ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ

ಪವನ್ ಕಲ್ಯಾಣ್ (Pawan Kalyan) ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿದೆ. ಇತ್ತೀಚೆಗಷ್ಟೆ ಸಿನಿಮಾದ ವಿಶೇಷ ಪ್ರೀಮಿಯರ್ ಶೋ ಪ್ರದರ್ಶಿಸಲಾಯ್ತು. ಈ ಶೋನಲ್ಲಿ ಪವನ್ ಕಲ್ಯಾಣ್, ಚಿರಂಜೀವಿ, ಪವನ್ ಕಲ್ಯಾಣ್ ಪತ್ನಿ, ಚಿರಂಜೀವಿ ಪತ್ನಿ, ನಿರ್ದೇಶಕ ಹರೀಶ್ ಶಂಕರ್, ನಟಿ ಶ್ರೀಲೀಲಾ ಇನ್ನೂ ಹಲವರು ಭಾಗಿ ಆಗಿದ್ದರು. ನಟ ಚಿರಂಜೀವಿ ಅವರು, ಶ್ರೀಲೀಲಾ ಪಕ್ಕದಲ್ಲೇ ಕೂತು ಇಡೀ ಸಿನಿಮಾ ನೋಡಿದರು. ಸಿನಿಮಾ ನೋಡುವಾಗ ನಗುತ್ತಾ, ಕುಳಿತಿದ್ದ ಸೀಟಿನಲ್ಲೇ ಡ್ಯಾನ್ಸ್ ಮಾಡುತ್ತಾ ಸಖತ್ ಎಂಜಾಯ್…

Read More

ಸರ್ಕಲ್‌ ಮಧ್ಯೆ ಕೈಕೊಟ್ಟ ಡಕೋಟಾ ಸರ್ಕಾರಿ ಬಸ್: ಪ್ರಯಾಣಿಕರು ಮಾಡಿದ್ದೇನು ನೋಡಿ – Kannada News | Kalyana Karnataka Bus Stranded in Gadag: Passengers Aid Conductor to Restart Vehicle

ಗದಗ, ಡಿ23:  ಗದಗ ನಗರದ ಪುಟ್ಟರಾಜ್ ಸರ್ಕಲ್‌ನಲ್ಲಿ ರಾಯಚೂರು ವಿಭಾಗಕ್ಕೆ ಸೇರಿದ ಕಲ್ಯಾಣ ಕರ್ನಾಟಕ ಸಾರಿಗೆಯ ಡಕೋಟಾ ಬಸ್ ನಡುರಸ್ತೆಯಲ್ಲೇ ಕೆಟ್ಟು ನಿಂತ ಘಟನೆಯೊಂದು ನಡೆದಿದೆ. ಲಿಂಗಸಗೂರ-ಕುಷ್ಟಗಿ-ಗದಗ ಮಾರ್ಗವಾಗಿ ಹುಬ್ಬಳ್ಳಿಗೆ ಹೊರಟಿದ್ದ ಈ ಬಸ್, ಸಿಗ್ನಲ್‌ನಲ್ಲಿ ಕೆಟ್ಟು ನಿಂತ ಕಾರಣ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಬಸ್ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರಲ್ಲಿ ಆತಂಕ ಉಂಟಾಯಿತು. ಈ ಸಂದರ್ಭದಲ್ಲಿ, ಬಸ್‌ನ ಕಂಡಕ್ಟರ್ ಮತ್ತು ಪ್ರಯಾಣಿಕರು ಬಸ್ ಅನ್ನು ತಳ್ಳಿದ್ದಾರೆ. ಟಿಕೆಟ್‌ ಖರೀದಿಸಿದ್ದ ಪ್ರಯಾಣಿಕರು ಬಸ್ ಮುಂದೆ ಹೋಗಲಿ ಎಂದು ಬಸ್…

Read More

ಪಶ್ಚಿಮ ಬಂಗಾಳದಲ್ಲಿ ನಿರ್ದಿಷ್ಟ ಸಮುದಾಯದಲ್ಲಿ 4 ಮದುವೆ ನಿಷೇಧಿಸುತ್ತೇವೆ; ಅಮಿತ್ ಶಾ ಪ್ರತಿಜ್ಞೆ – Kannada News | Amit Shah vows to ban 4 marriages in certain community during West Bengal Rally

ಕೊಲ್ಕತ್ತಾ, ಏಪ್ರಿಲ್ 21: ಪಶ್ಚಿಮ ಬಂಗಾಳದಲ್ಲಿ (West Bengal Assembly Elections) ಈ ಬಾರಿ ಬಿಜೆಪಿ ಸರ್ಕಾರವನ್ನು ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಸಭಾ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ (Amit Shah), ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ರಾಜ್ಯದ ಜನರು ವಿದಾಯ ಹೇಳುವ ಸಮಯ ಬಂದಿದೆ ಎಂದು ಹೇಳಿದ್ದಾರೆ. ಪಶ್ಚಿಮ ಬಂಗಾಳ ರಾಜ್ಯದಲ್ಲಿ ಬಹುಪತ್ನಿತ್ವ ಪದ್ಧತಿಯನ್ನು ನಿಷೇಧಿಸಲು ಬಿಜೆಪಿ ಯುಸಿಸಿಯನ್ನು ಜಾರಿಗೆ ತರಲಿದೆ. ನಾವು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 11ರ ದಿನಭವಿಷ್ಯ – Kannada News | Daily Numerology Prediction Feb 11: Birth Numbers 4, 5, 6 – What Awaits You?

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 11ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಮನೆಗೆ ಟೀವಿ, ರೆಫ್ರಿಜರೇಟರ್ ಅಥವಾ ಡಿಶ್ ವಾಷರ್ ಇಂಥ ಉಪಕರಣ ಖರೀದಿ ಮಾಡುವ ಬಗ್ಗೆ ಆಲೋಚನೆ ಮಾಡುತ್ತೀರಿ. ಮತ್ತೆ ಕೆಲವರಿಗೆ ಇವು ಉಡುಗೊರೆಯಾಗಿ ದೊರೆಯುವ ಯೋಗ ಸಹ ಇದೆ. ಸಂಘ- ಸಂಸ್ಥೆಗಳ ಚುನಾವಣೆಗೆ ಸ್ಪರ್ಧೆ ಮಾಡುವ…

Read More

ಬೆಣ್ಣೆ ನಗರಿ ಹುಡುಗಿಗೆ ಮನಸೋತ ನ್ಯೂಜಿಲೆಂಡ್‌ ಯುವಕ! ಅಪ್ಪಟ ಹಿಂದೂ ಸಂಪ್ರದಾಯದಂತೆ ದಾವಣಗೆರೆಯಲ್ಲಿ ನಡೀತು ಅದ್ದೂರಿ ವಿವಾಹ – Kannada News | New Zealand man marries Davanagere girl: Embraces Hindu Rituals

ಕ್ಯಾಂಬೆಲ್, ನ್ಯೂಜಿಲೆಂಡ್‌ನ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ಹಿಂದೂ ಸಂಪ್ರದಾಯದಂತೆ ಮದುವೆಯಾಗಲು ಇಷ್ಟಪಟ್ಟಿದ್ದಾರೆ. ಮದುವೆಗೆ ಒಂದು ವಾರದಿಂದ ಪೂರ್ವತಯಾರಿ ಆಗಿದ್ದು, ಕುಟುಂಬಸ್ಥರು ಶೇರ್ವಾನಿ, ಸೀರೆ ಧರಿಸಿ ತಯಾರಾದರು. ಅರ್ಚನಾ, ಶಾಸ್ತ್ರ ಪೂಜೆಗಳು, ಅರುಂಧತಿ ನಕ್ಷತ್ರ ಮತ್ತು ಎಲ್ಲಾ ಸಂಪ್ರದಾಯಿಕ ವಿಧಿಗಳನ್ನು ಪಾಲಿಸಿ ಮದುವೆ ನಡೆದಿದೆ. ಪ್ರತಿ ಕ್ಷಣವೂ ಸಾಂಸ್ಕೃತಿಕ ವೈಭವ ಮತ್ತು ಪವಿತ್ರತೆಯನ್ನು ತೋರಿಸುತ್ತಿದೆ. Source link

Read More

‘ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ’: ಗೃಹ ಸಚಿವ ಪರಮೇಶ್ವರ್

ಬೆಂಗಳೂರು, ಏಪ್ರಿಲ್ 10: ಇತ್ತೀಚಿಗೆ ಬೆಂಗಳೂರಿನ ರಸ್ತೆಯೊಂದರಲ್ಲಿ ಓರ್ವ ವ್ಯಕ್ತಿ ಗಂಟೆಗಟ್ಟಲ್ಲೇ ನಿಂತಲ್ಲೇ ನಿಂತಿದ್ದ ವೀಡಿಯೋ ಭಾರಿ ವೈರಲ್ ಆಗಿತ್ತು. ಆತ ಝೋಂಬಿ ಡ್ರಗ್ ಸೇವನೆಯ ಎಫೆಕ್ಟ್​ನಿಂದಾಗಿ ಹೀಗೆ ವರ್ತಿಸಿದ್ದಾನೆ ಎಂದು ವೀಡಿಯೋ ವೈರಲ್ ಮಾಡಲಾಗಿತ್ತು. ಈ ಕುರಿತು ತನಿಖೆ ನಡೆಸಿದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್​ ಸಿಂಗ್, ಸುಳ್ಳು ಸುದ್ದಿ ಹರಡಲಾಗಿದೆ ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ ಪರಮೇಶ್ವರ್ ಕೂಡ ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ, ಇದು…

Read More

ಚಂಡಮಾರುತದಿಂದ ನಲುಗಿದ ಶ್ರೀಲಂಕಾಕ್ಕೆ 4,000 ಕೋಟಿ ರೂ. ಆರ್ಥಿಕ ಪ್ಯಾಕೇಜ್ ಘೋಷಿಸಿದ ಭಾರತ – Kannada News | India Announces Rs 4000 Crore Reconstruction Package To Rebuild Sri Lanka as Cyclone Relief Package

ಕೊಲಂಬೊ, ಡಿಸೆಂಬರ್ 23: ಭಾರತದ ನೆರೆಹೊರೆ ಮೊದಲು ಮತ್ತು ಮಹಾಸಾಗರ್ ನೀತಿಗಳ ಅಡಿಯಲ್ಲಿ ಶ್ರೀಲಂಕಾಕ್ಕೆ (Sri Lanka) ಭಾರತ ಸಹಾಯಹಸ್ತ ಚಾಚಿದೆ. ದಿತ್ವಾ ಚಂಡಮಾರುತದಿಂದ ತತ್ತರಿಸಿರುವ ಶ್ರೀಲಂಕಾದ ಪುನರ್ಮಿರ್ಮಾಣಕ್ಕೆ ಭಾರತ 4 ಸಾವಿರ ಕೋಟಿ ರೂ. ಪರಿಹಾರ ಪ್ಯಾಕೇಜ್ ಘೋಷಿಸಿದೆ. ಈ ಬಗ್ಗೆ ಎಕ್ಸ್​​ನಲ್ಲಿ ಪೋಸ್ಟ್ ಮಾಡಿರುವ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ದಿತ್ವ ಚಂಡಮಾರುತದ ನಂತರ ದ್ವೀಪ ರಾಷ್ಟ್ರದಲ್ಲಿ ಬಿಕ್ಕಟ್ಟಿನ ಸಮಯದಲ್ಲಿ ಸಹಾಯ ಮಾಡಬೇಕಿರುವುದು ನಮ್ಮ ಕರ್ತವ್ಯ ಎಂದು ಹೇಳಿದ್ದಾರೆ. ಶ್ರೀಲಂಕಾ ದೇಶಕ್ಕೆ ಚಂಡಮಾರುತದಿಂದ…

Read More

ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್, ಹೇಳಿದ್ದೇನು? – Kannada News | Minister SS Mallikarjun Gives clarify about resign to ministerial post

ದಾವಣಗೆರೆ, (ಫೆಬ್ರವರಿ 16): ತೋಟಗಾರಿಕೆ, ಗಣಿ ಭೂವಿಜ್ಞಾನ ಇಲಾಖೆ ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿದ್ದವು. ಅವರ ತಂದೆ ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ಎಲ್ಲಾ ಜವಾಬ್ದಾರಿಗಳು ಪುತ್ರ ಎಸ್​ಎಸ್​ ಮಲ್ಲಿಕಾರ್ಜುನ ಅವರ ಹೆಗಲಿಗೆ ಬಿದ್ದಿದ್ದು, ಈ ಒತ್ತಡಗಳಲ್ಲಿ ಸಚಿವ ಸ್ಥಾನ ನಿಭಾಯಿಸಲು ಕಷ್ಟವಾಗುತ್ತಿದೆ ಎಂದು ಎಸ್​ಎಸ್​ ಮಲ್ಲಿಕಾರ್ಜುನ ಅವರು ರಾಜೀನಾಮೆ ನೀಡಲು ಮುಂದಾಗಿದ್ದರು. ಆದ್ರೆ, ಇದಕ್ಕೆ ಸಿದ್ದರಾಮಯ್ಯ, ಆಕ್ಷೇಪಿಸಿದ್ದು, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಡಿ. ಇಂತಹ…

Read More

AFMC Admission 2026: ವೈದ್ಯಕೀಯ ಶಿಕ್ಷಣದ ಜೊತೆಗೆ ದೇಶ ಸೇವೆಗೆ ಇಲ್ಲಿದೆ ಸುವರ್ಣ ಅವಕಾಶ – Kannada News | AFMC Pune: Become a Doctor and Officer in Indian Armed Forces, Secure MBBS Career Path

ನೀವು ವೈದ್ಯರಾಗಿ ಸಮಾಜ ಸೇವೆ ಮಾಡುವ ಜೊತೆಗೆ, ಭಾರತೀಯ ಸಶಸ್ತ್ರ ಪಡೆಗಳಲ್ಲಿ ಅಧಿಕಾರಿಯಾಗಿ ದೇಶ ಸೇವೆ ಮಾಡುವ ಕನಸು ಕಾಣುತ್ತಿದ್ದೀರಾ? ಹಾಗಿದ್ದಲ್ಲಿ, ಪುಣೆಯ ಸಶಸ್ತ್ರ ಪಡೆಗಳ ವೈದ್ಯಕೀಯ ಕಾಲೇಜು (AFMC) ನಿಮಗೆ ಅತ್ಯುತ್ತಮ ವೇದಿಕೆಯಾಗಿದೆ. ಇಲ್ಲಿನ ಶಿಕ್ಷಣವು ಕೇವಲ ಪದವಿಗೆ ಸೀಮಿತವಾಗಿರದೆ, ಶಿಸ್ತುಬದ್ಧ ಜೀವನ ಮತ್ತು ಉಜ್ವಲ ವೃತ್ತಿಜೀವನಕ್ಕೆ ದಾರಿಯಾಗಿದೆ. AFMC ಎಂದರೇನು? ಇದರ ಐತಿಹಾಸಿಕ ಹಿನ್ನೆಲೆ: ಮೇ 1, 1948 ರಂದು ಸ್ಥಾಪನೆಯಾದ AFMC (Armed Forces Medical College) ದೇಶದ ಅತ್ಯಂತ ಪ್ರತಿಷ್ಠಿತ ವೈದ್ಯಕೀಯ…

Read More

ನೊಯ್ಡಾ ಟೆಕ್ಕಿ ಸಾವಿನ ಬಗ್ಗೆ ಎಸ್​ಐಟಿ ತನಿಖೆಗೆ ಆದೇಶಿಸಿದ ಸಿಎಂ ಯೋಗಿ ಆದಿತ್ಯನಾಥ್ – Kannada News | Uttar Pradesh CM Yogi Adityanath Orders SIT Probe Into Noida Techie Death Noida CEO Removed

ನೊಯ್ಡಾ, ಡಿಸೆಂಬರ್ 19: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (CM Yogi Adityanath) ಅವರು ನೊಯ್ಡಾ ಟೆಕ್ಕಿಯ ಸಾವಿನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಮುಖ್ಯಮಂತ್ರಿಯವರ ಸೂಚನೆಯ ಮೇರೆಗೆ ಈ ವಿಷಯದ ತನಿಖೆಗಾಗಿ ಮೂವರು ಸದಸ್ಯರ ವಿಶೇಷ ತನಿಖಾ ತಂಡ (SIT) ರಚಿಸಲಾಗಿದೆ. ಮೀರತ್ ವಿಭಾಗೀಯ ಆಯುಕ್ತರು ಈ SIT ನೇತೃತ್ವ ವಹಿಸಲಿದ್ದಾರೆ. ಮೀರತ್ ವಲಯದ ಹೆಚ್ಚುವರಿ ಮಹಾನಿರ್ದೇಶಕರು (ADG) ಮತ್ತು ಲೋಕೋಪಯೋಗಿ ಇಲಾಖೆಯ (PWD) ಮುಖ್ಯ…

Read More