ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ದರೋಡೆ ಭೇದಿಸಿದ ಪೊಲೀಸ್​: ದಿಢೀರ್ ಶ್ರೀಮಂತರಾಗಲು ಹೋಗಿ ಜೈಲು ಪಾಲು – Kannada News | Bangaluru: Madanayakanahalli Police Crack Ramdev Jewelers Robbery; 5 Arrested for Gunpoint Heist

ನೆಲಮಂಗಲ, ಫೆಬ್ರವರಿ 09: ಅದು ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ದರೋಡೆ (Robbery). ಗನ್ ಹಿಡಿದು ಚಿನ್ನಾಭರಣದ ಅಂಗಡಿಗೆ ನುಗಿದ್ದ ಗ್ಯಾಂಗ್ ಸಿಕ್ಕಸಿಕ್ಕ ಒಡವೆಗಳನ್ನ ದೋಚಿ ಪರಾರಿಯಾಗಿದ್ದರು. ಆರೋಪಿಗಳ ಬೆನ್ನತ್ತಿದ್ದ ಮಾದನಾಯಕನಹಳ್ಳಿ ಪೊಲೀಸರು ಘಟನೆ ನಡೆದ ಕೇವಲ ಏಳು ದಿನದಲ್ಲಿ ಹೆಡೆಮುರಿ ಕಟ್ಟಿದ್ದಾರೆ (Arrest).

ಬಂಧಿತರು

ಅನೂಪ್ ಸಿಂಗ್, ರವಿ, ಅಂಕಿತ್, ಅರುಣ್, ಅನೂಪ್ ರಾಮ್​​ ಬಂಧಿತರು. ಬಂಧಿತರೆಲ್ಲಾ ರಾಜಸ್ತಾನಿ ಮೂಲದವರು. ದರೋಡೆ ನಂತರ ರಾಜಸ್ಥಾನಕ್ಕೆ ತೆರಳಿದ ಆರೋಪಿಗಳನ್ನು ರಾಜಸ್ಥಾನದಲ್ಲಿ ಬಂಧಿಸಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರೆದ ದರೋಡೆ ಪ್ರಕರಣಗಳು: ಬೆಂಗಳೂರಿನಲ್ಲಿ ಗನ್​ ತೋರಿಸಿ ಬಂಗಾರದ ಅಂಗಡಿ ಲೂಟಿ

ಕಳೆದ ವಾರವಷ್ಟೇ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದಾಸಪುರದ ರಾಮ್ ದೇವ್ ಜ್ಯವೆಲರ್ಸ್​​ನಲ್ಲಿ ಈ ಭಯಾನಕ ದರೋಡೆ ನಡೆದಿತ್ತು. ದರೋಡೆಕೋರರು ಗನ್ ತೋರಿಸಿ 30 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಸದ್ಯ ಐವರು ಆರೋಪಿಗಳನ್ನ ಮಾದನಾಯಕನಹಳ್ಳಿ ಪೊಲಿಸರು ಬಂಧಿಸಿದ್ದಾರೆ.

ದರೋಡೆ ಪಕ್ಕಾ ಪ್ಲ್ಯಾನ್​​ 

ಇನ್ನು ಈ ಆರೋಪಿಗಳಲ್ಲಿ ಅಂಕಿತ್ ಮಾದನಾಯಕನಹಳ್ಳಿ ವಾಸವಿದ್ದ. ಕಚೋರಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ. ಎಷ್ಟು ದಿನ ಈ ರೀತಿ ಜೀವನ ಸಾಗಿಸುವುದು ಎಂದು ನಿರ್ಧರಿಸಿದ್ದ ಆತ ದರೋಡೆ ಪ್ಲ್ಯಾನ್​​ ಮಾಡಿದ್ದ. ಇತನಿಗೆ ರವಿ ಎಂಬಾತ ಸಾಥ್​ ನೀಡಿದ್ದ. ರವಿ ರಾಜಸ್ಥಾನದಲ್ಲಿದ್ದು, ಆತನ ಬಳಿ ಪಿಸ್ತೂಲ್ ಕೂಡ ಇತ್ತು. ಇದನ್ನೇ ಬಂಡವಾಳ‌ ಮಾಡಿಕೊಂಡಿದ್ದ ಆರೋಪಿಗಳು ದರೋಡೆ ಮಾಡಲು ಪ್ಲ್ಯಾನ್ ಮಾಡಿದ್ದರು.

ಪ್ಲ್ಯಾನ ಪ್ರಕಾರ ಜನವರಿ 27ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿರುವ ರಾಮ್ ದೇವ್ ಜ್ಯುವೆಲರ್ಸ್​​​ಗೆ ನುಗಿದ್ದ ದರೋಡೆಕೋರರು ಗನ್ ತೋರಿಸಿ ಜ್ಯುವೆಲ್ಲರಿ ಅಂಗಡಿಯಲ್ಲಿದ್ದ ಚಿನ್ನಾಭರಣಗಳನ್ನು ಕದ್ದು ಪರಾರಿ ಆಗಿದ್ದರು. ಖದೀಮರ ಕೈಚಳಕ ಸಿಸಿಟಿ ಟಿವಿಯಲ್ಲಿ ಸೆರೆ ಆಗಿತ್ತು. ಇನ್ನು ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಕೂಡ ಮಾಡಿದ್ದರು.

ಇದನ್ನೂ ಓದಿ: ಹುಣಸೂರು ಚಿನ್ನದಂಗಡಿ ದರೋಡೆ ಪ್ರಕರಣ: ಬಿಹಾರ ಮೂಲದ ಮೋಸ್ಟ್ ವಾಂಟೆಡ್ ಆರೋಪಿ ಪೊಲೀಸರ ಬಲೆಗೆ!

ಒಟ್ಟಿನಲ್ಲಿ ಆರೋಪಿಗಳ ಬೆನ್ನತ್ತಿದ್ದ ಮಾದನಾಯಕನಹಳ್ಳಿ ಪೊಲೀಸರು ಇದೀಗ ಎಲ್ಲರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಆರೋಪಿಗಳನ್ನ ಕಸ್ಟಡಿಗೆ ಪಡೆದಿರುವ ಮಾದನಾಯಕಹಳ್ಳಿ ಪೊಲಿಸರು ವಿಚಾರಣೆ ನಡೆಸಿದ್ದಾರೆ.

ವರದಿ: ಮಂಜುನಾಥ್ ಟಿವಿನೈನ್ ನೆಲಮಂಗಲ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 8:46 pm, Mon, 9 February 26

Source link

ಐಟಿ ಸೆಕ್ಟರ್​ಗೆ ಆಂಥ್ರೋಪಿಕ್ ಶಾಕ್; ಇದರ ಹಿಂದಿರುವ ಬ್ರೇನ್ ಬೆಂಗಳೂರು ಮೂಲದ ವ್ಯಕ್ತಿಯದ್ದು – Kannada News | Man from Bangalore behind Anthropic’s new AI product that effected the fall of Indian IT stocks

ಬೆಂಗಳೂರು, ಫೆಬ್ರುವರಿ 9: ಭಾರತದ ಷೇರು ಮಾರುಕಟ್ಟೆಯಲ್ಲಿ (Stock Market) ಐಟಿ ಸೆಕ್ಟರ್​ನ ವಿವಿಧ ಸ್ಟಾಕ್​ಗಳು ಕಳೆದ ಕೆಲ ದಿನಗಳಿಂದ ಬಹಳ ಹಿನ್ನಡೆ ಕಾಣುತ್ತಿವೆ. ನಿಫ್ಟಿ ಐಟಿ ಇಂಡೆಕ್ಸ್ ಇವತ್ತು ಸೋಮವಾರ ಪಾಸಿಟಿವ್ ಆಗಿದ್ದರೂ ಕಳೆದ ವಾರದಿಂದ ಶೇ. 7ಕ್ಕಿಂತಲೂ ಹೆಚ್ಚಿನ ಕುಸಿತ ಕಂಡಿದೆ. ಐಟಿ ಸ್ಟಾಕ್​ಗಳ ಮೇಲೆ ಹೂಡಿಕೆ ಮಾಡಿದ್ದವರಿಗೆ ಬರೋಬ್ಬರಿ ಎರಡೂವರೆ ಟ್ರಿಲಿಯನ್ ರುಪಾಯಿಗಳಷ್ಟು ನಷ್ಟ ಆಗಿದೆ.

ಐಟಿ ಸ್ಟಾಕ್​ಗಳು ನಿರ್ದಿಷ್ಟವಾಗಿ ಕುಸಿಯಲು ಕಾರಣಗಳಿಲ್ಲದಿಲ್ಲ. ಎಐ ಟೆಕ್ನಾಲಜಿಯೇ ಈಗ ಭಾರತದ ಐಟಿ ಸೇವೆಗಳಿಗೆ ಮುಳುವಾಗುವಂತಿದೆ. ಇತ್ತೀಚೆಗೆ ಆದ ಎರಡು ಬೆಳವಣಿಗೆಗಳು ಐಟಿ ಸೆಕ್ಟರ್ ಬಗ್ಗೆ ಹೂಡಿಕೆದಾರರು ತಲೆ ಕೆರೆದುಕೊಳ್ಳುವಂತೆ ಮಾಡಿವೆ. ಒಂದು, ಆಂಥ್ರೋಪಿಕ್ ಎನ್ನುವ ಕಂಪನಿಯು ಹೊಸ ಆಟೊಮೇಶನ್ ಟೂಲ್​ಗಳನ್ನು ರೂಪಿಸಿದೆ. ಮತ್ತೊಂದು, ಪಲಂಟಿರ್ ಕಂಪನಿಯು ಎಸ್​ಎಪಿ ಅಳವಡಿಕೆಯನ್ನು ಬಹಳ ತ್ವರಿತವಾಗಿ ಮಾಡಬಲ್ಲ ಎಐ ಪ್ಲಾಟ್​ಫಾರ್ಮ್ ಅನ್ನು ಬಿಡುಗಡೆ ಮಾಡಿದೆ.

ಈ ಎರಡು ಬೆಳವಣಿಗೆಗಳು ಐಟಿ ಸರ್ವಿಸ್ ಉದ್ಯಮವನ್ನೇ ತಲ್ಲಣಗೊಳಿಸಿವೆ. ಹೆಚ್ಚಿನ ಐಟಿ ಪ್ರಾಜೆಕ್ಟ್​ಗಳಿಗೆ ಸಂಬಂಧ ಪಟ್ಟ ಬೆಳವಣಿಗೆಯೇ ಇದು. ಹೀಗಾಗಿ, ಐಟಿ ಸೆಕ್ಟರ್​ಗೆ ಷೇರು ಮಾರುಕಟ್ಟೆಯಲ್ಲಿ ಹಿನ್ನಡೆಯಾಗತೊಡಗಿದೆ.

ಇದನ್ನೂ ಓದಿ: ಚಿನ್ನದ ಮೇಲೆ ಯಾವತ್ತೂ ಹೂಡಿಕೆ ಮಾಡಲ್ಲ…! ವಿಶ್ವದ ಅತಿ ಚಾಣಾಕ್ಷ್ಯ ಹೂಡಿಕೆದಾರನ ನಿರ್ಧಾರ

ಆಂಥ್ರೋಪಿಕ್ ಹಿಂದಿನ ರೂವಾರಿ ಬೆಂಗಳೂರು ವ್ಯಕ್ತಿ ರಾಹುಲ್ ಪಾಟೀಲ್

ಎಐ ಸ್ಟಾರ್ಟಪ್ ಆದ ಆಂಥ್ರೋಪಿಕ್ ಇದೀಗ ಹೊಸ ಕ್ಲಾಡ್ ಎಐ ಆವೃತ್ತಿ ಬಿಡುಗಡೆ ಮಾಡಿದೆ. ಎಐ ಏಜೆಮಂಟ್ ಆದ ಇದು ಬೆಕ್ಕಸ ಬೆರಗಾಗುವಂತಹ ಕೆಲಸಗಳನ್ನು ನಿರ್ವಹಿಸಬಲ್ಲುದು. ಯಾವುದೇ ಉದ್ಯಮವಾದರೂ, ಲೀಗಲ್ ಕಾಂಟ್ರಾಕ್ಟ್ ಅನ್ನು ಪರಾಮರ್ಶಿಸುವುದರಿಂದ ಹಿಡಿದು ಕೋಡ್ ಮ್ಯಾನೇಜ್ ಮಾಡುವುದು, ಡಾಕ್ಯುಮೆಂಟ್ ನಿರ್ವಹಿಸುವುವರೆಗೂ ಮನುಷ್ಯರ ನೆರವಿಲ್ಲದೇ ಪೂರ್ಣ ವರ್ಕ್​ಫ್ಲೋಗಳನ್ನು ನಿರ್ವಹಿಸಬಲ್ಲುದು.

ಆಂಥ್ರೋಪಿಕ್​ನ ಈ ಅದ್ಬುತ ಎಐ ಕೋವರ್ಕರ್ ಅಥವಾ ಎಐ ಏಜೆಂಟ್​ನ ಅಭಿವೃದ್ಧಿ ಹಿಂದೆ ರಾಹುಲ್ ಪಾಟೀಲ್ ಇದ್ದಾರೆ. 2025ರ ಅಕ್ಟೋಬರ್ ತಿಂಗಳಲ್ಲಷ್ಟೇ ರಾಹುಲ್ ಪಾಟೀಲ್ ಅವರು ಆಂಥ್ರೋಪಿಕ್​ಗೆ ಸಿಟಿಓ ಆಗಿ ನೇಮಕವಾಗಿದ್ದರು. ಬೆಂಗಳೂರಿನ ಪಿಇಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಓದಿದ ಪಾಟಲ್ ಅವರು ಅಮೆರಿಕದಲ್ಲಿ ಉನ್ನತ ವ್ಯಾಸಂಗ ಮಾಡಿದ್ದಾರೆ. ಮೈಕ್ರೋಸಾಫ್ಟ್, ಓರೇಕಲ್, ಅಮೇಜಾನ್ ಕೈನೆಸಿಸ್, ಸ್ಟ್ರೈಪ್ ಸಂಸ್ಥೆಗಳಲ್ಲಿ ಕೆಲಸ ಮಾಡಿ ನಂತರ ಆಂಥ್ರೋಪಿಕ್​ಗೆ ಸಿಟಿಒ ಆಗಿ ಸೇರಿದ್ದಾರೆ. ಬಹಳ ಕ್ಷಿಪ್ರಗತಿಯಲ್ಲಿ ಕ್ಲಾಡ್ ಎಐನ ಹೊಸ ಆವೃತ್ತಿಯನ್ನು ಅಭಿವೃದ್ಧಿಪಡಿಸಲು ಯಶಸ್ವಿಯಾಗಿದ್ದಾರೆ. ಇದರೊಂದಿಗೆ, ಅನೇಕ ಐಟಿ ಸರ್ವಿಸ್ ಕಂಪನಿಗಳ ಬ್ಯುಸಿನೆಸ್​ಗೆ ಖೋತಾ ಆಗುವಂತೆ ಮಾಡಿದ್​ದಾರೆ.

ಇದನ್ನೂ ಓದಿ: ಹಣಕಾಸು ಸಂಕಷ್ಟ ಬರಬಾರದೆಂದಿದ್ದರೆ ಈ ಮನಿ ಸೀಕ್ರೆಟ್ಸ್ ತಿಳಿದಿರಿ…

ಪಲಂಟಿರ್​ನ ಎಐ ಪ್ರಾಡಕ್ಟ್ ಬಲು ಉಪಯುಕ್ತ

ಪಲಂಟಿರ್ ಸಂಸ್ಥೆಯು ಅಭಿವೃದ್ಧಿಪಡಿಸಿರುವ ಎಐ ಟೂಲ್ ಉದ್ಯಮ ವಲಯದ ಗಮನ ಸೆಳೆದಿದೆ. ಕಂಪನಿಗಳಿಗೆ ಎಸ್​ಎಪಿ ಮೈಗ್ರೇಶನ್ ಮಾಡಲು ಸಾಮಾನ್ಯವಾಗಿ ಕೆಲ ವರ್ಷಗಳೇ ಆಗುತ್ತವೆ. ಆದರೆ, ಪಲಂಟಿರ್​ನ ಎಐ ಟೂಲ್​ನಿಂದ ಎಸ್​ಎಪಿ ಮೈಗ್ರೇಶನ್ ಅನ್ನು ಕೆಲವೇ ವಾರಗಳಲ್ಲಿ ಮಾಡಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Teddy Day 2026 Date: ಟೆಡ್ಡಿ ಡೇ ವ್ಯಾಲೆಂಟೈನ್‌ ವೀಕ್‌ನ ಭಾಗವಾಗಿದ್ದು ಹೇಗೆ? ಈ ದಿನದ ಹಿನ್ನೆಲೆಯ ಬಗ್ಗೆ ತಿಳಿಯಿರಿ – Kannada News | Valentine’s Week 2026: Know about the history and significance of Teddy Day

ಪ್ರತಿ ವರ್ಷ ಫೆಬ್ರವರಿ 10 ರಂದು ಅಂದರೆ ವ್ಯಾಲೆಂಟೈನ್‌ ವೀಕ್‌ನ ನಾಲ್ಕನೇ ದಿನದಂದು ಟೆಡ್ಡಿ ಡೇ (Teddy Day) ಆಚರಿಸಲಾಗುತ್ತದೆ. ಈ ದಿನವು ಪ್ರೀತಿ ಮತ್ತು ವಾತ್ಸಲ್ಯವನ್ನು ವ್ಯಕ್ತಪಡಿಸಲಿರುವ ಒಂದು ವಿಶೇಷ ಸಂದರ್ಭವಾಗಿದೆ, ಟೆಡ್ಡಿ ಬೇರ್‌ಗಳು ಮುದ್ದಾದ ಉಡುಗೊರೆ ಮಾತ್ರವಲ್ಲ, ಭಾವನೆಗಳು ಮತ್ತು ಭಾವನೆಗಳ ಸಂಕೇತವೂ ಆಗಿದೆ. ಹಾಗಾಗಿ ಹೆಚ್ಚಿನವರು ತಮ್ಮ ನೆಚ್ಚಿನ ವ್ಯಕ್ತಿಗೆ ಈ ದಿನದಂದು ಟೆಡ್ಡಿ ಬೇರ್ ಅನ್ನು ಉಡುಗೊರೆಯಾಗಿ ನೀಡುವ ಮೂಲಕ ತಮ್ಮ ಪ್ರೀತಿ ಮತ್ತು ವಾತ್ಸಲ್ಯವನ್ನು ವ್ಯಕ್ತಪಡಿಸುತ್ತಾರೆ. ಅಷ್ಟಕ್ಕೂ ವ್ಯಾಲೆಂಟೈನ್‌ ವೀಕ್‌ನಲ್ಲಿ ಟೆಡ್ಡಿ ಡೇ ಆಚರಿಸುವುದೇಕೆ? ಈ ವಿಶೇಷ ದಿನದ ಹಿನ್ನೆಲೆಯೇನು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿದುಕೊಳ್ಳಿ.

ಟೆಡ್ಡಿ ಡೇ ಏಕೆ ಆಚರಿಸಲಾಗುತ್ತದೆ?

ಟೆಡ್ಡಿ ಬೇರ್‌ಗಳು ಪ್ರೀತಿ, ವಾತ್ಸಲ್ಯ ಮತ್ತು ಬಾಲ್ಯದ ಮುಗ್ಧತೆಯನ್ನು ಪ್ರತಿನಿಧಿಸುವಂತ ಒಂದು ಸಾಫ್ಟ್‌ ಟಾಯ್‌ ಅಂತಾನೇ ಹೇಳಬಹುದು. ಇದು ಒತ್ತಡವನ್ನು ಕಡಿಮೆ ಮಾಡಲು, ಸಂತೋಷವನ್ನು ಹೆಚ್ಚಿಸಲು ಮತ್ತು ಸಂಬಂಧಗಳನ್ನು ಬಲಪಡಿಸುವ ಕೆಲಸ ಮಾಡುತ್ತದೆ. ದಂಪತಿಗಳು ಮತ್ತು ಪ್ರೇಮಿಗಳು ಟೆಡ್ಡಿಯನ್ನು ಪ್ರೀತಿ ಮತ್ತು ಕಾಳಜಿಯ ಸಂಕೇತವೆಂದು ಪರಿಗಣಿಸುತ್ತಾರೆ. ಅದಕ್ಕಾಗಿಯೇ ವಿಶೇಷವಾಗಿ ಪ್ರೇಮಿಗಳು ಟೆಡ್ಡಿಗಳನ್ನು ಉಡುಗೊರೆಯಾಗಿ ನೀಡುವ ಮೂಲಕ ತಮ್ಮ ಭಾವನೆಗಳನ್ನು ವ್ಯಕ್ತಪಡಿಸುತ್ತಾರೆ.

ಟೆಡ್ಡಿ ಡೇ ಇತಿಹಾಸವೇನು?

ನವೆಂಬರ್ 14, 1902 ರಂದು, ಅಮೆರಿಕದ ಅಧ್ಯಕ್ಷರಾಗಿದ್ದ ಥಿಯೋಡರ್ ರೂಸ್ವೆಲ್ಟ್, ಮಿಸ್ಸಿಸ್ಸಿಪ್ಪಿಯ ಕಾಡಿಗೆ ಬೇಟೆಯಾಡಲು ಹೋಗಿದ್ದರು. ಅವರೊಂದಿಗೆ ಸಹಾಯಕ ಹೋಲ್ಟ್ ಕೊಲಿಯರ್ ಕೂಡಾ ಇದ್ರು. ಇಲ್ಲಿ ಕೊಲಿಯರ್ ಗಾಯಗೊಂಡ ಕರಡಿಯೊಂದನ್ನು ಹಿಡಿದು ಮರಕ್ಕೆ ಕಟ್ಟಿ, ನಂತರ ಅವರು ಕರಡಿಗೆ ಗುಂಡು ಹಾರಿಸಲು ರಾಷ್ಟ್ರಪತಿಗಳಿಂದ ಅನುಮತಿ ಕೋರಿದರು. ಆದರೆ ಗಾಯಗೊಂಡ ಕರಡಿಯನ್ನು ನೋಡಿದಾಗ ಅಧ್ಯಕ್ಷ ರೂಸ್ವೆಲ್ಟ್ ಅವರ ಹೃದಯ ಕರಗಿ, ಕರಡಿಯನ್ನು ಕೊಲ್ಲಲು ನಿರಾಕರಿಸಿದರು. ನಂತರ ನವೆಂಬರ್ 16 ರಂದು, ದಿ ವಾಷಿಂಗ್ಟನ್ ಪೋಸ್ಟ್‌ನ ವ್ಯಂಗ್ಯಚಿತ್ರಕಾರ ಕ್ಲಿಫರ್ಡ್ ಕೆ ಬೆರ್ರಿಮನ್ ಅವರು ನಡೆದ ಈ ಘಟನೆಯನ್ನು ಆಧರಿಸಿ ವ್ಯಂಗ್ಯಚಿತ್ರವನ್ನು ರಚಿಸಿದರು.

ಆಟಿಕೆ ತಯಾರಿಕಾ ಉದ್ಯಮಿ ಮಾರಿಸ್ ಮಿಚ್ಟಮ್ ಪತ್ರಿಕೆಯಲ್ಲಿ ಈ ವ್ಯಂಗ್ಯ ಚಿತ್ರವನ್ನು ನೋಡಿ ಕರಡಿ ಮರಿಯ ಆಕಾರದ ಆಟಿಕೆ ಮಾಡುವ ಬಗ್ಗೆ ಯೋಚಿಸಿದರು. ಅವರು ಅದನ್ನು ತಮ್ಮ ಪತ್ನಿ ರೋಸ್ ಅವರೊಂದಿಗೆ ವಿನ್ಯಾಸಗೊಳಿಸಿದರು ಮತ್ತು ಆ ಆಟಿಕೆಗೆ ‘ಟೆಡ್ಡಿ ಬೇರ್‌ʼ ಎಂದು ಹೆಸರಿಟ್ಟರು. ಟೆಡ್ಡಿ ಎಂಬ ಹೆಸರು ಇಡಲು ಕಾರಣವೆಂದರೆ ಅಧ್ಯಕ್ಷ ರೂಸ್ವೆಲ್ಟ್ ಅವರ ಅಡ್ಡ ಹೆಸರು ಟೆಡ್ಡಿ, ಆ ಆಟಿಕೆಗೆ ಟೆಡ್ಡಿ ಎಂಬ ಹೆಸರಿಡುವ ಮೂಲಕ ಆಟಿಕೆಯನ್ನು ಅಧ್ಯಕ್ಷ ರೂಸ್ವೆಲ್ಟ್ ಅವರಿಗೆ ಸಮರ್ಪಿಸಿದರು. ನಂತರ ಅದು ಬಹಳ ಜನಪ್ರಿಯವಾಯಿತು. ಅದಲ್ಲದೆ ಟೆಡ್ಡಿ ಬೇರ್ ಪ್ರೀತಿಯ ಸಂಕೇತವಾಯಿತು ಮತ್ತು ವ್ಯಾಲೆಂಟೈನ್‌ ವೀಕ್‌ನ ನಾಲ್ಕನೇ ದಿನನವಾದ ಫೆಬ್ರವರಿ 10 ರಂದು ಟೆಡ್ಡಿ ಡೇ ಆಚರಿಸಲು ಪ್ರಾರಂಭಿಸಲಾಯಿತು.

ಇದನ್ನೂ ಓದಿ: ವ್ಯಾಲೆಂಟೈನ್‌ ವೀಕ್‌ನಲ್ಲಿ ಚಾಕೊಲೇಟ್ ಡೇ ಆಚರಿಸುವುದೇಕೆ? ಇದರ ಹಿಂದೆಯೂ ಇದೆ ಕಾರಣ

 ಟೆಡ್ಡಿ ಡೇ ಮಹತ್ವವೇನು?

  • ಪ್ರೇಮಿಗಳ ದಿನಕ್ಕೆ ನಾಲ್ಕು ದಿನಗಳ ಮೊದಲು ಆಚರಿಸಲಾಗುವ ಟೆಡ್ಡಿ ಡೇ ನಿಮ್ಮ ಪ್ರೇಮಿಯ ಮುಖದಲ್ಲಿ ನಗು ತರಿಸಲು ಸೂಕ್ತವಾದ ದಿನವಾಗಿದೆ. ಈ ದಿನವನ್ನು ಮುದ್ದಾದ ಟೆಡ್ಡಿಯನ್ನು ಉಡುಗೊರೆಯಾಗಿ ನೀಡುವ ಮೂಲಕ ಆಚರಿಸಲಾಗುತ್ತದೆ, ಇದು ಇಬ್ಬರು ವ್ಯಕ್ತಿಗಳ ನಡುವಿನ ಪ್ರೀತಿ ಸಂಬಂಧವನ್ನು ಸಂಕೇತಿಸುತ್ತದೆ.
  • ಪ್ರೀತಿ ಮತ್ತು ವಾತ್ಸಲ್ಯವನ್ನು ವ್ಯಕ್ತಪಡಿಸಲು ಟೆಡ್ಡಿ ಡೇ ಆಚರಿಸಲಾಗುತ್ತದೆ. ಟೆಡ್ಡಿ ಡೇಯಂದು ದಂಪತಿಗಳು, ಪ್ರೇಮಿಗಳು ಕ್ಯೂಟ್‌ ಟೆಡ್ಡಿ ಬೇರ್‌ಗಳನ್ನು ಉಡುಗೊರೆಯಾಗಿ ನೀಡುವ ಮೂಲಕ ತಮ್ಮ ಭಾವನೆಗಳನ್ನು ಪರಸ್ಪರ ವ್ಯಕ್ತಪಡಿಸುತ್ತಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:06 pm, Mon, 9 February 26

Source link

ನಮ್ಮ ಮೆಟ್ರೋ : ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್ – Kannada News | Kannada activist vatal nagaraj deadline March 7th to BMRCL

ಬೆಂಗಳೂರು, (ಫೆಬ್ರವರಿ 09): ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಬಗ್ಗೆ ಇಂದು (ಫೆಬ್​ರವರಿ 09) ಬೆಂಗಳೂರಿನ ಡಾ. ಬಿಆರ್ ಅಂಬೇಡ್ಕರ್ ಮೆಟ್ರೋ ನಿಲ್ದಾಣದಲ್ಲಿ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿತ್ತು. ಮೆಟ್ರೋ ದರ ಏರಿಕೆ ಮಾಡಿ ಪ್ರಾಯಾಣಿಕರ ಹೊರೆಯನ್ನ ಹೆಚ್ಚು ಮಾಡಿ ಕನ್ನಡಿಗರನ್ನ ಕೆರಳುವಂತೆ ಮಾಡಿದೆ. ಈ ಕೂಡಲೇ ಮೆಟ್ರೋ ದರ ಏರಿಕೆಯನ್ನು ಹಿಂಪಡೆಯಬೇಕು,ಕನ್ನಡ ನಾಮಫಲಕವನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು. ಇಲ್ಲವಾದರೆ ನಾವು ಬೀದಿಗೆ ಇಳಿಯುತ್ತೇವೆ. ಮಾರ್ಚ್ 7ರವರೆಗೆ ನಿಮ್ಗೆ ಅವಾಕಶ ಕೊಡುತ್ತೇವೆ. ಒಪ್ಪದೆ ಹೋದ್ರೆ ಅವತ್ತು ಇಡೀ ಬೆಂಗಳೂರಲ್ಲಿ ಸಂಪೂರ್ಣವಾಗಿ ಮೆಟ್ರೋ ನಿಲ್ಲಿಸುತ್ತೇವೆ. ಜೊತೆಗೆ ಸಾರ್ವಜನಿಕರಿಗೂ ಕೂಡ ಮೆಟ್ರೋ ಹತ್ತೋಕೆ ಬಿಡಲ್ಲ ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ – Kannada News | Do Not call me a hero I am just an artist Says Gilli Nata In Super Hit Movie Event

ಬಿಗ್ ಬಾಸ್ ಖ್ಯಾತಿಯ ಗಿಲ್ಲಿ ನಟ ಅವರು ‘ಸೂಪರ್ ಹಿಟ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿಗೆ ಅವರು ಕೂಡ ಆಗಮಿಸಿದ್ದರು. ಅವರು ಕೂಡ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ, ನಾಯಕ ನಟ ಎಂದು ಅವರನ್ನು ಕರೆಯಲಾಯಿತು. ‘ದಯವಿಟ್ಟು ನಾಯಕ ನಟ ಎಂದು ಕರೀಬೇಡಿ ಭಯ ಆಗುತ್ತದೆ. ನಾನು ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರ ಮಾಡಿದ್ದೇನೆ ಅಷ್ಟೇ’ ಎಂದು ಗಿಲ್ಲಿ ನಟ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ತಮ್ಮದೇ ಸಿನಿಮಾ ಪ್ರಚಾರಕ್ಕೆ ಗಿಲ್ಲಿ ನಟ ಯಾಕೆ ಹೋಗಿಲ್ಲ? ಕೊನೆಗೂ ಸಿಕ್ತು ಉತ್ತರ – Kannada News | Gilli Nata reaction to Sarkari Shale H8 movie complaint against him in KFCC

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಿಂದ ಗಿಲ್ಲಿ ನಟ ಪಡೆದ ಜನಪ್ರಿಯತೆ ಅಪಾರ. ಆ ರಿಯಾಲಿಟಿ ಶೋಗೆ ಹೋಗುವುದಕ್ಕೂ ಮುನ್ನವೇ ಗಿಲ್ಲಿ ಅವರು ಕೆಲವು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಈಗ ಆ ಸಿನಿಮಾಗಳ ಬಗ್ಗೆ ಟಾಕ್ ಶುರು ಆಗಿದೆ. ಗಿಲ್ಲಿ ನಟ (Gilli Nata) ಅಭಿನಯದ ‘ಸರ್ಕಾರಿ ಶಾಲೆ ಹೆಚ್​8’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಆ ಚಿತ್ರದಲ್ಲಿ ಗಿಲ್ಲಿ ಅವರಿಗೆ ಒಂದು ಪಾತ್ರವಿದೆ. ಆದರೆ ಸಿನಿಮಾದ ಪ್ರಚಾರಕ್ಕೆ ಗಿಲ್ಲಿ ನಟ ಬಂದಿಲ್ಲ ಎಂದು ಚಿತ್ರತಂಡ ಗರಂ ಆಗಿದೆ. ಕರ್ನಾಟಕ ಚಲನಚಿತ್​ರ ವಾಣಿಜ್ಯ ಮಂಡಳಿಗೆ ದೂರು ಕೂಡ ನೀಡಲಾಗಿದೆ. ಆ ಬಗ್ಗೆ ಗಿಲ್ಲಿ ನಟ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಗಿಲ್ಲಿ ನಟ ಪ್ರಮುಖ ಪಾತ್ರ ಮಾಡಿರುವ ‘ಸೂಪರ್ ಹಿಟ್’ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಆ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಗಿಲ್ಲಿ ಅವರಿಗೆ ಹಲವು ಪ್ರಶ್ನೆ ಎದುರಾಯಿತು. ‘ಸರ್ಕಾರಿ ಶಾಲೆ ಹೆಚ್​8’ ಚಿತ್ರದ ಪ್ರಚಾರಕ್ಕೆ ಯಾಕೆ ಹೋಗಿಲ್ಲ ಎಂಬ ಪ್ರಶ್ನೆಗೆ ಅವರು ಉತ್ತರ ನೀಡಿದರು.

‘ಸರ್ಕಾರಿ ಶಾಲೆ ಹೆಚ್​8 ಸಿನಿಮಾ ಮಾಡಿ ನನ್ನ ಪ್ರಕಾರ 2ರಿಂದ ಎರಡೂವರೆ ವರ್ಷ ಆಗಿರಬಹುದು. ಅದರಲ್ಲಿ ನಟನೆ ಮಾಡಿದ್ದೇನೆ. ನಾನು ನನ್ನ ಬೈಟ್ಸ್ ಕಳಿಸಿದ್ದೇನೆ. ಹಾಗಿದ್ದರೂ ಕೂಡ ಅವರು ಯಾಕೆ ದೂರು ನೀಡಿದರೋ ಗೊತ್ತಿಲ್ಲ. ನನಗೂ ಒಂದಷ್ಟು ಕೆಲಸಗಳ ಒತ್ತಡ ಇತ್ತು. ನಾನು ಫೋನ್ ಎತ್ತಿಲ್ಲ ಎಂಬ ಕಾರಣಕ್ಕೆ ಪಾಪ ಅವರಿಗೆ ಆ ರೀತಿ ಆಗಿರಬಹುದು. ಅವರದ್ದು ತಪ್ಪಿಲ್ಲ’ ಎಂದು ಗಿಲ್ಲಿ ನಟ ಹೇಳಿದ್ದಾರೆ.’

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ತಮ್ಮ ವಿರುದ್ಧ ದೂರು ದಾಖಲಾಗಿದ್ದರೂ ಕೂಡ ಗಿಲ್ಲಿ ನಟ ಅವರು ‘ಸರ್ಕಾರಿ ಶಾಲೆ ಹೆಚ್8’ ಚಿತ್ರತಂಡವನ್ನು ಸಂಪರ್ಕಿಸಲಿಲ್ಲ. ‘ಬೇರೆ ಕೆಲಸಗಳಲ್ಲಿ ನಾನು ಒಂದಷ್ಟು ಬ್ಯುಸಿ ಆದೆ. ವಾಣಿಜ್ಯ ಮಂಡಳಿಗೆ ನಾನು ಉತ್ತರ ಕೊಡಬೇಕಿತ್ತು. ಅದನ್ನು ನೀಡಿದ್ದೇನೆ’ ಎಂದು ಗಿಲ್ಲಿ ನಟ ಅವರು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಮುಗಿದು ಇಷ್ಟು ದಿನವಾದ್ರೂ ಕಡಿಮೆ ಆಗಿಲ್ಲ ಗಿಲ್ಲಿ ನಟ ಹವಾ

ಗಿಲ್ಲಿ ನಟ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಅನೇಕರು ಫಿದಾ ಆಗಿದ್ದರು. ಹಲವು ಅಭಿಮಾನಿಗಳು ಗಿಲ್ಲಿಯ ಭಾವಚಿತ್ರವನ್ನು ಟ್ಯಾಟೂ ಹಾಕಿಸಿಕೊಂಡಿದ್ದರು. ಆ ಪೈಕಿ ಒಬ್ಬ ಅಭಿಮಾನಿಯನ್ನು ಭೇಟಿ ಆಗುವುದಾಗಿ ಗಿಲ್ಲಿ ಹೇಳಿದ್ದರು. ಆದರೆ ಬಿಗ್ ಬಾಸ್ ಮುಗಿದು ಇಷ್ಟು ದಿನ ಕಳೆದರೂ ಆ ಅಭಿಮಾನಿಯನ್ನು ಗಿಲ್ಲಿ ಭೇಟಿ ಆಗಿಲ್ಲ. ಅದಕ್ಕೂ ಅವರು ಸ್ಪಷ್ಟನೆ ನೀಡಿದ್ದಾರೆ. ‘ವಾಹಿನಿ ಕಡೆಯಿಂದ ಅವರೆಲ್ಲರನ್ನೂ ಕರೆಸಲು ಪ್ಲ್ಯಾನ್ ಆಗಿತ್ತು. ಆ ಅಭಿಮಾನಿಗೂ ಕರೆ ಮಾಡಲಾಗಿತ್ತು. ಆದರೆ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ. ಎಲ್ಲರನ್ನೂ ಭೇಟಿ ಆಗುತ್ತೇನೆ. ತಕ್ಷಣಕ್ಕೆ ಏನು ಮಾಡಬೇಕು ಎಂಬುದು ಗೊತ್ತಾಗುತ್ತಿಲ್ಲ’ ಎಂದಿದ್ದಾರೆ ಗಿಲ್ಲಿ ನಟ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 3:46 pm, Mon, 9 February 26

Source link

PSI ಬಳಿಕ ಆರ್ಮಿ ಪರೀಕ್ಷೆಯಲ್ಲೂ ಕಳ್ಳಾಟ: ಎಲೆಕ್ಟ್ರಾನಿಕ್ ಡಿವೈಸ್​​ ಪತ್ತೆ – Kannada News | Army Group C Exam Cheating: 18 Candidates inquiry by Bengaluru Halasuru Police Probe

ಬೆಂಗಳೂರು, ಫೆಬ್ರವರಿ 09: ಆರ್ಮಿ ಗ್ರೂಪ್ ಸಿ ಹುದ್ದೆ ಪರೀಕ್ಷೆ (Army Group C exam) ವೇಳೆ ಕಳ್ಳಾಟ ಆರೋಪ ಹಿನ್ನೆಲೆ 18 ಪರೀಕ್ಷಾರ್ಥಿಗಳನ್ನು (examinee) ಕರೆತಂದ ಬೆಂಗಳೂರಿನ ಹಲಸೂರು ಠಾಣಾ ಪೊಲೀಸರು ವಿಚಾರಣೆ ಮಾಡಿದ್ದಾರೆ. ಫೆಬ್ರವರಿ 08ರಂದು ಹಲಸೂರು ಠಾಣಾ ವ್ಯಾಪ್ತಿಯಲ್ಲಿ ಪರೀಕ್ಷೆ ನಡೆದಿತ್ತು. ಈ ವೇಳೆ ಮೊಬೈಲ್, ಎಲೆಕ್ಟ್ರಿಕ್ ಡಿವೈಸ್ ಬಳಸಿ ನಕಲು ಮಾಡಿರುವ ಆರೋಪ ಕೇಳಿಬಂದಿದೆ. ಮೂರು ಮೊಬೈಲ್ ಹಾಗೂ ಎಲೆಕ್ಟ್ರಿಕ್ ಡಿವೈಸ್​​ ಜಪ್ತಿ ಮಾಡಲಾಗಿದೆ. ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪರೀಕ್ಷಾ ಆವರಣದಲ್ಲಿ ಎಲೆಕ್ಟ್ರಾನಿಕ್ ಡಿವೈಸ್​ಗಳು ಪತ್ತೆ

ಸುರೇಂಧರ್​, ಸಂದೀಪ್ ಬಿನ್ ರಾಜೇಶ್, ಮೊಂಟಿ, ಅಜಯ್ ಕುಮಾರ್ , ಅನುಜ್, ರಾಹುಲ್ ರಾಜೇಂದ್ರ, ಸುಮೀತ್, ಅಮನ್, ಅಂಕಿತ್, ಯೋಗೇಶ್, ವಿಕಾಸ್, ಅಂಕಿತ್, ಅಮನ್ ರೇದು, ರಜತ್, ವಿನಯ್, ಅಂಕಿತ್,
ಅಮನ್ ಕುಮಾರ್ ನಕಲು ಮಾಡಿದ ಪರೀಕ್ಷಾರ್ಥಿಗಳು ಎನ್ನಲಾಗುತ್ತಿದೆ.

ಇದನ್ನೂ ಓದಿ: ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ 139 ಬೋಧಕ ಹುದ್ದೆಗಳು; ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳಿಗೆ ಶೇ. 75ರಷ್ಟು ಮೀಸಲಾತಿ

ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿ ಪರೀಕ್ಷೆ ಬರೆದಿರುವುದು ಪತ್ತೆ ಆಗಿದೆ. ಪರೀಕ್ಷಾ ಆವರಣದಲ್ಲಿ ಎಲೆಕ್ಟ್ರಾನಿಕ್ ಡಿವೈಸ್​ಗಳು ಪತ್ತೆ ಆಗಿವೆ. ಅಲ್ಲದೇ ಅಮನ್ ಮತ್ತು ರಜತ್ ಬ್ಯಾಗ್​​ಗಳಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳು ಪತ್ತೆ ಆಗಿವೆ.

ಎಫ್ಐಆರ್​ ದಾಖಲು

ಸದ್ಯ ಕರ್ನಲ್ ಮತ್ತು ಸೆಕ್ಯೂರಿಟಿ ಆಫೀಸರ್​​ ಫಾರ್​​ ಕಮಾಂಡೆಂಟ್ ಮತ್ತು ವ್ಯವಸ್ಥಾಪಕ ನಿರ್ದೇಶಕ ಜ್ಯೋತಿರ್ಲಿಂಗಮ್​​ ಎಂಬುವವರು ನೀಡಿದ ದೂರಿನ ಮೇರೆಗೆ ಎಫ್ಐಆರ್​ ದಾಖಲಾಗಿದೆ. ಹಲಸೂರಿನ 515 ಆರ್ಮಿ ಬೇಸ್ ವರ್ಕ್​​ಶಾಪ್​ನಲ್ಲಿ ಸಿವಿಲ್ ಡಿಫೆನ್ಸ್ ಎಂಪ್ಲಾಯಿ ರೆಕ್ರೂಟ್ಮೆಂಟ್​ನ ಗ್ರೂಪ್ ಸಿಯ ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗಳ ನೇರ ನೇಮಕಾತಿಗಾಗಿ ಫೆಬ್ರವರಿ 08ರಂದು ಲಿಖಿತ ಪರೀಕ್ಷೆ ನಡೆದಿತ್ತು.

ಇದನ್ನೂ ಓದಿ: Home Guard Recruitment 2026: ಶಿವಮೊಗ್ಗದಲ್ಲಿ ಗೃಹರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ;10th ಪಾಸಾಗಿದ್ರೆ ಸಾಕು!

ಬೆಳಗ್ಗೆ 10 ಗಂಟೆಯಿಂದ 12 ಗಂಟೆಗಳವರೆಗೆ ನಡೆದಿತ್ತು. ಪರೀಕ್ಷೆ ಸಮಯದಲ್ಲಿ ಒಟ್ಟು 18 ಜನ ಅಭ್ಯರ್ಥಿಗಳು ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿ ಪರೀಕ್ಷೆ ಬರೆದಿರುವುದು ಪತ್ತೆ ಆಗಿದೆ ಎನ್ನಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 7:54 pm, Mon, 9 February 26

Source link

ವಾರಾಣಸಿಯಲ್ಲಿ ಬುಲ್ಡೋಜರ್ ದಾಳಿ ಖಂಡಿಸಿ ತನ್ನ ಅಂಗಡಿಗೆ ತಾನೇ ಬೆಂಕಿ ಹಚ್ಚಿದ ವ್ಯಾಪಾರಿ – Kannada News | Man Sets his own Shop Ablaze Pours Petrol On Himself Amid Bulldozer Action begins In Varanasi

ವಾರಾಣಸಿ, ಫೆಬ್ರವರಿ 9: ಉತ್ತರ ಪ್ರದೇಶದ ವಾರಾಣಸಿಯ (Varanasi) ದಾಲ್ಮಂಡಿಯಲ್ಲಿ ರಸ್ತೆ ಅಗಲೀಕರಣಕ್ಕಾಗಿ ಸರ್ಕಾರ ಬುಲ್ಡೋಜರ್ ಬಳಸಿ ಮನೆಗಳನ್ನು ಕೆಡವಲು ಪ್ರಾರಂಭಿಸಿದೆ. ಇಂದು, ಪುರಸಭೆ ಗುರುತಿಸಿದ ಶಿಥಿಲಗೊಂಡ ಮನೆಗಳಲ್ಲಿ 21 ಮನೆಗಳನ್ನು ನೆಲಸಮ ಮಾಡಲಾಗಿದೆ. ಇದು ಒಂದೇ ದಿನದಲ್ಲಿ ದಾಲ್ಮಂಡಿಯಲ್ಲಿ ನಡೆದ ಅತಿದೊಡ್ಡ ಕಾರ್ಯಾಚರಣೆಯಾಗಿದೆ. ಇದನ್ನು ಖಂಡಿಸಿ ಸ್ಥಳೀಯ ಅಂಗಡಿಯವರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರು ಆಡಳಿತ ಅಧಿಕಾರಿಗಳಿಂದ 10 ದಿನಗಳ ಕಾಲಾವಕಾಶ ಕೋರುತ್ತಿದ್ದಾರೆ. ಆದರೂ ಅಧಿಕಾರಿಗಳು ಯಾರ ಮಾತನ್ನೂ ಕೇಳುತ್ತಿಲ್ಲ. ಹೀಗಾಗಿ, ಕಾರ್ಯಾಚರಣೆಯ ಸಮಯದಲ್ಲಿ ಅಂಗಡಿ ಮಾಲೀಕರೊಬ್ಬರು ತಮ್ಮ ಮೇಲೆ ಪೆಟ್ರೋಲ್ ಸುರಿದುಕೊಂಡು, ಮನೆಗೂ ಬೆಂಕಿ ಹಚ್ಚಿದ್ದಾರೆ. ತಮ್ಮ ಮೈಗೂ ಬೆಂಕಿ ಹಚ್ಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

ನಮ್ಮ ತಪ್ಪೇನು? ನೀವು ನಮ್ಮನ್ನು ಕೊಲ್ಲುತ್ತೀರಾ? ನೀವು ರಸ್ತೆ ಅಗಲೀಕರಣ ಮಾಡಲು ಬಯಸಿದರೆ ನೀವು ಜನರ ಜೀವನವನ್ನು ನಾಶ ಮಾಡುತ್ತೀರಾ? ಸರ್ಕಾರ ನಮ್ಮನ್ನು ನಾಶ ಮಾಡುತ್ತಿದೆ. ಅವರು ನಮ್ಮ ಜೀವನಕ್ಕೆ ಆಧಾರವಾಗಿದ್ದ ಅಂಗಡಿಯನ್ನೇ ಕಸಿದುಕೊಂಡಿದೆ. ನಮಗೆ ಸರ್ಕಾರ ಯಾವುದೇ ಸೂಚನೆ ನೀಡಿಲ್ಲ ಎಂದು ಆ ವ್ಯಾಪಾರಿ ಅಳುತ್ತಾ ಕಿರುಚಾಡಿದ್ದಾರೆ. ಜನರೆಲ್ಲ ಅವರನ್ನು ಕೆಳಗಿಳಿಯಲು ಎಷ್ಟೇ ಬೇಡಿಕೊಂಡರೂ ಅವರು ಕೆಳಗೆ ಇಳಿಯಲಿಲ್ಲ.

ಇದನ್ನೂ ಓದಿ: ಕಾಲೇಜಿನೊಳಗೇ ಯುವತಿಯನ್ನು ಕೊಂದು, ತಾನೂ ಶೂಟ್ ಮಾಡಿಕೊಂಡ ಪಂಜಾಬ್​​ನ ಕಾನೂನು ವಿದ್ಯಾರ್ಥಿ

ಗಲಾಟೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು 4 ಪೊಲೀಸ್ ಠಾಣೆಗಳ ಪಡೆಗಳನ್ನು ನಿಯೋಜಿಸಿದೆ. ಅಲ್ಲಿ ಮಹಿಳಾ ಸಿಬ್ಬಂದಿ ಸೇರಿದಂತೆ 500 ಪೊಲೀಸ್ ಸಿಬ್ಬಂದಿ ಇದ್ದಾರೆ. ಪರಿಸ್ಥಿತಿಯನ್ನು ಡ್ರೋನ್‌ಗಳ ಮೂಲಕವೂ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಇದಕ್ಕೂ ಮೊದಲು, ಜನವರಿ 21ರಂದು 8 ಮನೆಗಳನ್ನು ಒಟ್ಟಿಗೆ ಕೆಡವಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಸ್ಪಿರಿಟ್’ ಸಿನಿಮಾದಿಂದ ಪ್ರಕಾಶ್ ರಾಜ್ ಹೊರಬಂದಿಲ್ಲ; ಸ್ಪಷ್ಟನೆ ನೀಡಿದ ನಟ – Kannada News | Prakash Raj dismissed rumours of his exit from Spirit movie ft Prabhas

ಖ್ಯಾತ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅವರು ‘ಸ್ಪಿರಿಟ್’ (Spirit) ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಪ್ರಭಾಸ್ ನಟನೆಯ ಈ ಸಿನಿಮಾದ ಪಾತ್ರವರ್ಗದ ಬಗ್ಗೆ ಜನರಿಗೆ ಗೊಂದಲ ಮೂಡಿದೆ. ಈ ಮೊದಲು ನಾಯಕಿ ಆಗಿದ್ದ ದೀಪಿಕಾ ಪಡುಕೋಣೆ ಅವರು ಚಿತ್ರತಂಡದಿಂದ ಹೊರನಡೆದರು. ಆ ಬಳಿಕ ತೃಪ್ತಿ ದಿಮ್ರಿ ಅವರನ್ನು ಆಯ್ಕೆ ಮಾಡಲಾಯಿತು. ಈಗ ‘ಸ್ಪಿರಿಟ್’ ಸಿನಿಮಾದಿಂದ ಹಿರಿಯ ನಟ ಪ್ರಕಾಶ್ ರಾಜ್ (Prakash Raj) ಅವರು ಹೊರ ನಡೆದಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಅದಕ್ಕೆ ಈಗ ಸ್ವತಃ ಪ್ರಕಾಶ್ ರಾಜ್ ಅವರು ಸ್ಪಷ್ಟನೆ ನೀಡಿದ್ದಾರೆ. ವದಂತಿಯನ್ನು ಅವರು ತಳ್ಳಿಹಾಕಿದ್ದಾರೆ.

ಗಾಸಿಪ್ ಏನು? ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಮತ್ತು ನಟ ಪ್ರಕಾಶ್ ರಾಜ್ ಅವರ ನಡುವೆ ಭಿನ್ನಾಭಿಪ್ರಾಯ ಮೂಡಿತಂತೆ. ಒಂದು ದೃಶ್ಯದ ಚಿತ್ರೀಕರಣ ನಡೆಯುತ್ತಿರುವಾಗಲೇ ಅವರಿಬ್ಬರ ನಡುವೆ ವಾದ ಆಯಿತಂತೆ. ಅದರಿಂದಾಗಿ ಪ್ರಕಾಶ್ ರಾಜ್ ಅವರು ಚಿತ್ರತಂಡದಿಂದ ಹೊರಗೆ ಬರಲು ನಿರ್ಧರಿಸಿದರಂತೆ. ಈ ರೀತಿಯಾಗಿ ಗಾಸಿಪ್ ಹಬ್ಬಿದೆ.

ಆದರೆ ಸ್ವತಃ ಪ್ರಕಾಶ್ ರಾಜ್ ಅವರು ‘ಹಿಂದೂಸ್ತಾನ್ ಟೈಮ್ಸ್’ಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಇವೆಲ್ಲವೂ ನಾನ್​ಸೆನ್ಸ್ ಊಹಾಪೋಹಗಳು. ಅದರ ಬಗ್ಗೆ ನನಗೆ ಗೊತ್ತಿಲ್ಲ’ ಎಂದು ಪ್ರಕಾಶ್ ರಾಜ್ ಅವರು ಹೇಳಿದ್ದಾರೆ. ಆ ಮೂಲಕ, ತಾವು ಇನ್ನೂ ಚಿತ್ರತಂಡದ ಭಾಗವಾಗಿರುವುದಾಗಿ ಅವರು ಹೇಳಿದ್ದಾರೆ. ಈ ವಿಷಯ ತಿಳಿದು ಪ್ರಕಾಶ್ ರಾಜ್ ಅವರ ಅಭಿಮಾನಿಗಳಿಗೆ ಸಮಾಧಾನ ಆಗಿದೆ.

ಪ್ರಕಾಶ್ ರಾಜ್ ಅವರು ಪ್ರತಿಭಾನ್ವಿತ ನಟ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ, ಇಂಗ್ಲಿಷ್ ಭಾಷೆಗಳನ್ನು ಅವರು ನಿರರ್ಗಳವಾಗಿ ಮಾತನಾಡುತ್ತಾರೆ. ಇದರಿಂದ ಚಿತ್ರತಂಡಗಳಿಗೆ ಅನುಕೂಲ ಆಗುತ್ತದೆ. ಪಾತ್ರವರ್ಗದಲ್ಲಿ ಪ್ರಕಾಶ್ ರಾಜ್ ಇದ್ದರೆ ಅಂಥ ಸಿನಿಮಾಗಳ ಮೆರುಗು ಹೆಚ್ಚುತ್ತದೆ. ವಿಲನ್ ಮತ್ತು ಪೋಷಕ ಪಾತ್ರಗಳ ಮೂಲಕ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ.

ಇದನ್ನೂ ಓದಿ: ಪ್ರಭಾಸ್ ‘ಸ್ಪಿರಿಟ್’ ಸಿನಿಮಾನಲ್ಲಿ ಮತ್ತೊಬ್ಬ ಬಾಲಿವುಡ್ ಸ್ಟಾರ್ ನಟಿ

‘ಎಕ್ಸ್’ (ಟ್ವಿಟರ್) ಖಾತೆಯಲ್ಲೂ ಪ್ರಕಾಶ್ ರಾಜ್ ಅವರು ಸ್ಪಷ್ಟನೆ ನೀಡಿದ್ದಾರೆ. ‘ಸ್ಪಿರಿಟ್ ಸಿನಿಮಾ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ಗಮನಕ್ಕೆ.. ನಾವು ಇನ್ನೂ ನನ್ನ ಪಾತ್ರದ ಶೂಟಿಂಗ್ ಕೂಡ ಆರಂಭಿಸಿಲ್ಲ. ಆದರೆ ನೀವು ವದಂತಿ ಸೃಷ್ಟಿಸುತ್ತಿದ್ದೀರಿ’ ಎಂದು ಪ್ರಕಾಶ್ ರಾಜ್ ಅವರು ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ – Kannada News | KL Rahul Century Powers Karnataka to Ranji Semis vs Mumbai

ರಣಜಿ ಟ್ರೋಫಿಯ ನಾಲ್ಕನೇ ಕ್ವಾರ್ಟರ್ ಫೈನಲ್‌ ಪಂದ್ಯದಲ್ಲಿ ಕರ್ನಾಟಕ ಹಾಗೂ ಮುಂಬೈ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಕರ್ನಾಟಕ ತಂಡದ ಪರ ಕೆಎಲ್ ರಾಹುಲ್ ಎರಡನೇ ಇನ್ನಿಂಗ್ಸ್‌ನಲ್ಲಿ ಶತಕ ಬಾರಿಸುವ ಮೂಲಕ ಸಂಕಷ್ಟದಿಂದ ತಂಡಕ್ಕೆ ನೆರವಾದರು. ಎರಡನೇ ಇನ್ನಿಂಗ್ಸ್​ನಲ್ಲಿ 130 ರನ್‌ ಬಾರಿಸಿದ ರಾಹುಲ್, ಈ ಶತಕದೊಂದಿಗೆ ಕರ್ನಾಟಕ ತಂಡದ ಗೆಲುವನ್ನು ಖಚಿತಪಡಿಸಿದರು. ಮುಂಬೈ ನೀಡಿದ 325 ರನ್‌ಗಳ ಗುರಿಯನ್ನು ಬೆನ್ನಟ್ಟಿ ಕರ್ನಾಟಕ 4 ವಿಕೆಟ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಇದು ಕೆಎಲ್ ರಾಹುಲ್ ಪ್ರಥಮ ದರ್ಜೆ ವೃತ್ತಿಜೀವನದ 25ನೇ ಶತಕ ಎಂಬುದು ಮತ್ತಷ್ಟು ವಿಶೇಷವಾಗಿತ್ತು.

ಈ ಗೆಲುವಿನೊಂದಿಗೆ ಕರ್ನಾಟಕ ಸೆಮಿಫೈನಲ್‌ಗೆ ತಲುಪಿದೆ. ಕೆಎಲ್ ರಾಹುಲ್ ಪಂದ್ಯದ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಈ ಶತಕ ಬಾರಿಸಿದ್ದು ಅವರ ಬ್ಯಾಟಿಂಗ್ ಕೌಶಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿತ್ತು. ಏಕೆಂದರೆ ಟೆಸ್ಟ್ ಪಂದ್ಯದ ನಾಲ್ಕನೇ ಇನ್ನಿಂಗ್ಸ್​ನಲ್ಲಿ ಶತಕ ಬಾರಿಸುವುದು ಅಷ್ಟು ಸುಲಭದ ಮಾತಲ್ಲ. ಆದರೆ ರಾಹುಲ್ ಈ ಕೆಲಸ ಮಾಡಿ ತಂಡವನ್ನು ಸೋಲಿನಿಂದ ಪಾರು ಮಾಡಿದರು. ಕೆಎಲ್ ರಾಹುಲ್ ತಮ್ಮ ಇನ್ನಿಂಗ್ಸ್‌ನಲ್ಲಿ 14 ಬೌಂಡರಿಗಳು ಮತ್ತು ಒಂದು ಸಿಕ್ಸ್ ಬಾರಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version