Headlines

ಮಾರ್ಚ್ 19ರಿಂದ ಜೀ5 ಒಟಿಟಿಯಲ್ಲಿ ‘ಲ್ಯಾಂಡ್​ಲಾರ್ಡ್’ ಸಿನಿಮಾ ಪ್ರಸಾರ

ಜನವರಿ 23ರಂದು ‘ಲ್ಯಾಂಡ್​ಲಾರ್ಡ್’ ಸಿನಿಮಾ (Landlord Kannada Movie) ಬಿಡುಗಡೆ ಆಗಿತ್ತು. ದುನಿಯಾ ವಿಜಯ್, ರಚಿತಾ ರಾಮ್, ಶಿಶಿರ್ ಬೈಕಾಡಿ, ರಿತನ್ಯ ವಿಜಯ್, ಉಮಾಶ್ರೀ, ರಾಜ್ ಬಿ. ಶೆಟ್ಟಿ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡಿರುವ ಈ ಸಿನಿಮಾಗೆ ಚಿತ್ರಮಂದಿರಗಳಲ್ಲಿ ಜನರ ಮೆಚ್ಚುಗೆ ಸಿಕ್ಕಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದರು. ಈಗ ‘ಲ್ಯಾಂಡ್​ಲಾರ್ಡ್’ ಚಿತ್ರ ಒಟಿಟಿಗೆ ಬರುತ್ತಿದೆ. ಯುಗಾದಿ ಹಬ್ಬದ ಸಂದರ್ಭದಲ್ಲಿ ಜೀ5 ಒಟಿಟಿ (Zee5 OTT) ಮೂಲಕ ಈ ಸಿನಿಮಾ ವೀಕ್ಷಣೆಗೆ ಲಭ್ಯವಾಗಲಿದೆ. ಮಾರ್ಚ್…

Read More

ಜಮೀನಿನ ಕಾಗದಗಳು ಮಿಸ್ಸಿಂಗ್, ನಿಮ್ಮ ಮೆಮೊರಿ ಸುಧಾರಿಸಿಕೊಳ್ಳಿ ಎಂದು ಅಧಿಕಾರಿಯ ಟೇಬಲ್ ಮೇಲೆ ಬಾದಾಮಿ ಎಸೆದ ವ್ಯಕ್ತಿ – Kannada News | Almond Protest: Man Targets Officer Over Missing File in Unusual Way

ಛತ್ತೀಸ್​ಗಢ, ಏಪ್ರಿಲ್ 19: ಸರ್ಕಾರಿ ಕಚೇರಿಗಳಲ್ಲಿ ಫೈಲ್ ಕಳೆದುಹೋಗಿದೆ ಅಥವಾ ನಾಳೆ ಬನ್ನಿ ಎಂಬ ಮಾತುಗಳು ಅದೆಷ್ಟು ಜನಸಾಮಾನ್ಯರ ನಿದ್ದೆ ಗೆಡಿಸಿವೆಯೋ ಗೊತ್ತಿಲ್ಲ. ಆದರೆ ಬಿಲಾಸ್‌ಪುರದ ಟಿಫ್ರಾ ಹೌಸಿಂಗ್ ಬೋರ್ಡ್ ಕಚೇರಿಯಲ್ಲಿ ತರುಣ್ ಸಾಹು ಎಂಬ ಯುವಕ ಈ ನಿರ್ಲಕ್ಷ್ಯಕ್ಕೆ ನೀಡಿದ ಉತ್ತರ ಮಾತ್ರ ಅತ್ಯಂತ ಸೃಜನಶೀಲ ಮತ್ತು ಖಾರವಾಗಿತ್ತು. ತರುಣ್ ಸಾಹು ಒಂದು ವರ್ಷದ ಹಿಂದೆ ಮ ಒಂದು ಫ್ಲಾಟ್ ಖರೀದಿಸಿದ್ದರು. ಆಸ್ತಿಯ ಮಾಲೀಕತ್ವ ಅವರ ಹೆಸರಿಗೆ ಬದಲಾಗಬೇಕಾದರೆ (Mutation) ಹೌಸಿಂಗ್ ಬೋರ್ಡ್‌ನ ಫೈಲ್ ಅತ್ಯಗತ್ಯ….

Read More

ಇರಾನ್​ ಜೊತೆಗಿನ ಸಂಘರ್ಷದಲ್ಲಿ ಇಸ್ರೇಲ್ ಜೊತೆ ನಿಂತಿದ್ದಕ್ಕೆ ಪ್ರಧಾನಿ ಮೋದಿಗೆ ನೆತನ್ಯಾಹು ಧನ್ಯವಾದ – Kannada News | Benjamin Netanyahu thanks PM Modi for standing with Israel Amid Iran War

ಟೆಲ್ ಅವಿವ್, ಮಾರ್ಚ್ 2: ಇಸ್ರೇಲ್- ಅಮೆರಿಕದ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ ನಂತರ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮುಂದುವರಿದಿದೆ. ಈ ಸಂಘರ್ಷದಲ್ಲಿ ಇಸ್ರೇಲ್‌ನೊಂದಿಗೆ ನಿಂತಿದ್ದಕ್ಕಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಅರ್ಪಿಸಿದ್ದಾರೆ. ತಮ್ಮಿಬ್ಬರ ಮಾತುಕತೆಯ ಕುರಿತು ಅವರು ವಿವರಗಳನ್ನು ನೀಡದಿದ್ದರೂ, ಭಾರತದ ಜನರು ಇಸ್ರೇಲ್‌ನಲ್ಲಿ ತುಂಬಾ ಮೆಚ್ಚುಗೆ ಪಡೆದಿದ್ದಾರೆ ಎಂದು ಅವರು ಹೇಳಿದ್ದಾರೆ. “ನಮ್ಮ ಆತ್ಮೀಯ ಸ್ನೇಹಿತ ಪ್ರಧಾನಿ ನರೇಂದ್ರ ಮೋದಿ…

Read More

ಅಶ್ಲೀಲ, ಕಾನೂನುಬಾಹಿರ ವಿಷಯಗಳನ್ನು ಡಿಲೀಟ್ ಮಾಡಿ; ಎಕ್ಸ್​​ನ ಗ್ರೋಕ್​ಗೆ ಕೇಂದ್ರ ಸರ್ಕಾರ ಎಚ್ಚರಿಕೆ – Kannada News | Modi Government directs Elon Musk led X to remove vulgar unlawful content from Grok AI platform

ನವದೆಹಲಿ, ಜನವರಿ 2: ಎಲಾನ್ ಮಸ್ಕ್ (Elon Musk) ನೇತೃತ್ವದ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ಗೆ ಕೇಂದ್ರ ಸರ್ಕಾರ ಇಂದು ಖಡಕ್ ಎಚ್ಚರಿಕೆ ನೀಡಿದೆ. ಎಕ್ಸ್​ನ AI ಅಪ್ಲಿಕೇಶನ್ ಗ್ರೋಕ್‌ನಿಂದ (Grok AI) ಹಂಚಲ್ಪಡುತ್ತಿರುವ ಎಲ್ಲಾ ಅಶ್ಲೀಲ ಮತ್ತು ಕಾನೂನುಬಾಹಿರ ವಿಷಯವನ್ನು ತಕ್ಷಣ ಡಿಲೀಟ್ ಮಾಡಬೇಕು ಎಂದು ಸರ್ಕಾರ ಸೂಚನೆ ನೀಡಿದೆ. ಒಂದುವೇಳೆ ಆ ವಿಷಯಗಳನ್ನು 72 ಗಂಟೆಯೊಳಗೆ ತೆಗೆದುಹಾಕದಿದ್ದರೆ ಕಾನೂನಿನಡಿಯಲ್ಲಿ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. 2000ರ ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು 2021ರ…

Read More

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌: ಯುವತಿಯನ್ನು ಮಾಡೆಲ್ ಮಾಡ್ತೇನೆಂದು ನಂಬಿಸಿ ಗರ್ಭಿಣಿ ಮಾಡಿದ್ನಾ ಸಮೀರ್?

ಹುಬ್ಬಳ್ಳಿ, ಏಪ್ರಿಲ್ 4: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ (Hubballi) ಸದ್ದು ಮಾಡುತ್ತಿರುವ ‘ಲವ್ ಜಿಹಾದ್ (Love Jihad)’ ಆರೋಪದ ಪ್ರಕರಣ ಕ್ಷಣಕ್ಕೊಂದು ಸ್ಫೋಟಕ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಮಾಡೆಲಿಂಗ್ ಆಸೆ ತೋರಿಸಿ ಯುವತಿಯನ್ನು ನಂಬಿಸಿದ್ದ ಜಿಮ್ ಟ್ರೈನರ್ ಸಮೀರ್, ಆಕೆಯನ್ನು ಗರ್ಭಿಣಿ ಮಾಡಿ ನಂತರ ಗರ್ಭಪಾತ ಮಾಡಿಸಿದ್ದಾನೆಯೇ ಎಂಬ ದಟ್ಟ ಅನುಮಾನ ಇದೀಗ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿಯ ವಿದ್ಯಾನಗರ ಠಾಣೆಯ ಪೊಲೀಸರು ವೈದ್ಯಕೀಯ ದಾಖಲೆಗಳ ಸಂಗ್ರಹಕ್ಕೆ ಮುಂದಾಗಿದ್ದಾರೆ. ಯುವತಿಯ ಪೋಷಕರ ಆರೋಪದ ಪ್ರಕಾರ, ಸಮೀರ್ ಆಕೆಗೆ ‘ನಿನ್ನನ್ನು…

Read More

Daily Devotional: ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ? – Kannada News | Why a Gurus Guidance is Essential for Human Existence

ಜೀವನ ಪೂರ್ತಿ ಮನುಷ್ಯನಿಗೆಗುರುವಿನ ಅನುಗ್ರಹ ಬೇಕಾ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ನಾವು ಹುಟ್ಟಿದ ಕ್ಷಣದಿಂದ ಸಾವಿನವರೆಗೂ ದೇವರ ಅನುಗ್ರಹ, ತಂದೆ-ತಾಯಿಗಳ ಆಶೀರ್ವಾದದ ಜೊತೆಗೆ, ಗುರುವಿನ ಅನುಗ್ರಹವು ಅತ್ಯಂತ ಮಹತ್ವದ್ದಾಗಿದೆ. “ಹರ ಮುನಿದರೂ ಗುರು ಕಾಯುವನು” ಎಂಬ ನುಡಿಯು ಗುರುವಿನ ಸರ್ವೋಚ್ಚ ಸ್ಥಾನವನ್ನು ಸಾರುತ್ತದೆ. ತಂದೆ-ತಾಯಿಗಳು ಮೊದಲ ಗುರುಗಳಾದರೆ, ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ಉದ್ಯೋಗದಲ್ಲಿ ಮಾರ್ಗದರ್ಶನ ನೀಡುವವರು ಸಹ ಗುರುಗಳೇ. ಪರಿಪೂರ್ಣ ಜೀವನ ಮತ್ತು ಮಾನಸಿಕ ನೆಮ್ಮದಿಗಾಗಿ ಗುರುವಿನ ಆಶ್ರಯ…

Read More

Dhurandhar 2 First Half Review: ‘ಧುರಂಧರ್ 2’ ಚಿತ್ರದ ಮೊದಲಾರ್ಧ ವಿಮರ್ಶೆ; ಸಿನಿಮಾದಲ್ಲಿ ಏನೆಲ್ಲ ಇದೆ?

‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ತೆರೆಕಾಣುತ್ತಿದೆ. ಅದಕ್ಕೂ ಮೊದಲು ಅಂದರೆ ಇಂದು (ಮಾರ್ಚ್ 18) ಸಿನಿಮಾ ಪ್ರೀಮಿಯರ್ ಆಗಿದೆ. ಪ್ರೀಮಿಯರ್ ಶೋಗಳ ಟಿಕೆಟ್​​​ಗಳು ಭಾರೀ ಸಂಖ್ಯೆಯಲ್ಲಿ ಮಾರಾಟ ಆಗಿದೆ.  ಈ ಚಿತ್ರ ‘ಧುರಂಧರ್’ ಚಿತ್ರದ ಮುಂದುವರಿದ ಭಾಗ. ಈ ಸಿನಿಮಾ ಸೇಡಿನ ಕಥೆಯನ್ನು ಹೊಂದಿದೆ. ಹಾಗಾದರೆ, ಸಿನಿಮಾದ ಮೊದಲಾರ್ಧದಲ್ಲಿ ಏನೆಲ್ಲ ಇದೆ? ಯಾವ ಭಾಗ ಹೈಲೈಟ್ ಆಗಿದೆ? ಯಾವ ವಿಷಯವನ್ನು ಆದಿತ್ಯ ಧಾರ್ ಹೈಲೈಟ್ ಮಾಡಿದ್ದಾರೆ? ಆ ಬಗ್ಗೆ ಇಲ್ಲಿದೆ ವಿವರ. ಸಿನಿಮಾದ ಮೊದಲಾರ್ಧದ ವಿಶೇಷತೆಗಳೇನು?…

Read More

ಭುವನ್‌ ಪೊನ್ನಣ್ಣ ಜನ್ಮದಿನ: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ – Kannada News | Bhuvann Ponannaa visits Kateel Durga Parameshwari temple on his Birthday

ನಟ ಭುವನ್ ಪೊನ್ನಣ್ಣ (Bhuvann Ponannaa) ಅವರಿಗೆ ಡಿಸೆಂಬರ್ 30ರಂದು ಹುಟ್ಟುಹಬ್ಬದ ಸಂಭ್ರಮ. ನಟನೆ, ನಿರ್ಮಾಣ, ರಿಯಾಲಿಟಿ ಶೋಗಳ ಮೂಲಕ ಗುರುತಿಸಿಕೊಂಡ ಅವರು ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಪ್ರತಿ ವರ್ಷ ಅವರು ಹುಟ್ಟುಹಬ್ಬದ ದಿನ ದೇವಸ್ಥಾನಕ್ಕೆ ಹೋಗುವುದನ್ನು ಮರೆಯಲ್ಲ. ಮಾಡರ್ನ್ ಆಗಿ ಕಾಣಿಸಿಕೊಳ್ಳುವ ಅವರು ಸಂಪ್ರದಾಯಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ. ಪ್ರತಿ ವರ್ಷ ಅವರು ತಪ್ಪದೇ ಕಟೀಲು ದುರ್ಗಾಪರಮೇಶ್ವರಿ (Kateel Durga Parameshwari) ದೇವಸ್ಥಾನಕ್ಕೆ ಭೇಟಿ ನೀಡುವುದೇ ಈ ಮಾತಿಗೆ ಸಾಕ್ಷಿ. ಈ ವರ್ಷ ಕೂಡ ಅವರು ಈ…

Read More

22ರಲ್ಲಿ 19 ಮಸೂದೆ ಪಾಸ್, ಎರಡು ವಾಪಸ್: ಕಾಂಗ್ರೆಸ್​​​​ನ ದ್ವೇಷ ಭಾಷಣ ಬಿಲ್ ಆಸೆ​ ಠುಸ್ – Kannada News | Karnataka governor thawar chand gehlot returns two Bills, 19 others get assent

ಬೆಂಗಳೂರು, (ಜನವರಿ 09): ರಾಜ್ಯ ಸರ್ಕಾರ ಕಳಿಸಿದ್ದ 22 ಮಸೂದೆಗಳ (Bills) ಪೈಕಿ 19ಕ್ಕೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ (Karnataka governor thawar chand gehlot) ಅಂಕಿತ ಹಾಕಿದ್ದಾರೆ. ಆದ್ರೆ, ತೀವ್ರ ವಿವಾದಕ್ಕೆ ಕಾರಣವಾಗಿರುವ ದ್ವೇಷ ಭಾಷಣ ಮಸೂದೆಯನ್ನು ಪೆಂಡಿಂಗ್ ಇಟ್ಟಿದ್ದು, 2 ಮಸೂದೆಗಳ ಬಗ್ಗೆ ಹೆಚ್ಚಿನ ಸ್ಪಷ್ಟನೆ ಕೇಳಿ ವಾಪಸ್ ಕಳುಹಿಸಿದ್ದಾರೆ. ಈ ಸಂಬಂಧ ಇಂದು (ಜನವರಿ 09) ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳು ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಹೆಚ್ಚಿನ ವಿವರಣೆ ಕೇಳಿ…

Read More

ಹುಳಿಯಾರು ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಅನುಮಾನಸ್ಪದ ಸಾವು: ಕೇಸ್​​ ತನಿಖೆ ಹೊಣೆ ಸಿಐಡಿಗೆ

ತುಮಕೂರು, ಮಾರ್ಚ್​​ 20: ಹುಳಿಯಾರು ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಅನುಮಾನಸ್ಪದ ಸಾವು ಪ್ರಕರಣದ ತನಿಖೆಯ ಹೊಣೆಯನ್ನು ಸಿಐಡಿಗೆ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಬಗ್ಗೆ ಸ್ವತಃ ಗೃಹ ಸಚಿವ ಡಾ.ಜಿ. ಪರಮೇಶ್ವರ್​​ ಅವರೇ ಮಾಹಿತಿ ನೀಡಿದ್ದಾರೆ. ಜೂಜಾಟ ಕೇಸ್​​ ಸಂಬಂಧ ವಿಚಾರಣೆಗೆ ಪೊಲೀಸರು ಕರೆತಂದಿದ್ದ ಆರು ಮಂದಿಯ ಪೈಕಿ ಓರ್ವ ಮೃತಪಟ್ಟಿದ್ದರು. ಅನುಮಾನಾಸ್ಪದವಾಗಿ ಕಾಂತರಾಜು ಎಂಬವರು ಮೃತಪಟ್ಟಿದ್ದು, ಕುಟುಂಬಸ್ಥರು ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ವಿಚಾರಣೆ ನೆಪದಲ್ಲಿ ಹಲ್ಲೆ ನಡೆಸಿ ಕೊಲೆಗೈಯಲಾಗಿದೆ ಎಂಬ ಆರೋಪ…

Read More