Headlines

ಕರ್ನಾಟಕ ತಂಡದ ವಿಶ್ವ ದಾಖಲೆಯ ಚೇಸಿಂಗ್ – Kannada News | Karnataka Script History With Record Breaking Run Chase

ಏಕದಿನ ಪಂದ್ಯದಲ್ಲಿ 400 ಕ್ಕಿಂತಲೂ ಅಧಿಕ ರನ್​ಗಳನ್ನು ಚೇಸ್ ಮಾಡಿ ಗೆದ್ದಿರುವುದು ಕೇವಲ 2 ತಂಡಗಳು ಮಾತ್ರ. ಈ ಸಾಧನೆ ಮಾಡಿದ ಮೊದಲ ತಂಡ ಸೌತ್ ಆಫ್ರಿಕಾ. ಇನ್ನು ಎರಡನೇ ತಂಡ ಕರ್ನಾಟಕ. ಪ್ರಸ್ತುತ ನಡೆಯುತ್ತಿರುವ ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲೇ ಬೃಹತ್ ಮೊತ್ತ ಬೆನ್ನತ್ತಿ ಕರ್ನಾಟಕ ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಬೌಲಿಂಗ್ ಆಯ್ದುಕೊಂಡಿದ್ದರು….

Read More

ಹೊನ್ನಾವರದ ಬಳಿ ಪಲ್ಟಿಯಾಗಿ ಹೊತ್ತಿ ಉರಿದ ಕಾರು: ಗುರುತು ಸಿಗದಂತೆ ಸುಟ್ಟು ಕರಕಲಾದ ಇಬ್ಬರು! – Kannada News | Honnavar car fire tragedy two burnt alive after car overturns

ಕಾರವಾರ/ಚಾಮರಾಜನಗರ: ಪಲ್ಟಿಯಾಗಿ ಕಾರು ಹೊತ್ತಿ ಉರಿದ ಪರಿಣಾಮ ಇಬ್ಬರು ಸಜೀವ ದಹನವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್​ನಲ್ಲಿ ನಡೆದಿದೆ. ಕಾರು ಮರಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದಿರುವ ಸಾಧ್ಯತೆ ಮೇಲ್ನೋಟಕ್ಕೆ ಕಂಡು ಬಂದಿದ್ದು, ಕಾರಿನ ನಂಬರ್​​ಪ್ಲೇಟ್​​ ಕೂಡ ಬೆಂಕಿಯಲ್ಲಿ ಸುಟ್ಟುಹೋಗಿದೆ. ಹೀಗಾಗಿಕಾರು ಮತ್ತು ಕಾರಿನಲ್ಲಿ ಇದ್ದವರ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಮೃತರು ಸಿದ್ದಾಪುರ ಮೂಲದವರೆಂದು ಗೊತ್ತಾಗಿದ್ದು, ಘಟನೆ ಬಗ್ಗೆ ಸಂಬಂಧಿಕರಿಗೆ ಮಾಹಿತಿ ರವಾನೆ ಮಾಡಲಾಗಿದೆ. ಘಟನಾ ಸ್ಥಳದಲ್ಲಿ…

Read More

ಸುಳ್ಳು ಹೇಳಿ ಇಶಾನ್ ಕಿಶನ್​ರನ್ನು ತಂಡದಿಂದ ಹೊರಗಿಟ್ರಾ ಗೌತಮ್ ಗಂಭೀರ್

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 4ನೇ ಟಿ20 ಪಂದ್ಯದಲ್ಲಿ ಇಶಾನ್ ಕಿಶನ್ (Ishan Kishan) ಕಣಕ್ಕಿಳಿದಿರಲಿಲ್ಲ. ನಿಗಲ್ ಇಂಜುರಿಯ ಕಾರಣ ಇಶಾನ್ ಇಂದು ಆಡುತ್ತಿಲ್ಲ ಎಂದು ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಟಾಸ್ ವೇಳೆ ತಿಳಿಸಿದ್ದರು. ಆದರೆ ಇದೇ ವೇಳೆ ಇಶಾನ್ ಕಿಶನ್ ಮೈದಾನದಲ್ಲಿ ಬ್ಯಾಟ್ ಹಿಡಿದು ನಿಂತಿರುವುದು ವಿಡಿಯೋದಲ್ಲಿ ಸೆರೆಯಾಗಿತ್ತು. ಅಂದರೆ ಈ ಪಂದ್ಯಕ್ಕೂ ಮುನ್ನ ಇಶಾನ್ ಅಭ್ಯಾಸದಲ್ಲಿ ನಿರತರಾಗಿದ್ದದ್ದು ಇದರಿಂದ ಸ್ಪಷ್ಟವಾಗಿತ್ತು. ಇದಾದ ಬಳಿಕ ಹಲವು ಬಾರಿ ಮೈದಾನಕ್ಕೆ ಆಗಮಿಸಿದ್ದರು. ಅಂದರೆ ಪಂದ್ಯದುದ್ದಕ್ಕೂ…

Read More

ಕಾಂಗ್ರೆಸ್ ಮುಖಂಡ ಅಬ್ದುಲ್‌ ಜಬ್ಬಾರ್ ರಾಜೀನಾಮೆ ವಿಚಾರಕ್ಕೆ ಟ್ವಿಸ್ಟ್​​: ಸ್ವ ಇಚ್ಛೆಯಿಂದ ಹುದ್ದೆ ತೊರೆದಿದ್ದೇನೆ ಎಂದ ಪರಿಷತ್​​ ಸದಸ್ಯ

ದಾವಣಗೆರೆ, ಏಪ್ರಿಲ್​​ 12: ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಮುಖಂಡ ಅಬ್ದುಲ್‌ ಜಬ್ಬಾರ್ ರಾಜೀನಾಮೆ ವಿಚಾರಕ್ಕೆ ಟ್ವಿಸ್ಟ್​​ ಸಿಕ್ಕಿದೆ. ದಾವಣಗೆರೆ ಉಪ ಚುನಾವಣೆ ವೇಳೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್​​ ವಿರುದ್ಧ ಷಡ್ಯಂತ್ರ ಆರೋಪ ಸಂಬಂಧ ಹೈಕಮಾಂಡ್​​ ಕೆಲ ನಾಯಕರ ರಾಜೀನಾಮೆ ಕೇಳಿದೆ ಎನ್ನಲಾಗಿತ್ತು. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನ ಪರಿಷತ್ ಸದಸ್ಯ ಅಬ್ದುಲ್‌ ಜಬ್ಬಾರ್, ಸ್ವ ಇಚ್ಛೆಯಿಂದ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಈ ಬಗ್ಗೆ ನನಗೆ ಯಾರೂ ಒತ್ತಡ…

Read More

ಮೈಸೂರು: ಕಾವೇರಿ ನದಿಯಲ್ಲಿ 6 ಜನ‌ ಜಲಸಮಾಧಿ; ದರ್ಗಾಕ್ಕೆ ಬಂದವರು ದುರಂತ ಅಂತ್ಯ

ಮೈಸೂರು, ಏಪ್ರಿಲ್​ 19: ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆ K.R.ನಗರದ ಅರ್ಕೇಶ್ವರ ದೇಗುಲದ ಬಳಿ ನಡೆದಿದೆ. ಉರೂಸ್​ ಹಿನ್ನೆಲೆ 8 ಜನರ ತಂಡ ದರ್ಗಾಕ್ಕೆ ಬಂದಿದ್ದು, ಈ ವೇಳೆ ನದಿಗೆ ಈಜಲು ತೆರಳಿದ್ದಾಗ ದುರ್ಘಟನೆ ಸಂಭವಿಸಿದೆ. ಸ್ಥಳೀಯರು ಇಬ್ಬರನ್ನು ರಕ್ಷಿಸಿದ್ದು, ಉಳಿದ 6 ಜನ ನೀರುಪಾಲಾಗಿದ್ದಾರೆ. ಸ್ಥಳಕ್ಕೆ ಕೆ.ಆರ್.ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾಸಿನ್(23), ಫಾತಿಮ್(30), ಹುಮಾಯೂನ್(7), ನೇಹಾನ್(19), ಅಲೀಂ(13) ಸೇರಿ 6 ಜನ ಸಾವನ್ನಪ್ಪಿದ್ದಾರೆ. ಮತ್ತಷ್ಟು…

Read More

Oxfam Report: ವಿಶ್ವದ 400 ಕೋಟಿ ಜನರದ್ದಕ್ಕೆ ಸಮ ಈ 12 ಮಂದಿಯ ಶ್ರೀಮಂತಿಕೆ – Kannada News | World top 12 rich people have more wealth than half of world population

ನವದೆಹಲಿ, ಜನವರಿ 20: ಕಳೆದ ವರ್ಷ (2025) ಜಗತ್ತಿನಲ್ಲಿ ಬಿಲಿಯನೇರ್​ಗಳ (Billionaires) ಸಂಖ್ಯೆ 3,000 ಗಡಿ ದಾಟಿದೆ. ಇದು ಹೊಸ ದಾಖಲೆಯಾಗಿದೆ. ಈ ಇಷ್ಟೂ ಬಿಲಿಯನೇರ್​ಗಳ ಒಟ್ಟೂ ಸಂಪತ್ತು 18.3 ಟ್ರಿಲಿಯನ್ ಡಾಲರ್​ನಷ್ಟು ಇರಬಹುದು ಎನ್ನಲಾಗಿದೆ. ಸ್ವಿಟ್ಜರ್​ಲ್ಯಾಂಡ್​ನ ಡಾವೊಸ್​ನಲ್ಲಿ ನಡೆಯಲಿರುವ ವರ್ಲ್ಡ್ ಎಕನಾಮಿಕ್ ಫೋರಂ ವಾರ್ಷಿಕ ಸಭೆಗೆ ಮುನ್ನ ಆಕ್ಸ್​ಫ್ಯಾಮ್ (Oxfam) ಸಂಸ್ಥೆ ಬಿಡುಗಡೆ ಮಾಡಿದ ವರದಿಯಲ್ಲಿ ಬಿಲಿಯನೇರ್​ಗಳ ಮಾಹಿತಿ ಕೊಡಲಾಗಿದೆ. ಈ ಮೂರು ಸಾವಿರ ಬಿಲಿಯನೇರ್​ಗಳಿರುವ ಒಟ್ಟೂ ಆಸ್ತಿಯು ಚೀನಾದಂತಹ ದೈತ್ಯ ದೇಶದ ಜಿಡಿಪಿಗೆ ಸಮವಾಗಿದೆ….

Read More

ನವವಿವಾಹಿತೆ ಸೂಸೈಡ್ ಕೇಸ್​ನಲ್ಲಿ ಬಿಗ್ ಟ್ವಿಸ್ಟ್: ನಾಗಪುರದಲ್ಲಿ ಆತ್ಮಹತ್ಯೆಗೆ ಶರಣಾದ ಗಾನವಿ ಪತಿ ಸೂರಜ್! – Kannada News | Big twist in Bengaluru newly wed Ganavi case: Husband Suraj commits Suicide

ನಾಗಪುರದಲ್ಲಿ ಆತ್ಮಹತ್ಯೆಗೆ ಶರಣಾದ ಗಾನವಿ ಪತಿ ಸೂರಜ್! ಬೆಂಗಳೂರು, ಡಿಸೆಂಬರ್ 27: ಬೆಂಗಳೂರು ನವವಿವಾಹಿತೆ ಗಾನವಿ (26) (Ganavi Suicide Case)ಆತ್ಮಹತ್ಯೆ ಪ್ರಕರಣದಲ್ಲೀಗ ಮಹತ್ವದ ತಿರುವು ಸಿಕ್ಕಿದೆ. ಎರಡು ತಿಂಗಳ ಹಿಂದೆಯಷ್ಟೇ ಸೂರಜ್​ ಅನ್ನು ವರಿಸಿದ್ದ ಗಾನವಿ ಆತ್ಮಹತ್ಯೆಗೆ ಯತ್ನಿಸಿ, ನಂತರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಆಕೆಯ ಆತ್ಮಹತ್ಯೆ ಬೆನ್ನಲ್ಲೇ ಪತಿ ಸೂರಜ್ ಕೂಡ ಆತ್ಮಹತ್ಯೆಗೆ ಶರಣಾಗಿರುವುದರ ಜೊತೆ ಆತನ ತಾಯಿಯೂ ಆತ್ಮಹತ್ಯೆಗೆ ಯತ್ನಿಸಿರುವುದು ಈ ಪ್ರಕರಣಕ್ಕೆ ಹೊಸ ತಿರುವು ತಂದಿದೆ. ಮರ್ಯಾದೆಗೆ ಅಂಜಿ ಸೂರಜ್ ಆತ್ಮಹತ್ಯೆ…

Read More

ಪ್ರಯಾಣಿಕರಿಗೆ ನಿರಾಸೆ ಮಾಡುತ್ತಾ ಬೆಂಗಳೂರು – ಗೋವಾ ವಂದೇ ಭಾರತ್ ಎಕ್ಸ್‌ಪ್ರೆಸ್? ಪ್ರಯಾಣದ ಸಮಯದ ಬಗ್ಗೆ ಚರ್ಚೆ – Kannada News | Vande Bharat Bengaluru Goa: Experts Demand Shorter Travel and Sleeper Coaches for New Route

ಬೆಂಗಳೂರು, ಫೆ.23: ನೈಋತ್ಯ ರೈಲ್ವೆಯು ಬೆಂಗಳೂರು ಮತ್ತು ಗೋವಾದ ಮಡ್ಗಾಂವ್ (Vande Bharat Bengaluru Goa) ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಆರಂಭಿಸಲು ಸಿದ್ಧತೆ ನಡೆಸುತ್ತಿದೆ. ಆದರೆ, ಈ ರೈಲಿನ ಅಂದಾಜು ಪ್ರಯಾಣದ ಸಮಯ ಮತ್ತು ವೇಳಾಪಟ್ಟಿಯ ಬಗ್ಗೆ ಈಗ ಭಾರಿ ಚರ್ಚೆ ಶುರುವಾಗಿದೆ. ವಂದೇ ಭಾರತ್ ರೈಲು ಬೆಂಗಳೂರಿನಿಂದ ಗೋವಾ ತಲುಪಲು ಸುಮಾರು 13 ಗಂಟೆಗಳ ಸಮಯ ತೆಗೆದುಕೊಳ್ಳಬಹುದು ಎಂದು ಅಂದಾಜಿಸಲಾಗಿದೆ. ಇದು ಪ್ರೀಮಿಯಂ ರೈಲಿಗೆ ಬಹಳ ದೀರ್ಘ ಸಮಯ ಎಂಬುದು ತಜ್ಞರ ಅಭಿಪ್ರಾಯ….

Read More

‘ಕಲ್ಕಿ 2898 AD’ ಚಿತ್ರಕ್ಕೆ ಹೀರೋಗಿಂತಲೂ ಹೆಚ್ಚು ಸಂಭಾವನೆ ಪಡೆದ ಕಮಲ್ ಹಾಸನ್

2024ರ ಬ್ಲಾಕ್‌ ಬಸ್ಟರ್ ಸಿನಿಮಾ ‘ಕಲ್ಕಿ 2898 AD’ (Kalki 2898 AD) ಕೇವಲ ದೃಶ್ಯ ವೈಭವದಿಂದ ಮಾತ್ರವಲ್ಲದೇ, ಅದರಲ್ಲಿ ನಟಿಸಿದ ಕಲಾವಿದರ ಸಂಭಾವನೆಯ ವಿಚಾರವಾಗಿಯೂ ಈಗ ಸುದ್ದಿಯಲ್ಲಿದೆ. ಪ್ರಭಾಸ್, ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ ಅವರಂತಹ ದಿಗ್ಗಜರ ನಡುವೆ, ತಮಿಳಿನ ಸ್ಟಾರ್ ಹೀರೋ ಕಮಲ್ ಹಾಸನ್ (Kamal Haasan) ಅವರು ಪಡೆದ ಸಂಭಾವನೆ ಎಷ್ಟು ಎಂಬ ಕುತೂಹಲಕ್ಕೆ ಈಗ ಅವರ ಆಪ್ತ ಗೆಳೆಯ ಯುಗಿ ಸೇತು ತೆರೆ ಎಳೆದಿದ್ದಾರೆ. ಕಮಲ್ ಹಾಸನ್ ಅವರ ದಶಕಗಳ ಕಾಲದ…

Read More

RCB vs CSK: ಸಂಜು ಬಗ್ಗೆ ಒಂದೂ ಮಾತನಾಡದ ರುತುರಾಜ್: ಆರ್​​ಸಿಬಿ ವಿರುದ್ಧದ ಸೋಲಿಗೆ ದೂರಿದ್ದು ಯಾರನ್ನು?

ಬೆಂಗಳೂರು (ಏ. 06): ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಭಾನುವಾರದ ಪಂದ್ಯ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದು, ಇದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 43 ರನ್‌ಗಳಿಂದ ಸೋಲಿಸಿತು. ಈ ಮೂಲಕ ಆರ್​​ಸಿಬಿ ಟೂರ್ನಿಯಲ್ಲಿ ಸತತ ಎರಡನೇ ಜಯ ಕಂಡು ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿದೆ. ಅತ್ತ ಸಿಎಸ್​​ಕೆ ಈ ಋತುವಿನಲ್ಲಿ ಸತತ ಮೂರನೇ ಸೋಲನ್ನು ಅನುಭವಿಸಿತು. 251 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಚೆನ್ನೈ 19.4 ಓವರ್‌ಗಳಲ್ಲಿ 207…

Read More