Headlines

ಬಿಹಾರ ಉಪಚುನಾವಣೆ: ಪ್ರಶಾಂತ್ ಕಿಶೋರ್ ಅವರ ಜನ್ ಸುರಾಜ್ ಪಕ್ಷಕ್ಕೆ ಪರೀಕ್ಷೆ: ಬಂಕಿಪುರದಲ್ಲಿ ತ್ರಿಕೋನ ಸ್ಪರ್ಧೆ – Kannada News | Bihar By election: Prashant Kishor’s Jan Suraaj Party Faces Crucial Test in Bankipur

ನವದೆಹಲಿ, ಆಗಸ್ಟ್ 03: ಬಿಹಾರ, ಮಧ್ಯಪ್ರದೇಶ ಮತ್ತು ಗುಜರಾತ್‌ ರಾಜ್ಯಗಳ ಮೂರು ಪ್ರಮುಖ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30 ರಂದು ನಡೆದಿದ್ದ ಉಪಚುನಾವಣೆಯ ಮತಎಣಿಕೆ ಬೆಳಗ್ಗೆ 8 ಗಂಟೆಯಿಂದ ಆರಂಭಗೊಂಡಿದೆ. ಆರಂಭದಲ್ಲಿ ಅಂಚೆ ಮತಗಳ ಎಣಿಕೆ ನಡೆಯುತ್ತಿದ್ದು, ನಂತರ ಎಲೆಕ್ಟ್ರಾನಿಕ್ ಮತಯಂತ್ರಗಳಲ್ಲಿ (EVM) ದಾಖಲಾದ ಮತಗಳ ಎಣಿಕೆ ಕಾರ್ಯ ನಡೆಯಲಿದೆ. ಈ ಫಲಿತಾಂಶವು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಮಾತ್ರವಲ್ಲದೆ, ಬಿಹಾರದ ಪ್ರಶಾಂತ್ ಕಿಶೋರ್(Prashant Kishor) ನೇತೃತ್ವದ ‘ಜನ್ ಸುರಾಜ್’ ಪಕ್ಷಕ್ಕೂ ಅತ್ಯಂತ ನಿರ್ಣಾಯಕವಾಗಿದೆ. ಬಿಜೆಪಿ…

Read More

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಸೈಬರ್ ಹೂಡಿಕೆ ವಂಚನೆ ಪ್ರಕರಣಗಳು! ಸಾರ್ವಜನಿಕರಿಗೆ ಪೊಲೀಸರ ಸೂಚನೆ – Kannada News | Investment Frauds Surge in Bengaluru: Cyber Crime Police Issues Advisory

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಸೈಬರ್ ಹೂಡಿಕೆ ವಂಚನೆ ಪ್ರಕರಣಗಳು! Image Credit source: gettyimages.com ಬೆಂಗಳೂರು, ಆಗಸ್ಟ್ 03: ಬೆಂಗಳೂರಿನಲ್ಲಿ ಸೈಬರ್ ಅಪರಾಧಗಳ ಪೈಕಿ ಆನ್‌ಲೈನ್ ಹೂಡಿಕೆ ವಂಚನೆ (Investment Fraud) ಪ್ರಕರಣಗಳು ಅತ್ಯಂತ ವೇಗವಾಗಿ ಹೆಚ್ಚಾಗುತ್ತಿವೆ. ಡಿಜಿಟಲ್ ಅರೆಸ್ಟ್ ಹಾಗೂ ಇತರ ಸೈಬರ್ ಅಪರಾಧಗಳಿಗಿಂತಲೂ ಹೂಡಿಕೆ ನೆಪದಲ್ಲಿ ಸಾರ್ವಜನಿಕರಿಗೆ ಕೋಟ್ಯಂತರ ರೂಪಾಯಿ ವಂಚಿಸುವ ಪ್ರಕರಣಗಳೇ ಅಗ್ರಸ್ಥಾನದಲ್ಲಿವೆ ಎಂದು ಸೈಬರ್ ಕ್ರೈಂ ಪೊಲೀಸರ ವರದಿಗಳು ತಿಳಿಸಿವೆ. ಅಪರಾಧಿಗಳ ಕಾರ್ಯಾಚರಣೆ ಮತ್ತು ವಂಚನೆಯ ವಿಧಾನ ವಂಚಕರು ಮುಖ್ಯವಾಗಿ ವಾಟ್ಸಾಪ್, ಟೆಲಿಗ್ರಾಂ…

Read More

ಮೊದಲು ಶ್ರೀಲಂಕಾ ವಿರುದ್ಧ ಗೆಲ್ಲಿ, ಫೈನಲ್ ಆಮೇಲೆ ನೋಡೋಣ! – Kannada News | Forget WTC Finals, Focus on Rebuilding Team: Deep Dasgupta to Team India

ಭಾರತ ಮತ್ತು ಶ್ರೀಲಂಕಾ ನಡುವಣ ಟೆಸ್ಟ್ ಸರಣಿ ಆಗಸ್ಟ್ 15 ರಿಂದ ಶುರುವಾಗಲಿದೆ. ಈ ಸರಣಿಯು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ದೃಷ್ಟಿಯಿಂದ ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಈ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದರೆ ಮಾತ್ರ ಭಾರತ ತಂಡದ WTC ಫೈನಲ್ ಹಾದಿ ಸುಗಮವಾಗಲಿದೆ. ಆದರೆ ಟೀಮ್ ಇಂಡಿಯಾ ಸದ್ಯ ಫೈನಲ್ ತಲುಪುವ ಒತ್ತಡವನ್ನು ಬದಿಗಿಟ್ಟು, ಶ್ರೀಲಂಕಾ ವಿರುದ್ಧ ಕೇವಲ ಪಂದ್ಯಗಳನ್ನು ಗೆಲ್ಲುವ ಕಡೆಗೆ ಗಮನ ಹರಿಸಬೇಕೆಂದು ಭಾರತದ ಮಾಜಿ ಕ್ರಿಕೆಟಿಗ ದೀಪ್ ದಾಸ್‌ಗುಪ್ತಾ…

Read More

ಇರಾನ್ ಜತೆ ಮತ್ತೆ ಶಾಂತಿ ಮಾತುಕತೆ, ದಾಳಿ ರದ್ದು: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಳಿವು – Kannada News | US Iran Peace Talks Begin: Trump Halts Attacks, Focus on Hormuz and Nuclear Program

ವಾಷಿಂಗ್ಟನ್, ಆಗಸ್ಟ್​ 03: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮುಂದುವರೆದಿರುವಂತೆಯೇ, ಇರಾನ್ ಜೊತೆಗಿನ ರಾಜತಾಂತ್ರಿಕ ಮಾತುಕತೆಗಳು ಇಂದಿನಿಂದ ಆರಂಭವಾಗಲಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ದೃಢಪಡಿಸಿದ್ದಾರೆ. ಇರಾನ್ ಮೇಲಿನ ಪ್ರಬಲ ಮಿಲಿಟರಿ ದಾಳಿಯನ್ನು ತಾತ್ಕಾಲಿಕವಾಗಿ ತಡೆಹಿಡಿದಿರುವ ಅಮೆರಿಕ, ಶಾಂತಿ ಒಪ್ಪಂದಕ್ಕೆ ಆದ್ಯತೆ ನೀಡಲು ನಿರ್ಧರಿಸಿದೆ. ಏರ್ ಫೋರ್ಸ್ ಒನ್ ವಿಮಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ನಮ್ಮ ಗುರಿ ಅನಗತ್ಯವಾಗಿ ಜನರ ಜೀವ ತೆಗೆಯುವುದಲ್ಲ. ಮಾತುಕತೆಯ ಮಾರ್ಗ ತೆರೆದಿದ್ದು, ಫಲಿತಾಂಶ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ ಎಂದು…

Read More

ರಶೀದ್ ಖಾನ್ ಸ್ಪಿನ್ ಮೋಡಿ: 20 ಎಸೆತಗಳಲ್ಲಿ 5 ವಿಕೆಟ್​! – Kannada News | Rashid Khan claimed the first five wicket haul in the Hundred 2026

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ದಿ ಹಂಡ್ರೆಡ್ ಲೀಗ್​ನಲ್ಲಿ ಅಫ್ಘಾನಿಸ್ತಾನ್ ಸ್ಪಿನ್ನರ್ ರಶೀದ್ ಖಾನ್ 5 ವಿಕೆಟ್​ಗಳ ಸಾಧನೆ ಮಾಡಿದ್ದಾರೆ. ಅದು ಸಹ 20 ಎಸೆತಗಳಲ್ಲಿ ಎಂಬುದು ವಿಶೇಷ. ಅಂದರೆ ‘ದಿ ಹಂಡ್ರೆಡ್’ ಲೀಗ್‌ನಲ್ಲಿ ಪ್ರತಿ ಇನ್ನಿಂಗ್ಸ್‌ಗೆ ಇರುವುದು ಕೇವಲ 100 ಎಸೆತಗಳು ಮಾತ್ರ. ಬ್ಯಾಟರ್‌ಗಳ ಅಬ್ಬರವೇ ಹೆಚ್ಚಾಗಿರುವ 100 ಎಸೆತಗಳ ಈ ಟೂರ್ನಿಯಲ್ಲಿ ಕೇವಲ 20 ಎಸೆತಗಳ ಕೋಟಾದಲ್ಲಿ ಎದುರಾಳಿ ಪಡೆಯ 5 ವಿಕೆಟ್ ಪಡೆಯುವುದು ಅತಿ ದೊಡ್ಡ ಸಾಹಸವೇ ಸರಿ. 2021 ರಲ್ಲಿ ಆರಂಭವಾದ ಈ ಲೀಗ್‌ನ…

Read More

ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ – Kannada News | Kabini Dam Full, Water released after heavy monsoon rain: Bidarahalli Bridge Submerged After Heavy Inflow

ಮೈಸೂರು, ಆಗಸ್ಟ್ 3: ಮೈಸೂರು ಜಿಲ್ಲೆಯ ಎಚ್​ಡಿ ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದ ಬಳಿಯ ಕಬಿನಿ ಜಲಾಶಯವು ಸಂಪೂರ್ಣ ಭರ್ತಿಯಾಗಿದೆ. ಕೇರಳದ ವಯನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮವಾಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಹೀಗಾಗಿ, ಕಬಿನಿ ಜಲಾಶಯದಿಂದ ಹೊರಹರಿವನ್ನು ಹೆಚ್ಚಿಸಲಾಗಿದ್ದು, ಇದರ ನೇರ ಪರಿಣಾಮವಾಗಿ ಜಲಾಶಯದ ಸಮೀಪವಿರುವ ಸರ್ಗೂರು ತಾಲೂಕಿನ ಬಿದರಹಳ್ಳಿ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಈ ಸೇತುವೆ ಬಿದರಹಳ್ಳಿ ಗ್ರಾಮ ಮತ್ತು ಎಚ್.ಡಿ. ಕೋಟೆ ನಡುವೆ ಪ್ರಮುಖ ಸಂಪರ್ಕ ಕಲ್ಪಿಸುವ ಮಾರ್ಗವಾಗಿದೆ. ಸೇತುವೆ…

Read More

‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಮನದ ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ – Kannada News | Priyanka Upendra Discusses Prajaakeeya, She wants Upendra To contestant Election

ಖ್ಯಾತ ನಟಿ ಪ್ರಿಯಾಂಕಾ ಉಪೇಂದ್ರ ಅವರು ಇತ್ತೀಚೆಗೆ ಉಪೇಂದ್ರ ಅವರ ಪ್ರಜಾಕೀಯ ಪಕ್ಷದ ಬಗ್ಗೆ ಕೆಲವು ಮಾಹಿತಿ ನೀಡಿದ್ದಾರೆ. ದಳಪತಿ ವಿಜಯ್ ತಮಿಳು ನಾಡು ಸಿಎಂ ಆದ ಬಳಿಕ ಉಪೇಂದ್ರ ಅವರಿ್ಡ ಪ್ರಜಾಕೀಯ ಪಕ್ಷದ ಕುರಿತು ಆಸಕ್ತಿ ಹೆಚ್ಚಾಯಿತೇ ಎಂದು ಕೇಳಲಾಯಿತು. ಇದಕ್ಕೆ ಉತ್ತರಿಸಿದ ಅವರು, ‘ವಿಜಯ್ ಅವರು ಗೆದ್ದ ನಂತರ ಉಪೇಂದ್ರ ಮತ್ತಷ್ಟು ಸಕ್ರಿಯರಾಗಿದ್ದಾರೆ. ಪ್ರಜಾಕೀಯ 50,000ಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದೆ. ವಿದೇಶದಿಂದಲೂ ಬೆಂಬಲ ವ್ಯಕ್ತವಾಗುತ್ತಿದೆ. ಮುಂದಿನ ಎರಡು ವರ್ಷಗಳಲ್ಲಿ ನಡೆಯುವ ಚುನಾವಣೆಯಲ್ಲಿ ಉಪೇಂದ್ರ ಅವರು…

Read More

Karnataka Dam Water Level: 100 ಅಡಿ ಭರ್ತಿಯಾದ‌ ಕೆ.ಆರ್.ಎಸ್ ಜಲಾಶಯ! – Kannada News | KRS Dam Water Level Crosses 100 Feet Mark, Cauvery Reservoir News

ಬೆಂಗಳೂರು, ಆಗಸ್ಟ್ 03: ಕಾವೇರಿ ಹಾಗೂ ಮಲೆನಾಡು ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಪ್ರಬಲ ಮುಂಗಾರು ಮಳೆಯಿಂದಾಗಿ ರಾಜ್ಯದ ಪ್ರಮುಖ ಜಲಾಶಯಗಳಿಗೆ ಹರಿದುಬರುತ್ತಿರುವ ಒಳಹರಿವಿನ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕಾವೇರಿ ನಾಡಿನ ಜೀವನಾಡಿ ಕೃಷ್ಣರಾಜಸಾಗರ (ಕೆ.ಆರ್.ಎಸ್) ಜಲಾಶಯದ ನೀರಿನ ಮಟ್ಟ 100 ಅಡಿಯ ಗಡಿ ದಾಟುವ ಮೂಲಕ ಶತಕದ ಸನಿಹಕ್ಕೆ ತಲುಪಿ ಭರ್ತಿಯಾಗುವತ್ತ ಸಾಗಿದೆ. 1. ಕೆ.ಆರ್.ಎಸ್. ಜಲಾಶಯ (ಮಂಡ್ಯ) ಗರಿಷ್ಠ ಮಟ್ಟ: 124.80 ಅಡಿ ಇಂದಿನ ಮಟ್ಟ: 100.34 ಅಡಿ ಒಳಹರಿವು:…

Read More

CWG 2026: 61 ರಿಂದ 39… ಈ ಬಾರಿ ಪದಕ ಕಮ್ಮಿಯಾಗಲು ಇದುವೇ ಅಸಲಿ ಕಾರಣ! – Kannada News | The Real Reason Behind India’s Medal Drop in Commonwealth games 2026

ಗ್ಲ್ಯಾಸ್ಗೋದಲ್ಲಿ ಮುಕ್ತಾಯಗೊಂಡ 2026ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕಗಳ ಸಂಖ್ಯೆಯಲ್ಲಿ ಗಣನೀಯ ಕುಸಿತ ಕಂಡುಬಂದಿದೆ. ಕ್ರೀಡಾಕೂಟದ ಅಂತ್ಯಕ್ಕೆ 13 ಚಿನ್ನ, 17 ಬೆಳ್ಳಿ ಹಾಗೂ 9 ಕಂಚಿನೊಂದಿಗೆ ಒಟ್ಟು 39 ಪದಕಗಳನ್ನು ಗೆದ್ದ ಭಾರತೀಯ ಅಥ್ಲೀಟ್‌ಗಳು ಪದಕ ಪಟ್ಟಿಯಲ್ಲಿ 4ನೇ ಸ್ಥಾನ ಪಡೆದುಕೊಂಡಿದ್ದಾರೆ. ಇದು 2022ರ ಬರ್ಮಿಂಗ್​​​ಹ್ಯಾಮ್​ ಕೂಟದ ಪ್ರದರ್ಶನಕ್ಕೆ ಹೋಲಿಸಿದರೆ ತುಂಬಾ ಕಮ್ಮಿ. ಏಕೆಂದರೆ ಕಳೆದ ಬಾರಿ ಬರೋಬ್ಬರಿ 61 ಪದಕಗಳನ್ನು ಮುಡಿಗೇರಿಸಿಕೊಂಡಿದ್ದ ಭಾರತ, ಈ ಬಾರಿ ಕೇವಲ 39 ಪದಕಗಳಿಗಷ್ಟೇ ತೃಪ್ತಿಪಡಬೇಕಾಗಿ ಬಂದಿದೆ. ಆದರೆ,…

Read More

ಮಂಗಳೂರು-ಬೆಂಗಳೂರು ರೈಲು ಪ್ರಯಾಣಿಕರೇ ಗಮನಿಸಿ: ಎಡಕುಮೇರಿ ಗುಡ್ಡಕುಸಿತದಿಂದ ಇಂದೂ ಹಲವು ರೈಲುಗಳ ಸಂಚಾರ ಬಂದ್ – Kannada News | Sakleshpur Yedakumari Landslide: Train Services Halted, Routes Diverted on Mangaluru Bengaluru Route

ಎಡಕುಮೇರಿ ಬಳಿ ರೈಲ್ವೆ ಹಳಿ ಮೇಲೆ ಗುಡ್ಡಕುಸಿತವಾಗಿರುವುದು.Image Credit source: tv9 ಹಾಸನ, ಆಗಸ್ಟ್ 3: ಹಾಸನ ಜಿಲ್ಲೆಯ (Hassan) ಸಕಲೇಶಪುರ ತಾಲೂಕಿನ ಎಡಕುಮೇರಿ–ಶಿರಿಬಾಗಿಲು ಬಳಿ ರೈಲ್ವೆ ಹಳಿ ಮೇಲೆ ಗುಡ್ಡಕುಸಿತವಾಗಿರುವ ಹಿನ್ನೆಲೆಯಲ್ಲಿ ಮಂಗಳೂರು–ಬೆಂಗಳೂರು ಮಾರ್ಗದಲ್ಲಿ (Mangalore Bangalore Train) ರೈಲು ಸಂಚಾರಕ್ಕೆ ಮತ್ತೆ ಅಡಚಣೆ ಉಂಟಾಗಿದೆ. ಶನಿವಾರ ರಾತ್ರಿ ಕುಸಿದ ಮಣ್ಣು ತೆರವು ಕಾರ್ಯಾಚರಣೆ ಮಳೆಯ ನಡುವೆಯೂ ಮುಂದುವರಿದಿದ್ದು, ಇಂದು ಕೂಡ ಕೆಲವು ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ ಹಾಗೂ ಹಲವು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ….

Read More