Headlines

ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ – Kannada News | Haveri: Malatesha idol desecrated in Gundenahalli village; locals demand action

ಹಾವೇರಿ, ಡಿಸೆಂಬರ್​ 19: ಕಲ್ಲಿನಿಂದ ಜಜ್ಜಿ ಮಾಲತೇಶ ದೇವರ ಮೂರ್ತಿಯನ್ನು ಕಿಡಿಗೇಡಿಗಳು ಭಗ್ನಗೊಳಿಸಿರುವಂತಹ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಗುಂಡೇನಹಳ್ಳಿ ಗ್ರಾಮದ ಬಳಿ ನಡೆದಿದೆ. ಮಾಲತೇಶ ದೇವರ ಮೂರ್ತಿಯ ಮುಖ ಮತ್ತು ಕಣ್ಣಿನ ಭಾಗಕ್ಕೆ ಕಲ್ಲಿನಿಂದ ಜಜ್ಜಲಾಗಿದೆ. ಸದ್ಯ ದುಷ್ಕರ್ಮಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಅಣ್ಣಪ್ಪ ಬಾರ್ಕಿ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಶಕ್ತಿ ಯೋಜನೆಯಿಂದ ಶಕ್ತಿ ಕಳೆದುಕೊಂಡ ಬಿಎಂಟಿಸಿ! ಸರ್ಕಾರದಿಂದ ಬರಬೇಕಿದ್ದ 850 ಕೋಟಿ ರೂ. ಬಾಕಿ

ಬೆಂಗಳೂರು, ಮಾರ್ಚ್​ 30: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಶಕ್ತಿ ಯೋಜನೆಯ ಪರಿಣಾಮವಾಗಿ ಗಂಭೀರ ಆರ್ಥಿಕ ಒತ್ತಡವನ್ನು ಎದುರಿಸುತ್ತಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ಈ ಯೋಜನೆಗಾಗಿ ಸರ್ಕಾರದಿಂದ ಬರಬೇಕಿದ್ದ 850 ಕೋಟಿ ರೂ. ಬಾಕಿಯಾಗಿದ್ದು, ವಿಧಾನ ಪರಿಷತ್ತಿನಲ್ಲಿ ಎಂಎಲ್ಸಿ ಹೆಚ್.ಎಸ್ ಗೋಪಿನಾಥ್ ಕೇಳಿದ ಪ್ರಶ್ನೆಗೆ ಉತ್ತರವಾಗಿ ಈ ಮಾಹಿತಿ ಬಹಿರಂಗವಾಗಿದೆ. ಶಕ್ತಿ ಯೋಜನೆ ಆರಂಭವಾದ ನಂತರದಿಂದ ಫೆಬ್ರವರಿ 2026ರವರೆಗೆ ರಾಜ್ಯದಾದ್ಯಂತ ಮಹಿಳೆಯರು ಒಟ್ಟು 680.87 ಕೋಟಿ ರೂ. ವೆಚ್ಚದಲ್ಲಿ ಉಚಿತ ಬಸ್ ಪ್ರಯಾಣಗಳನ್ನು…

Read More

ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ ನೀಡಿದ ಆರ್ಥಿಕ ತಜ್ಞ

ಬೆಳ್ಳಿ ಮತ್ತು ಚಿನ್ನದ ಬೆಲೆ ಕಳೆದ ಒಂದು ವರ್ಷದಲ್ಲಿ ಸಿಕ್ಕಾಪಟ್ಟೆ ಏರಿದೆ. ಹೀಗಾಗಿ ಹಲವರು ಚಿನ್ನ ಹಾಗೂ ಬೆಳ್ಳಿ ಮೇಲೆ ಹೂಡಿಕೆ ಮಾಡುತ್ತಿದ್ದಾರೆ. ಬಹಳಷ್ಟು ತಜ್ಞರು ಚಿನ್ನದ ಮೇಲೆ ಸ್ವಲ್ಪ ಭಾಗವಾದರೂ ಹೂಡಿಕೆ ಮಾಡಿ ಎಂದು ಸಲಹೆ ನೀಡುತ್ತಿದ್ದಾರೆ. ಹೀಗಾಗಿ ಹಲವರು ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುತ್ತಿದ್ದಾರೆ. ಚಿನ್ನ, ಬೆಳ್ಳೆ ದರ ಇನ್ನೂ ಏರಿಕೆಯಾಗುತ್ತೆ ಎಂದು ಅನೇಕ ಜನ ಸಾಲ ಮಾಡಿ ಹೂಡಿಕೆ ಮಾಡಲು ಮುಗಿಬಿದ್ದಿದ್ದಾರೆ. ಆದ್ರೆ, ಮತ್ತೊಂದೆಡೆ ಚಿನ್ನ ಬೆಳ್ಳಿ ಇಳಿಕೆಯತ್ತ ಸಾಗಿದೆ….

Read More

SSLC ತೃತೀಯ ಭಾಷೆಗೆ ಗ್ರೇಡ್​​ ವಿವಾದ: ರಾಜ್ಯಪಾಲರ ನಿಲುವಿಗೆ ಕರವೇ ಕೆಂಡ; ಸೋಮವಾರ ರಾಜಭವನ ಮುತ್ತಿಗೆಗೆ ಕರೆ

ಬೆಂಗಳೂರು, ಏಪ್ರಿಲ್​​ 04: SSLC ಹಿಂದಿ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​ ನೀಡುವ ರಾಜ್ಯ ಸರ್ಕಾರದ ನಿರ್ಧಾರ ಮರುಪರಿಶೀಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿಗೆ ರಾಜ್ಯಪಾಲರು ಪತ್ರ ಬರೆದಿರುವ ವಿಚಾರವೀಗ ಕರ್ನಾಟಕ ರಕ್ಷಣಾ ವೇದಿಕೆಯ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ಸೋಮವಾರ ಬೆಳಗ್ಗೆ 11 ಗಂಟೆಗೆ ಲೋಕಭವನ ಮುತ್ತಿಗೆಗೆ ಕರವೇ ಮುಂದಾಗಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ತಿಳಿಸಿದ್ದಾರೆ. ರಾಜ್ಯಪಾಲರ ಪತ್ರದ ಬಗ್ಗೆ ಕಿಡಿ ಕಾರಿರುವ ನಾರಾಯಣಗೌಡ, ಈ ಹಸ್ತಕ್ಷೇಪ…

Read More

ಸಿಗರೇಟ್ ವಿಚಾರವಾಗಿ ಎರಡು ಗುಂಪಿನ ನಡುವೆ ಹೊಡೆದಾಟ! ಓರ್ವ ಸಾವು

ಮಂಡ್ಯ , ಏಪ್ರಿಲ್ 06: ಕ್ಷುಲ್ಲಕ ಕಾರಣಗಳು ಹಾಗೂ ಆಸ್ತಿ ವಿವಾದಗಳಿಂದ ಮಂಡ್ಯದಲ್ಲಿ (Mandya) ಎರಡು ಪ್ರತ್ಯೇಕ ಹಿಂಸಾತ್ಮಕ ಘಟನೆಗಳು ನಡೆದಿದ್ದು, ಒಬ್ಬ ಯುವಕ ಸಾವನ್ನಪ್ಪಿದ್ದಾನೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮದ್ದೂರು ಮತ್ತು ಕೆ.ಆರ್.ಪೇಟೆಯಲ್ಲಿ ಮಾರಾಮಾರಿ ನಡೆದಿದ್ದು, ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಎರಡೂ ಘಟನೆಗಳಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜಿ ಸಂಧಾನ ನಡೆಯುತ್ತಿರುವಾಗಲೇ ಮತ್ತೆ ಗಲಾಟೆ ಮದ್ದೂರು ಪಟ್ಟಣದ ಪಟೇಲ್ ಸಾಮಿಲ್ ಸಮೀಪ ಎರಡು ಯುವಕರ ಗುಂಪುಗಳ ನಡುವೆ ಗಲಾಟೆ ನಡೆದಿದೆ. ಪರಿಣಾಮವಾಗಿ ಮರಳಿಗ ಗ್ರಾಮದ ಯಶವಂತ್…

Read More

Horoscope Today 22 December: ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 22 ಡಿಸೆಂಬರ್ 2025 ರ ದ್ವಾದಶ ರಾಶಿಗಳ ಫಲಾಫಲವನ್ನು ವಿವರಿಸಿದ್ದಾರೆ. ಈ ದಿನವು ಸೋಮವಾರವಾಗಿದ್ದು, ವಿಶ್ವಾವಸು ನಾಮ ಸಂವತ್ಸರ, ಪುಷ್ಯ ಮಾಸ, ಶುಕ್ಲ ಪಕ್ಷ, ಬಿದಿಗೆ ತಿಥಿಯನ್ನು ಹೊಂದಿದೆ. ಉತ್ತರಾಷಾಢ ನಕ್ಷತ್ರದಲ್ಲಿ ಚಂದ್ರನ ಸಂಚಾರವು ಎಲ್ಲ ರಾಶಿಗಳ ಮೇಲೆ ವಿಭಿನ್ನ ಪರಿಣಾಮಗಳನ್ನು ಬೀರಲಿದೆ ಎಂದು ಗುರೂಜಿ ತಿಳಿಸಿದ್ದಾರೆ. ಮೇಷ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ವೃಷಭ ರಾಶಿಯವರಿಗೆ ಆಲಸ್ಯ ತ್ಯಜಿಸಲು ಸೂಚಿಸಲಾಗಿದೆ. ಮಿಥುನ ರಾಶಿಯವರು ಸಮಯಕ್ಕೆ ತಕ್ಕಂತೆ ಕೆಲಸಗಳನ್ನು…

Read More

ಆರ್‌ಎಸ್‌ಎಸ್ ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ – Kannada News | Congress leader Manickam Tagore compares RSS to Al Qaeda

ನವದೆಹಲಿ, ಡಿಸೆಂಬರ್ 28: ಬಿಜೆಪಿ ಮತ್ತು ಆರ್​​ಎಸ್​ಎಸ್​ ಅನ್ನು ಹೊಗಳುವ ಮೂಲಕ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ (Digvijay Singh) ವಿವಾದ ಸೃಷ್ಟಿಸಿದ್ದರು. ದಿಗ್ವಿಜಯ ಸಿಂಗ್ ಎಕ್ಸ್ (ಹಿಂದಿನ ಟ್ವಿಟರ್)ನಲ್ಲಿ ಹಳೆಯ, ದಿನಾಂಕವಿಲ್ಲದ ಫೋಟೋವನ್ನು ಹಂಚಿಕೊಂಡಿದ್ದರು. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಹಿರಿಯ ಎಲ್‌ಕೆ ಅಡ್ವಾಣಿ ಅವರೊಂದಿಗೆ ಇದ್ದಾರೆ. ಈ ಪೋಸ್ಟ್​​ನಲ್ಲಿ ದಿಗ್ವಿಜಯ್ ಸಿಂಗ್ ಆರ್‌ಎಸ್‌ಎಸ್‌ನ ಸಾಂಸ್ಥಿಕ ಬಲವನ್ನು ಶ್ಲಾಘಿಸಿದ್ದರು. ಇದು ಸಾಮಾನ್ಯ ಕಾರ್ಯಕರ್ತರನ್ನು ರಾಜಕೀಯ ನಾಯಕರನ್ನಾಗಿ ಪರಿವರ್ತಿಸಲು ಸಹಾಯ ಮಾಡಿದೆ ಎಂದು ಹೇಳಿದ್ದರು….

Read More

ಟಾಸ್ ಗೆದ್ದಿದ್ರೆ ಕಥೆನೇ ಬೇರೆ ಇರುತ್ತಿತ್ತು..! – Kannada News | Salman ali agha post match presentation of pak vs sl match

T20 World Cup 2026: ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡದ ಅಭಿಯಾನ ಅಂತ್ಯವಾಗಿದೆ. ಪಾಕ್ ಪಾಲಿಗೆ ನಿರ್ಣಾಯಕವಾಗಿದ್ದ ಪಂದ್ಯದಲ್ಲಿ ಗೆದ್ದರೂ ನೆಟ್ ರನ್ ರೇಟ್​ನಲ್ಲಿ ಹಿಂದೆ ಉಳಿಯುವ ಮೂಲಕ ಪಾಕಿಸ್ತಾನ್ ತಂಡ ವಿಶ್ವಕಪ್​ನಿಂದ ಹೊರಬಿದ್ದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಪಾಕಿಸ್ತಾನ್ ತಂಡವು 20 ಓವರ್​ಗಳಲ್ಲಿ 212 ರನ್​ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ತಂಡವನ್ನು 147 ರನ್​ಗಳಿಗೆ ನಿಯಂತ್ರಿಸಿದ್ದರೆ ಪಾಕಿಸ್ತಾನ್ ತಂಡಕ್ಕೆ ನೆಟ್ ರನ್ ರೇಟ್​ನಲ್ಲಿ ನ್ಯೂಝಿಲೆಂಡ್ ತಂಡವನ್ನು ಹಿಂದಿಕ್ಕಿ ಸೆಮಿಫೈನಲ್​ಗೇರುವ ಅವಕಾಶವಿತ್ತು. ಆದರೆ…

Read More

KMF SHIMUL Recruitment: ಕರ್ನಾಟಕದ ಹಾಲು ಒಕ್ಕೂಟದಲ್ಲಿ 194 ಹುದ್ದೆಗಳಿಗೆ ನೇಮಕಾತಿ; 10ರಿಂದ ಪದವೀಧರರವರೆಗೆ ಅರ್ಜಿ ಸಲ್ಲಿಸಲು ಅವಕಾಶ – Kannada News | KMF SHIMUL Jobs 2026: 194 Assistant Manager, Jr Technician Posts in Karnataka Milk Fed

ಕರ್ನಾಟಕದ ಹಾಲು ಒಕ್ಕೂಟದಲ್ಲಿ ನೇಮಕಾತಿ ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF SHIMUL) ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ ಒದಗಿಸಿದೆ. ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ವ್ಯವಸ್ಥಾಪಕ ಹಾಗೂ ಜೂನಿಯರ್ ಟೆಕ್ನಿಷಿಯನ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಸಂಸ್ಥೆಯಲ್ಲಿ ಸ್ಥಿರ ಉದ್ಯೋಗ ಬಯಸುವವರಿಗೆ ಇದು ಉತ್ತಮ ಅವಕಾಶವಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಫೆಬ್ರವರಿ 21 ರವರೆಗೆ…

Read More

Agriculture Jobs 2026: ಕರ್ನಾಟಕ ಕೃಷಿ ಇಲಾಖೆಯಲ್ಲಿ ಉದ್ಯೋಗಾವಕಾಶ; 890 ಕೃಷಿ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ – Kannada News | Karnataka Agriculture Jobs 2026: 890 AO/AAO Posts by KSDA KEA Apply Now!

ಕರ್ನಾಟಕ ರಾಜ್ಯ ಕೃಷಿ ಇಲಾಖೆಯು (KSDA) ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ಹಮ್ಮಿಕೊಂಡಿದೆ. ಒಟ್ಟು 890 ಕೃಷಿ ಅಧಿಕಾರಿ (AO) ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ಪದವಿ ಪಡೆದ ಹಾಗೂ ಕರ್ನಾಟಕ ಸರ್ಕಾರದಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವ ಉದ್ಯೋಗಾಕಾಂಕ್ಷಿಗಳು ಈ ಸುವರ್ಣಾವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತರು ಮೇ 10ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ಹುದ್ದೆಗಳ ವಿವರ ಮತ್ತು…

Read More