕೆಲ ಷರತ್ತುಗಳನ್ನು ಮುಂದಿಟ್ಟಿದ್ದರು. ಈ ಬೇಡಿಕೆಗಳಲ್ಲಿ ಕೆಲವೊಂದನ್ನು ಐಸಿಸಿ ತಿರಸ್ಕರಿಸಿದೆ. ಅಂದರೆ ಐಸಿಸಿ ಅಡಿಯಲ್ಲಿ ಬರದ ವಿಷಯಗಳ ಬಗ್ಗೆ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದಿಲ್ಲ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿಳಿಸಿದೆ. ಇದಾಗ್ಯೂ ಕೆಲ ಬೇಡಿಕೆಗಳಿಗೆ ಒಪ್ಪಿಗೆ ಸೂಚಿಸಿರುವ ಸಾಧ್ಯತೆಯಿದೆ.

ಪಿಸಿಬಿಯ ಬೇಡಿಕೆಗಳೇನು?

  1. ಆದಾಯ ಹೆಚ್ಚಳ: ಐಸಿಸಿಯಿಂದ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಆದಾಯವನ್ನು ಹೆಚ್ಚಿಸಬೇಕೆಂದು ಪಿಸಿಬಿ ಬೇಡಿಕೆಯಿಟ್ಟಿದೆ. ಈ ಬೇಡಿಕೆಗೆ ಸಮ್ಮತಿಸುವುದಾದರೆ ಮಾತ್ರ ಭಾರತದ ವಿರುದ್ಧ ಕಣಕ್ಕಿಳಿಯುವುದಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ತಿಳಿಸಿದೆ.
  2. ದ್ವಿಪಕ್ಷೀಯ ಸರಣಿ: ಭಾರತ ಮತ್ತು ಪಾಕಿಸ್ತಾನ್ ನಡುವಣ ದ್ವಿಪಕ್ಷೀಯ ಸರಣಿಯನ್ನು ಮತ್ತೆ ಆರಂಭಿಸಬೇಕೆಂದು ಪಿಸಿಬಿ ಆಗ್ರಹಿಸಿದೆ. ಇದಕ್ಕಾಗಿ ಐಸಿಸಿ ಮುಖ್ಯ ಪಾತ್ರವಹಿಸಬೇಕು. ಈ ಮೂಲಕ ಭಾರತ ಮತ್ತು ಪಾಕಿಸ್ತಾನ್ ನಡುವಣ ಸರಣಿಯನ್ನು ಪುನಃಸ್ಥಾಪಿಸುವ ಭರವಸೆ ನೀಡಬೇಕೆಂದು ಪಿಸಿಬಿ ಆಗ್ರಹಿಸಿದೆ.
  3. ಹ್ಯಾಂಡ್​ಶೇಕ್: ಕ್ರೀಡಾ ಕ್ಷೇತ್ರದಲ್ಲಿ ರಾಜಕೀಯ ಮಾಡಬಾರದು. ಪಂದ್ಯಗಳ ವೇಳೆ ಹ್ಯಾಂಡ್​ಶೇಕ್ ಪ್ರೋಟೋಕಾಲ್​ ಜಾರಿ ಮಾಡಬೇಕು. ಈ ಪ್ರೊಟೋಕಾಲ್​ ಪ್ರಕಾರ ಭಾರತ ಮತ್ತು ಪಾಕಿಸ್ತಾನ್ ಆಟಗಾರರು ಹ್ಯಾಂಡ್​ಶೇಕ್ ಮಾಡುವುದನ್ನು ಕಡ್ಡಾಯ ಮಾಡಬೇಕೆಂದು ಪಿಸಿಬಿ ಬೇಡಿಕೆಯಿಟ್ಟಿದೆ.
  4. ತ್ರಿಕೋನ ಸರಣಿ: ಭಾರತ, ಪಾಕಿಸ್ತಾನ್ ಮತ್ತು ಬಾಂಗ್ಲಾದೇಶ್ ಒಳಗೊಂಡಂತೆ ತ್ರಿಕೋನ ಸರಣಿಯನ್ನು ಆಯೋಜಿಸಲು ಅನುವು ಮಾಡಿಕೊಡಬೇಕೆಂದು ಪಿಸಿಬಿ ಆಗ್ರಹಿಸಿದೆ.
  5. ಬಾಂಗ್ಲಾದೇಶ್ ಪ್ರವಾಸ: ಭಾರತ ತಂಡವು 2026 ರ ನಂತರ ಬಾಂಗ್ಲಾದೇಶ್ ಪ್ರವಾಸ ಮಾಡಬೇಕೆಂದು ಪಿಸಿಬಿ ಹಾಗೂ ಬಿಸಿಬಿ ಆಗ್ರಹಿಸಿದೆ.
  6. ಬಾಂಗ್ಲಾದೇಶ್​ಗೆ ದಂಡ ವಿಧಿಸಬಾರದು: ಟಿ20 ವಿಶ್ವಕಪ್​ನಿಂದ ಹಿಂದೆ ಸರಿದಿರುವ ಬಾಂಗ್ಲಾದೇಶ್ ಮೇಲೆ ಯಾವುದೇ ನಿರ್ಬಂಧ ಹೇರಬಾರದು. ಹಾಗೆಯೇ ಯಾವುದೇ ದಂಡ ವಿಧಿಸಬಾರದು ಎಂದು ಪಿಸಿಬಿ ಐಸಿಸಿಯನ್ನು ಆಗ್ರಹಿಸಿದೆ.
  7. ಐಸಿಸಿ ಟೂರ್ನಿ ಆತಿಥ್ಯದ ಹಕ್ಕು: ಕಳೆದ ವರ್ಷದ ಮಹಿಳಾ ಟಿ 20 ವಿಶ್ವಕಪ್ ಅನ್ನು ಬಾಂಗ್ಲಾದೇಶದಿಂದ ದುಬೈಗೆ ಸ್ಥಳಾಂತರಿಸಲಾಗಿತ್ತು. ಹೀಗಾಗಿ ಐಸಿಸಿ ಬಾಂಗ್ಲಾದೇಶಕ್ಕೆ ಪರಿಹಾರವಾಗಿ ಬೇರೊಂದು ಪಂದ್ಯಾವಳಿಯ ಆತಿಥ್ಯ ನೀಡಬೇಕು ಎಂದು ಪಿಸಿಬಿ-ಬಿಸಿಬಿ ಆಗ್ರಹಿಸಿದೆ.

ಮೂರು ಬೇಡಿಕೆಗಳು ರಿಜೆಕ್ಟ್​:

ಪ್ರಸ್ತುತ ಮಾಹಿತಿ ಪ್ರಕಾರ ಇಂಟರ್​ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಮುಂದಿಟ್ಟ ಬೇಡಿಕೆಗಳಲ್ಲಿ ಮೂರನ್ನು ತ್ರಿಪಕ್ಷೀಯ ಸಭೆಯಲ್ಲೇ ತಿರಸ್ಕರಿಸಿದೆ. ಇಲ್ಲಿ ರಿಜೆಕ್ಟ್ ಆದ ಬೇಡಿಕೆಗಳಾವುವು ಎಂದು ನೋಡುವುದಾದರೆ…

  1. ದ್ವಿಪಕ್ಷೀಯ ಸರಣಿ: ಭಾರತ ಮತ್ತು ಪಾಕಿಸ್ತಾನ್ ನಡುವಣ ದ್ವಿಪಕ್ಷೀಯ ಸರಣಿಯನ್ನು ಮತ್ತೆ ಆರಂಭಿಸಬೇಕೆಂಬ ಪಾಕ್ ಕ್ರಿಕೆಟ್ ಮಂಡಳಿಯ ಕೋರಿಕೆಯನ್ನು ಐಸಿಸಿ ತಿರಸ್ಕರಿಸಿದೆ. ಈ ಎರಡು ದೇಶಗಳ ವಿಚಾರ. ಉಭಯ ದೇಶಗಳ ಸರ್ಕಾರ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕಿದ್ದು, ಇದರಲ್ಲಿ ಐಸಿಸಿಗೆ ಯಾವುದೇ ಅಧಿಕಾರವಿಲ್ಲ ಎಂದು ತಿಳಿಸಿದೆ.
  2. ಬಾಂಗ್ಲಾದೇಶ್ ಪ್ರವಾಸ: ಭಾರತ ತಂಡ ಯಾವ ದೇಶದ ವಿರುದ್ಧ ಸರಣಿ ಆಡಬೇಕೆಂದು ನಿರ್ಧರಿಸಲು ಐಸಿಸಿಗೆ ಯಾವುದೇ ಹಕ್ಕಿಲ್ಲ. ಹೀಗಾಗಿ ಇದನ್ನು ಸಹ ಎರಡು ಮಂಡಳಿಗಳು ಕೂತು ಚರ್ಚಿಸಬೇಕಾದ ವಿಷಯ. ಹೀಗಾಗಿ ಈ ವಿಷಯದಲ್ಲೂ ಐಸಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದಿಲ್ಲ ಎಂದು ತಿಳಿಸಿದೆ.
  3. ತ್ರಿಕೋನ ಸರಣಿ: ಭಾರತ, ಪಾಕಿಸ್ತಾನ್ ಮತ್ತು ಬಾಂಗ್ಲಾದೇಶ್ ಒಳಗೊಂಡಂತೆ ತ್ರಿಕೋನ ಸರಣಿಯನ್ನು ಆಯೋಜಿಸುವುದು ಮೂರು ಕ್ರಿಕೆಟ್ ಮಂಡಳಿಗೆ ಬಿಟ್ಟ ವಿಷಯ. ಇದರಲ್ಲೂ ನಮಗೆ ಯಾವುದೇ ತೀರ್ಮಾನ ಕೈಗೊಳ್ಳಲಾಗುವುದಿಲ್ಲ ಎಂದು ಐಸಿಸಿ ಹೇಳಿದೆ.

ಇದಾಗ್ಯೂ ಪಂದ್ಯದ ವೇಳೆ ಹ್ಯಾಂಡ್​ ಶೇಕ್ ಮಾಡುವುದನ್ನು ಕಡ್ಡಾಯಗೊಳಿಸಲು ಐಸಿಸಿ ನಿರ್ಧರಿಸಿದೆ ಎಂದು ಕೆಲ ವರದಿಯಾಗಿದೆ. ಹಾಗೆಯೇ ಟಿ20 ವಿಶ್ವಕಪ್​ನಿಂದ ಹೊರಗುಳಿದಿರುವ ಬಾಂಗ್ಲಾದೇಶ್​ಗೆ ಯಾವುದೇ ದಂಡ ವಿಧಿಸುವ ಸಾಧ್ಯತೆಯಿಲ್ಲ.

ಇದನ್ನೂ ಓದಿ: ಸೌತ್ ಆಫ್ರಿಕಾ ದಾಂಡಿಗರ ಆರ್ಭಟ: ವಿಶ್ವಕಪ್‌ನಲ್ಲಿ ವಿಶ್ವ ದಾಖಲೆ

ಅದೇ ರೀತಿ ಐಸಿಸಿ ಟೂರ್ನಿಯ ಆತಿಥ್ಯ ಹಕ್ಕನ್ನು ಬೇಡಿಕೆಯಿಟ್ಟಿರುವ ಕಾರಣ ಮುಂಬರುವ ಅಂಡರ್-19 ವಿಶ್ವಕಪ್ ಬಾಂಗ್ಲಾದೇಶ್​ನಲ್ಲಿ ನಡೆಯುವ ಸಾಧ್ಯತೆಯಿದೆ.  ಇನ್ನು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ನ ಆದಾಯ ಹೆಚ್ಚಳ ಬಗ್ಗೆ ಐಸಿಸಿ ಮುಂದಿನ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಯಿದೆ.

Source link

Exit mobile version