Headlines

3D ತಂತ್ರಜ್ಙಾನದಲ್ಲಿ ಬರಲಿದೆ ‘ಕೊರಗಜ್ಜ’ ಚಿತ್ರ: ಜೊತೆಗೆ ಮತ್ತೊಂದು ಸಾಹಸ

ಸುಧೀರ್ ಅತ್ತಾವರ್ ನಿರ್ದೇಶನ ಮಾಡಿರುವ ‘ಕೊರಗಜ್ಜ’ (Koragajja) ಸಿನಿಮಾ ಚಿತ್ರೀಕರಣದ ಆರಂಭದಿಂದಲೂ ಒಂದಲ್ಲ ಒಂದು ಕಾರಣಕ್ಕೆ ಸುದ್ದಿ ಮಾಡುತ್ತಲೇ ಇದೆ. ಸಿನಿಮಾ ಈಗಾಗಲೇ ಬಿಡುಗಡೆ ಆಗಬೇಕಿತ್ತು ಆದರೆ ಇದೀಗ ಮತ್ತೊಮ್ಮೆ ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಈ ಬಾರಿ ಕೆಲವು ವಿಶೇಷ ಕಾರಣಗಳಿಗೆ ಸಿನಿಮಾದ ಬಿಡುಗಡೆಯನ್ನು ಮುಂದೂಡಲಾಗಿದೆ. ಸಿನಿಮಾ ತಂಡದಿಂದ ಹೊರಬಿದ್ದಿರುವ ಹೊಸ ಅಪ್​​ಡೇಟ್ ಎಂದರೆ ‘ಕೊರಗಜ್ಜ’ ಸಿನಿಮಾ ಇದೀಗ 3ಡಿ ತಂತ್ರಜ್ಙಾನದೊಂದಿಗೆ ಬಿಡುಗಡೆ ಆಗಲಿದೆ. ಸಾಮಾನ್ಯವಾಗಿ ಚಿತ್ರೀಕರಣದ ವೇಳೆಯಲ್ಲೇ 3ಡಿ ಶೂಟಿಂಗ್ ಮಾಡುವುದು ಸಂಪ್ರದಾಯ….

Read More

Horoscope Today February: ಇಂದು ಈ ರಾಶಿಯವರಿಂದ ಸ್ವಯಂಕೃತ ಅಪರಾಧ, ಪಶ್ಚಾತ್ತಾಪ

ಮೇಷ ರಾಶಿ: ಮಕ್ಕಳ ವಿವಾಹದ ಬಗ್ಗೆ ಒಂದೊಂದೇ ಚಿಂತೆ ಆರಂಭವಾಗುವುದು. ಇಂದಿನ ನಿಮ್ಮ ಅಜಾಗರೂಕತೆಯಿಂದ ಹಣವನ್ನು ಕಳೆದುಕೊಳ್ಳುವಿರಿ. ಅನಿವಾರ್ಯ ಕಾರಣದಿಂದ ನೀವು ಅಧಿಕಾರವನ್ನು ವಹಿಸಿಕೊಳ್ಳಬೇಕಾಗಬಹುದು. ದುಃಸ್ವಪ್ನದಿಂದ ಭಯಗೊಳ್ಳುವಿರಿ. ಆಪತ್ತಿನಲ್ಲಿ ಇರುವ ನಿಮಗೆ ಸ್ನೇಹಿತರ ಸಣ್ಣ ಸಹಾಯವೂ ನಿಮಗೆ ಧೈರ್ಯ ತಂದುಕೊಡುವುದು. ಪ್ರೀತಿಯಲ್ಲಿ ನಿಮಗೆ ಸೋಲಾಗಬಹುದು. ಮನೋರಂಜನೆಯಿಂದ ಒತ್ತಡ ಕಡಿಮೆಯಗುವುದು. ವೃಷಭ ರಾಶಿ: ಬಹಳ ಶ್ರಮದಿಂದ ನಿಮ್ಮ ಭೂಮಿಯ ಮಾರಟವನ್ನು ಮಾಡುವಿರಿ. ವೃತ್ತಿಯಿಂದ ನೀವು ವಿದೇಶ ಪ್ರಯಾಣವನ್ನು ಮಾಡಬೇಕಾಗಬಹುದು. ಬಂಧುಗಳು ನಿಮ್ಮ ಬಳಿ ಬಂದು ನೋವನ್ನು ಹೇಳಿಕೊಳ್ಳುವರು. ಸ್ನೇಹಿತರ…

Read More

ಬಾಂಗ್ಲಾ ವೇಗಿ ಮುಸ್ತಾಫಿಜುರ್ ರೆಹಮಾನ್​ಗಾಗಿ ಬೇಡಿಕೆ ಇಟ್ಟ ಐಪಿಎಲ್ ಫ್ರಾಂಚೈಸಿಗಳು

ಬಾಂಗ್ಲಾದೇಶ ಕ್ರಿಕೆಟ್ ತಂಡದ ವೇಗದ ಬೌಲರ್ ಮುಸ್ತಾಫಿಜುರ್ ರೆಹಮಾನ್​ರನ್ನು ಐಪಿಎಲ್​ನಿಂದ ಹೊರಹಾಕಿದ್ದಕ್ಕಾಗಿ ಏನೆಲ್ಲ ನಡೆಯಿತು ಎಂಬುದು ನಿಮಗೆಲ್ಲ ಗೊತ್ತಿರುವುದೇ. ಬಿಸಿಸಿಐನ ಈ ನಿಲುವಿನಿಂದ ಕೆರಳಿದ ಬಾಂಗ್ಲಾ ಕ್ರಿಕೆಟ್ ಮಂಡಳಿ ಟಿ20 ವಿಶ್ವಕಪ್​ನಿಂದಲೇ ಹಿಂದೆ ಸರಿಯಿತು. ಇದರಿಂದ ಬಿಸಿಸಿಐಗೆ ನಷ್ಟವಾಗದಿದ್ದರೂ, ಬಾಂಗ್ಲಾದೇಶ ಕ್ರಿಕೆಟ್​ಗೆ ನೂರಾರು ಕೋಟಿ ರೂ.ಗಳ ನಷ್ಟವುಂಟಾಯಿತು. ವಾಸ್ತವವಾಗಿ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಬಿಸಿಸಿಐ ಬಾಂಗ್ಲಾದೇಶ ಆಟಗಾರರನ್ನು ಐಪಿಎಲ್​ನಿಂದ ಹೊರಹಾಕಿತ್ತು. ಅದರಂತೆ ದೊಡ್ಡ ಮೊತ್ತಕ್ಕೆ ಕೆಕೆಆರ್ ತಂಡವನ್ನು ಸೇರಿದ್ದ ಮುಸ್ತಾಫಿಜುರ್ ರೆಹಮಾನ್ ಐಪಿಎಲ್​ನಿಂದ ನಿಷೇಧಕ್ಕೊಳಗಾಗಬೇಕಾಯಿತು….

Read More

Paramilitary Jobs 2026: ದೇಶದ ಭದ್ರತಾ ಪಡೆಗಳಲ್ಲಿ 93,000 ಹುದ್ದೆಗಳಿಗೆ ಬಂಪರ್ ನೇಮಕಾತಿ, ಇಲ್ಲಿದೆ ಸಂಪೂರ್ಣ ವಿವರ

ಭಾರತದ ಆಂತರಿಕ ಭದ್ರತೆಯಲ್ಲಿ ಮಹತ್ತರ ಪಾತ್ರ ವಹಿಸುವ ವಿವಿಧ ಅರೆಸೈನಿಕ ಪಡೆಗಳಲ್ಲಿ ಪ್ರಸ್ತುತ ಬೃಹತ್ ಸಂಖ್ಯೆಯ ಹುದ್ದೆಗಳು ಖಾಲಿ ಇವೆ. ಇವು ಯುವಜನತೆಗೆ ದೊಡ್ಡ ಉದ್ಯೋಗಾವಕಾಶದ ಬಾಗಿಲನ್ನು ತೆರೆದಿದೆ. ಇತ್ತೀಚೆಗೆ ಕೇಂದ್ರ ಸರ್ಕಾರವು ರಾಜ್ಯಸಭೆಗೆ ನೀಡಿದ ಅಧಿಕೃತ ಮಾಹಿತಿಯ ಪ್ರಕಾರ, ಸಿಐಎಸ್‌ಎಫ್, ಸಿಆರ್‌ಪಿಎಫ್, ಬಿಎಸ್‌ಎಫ್ ಮತ್ತು ಐಟಿಬಿಪಿ ಸೇರಿದಂತೆ ವಿವಿಧ ಪಡೆಗಳಲ್ಲಿ ಒಟ್ಟು 93,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಬಾಕಿ ಇದೆ. ಇದರಲ್ಲಿ ವಿಶೇಷವಾಗಿ ಸಿಐಎಸ್‌ಎಫ್ (28,342) ಮತ್ತು ಸಿಆರ್‌ಪಿಎಫ್ (27,400) ಪಡೆಗಳಲ್ಲಿ ಗರಿಷ್ಠ ಸಂಖ್ಯೆಯ ಅವಕಾಶಗಳಿದ್ದು,…

Read More

‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ

ತನುಷ್ ಶಿವಣ್ಣ ನಟನೆಯ ‘ಬಾಸ್’ ಸಿನಿಮಾಗೆ (Boss Movie) ವಿ. ಲವ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಕಥೆಗೂ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೂ ಸಾಮ್ಯತೆ ಇದೆ ಎಂಬ ಆರೋಪ ಕೇಳಿಬಂದಿದೆ. ಈ ಚಿತ್ರಕ್ಕೆ ಸೆನ್ಸಾರ್ ನೀಡಬಾರದು ಎಂದು ದರ್ಶನ್ (Darshan) ಪರ ವಕೀಲರು ನೋಟಿಸ್ ನೀಡಿದ್ದಾರೆ. ಆ ಬಗ್ಗೆ ನಿರ್ದೇಶಕ ಲವ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ನನಗೆ ಯಾವುದೇ ನೋಟಿಸ್ ಬಂದಿಲ್ಲ. 3-4 ಜನರು ನನಗೆ ಬೆದರಿಕೆ ಕರೆ ಮಾಡಿದ್ದಾರೆ. ನಾನು ಅದನ್ನು ಗಮನಕ್ಕೆ ತೆಗೆದುಕೊಂಡಿಲ್ಲ….

Read More

ಭಯ ಜಾಸ್ತಿ ಆಗಿದೆ: ಜನರ ಪ್ರೀತಿ ನೋಡಿ ಬೆಚ್ಚಿದ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ – Kannada News | Bigg Boss Kannada Season 12 Winner Gilli Nata mesmerized by fans love

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ರಿಯಾಲಿಟಿ ಶೋ ಟ್ರೋಫಿ ಗೆದ್ದಿರುವ ಗಿಲ್ಲಿ ನಟ ಅವರು ಹುಟ್ಟೂರಿಗೆ ಮರಳಿದ್ದಾರೆ. ಅವರ ಸ್ವಾಗತಕ್ಕೆ ಅಪಾರ ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ಅದರಿಂದಾಗಿ ರಸ್ತೆಗಳು ಜಾಮ್ ಆಗಿವೆ. ಅಷ್ಟರಮಟ್ಟಿಗೆ ಕ್ರೇಜ್ ಹೆಚ್ಚಿದೆ. ಈ ವೇಳೆ ಕಿಕ್ಕಿರಿದು ಸೇರಿದ ಜನರ ನಡುವೆ ಟಿವಿ9 ಜೊತೆ ಗಿಲ್ಲಿ ನಟ (Gilli Nata) ಅವರು ಮಾತನಾಡಿದ್ದಾರೆ. ಹುಟ್ಟೂರಿನಲ್ಲಿ ತಮಗೆ ಸಿಗುತ್ತಿರುವ ಪ್ರೀತಿಯ ಬಗ್ಗೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ‘ನಾನು…

Read More

2025ರಲ್ಲಿ 47 ಲಕ್ಷ ರೂ. ಖರ್ಚು ಮಾಡಿದ ಬೆಂಗಳೂರಿನ ದಂಪತಿ – Kannada News | Content Creators’ Annual Spending Goes Viral: Bengaluru Duo’s Rs 47 Lakh Budget

ಬೆಂಗಳೂರು, ಜ.5: ಬೆಂಗಳೂರು ಮೂಲದ ಕಂಟೆಂಟ್ ಕ್ರಿಯೇಟರ್ ದಂಪತಿ (Bengaluru couple expenses) ತಮ್ಮ ವರ್ಷದ ಖರ್ಚಿನ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರು ಹಂಚಿಕೊಂಡಿರುವ ವಾರ್ಷಿಕ ಖರ್ಚಿನ ಬಗ್ಗೆ ನೆಟ್ಟಿಗರನ್ನು ದಿಗ್ಭ್ರಮೆಗೊಳಿಸಿದೆ. ಪ್ರಕೃತಿ ಅರೋರಾ ಮತ್ತು ಆಶಿಶ್ ಕುಮಾರ್ ಅವರು ಕಳೆದ ವರ್ಷಗಳಿಂದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಬಾಡಿಗೆ ಮತ್ತು ಪ್ರಯಾಣದಿಂದ ಹಿಡಿದು ಫಿಟ್‌ನೆಸ್ ಮತ್ತು ಶಾಪಿಂಗ್‌ವರೆಗೆ ಎಷ್ಟು ಖರ್ಚು ಮಾಡಿದ್ದಾರೆ ಎಂಬ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿರುವ ಇವರ ವಾರ್ಷಿಕ…

Read More

ಟಿವಿಕೆ ಮುಖ್ಯಸ್ಥ ವಿಜಯ್ ರೋಡ್ ಶೋಗೆ ಸಾಗರದಂತೆ ಸೇರಿದ ಜನ

ನೆಲ್ಲೈ, ಏಪ್ರಿಲ್ 8: ತಮಿಳುನಾಡು ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ತಮಿಳುನಾಡು ವಿಕ್ಟರಿ ಪಕ್ಷದ (ಟಿವಿಕೆ) ನಾಯಕ ವಿಜಯ್ (Vijay) ಪ್ರತಿ ಜಿಲ್ಲೆಯಲ್ಲಿಯೂ ಪ್ರಚಾರ ನಡೆಸುತ್ತಿದ್ದಾರೆ. ಇಂದು ಸುಮಾರು 11 ಕಿಲೋಮೀಟರ್‌ಗಳ ಕಾಲ ನಡೆದ ಚುನಾವಣಾ ರ್ಯಾಲಿಯಲ್ಲಿ ನಟ ವಿಜಯ್ ಅವರನ್ನು ದಾರಿಯುದ್ದಕ್ಕೂ ಸಾರ್ವಜನಿಕರು ಉತ್ಸಾಹದಿಂದ ಸ್ವಾಗತಿಸಿದರು. ವಿಜಯ್ ತಿರುಚ್ಚಿ ಪೂರ್ವ ಮತ್ತು ಪೆರಂಬೂರು ಎಂಬ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದಾರೆ. ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ತಮಿಳುನಾಡು ವಿಕ್ಟರಿ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ಅವರು ತಮ್ಮ…

Read More

Maha Shivratri Shloka: ಜೀವನದ ಸಂಕಷ್ಟವೆಲ್ಲಾ ದೂರವಾಗಲು ಶಿವರಾತ್ರಿಯ ಶುಭ ಸಂದರ್ಭದಲ್ಲಿ ಈ ಮಂತ್ರಗಳನ್ನು ಪಠಿಸಿ – Kannada News | Maha Shivratri 2026: Chant these Powerful Shiva mantra’s on the auspicious occasion of Shivaratri

ಮಹಾಶಿವರಾತ್ರಿಯು (Maha Shivratri) ಶಿವನ ಆರಾಧನೆಗೆ ಮೀಸಲಾಗಿರುವ ವಿಶೇಷ ಹಬ್ಬವಾಗಿದೆ. ಈ ದಿನದಂದು ಪ್ರಾಮಾಣಿಕ, ನಿಷ್ಕಲ್ಮಶ ಹೃದಯದಿಂದ ಶಿವನನ್ನು ಪೂಜಿಸುವುದು, ಉಪವಾಸ ವ್ರತ ಆಚರಿಸುವುದು ಮತ್ತು ಮಂತ್ರಗಳನ್ನು ಪಠಿಸುವುದರಿಂದ ಜೀವನದ ತೊಂದರೆಗಳು ದೂರವಾಗುತ್ತವೆ ಮತ್ತು ಎಲ್ಲಾ ಆಸೆಗಳು ಈಡೇರುತ್ತವೆ ಎಂಬ ನಂಬಿಕೆಯಿದೆ.  ಅಲ್ಲದೆ  ಶಿವನನ್ನು ಮೆಚ್ಚಿಸಲು ಮತ್ತು ಮಹಾದೇವನ ಆಶೀರ್ವಾದವನ್ನು ಪಡೆಯಲು ಈ ದಿನವನ್ನು ಶುಭವೆಂದು ಪರಿಗಣಿಸಲಾಗಿದೆ. ಸಂಕಷ್ಟವೆಲ್ಲಾ ದೂರವಾಗಿ ನಿಮ್ಮ ಜೀವನದಲ್ಲೂ ಸಕಾರಾತ್ಮಕತೆ ನೆಲೆಗೊಳ್ಳಬೇಕು ಎಂದರೆ ಮಹಾ ಶಿವರಾತ್ರಿಯ ಈ ಶುಭ ಸಂದರ್ಭದಲ್ಲಿ ಶಿವನಿಗೆ ಸಮರ್ಪಿತವಾಗಿರುವ…

Read More

ಅಮೆರಿಕದ ನಿಷೇಧದ ನಡುವೆಯೂ ರಷ್ಯನ್ ತೈಲ ಖರೀದಿ ಮುಂದುವರಿಸಲಿರುವ ಭಾರತ – Kannada News | India Continues Russia Oil Imports Despite US Sanctions for Energy Security

ನವದೆಹಲಿ, ಏಪ್ರಿಲ್ 17: ಅಮೆರಿಕದ ನಿಷೇಧ ಕ್ರಮ ಜಾರಿಯಲ್ಲಿದ್ದರೂ ಭಾರತವು ರಷ್ಯಾದಿಂದ ತೈಲ ಖರೀದಿಯನ್ನು ಮುಂದುವರಿಸಲಿದೆ ಎಂದು ದಿ ಮಿಂಟ್​ನಲ್ಲಿ ವರದಿಯಾಗಿದೆ. ಅಧಿಕೃತ ಮೂಲಗಳು ತಿಳಿಸಿವೆ ಎಂದು ಈ ವರದಿಯಲ್ಲಿ ಹೇಳಲಾಗಿದೆ. ಆದರೆ, ಭಾರತದ ವತಿಯಿಂದ ಈ ಬಗ್ಗೆ ಅಧಿಕೃತವಾಗಿ ಎಲ್ಲಿಯೂ ಹೇಳಿಕೆ ಬಿಡುಗಡೆ ಆಗಿಲ್ಲ. ಭಾರತವು ರಷ್ಯಾದಿಂದ ತೈಲ ಖರೀದಿ ಮಾಡಲಾಗುತ್ತಿರುವುದು ದೇಶದ ಹಿತದೃಷ್ಟಿಯಿಂದ ತೆಗೆದುಕೊಂಡ ಸ್ವಂತ ನಿರ್ಧಾರವೇ ಹೊರತು ಇನ್ನೊಂದು ರಾಷ್ಟ್ರದ ಕೃಪೆಯಿಂದಲ್ಲ ಎಂಬರ್ಥದಲ್ಲಿ ಸರ್ಕಾರವು ಈ ಹಿಂದೆ ಹೇಳಿದ್ದಿದೆ. ಇರಾನ್ ಯುದ್ಧ ಶುರುವಾದ…

Read More