Headlines

ವೈಭವ್ ಸೂರ್ಯವಂಶಿಯ ‘ಆರಾ’ ಕಂಡು ಸ್ಟಾರ್ ಕ್ರಿಕೆಟಿಗರೇ ದಂಗು..! – Kannada News | Vaibhav Sooryavanshi’s Aura in England

ಕ್ರಿಕೆಟ್ ಜಗತ್ತಿನಲ್ಲಿ ಮುಂದಿನ ಸೂಪರ್ ಸ್ಟಾರ್ ಯಾರು? ಈ ಪ್ರಶ್ನೆಗೆ ಸದ್ಯದ ಉತ್ತರ ವೈಭವ್ ಸೂರ್ಯವಂಶಿ. ಏಕೆಂದರೆ ವೈಭವ್ ಈಗಾಗಲೇ ಸ್ಟಾರ್ ಪಟ್ಟವನ್ನು ಅಲಂಕರಿಸಿದ್ದಾರೆ. ಅದು ಕೂಡ ಇಂಟರ್​ನ್ಯಾಷನಲ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡುವ ಮುಂಚಿತವಾಗಿ ಎಂಬುದು ವಿಶೇಷ. 15ರ ಹರೆಯದ ವೈಭವ್ ಸೂರ್ಯವಂಶಿ ಭಾರತ ಹಿರಿಯರ ತಂಡಕ್ಕೆ ಇನ್ನೂ ಅಧಿಕೃತವಾಗಿ ಪಾದಾರ್ಪಣೆ ಮಾಡಿಲ್ಲ. ಆದರೂ ಇವರ ಸುತ್ತಲಿರುವ ಕ್ರೇಝ್ ಮತ್ತು ‘ಆರಾ’ ಯಾವುದೇ ಹಿರಿಯ ಸೂಪರ್‌ಸ್ಟಾರ್ ಆಟಗಾರನಿಗಿಂತ ಕಮ್ಮಿಯಿಲ್ಲ. ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿರುವ ಇವರನ್ನು ನೋಡಲು ಅಲ್ಲಿನ…

Read More

ಚಾಮರಾಜನಗರ: ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ? – Kannada News | Neem Tree in Chamarajanagar Oozes Sugary White Liquid

ಚಾಮರಾಜನಗರ, ಫೆಬ್ರುವರಿ 03: ಜಿಲ್ಲೆಯ ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದಲ್ಲಿ ಒಂದು ಬೇವಿನ ಮರದಿಂದ ಬಿಳಿ ಬಣ್ಣದ ಸಿಹಿ ದ್ರವ ಸ್ರವಿಸುತ್ತಿದ್ದು, ಇದು ಸ್ಥಳೀಯರಲ್ಲಿ ಆಶ್ಚರ್ಯ ಮತ್ತು ಕುತೂಹಲವನ್ನು ಮೂಡಿಸಿದೆ. ಕಹಿ ಗುಣದ ಬೇವಿನ ಮರದಿಂದ ಜೇನುತುಪ್ಪದಂತಹ ಸಿಹಿ ದ್ರವ ಬರುತ್ತಿರುವುದು ವಿಸ್ಮಯಕ್ಕೆ ಕಾರಣವಾಗಿದೆ. ಇದನ್ನು ಗಮನಿಸಿದ ಸ್ಥಳೀಯ ನಿವಾಸಿ ಮುನಿಸಿದ್ದ, ಮರದಿಂದ ಹೊರಬಂದ ಈ ದ್ರವ ಹಾಲಿನಂತೆ ಕಾಣುತ್ತದೆ ಮತ್ತು ರುಚಿಯಲ್ಲಿ ಸಕ್ಕರೆಯಂತೆ ಸಿಹಿಯಾಗಿರುತ್ತದೆ ಎಂದು ತಿಳಿಸಿದ್ದಾರೆ. ಗ್ರಾಮಸ್ಥರು ಈ ಅಸಾಮಾನ್ಯ ವಿದ್ಯಮಾನವನ್ನು ದೈವಿಕ…

Read More

PSL 2026: ಕೇವಲ 2 ಕ್ರೀಡಾಂಗಣಗಳಲ್ಲಿ ಪ್ರೇಕ್ಷಕರಿಲ್ಲದೆ ನಡೆಯಲಿದೆ ಪಾಕ್ ಸೂಪರ್ ಲೀಗ್

ಮಾರ್ಚ್ 26 ರಿಂದ ಪಾಕಿಸ್ತಾನದಲ್ಲಿ ಪ್ರಾರಂಭವಾಗಬೇಕಿದ್ದ ಪಾಕಿಸ್ತಾನ ಸೂಪರ್ ಲೀಗ್​ಗೆ ಕ್ವಾರಂಟೈನ್ ಪರಿಸ್ಥಿತಿ ಎದುರಾಗಿದೆ. ಅಂದರೆ ಕ್ರೀಡಾಂಗಣದಲ್ಲಿ ಯಾವ ಪ್ರೇಕ್ಷಕರು ಇಲ್ಲದೆ ಪಂದ್ಯಾವಳಿಯನ್ನು ನಡೆಸಬೇಕಾಗಿದೆ. ಪಾಕಿಸ್ತಾನದ ಟಿ20 ಲೀಗ್​ನ 11 ನೇ ಸೀಸನ್ ಮಾರ್ಚ್ 26 ರಂದು ಪ್ರಾರಂಭವಾಗಲಿದೆ, ಆದರೆ ಆರಂಭಕ್ಕೆ ಕೇವಲ ನಾಲ್ಕು ದಿನಗಳ ಮೊದಲು, ಪಂದ್ಯಾವಳಿಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ವಿದೇಶಿ ಆಟಗಾರರು ಲೀಗ್ ತೊರೆಯುತ್ತಿರುವುದರಿಂದ ಮತ್ತು ದೇಶದಲ್ಲಿನ ಭದ್ರತಾ ಪರಿಸ್ಥಿತಿಯಿಂದಾಗಿ, ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಪಿಎಸ್ಎಲ್ 2026 ಸೀಸನ್ ಅನ್ನು ಆರು ಸ್ಥಳಗಳ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆಯ ಸಾಧ್ಯತೆ!

ಬೆಂಗಳೂರು, ಏಪ್ರಿಲ್ 01: ಹಲವು ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾರ್ಭಟ  (Weather Forecast) ಕಾಣಸಿಗುತ್ತಿದೆ. ಅಂತೆಯೇ ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​ ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು…

Read More

Gold Rate: ಚಿನ್ನ, ಬೆಳ್ಳಿ ಬೆಲೆಗಳು ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ – Kannada News | Gold rate 20 july 2026 gold silver prices rise on monday news in kannada

ನವದೆಹಲಿ, ಜುಲೈ 20: ಚಿನ್ನದ ಬೆಲೆ ಸತತ ಎರಡನೇ ಬಾರಿ ಹೆಚ್ಚಳವಾಗಿದೆ. ವಾರಾಂತ್ಯದಲ್ಲಿ 70 ರೂ ಹೆಚ್ಚಿದ್ದ ಬಂಗಾರದ ದರ (Gold Price) ಇವತ್ತು ಸೋಮವಾರ 15 ರೂಗಳಷ್ಟು ಅಲ್ಪ ಏರಿಕೆ ಪಡೆದಿದೆ. ವಿದೇಶಗಳಲ್ಲೂ ಕೆಲವೆಡೆ ಅಲ್ಪಸ್ವಲ್ಪ ವ್ಯತ್ಯಯಗಳಾಗಿವೆ. ಇನ್ನು, ಬೆಳ್ಳಿ ಬೆಲೆಯೂ ಇಂದು ಏರಿಕೆಗೊಂಡಿದೆ. ಇದರ ಬೆಲೆಯಲ್ಲಿ ಗ್ರಾಮ್​ಗೆ 5 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,31,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ…

Read More

ಬರೋಬ್ಬರಿ 27 ಬಾರಿ… ಹೊಸ ಇತಿಹಾಸ ನಿರ್ಮಿಸಿದ ಜೋ ರೂಟ್ – Kannada News | Joe Root Breaks Kevin Pietersen’s Record

ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ (Joe Root) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಕೆವಿನ್ ಪೀಟರ್ಸನ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆ ಮುರಿಯುವ ಮೂಲಕ. ಅಂದರೆ ಇಂಗ್ಲೆಂಡ್ ಪರ ಅತ್ಯಧಿಕ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರ ಎಂಬ ದಾಖಲೆ ರೂಟ್ ಪಾಲಾಗಿದೆ. Source link

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಜೀವನ ಸಾಕೆನಿಸುವಂತಹ ಸ್ಥಿತಿ ಬರಲಿದೆ

ಮೇಷ ರಾಶಿ: ಹಳೆಯ ಪ್ರೇಮಿ ವಿವಾಹಸಮಾರಂಭದಲ್ಲಿ ಅನಿರೀಕ್ಷಿತವಾಗಿ ನಿಮ್ಮ ಉಪಸ್ಥಿತಿಯು ಇರಲಿದೆ. ನಿಮ್ಮ ಆಶೀರ್ವಾದವನ್ನು ಪಡೆಯಲು ಮೊಮ್ಮಕ್ಕಳು ಬರಬಹುದು. ವ್ಯವಸ್ಥಿತ ಕೆಲಸದಿಂದ ಬೆಲೆ ಸಿಗಲಿದೆ. ಶಿಕ್ಷಣ ಕ್ಷೇತ್ರದಲ್ಲಿ ಯಶಸ್ಸು ಸಾಧ್ಯ. ಹೊಸ ಒಡನಾಡಿಗಳ ಪರಿಚಯ. ಭವಿಷ್ಯದ ಯೋಜನೆಗಳಿಗೆ ಸ್ಪಷ್ಟತೆ. ದುಡುಕುವ ಸನ್ನಿವೇಶದಲ್ಲಿ ಸುಮ್ಮನಿದ್ದುಬಿಡುವುದು ಉತ್ತಮ. ಯಾವ ಕೆಲಸ ಪ್ರಣಯಕ್ಕೆ ಈ ದಿನವು ಒಳ್ಳೆಯದು. ಆದಷ್ಟು ನೀರಿನಿಂದ ದೂರವಿರಿ. ವೃಷಭ ರಾಶಿ: ಮಹಿಳೆಯರಿಂದ ನಿಮಗೆ ವಿರೋಧವು ಬರಬಹುದು. ಸಮಸ್ಯೆಗಳು ಬಗೆಹರಿಯುತ್ತವೆ. ಲೌಕಿಕ ಸಂತೋಷವನ್ನು ಅನುಭವಿಸುವಿರಿ. ಶತ್ರುಗಳು ಸೋಲುತ್ತಾರೆ, ಇದರಿಂದ…

Read More

Video: ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ; ವಿಶೇಷ ಪೂಜೆಗಳ ಸಂಭ್ರಮ – Kannada News | Chamundeshwari Vardhanti: Mysurus Grand Temple Celebrations

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ತಾಯಿ ಶ್ರೀ ಚಾಮುಂಡೇಶ್ವರಿ ದೇವಿಯ ವರ್ಧಂತಿ ಮಹೋತ್ಸವ ಇಂದು ವಿಜೃಂಭಣೆಯಿಂದ ನಡೆಯುತ್ತಿದೆ. ಜನ್ಮೋತ್ಸವ ಎಂದೂ ಕರೆಯಲ್ಪಡುವ ಈ ದಿನವನ್ನು ದೇವಿಯ ಹುಟ್ಟುಹಬ್ಬವನ್ನಾಗಿ ಆಚರಿಸಲಾಗುತ್ತದೆ. ಮಕ್ಕಳಿಗೆ ಹುಟ್ಟುಹಬ್ಬವನ್ನು ಆಚರಿಸುವಂತೆಯೇ, ತಾಯಿ ಚಾಮುಂಡೇಶ್ವರಿಗೂ ಈ ವಿಶೇಷ ದಿನದಂದು ವೈಭವದ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಗುತ್ತದೆ. ದೇವಿಯ ವರ್ಧಂತಿ ಮಹೋತ್ಸವದ ಭಾಗವಾಗಿ, ಬೆಳಗ್ಗೆ ಅಭ್ಯಂಜನ ಸ್ನಾನದಿಂದ ಪೂಜೆಗಳು ಪ್ರಾರಂಭವಾದವು. ನಂತರ ಪಂಚಾಮೃತ ಅಭಿಷೇಕ, ಮಹನ್ಯಾಸ ಪೂರ್ವಕ ಪಂಚಾಮೃತ ಅಭಿಷೇಕ, ಮತ್ತು ಅನೇಕ ದ್ರವ್ಯಗಳಿಂದ ಅಭಿಷೇಕವನ್ನು ನೆರವೇರಿಸಲಾಯಿತು. ಕ್ಷೀರಾನ್ನದಿಂದಲೂ ಅಭಿಷೇಕ ಮಾಡಲಾಯಿತು….

Read More

ಖಾಸಗಿ ದೃಶ್ಯ ಇಟ್ಟುಕೊಂಡು 78 ವರ್ಷದ ವ್ಯಕ್ತಿಗೆ ಮಹಿಳೆ ಬ್ಲ್ಯಾಕ್​​ಮೇಲ್​​: ದೂರು ದಾಖಲು

ಬೆಂಗಳೂರು, ಮಾರ್ಚ್​​ 08: 78 ವರ್ಷದ ವ್ಯಕ್ತಿಯೋರ್ವರನ್ನು ಸಾಮಾಜಿಕ ಜಾಲತಾಣದ ಮೂಲಕ ಪರಿಚಯಿಸಿಕೊಂಡ ಮಹಿಳೆಯೊಬ್ಬಳು ಅವರ ಜೊತೆ ಸ್ನೇಹ ಬೆಳೆಸಿ, ಈಗ ಬ್ಲ್ಯಾಕ್​​ಮೇಲ್​​ ಮಾಡುತ್ತಿರುವ ಆರೋಪ ಬೆಂಗಳೂರಲ್ಲಿ ಕೇಳಿಬಂದಿದೆ. ಸಂತ್ರಸ್ತ ವ್ಯಕ್ತಿಯ ಸೊಸೆ ಈ ಬಗ್ಗೆ ನೀಡಿರುವ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಮಾರ್ಚ್​​ 3ರಂದೇ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿತ ಮಹಿಳೆ ಮೊದಲು ಫೇಸ್‌ಬುಕ್‌ನಲ್ಲಿ 78 ವರ್ಷದ ವ್ಯಕ್ತಿಯನ್ನು ಸಂಪರ್ಕಿಸಿದ್ದಾಳೆ. ಬಳಿಕ ತನ್ನ…

Read More

ಜಿಬಿಎ ಚುನಾವಣೆಗೆ ಸುಪ್ರೀಂಕೋರ್ಟ್​​ನಿಂದ ಹೊಸ ಡೆಡ್​​ಲೈನ್​​: ಈ ಹಿಂದೆ ನೀಡಿದ್ದ ಅವಧಿ ವಿಸ್ತರಣೆ – Kannada News | Supreme Court Extends Deadline For Greater Bengaluru Authority Elections Till August 31

ನವದೆಹಲಿ/ಬೆಂಗಳೂರು, ಮೇ 20: ಗ್ರೇಟರ್​​ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆ ಸಂಬಂಧ ಸುಪ್ರೀಂ ಕೋರ್ಟ್ ಮಹತ್ವದ ನಿರ್ಣಯ ಕೈಗೊಂಡಿದೆ. ಜೂನ್​​ 30ರ ವರೆಗೆ ಈ ಮುಂಚೆ ನೀಡಿದ್ದ ಗಡುವನ್ನು ಆಗಸ್ಟ್ 31, 2026ರವರೆಗೆ ವಿಸ್ತರಿಸಿದೆ. ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗದ ಮನವಿ ಮೇರೆಗೆ ಸಮಯಾವಕಾಶ ನೀಡಿರುವ ಕೋರ್ಟ್​​, ಇದೇ ಅಂತಿಮ ಅವಕಾಶ. ಮತ್ತಷ್ಟು ವಿಸ್ತರಣೆ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಮುಖ್ಯಾಂಶಗಳು ಗ್ರೇಟರ್​​ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಗಡುವು ವಿಸ್ತರಣೆ ಈ ಹಿಂದೆ ಜೂನ್​​ 30ರ…

Read More