Headlines

SRH vs CSK: ಧೋನಿ ಕಣಕ್ಕಿಳಿಯಲಿದ್ದಾರಾ? – Kannada News | Will MS Dhoni play in CSK vs SRH Match?

ಇಂಡಿಯನ್ ಪ್ರೀಮಿಯರ್ ಲೀಗ್​ನ 27ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ.  ಹೈದರಾಬಾದ್‌ನ ಉಪ್ಪಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ಕಣಕ್ಕಿಳಿಯಲಿದ್ದಾರಾ? ಎಂಬುದೇ ಪ್ರಶ್ನೆ. ಏಕೆಂದರೆ ಈ ಬಾರಿಯ ಟೂರ್ನಿಯಲ್ಲಿ ಧೋನಿ ಒಂದೇ ಒಂದು ಪಂದ್ಯವಾಡಿಲ್ಲ. ಇದೀಗ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲೂ ಅವರು ಆಡುವ ಸಾಧ್ಯತೆ ತೀರಾ ಕಡಿಮೆ ಎಂದು ವರದಿಯಾಗಿದೆ. ಗಾಯದ ಸಮಸ್ಯೆ: ಸೀಸನ್ ಆರಂಭಕ್ಕೂ ಮುನ್ನ ತರಬೇತಿಯ ಅವಧಿಯಲ್ಲಿ ಉಂಟಾದ ಸ್ನಾಯು…

Read More

ಆ್ಯಂಬ್ಯುಲೆನ್ಸ್ ಕಾರು ನಡುವೆ ಡಿಕ್ಕಿ; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ!

ಶಿವಮೊಗ್ಗ, ಮಾ.20: ನಗರದ ಜನನಿಬಿಡ ಪ್ರದೇಶವಾದ ಅಕ್ಕಮಹಾದೇವಿ ವೃತ್ತದಲ್ಲಿ ಕಾರು ಮತ್ತು ಆ್ಯಂಬ್ಯುಲೆನ್ಸ್ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಮೂರ್ನಾಲ್ಕು ಬಾರಿ ಪಲ್ಟಿ ಹೊಡೆದಿದ್ದು, ಸೃವದೈವವಶಾತ್ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ. ವೇಗವಾಗಿ ಬಂದ ಬ್ರೀಜಾ ಕಾರು ಮತ್ತು ಆ್ಯಂಬ್ಯುಲೆನ್ಸ್ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಮೂರ್ನಾಲ್ಕು ಬಾರಿ ಪಲ್ಟಿ ಹೊಡೆದಿದೆ. ಈ ಮೈನವಿರೇಳಿಸುವ ದೃಶ್ಯಗಳು ಹತ್ತಿರದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ.ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ…

Read More

ಕೊಪ್ಪಳ: 21 ಸಾವಿರ ರೂ. ಲಂಚ ಪಡೆಯುವಾಗ ಲೋಕಯುಕ್ತ ಕೈಗೆ ಸಿಕ್ಕಿಬಿದ್ದ ಎಸ್‌ಡಿಎ ರಂಜಿತ್ – Kannada News | Lokayukta Raid Koppal: RTO Clerk Ranjith Caught Taking Bribe for Showroom License

ಕೊಪ್ಪಳ, ಏ.29: ರಾಜ್ಯದ ಹಲವು ಕಡೆ ಲೋಕಯುಕ್ತ ದಾಳಿಗಳು ನಡೆಯುತ್ತಿದೆ. ಭಷ್ಟ ಅಧಿಕಾರಿಗಳ ಹೆಡೆಮುರಿ ಕಟ್ಟುತ್ತಿದ್ದಾರೆ. ಇದೀಗ ಕೊಪ್ಪಳದ ಪ್ರಾದೇಶಿಕ ಸಾರಿಗೆ ಕಚೇರಿಯ (RTO) ದ್ವಿತೀಯ ದರ್ಜೆ ಸಹಾಯಕ (SDA) ರಂಜಿತ್ ಎಂಬುವವರು ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶೋರೂಮ್ ಟ್ರೇಡ್ ಲೈಸೆನ್ಸ್ ನೀಡಲು ಹಣಕ್ಕೆ ಬೇಡಿಕೆಯಿಟ್ಟಿದ್ದ ಈ ಸಿಬ್ಬಂದಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಲಾಗಿದೆ. ದೂರುದಾರರಾದ ನಯೀಮ್ ಎಂಬುವವರು ಕುಷ್ಟಗಿ, ಕಾರಟಗಿ ಹಾಗೂ ಹುಲಿಗಿಯಲ್ಲಿ ಹೊಸ ಶೋರೂಮ್‌ಗಳನ್ನು ತೆರೆಯಲು ಪರವಾನಿಗೆ (Trade License)…

Read More

ಬೌಲಿಂಗ್​ನಲ್ಲಿ ಹೆನ್ರಿ ಮಿಂಚಿಂಗ್: ಬ್ಯಾಟಿಂಗ್​ನಲ್ಲಿ ಹೆನ್ರಿ ಶೈನಿಂಗ್..! – Kannada News | England vs New Zealand, 2nd Test: 3rd Day Highlights

ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್​ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ಭರ್ಜರಿ ಪ್ರದರ್ಶನ ಮುಂದುವರೆಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು ಮೊದಲ ಇನಿಂಗ್ಸ್​ನಲ್ಲಿ 391 ರನ್ ಪೇರಿಸಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಆರಂಭಿಕ ದಾಂಡಿಗ ಬೆನ್ ಡೆಕೆಟ್ 36 ರನ್​ಗಳಿಸಿ ಔಟಾದರೆ, ಆ ಬಳಿಕ ಬಂದ ಜೇಕಬ್ ಬೆಥೆಲ್…

Read More

50 ವರ್ಷದಲ್ಲಿ ವಿಶ್ವ ಹೇಗಿರುತ್ತೆ? ಫ್ರಾನ್ಸ್, ಜಪಾನ್, ಜರ್ಮನಿಯನ್ನೂ ಹಿಂದಿಕ್ಕುತ್ತಾ ಪಾಕಿಸ್ತಾನ? ಭಾರತ ಹೇಗಿದ್ದೀತು? – Kannada News | India may overtake USA economy in 2075 says Goldman Sachs report, here are top economies in next 50 years

ನವದೆಹಲಿ, ಜನವರಿ 6: ಭಾರತದ ಆರ್ಥಿಕತೆ (India GDP) ಕಳೆದ ಹತ್ತಿಪ್ಪತ್ತು ವರ್ಷಗಳಿಂದ ಅಪಾರ ವೇಗದಲ್ಲಿ ಬೆಳೆಯುತ್ತಿದೆ. ಕಳೆದೆರಡು ವರ್ಷದಲ್ಲಿ ಫ್ರಾನ್ಸ್, ಬ್ರಿಟನ್ ಆರ್ಥಿಕತೆಗಳನ್ನು ಹಿಂದಿಕ್ಕಿದೆ. ಈಗ ಜಪಾನ್ ಜಿಡಿಪಿಯನ್ನೂ ಮೀರಿಸಿ ವಿಶ್ವದ 4ನೇ ಅತಿದೊಡ್ಡ ಆರ್ಥಿಕತೆಯ ದೇಶವೆನಿಸಿದೆ ಭಾರತ. ಮುಂದಿನೆರಡು ವರ್ಷದಲ್ಲಿ ಜರ್ಮನಿಯನ್ನೂ ಹಿಂದಿಕ್ಕಿ ನಂ. 3 ಸ್ಥಾನಕ್ಕೆ ಏರುವ ನಿರೀಕ್ಷೆ ಇದೆ. ಆದರೆ, ಎರಡನೇ ಸ್ಥಾನಕ್ಕೇರಲು ಭಾರತಕ್ಕೆ ಬಹಳ ಸಮಯ ಬೇಕು. ಗೋಲ್ಡ್​ಮನ್ ಸ್ಯಾಕ್ಸ್ (Goldman Sachs) ವರದಿಯೊಂದರ ಪ್ರಕಾರ ಭಾರತ ಎರಡನೇ ಸ್ಥಾನಕ್ಕೇರಲು…

Read More

ಕಾಂಗ್ರೆಸ್​ ಅಭ್ಯರ್ಥಿ ಪರ ಪ್ರಚಾರದ ವೇಳೆ ಶಾಸಕ ಪ್ರದೀಪ್​ ಈಶ್ವರ್​ಗೆ ಚಪ್ಪಲಿ ತೋರಿಸಿದ ಬಿಜೆಪಿ ಕಾರ್ಯಕರ್ತರು

ದಾವಣಗೆರೆ, ಮಾರ್ಚ್​ 28: ಉಪಚುನಾವಣಾ ಅಖಾಡ ರಂಗೇರಿದೆ. ದಾವಣಗೆರೆ ದಕ್ಷಿಣ ಕ್ಷೇತ್ರ ಕಾವು ಪಡೆದಿದೆ. ಕಾಂಗ್ರೆಸ್​ ಅಭ್ಯರ್ಥಿ ಸಮರ್ಥ್​ ಪರ ಇಂದು ಪ್ರಚಾರಕ್ಕಿಳಿದಿದ್ದ ಶಾಸಕ ಪ್ರದೀಪ್ ಈಶ್ವರ್​​ಗೆ ಪ್ರತಿಭಟನೆ ಬಿಸಿ ತಟ್ಟಿದೆ. ಬಿಜೆಪಿ ಬಗ್ಗೆ ಅವಹೇಳನಕಾರಿ ಪದ ಬಳಕೆಗೆ ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗಿದ್ರು. ಈ ವೇಳೆ ಕೆಲ ಬಿಜೆಪಿ ಕಾರ್ಯಕರ್ತರು ಚಪ್ಪಲಿ, ಪೂರಕೆ ತೋರಿಸಿದ್ದಾರೆ. ದಾವಣಗೆರೆಯಲ್ಲಿ ಕಾಂಗ್ರೆಸ್​ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಭಾರೀ ಹೈಡ್ರಾಮಾವೇ ನಡೆದಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್…

Read More

IND vs NZ: ಸಂಜು ಬದಲು ಕಿಶನ್ ವಿಕೆಟ್‌ಕೀಪರ್; ಸ್ಯಾಮ್ಸನ್ ವೃತ್ತಿಜೀವನ ಅಂತ್ಯ

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯ ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯವು ಸಂಜು ಸ್ಯಾಮ್ಸನ್‌ಗೆ ವಿಶೇಷವಾಗಿತ್ತು, ಏಕೆಂದರೆ ಇದು ಅವರ ತವರು ನೆಲದಲ್ಲಿ ಮೊದಲ ಅಂತರರಾಷ್ಟ್ರೀಯ ಪಂದ್ಯವಾಗಿತ್ತು. ಹೀಗಾಗಿ ಕೇರಳ ಅಭಿಮಾನಿಗಳು ಕೂಡ ಲೋಕಲ್ ಹುಡುಗನ ಆಟವನ್ನು ಕಣ್ತುಂಬಿಕೊಳ್ಳಲು ಕಾದು ಕುಳಿತಿದ್ದರು. ಆದರೆ ಸಂಜು ಆ ಸಂದರ್ಭವನ್ನು ಸ್ಮರಣೀಯವಾಗಿಸಲು ಸಾಧ್ಯವಾಗಲಿಲ್ಲ. ವಾಸ್ತವವಾಗಿ ಈ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಸಂಜು ಸ್ಯಾಮ್ಸನ್ ಅವರ ಬ್ಯಾಟ್ ಸಂಪೂರ್ಣವಾಗಿ…

Read More

IPL ಪಂದ್ಯದ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ಅಶೋಕ್​​ ಎಚ್ಚರಿಕೆ: ವಿಪಕ್ಷ ನಾಯಕ ಹೇಳಿದ್ದೇನು?

ಬೆಂಗಳೂರು, ಮಾರ್ಚ್​​ 27: ಐಪಿಎಲ್ ಪಂದ್ಯಗಳ ಸುರಕ್ಷತೆ ಮತ್ತು ಟಿಕೆಟ್ ವಿತರಣೆ ಕುರಿತು ರಾಜ್ಯ ಸರ್ಕಾರಕ್ಕೆ ವಿಧಾನಸೌಧದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಎಚ್ಚರಿಕೆ ನೀಡಿದ್ದಾರೆ. ಹಿಂದಿನ ಐಪಿಎಲ್ ಪಂದ್ಯದ ಸಂದರ್ಭ ಸಂಭವಿಸಿದ ಕಾಲ್ತುಳಿತದಲ್ಲಿ 11 ಅಮಾಯಕರು ಮೃತಪಟ್ಟಿದ್ದನ್ನು ಉಲ್ಲೇಖಿಸಿದ ಅವರು, ರಾಜ್ಯ ಸರ್ಕಾರದ ಬೇಜವಾಬ್ದಾರಿ ಹಾಗೂ ಅಧಿಕಾರಿಗಳ ನಡೆ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ಅಲ್ಲದೆ ಮುಂಬರುವ ಐಪಿಎಲ್ ಪಂದ್ಯಗಳು ಸುಗಮವಾಗಿ ನಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಯಾವುದೇ ಅಹಿತಕರ ಘಟನೆ ಸಂಭವಿಸಿದಲ್ಲಿ…

Read More

ನಮ್ಮ ಮೆಟ್ರೋದಿಂದ ಮದ್ಯಪ್ರಿಯರಿಗೆ ಶೀಘ್ರವೇ ಗುಡ್​​ನ್ಯೂಸ್​? ಸೀಲ್ಡ್ ಲಿಕ್ಕರ್​​ ಬಾಟಲ್​​ ಸಾಗಾಟಕ್ಕೆ ಅನುಮತಿ? – Kannada News | Namma Metro Alcohol Policy Update: BMRCL Mulls Allowing Sealed Liquor Bottles on Delhi Model

ಬೆಂಗಳೂರು, ಫೆಬ್ರವರಿ 18: ಮದ್ಯಪ್ರಿಯರಿಗೆ ಬಿಎಂಆರ್​​ಸಿಎಲ್​ ಶೀಘ್ರವೇ ಶುಭಸುದ್ದಿ ಕೊಡುವ ನಿರೀಕ್ಷೆ ಇದ್ದು, ಸೀಲ್ಡ್ ಮಾಡಿರುವ ಮದ್ಯದ ಬಾಟಲಿಗಳನ್ನು ನಮ್ಮ ಮೆಟ್ರೋ ರೈಲುಗಳಲ್ಲಿ ಸಾಗಿಸಲು ಅನುಮತಿ ನೀಡುವ ಸಾಧ್ಯತೆ ಇದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಮೂಲಗಳ ಪ್ರಕಾರ, ಈ ವಿಷಯವನ್ನು ಹಲವು ಬಾರಿ ಚರ್ಚಿಸಲಾಗಿದ್ದು, ಇತ್ತೀಚಿನ ಸಭೆಯಲ್ಲಿಯೂ ಮತ್ತೆ ಪ್ರಸ್ತಾಪಿಸಲಾಗಿದೆ. ತಾತ್ವಿಕ ಅನುಮತಿ ದೊರೆತಿದ್ದರೂ, ಜಾರಿಗೆ ಬರಲು ಇನ್ನೂ ಸ್ವಲ್ಪ ಸಮಯ ಬೇಕಾಗಬಹುದು ಎನ್ನಲಾಗಿದೆ. ದೆಹಲಿ ಮಾದರಿಯನ್ನು ನಮ್ಮ ಮೆಟ್ರೋದಲ್ಲಿಯೂ ಅನುಸರಿಸುವ ಬಗ್ಗೆ ಚರ್ಚೆ…

Read More

CUSMA ನಿಯಮಗಳಿಗೆ ಬದ್ಧ; ಚೀನಾದೊಂದಿಗೆ ವ್ಯಾಪಾರ ಒಪ್ಪಂದ ಇಲ್ಲ: ಕೆನಡಾ ಹೇಳಿಕೆ – Kannada News | Canada clarifies that it is binded by CUSMA rules, says no trade deal with China

ನವದೆಹಲಿ, ಜನವರಿ 26: ಚೀನಾದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ಯಾವುದೇ ಯೋಚನೆ ಇಲ್ಲ ಎಂದು ಕೆನಡಾ ಹೇಳಿದೆ. ಚೀನಾದೊಂದಿಗೆ ಕೆನಡಾ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಂಡಲ್ಲಿ, ಆ ದೇಶದ ಮೇಲೆ ಶೇ. 100 ಟ್ಯಾರಿಫ್ ಹಾಕುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕೆನಡಾದಿಂದ ಈ ಸ್ಪಷ್ಟನೆ ಬಂದಿದೆ. ಕೆನಡಾ ಪ್ರಧಾನಿ ಮಾರ್ಕ್ ಕಾರ್ನೀ (Mark Carney) ಅವರು ಈ ಸ್ಪಷ್ಟನೆ ನೀಡಿದ್ದಾರೆ. ‘ಮುಂಚಿತವಾಗಿ ಸೂಚನೆ ಇಲ್ಲದೆ, ಮುಕ್ತ ಮಾರುಕಟ್ಟೆಯಲ್ಲದ ದೇಶಗಳೊಂದಿಗೆ ವ್ಯಾಪಾರ…

Read More