ಟಿ20 ವಿಶ್ವಕಪ್ ಫೈನಲ್: ಹರಿಯಲಿದೆ ಮನರಂಜನೆ ಮಹಾಪೂರ, ಯಾರ್ಯಾರು ಬರಲಿದ್ದಾರೆ?

ಟಿ20 ವಿಶ್ವಕಪ್ ಫೈನಲ್: ಹರಿಯಲಿದೆ ಮನರಂಜನೆ ಮಹಾಪೂರ, ಯಾರ್ಯಾರು ಬರಲಿದ್ದಾರೆ?

ಕಳೆದ ಕೆಲ ವಾರಗಳಿಂದ ನಡೆಯುತ್ತಿರುವ 2026 ಟಿ20 ವಿಶ್ವಕಪ್ ಇಂದು (ಮಾರ್ಚ್ 08) ಮುಕ್ತಾಯವಾಗಲಿದೆ. ಇಂದು ಅಹಮದಾಬಾದ್​​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟಿ20 2026 ವಿಶ್ವಕಪ್ ಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದೆ. ಈ ಪಂದ್ಯಕ್ಕಾಗಿ ದೇಶದಾದ್ಯಂತ ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಎದುರು ನೋಡುತ್ತಿದ್ದಾರೆ. ಪಂದ್ಯ ಜಿದ್ದಾಜಿದ್ದಿನದ್ದಾಗಿರಲಿದೆ ಎಂಬುದರಲ್ಲಿ ಅನುಮಾನವಿಲ್ಲ, ಆದರೆ ಪಂದ್ಯ ಆರಂಭಕ್ಕೂ ಮುಂಚೆ ಭರಪೂರ ಮನೊರಂಜನೆ ಪ್ರೇಕ್ಷಕರಿಗೆ ದೊರಕಲಿದೆ. ಕೆಲ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಗಾಯಕರುಗಳು ಫೈನಲ್ ಪಂದ್ಯದ ಮುಂಚೆ ಮನರಂಜನಾ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ಇಂದಿನ ಸಮಾರೋಪ ಸಮಾರಂಭದಲ್ಲಿ ಪ್ರಮುಖ ಆಕರ್ಷಣೆ ಆಗಿರುವುದು ಅಂತರಾಷ್ಟ್ರೀಯ ಪಾಪ್ ಲೋಕದ ದಿಗ್ಗಜ, ಎರಡು ಬಾರಿ ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕಿ ಮಾರ್ಟಿನ್. ಇವರ ಜನಪ್ರಿಯ ಹಾಡುಗಳಾದ ‘ಲೋಕಾ’ ಮತ್ತು ಫುಟ್‌ಬಾಲ್ ಹಾಡು ‘ದಿ ಕಪ್ ಆಫ್ ಲೈಫ್’ ಅಹಮದಾಬಾದ್ ಮೈದಾನದಲ್ಲಿ ಅನುರಣಿಸಲಿವೆ. ಮಾತ್ರವಲ್ಲದೆ ಇನ್ನೂ ಹಲವು ಹಾಡುಗಳನ್ನು ಈ ವಿಶ್ವ ಜನಪ್ರಿಯ ಗಾಯಕ ರಿಕ್ಕಿ ಪಾರ್ಟಿನ್ ಹಾಡಲಿದ್ದಾರೆ.

ಭಾರತದ ಖ್ಯಾತ ಗಾಯಕಿಯರಲ್ಲಿ ಒಬ್ಬರಾಗಿರುವ ಪಾಲ್ಗುಣಿ ಪಾಠಕ್ ಅವರು ಸಹ ಇಂದಿನ ಪಂದ್ಯಕ್ಕೂ ಮುಂಚೆ ಹಾಡುಗಳನ್ನು ಹಾಡಲಿದ್ದಾರೆ. ಫಾಲ್ಗುಣಿ ಪಾಠಕ್ ಸ್ಥಳೀಯ ಗಾಯಕಿ ಸಹ ಆಗಿದ್ದು, ಹಿಂದಿ ಹಾಡುಗಳ ಜೊತೆಗೆ ಗುಜರಾತಿ ಸೊಗಡಿನ ಹಾಡುಗಳನ್ನು ಸಹ ಹಾಡಲಿದ್ದಾರೆ. ‘ಮೈನೆ ಪಾಯಲ್ ಹೈ ಛಂಕಾಯಿ’ ಜೊತೆಗೆ ಹಲವಾರು ಜನಪ್ರಿಯ ಹಾಡುಗಳನ್ನು ಫಾಲ್ಗುಣಿ ಹಾಡಲಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಬಳಿ ಮಾತನಾಡಿರುವ ಫಾಲ್ಗುಣಿ ಪಾಠಕ್, ‘ನಾನು ಈ ಪ್ರದರ್ಶನಕ್ಕಾಗಿ ಉತ್ಸುಕಳಾಗಿದ್ದೇನೆ. ಮೊದಲ ಬಾರಿಗೆ ಇಷ್ಟು ದೊಡ್ಡ ಸಂಖ್ಯೆಯ ಜನರೆದುರು ನಾನು ಪ್ರದರ್ಶನ ನೀಡಲಿದ್ದೇನೆ’ ಎಂದಿದ್ದಾರೆ.

ಇದನ್ನೂ ಓದಿ:IND vs NZ: ಟಿ20 ವಿಶ್ವಕಪ್ ಫೈನಲ್​ಗೆ ಮೋದಿ ಮೈದಾನದಲ್ಲಿ ಏನೆಲ್ಲ ಸಿದ್ಧತೆಗಳನ್ನು ಮಾಡಲಾಗಿದೆ ಗೊತ್ತಾ?

‘ಪ್ರಿನ್ಸ್ ಆಫ್ ಭಾಂಗ್ಡಾ’ ಎಂದೇ ಹೆಸರಾದ ಸುಖ್ಬೀರ್ ಸಿಂಗ್ ತಮ್ಮ ಹಿಟ್ ಹಾಡುಗಳಾದ ‘ಇಷ್ಕ್ ತೇರಾ ತಡ್ಪಾವೆ’ ಸೇರಿದಂತೆ ಇನ್ನೂ ಕೆಲವು ಬಲು ಜನಪ್ರಿಯ ಹಾಡುಗಳನ್ನು ಹಾಡಲಿದ್ದಾರೆ. ಇವರೂ ಸಹ ಗುಜರಾತಿ ಜನರ ಮೆಚ್ಚಿನ ಗಾಯಕರುಗಳಲ್ಲಿ ಒಬ್ಬರಾಗಿದ್ದಾರೆ. ಸಂಜೆ 5:30ಕ್ಕೆ ಲೈವ್ ಪ್ರದರ್ಶನ ಪ್ರಾರಂಭ ಆಗಲಿದೆ. ರಾತ್ರಿ 7 ಗಂಟೆಗೆ ಪಂದ್ಯ ಪ್ರಾರಂಭ ಆಗಲಿದೆ.

ಟೀಮ್ ಇಂಡಿಯಾವನ್ನು ಬೆಂಬಲಿಸಲು ಬಾಲಿವುಡ್ ತಾರೆಯರಾದ ರಣಬೀರ್ ಕಪೂರ್, ಆಲಿಯಾ ಭಟ್, ಅನಿಲ್ ಕಪೂರ್ ಮತ್ತು ವರುಣ್ ಧವನ್ ಅವರುಗಳು ಸ್ಟೇಡಿಯಂನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸೆಮಿಫೈನಲ್‌ನಲ್ಲೂ ಮಿಂಚಿದ್ದ ಈ ತಾರೆಯರು ಫೈನಲ್ ಪಂದ್ಯಕ್ಕೂ ಸಾಕ್ಷಿಯಾಗಲಿದ್ದಾರೆ. ಇವರ ಜೊತೆಗೆ ಮಾಜಿ ನಾಯಕ ಎಂಎಸ್ ಧೋನಿ ಕೂಡ ಅಹಮದಾಬಾದ್‌ಗೆ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ, ಪ್ರಧಾನಿ ನರೇಂದ್ರ ಮೋದಿ ಸಹ ಆಗಮಿಸುವ ನಿರೀಕ್ಷೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಊಟ ಮಾಡುವಾಗ ಅಥವಾ ಊಟವಾದ ಎಷ್ಟು ಹೊತ್ತಿನ ನಂತರ ನೀರು ಕುಡಿಯಬೇಕು? ಆಯುರ್ವೇದ ಏನು ಹೇಳುತ್ತದೆ?

ಆಹಾರ ಮತ್ತು ನೀರು (Water) ಎರಡೂ ಕೂಡ ದೇಹದ ಆರೋಗ್ಯಕ್ಕೆ ಅತ್ಯಂತ ಮುಖ್ಯ. ಆದರೆ ಅವುಗಳನ್ನು ಯಾವ ಸಮಯದಲ್ಲಿ, ಹೇಗೆ ಸೇವನೆ ಮಾಡಬೇಕು ಎಂದು ತಿಳಿದಿರಬೇಕಾಗುತ್ತದೆ. ಇಲ್ಲವಾದಲ್ಲಿ ಈ ರೀತಿಯ ಅಭ್ಯಾಸ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಆಯುರ್ವೇದದ ಪ್ರಕಾರ, ಆಹಾರ ಸೇವಿಸುವ ಸಮಯ ಮತ್ತು ನೀರು ಕುಡಿಯುವ ಸಮಯವು ಜೀರ್ಣಕ್ರಿಯೆಗೆ (Digestion) ಬಹಳ ಮಹತ್ವದ್ದಾಗಿದ್ದು ಇದು ಸರಿಯಾಗಿ ಆಗದಿದ್ದಲ್ಲಿ ಹೊಟ್ಟೆ ಭಾರವಾಗುವುದು, ಅನಿಲ (ಗ್ಯಾಸ್) ಉಂಟಾಗುವುದು, ಅಜೀರ್ಣ, ಹೊಟ್ಟೆ ಉಬ್ಬುವುದು ಅಥವಾ ಆಸಿಡಿಟಿ ಮುಂತಾದ ಸಮಸ್ಯೆಗಳು ಕಾಣಿಸಬಹುದು. ಹಾಗಾದರೆ ಊಟ ಮಾಡುವಾಗ ಅಥವಾ ಊಟವಾದ ಎಷ್ಟು ಹೊತ್ತಿನ ನಂತರ ನೀರು ಕುಡಿಯಬೇಕು? ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಊಟದ ಜೊತೆ ಅಥವಾ ಎಷ್ಟು ಹೊತ್ತಿನ ನಂತರ ನೀರು ಕುಡಿಯಬೇಕು?

ಡಾ. ಆರ್.ಪಿ. ಪರಾಶರ್ ಎಂಬುವರು ಹೇಳುವ ಪ್ರಕಾರ, ಆಯುರ್ವೇದದಲ್ಲಿ ಊಟದ ಸಮಯದಲ್ಲಿ ಹೆಚ್ಚು ಪ್ರಮಾಣದಲ್ಲಿ ನೀರು ಕುಡಿಯುವುದನ್ನು ತಪ್ಪಿಸಲು ಸಲಹೆ ನೀಡಲಾಗಿದೆ. ಅಗತ್ಯವಿದ್ದರೆ ಊಟದ ಸಮಯದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಬೆಚ್ಚಗಿನ ನೀರನ್ನು ಮಾತ್ರ ಕುಡಿಯಬಹುದು. ಸಾಮಾನ್ಯವಾಗಿ ಊಟ ಮಾಡಿದ ಸುಮಾರು 30 ನಿಮಿಷಗಳ ನಂತರ ನೀರು ಕುಡಿಯುವುದು ಉತ್ತಮ ಎಂದು ಪರಿಗಣಿಸಲಾಗಿದೆ. ಇದರಿಂದ ಜೀರ್ಣಕ್ರಿಯೆ ಸರಿಯಾಗಿ ನಡೆಯಲು ಸಹಾಯವಾಗುತ್ತದೆ. ಅದೇ ರೀತಿ, ಊಟಕ್ಕೆ ಸುಮಾರು 30 ನಿಮಿಷಗಳ ಮೊದಲು ನೀರು ಕುಡಿಯುವುದೂ ಕೂಡ ಜೀರ್ಣಕ್ರಿಯೆಗೆ ಒಳ್ಳೆಯದು ಎಂದು ಆಯುರ್ವೇದ ಹೇಳುತ್ತದೆ.

ಇದನ್ನೂ ಓದಿ: ರಾತ್ರಿ ಈ ಆಹಾರಗಳ ಸೇವನೆ ಮಾಡುವ ಅಭ್ಯಾಸವಿದ್ಯಾ? ಹಾಗಿದ್ರೆ ನೀವು ವಿಷ ಸೇವಿಸುತ್ತಿದ್ದೀರಿ ಎಂದರ್ಥ!

ಊಟ ಮಾಡಿದ ತಕ್ಷಣ ನೀರು ಕುಡಿಯುವುದರಿಂದಾಗುವ ಸಮಸ್ಯೆಗಳು:

ಸಾಮಾನ್ಯವಾಗಿ ಊಟ ಮಾಡಿದ ತಕ್ಷಣ ಹೆಚ್ಚಿನ ಪ್ರಮಾಣದಲ್ಲಿ ನೀರು ಕುಡಿಯುವುದರಿಂದ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀಳಬಹುದು. ಹೊಟ್ಟೆಯಲ್ಲಿ ಇರುವ ಜೀರ್ಣರಸಗಳು ನೀರಿನಿಂದ ತೆಳ್ಳಗಾಗುವ ಸಾಧ್ಯತೆ ಇದೆ. ಇದರಿಂದ ಆಹಾರ ಸರಿಯಾಗಿ ಜೀರ್ಣವಾಗಲು ಅಡಚಣೆ ಉಂಟಾಗಬಹುದು. ಇದರ ಪರಿಣಾಮವಾಗಿ ಕೆಲವರಿಗೆ ಹೊಟ್ಟೆ ಭಾರವಾಗುವುದು, ಗ್ಯಾಸ್, ಅಜೀರ್ಣ ಅಥವಾ ಆಸಿಡಿಟಿ ಸಮಸ್ಯೆಗಳು ಕಾಣಿಸಬಹುದು. ಕೆಲವರಿಗೆ ಊಟದ ನಂತರ ಸುಸ್ತು ಅಥವಾ ದಣಿದಂತಹ ಅನುಭವವಾಗಬಹುದು. ಆದರೆ ಪ್ರತಿಯೊಬ್ಬರ ಜೀರ್ಣಶಕ್ತಿ ವಿಭಿನ್ನವಾಗಿರುವುದರಿಂದ, ದೇಹದ ಸೂಚನೆಗಳನ್ನು ಗಮನಿಸಿ ಆಹಾರ ಮತ್ತು ನೀರಿನ ಅಭ್ಯಾಸಗಳನ್ನು ಸಮತೋಲನದಲ್ಲಿ ಇಡುವುದು ಅಗತ್ಯವಾಗಿದೆ.

ಜೀರ್ಣಕ್ರಿಯೆಗೆ ಸರಿಯಾಗಿ ಆಗಲು ಏನು ಮಾಡಬೇಕು?

ಉತ್ತಮ ಜೀರ್ಣಕ್ರಿಯೆಗೆ ನೀರು ಕುಡಿಯುವ ಸಮಯ ಮಾತ್ರವಲ್ಲದೆ ಸಂಪೂರ್ಣ ಜೀವನಶೈಲಿಯೂ ಮಹತ್ವದ್ದಾಗಿದೆ. ಆಹಾರವನ್ನು ನಿಧಾನವಾಗಿ ಮತ್ತು ಚೆನ್ನಾಗಿ ಜಗಿದು ತಿನ್ನುವುದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಇದರ ಜೊತೆಗೆ ಸಮತೋಲನಯುತ ಆಹಾರ, ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವುದು, ಸರಿಯಾದ ದಿನಚರಿ, ಪ್ರತಿದಿನ ಸ್ವಲ್ಪ ವ್ಯಾಯಾಮ ಮತ್ತು ಸರಿಯಾಗಿ ನಿದ್ರೆ ಮಾಡುವುದರಿಂದಲೂ ಕೂಡ ದೇಹದ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತವೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಕೋಟಿಗೊಬ್ಬ’ ಸಿನಿಮಾಕ್ಕೆ 25 ವರ್ಷ: ಸಂಭ್ರಮದಲ್ಲಿ ಭಾಗಿಯಾದ ಸೆಲೆಬ್ರಿಟಿಗಳು

ವಿಷ್ಣುವರ್ಧನ್ (Vishnuvardhan) ನಟನೆಯ ಸೂಪರ್ ಹಿಟ್ ಸಿನಿಮಾ ‘ಕೋಟಿಗೊಬ್ಬ’ ಬಿಡುಗಡೆ ಆಗಿ 25 ವರ್ಷಗಳಾಗಿವೆ. ಸಿನಿಮಾ, ವಿಷ್ಣುವರ್ಧನ್ ವೃತ್ತಿ ಜೀವನದಲ್ಲಿ ಮಾತ್ರವೇ ಅಲ್ಲದೆ ಕನ್ನಡ ಚಿತ್ರರಂಗದ ಇತಿಹಾಸದಲ್ಲಿಯೂ ಪ್ರಮುಖವಾದ ಸಿನಿಮಾ ಆಗಿದೆ. ಸಿನಿಮಾ ಬಿಡುಗಡೆ ಆಗಿ 25 ವರ್ಷಗಳಾದ ಕಾರಣ ಚಿತ್ರತಂಡ ವಿಶೇಷ ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು. ಸಿನಿಮಾನಲ್ಲಿ ನಟಿಸಿದ ಕಲಾವಿದರು, ತಂತ್ರಜ್ಞರ ಜೊತೆಗೆ ಉಪೇಂದ್ರ, ಗಣೇಶ್ ಸೇರಿದಂತೆ ಇನ್ನೂ ಹಲವಾರು ಮಂದಿ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ವಿಷ್ಣುವರ್ಧನ್ ಅವರ ಭಾವಚಿತ್ರಕ್ಕೆ ಹೂಗಳು ಸಮರ್ಪಿಸುವ ಮೂಲಕ ಕಾರ್ಯಕ್ರಮದ ಆರಂಭ ಮಾಡಲಾಯ್ತು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

‘ಸಿಎಂ, ಸಿಎಂ’ ಎಂದು ಕೂಗಿದ ಅಭಿಮಾನಿಗಳು, ಜೂ ಎನ್​​ಟಿಆರ್ ಪ್ರತಿಕ್ರಿಯೆ ಏನು?

ಜೂ ಎನ್​​ಟಿಆರ್ (Jr NTR), ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ನಟ. ‘ಆರ್​​ಆರ್​​ಆರ್’ ಸಿನಿಮಾದ ಬಳಿಕವಂತೂ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಜೂ ಎನ್​​ಟಿಆರ್ ಅವರ ನಂದಮೂರಿ ಕುಟುಂಬ ಹಲವು ದಶಕಗಳಿಂದಲೂ ತೆಲುಗು ಚಿತ್ರರಂಗ ಮತ್ತು ರಾಜಕೀಯದ ಮೇಲೆ ಪ್ರಭಾವ ಬೀರುತ್ತಲೇ ಬಂದಿದೆ. ಸ್ವತಃ ಜೂ ಎನ್​​ಟಿಆರ್ ಸಹ ಕೆಲವು ವರ್ಷಗಳ ಹಿಂದಿನ ವರೆಗೂ ಸಹ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ತಮ್ಮ ಕುಟುಂಬದ ಪಕ್ಷವಾದ ಟಿಡಿಪಿ (ತೆಲುಗು ದೇಶಂ ಪಾರ್ಟಿ)ಯ ತಾರಾ ಪ್ರಚಾರಕ ಆಗಿದ್ದರು. ಆದರೆ ಇತ್ತೀಚೆಗೆ ಅವರನ್ನು ಕುಟುಂಬದಿಂದ ತುಸು ದೂರ ಇರಿಸಲಾಗಿದೆ. ಟಿಡಿಪಿಯಿಂದಲೂ ಜೂ ಎನ್​​ಟಿಆರ್ ದೂರ ಸರಿದಿದ್ದಾರೆ. ಆದರೆ ಅಭಿಮಾನಿಗಳು ಮಾತ್ರ ತಮ್ಮ ನಾಯಕ ಸಿಎಂ ಆಗಲಿ ಮತ್ತು ಆಗಿಯೇ ಆಗುತ್ತಾರೆ ಎಂಬ ಭರವಸೆಯಲ್ಲಿದ್ದು, ಅದನ್ನು ಅಭಿವ್ಯಕ್ತಿಪಡಿಸಿದ್ದಾರೆ.

ನಟ ಜೂ ಎನ್​​ಟಿಆರ್ ಅವರು ಇಂದು (ಮಾರ್ಚ್ 08) ಬೆಂಗಳೂರಿಗೆ ಬಂದಿದ್ದರು. ಇಲ್ಲಿನ ಕಿಮ್ಸ್ ಆಸ್ಪತ್ರೆಯ ಹೊಸ ಘಟಕದ ಉದ್ಘಾಟನೆಗೆಂದು ಜೂ ಎನ್​​ಟಿಆರ್ ಅವರು ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಜೂ ಎನ್​​ಟಿಆರ್ ಅವರನ್ನು ನೋಡಲು ನೂರಾರು ಮಂದಿ ಅಭಿಮಾನಿಗಳು ಧಾವಿಸಿದ್ದರು. ಬಳಿಕ ಕಿಮ್ಸ್​​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೂ ಎನ್​​ಟಿಆರ್ ಅವರನ್ನು ‘25 ವರ್ಷಗಳ ಬಳಿಕ ನಿಮ್ಮನ್ನು ನೀವು ಎಲ್ಲಿ ನೋಡಲು ಬಯಸುತ್ತೀರಿ’ ಎಂದು ಕೇಳಿದರು. ಜೂ ಎನ್​​ಟಿಆರ್ ಸಹಜವಾಗಿಯೇ ತಮ್ಮ ಹಾಸ್ಯಮಯ ಶೈಲಿಯಲ್ಲಿ ಆಗ ನನಗೆ 67 ವರ್ಷ ವಯಸ್ಸಾಗಿರುತ್ತದೆ ಎಂದಷ್ಟೆ ಹೇಳಿದರು.

ಆದರೆ ಅಭಿಮಾನಿಗಳು ಸುಮ್ಮಿರಲಿಲ್ಲ, ‘ಸಿಎಂ ಸಿಎಂ’ ಎಂದು ಕೂಗಲು ಆರಂಭಿಸಿದರು. ಜೂ ಎನ್​​ಟಿಆರ್ ಅವರು ಅಭಿಮಾನಿಗಳ ಕೂಗಾಟ ಗಮನಿಸಿದರಾದರೂ ಅವರಿಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಅಭಿಮಾನಿಗಳ ಕೂಗು ಕೇಳಿದರೂ ಸಹ ಸುಮ್ಮನೇ ಇದ್ದರು ಜೂ ಎನ್​​ಟಿಆರ್. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ಇದನ್ನೂ ಓದಿ:ಜೂ ಎನ್​​ಟಿಆರ್​ ಹಳೆ ಸಿನಿಮಾ ಸೀಕ್ವೆಲ್​​ಗೆ ಕತೆ ರೆಡಿ, ಆದರೆ ನಟಿಸುತ್ತಾರಾ ನಟ?

ಟಿಡಿಪಿ ಪಕ್ಷದ ಸ್ಟಾರ್ ಪ್ರಚಾರಕ ಆಗಿದ್ದರು ಜೂ ಎನ್​​ಟಿಆರ್. ಆದರೆ ಇತ್ತೀಚೆಗೆ ಚಂದ್ರಬಾಬು ನಾಯ್ಡು ಮತ್ತು ಜೂ ಎನ್​​ಟಿಆರ್ ಅವರ ಚಿಕ್ಕಪ್ಪ ಆಗಿರುವ ನಂದಮೂರಿ ಬಾಲಕೃಷ್ಣ ಅವರು ಜೂ ಎನ್​​ಟಿಆರ್ ಅನ್ನು ಪಕ್ಷದಿಂದ ಮತ್ತು ನಂದಮೂರಿ ಕುಟುಂಬದಿಂದ ದೂರ ಇರಿಸಿದ್ದಾರೆ. ಚಂದ್ರಬಾಬು ನಾಯ್ಡುಗೆ ಪುತ್ರ, ಬಾಲಕೃಷ್ಣಗೆ ಅಳಿಯ (ಮಗಳ ಗಂಡ) ಆಗಿರುವ ನಾರಾ ಲೋಕೇಶ್ ಅನ್ನು ರಾಜಕೀಯದಲ್ಲಿ ಬೆಳೆಸಬೇಕೆಂದು ಜೂ ಎನ್​​ಟಿಆರ್ ಅವರನ್ನು ಪಕ್ಕಕ್ಕೆ ಸರಿಸಲಾಗಿದೆ. ಜೂ ಎನ್​​ಟಿಆರ್, ಪಕ್ಷಕ್ಕೆ ಬಂದರೆ ಅವರ ಜನಪ್ರಿಯತೆ ಮುಂದೆ ನಾರಾ ಲೋಕೇಶ್ ಮಂಕಾಗುವುದು ಖಾತ್ರಿ. ಹಾಗಾಗಿ ಜೂ ಎನ್​ಟಿಆರ್ ಮಾತ್ರವಲ್ಲ ಅವರ ಸಹೋದರ ಕಲ್ಯಾಣ್ ರಾಮ್ ಅವರನ್ನೂ ಸಹ ಪಕ್ಷದಿಂದ ದೂರ ಇರಿಸಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಹೊಲಸು ರಾಜಕೀಯ, ದುರಹಂಕಾರ ತೃಣಮೂಲ ಕಾಂಗ್ರೆಸ್​ ಅನ್ನು ನಾಶಪಡಿಸುತ್ತೆ: ಪ್ರಧಾನಿ ಮೋದಿ

ನವದೆಹಲಿ, ಮಾರ್ಚ್​ 08: ಹೊಲಸು ರಾಜಕೀಯ, ದುರಹಂಕಾರ ತೃಣಮೂಲ ಕಾಂಗ್ರೆಸ್​ ಅನ್ನು ನಾಶಪಡಿಸುತ್ತೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಕಿಡಿಕಾರಿದ್ದಾರೆ. ಡಾರ್ಜಿಲಿಂಗ್​ ಅಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗಾದ ಅವಮಾನದ ಬಗ್ಗೆ ಅವರು ಮಾತನಾಡಿದ್ದಾರೆ.
ದ್ರೌಪದಿ ಮುರ್ಮು ಭಾಗವಹಿಸಿದ್ದ 9 ನೇ ಅಂತಾರಾಷ್ಟ್ರೀಯ ಸಂತಾಲ್ ಸಮ್ಮೇಳನದಲ್ಲಿ ನಡೆದ ದುರಾಡಳಿತವನ್ನು ಉಲ್ಲೇಖಿಸಿದ ಮೋದಿ, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಅನ್ನು ದುರಹಂಕಾರಿ ಎಂದು ಕರೆದರು.

ಪಕ್ಷದ ಅಹಂಕಾರ ಮತ್ತು ಕೊಳಕು ರಾಜಕೀಯವನ್ನು ಬಂಗಾಳದ ಜನರು ಶೀಘ್ರದಲ್ಲೇ ಛಿದ್ರಗೊಳಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು. ನಮ್ಮ ದೇಶದಲ್ಲಿ ಒಬ್ಬ ವ್ಯಕ್ತಿ ಎಷ್ಟೇ ಶಕ್ತಿಶಾಲಿಯಾಗಿದ್ದರೂ, ಅವನು ಅಂತಿಮವಾಗಿ ಅಹಂಕಾರದಿಂದ ನಾಶವಾಗುತ್ತಾನೆ ಎಂದು ಹೇಳಲಾಗುತ್ತದೆ. ಇಂದು, ದ್ರೌಪದಿ ಮುರ್ಮು ಅವರ ಘನತೆಗೆ ಅವಮಾನ ಮಾಡಿದ ಟಿಎಂಸಿಯ ಕೊಳಕು ರಾಜಕೀಯ ಮತ್ತು ಅಧಿಕಾರದ ದುರಹಂಕಾರವು ಶೀಘ್ರದಲ್ಲೇ ಛಿದ್ರವಾಗಲಿದೆ ಎಂದರು.

ಪಶ್ಚಿಮ ಬಂಗಾಳದ ಪ್ರಬುದ್ಧ ಜನರು ಒಬ್ಬ ಮಹಿಳೆ, ಬುಡಕಟ್ಟು ಜನಾಂಗದವರು, ದೇಶದ ರಾಷ್ಟ್ರಪತಿಯನ್ನು ಅವಮಾನಿಸಿದ್ದಕ್ಕಾಗಿ ಟಿಎಂಸಿಯನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದರು. ದೆಹಲಿ ಮೆಟ್ರೋ ಉದ್ಘಾಟನಾ ಸಮಾರಂಭದಲ್ಲಿ ಭಾಷಣ ಮಾಡುವಾಗ ಇದನ್ನು ಉಲ್ಲೇಖಿಸಿದ್ದಾರೆ.

ಮತ್ತಷ್ಟು ಓದಿ: ದೆಹಲಿಯ ಎರಡು ಹೊಸ ಮೆಟ್ರೋ ಕಾರಿಡಾರ್​ಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

ಸಮಾವೇಶ ನಡೆದ ಗೋಸೈನ್‌ಪುರದಲ್ಲಿ ಹೆಚ್ಚಿನ ಕುರ್ಚಿಗಳು ಖಾಲಿ ಇದ್ದವು. ಇಲ್ಲಿ ಅಂತಾರಾಷ್ಟ್ರೀಯ ಸಂತಾಲ್ ಸಮಾವೇಶ ನಡೆಯುತ್ತಿದೆ ಎಂದು ಯಾವ ಕಡೆಯಿಂದಲೂ ಅನಿಸುತ್ತಿಲ್ಲ. ಖಾಲಿ ಇರುವ ಪ್ರೇಕ್ಷಕರನ್ನು ನೋಡಿದರೆ, ಸಂತಾಲ್ ಸಮುದಾಯಕ್ಕೆ ಯಾವುದೇ ಸರ್ಕಾರಿ ಸವಲತ್ತುಗಳು ಸಿಗುತ್ತವೆಯೇ ಎಂಬ ಬಗ್ಗೆ ನನಗೆ ಅನುಮಾನವಿದೆ ಎಂದು ರಾಷ್ಟ್ರಪತಿ ಆಕ್ರೋಶ ವ್ಯಕ್ತಪಡಿಸಿದ್ದರು.

ನಾನು ಕೂಡ ಬಂಗಾಳದ ಮಹಿಳೆ, ಮಮತಾ ನೀವು ನನ್ನ ಸಹೋದರಿ ಇದ್ದಂತೆ, ನಾನು ಕೂಡ ಬಂಗಾಳದ ಮಗಳು, ಇಲ್ಲಿಗೆ ಬರಲು ನನಗೇಕೆ ಅವಕಾಶ ನೀಡುತ್ತಿಲ್ಲ ಎಂದು ಪ್ರಶ್ನಿಸುವ ಮೂಲಕ ಮಮತಾ ಸರ್ಕಾರಕ್ಕೆ ಚುರುಕು ಮುಟ್ಟಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಅನುಮತಿ ನೀಡುವಲ್ಲಿನ ವಿಳಂಬ, ಸ್ಥಳ ಬದಲಾವಣೆ ಮತ್ತು ಪ್ರೋಟೋಕಾಲ್ ಪಾಲನೆಯಲ್ಲಿನ ಲೋಪಗಳ ಬಗ್ಗೆ ರಾಷ್ಟ್ರಪತಿಗಳು ಅಸಮಾಧಾನ ವ್ಯಕ್ತಪಡಿಸಿದ್ದರು. ಮುರ್ಮು ಭಾಷಣ ಮಾಡುವಾಗ ಹಾಜರಿದ್ದ ಸ್ಥಳೀಯ ಬಿಜೆಪಿ ಸಂಸದ ರಾಜು ಬಿಸ್ತಾ, ರಾಜ್ಯ ಸರ್ಕಾರ ಕಾರ್ಯಕ್ರಮಕ್ಕೆ ಸರಿಯಾದ ವ್ಯವಸ್ಥೆ ಮಾಡಿಲ್ಲ ಎಂದು ಆರೋಪಿಸಿದ್ದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

 

 

Source link

ಕೆರೆಗೆ ಕಾರು ಬಿದ್ದು ರೈತ ಸಂಘದ ಜಿಲ್ಲಾಧ್ಯಕ್ಷ ಸಾವು: ತಡೆಗೋಡೆ ಇಲ್ಲದಿರುವುದೇ ಅಪಘಾತಕ್ಕೆ ಕಾರಣವಾಯ್ತಾ?

ಕೋಲಾರ, ಮಾರ್ಚ್​ 08: ಅದು ರಾಜ್ಯ ಹೆದ್ದಾರಿ ಜಿಲ್ಲಾ ಕೇಂದ್ರದಿಂದ ಪಕ್ಕದ ಆಂಧ್ರಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ. ಆ ರಸ್ತೆಯಲ್ಲಿ ಬರುವ ಅದೊಂದು ದೊಡ್ಡ ಕೆರೆಯ ಎರಡು ಬದಿಯಲ್ಲಿ ತಡೆಗೋಡೆ ಇಲ್ಲದ ಪರಿಣಾಮ ಭೀಕರ ಅವಘಡವೊಂದು (car accident) ನಡೆದಿದ್ದು, ಕೆರೆಗೆ ಕಾರು ಬಿದ್ದು ರೈತ ಸಂಘದ ಜಿಲ್ಲಾಧ್ಯಕ್ಷ ವೆಂಕಟೇಶ್​ ಸಾವನ್ನಪ್ಪಿದ್ದಾರೆ.

ಕಳೆದ ರಾತ್ರಿ 1.30 ಸುಮಾರಿನಲ್ಲಿ ಕೋಲಾರ ತಾಲ್ಲೂಕಿನ ತೊರಾಂಡಹಳ್ಳಿ ಗ್ರಾಮದ ಕಡೆಗೆ ಹೋಗುತ್ತಿದ್ದ ವೇಳೆ ಕಾರು ಕೆರೆಗೆ ಬಿದ್ದ ಪರಿಣಾಮ ಕಾರ್​ ನಲ್ಲಿದ್ದ ತೊರಾಂಡಹಳ್ಳಿ ಗ್ರಾಮದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಟಿ.ಎಂ.ವೆಂಕಟೇಶ್​​ ಮೃತಪಟ್ಟಿದ್ದಾರೆ.

ನಡೆದಿದ್ದೇನು?

ಅಷ್ಟಕ್ಕೂ ಆಗಿದ್ದೇನು ಅಂತ ನೋಡುವುದಾದರೆ, ನಾಳೆಯಿಂದ ಕೋಲಾರ ನಗರದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಸಿಪಿಎಂ ಪಕ್ಷ ರಾಜ್ಯ ಸಮಾವೇಶ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ ರಾತ್ರಿ ಒಂದು ಗಂಟೆವರೆಗೂ ಜಿಲ್ಲಾಧ್ಯಕ್ಷ ಕಾಮ್ರೆಡ್ ವೆಂಕಟೇಶ್ ಹಾಗೂ ಹಲವು ಕಾರ್ಯಕರ್ತರು ನಗರದಲ್ಲಿ ಬ್ಯಾನರ್, ಬಂಟಿಂಗ್ಸ್​​ಗಳನ್ನು ಕಟ್ಟಿ ನಂತರ ವೆಂಕಟೇಶ್,​ ತಮ್ಮ ಇಂಡಿಕಾ ಕಾರಿನಲ್ಲಿ ತಮ್ಮೂರು ತೊರಾಂಡಳ್ಳಿ ಕಡೆಗೆ ಹೊರಟಿದ್ದಾರೆ. ಈ ವೇಳೆ ಮುದುವಾಡಿ ಗ್ರಾಮದ ಬಳಿ ಬರುತ್ತಿರುವಾಗ ತಿರುವಿನಲ್ಲಿ ಕಾರಿಗೆ ಯಾವುದಾದರೂ ವಾಹನ ಡಿಕ್ಕಿ ಹೊಡೆಯಿತೋ ಅಥವಾ ಆಯತಪ್ಪಿತ್ತೋ ಗೊತ್ತಿಲ್ಲ ವೆಂಕಟೇಶ್ ಅವರು ಚಲಾಯಿಸುತ್ತಿದ್ದ ಕಾರು ಕೆರೆಗೆ ಬಿದ್ದಿದೆ.

ಇದನ್ನೂ ಓದಿ: ದ್ವಿಚಕ್ರ ವಾಹನಕ್ಕೆ ಗುದ್ದಿ ಎಳೆದೊಯ್ದ ಕಾರು: ಚಾಲಕ ನಾಪತ್ತೆ; ಮಹಿಳೆ ಸ್ಥಿತಿ ಗಂಭೀರ

ವೆಂಕಟೇಶ್ ಕಾರಿನಿಂದ ಹೊರಬರಲು ಪ್ರಯತ್ನ ಮಾಡಿದ್ದಾರೆ, ಆದರೂ ಪ್ರಯೋಜನವಾಗಿಲ್ಲ. ಹೀಗಾಗಿ ವೆಂಕಟೇಶ್ ಕಾರಿನಲ್ಲೇ ಮೃತಪಟ್ಟಿದ್ದಾರೆ. ಇನ್ನು ಕಾರು ಅಪಘಾತವಾಗಿ ಕೆರೆಗೆ ಬಿದ್ದಿರುವ ವಿಷಯ ಬೆಳಿಗ್ಗೆ 9 ಗಂಟೆಯವರೆಗೂ ಯಾರಿಗೂ ತಿಳಿದಿಲ್ಲ. ಈ ವೇಳೆ ವೆಂಕಟೇಶ್ ರಾತ್ರಿ ಮನೆಗೆ ಬಂದಿಲ್ಲ. ಅವರ ಮೊಬೈಲ್​ ಕೂಡ ಕೆಲಸ ಮಾಡುತ್ತಿವೆಂದು ಹುಡುಕಾಡುವ ವೇಳೆ ವೆಂಕಟೇಶ್ ಅವರ ಕಾರಿನ ಮುಂಭಾಗದ ನಂಬರ್ ಪ್ಲೇಟ್​ ಇದ್ದ ಮಡ್ ಗಾರ್ಡ್ ಕೆರೆಯ ಕಟ್ಟೆ ಮೇಲೆ ಬದಿಯಲ್ಲಿ ಬಿದ್ದಿತ್ತು, ಅದನ್ನ ನೋಡಿದ ಕೆಲವರು ಕೆರೆಯಲ್ಲಿ ನೋಡಲಾಗಿ ಕಾರಿನಿಂದ ಡೀಸೆಲ್​ ಲೀಕ್​ ಆಗುತ್ತಿರುವುದು ಕಂಡುಬಂದಿದೆ. ಈ ವೇಳೆ ಅನುಮಾನಗೊಂಡ ಸ್ಥಳೀಯರು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಗೆ ವಿಷಯ ತಿಳಿಸಿದ ನಂತರ ಸ್ಥಳಕ್ಕೆ ಬಂದ ಗ್ರಾಮಾಂತರ ಠಾಣಾ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಪರಿಶೀಲನೆ ನಡೆಸಿದಾಗ ಕೆರೆಯಲ್ಲಿ ಕಾರು ಹಾಗೂ ವೆಂಕಟೇಶ್​ ಶವ ಇರುವುದು ತಿಳಿದು ಬಂದಿದೆ.

ಅಧಿಕಾರಿಗಳ ನಿರ್ಲ್ಯಕ್ಷ: ಕೆರೆಗಿಲ್ಲ ತಡೆಗೋಡೆ 

ಇನ್ನು ಕೋಲಾರ ತಾಲ್ಲೂಕಿನ ಮುದುವಾಡಿ ಕೆರೆ ಕೋಲಾರ ಜಿಲ್ಲೆಯಲ್ಲೇ ದೊಡ್ಡ ಕೆರೆ. ಈ ರಸ್ತೆ ಕೋಲಾರ ಮತ್ತು ಶ್ರೀನಿವಾಸಪುರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ. ಆಂಧ್ರದ ಮದನಪಲ್ಲಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಕೂಡ ಇದಾಗಿದ್ದು, ಇಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ನಿರ್ಲ್ಯಕ್ಷ ಹಾಗೂ ಕೆರೆಯನ್ನು ನಿರ್ವಹಣೆ ಮಾಡುವ ಸಣ್ಣ ನೀರಾವರಿ ಇಲಾಖೆ ನಿರ್ಲ್ಯಕ್ಷದಿಂದ ಮುದುವಾಡಿ ಕರೆಯ ಮೇಲೆ ತಡೆಗೋಡೆ ನಿರ್ಮಾಣ ಮಾಡದೆ ಇರುವುದು ಇಂಥಾದೊಂದು ಅವಘಡಕ್ಕೆ ಕಾರಣ ಎನ್ನಲಾಗುತ್ತಿದೆ.

ನಿತ್ಯ ಸಾವಿರಾರು ವಾಹನಗಳು ಓಡಾಡುವ ರಸ್ತೆ ಇದಾಗಿದ್ದು, ಮುದುವಾಡಿ ಕೆರೆಯ ಕಟ್ಟೆಯ ಮೇಲೆ ತಡೆಗೋಡೆ ನಿರ್ಮಾಣ ಮಾಡುವ ಜೊತೆಗೆ ರಸ್ತೆ ಅಗಲೀಕರಣ ಮಾಡುವ ಕೆಲಸ ಮಾಡಬೇಕಿತ್ತು. ಆದರೆ ಹಲವು ವರ್ಷಗಳಿಂದ ಈ ರಸ್ತೆ ಕಿರಿದಾಗಿದ್ದು, ಕೆರೆಗೆ ತಡೆಗೋಡೆ ಇಲ್ಲದಿರುವುದು ಈ ಅಪಘಾತಕ್ಕೆ ಕಾರಣ. ಒಂದು ವೇಳೆ ತಡೆಗೋಡೆ ಇದ್ದಿದ್ದರೆ ವೆಂಕಟೇಶ್ ಸಾವಾಗುತ್ತಿರಲಿಲ್ಲ ಅನ್ನೋ ಮಾತುಗಳು ಕೇಳಿಬರುತ್ತಿವೆ.

ಕಾರು ಅಪಘಾತದ ಕುರಿತು ಅನುಮಾನ?

ಇನ್ನು ಕಳೆದ ರಾತ್ರಿ ವೆಂಕಟೇಶ್ ಅವರಿದ್ದ ಕಾರು ಅಪಘಾತದ ಕುರಿತು ಕೂಡ ಅನುಮಾನ ವ್ಯಕ್ತವಾಗಿದೆ. ವೆಂಕಟೇಶ್ ಅವರಿದ್ದ ಕಾರು ತಾವಾಗಿ ಆಯತಪ್ಪಿ ಅಪಘಾತಕ್ಕೀಡಾಯಿತಾ ಅಥವಾ ಯಾವುದಾದರೂ ವಾಹನ ಡಿಕ್ಕಿಯಾಗಿ ಅವಘಡ ಸಂಭವಿಸಿದೆಯಾ ಅನ್ನೋದರ ಕುರಿತು ತನಿಖೆ ನಡೆಯಬೇಕಿದೆ. ಜೊತೆಗೆ ಕೂಡಲೇ ಈ ಕೆರೆಗೆ ಕಟ್ಟೆಯ ಮೇಲಿನ ರಸ್ತೆ ಅಗಲೀಕರಣ ಮಾಡಿ ಕೆರೆಯ ಎರಡೂ ಕಡೆ ತಡೆಗೋಡೆ ನಿರ್ಮಾಣ ಮಾಡಬೇಕು ಎನ್ನುವ ಆಗ್ರಹ ಕೇಳಿಬಂದಿದೆ.

ಇದನ್ನೂ ಓದಿ: ಪತ್ನಿ 9 ತಿಂಗಳ ತುಂಬು ಗರ್ಭಿಣಿ: ವಿದ್ಯುತ್​​ ಶಾಕ್​​ ತಗುಲಿ ಪತಿ ಸಾವು; ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

ಒಟ್ಟಾರೆ ತಮ್ಮ ಜೀವನದುದ್ದಕ್ಕೂ ಹತ್ತಾರು ಹೋರಾಟಗಳನ್ನು ಮಾಡಿ ಹತ್ತಾರು ಸಮಸ್ಯೆಗೆ ಪರಿಹಾರ ಕೊಡಿಸಿದ್ದ ವೆಂಕಟೇಶ್ ಅವರು ಸಾವಿಗೀಡಾಗಿದ್ದಾರೆ. ಅವರ ಸಾವಿನ ಮೂಲಕವಾದರೂ ಮುದುವಾಡಿ ಕೆರೆಗೆ ತಡೆಗೋಡೆ ನಿರ್ಮಾಣ ಮಾಡಿ ಮುಂದೆ ಆಗಬಹುದಾದ ಅಪಘಾತಗಳಿಗೆ ಶಾಶ್ವತ ಪರಿಹಾರ ಸೂಚಿಸುವ ಮೂಲಕ ಹೋರಾಟಗಾರನ ಸಾವಿಗೆ ನ್ಯಾಯ ಒದಗಿಸಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಈ ವಾರ ಒಟಿಟಿಗೆ ಬರಲಿವೆ ಕೆಲ ಹಿಟ್ ಸಿನಿಮಾಗಳು

Source link

ಟ್ರಂಪ್ ಮಗನ ಜತೆಗೆ ಉತ್ತರ ಕೊರಿಯಾ ಅಧ್ಯಕ್ಷನ ಮಗಳ ಮದುವೆ ಫಿಕ್ಸ್​​​? ಫೋಟೋ ವೈರಲ್

ಅಂತರಾಷ್ಟ್ರೀಯ ರಾಜಕೀಯದ ಇಬ್ಬರು ಪ್ರಭಾವಿ ವ್ಯಕ್ತಿಗಳ ಮಕ್ಕಳನ್ನು ಜೋಡಿಸಿ ನೆಟ್ಟಿಗರು ಹೊಸದೊಂದು ಡಿಜಿಟಲ್ ಲವ್​​ ಸ್ಟೋರಿಯನ್ನು ಸೃಷ್ಟಿಸಿದ್ದಾರೆ. ಇಬ್ಬರ ಸಿದ್ಧಾಂತಗಳೇ ಬೇರೆ, ಆಡಳಿತ ಕೂಡ ಬೇರೆಯಾಗಿರುವಾಗ ಈ ಮದುವೆ ಹೇಗೆ ಸಾಧ್ಯ ಎಂಬ ಬಗ್ಗೆ ಅನೇಕರು ಪ್ರಶ್ನೆ ಮಾಡಿದ್ದಾರೆ. ಅಮೆರಿಕದ 47ನೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಿರಿಯ ಪುತ್ರ 19 ವರ್ಷದ ಬ್ಯಾರನ್ ಟ್ರಂಪ್ ಮತ್ತು ಕಿಮ್ ಜೊಂಗ್ ಉನ್ ಅವರ ಹದಿಹರೆಯದ ಪುತ್ರಿ ಕಿಮ್ ಜು ಏ ನಡುವೆ ಸಂಬಂಧವಿದೆ ಎಂಬಂತೆ ಬಿಂಬಿಸುವ ಮೀಮ್‌ಗಳು ಈಗ ಇಂಟರ್ನೆಟ್‌ನಲ್ಲಿ ಸಂಚಲನ ಮೂಡಿಸಿವೆ. ಇವರಿಬ್ಬರು ಮದುವೆಯಾಗಲಿದ್ದಾರೆ ಎಂಬ ಸುದ್ದಿ ಕೂಡ ಹರಡಿದೆ. ಇನ್ನು ಇಸ್ರೇಲ್​​ ಹಾಗೂ ಅಮೆರಿಕ ಇರಾನ್ ಮೇಲೆ ದಾಳಿ ಮಾಡಿದ್ದಾರೆ. ಈ ಕಾರಣಕ್ಕೆ ಉತ್ತರ ಕೊರಿಯಾ ನಮಗೆ ಬೆಂಬಲ ನೀಡಬೇಕು ಎಂಬ ಉದ್ದೇಶದಿಂದ ಟ್ರಂಪ್​​ ಈ ಸಂಬಂಧ ಬೆಳೆಸಿಕೊಂಡಿದ್ದಾರೆ ಎಂದು ನೆಟ್ಟಿಗರು ಹೇಳಿದ್ದಾರೆ.

ಟ್ರಂಪ್ ಮತ್ತು ಕಿಮ್ ಜೊಂಗ್ ಉನ್ ನಡುವಿನ ರಾಜತಾಂತ್ರಿಕ ಸಂಬಂಧಗಳು ಸದಾ ಸುದ್ದಿಯಲ್ಲಿರುತ್ತವೆ. ಆದರೆ, ನೆಟ್ಟಿಗರು ಈಗ ಅವರ ಮಕ್ಕಳನ್ನು ಇಟ್ಟುಕೊಂಡು “ರೋಮಿಯೋ-ಜೂಲಿಯೆಟ್” ಮಾದರಿಯ ಮೀಮ್‌ಗಳನ್ನು ತಯಾರಿಸುತ್ತಿದ್ದಾರೆ. ಎಐ (AI) ಮೂಲಕ ಸೃಷ್ಟಿಸಲಾದ ಚಿತ್ರಗಳಲ್ಲಿ ಬ್ಯಾರನ್ ಮತ್ತು ಕಿಮ್ ಜು ಏ ಒಟ್ಟಿಗೆ ಇರುವುದನ್ನು ತೋರಿಸಲಾಗುತ್ತಿದೆ. “ಜಗತ್ತಿನ ಎರಡು ಬದ್ಧ ವೈರಿ ರಾಷ್ಟ್ರಗಳನ್ನು ಈ ಪ್ರೇಮಕಥೆ ಒಂದು ಮಾಡಬಹುದು” ಎಂಬ ಹಾಸ್ಯದ ಸಾಲುಗಳೊಂದಿಗೆ ಈ ಚಿತ್ರಗಳು ಹಂಚಿಕೆಯಾಗುತ್ತಿವೆ.

ಇದನ್ನೂ ಓದಿ: ನನ್ನ ಬಳಿ ಅತ್ಯಾಧುನಿಕ ಕ್ಷಿಪಣಿಗಳು ಇದ್ರೂ ಯಾರೂ ಯುದ್ಧಕ್ಕೆ ಕರೆಯುತ್ತಿಲ್ಲವಲ್ಲ: ಟ್ರಂಪ್​ ಮಾಮ ಪ್ಲೀಸ್​​ ಒನ್ ಚಾನ್ಸ್​​​​​

ಇಲ್ಲಿದೆ ನೋಡಿ ವೈರಲ್​ ಪೋಸ್ಟ್:

ಎಕ್ಸ್ (X), ಇನ್‌ಸ್ಟಾಗ್ರಾಮ್ ಮತ್ತು ರೆಡ್ಡಿಟ್‌ನಂತಹ ವೇದಿಕೆಗಳಲ್ಲಿ ಈ ಮೀಮ್‌ಗಳು ಮಿಲಿಯನ್‌ಗಟ್ಟಲೆ ವೀಕ್ಷಣೆ ಪಡೆದಿವೆ. ವಿಶೇಷವಾಗಿ ಇಬ್ಬರೂ ನಾಯಕರು ಇತ್ತೀಚೆಗೆ ರಾಜತಾಂತ್ರಿಕವಾಗಿ ಚರ್ಚೆಯಲ್ಲಿರುವುದರಿಂದ ಈ ಮೀಮ್‌ಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಕ್ಕಿದೆ. ಇದು ಕೇವಲ ಇಂಟರ್ನೆಟ್ ಬಳಕೆದಾರರ ಕಲ್ಪನೆ ಮತ್ತು ತಮಾಷೆಯಷ್ಟೇ. ಬ್ಯಾರನ್ ಟ್ರಂಪ್ ಸದ್ಯ ಅಮೆರಿಕದಲ್ಲಿ ತಮ್ಮ ವಿದ್ಯಾಭ್ಯಾಸದಲ್ಲಿ ತೊಡಗಿಸಿಕೊಂಡಿದ್ದರೆ, ಕಿಮ್ ಜು ಏ ಉತ್ತರ ಕೊರಿಯಾದಲ್ಲಿ ತನ್ನ ತಂದೆಯ ಉತ್ತರಾಧಿಕಾರಿಯಾಗಿ ಸಿದ್ಧಗೊಳ್ಳುತ್ತಿದ್ದಾರೆ. ಇವರಿಬ್ಬರ ನಡುವೆ ಯಾವುದೇ ರೀತಿಯ ವೈಯಕ್ತಿಕ ಪರಿಚಯ ಅಥವಾ ಸಂಬಂಧವಿಲ್ಲ ಎಂಬುದು ಸ್ಪಷ್ಟ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ತುಲಾ ರಾಶಿಗೆ ಈ ವರ್ಷ ಹೇಗಿರಲಿದೆ?

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಯುಗಾದಿಯ ಪರಾಭವನಾಮ ಸಂವತ್ಸರದ ತುಲಾ ರಾಶಿಯ ಭವಿಷ್ಯವನ್ನು ವಿವರಿಸಿದ್ದಾರೆ. ಶುಕ್ರ ಅಧಿಪತಿಯಾದ ತುಲಾ ರಾಶಿಯವರಿಗೆ (ಚಿತ್ತಾ, ಸ್ವಾತಿ, ವಿಶಾಖ ನಕ್ಷತ್ರ) ಈ ವರ್ಷ ಬಹಳಷ್ಟು ಅದೃಷ್ಟಗಳು ಕೂಡಿಬರುವ ಸಾಧ್ಯತೆ ಇದೆ. ಆರ್ಥಿಕವಾಗಿ ಅಭಿವೃದ್ಧಿ ಕಾಣುವಿರಿ, ಅನೇಕ ಹೊಸ ಅವಕಾಶಗಳು ಲಭಿಸುತ್ತವೆ. ರೈತರು, ವ್ಯಾಪಾರಸ್ಥರು, ಉದ್ಯೋಗದಲ್ಲಿರುವವರಿಗೆ ಶುಭಫಲಗಳಿವೆ. ಕೆಲವರಿಗೆ ಸರ್ಕಾರಿ ನೌಕರಿ ಮತ್ತು ಬಡ್ತಿ ಲಭಿಸುತ್ತದೆ ಎಂದು ಸಲಹೆ ನೀಡಿದ್ದಾರೆ.

ಆರೋಗ್ಯದಲ್ಲಿ ಚೇತರಿಕೆ ಮತ್ತು ತಂದೆ-ತಾಯಿಗಳಿಂದ ಆಶೀರ್ವಾದ ಸಿಗಲಿದೆ. ವಿದ್ಯಾರ್ಥಿಗಳು, ರೈತರು, ವ್ಯಾಪಾರಸ್ಥರಿಗೆ ಉತ್ತಮ ಫಲಗಳಿವೆ. ಆತಂಕಗಳು ಮತ್ತು ಒತ್ತಡಗಳು ಕಡಿಮೆಯಾಗುತ್ತವೆ, ಆಸ್ತಿ ಕಲಹಗಳು ಇತ್ಯರ್ಥವಾಗುತ್ತವೆ. ಕಾನೂನು ವಿಷಯಗಳಲ್ಲಿ ಜಯ ಲಭಿಸುತ್ತದೆ ಮತ್ತು ಸಂತಾನ ಯೋಗವೂ ಇದೆ. ಮಹಿಳೆಯರಿಗೆ ವಿವಾಹ ವಿಷಯಗಳಲ್ಲಿ ಮೋಸ ಹೋಗುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ಅಗತ್ಯ. ಪ್ರೇಮ ವ್ಯವಹಾರಗಳಲ್ಲಿಯೂ ಅಡೆತಡೆಗಳಿರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಉದ್ಯಮಿ ಮನೆಯಲ್ಲಿ ದರೋಡೆ ಕೇಸ್​​ಗೆ ಬಿಗ್​​ ಟ್ವಿಸ್ಟ್​​: ಪ್ರಾಣ ಸ್ನೇಹಿತನ ಮನೆಯಲ್ಲೇ ರಾಬರಿ ಮಾಡಿಸಿದ ಸ್ಟಾಂಪ್ ವೆಂಡರ್

ಬೆಂಗಳೂರು, ಮಾರ್ಚ್​​ 08: ಪೊಲೀಸರ ಹೆಸರಲ್ಲಿ ಮನೆಗೆ ಎಂಟ್ರಿಕೊಟ್ಟ ಗ್ಯಾಂಗ್​​ ಒಂದು ರಿಯಲ್ ಎಸ್ಟೇಟ್ ಉದ್ಯಮಿ ಮನೆಯಿಂದ ಬರೋಬ್ಬರಿ 20 ಲಕ್ಷ ರೂಪಾಯಿ ನಗದು ಮತ್ತು ಸುಮಾರು ಅರ್ಧ ಕೆಜಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬಿಇಎಲ್ ಲೇಔಟ್‌ನಲ್ಲಿ ನಡೆದಿತ್ತು. ಈ ಪ್ರಕರಣವನ್ನು ಭೇದಿಸಿರುವ ಬ್ಯಾಡರಹಳ್ಳಿ ಪೊಲೀಸರು ಈ ಹಿಂದೆ ನಾಗೇಂದ್ರ ಹಾಗೂ ಬಚ್ಚನ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಆದರೆ ತನಿಖೆ ಮುಂದುವರಿದಾಗ ಅಸಲಿ ಸತ್ಯ ಬಯಲಾಗಿದ್ದು, ಪ್ರಕರಣದ ಹಿಂದಿನ ಮಾಸ್ಟರ್​​ ಮೈಂಡ್​​ ಹೆಸರು ರಿವೀಲ್​ ಆಗಿದೆ.

ಸ್ನೇಹಿತನ ಮನೆಯಲ್ಲೇ ರಾಬರಿ ಮಾಡಿಸಿದವ ಲಾಕ್​

ಹೊಂಬೇಗೌಡ ಮನೆಯಲ್ಲಿ ನಡೆದ ದರೋಡೆ ಹಿಂದೆ ಅವರ ಪ್ರಾಣ ಸ್ನೇಹಿತ ಬೆಟ್ಟೇಗೌಡ ಎಂಬಾತನ ಪಾತ್ರ ಇರೋದೀಗ ಬಯಲಾಗಿದೆ. ಸೈಟ್​​ ಮಾರುವ ಸಂಬಂಧ ಸ್ಟಾಂಪ್ ವೆಂಡರ್ ಆಗಿರುವ ಬೆಟ್ಟೇಗೌಡನ ಬಳಿಯೇ ಹೊಂಬೇಗೌಡರು ಪೇಪರ್​​ ಮಾಡಿಸಿದ್ದರು. ಹೀಗಾಗಿ ಸ್ನೇಹಿತನ ಬಳಿ ಸೈಟ್ ಮಾರಿದ ಹಣ ಇದೆ‌ ಎಂದು ತಿಳಿದಿದ್ದ ಆರೋಪಿ, ದರೋಡೆ ಮಾಡುವಂತೆ ಜೈಲಿಂದ ಪೆರೋಲ್ ಮೇಲೆ ಬಿಡುಗಡೆಯಾಗಿದ್ದ ನಾಗೇಂದ್ರನಿಗೆ ಐಡಿಯಾ ಕೊಟ್ಟಿದ್ದ. ಶಿವಾಜಿನಗರದಲ್ಲಿ ಶೂಟಿಂಗ್​​ಗೆ ಎಂದು ಹೇಳಿ ಸಬ್ ಇನ್ಸ್​​ಪೆಕ್ಟರ್ ಡ್ರೆಸ್ ಬಾಡಿಗೆಗೆ ತಂದಿದ್ದ ನಾಗೇಂದ್ರ, ಅದೇ ಡ್ರೆಸ್​​ ಹಾಕಿಕೊಂಡು ಮನೆಗೆ ನುಗ್ಗಿ ದರೋಡೆ ನಡೆಸಿದ್ದ ಎಂಬುದು ಗೊತ್ತಾಗಿದೆ.

ಇದನ್ನೂ ಓದಿ: ಉದ್ಯಮಿ ಮನೆಯಲ್ಲಿ ಕಳ್ಳತನ ಪ್ರಕರಣಕ್ಕೆ ಬಿಗ್​​​​ ಟ್ವಿಸ್ಟ್​; ಪೆರೋಲ್ ಮೇಲೆ ಹೊರಬಂದಿದ್ದ ಕುಖ್ಯಾತ ಖೈದಿಯಿಂದಲ್ಲೇ ಕನ್ನ!

ಘಟನೆ ಏನಾಗಿತ್ತು?

ಹೊಂಬೇಗೌಡ ಅವರು ಪತ್ನಿ ಮಂಗಳಮ್ಮ ಹಾಗೂ ಮೊಮ್ಮಕ್ಕಳೊಂದಿಗೆ ಮನೆಯಲ್ಲಿ ಇದ್ದ ವೇಳೆ ಪೊಲೀಸರಂತೆ ವೇಷಧರಿಸಿ ಮನೆಗೆ ಎಂಟ್ರಿ ಕೊಟ್ಟಿದ್ದ ಆರೋಪಿಗಳು , ತಾವು ಯಲಹಂಕ ಠಾಣೆಯಿಂದ ಬಂದಿದ್ದೇವೆ ಎಂದು ತಿಳಿಸಿದ್ದರು. ಇವರು ಬ್ಯಾಗ್​​ ಮತ್ತು ಡೈರಿಯನ್ನೂ ಹಿಡಿದು ಬಂದಿದ್ದ ಕಾರಣ ಆರಂಭದಲ್ಲಿ ಮನೆಯವರೂ ಆರೋಪಿಗಳ ಮಾತು ನಂಬಿದ್ದರು. ಆದರೆ ಬಳಿಕ ಆರೋಪಿಗಳು ವೃದ್ಧ ದಂಪತಿಯನ್ನು ಬಂದೂಕು ಮತ್ತು ಚಾಕುವಿನಿಂದ ಬೆದರಿಸಿದ್ದರು. ಅಲ್ಲದೆ ಅವರ ಕೈಕಾಲುಗಳನ್ನು ಕಟ್ಟಿ. ನಗದು ಮತ್ತು ಚಿನ್ನಾಭರಣ ದೋಚಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version