Headlines

ದೆಹಲಿ: ಮಾದಕ ದ್ರವ್ಯ ವಿರೋಧಿ ಕಾರ್ಯಾಚರಣೆ ವೇಳೆ ನಾಲ್ಕನೇ ಮಹಡಿಯಿಂದ ಹಾರಿ ನೈಜೀರಿಯಾ ಮಹಿಳೆ ಸಾವು – Kannada News | Delhi Drug Raid: Nigerian Woman Dies Jumping from 4th Floor; Meth Lab Suspected

ನವದೆಹಲಿ, ಜೂನ್ 12: ಮಾದಕದ್ರವ್ಯ ವಿರೋಧಿ ದಾಳಿ ವೇಳೆ ಭಯದಿಂದ ನೈಜೀರಿಯಾ ಮಹಿಳೆಯೊಬ್ಬಳು ಅಪಾರ್ಟ್​ಮೆಂಟ್​(Apartment)ನ ನಾಲ್ಕನೇ ಮಹಡಿಯಿಂದ ಹಾರಿ ಪ್ರಾಣ ಕಳೆದುಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ ಉತ್ತರ ಜಿಲ್ಲೆಯ ಮಾದಕವಸ್ತು ವಿರೋಧಿ ದಳದ ದಾಳಿಯ ಸಮಯದಲ್ಲಿ ಸ್ವರೂಪ್ ನಗರದಲ್ಲಿ ತನ್ನ ನಾಲ್ಕನೇ ಮಹಡಿಯ ಫ್ಲಾಟ್‌ನ ಬಾಲ್ಕನಿಯಿಂದ ಹಾರಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಮೃತ ಮಹಿಳೆಯನ್ನು ಸ್ಟೆಲ್ಲಾ ಪಯಸ್ ಎಂದು ಗುರುತಿಸಲಾಗಿದ್ದು, ಬುರಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ….

Read More

ಶಿವಮೊಗ್ಗ-ಬೆಂಗಳೂರು ವಿಮಾನ ಸೇವೆ ಪುನರಾರಂಭಕ್ಕೆ ಆಗ್ರಹಿಸಿ ಕೇಂದ್ರಕ್ಕೆ ಸಚಿವ ಎಂ.ಬಿ. ಪಾಟೀಲ್​​ ಪತ್ರ – Kannada News | Resuming Shivamogga Bengaluru Flights: Minister MB Patil Writes to Centre Requesting Inclusion in UDAN Scheme

ಶಿವಮೊಗ್ಗ ವಿಮಾನ ನಿಲ್ದಾಣImage Credit source: BS Yediyurappa X Account ಬೆಂಗಳೂರು, ಜೂನ್​​ 12: ಶಿವಮೊಗ್ಗ ಮತ್ತು ಬೆಂಗಳೂರಿನ (Bengaluru) ನಡುವಿನ ವಿಮಾನ ಸೇವೆಯನ್ನು ಪುನರಾರಂಭಿಸುವಂತೆ ಹಾಗೂ ಈ ಮಾರ್ಗವನ್ನು ಮುಂದಿನ ಉಡಾನ್ (UDAN) ಯೋಜನೆಯ ಟೆಂಡರ್ ಪ್ರಕ್ರಿಯೆಯಲ್ಲಿ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಸಚಿವ ಎಂ.ಬಿ. ಪಾಟೀಲ್ ಮನವಿ ಮಾಡಿದ್ದಾರೆ. ಮಲೆನಾಡು ಪ್ರದೇಶ ಹಾಗೂ ಮಧ್ಯ ಕರ್ನಾಟಕದ ಹಲವು ಜಿಲ್ಲೆಗಳ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಈ ವಿಮಾನ ಸೇವೆ ಅತ್ಯಂತ ಮಹತ್ವದ್ದಾಗಿದೆ ಎಂದು ಕೇಂದ್ರ…

Read More

ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ಮಾಲೀಕನ ವಿರುದ್ಧ ಪ್ರತಿಭಟನೆ – Kannada News | Unhygienic Food Sparks Outrage at Basaveshwara Nagar Ladies PG

ಬೆಂಗಳೂರು, ಜೂನ್​​ 12: ಬಸವೇಶ್ವರ ನಗರದಲ್ಲಿರುವ ಅಂಜನಾದ್ರಿ ಮಹಿಳಾ ಪಿಜಿಯ ಊಟದಲ್ಲಿ ಹುಳ ಪತ್ತೆಯಾಗಿದ್ದು, ಇದರಿಂದ ಆಕ್ರೋಶಗೊಂಡ ಯುವತಿಯರು ಪ್ರತಿಭಟನೆ ನಡೆಸಿದ್ದಾರೆ. ಊಟದಲ್ಲಿ ಹುಳ ಪತ್ತೆಯಾದ ಬಗ್ಗೆ ಪ್ರಶ್ನಿಸಿದ್ದಕ್ಕೆ, ಪಿಜಿ ಮಾಲೀಕರು ಯುವತಿಯರೊಂದಿಗೆ ಕಿರಿಕ್ ಮಾಡಿ, ಪಿಜಿ ಖಾಲಿ ಮಾಡುವಂತೆ ಎಚ್ಚರಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಕೆಲವು ದಿನಗಳ ಹಿಂದೆಯೂ ಸಹ ಇದೇ ಪಿಜಿಯ ಊಟದಲ್ಲಿ ಹುಳ ಪತ್ತೆಯಾಗಿತ್ತು. ಪದೇ ಪದೇ ಇಂತಹ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿರುವುದನ್ನು ಪ್ರಶ್ನಿಸಿದ ಯುವತಿಯರಿಗೆ, ಮಾಲೀಕರು ನೀವು ಕೊಡುವ 5,000…

Read More

ಶಿಗೆಲ್ಲೋಸಿಸ್ ಸೋಂಕಿನ ಭೀತಿ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೈ ಹೈಅಲರ್ಟ್, ಆರೋಗ್ಯ ಇಲಾಖೆಯಿಂದ ಮಹತ್ವದ ಸೂಚನೆ – Kannada News | Shigella Bacteria Alert in Karnataka: Check Symptoms, Preventive Measures for Children by Health department adivse

ಆರೋಗ್ಯ ಸಚಿವ ಯುಟಿ ಖಾದರ್Image Credit source: tv9 ಬೆಂಗಳೂರು, ಜೂನ್ 12: ನೆರೆಯ ರಾಜ್ಯ ಕೇರಳದಲ್ಲಿ ಮಾರಣಾಂತಿಕ ಶಿಗೆಲ್ಲೋಸಿಸ್ (Shigella) ಸೋಂಕು ತೀವ್ರವಾಗಿ ಹರಡುತ್ತಿದ್ದು, ಪೋಷಕರಲ್ಲಿ ಭಾರಿ ಆತಂಕ ಮೂಡಿಸಿದೆ. ಕರುಳಿನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಈ ಅಪಾಯಕಾರಿ ಬ್ಯಾಕ್ಟೀರಿಯಾ ಸೋಂಕಿಗೆ ಈಗಾಗಲೇ ಕೇರಳದ ಕೋಝಿಕ್ಕೋಡ್‌ನಲ್ಲಿ ನಾಲ್ಕು ವರ್ಷದ ಬಾಲಕಿ ಬಲಿಯಾಗಿದ್ದಾಳೆ. ವಯನಾಡು ಸೇರಿದಂತೆ ವಿವಿಧ ಜಿಲ್ಲೆಗಳ ಶಾಲಾ ಮಕ್ಕಳಲ್ಲಿ ಈ ಸೋಂಕು ವೇಗವಾಗಿ ಹರಡುತ್ತಿದ್ದು, ಇದುವರೆಗೆ 300ಕ್ಕೂ ಹೆಚ್ಚು ಮಕ್ಕಳಲ್ಲಿ ಶಿಗೆಲ್ಲಾ…

Read More

ಹರಿದ್ವಾರದಲ್ಲಿ ಇಮ್ರಾನ್ ಹಶ್ಮಿ ಚಿತ್ರೀಕರಣ: ಸ್ಥಳೀಯರ ವಿರೋಧ – Kannada News | Imran Hashmi movie shooting in Haridwar, Locals fight with movie team

ಬಾಲಿವುಡ್​​ನ (Bollywood) ಹಲವಾರು ಸಿನಿಮಾಗಳು ಪುಣ್ಯಕ್ಷೇತ್ರಗಳಲ್ಲಿ ಶೂಟಿಂಗ್ ನಡೆಸುತ್ತವೆ. ಅದರಲ್ಲಿ ಹರಿದ್ವಾರವೂ ಒಂದು. ಇದೀಗ ಬಾಲಿವುಡ್ ನಟ ಇಮ್ರಾನ್ ಹಶ್ಮಿ ಪವಿತ್ರ ಕ್ಷೇತ್ರ ಎನಿಸಿಕೊಂಡಿರುವ ಹರಿದ್ವಾರದಲ್ಲಿ ತಮ್ಮ ಮುಂದಿನ ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಚಿತ್ರೀಕರಣದ ಸ್ಥಳದ ವಿಡಿಯೋವೊಂದು ಆನ್‌ಲೈನ್‌ನಲ್ಲಿ ವೈರಲ್ ಆದ ನಂತರ ಚಿತ್ರತಂಡವು ಸ್ಥಳೀಯ ನಿವಾಸಿಗಳೊಂದಿಗೆ ಭಾರಿ ತೊಂದರೆಯನ್ನು ಎದುರಿಸಿದೆ. ಸಿನಿಮಾ ಚಿತ್ರೀಕರಣ ಸೆಟ್​​ಗೆ ಎದುರು ಜಮಾಯಿಸಿದ ಸ್ಥಳೀಯರು ಚಿತ್ರೀಕರಣ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ. ಹರಿದ್ವಾರದಲ್ಲಿ ಸಿನಿಮಾದ ದೃಶ್ಯ ಒಂದರ ಚಿತ್ರೀಕರಣಕ್ಕಾಗಿ ತಾತ್ಕಾಲಿಕ ಸೆಟ್ ಒಂದನ್ನು ನಿರ್ಮಿಸಲಾಗಿತ್ತು….

Read More

ಎಂಬಿಬಿಎಸ್ ವೈದ್ಯರ ಕಳ್ಳಾಟಕ್ಕೆ ಆರೋಗ್ಯ ಇಲಾಖೆ ಬ್ರೇಕ್: ಕಡ್ಡಾಯ ಸೇವೆ ತಪ್ಪಿಸಿದ 450 ವೈದ್ಯರಿಗೆ 15 ಲಕ್ಷ ರೂ. ದಂಡ! – Kannada News | Karnataka Fine on Doctors: Rs 15 Lakh Penalty on 450 MBBS Doctors for Skipping Rural Service

ಬೆಂಗಳೂರು, ಜೂನ್ 12: ಸರ್ಕಾರಿ ಕೋಟಾದಡಿ ಸೀಟು ಪಡೆದು ಅತ್ಯಂತ ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ಶಿಕ್ಷಣ ಮುಗಿಸಿ, ಆ ಬಳಿಕ ನಿಯಮದಂತೆ ಗ್ರಾಮೀಣ ಸೇವೆಗೆ ಹಾಜರಾಗದೆ ಕಳ್ಳಾಟವಾಡುತ್ತಿದ್ದ 450ಕ್ಕೂ ಹೆಚ್ಚು ಎಂಬಿಬಿಎಸ್ (MBBS) ವೈದ್ಯರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭರ್ಜರಿ ಶಾಕ್ ನೀಡಿದೆ. ಈ ಎಲ್ಲಾ ವೈದ್ಯರ ವಿರುದ್ಧ ದಂಡಾಸ್ತ್ರ ಪ್ರಯೋಗಿಸಿರುವ ಇಲಾಖೆಯು, ಪ್ರತಿಯೊಬ್ಬರಿಗೂ ತಲಾ 15 ಲಕ್ಷ ರೂಪಾಯಿ ದಂಡ ವಿಧಿಸಿ ಲೀಗಲ್ ನೋಟಿಸ್ ಜಾರಿಗೊಳಿಸಿದೆ. ಮುಖ್ಯಾಂಶಗಳು ಕಡ್ಡಾಯ ಗ್ರಾಮೀಣ ಸೇವೆ ತಪ್ಪಿಸಿದ…

Read More

ಪ್ರೀತಿಯ ಗೆಲುವು: ನ್ಯಾಯಾಧೀಶರ ಮುಂದೆಯೇ ವಿಚ್ಛೇದನ ಪತ್ರ ಹರಿದು ಗಂಡನನ್ನು ಅಪ್ಪಿಕೊಂಡ ಹೆಂಡತಿ – Kannada News | Delhi Court Reunion: Wife Tears Divorce Papers, Hugs Husband After Act of Love

ನವದೆಹಲಿ, ಜೂನ್ 12: ಕೋಪ, ಅಹಂಕಾರ ಮತ್ತು ತಪ್ಪು ತಿಳಿವಳಿಕೆಗಳ ಮಧ್ಯೆ ಮುರಿದು ಬೀಳುವ ಹಂತ ತಲುಪಿರುವ ಸಂಬಂಧಗಳನ್ನು ಕೇವಲ ಒಂದು ಸಣ್ಣ ಗುಣ ಹೇಗೆ ಮರುಜೋಡಣೆ ಮಾಡಬಲ್ಲದು ಎಂಬುದಕ್ಕೆ ದೆಹಲಿಯ ಕೌಟುಂಬಿಕ ನ್ಯಾಯಾಲಯದಲ್ಲಿ ನಡೆದ ಈ ಅಪರೂಪದ, ಘಟನೆಯೇ ಸಾಕ್ಷಿ. ವಿಚ್ಛೇದನ(Divorce) ನೀಡಲು ಕೋರ್ಟ್ ಮೆಟ್ಟಿಲೇರಿದ್ದ ದಂಪತಿ, ನ್ಯಾಯಾಧೀಶರ ಮುಂದೆಯೇ ಪರಸ್ಪರ ಅಪ್ಪಿಕೊಂಡು ಒಂದಾದ ಸುಂದರ ಘಟನೆ ಇಲ್ಲಿದೆ. 2020 ರ ಮದುವೆ ಮತ್ತು ಕೌಟುಂಬಿಕ ಬಿರುಗಾಳಿ ದೊಡ್ಡ ಕನಸುಗಳೊಂದಿಗೆ 2020 ರಲ್ಲಿ ದಾಂಪತ್ಯ ಜೀವನಕ್ಕೆ…

Read More

‘ಮತ್ತೊಬ್ಬ ಸೂರ್ಯವಂಶಿ ಬರಲು 40 ವರ್ಷ ಬೇಕಾಗಬಹುದು’;  ರಾಹುಲ್ ದ್ರಾವಿಡ್ – Kannada News | Vaibhav Suryavanshi: Dravid Hails IPL Star as ‘Unique Player’ for Team India

ವೈಭವ್ ಸೂರ್ಯವಂಶಿ ಅವರು ತಮ್ಮ ಪ್ರತಿಭೆಯನ್ನು ಜಗತ್ತಿನ ಎದರು ತೆರೆದಿಟ್ಟಿದ್ದಾರೆ. ಈ ಬಾರಿಯ ಐಪಿಎಲ್ ಸೀಸನ್​ ಅಲ್ಲಿ ದಾಖಲೆ ಮೇಲೆ ದಾಖಲೆ ಬರೆದಿದ್ದಾರೆ. ಸೂಪರ್​ ಸ್ಟ್ರೈಕರ್​, ಆರೆಂಜ್ ಕ್ಯಾಪ್, ಸೀಸನ್​ನ ಅತಿ ಹೆಚ್ಚು ಸಿಕ್ಸ್ ಸೇರಿದಂತೆ ಅನೇಕ ಅವಾರ್ಡ್ ಅವರ ಕೈ ಸೇರಿತ್ತು. ಈಗ ಅವರಿಗೆ ಟೀಂ ಇಂಡಿಯಾ ಮಣೆ ಹಾಕಿದೆ. ಈ ಕುರಿತು ಮಾಜಿ ನಾಯಕ, ಕನ್ನಡಿಗ ರಾಹುಲ್ ದ್ರಾವಿಡ್ ಮನಬಿಚ್ಚಿ ಮಾತನಾಡಿದ್ದಾರೆ. ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ವೈಭವ್ ಸೂರ್ಯವಂಶಿ ಬರುವಲ್ಲಿ ಪ್ರಮುಖ ಪಾತ್ರ…

Read More

Gold Rate: ಸತತ ಕುಸಿತದ ಬಳಿಕ ಚಿನ್ನದ ಬೆಲೆ ಸಖತ್ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 12th June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 12: ಕಳೆದ ಎರಡು ದಿನದಲ್ಲಿ 600 ರೂಗಳಷ್ಟು ಇಳಿಕೆಯಾಗಿದ್ದ ಚಿನ್ನದ ಬೆಲೆ (Gold Rate) ಇವತ್ತು 270 ರೂಗಳಷ್ಟು ಏರಿದೆ. ಬೆಳ್ಳಿ ಬೆಲೆಯೂ 10 ರೂ ಜಂಪ್ ಆಗಿದೆ. ಬಂಗಾರದ ದರ ವಿದೇಶಗಳಲ್ಲೂ ಹೆಚ್ಚಿನ ಕಡೆ ಏರಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,36,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,48,580 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ…

Read More

Jaspal Rana: ಪ್ರಸಿದ್ದ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ನಿಧನ, ಮನು ಭಾಕರ್​ಗೆ ಮಾರ್ಗದರ್ಶನ ನೀಡಿದ್ದ ಕೋಚ್ ಇನ್ನಿಲ್ಲ – Kannada News | Jaspal Rana Passesaway: India Mourns Legendary Shooting Coach and Dronacharya Awardee

ನವದೆಹಲಿ, ಜೂನ್ 12: ಭಾರತೀಯ ಕ್ರೀಡಾಲೋಕಕ್ಕೆ ಅಪಾರ ಕೊಡುಗೆ ನೀಡಿದ ಶ್ರೇಷ್ಠ ಶೂಟರ್ ಮತ್ತು ದ್ರೋಣಾಚಾರ್ಯ ಪ್ರಶಸ್ತಿ ಪುರಸ್ಕೃತ ತರಬೇತುದಾರ ಜಸ್ಪಾಲ್ ರಾಣಾ(49)(Jaspal Rana) ಅವರು ಕೊನೆಯುಸುರೆಳೆದಿದ್ದಾರೆ. ಆದರೆ, ಅವರು ಕ್ರೀಡಾಲೋಕಕ್ಕೆ ನೀಡಿರುವ ಮೂರು ದಶಕಗಳ ಅದ್ಭುತ ಕೊಡುಗೆ, ಒಲಿಂಪಿಕ್ ಪದಕ ವಿಜೇತರನ್ನು ರೂಪಿಸಿದ ಅವರ ಸಾಧನೆ ಮತ್ತು ಭಾರತೀಯ ಕ್ರೀಡಾ ಇತಿಹಾಸದಲ್ಲಿ ಅವರು ಬಿಟ್ಟು ಹೋಗಿರುವ ಅಮರ ಪರಂಪರೆ ಎಂದಿಗೂ ಸ್ಫೂರ್ತಿಯಾಗಿ ಉಳಿಯಲಿದೆ. 1990ರ ದಶಕದಲ್ಲಿ ಭಾರತದಲ್ಲಿ ಶೂಟಿಂಗ್ ಕ್ರೀಡೆಯು ಇನ್ನು ಜನಪ್ರಿಯವಾಗದ ಕಾಲದಲ್ಲೇ ಜಸ್ಪಾಲ್…

Read More