Headlines

ಕರ್ನಾಟಕ ಹವಾಮಾನ ವರದಿ: ಚಳಿ ಮುಗಿಯುತ್ತಾ ಬಂತು, ಬೇಸಿಗೆ ಆರಂಭ ಆಗುವ ಮುನ್ಸೂಚನೆ – Kannada News | Bengaluru Weather Today: Fog, 30°C; Coastal Heat Alert and Karnataka Forecast

ಬೆಂಗಳೂರು, ಫೆ.5: ಬೆಂಗಳೂರಿನ ಸೇರಿದಂತೆ ರಾಜ್ಯದಲ್ಲಿ ಇಂದಿನ ವಾತಾವರಣ (Karnataka Weathe) ಹೇಗಿದೆ? ಯಾವೆಲ್ಲ ಜಿಲ್ಲೆಯ ಜನ ಎಚ್ಚರಿಕೆಯಿಂದ ಇರಬೇಕು ಎಂಬುದು ಇಲ್ಲಿದೆ ನೋಡಿ. ನಗರದಲ್ಲಿ ಇಂದು ಮುಂಜಾನೆ ದಟ್ಟವಾದ ಮಂಜು ಮುಸುಕಿದ ವಾತಾವರಣವಿತ್ತು. ದಿನವಿಡೀ ಆಕಾಶವು ಭಾಗಶಃ ಮೋಡದಿಂದ ಕೂಡಿರುತ್ತದೆ. ಗರಿಷ್ಠ ತಾಪಮಾನ 30°C ಮತ್ತು ಕನಿಷ್ಠ ತಾಪಮಾನ 17°C ಆಸುಪಾಸಿನಲ್ಲಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮೈಸೂರು ಮತ್ತು ಹಾಸನ ಭಾಗದಲ್ಲಿ ಹವಾಮಾನವು ತುಂಬಾ ಪ್ರಶಾಂತವಾಗಿದ್ದು, ಸಂಜೆಯ ವೇಳೆಗೆ ತಂಪಾದ ಗಾಳಿ ಬೀಸುವ ಸಾಧ್ಯತೆಯಿದೆ…

Read More

Video: ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು – Kannada News | Andhra Pradesh Highway Mishap Claims Three Lives After Lorry Car Collision

ಶ್ರೀಕಾಕುಳಂ, ಜನವರಿ 08: ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಲಾರಿಯೊಂದು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಈ ದುರಂತ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಮನಕಲಕುವ ವೀಡಿಯೊ  ವೈರಲ್ ಆಗಿದೆ. ಭಾರೀ ವಾಹನದ ಮುಂದೆ ಇದ್ದಕ್ಕಿದ್ದಂತೆ ಬಂದ ಬೈಕನ್ನು ತಪ್ಪಿಸಲು ಲಾರಿ ಚಾಲಕ ವಾಹನವನ್ನು ಬಲಕ್ಕೆ ತಿರುಗಿಸಿದ್ದಾನೆ. ಆಗ ಕಾರಿಗೆ ಡಿಕ್ಕಿ ಹೊಡೆದಿದೆ. ಜಿಲ್ಲೆಯ…

Read More

ಗುಜರಾತ್​​ನ ವಲ್ಸಾದ್​​ನಲ್ಲಿ ಭೀಕರ ಅಪಘಾತ; ಪಿಕಪ್ ವ್ಯಾನ್ ಪಲ್ಟಿಯಾಗಿ 7 ಜನ ಸಾವು, ಪ್ರಧಾನಿ ಮೋದಿ ಸಂತಾಪ – Kannada News | 7 killed, several injured as pickup van overturns in Gujarat Valsads Kaprada accident news

ವಲ್ಸಾದ್, ಏಪ್ರಿಲ್ 22: ಇಂದು ಸಂಜೆ ಗುಜರಾತ್‌ನ (Gujarat) ವಲ್ಸಾದ್ ಜಿಲ್ಲೆಯ ಕಪ್ರಡಾ ತಾಲೂಕಿನಲ್ಲಿ ಪಿಕಪ್ ವ್ಯಾನ್ ಪಲ್ಟಿಯಾಗಿ ಮೂವರು ಮಕ್ಕಳು ಸೇರಿದಂತೆ 7 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಿರ್ನಾರಾ ಗ್ರಾಮದ ಸುಮಾರು 30 ಜನರನ್ನು ಪಿಕಪ್​ನಲ್ಲಿ ಮದುವೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವ್ಯಾನ್ ಪಲ್ಟಿಯಾಗಿದೆ. ಮೂವರು ಮಕ್ಕಳು ಸೇರಿದಂತೆ 7 ಜನ ಮೃತಪಟ್ಟಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಾಳುಗಳಲ್ಲಿ 10 ಜನರ…

Read More

ದರ್ಶನ್ ಮಾನಸಿಕ ಸ್ಥಿತಿ ಬಗ್ಗೆ ದೊಡ್ಡ ಅಪ್ಡೇಟ್ ಕೊಟ್ಟ ವಿಜಯಲಕ್ಷ್ಮೀ – Kannada News | Vijayalakshmi Confirms Darshan’s Strength: Dispels Rumors, Reassures Fans

ನಟ ದರ್ಶನ್ (Darshan) ಅವರು ಜೈಲಿನಲ್ಲಿ ಮಾನಸಿಕವಾಗಿ ಕುಗ್ಗಿದ್ದಾರೆ ಎಂಬಿತ್ಯಾದಿ ವದಂತಿಗಳು ಈ ಮೊದಲು ಹರಿದಾಡಿದ್ದವು. ಆ ಬಳಿಕ ಮಾತನಾಡಿದ್ದ ವಿಜಯಲಕ್ಷ್ಮೀ ದರ್ಶನ್ ಅವರು, ಇದು ಸುಳ್ಳು ಎಂದು ಸ್ಪಷ್ಟನೆ ಕೊಟ್ಟಿದ್ದರು. ಈಗ ವಿಜಯಲಕ್ಷ್ಮೀ ದರ್ಶನ್ ಅವರು ಮತ್ತೊಮ್ಮೆ ಈ ಬಗ್ಗೆ ಮಾತನಾಡಿದ್ದಾರೆ. ಧನ್ವೀರ್ ನಟನೆಯ ‘ಹಯಗ್ರೀವ’ ಟ್ರೇಲರ್ ಲಾಂಚ್ ಈವೆಂಟ್​​ನಲ್ಲಿ ಅವರು ಮಾತನಾಡಿ, ದರ್ಶನ್ ಫ್ಯಾನ್ಸ್​​ಗೆ ಖುಷಿ ಸುದ್ದಿ ಕೊಟ್ಟಿದ್ದಾರೆ. ಮಂಡ್ಯದಲ್ಲಿ ‘ಹಯಗ್ರೀವ’ ಟ್ರೇಲರ್ ಲಾಂಚ್ ಈವೆಂಟ್ ನಡೆಯಿತು. ಇದಕ್ಕೆ ವಿಜಯಲಕ್ಷ್ಮೀ ಅವರು ಮುಖ್ಯ ಅತಿಥಿಯಾಗಿ…

Read More

ಹತ್ತಾರು ಬೈಕ್ ಸುಟ್ಟು ಭಸ್ಮ, 15 ಮನೆಗಳಿಗೆ ಹಾನಿ: ಆಕಸ್ಮಿಕ ಬೆಂಕಿಯೋ, ದ್ವೇಷದ ಕಿಡಿಯೋ? – Kannada News | Several Bike And House Damage In nandini layout fire incident at Bengaluru

ಬೆಂಗಳೂರು, (ಜನವರಿ 11): ಅವರೆಲ್ಲಾ ದಿನಕೂಲಿ ನಂಬಿ ಬದುಕೋರು.. ಆದ್ರೆ ಅವರ ಬದುಕು ಇಂದು ದುಸ್ತರವಾಗಿದೆ. ಜೀವನಕ್ಕೆ ಆಧಾರವಾಗಿದ್ದ ಸ್ಪಂಜುಗಳು ಹೊತ್ತಿ ಉರಿದಿದ್ದು ಸಾಕಷ್ಟು ನಷ್ಟವಾಗಿದೆ. ಹೌದು… ನಿನ್ನೆ ತಡರಾತ್ರಿ 2:30ರ ಸುಮಾರಿಗೆ ಎಲ್ಲರೂ ಕೂಡ ಗಾಢ ನಿದ್ರೆಯಲ್ಲಿದ್ರು. ಆದ್ರೆ ಏಕಾಏಕಿ ಹೊತ್ತಿ ಉರಿದ ಬೆಂಕಿ ಕೂಲಿನಗರದ ನಿವಾಸಿಗಳ ನಿದ್ದೆಯನ್ನ ಹಾಳು ಮಾಡಿ ಬದುಕನ್ನ ಬೀದಿಗೆ ತಂದಿದೆ. ನಂದಿನಿ‌ಲೇಔಟ್‌‌ನ ಕೂಲಿನಗರದ ನಿವಾಸಿಗಳು ಸ್ಪಾಂಜ್‌ಗಳನ್ನ‌ ಮಾರಿ ಜೀವನ ಸಾಗಿಸೋರು. ಹೀಗಾಗಿ ತಮ್ಮ ಮನೆಗಳ ಮೇಲೆ ಸ್ಪಾಂಜ್‌ಗಳ ಮೂಟೆಯನ್ನ ಇರಿಸಿದ್ರು….

Read More

ಕೇಂದ್ರದ ಈ ಪ್ರಮುಖ ಹಣಕಾಸು ಯೋಜನೆಗಳಲ್ಲಿ ಮಹಿಳೆಯರೇ ಹೆಚ್ಚು ಫಲಾನುಭವಿಗಳು

ಇವತ್ತು ಮಾರ್ಚ್ 18, ಅಂತರರಾಷ್ಟ್ರೀಯ ಮಹಿಳೆಯರ ದಿನ (International Women’s Day). ಕೇಂದ್ರ ಸರ್ಕಾರ ಮಹಿಳೆಯರ ಅಭ್ಯುದಯ ದೃಷ್ಟಿಯಲ್ಲಿಟ್ಟುಕೊಂಡು ಹಲವು ಯೋಜನೆಗಳನ್ನು ಹಾಕಿದೆ. ಮಹಿಳೆಯರಿಗೆಂದೇ ಸೀಮಿತವಾದ ಸುಕನ್ಯಾ ಸಮೃದ್ದಿ ಯೋಜನೆಯಂತಹ ಸ್ಕೀಮ್​ಗಳಿವೆ. ಹಾಗೆಯೇ, ಸರ್ವರಿಗೂ ಅನ್ವಯವಾಗುವಂತೆ ಸರ್ಕಾರ ರೂಪಿಸಿದ ಕೆಲ ಉತ್ತಮ ಹಣಕಾಸು ಯೋಜನೆಗಳೂ ಕೂಡ ಮಹಿಳೆಯರಿಗೆ ವರದಾನವಾಗಿವೆ. ಅಸಂಘಟಿತ ವಲಯದಲ್ಲಿರುವ ಮಹಿಳೆಯರಿಗೆ ಬಹಳ ಉಪಯುಕ್ತವಾಗಿರುವ ಮೂರು ಪ್ರಮುಖ ಹಣಕಾಸು ಯೋಜನೆಗಳ ವಿವರ ಇಲ್ಲಿದೆ. ಪ್ರಧಾನಮಂತ್ರಿ ಮುದ್ರಾ ಯೋಜನೆ ಹತ್ತು ವರ್ಷದ ಹಿಂದೆ ಆರಂಭವಾದ ಪಿಎಂ ಮುದ್ರಾ…

Read More

ಅಶ್ವಿನಿ ಗೌಡ ಮೇಲೆ ಬೆಟ್ಟದಷ್ಟು ಅಸಮಾಧಾನ: ಎಲ್ಲವನ್ನೂ ಬಹಿರಂಗವಾಗಿ ಹೇಳಿದ ಧ್ರುವಂತ್ – Kannada News | Dhruvanth and Ashwini Gowda exchange heated words in Bigg Boss Kannada Season 12

ಅಶ್ವಿನಿ ಗೌಡ ಅವರು ಬಿಗ್ ಬಾಸ್ (BBK 12) ಆಟದಲ್ಲಿ ಸ್ಟ್ರಾಂಗ್ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಅವರಿಗೆ ಇನ್ನುಳಿದವರು ಪೈಪೋಟಿ ನೀಡುತ್ತಿದ್ದಾರೆ. ಆರಂಭದಿಂದಲೂ ಅಶ್ವಿನಿ ಗೌಡ (Ashwini Gowda) ಅವರು ಅಗ್ರೆಷನ್ ತೋರಿಸುತ್ತಾ ಬಂದಿದ್ದಾರೆ. ಆ ಗುಣ ಕೆಲವರಿಗೆ ಇಷ್ಟ ಆಗಿಲ್ಲ. ಕೆಲವು ವಾರಗಳ ಕಾಲ ಅವರು ಸೈಲೆಂಟ್ ಆಗಿದ್ದರು. ಇತ್ತೀಚಿನ ದಿನಗಳಲ್ಲಿ ಧ್ರುವಂತ್ ಜೊತೆ ಅಶ್ವಿನಿ ಗೌಡ ಅವರು ಕ್ಲೋಸ್ ಆಗಿದ್ದರು. ಟಾಸ್ಕ್ ವೇಳೆ ಪರಸ್ಪರ ಬೆಂಬಲವಾಗಿ ಇದ್ದರು. ಆದರೆ 102ನೇ ದಿನದಲ್ಲಿ ಅಶ್ವಿನಿ ಗೌಡ ಮತ್ತು…

Read More

ಕಲಬುರಗಿ ಆರ್​ಟಿಒ ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಇಲ್ಲಿ ದುಡ್ಡು ಕೊಟ್ಟರೆ ಎಲ್ಲವೂ ಸಿಗುತ್ತೆ!

ಕಲಬುರಗಿ, ಫೆಬ್ರವರಿ 5: ಕಲಬುರಗಿ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ (ಆರ್ಟಿಓ) ನಡೆಯುತ್ತಿರುವ ಭ್ರಷ್ಟಾಚಾರವನ್ನು ‘ಟಿವಿ9’ ಸುದ್ದಿ ವಾಹಿನಿ ಬಯಲು ಮಾಡಿದೆ. ಆರ್​​ಟಿಒ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ಸಿಬ್ಬಂದಿ ಲಂಚಕ್ಕೆ ಬೇಡಿಕೆ ಇಡುತ್ತಿರುವುದು ಮತ್ತು ದಾಖಲೆಗಳನ್ನು ಅನಧಿಕೃತವಾಗಿ ವಿತರಿಸುತ್ತಿರುವುದು ಬಹಿರಂಗವಾಗಿದೆ. ಈ ಕಚೇರಿಯಲ್ಲಿ ಹಣ ನೀಡಿದರೆ ವಾಹನಗಳ ಆರ್​ಸಿ ಕಾರ್ಡ್‌ಗಳು ಸೇರಿದಂತೆ ಎಲ್ಲಾ ಸರ್ಕಾರಿ ದಾಖಲೆಗಳು ಸುಲಭವಾಗಿ ಲಭ್ಯವಾಗುತ್ತವೆ. ಅರ್ಹರಲ್ಲದವರಿಗೂ ಅಥವಾ ಅನಗತ್ಯ ವ್ಯಕ್ತಿಗಳಿಗೂ ಈ ಭೂಪರು ಸರ್ಕಾರಿ ದಾಖಲೆಗಳನ್ನು ನೀಡುತ್ತಾರೆ. ಲಂಚ ಪಡೆದು ಆರ್​​ಸಿ ಕಾರ್ಡ್‌ ವಿತರಿಸುವ…

Read More

ಪ್ರತ್ಯೇಕ ರಸ್ತೆ ಅಪಘಾತ: ಮೂವರ ದಾರುಣ ಸಾವು, ಓರ್ವನ ಸ್ಥಿತಿ ಗಂಭೀರ – Kannada News | Karnataka Road Accidents: 3 Dead, 1 Injured in Mysuru, Chitradurga, Bengaluru Crashes

ಅಪಘಾತದ ಬಳಿಕ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿರುವ ಬೈಕ್​​Image Credit source: Tv9 Kannada ಮೈಸೂರು/ಚಿತ್ರದುರ್ಗ, ಫೆಬ್ರವರಿ 20: ಮೈಸೂರು, ಚಿತ್ರದುರ್ಗ ಮತ್ತು ಬೆಂಗಳೂರು ಉತ್ತರ ತಾಲೂಕಿನಲ್ಲಿ ನಡೆದಿರುವ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಲಾರಿ-ಬೈಕ್​​ ನಡುವೆ ಅಪಘಾತ ನಡೆದು ಇಬ್ಬರು ಮೃತಪಟ್ಟಿದ್ದರೆ, ಚಿತ್ರದುರ್ಗದಲ್ಲಿ ನಡೆದ ಕಾರು ಮತ್ತು ಲಾರಿ ನಡುವಿನ ಡಿಕ್ಕಿಯಲ್ಲಿ ಓರ್ವ ಅಸುನೀಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಹುಣಸಮಾರನಹಳ್ಳಿಯಲ್ಲಿ ಗೂಡ್ಸ್​ ವಾಹನ ಡಿಕ್ಕಿಯಾಗಿ ಪೊಲೀಸ್​​ ಸಿಬ್ಬಂದಿ…

Read More

ಅಬ್ದುಲ್ ಜಬ್ಬಾರ್ ಬೆನ್ನಲ್ಲೇ ಜಮೀರ್ ಆಪ್ತೆಗೆ ಗೇಟ್‌ಪಾಸ್, ಉಪಾಧ್ಯಕ್ಷೆ ಸ್ಥಾನದಿಂದ ಉಚ್ಚಾಟನೆ! – Kannada News | Karnataka youth congress leader And Zameer Close Aide afreen khan expelled from Party

ಬೆಂಗಳೂರು, (ಏಪ್ರಿಲ್ 15): ದಾವಣಗೆರೆ (Davanagere) ದಂಗಲ್ ತೀವ್ರ ಸ್ವರೂಪ ಪಡೆದುಕೊಂಡಿದೆ. ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರಸ್​​ನಲ್ಲಿ  (Congress) ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಕೆಲವು ದಿನಗಳಿಂದ ಬಿಡುವಿಲ್ಲದ ರಾಜಕೀಯ ಚಟುವಟಿಕೆ ನಡೆಯುತ್ತಿವೆ. ಬೈ ಎಲೆಕ್ಷನ್​​ ವೇಳೆ ಪಕ್ಷ ವಿರೋಧ ಚಟುವಟಿಕೆ ಆರೋಪದ ಮೇಲೆ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೂ ಸಂಕಷ್ಟ ಎದುರಾಗಿದ್ದು, ಹೈಕಮಾಂಡ್ ಕ್ರಮದ ಬಗ್ಗೆ ಚಿಂತನೆ ನಡೆಸಿದೆ. ಇದರ…

Read More