ಸೋಂಪು ನೀರು ಕುಡಿಯುವುದರಿಂದ ದೇಹ ತಂಪಾಗಿರುವುದು ಮಾತ್ರವಲ್ಲ ಈ ಪ್ರಯೋಜನಗಳೂ ಲಭಿಸುತ್ತದೆ
ಬೇಸಿಗೆ ಕಾಲ (summer) ಆರಂಭವಾಗಿದೆ. ಈ ಋತುವಿನಲ್ಲಿ ವಿಪರೀತ ಶಾಖ ಇರುವ ಕಾರಣ ನಿರ್ಜಲೀಕರಣ, ಆಯಾಸ, ದಣಿವು, ದೇಹ ಉರಿ, ಶಾಖದ ಹೊಡೆದ, ಜೀರ್ಣಕಾರಿ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ ಈ ಸಮಯದಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ದೇಹವನ್ನು ತಂಪಾಗಿಡಲು, ನಿರ್ಜಲೀಕರಣ ಸಮಸ್ಯೆಯನ್ನು ಹೋಗಲಾಡಿಸಲು ಜನ ಎಳನೀರು, ನೀರು, ಕಲ್ಲಂಗಡಿಯಂತಹ ಕಾಲೋಚಿತ ಹಣ್ಣುಗಳನ್ನು ಸೇವನೆ ಮಾಡುತ್ತಾರೆ. ಇದರ ಜೊತೆಗೆ ಈ ಸುಡು ಬೇಸಿಗೆಯಲ್ಲಿ ಸೋಂಪು ನೀರನ್ನೂ ಕುಡಿಯಬಹುದು….