Headlines

‘ಓಜಿ 2’ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟ ಪವನ್ ಕಲ್ಯಾಣ್; ಫ್ಯಾನ್ಸ್ ಕಾಯೋದು ಅನಿವಾರ್ಯ – Kannada News

ಗ್ಯಾಂಗ್‌ಸ್ಟರ್ ಡ್ರಾಮಾ ಸಿನಿಮಾ ‘ಓಜಿ’ ಮೂಲಕ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರನ್ನು ಅತ್ಯಂತ ಸ್ಟೈಲಿಶ್ ಆಗಿ ಬೆಳ್ಳಿಪರದೆ ಮೇಲೆ ತೋರಿಸಿ ಅಭಿಮಾನಿಗಳಿಗೆ ಭರ್ಜರಿ ರಸದೌತಣ ನೀಡಿದ ನಿರ್ದೇಶಕ ಸುಜೀತ್. ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸಿದ್ದ ಈ ಸಿನಿಮಾ, ಸ್ವತಃ ಪವನ್ ಕಲ್ಯಾಣ್ ಅವರಿಗೂ ಭಾರಿ ಖುಷಿ ಕೊಟ್ಟಿತ್ತು. ಒಂದು ವೇಳೆ ಒಳ್ಳೆಯ ಲೈನ್ ಸಿಕ್ಕರೆ ಸೀಕ್ವೆಲ್ ಮಾಡಲು ಸಿದ್ಧ ಎಂದು ಪವನ್ ಆಗಲೇ ಆಸಕ್ತಿ ತೋರಿಸಿದ್ದರು. ಅಂದಿನಿಂದಲೂ ಫ್ಯಾನ್ಸ್ ‘ಓಜಿ 2’ ಅಪ್‌ಡೇಟ್‌ಗಾಗಿ ಕಾದು ಕುಳಿತಿದ್ದಾರೆ. ಪವನ್…

Read More

ಪ್ರಿ ವೆಡ್ಡಿಂಗ್ ಫೋಟೊಶೂಟ್ ವೇಳೆ ಸರೋವರಕ್ಕೆ ಜಾರಿ ಬಿದ್ದು ವರ ಸಾವು – Kannada News

ಜೈಪುರ, ಜೂನ್ 12: ಪ್ರಿ ವೆಡ್ಡಿಂಗ್ ಫೋಟೊಶೂಟ್(Photoshoot) ವೇಳೆ ಸರೋವರಕ್ಕೆ ಜಾರಿ ಬಿದ್ದು ವರ ಮೃತಪಟ್ಟಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಚಿತ್ತೋರ್‌ಗಢದ ನಿವಾಸಿಯಾದ ಅರ್ಜುನ್ ದಮಾಮಿ ಎಂಬ ಯುವಕನಿಗೆ ಇತ್ತೀಚೆಗಷ್ಟೇ ನಿಶ್ಚಿತಾರ್ಥವಾಗಿತ್ತು. ಮದುವೆಯ ತಯಾರಿಗಳು ಜೋರಾಗಿ ನಡೆಯುತ್ತಿದ್ದವು. ತಮ್ಮ ವಿವಾಹ ಪೂರ್ವ ಫೋಟೋ ಶೂಟ್‌ಗಾಗಿ ಅರ್ಜುನ್, ತನ್ನ ನಿಶ್ಚಿತ ವಧು ಮತ್ತು ಆಕೆಯ ಚಿಕ್ಕಪ್ಪನೊಂದಿಗೆ ಗೋರಿ ಧಾಮ್‌ಗೆ ಭೇಟಿ ನೀಡಿದ್ದರು. ಬೆಟ್ಟಗಳ ನಡುವೆ ದೇವಾಲಯದ ಆವರಣದ ಬಳಿ ಚಿಕ್ಕಪ್ಪ ವಿಶ್ರಮಿಸುತ್ತಿದ್ದರೆ, ಈ ಜೋಡಿ ಸುಂದರ ಚಿತ್ರಗಳನ್ನು ಕ್ಲಿಕ್ಕಿಸಿಕೊಳ್ಳಲು…

Read More

ಸೆಲೆಬ್ರಿಟಿಗಳ ಹೆಸರಲ್ಲಿ ಸೃಷ್ಟಿಯಾಗುತ್ತಿದೆ ನಕಲಿ ಪೋಸ್ಟ್​; ಶೇರ್ ಮಾಡೋ ಮುನ್ನ ಎಚ್ಚರ – Kannada News

ಸಾಮಾಜಿಕ ಜಾಲತಾಣಗಳು ಇಂದಿನ ದಿನಗಳಲ್ಲಿ ಎಷ್ಟು ಸಹಾಯಕಾರಿಯೋ, ಅಷ್ಟೇ ಅಪಾಯಕಾರಿಯೂ ಹೌದು. ಇತ್ತೀಚಿನ ದಿನಗಳಲ್ಲಿ ಸೆಲೆಬ್ರಿಟಿಗಳ ಹೆಸರಿನಲ್ಲಿ ‘ಫೇಕ್’ ಹಾಗೂ ‘ಎಡಿಟೆಡ್’ ಸ್ಟೋರಿಗಳನ್ನು ಹರಿಬಿಡುವ ಹೊಸ ಟ್ರೆಂಡ್ ಸೃಷ್ಟಿಯಾಗಿದೆ. ‘ಆ ಸೆಲೆಬ್ರಿಟಿ ಹಾಗೆ ಅಂದರು, ಈ ಸ್ಟಾರ್ ಹೀಗೆ ಹೇಳಿದರು’ ಎಂದರು ಎಂಬ ಇನ್​​ಸ್ಟಾ ಸ್ಟೋರಿಗಳನ್ನು ಎಡಿಟ್ ಮಾಡಿದ ಸ್ಕ್ರೀನ್‌ಶಾಟ್‌ಗಳು ಕಾಡ್ಗಿಚ್ಚಿನಂತೆ ವೈರಲ್ ಆಗುತ್ತಿವೆ. ತಂತ್ರಜ್ಞಾನದ ದುರ್ಬಳಕೆಯಿಂದಾಗಿ ನಿಜವಾದ ಸ್ಟೋರಿ ಯಾವುದು ಮತ್ತು ಎಡಿಟ್ ಮಾಡಿದ ಸ್ಟೋರಿ ಯಾವುದು ಎಂದು ಗುರುತಿಸುವುದೇ ನೆಟ್ಟಿಗರಿಗೆ ದೊಡ್ಡ ಸವಾಲಾಗಿದೆ. ಫೋಟೋಶಾಪ್…

Read More

Bengaluru Air Quality: ಇಂದು ಸಿಲಿಕಾನ್ ಸಿಟಿಯಲ್ಲಿ ಶುದ್ಧ ಗಾಳಿ: ಬೆಂಗಳೂರಿನ AQI ಮಟ್ಟದಲ್ಲಿ ಸುಧಾರಣೆ!! – Kannada News

ಬೆಂಗಳೂರು, ಜೂನ್ 12: ಕರ್ನಾಟಕದ ಪ್ರಮುಖ ನಗರಗಳಲ್ಲಿ ಮತ್ತು ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಸೂಚ್ಯಂಕವು (AQI) ಅತ್ಯಂತ ಸಮಾಧಾನಕರ ಹಾಗೂ ಆರೋಗ್ಯಕರ ಮಟ್ಟದಲ್ಲಿದೆ. ಮುಂಗಾರು ಮಳೆಯ ಪ್ರಭಾವ ಮತ್ತು ಶುದ್ಧ ಗಾಳಿಯ ಕಾರಣದಿಂದಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮಾಲಿನ್ಯದ ಪ್ರಮಾಣ ಗಣನೀಯವಾಗಿ ಕುಸಿದಿದೆ. ಮುಖ್ಯಾಂಶಗಳು ಮುಂಗಾರು ಮಳೆಯ ಪ್ರಭಾವದಿಂದ ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಅತ್ಯಂತ ಉತ್ತಮವಾಗಿದೆ. ಸಿಲಿಕಾನ್ ಸಿಟಿಯ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ 23-29 ದಾಖಲಾಗಿದೆ. ಮಂಡ್ಯ ಮತ್ತು ಮೈಸೂರು ನಗರಗಳಲ್ಲಿ ಅತ್ಯಂತ…

Read More

‘ಆಲ್ಫಾ’ ಟೀಸರ್‌ಗೆ ಆರ್‌ಆರ್‌ಆರ್‌ ನಿರ್ದೇಶಕ ರಾಜಮೌಳಿ ಫಿದಾ; ಆಲಿಯಾ ಆ್ಯಕ್ಷನ್ ಅವತಾರಕ್ಕೆ ಭಾರಿ ಮೆಚ್ಚುಗೆ – Kannada News

ವೈಆರ್‌ಎಫ್ ಸ್ಪೈ ಯೂನಿವರ್ಸ್‌ನ ಬಹುನಿರೀಕ್ಷಿತ, ಮಹಿಳಾ ಪ್ರಧಾನ ಆ್ಯಕ್ಷನ್ ಚಿತ್ರ ‘ಆಲ್ಫಾ’ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದು ಗೊತ್ತೇ ಇದೆ. ಈ ಟೀಸರ್ ಭಾರಿ ಸದ್ದು ಮಾಡುತ್ತಿದೆ. ಟೀಸರ್‌ನಲ್ಲಿ ಬಾಲಿವುಡ್ ನಟಿ ಆಲಿಯಾ ಭಟ್ ಅವರ ರಗಡ್ ಲುಕ್‌ಗೆ ಸಿನಿರಸಿಕರು ಮಾತ್ರವಲ್ಲದೆ ಚಿತ್ರರಂಗದ ಗಣ್ಯರು ಕೂಡ ಮನಸೋತಿದ್ದಾರೆ. ಈ ಸಾಲಿನಲ್ಲಿ ಈಗ ಭಾರತೀಯ ಚಿತ್ರರಂಗದ ಹೆಮ್ಮೆಯ ನಿರ್ದೇಶಕ ಎಸ್.ಎಸ್. ರಾಜಮೌಳಿ ಅವರು ಸೇರಿಕೊಂಡಿದ್ದು, ಆಲ್ಫಾ ಟೀಸರ್ ನೋಡಿ ಮೆಚ್ಚುಗೆಯ ಸುರಿಮಳೆ ಗರೆದಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಆಲ್ಫಾ ಟೀಸರ್…

Read More

ಲೋಕಾರ್ಪಣೆಗೆ ಸಜ್ಜಾಗ್ತಿದೆ ದೇಶದ ಅತಿ ಎತ್ತರದ ಜಯದೇವ ಮೆಟ್ರೋ ಸ್ಟೇಷನ್: 155 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ – Kannada News

ಪಂಚಸ್ತರದ ಜಯದೇವ ಮೆಟ್ರೋ ನಿಲ್ದಾಣImage Credit source: tv9 ಬೆಂಗಳೂರು, ಜೂನ್ 12: ಬೆಂಗಳೂರಿನ ವಾಹನ ಸವಾರರು ಹಾಗೂ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ (BMRCL) ಭರ್ಜರಿ ಸಿಹಿ ಸುದ್ದಿ ನೀಡಿದೆ. ದೇಶದಲ್ಲೇ ಅತಿ ಎತ್ತರದ ಹಾಗೂ ವಿಶಿಷ್ಟ ತಂತ್ರಜ್ಞಾನದ ಇಂಟರ್‌ಚೇಂಜ್ ನಿಲ್ದಾಣ ಎಂದೇ ಖ್ಯಾತಿ ಪಡೆದಿರುವ ಜಯದೇವ ಆಸ್ಪತ್ರೆ ಮೆಟ್ರೋ ಸ್ಟೇಷನ್ (Jayadeva Metro Station) ಇದೇ ಆಗಸ್ಟ್ ತಿಂಗಳಿನಲ್ಲಿ ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿದೆ. ಒಟ್ಟು ಐದು ಸ್ತರಗಳಲ್ಲಿ (5-Tier) ನಿರ್ಮಾಣವಾಗಿರುವ ದೇಶದ ಮೊದಲ ಮೆಟ್ರೋ…

Read More

ಗುಜರಾತ್: ಏರ್ ಇಂಡಿಯಾ ಅಪಘಾತವಾದ ಸ್ಥಳದಲ್ಲಿ ಸುಸಜ್ಜಿತ ವೈದ್ಯಕೀಯ ಹಾಸ್ಟೆಲ್ ಸಂಕೀರ್ಣ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ – Kannada News

ಗಾಂಧಿನಗರ, ಜೂನ್ 12: ಕಳೆದ ವರ್ಷ ಜೂನ್ 12 ರಂದು ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ(Air India) AI-171 ವಿಮಾನ ದುರಂತದ ಕಹಿ ನೆನಪಿಗೆ ಈಗ ಒಂದು ವರ್ಷ ತುಂಬಿದೆ. ಈ ಮೊದಲ ವಾರ್ಷಿಕೋತ್ಸವದ ಸಂದರ್ಭದಲ್ಲಿ ಗುಜರಾತ್ ಸರ್ಕಾರವು ಅತ್ಯಂತ ಮಾನವೀಯ ನಿರ್ಧಾರವೊಂದನ್ನು ಪ್ರಕಟಿಸಿದೆ. 260 ಮಂದಿ ಪ್ರಾಣ ಕಳೆದುಕೊಂಡ ದುರಂತದ ಆ ಜಾಗವನ್ನು ಈಗ ಭವಿಷ್ಯದ ವೈದ್ಯರನ್ನು ರೂಪಿಸುವ, ಜೀವ ಉಳಿಸುವ ಪವಿತ್ರ ಶೈಕ್ಷಣಿಕ ಕೇಂದ್ರವನ್ನಾಗಿ ಮರು ಅಭಿವೃದ್ಧಿ ಮಾಡಲು ಸರ್ಕಾರ ಮುಂದಾಗಿದೆ. ಬಿಜೆ ವೈದ್ಯಕೀಯ…

Read More

ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್‌ ಟ್ವಿಸ್ಟ್: ರಿಟ್ ಅರ್ಜಿಯಲ್ಲಿ ನಟ ಪ್ರಕಾಶ್‌ ರಾಜ್‌ ಹೆಸರು ಉಲ್ಲೇಖಿಸಿದ ಚಿನ್ನಯ್ಯ! – Kannada News

ನಟ ಪ್ರಕಾಶ್ ರಾಜ್ ಹಾಗೂ ಪೊಲೀಸ್ ಜತೆ ಚಿನ್ನಯ್ಯImage Credit source: TV9 Network ಬೆಂಗಳೂರು, ಜೂನ್ 12: ಧರ್ಮಸ್ಥಳ ಗ್ರಾಮದ ಬುರುಡೆ ಕೇಸ್ ಕೇಸ್‌ಗೆ (Dharmasthala Skull Case) ಬಿಗ್ ಟ್ವಿಸ್ಟ್ ಸಿಕ್ಕಿದೆ. ತನ್ನನ್ನು ಬಳಸಿಕೊಂಡು ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ ಎಂದು ಚಿನ್ನಯ್ಯ (Chinnayya) ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾನೆ. ಈ ಬಗ್ಗೆ SIT ತನಿಖೆಯನ್ನು ಪೂರ್ಣಗೊಳಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿದ್ದಾನೆ. ಷಡ್ಯಂತ್ರದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ, ಜಯಂತ್,…

Read More

Daily Devotional: ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ಹಿಂದೂ ಸನಾತನ ಸಂಪ್ರದಾಯದಲ್ಲಿ, ಹೆಣ್ಣುಮಕ್ಕಳಂತೆ ಗಂಡು ಮಕ್ಕಳಿಗೂ ಕಿವಿ ಚುಚ್ಚಿಸುವ ಪದ್ಧತಿ ಪ್ರಾಚೀನ ಕಾಲದಿಂದಲೂ ರೂಢಿಯಲ್ಲಿದೆ. ಇದನ್ನು ಕರ್ಣವೇದ ಸಂಸ್ಕಾರ ಎಂದು ಕರೆಯಲಾಗುತ್ತದೆ. ಇದು ಕೇವಲ ಅಲಂಕಾರ ಅಥವಾ ಫ್ಯಾಷನ್ ಆಗಿರದೆ, ಅನೇಕ ಆಧ್ಯಾತ್ಮಿಕ, ವೈಜ್ಞಾನಿಕ ಮತ್ತು ಶೈಕ್ಷಣಿಕ ಪ್ರಯೋಜನಗಳನ್ನು ಹೊಂದಿದೆ. ಸಾಮಾನ್ಯವಾಗಿ ಉಪನಯನ ಸಮಯದಲ್ಲಿ ಅಥವಾ 21 ವರ್ಷದ ಒಳಗಿನ ಮಕ್ಕಳಿಗೆ ಕಿವಿ ಚುಚ್ಚಿಸುವುದು…

Read More

Horoscope Today: ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 12, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ಪರಾಭವ ನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ದ್ವಾದಶಿ, ಭರಣಿ ನಕ್ಷತ್ರ, ಅತಿಗಂಡ ಯೋಗ, ತೈತಿಲಕರಣವನ್ನು ಒಳಗೊಂಡಿದೆ. ರಾಹುಕಾಲವು ಬೆಳಗ್ಗೆ 10:41 ರಿಂದ ಮಧ್ಯಾಹ್ನ 12:18 ರವರೆಗೆ ಇರಲಿದ್ದು, ಶುಭಕಾಲವು ಮಧ್ಯಾಹ್ನ 12:19 ರಿಂದ 1:56 ರವರೆಗೆ ಇರುತ್ತದೆ ಎಂದು ಗುರೂಜಿ…

Read More