Headlines

ಮಂಗಳೂರು-ಬೆಂಗಳೂರು ರೈಲು ಪ್ರಯಾಣಿಕರೇ ಗಮನಿಸಿ: ಎಡಕುಮೇರಿ ಗುಡ್ಡಕುಸಿತದಿಂದ ಇಂದೂ ಹಲವು ರೈಲುಗಳ ಸಂಚಾರ ಬಂದ್ – Kannada News | Sakleshpur Yedakumari Landslide: Train Services Halted, Routes Diverted on Mangaluru Bengaluru Route

ಎಡಕುಮೇರಿ ಬಳಿ ರೈಲ್ವೆ ಹಳಿ ಮೇಲೆ ಗುಡ್ಡಕುಸಿತವಾಗಿರುವುದು.Image Credit source: tv9 ಹಾಸನ, ಆಗಸ್ಟ್ 3: ಹಾಸನ ಜಿಲ್ಲೆಯ (Hassan) ಸಕಲೇಶಪುರ ತಾಲೂಕಿನ ಎಡಕುಮೇರಿ–ಶಿರಿಬಾಗಿಲು ಬಳಿ ರೈಲ್ವೆ ಹಳಿ ಮೇಲೆ ಗುಡ್ಡಕುಸಿತವಾಗಿರುವ ಹಿನ್ನೆಲೆಯಲ್ಲಿ ಮಂಗಳೂರು–ಬೆಂಗಳೂರು ಮಾರ್ಗದಲ್ಲಿ (Mangalore Bangalore Train) ರೈಲು ಸಂಚಾರಕ್ಕೆ ಮತ್ತೆ ಅಡಚಣೆ ಉಂಟಾಗಿದೆ. ಶನಿವಾರ ರಾತ್ರಿ ಕುಸಿದ ಮಣ್ಣು ತೆರವು ಕಾರ್ಯಾಚರಣೆ ಮಳೆಯ ನಡುವೆಯೂ ಮುಂದುವರಿದಿದ್ದು, ಇಂದು ಕೂಡ ಕೆಲವು ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ ಹಾಗೂ ಹಲವು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ….

Read More

ಭಾರತಕ್ಕೆ ಒಲಿದ ‘ಕಾಮನ್‌ವೆಲ್ತ್ ಗೇಮ್ಸ್ 2030’ ಆತಿಥ್ಯ! – Kannada News | Ahmedabad All Set to Host Historic 100th Anniversary CWG in 2030

2026ರ ಗ್ಲ್ಯಾಸ್ಗೋ ಕಾಮನ್​ವೆಲ್ತ್ ಗೇಮ್ಸ್​ಗೆ  ತೆರೆಬಿದ್ದಿದೆ. ಇದರ ಬೆನ್ನಲ್ಲೇ, 2030ರ ಕಾಮನ್​ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತಕ್ಕೆ ಅಧಿಕೃತವಾಗಿ ಹಸ್ತಾಂತರಿಸಲಾಗಿದೆ. ಇದರೊಂದಿಗೆ, ಶತಮಾನದ ಐತಿಹಾಸಿಕ ಹೆಗ್ಗುರುತಿನ ಮುಂದಿನ ಕಾಮನ್​ವೆಲ್ತ್ ಗೇಮ್ಸ್​ಗೆ ಗುಜರಾತ್‌ನ ಅಹಮದಾಬಾದ್ ಆತಿಥ್ಯ ವಹಿಸುವುದು ಖಚಿತವಾಗಿದೆ. ಗ್ಲ್ಯಾಸ್ಗೋ ಕಾಮನ್​ವೆಲ್ತ್ ಗೇಮ್ಸ್​ನ ಸಮಾರೋಪ ಸಮಾರಂಭದ ಅಂತ್ಯದಲ್ಲಿ ಸ್ಕಾಟ್​ಲ್ಯಾಂಡ್​ನ ಅಧಿಕಾರಿಗಳು ಕಾಮನ್‌ವೆಲ್ತ್ ಗೇಮ್ಸ್ ಫೆಡರೇಶನ್ (CGF) ಧ್ವಜ ಮತ್ತು ಆತಿಥ್ಯದ ಬ್ಯಾಟನ್ ಅನ್ನು ಭಾರತೀಯ ನಿಯೋಗಕ್ಕೆ ಹಸ್ತಾಂತತಿಸಿದ್ದಾರೆ. ಭಾರತದ ಪರವಾಗಿ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ, ಭಾರತೀಯ…

Read More

ಎರಡು ಪ್ರಮುಖ ಮ್ಯೂಸಿಕ್ ಕಂಪನಿಗಳು ನನ್ನ ಬ್ಯಾನ್ ಮಾಡಿದ್ದವು; ಗಾಯಕ ಸೋನು ನಿಗಮ್ – Kannada News | Sonu Nigam Reveals How T Series and Zee Music Banned Him Over Copyright and Royalty Fight

ಭಾರತೀಯ ಚಿತ್ರರಂಗದ ಅದ್ಭುತ ಗಾಯಕ ಸೋನು ನಿಗಮ್ (Sonu Nigam) ತಮ್ಮ ವೃತ್ತಿಜೀವನದ ಅತ್ಯಂತ ಕಠಿಣ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಸಂಗೀತಗಾರರ ಹಕ್ಕುಗಳಿಗಾಗಿ ಧ್ವನಿ ಎತ್ತಿದ್ದಕ್ಕೆ ದೊಡ್ಡ ಕಂಪನಿಗಳು ತಮಗೆ ಹೇಗೆ ಬಹಿಷ್ಕಾರ ಹಾಕಿದ್ದವು ಎಂಬುದನ್ನು ಅವರು ಬಹಿರಂಗಪಡಿಸಿದ್ದಾರೆ. ಕೃತಿಸ್ವಾಮ್ಯ ಮತ್ತು ರಾಯಲ್ಟಿ ಹೋರಾಟದಿಂದಾಗಿ ತಾವು ಅನುಭವಿಸಿದ ವೃತ್ತಿಪರ ನಷ್ಟ ಮತ್ತು ಚಿತ್ರರಂಗದಲ್ಲಾದ ಬದಲಾವಣೆಗಳ ಕುರಿತು ಅವರು ಮುಕ್ತವಾಗಿ ಮಾತನಾಡಿದ್ದಾರೆ. ಸೋನು ನಿಗಮ್ ಗಾಯಕರ ರಾಯಲ್ಟಿ ಹಕ್ಕುಗಳ ಪರವಾಗಿ ಸದಾ ಧ್ವನಿ ಎತ್ತುತ್ತಾ ಬಂದಿದ್ದಾರೆ. ಕಲಾವಿದರಿಗೆ ಸೂಕ್ತ ಸಂಭಾವನೆ…

Read More

ವಿಜಯ್ ಪುತ್ರ ಜೇಸನ್ ಸಂಜಯ್ ಬದುಕಿನ ರೋಚಕ ಕಥೆ; ಅಂದು ರಾತ್ರಿ ನಡೆದಿದ್ದೇನು? – Kannada News | Jason Sanjay Reveals the Night His Family Almost Filed a Missing Person Police Complaint

ತಮಿಳುನಾಡು ಮುಖ್ಯಮಂತ್ರಿ ಹಾಗೂ ಸ್ಟಾರ್ ನಟ ವಿಜಯ್ ಅವರ (Vijay) ಪುತ್ರ ಜೇಸನ್ ಸಂಜಯ್ ಸದ್ಯ ಸುದ್ದಿಯಲ್ಲಿದ್ದಾರೆ. ಅವರು ತಮ್ಮ ಚಲನಚಿತ್ರ ರಂಗದ ಪ್ರವೇಶದ ಹೊತ್ತಿನಲ್ಲಿ ವೈಯಕ್ತಿಕ ಬದುಕಿನ ಆಸಕ್ತಿದಾಯಕ ಸಂಗತಿಯೊಂದನ್ನು ಹಂಚಿಕೊಂಡಿದ್ದಾರೆ. ಸ್ಟಾರ್ ಕುಟುಂಬದ ಹಿನ್ನೆಲೆಯಿಂದ ಬಂದ ಜೇಸನ್, ತಮಗೆ ಅರಿವಿಲ್ಲದೆ ಎದುರಿಸಿದ ಒಂದು ದೊಡ್ಡ ಸಂಕಷ್ಟದ ದಿನವನ್ನು ನೆನಪಿಸಿಕೊಂಡಿದ್ದಾರೆ. ಇದು ಅವರ ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಜೇಸನ್ ಸಂಜಯ್ ಸದ್ಯದಲ್ಲೇ ‘ಸಿಗ್ಮಾ’ ಚಿತ್ರದ ಮೂಲಕ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಈ ಸಿನಿಮಾ…

Read More

ದೆಹಲಿ ನಿವಾಸದಲ್ಲಿ ಸುದ್ದಿಗೋಷ್ಠಿ ವೇಳೆ ಪಪ್ಪು ಯಾದವ್ ಮೇಲೆ ಚಾಕು ದಾಳಿ ಯತ್ನ – Kannada News | Pappu Yadav Knife Attack: MP Claims Murder Attempt in Delhi Press Meet

ನವದೆಹಲಿ, ಆಗಸ್ಟ್​ 03: ಬಿಹಾರದ ಪೂರ್ಣಿಯಾ ಕ್ಷೇತ್ರದ ಸ್ವತಂತ್ರ ಸಂಸದ ಪಪ್ಪು ಯಾದವ್(Pappu Yadav) ಅವರ ದೆಹಲಿಯ ನಿವಾಸದಲ್ಲಿ ಏರ್ಪಡಿಸಲಾಗಿದ್ದ ಮಾಧ್ಯಮಗೋಷ್ಠಿಯ ವೇಳೆ ಭಾರಿ ಗದ್ದಲ, ತಳ್ಳಾಟ ಏರ್ಪಟ್ಟಿದೆ. ಚಾಕು ಹಿಡಿದು ಬಂದಿದ್ದ ವ್ಯಕ್ತಿಯೊಬ್ಬ ಸಂಸದರ ಮೇಲೆ ಹಲ್ಲೆಗೆ ಯತ್ನಿಸಿದ್ದು, ಇದು ‘ತನ್ನ ಕೊಲ್ಲುವ ಸಂಚು’ ಎಂದು ಪಪ್ಪು ಯಾದವ್ ಗಂಭೀರ ಆರೋಪ ಮಾಡಿದ್ದಾರೆ. ಪಪ್ಪು ಯಾದವ್ ಅವರು ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಾಗ, ಸಾರ್ವಜನಿಕರಂತೆ ತೂರಿಬಂದ ವ್ಯಕ್ತಿಯೊಬ್ಬ ಚಾಕುವಿನಿಂದ ದಾಳಿ ನಡೆಸಲು ಯತ್ನಿಸಿದ್ದಾನೆ. ತಕ್ಷಣವೇ ಜಾಗರೂಕರಾದ…

Read More

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಹೈಕಮಾಂಡ್ ಲಿಸ್ಟ್​ಗಾಗಿ ಕಾಯುತ್ತಿರುವ ಸಿಎಂ ಡಿಕೆಶಿ, ಇಂದು ಅಧಿಕೃತ ಕಾರ್ಯಕ್ರಮಗಳೇ ಇಲ್ಲ! – Kannada News | Karnataka Cabinet Expansion: CM DK Shivakumar await the High Command’s list; no official engagements scheduled for today!

ಬೆಂಗಳೂರು, ಆಗಸ್ಟ್ 3: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯ (Karnataka Cabinet Expansion) ವಿಚಾರದಲ್ಲಿ ಕುತೂಹಲ ಮುಂದುವರಿದಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಇಂದು (ಆಗಸ್ಟ್ 3) ಯಾವುದೇ ಅಧಿಕೃತ ಕಾರ್ಯಕ್ರಮವನ್ನು ನಿಗದಿಪಡಿಸಿಕೊಳ್ಳದೇ ಇಡೀ ದಿನವನ್ನು ಕಾಯ್ದಿರಿಸಿರುವುದು ಗಮನ ಸೆಳೆದಿದೆ. ಕಾಂಗ್ರೆಸ್ ಹೈಕಮಾಂಡ್‌ನಿಂದ ನೂತನ ಸಚಿವರ ಅಂತಿಮ ಪಟ್ಟಿ ಯಾವುದೇ ಕ್ಷಣದಲ್ಲಾದರೂ ರವಾನೆಯಾಗುವ ನಿರೀಕ್ಷೆಯಿದ್ದು, ಪಟ್ಟಿ ಬಂದರೆ ಇಂದು ಸಂಜೆಯೇ ಪ್ರಮಾಣವಚನ ಕಾರ್ಯಕ್ರಮ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ. ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಇಂದು…

Read More

ಬೆಂಗಳೂರಿನಲ್ಲಿ ಮಂಕಾದ ಮುಂಗಾರು: 108 ವರ್ಷಗಳಲ್ಲಿ ಎರಡನೇ ಬಾರಿಗೆ ಅತಿ ಕಡಿಮೆ ಮಳೆ ದಾಖಲು! – Kannada News | Bengaluru Records 2nd Driest July in 108 Years as Monsoon Falters

ಬೆಂಗಳೂರಿನಲ್ಲಿ 108 ವರ್ಷಗಳಲ್ಲೇ ಎರಡನೇ ಶುಷ್ಕ ಜುಲೈ ದಾಖಲಾಗಿದೆ. ಬೆಂಗಳೂರು, ಆಗಸ್ಟ್ 03: ನಗರದಲ್ಲಿ ಈ ಬಾರಿ ನೈಋತ್ಯ ಮುಂಗಾರು ಮಳೆ ತೀವ್ರ ಹಿನ್ನೆಡೆ ಅನುಭವಿಸಿದೆ. ಮೇ ತಿಂಗಳ ಪೂರ್ವ ಮುಂಗಾರು ಮಳೆಯಲ್ಲಿ ಉತ್ತಮ ಪ್ರಮಾಣದ ಮಳೆ ದಾಖಲಾಗಿದ್ದರೂ, ಜುಲೈ ತಿಂಗಳಲ್ಲಿ ಮಳೆರಾಯ ಸಂಪೂರ್ಣ ಕೈಕೊಟ್ಟಿದ್ದಾನೆ. ಪರಿಣಾಮವಾಗಿ, ಕಳೆದ 108 ವರ್ಷಗಳ ಇತಿಹಾಸದಲ್ಲೇ ಬೆಂಗಳೂರು ಅತ್ಯಂತ ಕಡಿಮೆ ಮಳೆ ಕಂಡ ಎರಡನೇ ಒಣ ಜುಲೈ (2nd Driest July) ತಿಂಗಳಿಗೆ ಸಾಕ್ಷಿಯಾಗಿದೆ. ಕೇವಲ 23 ಮಿಲಿಮೀಟರ್ ಮಳೆ…

Read More

11 ದಿನ ಕಳೆದರೂ 300 ಕೋಟಿ ರೂಪಾಯಿ ತಲುಪದ ‘ಜನ ನಾಯಗನ್’ ಸಿನಿಮಾ – Kannada News | Jana Nayagan Box Office Collection Day 11: Vijay Final Film Struggles to Cross 300 Crore Mark Globally

ದಳಪತಿ ವಿಜಯ್ ಅವರ ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಸೃಷ್ಟಿಸುವುದು ಹೊಸದೇನಲ್ಲ. ಈ ಹಿಂದೆ ಬಿಡುಗಡೆಯಾಗಿದ್ದ ಅವರ ‘ಲಿಯೋ’ ಸಿನಿಮಾ ಬರೋಬ್ಬರಿ 623 ಕೋಟಿ ರೂಪಾಯಿ ಹಾಗೂ ‘ಗೋಟ್’ ಚಿತ್ರ 455 ಕೋಟಿ ರೂಪಾಯಿ ಗಳಿಸಿ ಭರ್ಜರಿ ಯಶಸ್ಸು ಕಂಡಿದ್ದವು. ವಿಶೇಷವೆಂದರೆ, ವಿಮರ್ಶಕರಿಂದ ನೆಗೆಟಿವ್ ಪ್ರತಿಕ್ರಿಯೆ ಪಡೆದ ಹೊರತಾಗಿಯೂ ಈ ಎರಡೂ ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ದಾಖಲೆಯ ಕಲೆಕ್ಷನ್ ಮಾಡಿದ್ದವು. ವಿಜಯ್ ಕೊನೆಯ ಚಿತ್ರ ‘ಜನ ನಾಯಗನ್’ಗೆ (Jana Nayagan) ಮಾತ್ರ ಈಗ ದೊಡ್ಡ ಹಿನ್ನಡೆ ಎದುರಾಗಿದೆ….

Read More

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಐವರು ಪೊಲೀಸರು ಸೇರಿ 14 ಮಂದಿ ದಾರುಣ ಸಾವು – Kannada News | Deadly Blast at Peace Rally in Pakistan Claims 14 Lives, Including Five Police Personnel

ಇಸ್ಲಾಮಾಬಾದ್, ಆಗಸ್ಟ್​ 03: ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ರಕ್ತಪಾತ ನಡೆದಿದೆ. ಸ್ವಾತ್ ಜಿಲ್ಲೆಯ ಕಬಲ್ ಪಟ್ಟಣದಲ್ಲಿ ನಡೆಯುತ್ತಿದ್ದ ಶಾಂತಿ ರ್ಯಾಲಿಯನ್ನು ಗುರಿಯಾಗಿಸಿಕೊಂಡು ನಡೆದ ಭೀಕರ ಆತ್ಮಾಹುತಿ ಬಾಂಬ್ ದಾಳಿ(Bomb Blast)ಯಲ್ಲಿ ಐವರು ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಹಾಗೂ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯ ‘ಸ್ವಾತ್ ಅಮಾನ್ ಜಿರ್ಗಾ’ ಆಯೋಜಿಸಿದ್ದ ಈ ರ್ಯಾಲಿಯಲ್ಲಿ ಸಾರ್ವಜನಿಕರು ಪ್ರದೇಶದಲ್ಲಿ ಶಾಂತಿ ಸ್ಥಾಪನೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗುತ್ತಿದ್ದರು. ಈ ವೇಳೆ ಚೌಕದಲ್ಲಿದ್ದ ಪೊಲೀಸ್ ಠಾಣೆಯ…

Read More

ಬಾಕ್ಸ್ ಆಫೀಸ್‌ನಲ್ಲಿ ಸ್ಪೈಡರ್-ಮ್ಯಾನ್ ಅಬ್ಬರ; 4 ದಿನಗಳಲ್ಲಿ 300 ಕೋಟಿ ಕ್ಲಬ್ ಸೇರಿದ ‘ಬ್ರ್ಯಾಂಡ್ ನ್ಯೂ ಡೇ’ – Kannada News | Spider Man: Brand New Day Roars at Indian Box Office, Crosses 300 Crore rs Gross in Just 4 Days

ಬಾಕ್ಸ್ ಆಫೀಸ್‌ನಲ್ಲಿ ಸ್ಪೈಡರ್-ಮ್ಯಾನ್ ಹವಾ ಜೋರಾಗಿದ್ದು, ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಇತ್ತೀಚೆಗಷ್ಟೇ ಬಿಡುಗಡೆಯಾಗಿರುವ ‘ಸ್ಪೈಡರ್-ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಸಿನಿಮಾ (Spider Man) ಪ್ರೇಕ್ಷಕರಿಂದ ಅಭೂತಪೂರ್ವ ಬೆಂಬಲ ಪಡೆದುಕೊಂಡಿದ್ದು, ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿದೆ. ವಾರಾಂತ್ಯದ ದಿನಗಳಲ್ಲಿ ಪ್ರೇಕ್ಷಕರು ಚಿತ್ರಮಂದಿರಗಳತ್ತ ಮುಗಿಬಿದ್ದಿರುವುದು ಚಿತ್ರದ ಭರ್ಜರಿ ಗಳಿಕೆಗೆ ಸಾಕ್ಷಿಯಾಗಿದೆ. ಕೇವಲ ನಾಲ್ಕೇ ದಿನಗಳಲ್ಲಿ ಈ ಸಿನಿಮಾ ಭಾರತೀಯ ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 306.37 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ದಾಖಲೆ ಬರೆದಿದೆ. ಚಿತ್ರದ ನೆಟ್…

Read More