Headlines

‘ಲವ್ ಇನ್ಶೂರೆನ್ಸ್ ಕಂಪನಿ’ ಬಾಕ್ಸ್ ಆಫೀಸ್ ಕಲೆಕ್ಷನ್: 2ನೇ ದಿನವೂ ಮಂದಗತಿ

ವಿಘ್ನೇಶ್ ಶಿವನ್ ನಿರ್ದೇಶನದ, ಪ್ರದೀಪ್ ರಂಗನಾಥನ್ ನಟನೆಯ ‘ಲವ್ ಇನ್ಶೂರೆನ್ಸ್ ಕಂಪನಿ’ (Love Insurance Kompany) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸಾಧಾರಣ ಕಲೆಕ್ಷನ್ ಮಾಡುತ್ತಿದೆ. ವಾರಾಂತ್ಯದ ರಜಾ ದಿನಗಳಿದ್ದರೂ ಸಹ ಚಿತ್ರದ ಕಲೆಕ್ಷನ್‌ನಲ್ಲಿ ದೊಡ್ಡ ಮಟ್ಟದ ಏರಿಕೆ ಕಂಡುಬಂದಿಲ್ಲ. ಸೈನ್ಸ್ ಫಿಕ್ಷನ್ ರೊಮ್ಯಾಂಟಿಕ್ ಕಾಮಿಡಿ ಈ ಸಿನಿಮಾದಲ್ಲಿದೆ. ಈ ಸಿನಿಮಾ ಮೇಲೆ ಪ್ರದೀಪ್ ರಂಗನಾಥನ್ (Pradeep Ranganathan) ಫ್ಯಾನ್ಸ್ ಬಹಳ ನಿರೀಕ್ಷೆ ಹೊಂದಿದ್ದರು. ಆದರೆ ಆ ನಿರೀಕ್ಷೆಯ ಮಟ್ಟವನ್ನು ತಲುಪಲು ಈ ಸಿನಿಮಾಗೆ ಸಾಧ್ಯವಾಗಿಲ್ಲ. Sacnilk ವರದಿಯ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 28ರಿಂದ ಜನವರಿ 3ರ ತನಕ ವಾರಭವಿಷ್ಯ  

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಎಲ್ಲ ಕಡೆಯಿಂದಲೂ ಸಂತೋಷ ತರುವಂಥ ಸುದ್ದಿ ಬರಲಿದೆ. ಹೊಸದಾಗಿ ಉದ್ಯೋಗಕ್ಕೆ ಪ್ರಯತ್ನ ಮಾಡುತ್ತಿರುವವರಿಗೆ ಇಂಟರ್ ವ್ಯೂ ಬರಬಹುದು, ಹಾಗೆ ಬಂದಂಥ ಇಂಟರ್ ವ್ಯೂದಲ್ಲಿ ಯಶಸ್ಸು, ಅಂದುಕೊಂಡಂಥ ಸಂಬಳ, ಸ್ಥಾನ ಹೀಗೆ ಎಲ್ಲವೂ ಸಿಗಲಿದೆ. ನೀವು ಮಾಡಬೇಕಾದದ್ದೆಲ್ಲ ಇಷ್ಟೆ; ಗುರುವಾರದ ದಿನ ಸಾಯಿಬಾಬ ದೇವಸ್ಥಾನಕ್ಕೆ ತೆರಳಿ, ದರ್ಶನ ಪಡೆಯಿರಿ. ಅಲ್ಲಿ ನಿಮಗೆ ಮಾಡಿಸಬೇಕು ಎಂದೆನಿಸುವ ಸೇವೆಯೊಂದನ್ನು ಮಾಡಿಸುವುದರಿಂದ ಒಳಿತಾಗಲಿದೆ. ಗೃಹಾಲಂಕಾರ ವಸ್ತುಗಳು,…

Read More

‘ಜನ ನಾಯಗನ್’ ಪೈರಸಿ ಕಾಪಿ ಡೌನ್​ಲೋಡ್ ಮಾಡಿದವರಿಗೂ ಎದುರಾಗಲಿದೆ ಸಂಕಷ್ಟ

ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ಹಾಗೂ ಅವರ ವೃತ್ತಿಜೀವನದ ಕೊನೆಯ ಚಿತ್ರ ಎನ್ನಲಾದ ‘ಜನ ನಾಯಗನ್’ (Jana Nayagan) ಬಿಡುಗಡೆಗೂ ಮುನ್ನವೇ ಪೈರಸಿ ಕಾಟಕ್ಕೆ ಸಿಲುಕಿದೆ. ಸೆನ್ಸಾರ್ ಮಂಡಳಿಯೊಂದಿಗೆ ಚಿತ್ರತಂಡ ಸುದೀರ್ಘ ಹೋರಾಟ ನಡೆಸುತ್ತಿರುವ ನಡುವೆಯೇ, ಚಿತ್ರದ ಸಂಪೂರ್ಣ ತುಣುಕುಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿರುವುದು ಇಡೀ ಭಾರತೀಯ ಚಿತ್ರರಂಗಕ್ಕೆ ಶಾಕ್ ನೀಡಿದೆ. ಈ ದುರದೃಷ್ಟಕರ ಘಟನೆಯ ಬೆನ್ನಲ್ಲೇ ಚಿತ್ರದ ನಿರ್ಮಾಣ ಸಂಸ್ಥೆಯಾದ ಕೆವಿಎನ್ ಪ್ರೊಡಕ್ಷನ್ಸ್ (KVN Productions) ಅಧಿಕೃತ ಪ್ರಕಟಣೆ ಹೊರಡಿಸಿದೆ. ‘ಜನ ನಾಯಗನ್’ ಸಿನಿಮಾದ ಪೈರಸಿ (Piracy)…

Read More

ಸುಡು ಬಿಸಿಲಿನಲ್ಲಿ ದ್ವಿಚಕ್ರ ವಾಹನ ಚಲಾಯಿಸುವಾಗ ಈ ವಿಚಾರಗಳನ್ನು ನೆನಪಿನಲ್ಲಿಡಿ – Kannada News | It is essential to take care of these things while riding two wheeler in the summer

ಈ ಸುಡು ಬೇಸಿಗೆಯಲ್ಲಿ (summer) ಮನೆಯಿಂದ ಹೊರಗಡೆ ಕಾಲಿಡಲು ಸಹ ಸಾಧ್ಯವಾಗುವುದಿಲ್ಲ. ಅದರಲ್ಲೂ ಸೂರ್ಯನ ಪ್ರಕರ ಶಾಖದ ನಡುವೆ ದ್ವಿಚಕ್ರ ವಾಹನ ಸವಾರಿ ಮಾಡುವುದು ಸವಾಲಿನ ಕೆಲಸವೇ ಸರಿ. ಹೌದು ತೀವ್ರವಾದ ಬಿಸಿಲು ಮತ್ತು ಬಿಸಿ ಗಾಳಿಯು ದೇಹವನ್ನು ಆಯಾಸಗೊಳಿಸುತ್ತದೆ. ದೇಹವು ಬೇಗನೆ ದಣಿದಿದೆ, ಗಮನವು ವಿಚಲಿತವಾಗುತ್ತದೆ ಮತ್ತು ಸಣ್ಣದೊಂದು ಅಜಾಗರೂಕತೆಯು ಸಹ ದೊಡ್ಡ ಅಪಘಾತಕ್ಕೆ ಕಾರಣವಾಗಬಹುದು. ಆದ್ದರಿಂದ ಈ ಶಾಖದ ಸಮಯದಲ್ಲಿ ಬೈಕ್‌, ಸ್ಕೂಟರ್‌ ಓಡಿಸುವಾಗ ನಿಮ್ಮ ಆರೋಗ್ಯದ ಜೊತೆಗೆ ಸುರಕ್ಷತೆಯನ್ನು ನೋಡಿಕೊಳ್ಳುವುದು ಬಹಳ ಮುಖ್ಯ….

Read More

ನಟಿ ಕೀರ್ತಿ ಸುರೇಶ್​ಗೆ ಬಾಡಿ ಶೇಮಿಂಗ್; ಸರ್ಜರಿ ವದಂತಿಗಳಿಗೆ ಖಡಕ್ ತಿರುಗೇಟು – Kannada News | Keerthy Suresh addresses body shaming and surgery rumours on instagram post

ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕೀರ್ತಿ ಸುರೇಶ್ ಅವರು ಚಿತ್ರರಂಗದಲ್ಲಿ ತಾವು ಎದುರಿಸಿದ ಬಾಡಿ ಶೇಮಿಂಗ್ (Body Shaming) ಮತ್ತು ಪ್ಲಾಸ್ಟಿಕ್ ಸರ್ಜರಿ ವದಂತಿಗಳ ಕುರಿತು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಳ್ಳುವ ಮೂಲಕ ಮನದ ಮಾತುಗಳನ್ನು ಹೊರಹಾಕಿದ್ದಾರೆ. ಸದಾ ಸೌಮ್ಯವಾಗಿ ಕಾಣಿಸಿಕೊಳ್ಳುವ ನಟಿ, ಇತ್ತೀಚೆಗೆ ತಮಗಾದ ದೈಹಿಕ ಮತ್ತು ಮಾನಸಿಕ ಹಿನ್ನಡೆಯ ಬಗ್ಗೆಯೂ ಮುಕ್ತವಾಗಿ ಮಾತನಾಡಿದ್ದಾರೆ. ಜಿಮ್‌ನಲ್ಲಿ ತಾವು ಕಷ್ಟಪಟ್ಟು ವರ್ಕೌಟ್ ಮಾಡುತ್ತಿರುವ ಹಳೆಯ ವಿಡಿಯೋವನ್ನು ಹಂಚಿಕೊಂಡಿರುವ ಕೀರ್ತಿ ಸುರೇಶ್ (Keerthy Suresh), ‘ಫಿಟ್‌ನೆಸ್…

Read More

ಪ್ರವಾಸಿಗರಿಗೆ ಸಿಗಲಿದೆ ಡಿಜಿಟಲ್ ಸಾರಥಿ; ರಾಜ್ಯದಲ್ಲಿ ಶೀಘ್ರದಲ್ಲೇ ‘ನಮ್ಮ ಗೈಡ್’ ಆ್ಯಪ್, ವೆಬ್‌ಸೈಟ್‌ ಬಿಡುಗಡೆ! – Kannada News | Namma Guide App: Karnataka Tourism to Launch Online Guide Booking Platform

ಬೆಂಗಳೂರು, ಜೂನ್ 23: ರಾಜ್ಯದ ಪ್ರವಾಸೋದ್ಯಮ (Tourism) ಕ್ಷೇತ್ರವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ಮತ್ತು ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯಗಳನ್ನು ಒದಗಿಸಲು ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಪ್ರವಾಸೋದ್ಯಮ ಸಚಿವ ಕೆ. ಜೆ. ಜಾರ್ಜ್ ಅವರ ಸೂಚನೆ ಮೇರೆಗೆ, ಪ್ರವಾಸಿಗರಿಗೆ ಸ್ಥಳೀಯ ಮಾರ್ಗದರ್ಶಕರನ್ನು ಸುಲಭವಾಗಿ ಸಂಪರ್ಕಿಸಲು ನೆರವಾಗುವ ‘ನಮ್ಮ ಗೈಡ್’ (Namma Guide) ಎಂಬ ಅತ್ಯಾಧುನಿಕ ವೆಬ್‌ಸೈಟ್ ಹಾಗೂ ಆ್ಯಪ್ ಅಭಿವೃದ್ಧಿಪಡಿಸಲು ಇಲಾಖೆ ಸಜ್ಜಾಗಿದೆ. ಮುಖ್ಯಾಂಶಗಳು ಕರ್ನಾಟಕದ ಪ್ರವಾಸೋದ್ಯಮ ಉತ್ತೇಜನಕ್ಕೆ ‘ನಮ್ಮ ಗೈಡ್’ ಆ್ಯಪ್ ಮತ್ತು ವೆಬ್‌ಸೈಟ್‌…

Read More

ಚಿಯಾ ಬೆಳೆಗಾರರಿಗೆ ತಟ್ಟಿದ ಯುದ್ಧದ ಬಿಸಿ: ಸರ್ರನೆ ಕುಸಿದ ದರ; ಬೀದರ್​​ ರೈತರು ಕಂಗಾಲು

ಬೀದರ್​, ಮಾರ್ಚ್​ 29: ಗಲ್ಫ್​​ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಚಿಯಾ (Chia) ಬೆಳೆಗಾರರಿಗೆ ತಟ್ಟಿದೆ. ಚಿಯಾ ಬೀಜದ ದರ ಅರ್ಧದಷ್ಟು ಇಳಿಕೆಯಾಗಿದ್ದು, ರೈತರಿಗೆ ಸಂಕಷ್ಟ ತಂದೊಡ್ಡಿದೆ. ಯುದ್ಧ ಮುಂದುವರೆದ ಹಿನ್ನಲೆ ರಫ್ತು ಮಾಡಲಾಗದೇ ಸಮಸ್ಯೆ ಉಂಟಾಗಿದ್ದು, ಚಿಯಾ ದರದಲ್ಲಿ (Rate) ಭಾರೀ ‌ಕುಸಿತವಾಗಿದೆ. ಸದ್ಯ ಇದು ರೈತರನ್ನ ಕಂಗಾಲು ಮಾಡಿದೆ. ಒಂದೇ ತಿಂಗಳಲ್ಲಿ 10 ಸಾವಿರ ರೂ. ಇಳಿಕೆ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಚಿಯಾ ಬೆಳೆಗಾರರು ಸಂಕಷ್ಟಕ್ಕೆ ಸಿಲಿಕಿದ್ದಾರೆ. ಬೀದರ್ ಜಿಲ್ಲೆಯಲ್ಲಿ ಚಿಯಾ ಬೆಳೆಗಾರರು ಗಂಭೀರ…

Read More

ರಾಮ ಮಂದಿರ ದೇಣಿಗೆ ಹಗರಣ; 8 ಆರೋಪಿಗಳಿಗೂ 14 ದಿನಗಳ ನ್ಯಾಯಾಂಗ ಬಂಧನ – Kannada News | Ram Temple Donation Theft Case All 8 Accused Sent To 14 Day Judicial Custody

ಅಯೋಧ್ಯೆ, ಜೂನ್ 29: ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದ ದೇಣಿಗೆ ದುರುಪಯೋಗ ಪ್ರಕರಣದ (Ram Temple Donation Row) ಎಲ್ಲಾ 8 ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯವು ಇಂದಿನಿಂದ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಹೀಗಾಗಿ, ಈ ಆರೋಪಿಗಳು ಜುಲೈ 13ರವರೆಗೆ ನ್ಯಾಯಾಂಗ ಬಂಧನದಲ್ಲಿ ಇರಲಿದ್ದಾರೆ. 3 ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಂದು ಎಂಟೂ ಜನ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಈ ವೇಳೆ ಅಯೋಧ್ಯೆ ನ್ಯಾಯಾಲಯವು ಅವರಿಗೆ 14 ದಿನಗಳ…

Read More

ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರಿಯತಮೆಯ ವಿಚಾರಣೆ ವೇಳೆ ಬಯಲಾಯ್ತು ಸ್ಫೋಟಕ ವಿಚಾರ! ಅಸಲಿಗೆ ಆಗಿದ್ದೇನು ಗೊತ್ತೇ? – Kannada News | Bengaluru Love Tragedy: Girl Planned end life After Burning Boyfriend Alive in Byadarahalli; Stunning Details Emerge

ಮೃತ ಕಿರಣ್‌ (ಎಡಚಿತ್ರ) ಹಾಗೂ ಆರೋಪಿImage Credit source: tv9 ಬೆಂಗಳೂರು, ಏಪ್ರಿಲ್ 22: ಬೆಂಗಳೂರಿನ (Bengaluru) ಬ್ಯಾಡರಹಳ್ಳಿಯಲ್ಲಿ ಯುವತಿಯೊಬ್ಬಳು ತನ್ನ ಪ್ರಿಯಕರನನ್ನೇ ಜೀವಂತ ದಹನ ಮಾಡಿದ (Byadarahalli Murder Case) ಭೀಕರ ಘಟನೆಗೆ ಸಂಬಂಧಿಸಿದಂತೆ ಈಗ ಮತ್ತಷ್ಟು ಆಘಾತಕಾರಿ ವಿಚಾರಗಳು ಬಯಲಾಗಿವೆ. ಪ್ರಿಯಕರ ಕಿರಣ್‌ನನ್ನು ಕೊಲೆ ಮಾಡಿದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಆರೋಪಿ ಪ್ರೇಮಾ ಸ್ಕೆಚ್ ಹಾಕಿದ್ದಳು ಎಂಬ ಸ್ಫೋಟಕ ವಿಚಾರ ಪೊಲೀಸ್ ವಿಚಾರಣೆ ವೇಳೆ ಬಯಲಾಗಿದೆ. ಅಲ್ಲದೆ, ಅದಕ್ಕಾಗಿ ಏನೇನು ಸಿದ್ಧತೆ ಮಾಡಿಕೊಂಡಿದ್ದಳು…

Read More

ಕಾಡಾನೆ ಹಾವಳಿಗೆ ಬ್ರೇಕ್ ಹಾಕುತ್ತಾ ರೈಲ್ವೆ ಹಳಿ ಬ್ಯಾರಿಕೇಡ್? ಹಾಸನ ಗಡಿಯಲ್ಲಿ 35 ಕಿಮೀ ಭದ್ರಕೋಟೆ ಸಿದ್ಧ!

ಹಾಸನ, ಏಪ್ರಿಲ್ 9: ಕಳೆದ ಎರಡು ದಶಕಗಳಿಂದ ಹಾಸನ ಜಿಲ್ಲೆಯ ಮಲೆನಾಡು ಭಾಗದ ಜನರ ನಿದ್ದೆಗೆಡಿಸಿರುವ ಕಾಡಾನೆಗಳ ಸಮಸ್ಯೆಗೆ ಕೊನೆಗೂ ತಾಂತ್ರಿಕ ಪರಿಹಾರವೊಂದು ದಕ್ಕಿದೆ. ಕೊಡಗಿನಿಂದ ಹಾಸನಕ್ಕೆ (Hassan) ಲಗ್ಗೆಯಿಡುತ್ತಿದ್ದ ಆನೆ ಹಿಂಡುಗಳನ್ನು ತಡೆಯಲು ನಿರ್ಮಿಸಲಾಗುತ್ತಿದ್ದ ರೈಲ್ವೆ ಹಳಿ ಬ್ಯಾರಿಕೇಡ್ (Railway Track Barricade) ನಿರ್ಮಾಣ ಕಾರ್ಯ ಸಂಪೂರ್ಣಗೊಂಡಿದೆ. ಹಾಸನ ಜಿಲ್ಲೆಯ ಆಲೂರು, ಬೇಲೂರು ಮತ್ತು ಸಕಲೇಶಪುರ ತಾಲ್ಲೂಕುಗಳಲ್ಲಿ ಕಳೆದ 20 ವರ್ಷಗಳಲ್ಲಿ ಕಾಡಾನೆ ದಾಳಿಗೆ ಸುಮಾರು 80ಕ್ಕೂ ಹೆಚ್ಚು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಕೋಟ್ಯಂತರ ರೂಪಾಯಿ…

Read More