Headlines

IND vs SL: ಗಾಲೆ ಟೆಸ್ಟ್ 2ನೇ ದಿನದಾಟದ ಸಮಯ ಬದಲಾವಣೆ – Kannada News | Galle Test Day 1: India Dominates SL with Padikkal 131*, Revised Day 2 Schedule

ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಶ್ರೀಲಂಕಾ (India vs Sri Lanka) ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನ ಸಂಪೂರ್ಣವಾಗಿ ಭಾರತ ತಂಡದ ಪರವಾಗಿತ್ತು. ಭಾರತೀಯ ಬ್ಯಾಟ್ಸ್‌ಮನ್‌ಗಳು ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿ ಎದುರಾಳಿ ಬೌಲರ್‌ಗಳ ಮೇಲೆ ಒತ್ತಡ ಹಾಕಿದರು. ಇದರ ಫಲವಾಗಿ ಟೀಂ ಇಂಡಿಯಾ ದಿನದಾಟದಂತ್ಯಕ್ಕೆ 2 ವಿಕೆಟ್‌ಗಳನ್ನು ಕಳೆದುಕೊಂಡು 288 ರನ್ ಕಲೆಹಾಕಿ ಪಂದ್ಯದಲ್ಲಿ ಭಿಗಿ ಹಿಡಿತ ಸಾಧಿಸಿದೆ. ಆದಾಗ್ಯೂ, ಮಧ್ಯಂತರ ಮಳೆಯಿಂದಾಗಿ ಆಟಕ್ಕೆ ಹಲವಾರು ಬಾರಿ ಅಡ್ಡಿಯುಂಟಾಯಿತು. ಇದರ ಪರಿಣಾಮವಾಗಿ…

Read More

ಸ್ವಾತಂತ್ರ್ಯೋತ್ಸವ ಅಂಗವಾಗಿ HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ – Kannada News | HMT Independence Day Watch: New Model Launch Sparks Rush Among Buyers

ಬೆಂಗಳೂರು, ಆಗಸ್ಟ್​ 15: ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೂಚನೆ ಮೇರೆಗೆ ಗಂಡಭೇರುಂಡ ಲಾಂಛನ ಹಾಗೂ ಕನ್ನಡ ಅಂಕಿಗಳನ್ನು ಒಳಗೊಂಡ ವಿಶೇಷವಾದ ಹೆಚ್‌ಎಂಟಿ (HMT) ನೂತನ ವಾಚ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದ್ದು, ಬೆಂಗಳೂರಿನ ಜಾಲಹಳ್ಳಿಯಲ್ಲಿರುವ ಹೆಚ್‌ಎಂಟಿ ಕೇಂದ್ರದಲ್ಲಿ ಈ ವಾಚ್‌ಗಳನ್ನು ಖರೀದಿಸಲು ಸಾರ್ವಜನಿಕರು ಮುಗಿಬಿದ್ದಿದ್ದರು. ಈ ವಿಶೇಷ ವಾಚ್‌ಗಳನ್ನು ಖರೀದಿಸಲು ಜನರು ಮುಂಜಾನೆಯಿಂದಲೇ ಬರೋಬ್ಬರಿ 2 ಕಿ.ಮೀಗೂ ಅಧಿಕ ಉದ್ದದ ಕ್ಯೂನಲ್ಲಿ ನಿಂತಿದ್ದು, ಭಾರೀ ಬೇಡಿಕೆ ಕಂಡುಬಂದಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ…

Read More

20 ವರ್ಷ ಕಿರಿಯ ಯುವತಿಯೊಟ್ಟಿಗೆ ಪ್ರೀತಿ, ಮದುವೆ ಬಗ್ಗೆ ಅನುರಾಗ್ ಮಾತು – Kannada News | Anurag Kashyap talks about marriage plans with 20 year younger girl friend

ಅನುರಾಗ್ ಕಶ್ಯಪ್ (Anurag Kashyap) ಬಾಲಿವುಡ್​​ನ ಸ್ಟಾರ್ ನಿರ್ದೇಶಕ. ಆದರೆ ಅವರು ಬಾಲಿವುಡ್​ ಬಿಟ್ಟು ದಕ್ಷಿಣಕ್ಕೆ ಬಂದಿದ್ದಾರೆ. ಕಳೆದ ಕೆಲ ವರ್ಷದಿಂದ ಬೆಂಗಳೂರಿನಲ್ಲಿ ನೆಲೆಸಿರುವ ಅನುರಾಗ್ ಕಶ್ಯಪ್, ಬಾಲಿವುಡ್​ ಬಗ್ಗೆ ಅಲ್ಲಿನ ಕೆಟ್ಟ ಪದ್ಧತಿಗಳ ಬಗ್ಗೆ ಆಗಾಗ್ಗೆ ಮಾತನಾಡುತ್ತಿರುತ್ತಾರೆ. ಅನುರಾಗ್ ಕಶ್ಯಪ್ ಅವರು ತಮ್ಮ ‘ಗರ್ಲ್​​ಫ್ರೆಂಡ್’ ಜೊತೆಗೆ ಲಿವಿನ್​​ನಲ್ಲಿದ್ದಾರೆ. ಅನುರಾಗ್ ಕಶ್ಯಪ್ ಅವರು ತಮಗಿಂತಲೂ 20 ವರ್ಷ ಕಿರಿಯವರಾದ ಶುಭ್ರತಾ ಶೆಟ್ಟಿಯ ಜೊತೆಗೆ ಪ್ರೀತಿಯಲ್ಲಿದ್ದಾರೆ. ಕಳೆದ ಒಂದು ದಶಕದಿಂದಲೂ ಇವರಿಬ್ಬರು ಒಟ್ಟಿಗಿದ್ದಾರೆ. ಇತ್ತೀಚೆಗಿನ ಸಂದರ್ಶನದಲ್ಲಿ ಅನುರಾಗ್ ಕಶ್ಯಪ್…

Read More

ರಾತ್ರಿ ನಿದ್ರೆ ಸರಿಯಾಗಿ ಬರುತ್ತಿಲ್ಲವೇ? ಈ ಸರಳ ಅಭ್ಯಾಸಗಳನ್ನು ರೂಢಿಸಿಕೊಂಡರೆ ನಿದ್ರೆ ಕ್ವಾಲಿಟಿ ಸುಧಾರಿಸಬಹುದು – Kannada News | Better Sleep Naturally: Simple Nighttime Habits You Should Follow

ಇಂದಿನ ಬ್ಯುಸಿ ಜೀವನಶೈಲಿಯಲ್ಲಿ ಒತ್ತಡ, ತಡರಾತ್ರಿಯವರೆಗೆ ಮೊಬೈಲ್ ಬಳಕೆ, ಅನಿಯಮಿತ ಆಹಾರ ಪದ್ಧತಿ ಮತ್ತು ಬದಲಾಗಿರುವ ನಿದ್ರೆಯ ಸಮಯದಿಂದಾಗಿ ಹಲವರ ನಿದ್ರೆಯ ಗುಣಮಟ್ಟ ಕುಸಿಯುತ್ತಿದೆ. ರಾತ್ರಿ ಸರಿಯಾಗಿ ನಿದ್ರೆ ಬರದಿರುವುದು ಕೇವಲ ಮರುದಿನದ ಆಯಾಸಕ್ಕೆ ಕಾರಣವಾಗುವುದಿಲ್ಲ ಮನಸ್ಥಿತಿ ಮತ್ತು ದೈನಂದಿನ ಕಾರ್ಯಗಳ ಮೇಲೂ ಪರಿಣಾಮ ಬೀರಬಹುದು. ಹೀಗಾಗಿ ನಿದ್ರೆ ಚೆನ್ನಾಗಿ ಬರಲು ಕೇವಲ ಹೆಚ್ಚು ಹೊತ್ತು ಹಾಸಿಗೆಯಲ್ಲಿ ಇರುವುದು ಸಾಕಾಗುವುದಿಲ್ಲ. ನಿಯಮಿತ ನಿದ್ರೆಯ ಸಮಯ ಮತ್ತು ಮಲಗುವ ಮುನ್ನದ ಅಭ್ಯಾಸಗಳಿಗೂ ಹೆಚ್ಚಿನ ಮಹತ್ವವಿದೆ. ನಿದ್ರೆ ಉತ್ತಮವಾಗಲು ರಾತ್ರಿ…

Read More

ಗ್ಯಾರಂಟಿ ಯೋಜನೆಗಳಲ್ಲಿ ಗೋಲ್‌ಮಾಲ್‌ ನಡೆದಿರುವ ಶಂಕೆ: ಯಾವುದು ನಿಜ? ಯಾವುದು ಸುಳ್ಳು? – Kannada News | Karnataka Guarantee Schemes: R. Ashoka Seeks White Paper on Fund Discrepancies

ಆರ್​​. ಅಶೋಕ್​, ಡಿಕೆ ಶಿವಕುಮಾರ್​Image Credit source: tv9 kannada ಬೆಂಗಳೂರು, ಆಗಸ್ಟ್​ 15: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಾಗೂ ವೆಚ್ಚದ ಅಂಕಿ-ಅಂಶಗಳಲ್ಲಿ ಭಾರೀ ಗೋಲ್‌ಮಾಲ್ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಸರ್ಕಾರ ಕೂಡಲೇ ಶ್ವೇತಪತ್ರ ಹೊರಡಿಸಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ (R Ashoka) ಆಗ್ರಹಿಸಿದ್ದಾರೆ. ಸಿಎಂ ಡಿಕೆ ಶಿವಕುಮಾರ್ (DK Shivakumar)​ ತಮ್ಮ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ನೀಡಿರುವ ಅಂಕಿ-ಅಂಶಗಳಿಗೂ ಹಾಗೂ ಸರ್ಕಾರದ ಹಿಂದಿನ ಪ್ರಕಟಣೆಗಳಿಗೂ ಯಾವುದೇ ತಾಳೆಯಾಗುತ್ತಿಲ್ಲ…

Read More

ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ – Kannada News | One year for Darshan bail reject, what happened in this one year

ನಟ ದರ್ಶನ್ (Darshan)​​ ಜಾಮೀನು ರದ್ದಾಗಿ ಮತ್ತೆ ಜೈಲು ಸೇರಿ ಇಂದಿಗೆ (ಆಗಸ್ಟ್ 15) ಒಂದು ವರ್ಷ. ಈ ಒಂದು ವರ್ಷದಲ್ಲಿ ಸಾಕಷ್ಟು ವಿಚಾರಗಳು ನಡೆದಿವೆ. ಬೆನ್ನು ನೋವು, ಜೈಲಿನ ಪರಿಸ್ಥಿತಿ, ಅನಾರೋಗ್ಯ, ಸಮಿತಿಯಿಂದ ಜೈಲು ಭೇಟಿ, ಸುಪ್ರೀಂಕೋರ್ಟ್​​ನಲ್ಲಿ ವಿಚಾರಣೆ, ಸಾಕ್ಷಿಗಳ ವಿಚಾರಣೆ, ಬೆದರಿಕೆ, ಮಾಫಿ ಸಾಕ್ಷಿ ಇನ್ನೂ ಏನೇನೋ ನಡೆದಿವೆ. ಅವೆಲ್ಲದರ ಸಂಪೂರ್ಣ ಮಾಹಿತಿ ಇಲ್ಲಿದೆ. ದರ್ಶನ್ ಜಾಮೀನು ರದ್ದಾಗಿ ಅವರು ಮತ್ತೆ ಜೈಲು ಸೇರಿದ ಬಳಿಕ ಈ ಒಂದು ವರ್ಷ ಅವಧಿಯಲ್ಲಿ ಪ್ರಕರಣದಲ್ಲಿ ಏನೇನಾಯ್ತು…

Read More

ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ – Kannada News | Bigg Boss Kannada season 13, new promo released

ಬಿಗ್​​ಬಾಸ್ ಕನ್ನಡ ಸೀಸನ್ 13 (Bigg Boss Kannada) ಪ್ರಾರಂಭಕ್ಕೆ ಕೆಲವೇ ದಿನಗಳು ಬಾಕಿ ಇವೆ. ಈ ಬಾರಿ ಸಾಮಾನ್ಯರು ಸಹ ಬಿಗ್​​ಬಾಸ್ ಮನೆಗೆ ಎಂಟ್ರಿ ಕೊಡಬಹುದಾಗಿದೆ. ಯಾರು ಬಿಗ್​​ಬಾಸ್ ಮನೆಯ ಒಳಗೆ ಹೋಗುತ್ತಾರೆ ಎಂಬುದನ್ನು ಜಡ್ಜ್​​ಗಳು ನಿರ್ಧರಿಸುತ್ತಾರೆ. ಶ್ರುತಿ, ಚಂದನ್ ಶೆಟ್ಟಿ, ಸಂಗೀತಾ, ವಿನಯ್ ಅವರುಗಳು ಆಕಾಂಕ್ಷಿಗಳಿಗೆ ಪ್ರಶ್ನೆಗಳನ್ನು ಕೇಳಿ ಅರ್ಹರನ್ನು ಆಯ್ಕೆ ಮಾಡುತ್ತಾರೆ. ಇದೀಗ ಅಪ್ಪ-ಮಗ ಇಬ್ಬರೂ ಒಟ್ಟಿಗೆ ಬಿಗ್​​ಬಾಸ್ ಮನೆಯ ಒಳಗೆ ಹೋಗಲು ಬಂದಿದ್ದರು. ಆದರೆ ಇಬ್ಬರಲ್ಲಿ ಒಬ್ಬರನ್ನು ಮಾತ್ರ ಕಳಿಸಲು ಅವಕಾಶ…

Read More

IND vs SL: ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ರನೌಟ್​ಗೆ ಬಲಿಯಾದ ಜೈಸ್ವಾಲ್ – Kannada News | India vs Sri Lanka Test: Yashasvi Jaiswal’s Tragic Run Out on Galle Day 1

ಗಾಲೆ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ದಿನದಾಟದಂತ್ಯಕ್ಕೆ 288 ರನ್ ಕಲೆಹಾಕಿದೆ. ದಿನವಿಡೀ ಟೀಂ ಇಂಡಿಯಾ ಬ್ಯಾಟರ್​ಗಳು ಶ್ರೀಲಂಕಾ (India vs Sri Lanka ) ಬೌಲರ್​ಗಳನ್ನು ಕಾಡಿದರಾದರೂ ದಿನದಂತ್ಯಕ್ಕೆ 2 ವಿಕೆಟ್‌ಗಳನ್ನು ಉರುಳಿಸುವಲ್ಲಿ ಯಶಸ್ವಿಯಾದರು. ಇದರಲ್ಲಿ ಒಂದು ವಿಕೆಟ್ ಅನ್ನು ಶ್ರೀಲಂಕಾ ಬೌಲರ್​ಗಳು ಪಡೆದರು ಎನ್ನುವುದಕ್ಕಿಂತ ಟೀಂ ಇಂಡಿಯಾ ಬ್ಯಾಟರ್​ಗಳು ಉಚಿತವಾಗಿ ನೀಡಿದರು ಎನ್ನಬಹುದು. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ರಾಹುಲ್ (KL Rahul) ಹಾಗೂ…

Read More

ಗೇಲೆ ಮಾಡಿದ್ದಕ್ಕೆ ಕೊಲೆ: ರೀಲ್ಸ್ ನೋಡಿಕೊಂಡು ಗೆಳೆಯನಿಗೆ ಕೀಟಲೆ ಮಾಡಿದವನ ಹೆಣ ಬಿತ್ತು! – Kannada News | Big Twist T0 suhel Murder Case: A Youth Kills His Friend For Doing Joke at Tumakuru

ತುಮಕೂರು, (ಆಗಸ್ಟ್ 15): ಕಳೆದ ಕೆಲ ದಿನಗಳ ಹಿಂದೆ ತುಮಕೂರಿನಲ್ಲಿ (Tumakuru) ನಡೆದಿದ್ದ ಸುಹೇಲ್ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಆರಂಭದಲ್ಲಿ ಹಣಕಾಸಿನ ವಿಚಾರಕ್ಕೆ ಕೊಲೆ ನಡೆದಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಆದ್ರೆ ತಿಲಕ್ ಪಾರ್ಕ್ ಪೊಲೀಸರ ತನಿಖೆಯಲ್ಲಿ ಬಯಲಾದ ಸಂಗತಿಯೇ ಬೇರೆ ಕಥೆ. ಹೌದು, ತುಮಕೂರಿನ ಹೆಗಡೆ ಕಾಲೋನಿಯಲ್ಲಿ ಇದೇ ತಿಂಗಳ 11ರ ರಾತ್ರಿ ಗೆಳೆಯರ ಜೊತೆ ಕುಳಿತಿದ್ದ ಸುಹೇಲ್ ಚಾಕು ಇರಿತಕ್ಕೊಳಗಾಗಿದ್ದ. ತೀವ್ರವಾಗಿ ಗಾಯಗೊಂಡಿದ್ದ ಸುಹೇಲ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದ.. ಘಟನೆ…

Read More

ಅರಣ್ಯಾಧಿಕಾರಿಗಳ ಗುಂಡೇಟಿಗೆ ಮೂವರು ಬಲಿ: ಕೊನೆಗೂ ದಾಖಲಾಯ್ತು FIR – Kannada News | Three Killed In Forest Encounter In Chamrajnagar: FIR Booked Against Forest Staff

ಚಾಮರಾಜನಗರ, (ಆಗಸ್ಟ್ 15): ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವಾಪ್ತಿಯ ಹೊಳೆದಟ್ಟಿ ಅರಣ್ಯದಲ್ಲಿ ಮರಿಯ ಮಂಗಲ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ (Chamrajnagar Encounter) ಸಂಬಂಧಿಸಿದಂತೆ ಕೊನೆಗೂ ಎಫ್​​​​ಐಆರ್ ದಾಖಲಾಗಿದೆ. ಪ್ರಾಣಿ ಬೇಟೆಗೆ ಬಂದಿದ್ದಾರೆಂದು ಅರಣಾಧ್ಯಿಕಾರಿಗಳು ನಡೆಸಿದ ಗುಂಡಿನ ದಾಳಿಗೆ ಮೂವರು ಮೃತಪಟ್ಟಿದ್ದು, ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ FIR ದಾಖಲಾಗಿದೆ. ಮೃತ ಆಥೋಣಿಸಾಮಿ ಪತ್ನಿ ಲೂರ್ದಾಮೇರಿ ದೂರಿನ ಆಧಾರದಲ್ಲಿ ಚಾಮರಾಜನಗರದ ಹನೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್​​​ಐಆರ್ ದಾಖಲಾಗಿದೆ….

Read More