Headlines

ಸ್ಯಾಮ್‌ಸಂಗ್ ಗ್ಯಾಲಕ್ಸಿ F70 ಪ್ರೊ 5G ಭಾರತದಲ್ಲಿ ಬಿಡುಗಡೆ: ಬೆಲೆ 25,999 ರೂನಿಂದ ಆರಂಭ; ಬಲವಾದ ಬ್ಯಾಟರಿ, ಉತ್ತಮ ಡಿಸ್​ಪ್ಲೇ ಇರುವ ಫೋನ್ – Kannada News | Samsung Galaxy F70 Pro smartphone launched, know its price, battery, camera, features and other details

ಸ್ಯಾಮ್‌ಸಂಗ್ ಗ್ಯಾಲಕ್ಸಿ F70 ಪ್ರೊImage Credit source: samsung.com ನವದೆಹಲಿ, ಆಗಸ್ಟ್ 3: ಸ್ಯಾಮ್​ಸಂಗ್ ಕಂಪನಿಯ ಹೊಚ್ಚಹೊಸ ಸ್ಮಾರ್ಟ್​ಫೋನ್ ಮಾಡಲ್ ಗ್ಯಾಲಕ್ಸಿ F70 ಪ್ರೊ 5G (Samsung Galaxy F70 Pro 5G) ಭಾರತದ ಮಾರುಕಟ್ಟೆಗೆ ಇಂದು ಅಧಿಕೃತವಾಗಿ ಬಿಡುಗಡೆಯಾಗಿದೆ. ಬಲವಾದ ಬ್ಯಾಟರಿ, ಉತ್ತಮ ಡಿಸ್‌ಪ್ಲೇ ಹಾಗೂ 6 ವರ್ಷಗಳ ಸಾಫ್ಟ್‌ವೇರ್ ಬೆಂಬಲದೊಂದಿಗೆ ಈ ಫೋನ್ ಮಾರುಕಟ್ಟೆಗೆ ಬಂದಿದೆ. ಫ್ಲಿಪ್​ಕಾರ್ಟ್ ಮತ್ತು ಸ್ಯಾಮ್​ಸಂಗ್​ನ ವೆಬ್​​ಸೈಟ್​ನಲ್ಲಿ ಈ ಸ್ಮಾರ್ಟ್​ಫೋನ್ ಇವತ್ತಿನಿಂದಲೇ ಖರೀದಿಗೆ ಲಭ್ಯ ಇದೆ. ಇದರ ಮೂರು ವೇರಿಯೆಂಟ್​ಗಳು…

Read More

‘ಈ ಅಯೋಗ್ಯನ ಬಗ್ಗೆ ಬಿಟ್ಟುಬಿಡಿ’; ಸಿನಿಮಾ ಬಗ್ಗೆ ಕೇಳಿದ್ದಕ್ಕೆ ನೇರವಾಗಿ ಹೇಳಿದ ಅಭಿಷೇಕ್ ಅಂಬರೀಷ್ – Kannada News | Abishek Ambareesh Labels Himself Ayogya at Movie Event; Video Goes Viral on Social Media

ಅಭಿಷೇಕ್ ಅಂಬರೀಷ್ (Abhishek Ambareesh) ಇತ್ತೀಚೆಗೆ ಸೈಲೆಂಟ್ ಆಗಿದ್ದಾರೆ. ಖ್ಯಾತ ನಟ ಅಂಬರೀಷ್ ಅವರ ಮಗನಾಗಿದ್ದರೂ ಸಿನಿಮಾ ರಂಗದಲ್ಲಿ ಅವರು ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ. ಈಗ ಅವರು ತಮ್ಮನ್ನು ತಾವು ಅಯೋಗ್ಯ ಎಂದು ಕರೆದುಕೊಂಡಿದ್ದಾರೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಚರ್ಚೆಗೆ ಕಾರಣ ಆಗಿದೆ. ಅನೇಕರು ಈ ವಿಡಿಯೋ ಹಂಚಿಕೊಳ್ಳುತ್ತಾ ಇದ್ದಾರೆ. ಅಭಿಷೇಕ್ ಅವರು ಮೊದಲು ನಟಿಸಿದ್ದು 2019ರ ‘ಅಮರ್’ ಸಿನಿಮಾದಲ್ಲಿ. ಈ ಚಿತ್ರ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತು. ಆ ಬಳಿಕ 2023ರಲ್ಲಿ…

Read More

ಬಿಹಾರದ ಸಹರ್ಸಾದಲ್ಲಿ ಪ್ರಯಾಣಿಕರ ರೈಲಿನಲ್ಲಿ ಅಗ್ನಿ ಅವಘಡ, ಪ್ರಯಾಣಿಕರು ಸುರಕ್ಷಿತ – Kannada News | Passengers Escape Unhurt After Early Morning Fire Breaks Out on Bihar Train

ಸಹರ್ಸಾ, ಆಗಸ್ಟ್​ 03: ಬಿಹಾರದ ಸಹರ್ಸಾದಲ್ಲಿ ಇಂದು ಬೆಳಗಿನ ಜಾವ ಪ್ರಯಾಣಿಕರ ರೈಲೊಂದರಲ್ಲಿ ಭೀಕರ ಅಗ್ನಿ ಅವಘಡ(Fire Accident) ಸಂಭವಿಸಿದೆ. ಅದೃಷ್ಟವಶಾತ್ ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ತಕ್ಷಣವೇ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಮಷ್ಟಿಪುರ ಮತ್ತು ಸಹರ್ಸಾ ನಡುವೆ ಚಲಿಸುವ ‘ರೈಲು ಸಂಖ್ಯೆ 63344 ಸಿಮ್ರಿ ಭಕ್ತಿಯಾರ್ಪುರ್ ರೈಲು ನಿಲ್ದಾಣದಲ್ಲಿ ನಿಂತಿದ್ದಾಗ, ಬೆಳಗಿನ ಜಾವ ಸುಮಾರು 3 ಗಂಟೆಗೆ ರೈಲಿನ ಎಂಜಿನ್ ಮತ್ತು ಅದನ್ನು ಹೊಂದಿಕೊಂಡಿದ್ದ ಬೋಗಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿಕೊಂಡಾಗ ಹೆಚ್ಚಿನ…

Read More

ನಾನಾ ಪಟೋಲೆ ಪಾದ ತೊಳೆಯುವ ವಿಡಿಯೋ ವೈರಲ್: ಬಿಜೆಪಿ ವಾಗ್ದಾಳಿ, ತಿರುಗೇಟು ನೀಡಿದ ಕಾಂಗ್ರೆಸ್ ನಾಯಕ – Kannada News | Nana Patole’s Foot Washing Video Ignites Political Row in Maharashtra

ಮುಂಬೈ, ಆಗಸ್ಟ್​ 03: ಮಹಾರಾಷ್ಟ್ರ (Maharashtra)ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸ್ಪೀಕರ್ ನಾನಾ ಪಟೋಲೆ (Nana Patole) ಅವರ ಪಾದಗಳನ್ನು ಇಬ್ಬರು ವ್ಯಕ್ತಿಗಳು ತೊಳೆದು ಹೂವುಗಳನ್ನು ಹಾಕುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ. ಈ ಘಟನೆಯನ್ನು ಬಿಜೆಪಿ ಇದೇ ಕಾಂಗ್ರೆಸ್ ಸಂಸ್ಕೃತಿ ಎಂದು ಲೇವಡಿ ಮಾಡಿದ್ದರೆ, ನಾನಾ ಪಟೋಲೆ ಅವರು ಬಿಜೆಪಿಯ ಆಪಾದನೆಗಳನ್ನು ತಳ್ಳಿಹಾಕಿದ್ದಾರೆ. ವಿಡಿಯೋದಲ್ಲಿ ನಾನಾ ಪಟೋಲೆ ಅವರು ಸೋಫಾದಲ್ಲಿ ಕುಳಿತಿದ್ದು, ಇಬ್ಬರು ಯುವಕರು ಅವರ…

Read More

ಟೀಮ್ ಇಂಡಿಯಾಗೆ ಜಮ್ಮು-ಕಾಶ್ಮೀರ ವೇಗಿ ಎಂಟ್ರಿ

ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯಿಂದ ಟೀಮ್ ಇಂಡಿಯಾ ವೇಗಿ ಜಸ್​ಪ್ರಿತ್ ಬುಮ್ರಾ ಹೊರಗುಳಿದಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಬುಮ್ರಾ ಅವರ ಬದಲಿಗೆ ಇದೀಗ ಜಮ್ಮು-ಕಾಶ್ಮೀರದ ವೇಗಿ ಆಕಿಬ್ ನಬಿ ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡಲಾಗಿದೆ. (PC: BCCI) ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ವೇಳೆ ಎಡಗಾಲಿನ ಮಂಡಿ ಗಾಯಕ್ಕೆ ತುತ್ತಾಗಿದ್ದ ಜಸ್​ಪ್ರೀತ್ ಬುಮ್ರಾ ಅವರು ಇನ್ನೂ ಸಂಪೂರ್ಣ ಗುಣಮುಖರಾಗಿಲ್ಲ. ಹೀಗಾಗಿ ಮುಂಬರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಅವರಿಗೆ ವಿಶ್ರಾಂತಿ ನೀಡಿ, ಭಾರತ…

Read More

ಕೊಡಗಿನಲ್ಲಿ ಮುಂದುವರಿದ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ! – Kannada News | Kodagu Rain Update: Bhagamandala Triveni Sangama Submerged, Roads Cut Off Amid Heavy Rainfall

ಕೊಡಗು, ಆಗಸ್ಟ್ 03: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಡಿಕೇರಿ ತಾಲೂಕಿನ ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತಗೊಂಡಿದ್ದು, ಪ್ರವಾಹದ ಕಾರಣ ಸ್ನಾನಘಟ್ಟದಲ್ಲಿ ಪಿಂಡಪ್ರದಾನ ಕಾರ್ಯಕ್ಕೆ ಅಡ್ಡಿಯುಂಟಾಗಿದೆ. ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ವಿರಾಜಪೇಟೆ ತಾಲೂಕಿನ ಕರಡಿಗೋಡು ಗ್ರಾಮದ ರಸ್ತೆ ಹಾಗೂ ಮಡಿಕೇರಿ ತಾಲೂಕಿನ ಹೊದವಾಡ ರಸ್ತೆ ಸಂಪೂರ್ಣ ಮುಳುಗಡೆಯಾಗಿವೆ. ಮೂರ್ನಾಡು-ನಾಪೋಕ್ಲು ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸಾರ್ವಜನಿಕರು ಮತ್ತು ಪ್ರಯಾಣಿಕರು ತೀವ್ರ ಪರದಾಡುವಂತಾಗಿದೆ. ಜಿಲ್ಲೆಯ ಹಲವೆಡೆ ನೆರೆ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಂಚಾರ ಹಾಗೂ ದಿನನಿತ್ಯದ…

Read More

ಬರೋಬ್ಬರಿ 171… ಈ ಬಾರಿ ಅತ್ಯಧಿಕ ಪದಕ ಗೆದ್ದ ದೇಶ ಯಾವುದು ಗೊತ್ತಾ? – Kannada News | Commonwealth games 2026 Medal tally Full List

ವಿಶ್ವದ ಪ್ರಮುಖ ಹಾಗೂ ಪ್ರತಿಷ್ಠಿತ ಕ್ರೀಡಾಕೂಟಗಳಲ್ಲಿ ಒಂದಾದ ಕಾಮನ್​ವೆಲ್ತ್ ಗೇಮ್ಸ್ 2026 ಅದ್ಧೂರಿಯಾಗಿ ಮುಕ್ತಾಯಗೊಂಡಿದೆ. ಸ್ಕಾಟ್​ಲ್ಯಾಂಡ್​ನಲ್ಲಿ ಜುಲೈ 23 ರಿಂದ ಆಗಸ್ಟ್ 2 ರವರೆಗೆ ನಡೆದ ಈ ಜಾಗತಿಕ ಕ್ರೀಡಾಕೂಟದಲ್ಲಿ, ಜಗತ್ತಿನ ನಾನಾ ರಾಷ್ಟ್ರಗಳ ಸಾವಿರಾರು ಅಥ್ಲೀಟ್‌ಗಳು ತಮ್ಮ ಅದ್ಭುತ ಕ್ರೀಡಾ ಕೌಶಲ್ಯವನ್ನು ಪ್ರದರ್ಶಿಸಿದರು. ಇನ್ನು ಇಡೀ ಕ್ರೀಡಾಕೂಟದಲ್ಲಿ ಎಂದಿನಂತೆ ಈ ಬಾರಿಯೂ ಆಸ್ಟ್ರೇಲಿಯಾ ತನ್ನ ಸಾಂಪ್ರದಾಯಿಕ ಪ್ರಾಬಲ್ಯವನ್ನು ಮುಂದುವರಿಸಿ ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿರುವುದು ವಿಶೇಷ. ಆಸ್ಟ್ರೇಲಿಯಾ ಅಧಿಪತಿ: ಕಾಮನ್​ವೆಲ್ತ್ ಗೇಮ್ಸ್ ಇತಿಹಾಸದಲ್ಲೇ ಅತ್ಯಧಿಕ ಪದಕ…

Read More

ನಾಮಿನಿ ಇಲ್ಲದೇ ಹೋದ್ರೆ ಮೃತ ವ್ಯಕ್ತಿಯ ಹೆಸರಿನಲ್ಲಿಟ್ಟ ಎಫ್‌ಡಿ ಹಣವು ಯಾರ ಕೈ ಸೇರುತ್ತದೆ? – Kannada News | Fixed Deposit: If you have these documents, the fixed deposit money will reach you even without a nominee….

ಕೆಲವರು ತಮ್ಮ ದುಡಿಮೆಯಲ್ಲಿ ಅಲ್ಪ ಸ್ವಲ್ಪ ಹಣವನ್ನು ಉಳಿಸಿ ಸ್ಥಿರ ಠೇವಣಿ (fixed deposit) ಇಡುತ್ತಾರೆ. ಈ ಹೂಡಿಕೆಯಿಂದ ಖಚಿತ ಆದಾಯ, ಸುರಕ್ಷಿತ ಬಂಡವಾಳ ಹಾಗೂ ಸಾಲದ ಸೌಲಭ್ಯದಂತಹ ಪ್ರಯೋಜನಗಳನ್ನು ಪಡೆಯಬಹುದು. ಒಂದು ವೇಳೆ ಠೇವಣಿ ಇಟ್ಟ ಹಣಕ್ಕೆ ನಾಮಿನಿ ಹೆಸರನ್ನು ಸೇರಿಸದೇ ಹೋದರೆ ಆ ಮೊತ್ತವು ಯಾರ ಕೈ ಸೇರುತ್ತದೆ ಎಂಬ ಗೊಂದಲವಿರಬಹುದು. ಆದರೆ ಸ್ಥಿರ ಠೇವಣಿ ಇಟ್ಟ ವೇಳೆ ನಾಮಿನಿ ಹೆಸರನ್ನು ಉಲ್ಲೇಖಿಸಿ.  ನಾಮಿನಿ ಇಲ್ಲದೆ ಹೋದಲ್ಲಿ ಆ ಮೊತ್ತವು ಮೃತ ವ್ಯಕ್ತಿಯ ಕಾನೂನುಬದ್ಧ…

Read More

ವೇದಿಕೆ ಏರಲು ನಿರಾಕರಿಸಿದ್ದಕ್ಕೆ ಪೊಲೀಸ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ! – Kannada News | Police Constable Assaulted in Bhadravathi After Refusing Stage Invite

ಪೊಲೀಸ್ ಸಿಬ್ಬಂದಿ ಉಮೇಶ್ ಹಾಗೂ ಅವರ ಸಹೋದರನ ಪುತ್ರ ಸುಹಾಸ್ ಶಿವಮೊಗ್ಗ, ಆಗಸ್ಟ್ 03: ಭದ್ರಾವತಿ ಪಟ್ಟಣದ ಜನ್ನಾಪುರದಲ್ಲಿರುವ ಮಲ್ಲೇಶ್ವರ ಸಭಾಭವನದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಆಘಾತಕಾರಿ ಘಟನೆ ಸಂಭವಿಸಿದೆ. ವೇದಿಕೆ ಹಂಚಿಕೊಳ್ಳಲು ನಿರಾಕರಿಸಿದ ಕಾರಣಕ್ಕೆ ಪೊಲೀಸ್ ಸಿಬ್ಬಂದಿ ಉಮೇಶ್ ಹಾಗೂ ಅವರ ಸಹೋದರನ ಪುತ್ರ ಸುಹಾಸ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಘಟನೆಯ ಹಿನ್ನೆಲೆ ಖ್ಯಾತ ಗಾಯಕಿ ಎಸ್. ಜಾನಕಿ ಅವರ ಸ್ಮರಣಾರ್ಥ ಮಲ್ಲೇಶ್ವರ ಸಭಾಭವನದಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿ ಉಮೇಶ್…

Read More

ಕಾವೇರಿ ಜಲಾನಯನ ಪ್ರದೇಶದಲ್ಲಿ ಭರ್ಜರಿ ಮಳೆ: ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು! – Kannada News | KRS Dam Water Level Reaches 100 Feet After 6 TMC Inflow in Three Days

ಮಂಡ್ಯ, ಆಗಸ್ಟ್ 3: ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 100 ಅಡಿ ತಲುಪಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಭರ್ಜರಿ ಮಳೆ ಸುರಿಯುತ್ತಿದ್ದು, ಜಲಾಶಯದಲ್ಲಿ ಸುಮಾರು 8 ಅಡಿಯಷ್ಟು ನೀರು ಏರಿಕೆಯಾಗಿದೆ. ಮೂರ್ನಾಲ್ಕು ದಿನಗಳ ಹಿಂದೆ ಕೇವಲ 17 ಟಿಎಂಸಿ ಇದ್ದ ನೀರಿನ ಸಂಗ್ರಹ ಈಗ 23 ಟಿಎಂಸಿ ತಲುಪಿದೆ. ಪ್ರಸ್ತುತ ಕೆಆರ್‌ಎಸ್ ಜಲಾಶಯಕ್ಕೆ 32,048 ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, 1,821 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಗರಿಷ್ಠ 124.80 ಅಡಿ…

Read More