Headlines

17ನೇ ಬೆಂಗಳೂರು ಚಲನಚಿತ್ರೋತ್ಸವ ಮುಕ್ತಾಯ; ಹಂಸಲೇಖಗೆ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿ – Kannada News | 17th Bangalore Film Festival concludes; Hamsalekha gets Lifetime Achievement Award

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (BIFFes) 17ನೇ ಆವೃತ್ತಿಗೆ ಶುಕ್ರವಾರ (ಫೆಬ್ರವರಿ 6) ರಾತ್ರಿ ನಗರದ ಲುಲು ಮಾಲ್‌ನಲ್ಲಿ ತೆರೆ ಬಿದ್ದಿದೆ. ಜಪಾನ್‌ ದೇಶದ ‘ಲಾಸ್ಟ್‌ ಲ್ಯಾಂಡ್‌’, ಮರಾಠಿಯ ‘ಸಬರ್‌ ಬೊಂಡಾ’ ಮತ್ತು ಕನ್ನಡದ ‘ವನ್ಯಾ’ ಸಿನಿಮಾಗಳು ಅನುಕ್ರಮವಾಗಿ ಚಿತ್ರೋತ್ಸವದ ಏಷ್ಯಾ, ಭಾರತ ಮತ್ತು ಕನ್ನಡ ಸ್ಪರ್ಧಾ ವಿಭಾಗಗಳಲ್ಲಿ ‘ಅತ್ಯುತ್ತಮ ಸಿನಿಮಾ’ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡವು. ಹಿರಿಯ ಗೀತರಚನೆಕಾರ ಮತ್ತು ಸಂಗೀತ ನಿರ್ದೇಶಕ ಹಂಸಲೇಖ (Hamsalekha) ಅವರಿಗೆ ಜೀವಮಾನದ ಶ್ರೇಷ್ಠ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ…

Read More

ನೆಲಮಂಗಲ: ಎಣ್ಣೆ ನಶೆಯಲ್ಲಿ ತಮಾಷೆ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಯುವಕ – Kannada News | Drunken Prank Leads to Death: Youth Tragically Dies in Nelamangala

ನೆಲಮಂಗಲ, ಡಿಸೆಂಬರ್​​ 31: ಮದ್ಯದ ನಶೆಯಲ್ಲಿ ತಾಯಿಯ ಜೊತೆ ತಮಾಷೆ ಮಾಡಲು ಹೋಗಿ ನೇಣಿಗೆ ಸಿಲುಕಿ ಯುವಕನೋರ್ವ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರೋಹಿತ್​​ ನಗರದಲ್ಲಿ ನಡೆದಿದೆ. ವಿಜಯಕುಮಾರ್(28) ಮೃತ ದುರ್ದೈವಿಯಾಗಿದ್ದು, ಮಗನ ಹುಚ್ಚಾಟಕ್ಕೆ ತಾಯಿ ಹಾಗೂ ಸಂಬಂಧಿಕರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ನಿನ್ನೆ ಸಂಜೆ ಮದ್ಯ ಸೇವಿಸಿ ಮನೆಗೆ ತೆರಳಿದ್ದ ವಿಜಯ್ ಕುಮಾರ್ ತಾಯಿ ಬಳಿ ಖರ್ಚಿಗೆ ಹಣ ನೀಡುವಂತೆ ಕೇಳಿದ್ದ. ಈ ವೇಳೆ ಆಕೆ ಕೊಡಲ್ಲ ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ತೀನಿ ಎಂದು ಬೆದರಿಕೆ…

Read More

ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು

ಚಿಕ್ಕಮಗಳೂರು, (ಮಾರ್ಚ್ 14): ತಂದೆ ತಾಯಿಯರ ಅಂತಿಮ ಸಂಸ್ಕಾರವನ್ನು ಗಂಡು ಮಕ್ಕಳು ಮಾಡುವುದು ಸಾಮಾನ್ಯ. ತಂದೆಯ ಚಿತೆಗೆ ಮೊದಲು ಆತನ ಹಿರಿಯ ಮಗನೇ ಅಗ್ನಿ ಸ್ಪರ್ಶಮಾಡಬೇಕೆಂದು ಹಿಂದೂ ಸಂಪ್ರದಾಯದಲ್ಲಿ ಹೇಳಲಾಗಿದೆ. ಆದ್ರೆ, ಚಿಕ್ಕಮಗಳೂರಿನಲ್ಲಿ ಸಹೋದರಿಯರೇ ತಂದೆಯ ಅಂತಿಮ ವಿಧಿವಿಧಾನ ನೆರವೇರಿಸಿದ್ದಾರೆ. ಹೌದು…ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿ ವಿಶ್ವನಾಥ್ ಎನ್ನುವರು ಮೃತಪಟ್ಟಿದ್ದು, ಇವರಿಗೆ ಗಂಡು ಮಕ್ಕಳು ಇಲ್ಲ. ಹೀಗಾಗಿ ಇವರ ಅಂತ್ಯಕ್ರಿಯೆಯನ್ನು ಇಬ್ಬರು ಪುತ್ರಿಯರು ಸೇರಿಕೊಂಡು ನೆರವೇರಿಸಿದ್ದಾರೆ. ಇಬ್ಬರು ಹೆಣ್ಣು ಮಕ್ಕಳು ಭಾವಸಾರ ಕ್ಷತ್ರಿಯ ಸಮಾಜದಂತೆ…

Read More

ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಹೋಗುವವರಿಗೆ ಗುಡ್​​​ ನ್ಯೂಸ್​​ ನೀಡಿದ ಕೇಂದ್ರ, ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರಕ್ಕೆ ಸಿದ್ಧತೆ – Kannada News | Vande Bharat Express Soon for Bengaluru Mangaluru: Big Travel News

ಮಂಗಳೂರು, ಡಿ.31: ಮಂಗಳೂರು ಜನರಿಗೆ ಬಿಗ್​​ ಗುಡ್​​​ನ್ಯೂಸ್​​ ನೀಡಿದ ಕೇಂದ್ರ ಸರ್ಕಾರ, ಇನ್ಮುಂದೆ ರೈಲು ಪ್ರಯಾಣಿಕರ ವೇಗವನ್ನು ಹೆಚ್ಚಿಸಲಿದೆ. ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ಸಂಪರ್ಕಿಸಲಿದೆ ಎಂದು ಹಿಂದೂಸ್ಥಾನ್​​​​​​​​​​​ ಟೈಮ್ಸ್​​​ ವರದಿ ಮಾಡಿದೆ. ಈ ಮೂಲಕ ಕರಾವಳಿಗೆ ಹೋಗುವ ಬೆಂಗಳೂರಿನ ಪ್ರಯಾಣಿಕರು ಶೀಘ್ರದಲ್ಲೇ ವೇಗವಾದ ಮತ್ತು ಹೆಚ್ಚು ಆರಾಮದಾಯಕ ರೈಲು ಪ್ರಯಾಣವನ್ನು ಆನಂದಿಸಬಹುದು. ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಬಹುನಿರೀಕ್ಷಿತ ಸೆಮಿ-ಹೈಸ್ಪೀಡ್ ರೈಲು ಸೇವೆ ಕೊನೆಗೂ ಹಳಿಗೆ ಬರಲಿದೆ…

Read More

ನಟಿಯರಾಯ್ತು ಈಗ ರಾಜಕಾರಣಿಗಳ ಸರದಿ; ಮೂಡಿಗೆರೆ ಶಾಸಕಿ ನಯನಾ ಮೋಟಮ್ಮಗೂ ಅಶ್ಲೀಲ ಕಾಮೆಂಟ್ ಕಾಟ! ಆರೋಪಿ ಅರೆಸ್ಟ್ – Kannada News | Nayana Motamma Obscene Comments: Instagram Abuser Arrested in MLA Harassment

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ವಿರುದ್ಧ ಅಶ್ಲೀಲ ಕಾಮೆಂಟ್: ಆರೋಪಿ ಬಂಧನ ಚಿಕ್ಕಮಗಳೂರು, ಜನವರಿ 12: ಜಿಲ್ಲೆಯ ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರ ವಿರುದ್ಧ ಇನ್‌ಸ್ಟಾಗ್ರಾಂನಲ್ಲಿ ಅಶ್ಲೀಲ ಹಾಗೂ ಅವಮಾನಕಾರಿ ಕಾಮೆಂಟ್‌ಗಳನ್ನು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ರಾಮನಗರ ಮೂಲದ ಯಕ್ಷಿತ್ ರಾಜ್ ಎಂಬ ಯುವಕನನ್ನು ಮೂಡಿಗೆರೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಅಕ್ಟೋಬರ್​ನಲ್ಲೇ ದಾಖಲಾಗಿತ್ತು FIR ಶಾಸಕಿ ನಯನಾ ಮೋಟಮ್ಮ ಇನ್ಸ್ಟಾಗ್ರಾಮ್‌ನಲ್ಲಿ ಎರಡು ಅಧಿಕೃತ ಖಾತೆ ಹೊಂದಿದ್ದಾರೆ….

Read More

ಡಿಕೆಶಿಗೆ ಮಹತ್ವ ಹುದ್ದೆ ನೀಡಿದ ಹೈಕಮಾಂಡ್, ಇತ್ತ ಸಿದ್ದರಾಮ್ಯಯ ಕುರ್ಚಿ ಮತ್ತಷ್ಟು ಗಟ್ಟಿ – Kannada News | Congress Appoints DK Shivakumar As Observer For Assam Polls, No Leadership Change Till April In Karnataka

ಬೆಂಗಳೂರು, (ಜನವರಿ 08): ಸಂಕ್ರಾಂತಿ. ಸೂರ್ಯ ಪಥ ಬದಲಿಸುವ ದಿನ. ಆದ್ರೆ  ಕರ್ನಾಟಕ ಕಾಂಗ್ರೆಸ್ಸಿಗರು (Karnataka Congress), ನಾಯಕತ್ವ ಬದಲಾವಣೆಗೆ ಸಾಕ್ಷಿ ಆಗಲಿರುವ ಬೆಳವಣಿಗೆ ಅಂತ್ಲೇ ನಂಬಿದ್ರು. ಸಂಕ್ರಾಂತಿ ಬಳಿಕ ಮುಖ್ಯಮಂತ್ರಿ ಕುರ್ಚಿ ಗೊಂದಲಕ್ಕೆ ಹೈಕಮಾಂಡ್ ತೆರೆ ಎಳೆಯುತ್ತದೆ ಎಂದುಕೊಂಡಿದ್ರು. ಆದ್ರೆ ಲೆಕ್ಕಾಚಾರ ಯಾಕೋ ಬದಲಾದಂತೆ ಕಾಣ್ತಿದೆ. ದಿಲ್ಲಿ ದೊರೆಗಳು ಕುರ್ಚಿ ಚರ್ಚೆಯ ಕೇಂದ್ರ ಬಿಂದು ಡಿಕೆ ಶಿವಕುಮಾರ್​​​​​​ಗೆ  (DK Shivakumar)  ಅಸ್ಸಾಂ ಚುನಾವಣೆಯ ಜವಾಬ್ದಾರಿ ನೀಡಿದ್ದಾರೆ. ಹೌದು… ಡಿಸಿಎಂ ಡಿಕೆ ಶಿವಕುಮಾರ್‌ರನ್ನ ಅಸ್ಸಾಂ ಕಾಂಗ್ರೆಸ್​ನ ಹಿರಿಯ…

Read More

ಲಕ್ಕುಂಡಿ ನಿಧಿ ಪ್ರಕರಣಕ್ಕೆ ಟ್ವಿಸ್ಟ್​​: ರಿತ್ತಿ ಕುಟುಂಬದಿಂದ ಹೊಸ ಡಿಮ್ಯಾಂಡ್​​

ಗದಗ, ಮಾರ್ಚ್​ 12: ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮನೆಗಾಗಿ ಅಡಿಪಾಯ ತೆಗೆಯುವಾಗ ಸುಮಾರು 470 ಗ್ರಾಂ ಚಿನ್ನಾಭರಣಗಳು ಪತ್ತೆಯಾಗಿದ್ದವು. ಸಿಕ್ಕ ನಿಧಿಯನ್ನು ಪ್ರಜ್ವಲ್ ರಿತ್ತಿ ಕುಟುಂಬ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿತ್ತು. ಆ ಬಳಿಕ ಬಹಳ ಬೆಳವಣಿಗೆಗಳು ನಡೆದಿದ್ದವು. ಈ ನಡುವೆ ಪ್ರಕರಣಕ್ಕೆ ಹೊಸ ಟ್ವಿಸ್ಟ್​​ ಸಿಕ್ಕಿದೆ. ಅಂದು ಸಿಕ್ಕಿದ್ದ ಬಂಗಾರದ ಬೆಲೆ ಇಂದಿಗೆ ಸುಮಾರು 80 ಲಕ್ಷ ರೂಪಾಯಿಗಳಾಗಿದ್ದು, ಆ್ಯಂಟಿಕ್​​ ಮೌಲ್ಯ ಸುಮಾರು 8 ಕೋಟಿ ಎಂದು ತಜ್ಞರು ಹೇಳಿದ್ದಾರೆ. ಈ ಬೆನ್ನಲ್ಲೇ ಪ್ರಜ್ವಲ್ ರಿತ್ತಿ‌ ಕುಟುಂಬ…

Read More

ಗಂಡನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ – Kannada News | Shiggavi Dowry Murder: Family Alleges Harassment in Sunita Doddamani’s Suspicious Death

ಹಾವೇರಿ, ಜ.10: ಗಂಡನ ಮನೆಯಲ್ಲಿ ಅನುಮಾಸ್ಪದ ರೀತಿಯಲ್ಲಿ ಗೃಹಿಣಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದಲ್ಲಿ ನಡೆದಿದೆ. ಇದೀಗ ಮಗಳ ಸಾವಿನಿಂದ ತಾಯಿ ಗೋಳಾಡಿದ್ದಾರೆ. ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸುನೀತಾ ದೊಡ್ಡಮನಿ 35 ವರ್ಷದ ಗೃಹಿಣಿ ಎಂದು ಗುರುತಿಸಲಾಗಿದೆ. ಮದುವಯಾಗಿ ಕೇವಲ 9 ತಿಂಗಳ ಆಗಿತ್ತು. ಎರಡು ತಿಂಗಳ ಗರ್ಭಿಣಿಯಾಗಿದ್ದಳು ಎಂದು ಹೇಳಲಾಗಿದೆ. ವರದಕ್ಷಿಣೆ ತರುವಂತೆ ಪದೇ ಪದೇ ಗಂಡನ ಮನೆಯವರು ಕಿರುಕುಳ ನೀಡಿದರು. ಪತಿ ಗಿರೇಶ ದೊಡ್ಡಮನಿ ವರದಕ್ಷಿಣೆಗಾಗಿ…

Read More

ಫೈನಾನ್ಸ್ ಕಚೇರಿಗೆ ನುಗ್ಗಿ ಮಾಜಿ ಸಚಿವರ ಸಂಬಂಧಿಯ ಹತ್ಯೆ: ಬೆಚ್ಚಿಬಿದ್ದ ಕಲಬುರಗಿ

ಕಲಬುರಗಿ, (ಏಪ್ರಿಲ್ 03): ದುಷ್ಕರ್ಮಿಗಳು ಫೈನಾನ್ಸ್ ಕಚೇರಿಗೆ ನುಗ್ಗಿ ಕರ್ನಾಟಕದ ಮಾಜಿ ಸಚಿವರೊಬ್ಬರ ಸಂಬಂಧಿಯನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ (Kalaburagi) ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ ನಡೆದಿದೆ. ಅನೀಲ್ ರಾಠೋಡ್ (45)ಕೊಲೆಯಾದ ವ್ಯಕ್ತಿ. ಈ ಅನಿಲ್ ರಾಠೋಡ್, ಕಲಬುರಗಿಯ ಸಿದ್ದೇಶ್ವರ ಬಡಾವಣೆಯ ನಿವಾಸಿಯಾಗಿದ್ದು, ಪಿ ಆ್ಯಂಡ್​ ಟಿ ಕಾಲೋನಿಯ ವೆಂಕಟೇಶ್ವರ್​ ಕಾಂಪ್ಲೆಕ್ಸ್​ನಲ್ಲಿ ಫೈನಾನ್ಸ್​ ಇಟ್ಟುಕೊಂಡಿದ್ದ. ಮೇಲಾಗಿ ಮಾಜಿ ಸಚಿವ ರೇವು ನಾಯಕ್ ಬೆಳಮಗಿಯ ಸಂಬಂಧಿ. ಆದ್ರೆ, ನಿನ್ನೆ…

Read More

Video: ಹಿಂದೂ ಹುಡುಗಿಗೆ ಬುರ್ಖಾ ತೊಡಿಸಿದ ಮುಸ್ಲಿಂ ಸ್ನೇಹಿತೆಯರು – Kannada News | Uttar Pradesh: Was It Choice or Influence Student’s Dress Decision Draws Attention

ಲಕ್ನೋ, ಜನವರಿ 16: ಮುಸ್ಲಿಂ ಸ್ನೇಹಿತೆಯರು ಹಿಂದೂ ಹುಡುಗಿಗೆ ಬುರ್ಖಾ ತೊಡಿಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎನ್ನಲಾಗಿದೆ. ಕೋಚಿಂಗ್ ಕ್ಲಾಸ್​ನಿಂದ ಮನೆಗೆ ಹೊರಡುವಾಗ ಆಕೆಗೆ ಸ್ನೇಹಿತೆಯರು ಬುರ್ಖಾವನ್ನು ತಂದುಕೊಟ್ಟಿದ್ದು, ಆಕೆ ಧರಿಸಿರುವುದನ್ನು ಕಾಣಬಹುದು, ಆದರೆ ಅವರು ಬುರ್ಖಾ ಧರಿಸುವಂತೆ ಒತ್ತಡ ಹೇರಿದ್ದರೋ ಅಥವಾ ಆಕೆಯೇ ಇಷ್ಟ ಪಟ್ಟು ಧರಿಸಿದ್ದಾಳೋ ಎಂಬುದು ವಿಡಿಯೋದಲ್ಲಿ ಸ್ಪಷ್ಟವಾಗಿಲ್ಲ. ದಿ ತತ್ವ ಎನ್ನುವ ಎಕ್ಸ್​ ಅಕೌಂಟ್​ನಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ….

Read More