ಬೇಸರದಲ್ಲಿರೋ ಫೋಟೋ ಪೋಸ್ಟ್ ಮಾಡಿದ ರಕ್ಷಿತ್ ಶೆಟ್ಟಿ; ಅದೇ ಕಾರಣವಾ? – Kannada News | Amid Rashmika Mandanna Post Rakshit Shetty Posted ‘777 Charlie’ Sad Scene Now

ರಕ್ಷಿತ್ ಶೆಟ್ಟಿ (Rakshith Shetty) ಅವರು ಇತ್ತೀಚೆಗೆ ಯಾರ ಕಣ್ಣಿಗೂ ಕಾಣಿಸುತ್ತಿಲ್ಲ. ಈವೆಂಟ್​​​ಗಳಿಗೆ ಅವರ ಹಾಜರಿ ಇಲ್ಲ. ‘ರಿಚರ್ಡ್ ಆ್ಯಂಟನಿ’ ಸಿನಿಮಾ ಘೋಷಣೆ ಮಾಡಿ ಹಲವು ಸಮಯ ಕಳೆದರೂ ಆ ಚಿತ್ರದ ಬಗ್ಗೆ ಯಾವುದೇ ಅಪ್​​ಡೇಟ್ ಇಲ್ಲ. ಈ ಎಲ್ಲ ವಿಷಯದಲ್ಲಿ ಫ್ಯಾನ್ಸ್​ಗೆ ಬೇಸರ ಇದೆ. ಹೀಗಿರುವಾಗಲೇ ರಕ್ಷಿತ್ ಶೆಟ್ಟಿ ಅವರು ‘777 ಚಾರ್ಲಿ’ ಸಿನಿಮಾದ ಫೋಟೋನ ಪೋಸ್ಟ್ ಮಾಡಿದ್ದಾರೆ. ಈ ಫೋಟೋನ ರಕ್ಷಿತ್ ಹಂಚಿಕೊಂಡಿದ್ದೇಕೆ ಎಂಬ ಪ್ರಶ್ನೆ ಮೂಡಿದೆ.

‘777 ಚಾರ್ಲಿ’ ಸಿನಿಮಾ ರಿಲೀಸ್ ಆಗಿದ್ದು 2022ರ ಜೂನ್ ಅಲ್ಲಿ. ಆ ಬಳಿಕ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಪಾರ್ಟ್ ಎ ಹಾಗೂ ಬಿಗಳು ರಿಲೀಸ್ ಆದವು. ಈಗ ರಕ್ಷಿತ್ ತೆರೆಮೇಲೆ ಕಾಣಿಸುತ್ತಿಲ್ಲ. ಅವರು ತಮ್ಮ ಹುಟ್ಟೂರಾದ ಉಡುಪಿಯಲ್ಲಿ ಸ್ಕ್ರಿಪ್ಟ್​ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈಗ ಅವರು ಏಕಾಏಕಿ ‘777 ಚಾರ್ಲಿ’ ಸಿನಿಮಾದ ಸ್ಯಾಡ್ ದೃಶ್ಯದ ಫೋಟೋನ ಫೇಸ್​​​ಬುಕ್ ಕವರ್ ಪೇಜ್ ಆಗಿ ಪೋಸ್ಟ್ ಮಾಡಿರೋದು ಚರ್ಚೆಗೆ ಕಾರಣ ಆಗಿದೆ.

ಇದನ್ನೂ ಓದಿ: ರಕ್ಷಿತ್ ವಿಷಯದಲ್ಲಿ ರಶ್ಮಿಕಾ ವಿವಾಹ ಟ್ರೋಲ್​ ಮಾಡಿದವರಿಗೆ ಖಡಕ್ ತಿರುಗೇಟು ಕೊಟ್ಟ ಕನ್ನಡತಿ

ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಅವರು ನಿಶ್ಚಿತಾರ್ಥ ಮಾಡಿಕೊಂಡರು. ಆ ಬಳಿಕ ನಿಶ್ಚಿತಾರ್ಥ ಮುರಿದು ಬಿತ್ತು.ಇದಕ್ಕೆ ಕಾರಣ ಏನು ಎಂಬುದನ್ನು ಅವರು ರಿವೀಲ್ ಮಾಡಿಲ್ಲ. ಆ ಬಳಿಕ ವಿಜಯ್ ಜೊತೆ ರಶ್ಮಿಕಾ ಆಪ್ತತೆ ಬೆಳೆಸಿಕೊಂಡರು. ಈಗ ಅವರು ಮದುವೆ ಆಗಿದ್ದಾರೆ. ಅವರು ಕಲರ್​​ಫುಲ್ ಫೋಟೋಗಳನ್ನು ಹಾಕುತ್ತಾ ಮಿಂಚುತ್ತಿದ್ದಾರೆ. ಈ ಸಂದರ್ಭದಲ್ಲಿ ರಕ್ಷಿತ್ ಶೆಟ್ಟಿ ಬೇಸರದಲ್ಲಿರೋ ಫೋಟೋನೇ ಪೋಸ್ಟ್ ಮಾಡಿದ್ದು ಅಚ್ಚರಿ ಮೂಡಿಸಿದೆ.

ಕಮೆಂಟ್ ಬಾಕ್ಸ್ ಅಲ್ಲಿ ಕೆಲವರು ರಕ್ಷಿತ್ ಶೆಟ್ಟಿಗೆ ಸ್ಫೂರ್ತಿ ತುಂಬಿದ್ದಾರೆ. ‘ಹಳೆಯದನ್ನು ಮರೆತು ಮುಂದೆ ಸಾಗಿ’ ಎಂದು ಫ್ಯಾನ್ಸ್ ಹೇಳಿದ್ದಾರೆ. ಇನ್ನೂ ಕೆಲವರು, ‘ನಿಮ್ಮ ಕಂಬ್ಯಾಕ್ ಬೇರೆಯವರಿಗೆ ಸ್ಲಿಪ್ಪರ್ ಶಾಟ್ ಆಗಬೇಕು’ ಎಂದು ಬರೆದುಕೊಂಡಿದ್ದಾರೆ. ರಕ್ಷಿತ್ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಇದ್ದಿದ್ದು ಕಡಿಮೆ. ಫೇಸ್​​​ಬುಕ್​​ ಅಲ್ಲಿ ಅವರ ಕೊನೆಯ ಪೋಸ್ಟ್ ಬಂದಿದ್ದು 2025ರ ಏಪ್ರಿಲ್​​ನಲ್ಲಿ. ಆ ಬಳಿಕ ಅವರು ಪೋಸ್ಟ್ ಮಾಡುತ್ತಿರುವ ಫೋಟೋ ಇದೇ ಆಗಿದೆ. ಫೋಟೋ ಪೋಸ್ಟ್​ ಮಾಡಿ ಬಹಳ ದಿನ ಕಳೆದಿದೆ ಎಂಬ ಕಾರಣಕ್ಕೂ ಅವರು ಈ ಫೋಟೋ ಹಂಚಿಕೊಂಡಿರಬಹುದು ಎಂದು ಊಹಿಸಲಾಗುತ್ತಿದೆ. ಇನ್ನೂ ಕೆಲವರು ರಕ್ಷಿತ್​​ಗೆ ‘ಚಾರ್ಲಿ’ ಸಿನಿಮಾ ನೆನಪಾಗಿರಬೇಕು ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Bengaluru Air Quality: ಬಿಸಿಲ ಬೇಗೆಯಷ್ಟೇ ಅಲ್ಲದೆ ಬೆಂಗಳೂರಿನಲ್ಲಿ ಕಳಪೆ ಏರ್ ಕ್ವಾಲಿಟಿ ಆತಂಕ! – Kannada News | Bangalore Air Pollution Crisis: Bengaluru AQI gets worse including Udupi and Mangalore

ಬಿಸಿಲ ಬೇಗೆಯಷ್ಟೇ ಅಲ್ಲದೆ ಬೆಂಗಳೂರಿನಲ್ಲಿ ಕಳಪೆ ಏರ್ ಕ್ವಾಲಿಟಿ ಆತಂಕ!

ಬೆಂಗಳೂರು, ಮಾರ್ಚ್​ 06​: ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ. ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಕಳಪೆ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ.

ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 170ಕ್ಕೆ ತಲುಪಿದೆ. ಕೆಲ ದಿನಗಳಿಂದ ಉಡುಪಿ, ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಏರ್ ಕ್ವಾಲಿಟಿ ತೀರಾ ಕಳಪೆ ಮಟ್ಟಕ್ಕೆ ಇಳಿದಿತ್ತು. ಆದರೆ ಇಂದು ಅದೇ ಉಡುಪಿ, ಮಂಗಳೂರು, ಕಲಬುರ್ಗಿ ಸೇರಿದಂತೆ ಹಲವೆಡೆಯ ವಾಯು ಗುಣಮಟ್ಟ 150ಕ್ಕಿಂತ ಹೆಚ್ಚಾಗಿದೆ. ಕಲಬುರ್ಗಿಯ AQI 160 ಇದ್ದು, 200ರ ಗಡಿ ತಲುಪುವ ಆತಂಕ ಎದುರಾಗಿದೆ. ಆದರೆ ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –170
  • ಮಂಗಳೂರು-174
  • ಮೈಸೂರು –164
  • ಬೆಳಗಾವಿ – 161
  • ಕಲಬುರ್ಗಿ-160
  • ಶಿವಮೊಗ್ಗ – 158
  • ಬಳ್ಳಾರಿ – 158
  • ಹುಬ್ಬಳ್ಳಿ- 163
  • ಉಡುಪಿ –162
  • ವಿಜಯಪುರ –150

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ದೇವನಹಳ್ಳಿ ಬಳಿ ಭೀಕರ ಅಪಘಾತ: ಅತಿವೇಗವಾಗಿ ಬಂದು ಪಲ್ಟಿಯಾದ ಕ್ಯಾಂಟರ್ ಲಾರಿ, ಬೆಚ್ಚಿಬೀಳಿಸುವ ವಿಡಿಯೋ ವೈರಲ್ – Kannada News | Canter Accident Caught on CCTV Near Devanahalli, Bengaluru: Truck Overturns on Highway, Vehicles Escape Narrowly

ದೇವನಹಳ್ಳಿ, ಮಾರ್ಚ್ 6: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಇರಿಗೇನಹಳ್ಳಿ ಗೇಟ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅತಿವೇಗವಾಗಿ ಬಂದ ಕ್ಯಾಂಟರ್ ಹೆದ್ದಾರಿಯಲ್ಲಿ ಉರುಳಿಬಿದ್ದು ನಂತರವೂ ತುಸು ದೂರ ಜಾರಿಕೊಂಡು ಹೋಗಿದೆ. ಈ ಭಯಾನಕ ಘಟನೆಯ ವಿಡಿಯೋ ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕ್ಯಾಂಟರ್ ಅಡ್ಡಾದಿಡ್ಡಿಯಾಗಿ ಹೆದ್ದಾರಿಯಲ್ಲಿ ಚಲಿಸುತ್ತಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಾಣಿಸುತ್ತದೆ. ಕೆಲವು ಕ್ಷಣಗಳಲ್ಲೇ ನಿಯಂತ್ರಣ ತಪ್ಪಿದ ಕ್ಯಾಂಟರ್ ರಸ್ತೆಯ ಮಧ್ಯೆ ಉರುಳಿಬಿದ್ದು ಭೀಕರ ಅಪಘಾತ ಸಂಭವಿಸಿದೆ. ಮದ್ಯಪಾನ ಮಾಡಿ ಚಾಲನೆ ಮಾಡಿರುವುದೇ ಕಾರಣ ಇರಬಹುದು ಎಂದು ಶಂಕಿಸಲಾಗಿದೆ.

ಅಪಘಾತದ ವೇಳೆ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಮೂರು ಬೈಕ್‌ಗಳು, ಒಂದು ಕಾರು ಹಾಗೂ ಒಂದು ಟಿಪ್ಪರ್ ಅಪಾಯದಿಂದ ಪಾರಾಗಿವೆ. ನಾಲ್ಕೈದು ವಾಹನಗಳ ಮಧ್ಯೆ ನುಗ್ಗಿಬಂದ ಕ್ಯಾಂಟರ್ ಕೊನೆಗೆ ಖಾಲಿ ರಸ್ತೆಯಲ್ಲಿ ಉರುಳಿಬಿದ್ದಿದೆ.

ಅಪಘಾತದ ರಭಸಕ್ಕೆ ರಸ್ತೆ ತುಂಬಾ ದಟ್ಟವಾದ ಧೂಳು ಆವರಿಸಿಕೊಂಡಿದ್ದು, ಕೆಲ ಕ್ಷಣಗಳ ಕಾಲ ಸುತ್ತಮುತ್ತ ಗಾಬರಿ ಮೂಡಿಸಿತು. ಸ್ಥಳದಲ್ಲಿದ್ದ ಸ್ಥಳೀಯರು ತಕ್ಷಣವೇ ಕ್ಯಾಂಟರ್ ಚಾಲಕನ ರಕ್ಷಣೆಗೆ ಧಾವಿಸಿದರು. ಅಪಘಾತ ಭೀಕರವಾಗಿದ್ದರೂ ಅದೃಷ್ಟವಶಾತ್ ಕ್ಯಾಂಟರ್ ಚಾಲಕ ಮತ್ತು ಕ್ಲೀನರ್ ದೊಡ್ಡ ಅಪಾಯದಿಂದ ಪಾರಾಗಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಷ್ಯಾದಿಂದ ತೈಲ ಖರೀದಿಸಲು ಭಾರತಕ್ಕೆ ಅಮೆರಿಕದಿಂದ ಗ್ರೀನ್ ಸಿಗ್ನಲ್ – Kannada News | India’s Russia Oil Deal: US Greenlights Imports Amid Hormuz Crisis and Energy Woes

ಪುಟಿನ್, ಮೋದಿ, ಟ್ರಂಪ್ Image Credit source: The New Indian Express

ನವದೆಹಲಿ, ಮಾರ್ಚ್​ 06: ಅಮೆರಿಕ-ಇಸ್ರೇಲ್ ಜತೆಗಿನ ಸಂಘರ್ಷದಿಂದಾಗಿ, ಇರಾನ್(Iran) ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದೆ, ಇದು ಜಾಗತಿಕ ತೈಲ ಪೂರೈಕೆಯ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ. ಇದು ಭಾರತದ ಇಂಧನ ಅಗತ್ಯಗಳಿಗೆ ಸಂಬಂಧಿಸಿದಂತೆ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಹೀಗಾಗಿ ಭಾರತಕ್ಕೆ ಸಹಾಯ ಮಾಡಲು ರಷ್ಯಾ ಮುಂದೆ ಬಂದಿದೆ. ತಮ್ಮ ರಾಷ್ಟ್ರದಿಂದ ತೈಲ ಆಮದು ಮಾಡಿಕೊಳ್ಳಿ ಎಂದು ಪುಟಿನ್ ಹೇಳಿದ್ದಾರೆ. ಇದಕ್ಕೆ ಅಮೆರಿಕ ಕೂಡ ಗ್ರೀನ್ ಸಿಗ್ನಲ್ ಕೊಟ್ಟಿದೆ.

30 ದಿನಗಳ ಕಾಲ ರಷ್ಯಾದಿಂದ ಭಾರತ ತೈಲ ಖರೀದಿ ಮಾಡಬಹುದು ಎಂದು ಅಮೆರಿಕ ಹೇಳಿದೆ. ಒಂದು ಸಮಯದಲ್ಲಿ ಭಾರತ ರಷ್ಯಾದಿಂದ ತೈಲ ಖರೀದಿ ಮಾಡುತ್ತಿದೆ ಎನ್ನುವ ಕಾರಣಕ್ಕೆ ಹೆಚ್ಚುವರಿ ಸುಂಕ ವಿಧಿಸಲಾಗಿತ್ತು.

ಭಾರತವು ತನ್ನ ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲದ ಗಮನಾರ್ಹ ಭಾಗವನ್ನು ಅರಬ್ ದೇಶಗಳಿಂದ ಈ ಸಮುದ್ರ ಮಾರ್ಗದ ಮೂಲಕ ಆಮದು ಮಾಡಿಕೊಳ್ಳುತ್ತದೆ. ಈ ಮಾರ್ಗವು ದೀರ್ಘಕಾಲದವರೆಗೆ ಮುಚ್ಚಲ್ಪಟ್ಟರೆ, ದೇಶವು ಕಚ್ಚಾ ತೈಲ ಮತ್ತು ಅನಿಲದ ಕೊರತೆಯನ್ನು ಎದುರಿಸಬೇಕಾಗುತ್ತದೆ.
ರಷ್ಯಾದಿಂದ ತೈಲ ಖರೀದಿಸುವುದು ಸುಲಭವಲ್ಲ.

ರಷ್ಯಾದ ತೈಲ ಖರೀದಿಸಿದ್ದಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ಶೇಕಡಾ 25 ರಷ್ಟು ಹೆಚ್ಚುವರಿ ಸುಂಕವನ್ನು ವಿಧಿಸಿದ್ದರು. ಇದರಿಂದಾಗಿ ಒಟ್ಟು ಸುಂಕವು ಶೇ. 50 ಕ್ಕೆ ಏರಿತ್ತು. ಭಾರತ-ಯುಎಸ್ ಮಧ್ಯಂತರ ಒಪ್ಪಂದದಲ್ಲಿ, ರಷ್ಯಾದಿಂದ ತೈಲ ಖರೀದಿಸದಿರುವ ಷರತ್ತಿನ ಮೇಲೆ ಮಾತ್ರ ಭಾರತಕ್ಕೆ ದಂಡದಿಂದ ವಿನಾಯಿತಿ ನೀಡಲಾಯಿತು.

ಬಿಕ್ಕಟ್ಟಿನ ಸಮಯದಲ್ಲಿ ಭಾರತಕ್ಕೆ ಕಚ್ಚಾ ತೈಲವನ್ನು ಪೂರೈಸಲು ರಷ್ಯಾ ಸಿದ್ಧವಾಗಿದೆ ಎಂದು ಕೈಗಾರಿಕಾ ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ . ಭಾರತ ಸರ್ಕಾರ ಅದನ್ನು ವಿನಂತಿಸಿದರೆ, ಭಾರತದ ನೀರಿನ ಬಳಿ ಹಡಗುಗಳಲ್ಲಿ ಸುಮಾರು 9.5 ಮಿಲಿಯನ್ ಬ್ಯಾರೆಲ್ ರಷ್ಯಾದ ತೈಲವಿದ್ದು, ಅದು ಕೆಲವೇ ವಾರಗಳಲ್ಲಿ ತಲುಪಬಹುದು.

ಮತ್ತಷ್ಟು ಓದಿ: ನಿಮ್ಮ ಮೇಲೆ ದಾಳಿ ನಿಲ್ಲಬೇಕಾದರೆ ಅಮೆರಿಕನ್ನರನ್ನು ಹೊರಹಾಕಿ; ಗಲ್ಫ್ ದೇಶಗಳಿಗೆ ಇರಾನ್ ಎಚ್ಚರಿಕೆ

ಹಾರ್ಮುಜ್ ಜಲಸಂಧಿ ಏಕೆ ಮುಖ್ಯ?

ಹಾರ್ಮುಜ್ ಜಲಸಂಧಿಯು ಇರಾನ್ ಮತ್ತು ಓಮನ್ ನಡುವಿನ ಸಮುದ್ರ ಮಾರ್ಗವಾಗಿದೆ. ಇದು ಪರ್ಷಿಯನ್ ಕೊಲ್ಲಿಯನ್ನು ಒಮನ್ ಕೊಲ್ಲಿಗೆ ಮತ್ತು ನಂತರ ಅರೇಬಿಯನ್ ಸಮುದ್ರಕ್ಕೆ ಸಂಪರ್ಕಿಸುತ್ತದೆ. ಭಾರತವು ತನ್ನ ಕಚ್ಚಾ ತೈಲದ ಅಗತ್ಯದ ಸರಿಸುಮಾರು 40 ಪ್ರತಿಶತವನ್ನು ಈ ಸಮುದ್ರ ಮಾರ್ಗದ ಮೂಲಕ ಆಮದು ಮಾಡಿಕೊಳ್ಳುತ್ತದೆ. ಸೌದಿ ಅರೇಬಿಯಾ, ಇರಾಕ್, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಕುವೈತ್‌ನಂತಹ ಪಶ್ಚಿಮ ಏಷ್ಯಾದ ದೇಶಗಳು ಸಹ ಈ ಮಾರ್ಗದ ಮೂಲಕ ಭಾರತಕ್ಕೆ ಕಚ್ಚಾ ತೈಲವನ್ನು ಕಳುಹಿಸುತ್ತವೆ.

ಅಮೆರಿಕ ಮತ್ತು ಚೀನಾ ನಂತರ ಭಾರತವು ವಿಶ್ವದ ಮೂರನೇ ಅತಿದೊಡ್ಡ ಕಚ್ಚಾ ತೈಲ ಖರೀದಿದಾರ ರಾಷ್ಟ್ರವಾಗಿದೆ. ದೇಶದ ಸಂಸ್ಕರಣಾಗಾರಗಳು ಪ್ರತಿದಿನ ಸುಮಾರು 5.6 ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲವನ್ನು ಸಂಸ್ಕರಿಸುತ್ತವೆ. ಭಾರತದ ಕಚ್ಚಾ ತೈಲ ಅಗತ್ಯಗಳಲ್ಲಿ ಶೇ.40 ವರೆಗೆ ಪೂರೈಸಲು ರಷ್ಯಾ ಸಹಾಯ ಮಾಡಲು ಸಿದ್ಧವಾಗಿದೆ ಎಂದು ಉದ್ಯಮದ ಮೂಲವೊಂದು ರಾಯಿಟರ್ಸ್‌ಗೆ ತಿಳಿಸಿದೆ.

ಕೈಗಾರಿಕಾ ದತ್ತಾಂಶಗಳು ಭಾರತದ ರಷ್ಯಾದ ಕಚ್ಚಾ ತೈಲ ಆಮದು ಜನವರಿ 2026 ರಲ್ಲಿ ದಿನಕ್ಕೆ ಸುಮಾರು 1.1 ಮಿಲಿಯನ್ ಬ್ಯಾರೆಲ್‌ಗಳಿಗೆ ಇಳಿದಿದೆ ಎಂದು ತೋರಿಸಿವೆ, ಇದು ನವೆಂಬರ್ 2022 ರ ನಂತರದ ಅತ್ಯಂತ ಕಡಿಮೆ. ನವದೆಹಲಿಯು ಅಮೆರಿಕದ ಸುಂಕಗಳಿಂದ ಪರಿಹಾರವನ್ನು ಕೋರಿತು, ಒಟ್ಟು ತೈಲ ಆಮದಿನಲ್ಲಿ ಮಾಸ್ಕೋದ ಪಾಲನ್ನು ಶೇಕಡಾ 21.2 ಕ್ಕೆ ಇಳಿಸಿತು. ಫೆಬ್ರವರಿ 2026 ರಲ್ಲಿ ಈ ಪಾಲು ಸುಮಾರು ಶೇಕಡಾ 30 ಕ್ಕೆ ಏರಿತು.

ಭಾರತದ ಹೆಚ್ಚುತ್ತಿರುವ ತೊಂದರೆಗಳನ್ನು ನೋಡಿ, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತೊಮ್ಮೆ ಸಹಾಯಹಸ್ತ ಚಾಚಿದ್ದಾರೆ. ರಷ್ಯಾದ ರಾಯಭಾರಿ ಡೆನಿಸ್ ಅಲಿಪೋವ್ ಅವರು ಭಾರತದ ಇಂಧನ ಅಗತ್ಯಗಳನ್ನು ಪೂರೈಸಲು ಸಿದ್ಧರಿರುವುದಾಗಿ ಹೇಳಿದ್ದಾರೆ. ಇಂಧನ ಪೂರೈಕೆಯಲ್ಲಿ ಅಡಚಣೆಯ ಹೊರತಾಗಿಯೂ, ರಷ್ಯಾ ಭಾರತದ ಅಗತ್ಯಗಳನ್ನು ಪೂರೈಸುವುದನ್ನು ಮುಂದುವರಿಸುತ್ತದೆ ಎಂದು ಅವರು ಹೇಳಿದರು.

ತೈಲದ ಜೊತೆಗೆ, ರಷ್ಯಾ ಭಾರತಕ್ಕೆ ದ್ರವೀಕೃತ ನೈಸರ್ಗಿಕ ಅನಿಲ (LNG) ವನ್ನು ಸಹ ನೀಡಿದೆ. ಕತಾರ್ ಭಾರತದ ಅತಿದೊಡ್ಡ ಅನಿಲ ರಫ್ತುದಾರ, ಆದರೆ ಯುದ್ಧದಿಂದಾಗಿ, ಕತಾರ್ ಉತ್ಪಾದನೆಯನ್ನು ಸ್ಥಗಿತಗೊಳಿಸಿದೆ, ಅನಿಲ ಪೂರೈಕೆಗೆ ಬೆದರಿಕೆಯನ್ನು ಒಡ್ಡಿದೆ. ಪುಟಿನ್ ಅವರು ರಷ್ಯಾ ಯುರೋಪ್‌ಗೆ ಪೂರೈಕೆಯನ್ನು ನಿಲ್ಲಿಸಬಹುದು ಎಂದು ಹೇಳಿದ್ದಾರೆ.

ಇರಾನ್ ಮತ್ತು ಮಧ್ಯಪ್ರಾಚ್ಯ ದೇಶಗಳು ಯುದ್ಧದಲ್ಲಿ ತೊಡಗಿರುವ ಸಮಯದಲ್ಲಿ ಈ ಹೇಳಿಕೆ ಬಂದಿದೆ. ಇದು ಸಂಭವಿಸಿದಲ್ಲಿ, ಯುರೋಪ್ ತೊಂದರೆಗಳನ್ನು ಎದುರಿಸಬಹುದು. ಜಾಗತಿಕ ಪೂರೈಕೆ ಸರಪಳಿಗಳು ಯುದ್ಧದ ಹಿಡಿತದಲ್ಲಿರುವ ಸಮಯದಲ್ಲಿ ರಷ್ಯಾ ಯುರೋಪಿನ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ. ಯುರೋಪ್ ರಷ್ಯಾದ ಮೇಲೆ ಹೊಸ ನಿರ್ಬಂಧಗಳನ್ನು ವಿಧಿಸಲು ನಿರಂತರವಾಗಿ ಯೋಜಿಸುತ್ತಿದೆ.

ಉಕ್ರೇನ್ ಯುದ್ಧದ ನಂತರ, ಯುನೈಟೆಡ್ ಸ್ಟೇಟ್ಸ್ ಸೇರಿದಂತೆ ಪಾಶ್ಚಿಮಾತ್ಯ ದೇಶಗಳು ರಷ್ಯಾದ ಮೇಲೆ ನಿರ್ಬಂಧಗಳನ್ನು ವಿಧಿಸಿದವು. ಅಮೆರಿಕದ ಪ್ರಭಾವದ ಅಡಿಯಲ್ಲಿ, ಯುರೋಪ್ ಸಹ ಅವರ ಪರವಾಗಿ ನಿಂತು ರಷ್ಯಾದ ರಫ್ತಿನ ಮೇಲೆ ನಿರ್ಬಂಧಗಳನ್ನು ವಿಧಿಸಿತ್ತು, ಆದಾಗ್ಯೂ ಯುರೋಪ್ ಇದರಿಂದ ಸಂಪೂರ್ಣವಾಗಿ ತನ್ನನ್ನು ತಾನು ರಕ್ಷಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ರಶ್ಮಿಕಾ-ವಿಜಯ್ ದೇವರಕೊಂಡ ವಿವಾಹಕ್ಕೆ ಅಂತಿಮವಾಗಿ ಖರ್ಚಾಗಿದ್ದೆಷ್ಟು? – Kannada News | Vijay Deverakonda and Rashmika Wedding: How much virosh Couple spend on marriage

ಕಳೆದ ಒಂದು ವಾರದಿಂದ ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ (Rashmika Mandanna) ಅವರ ವಿವಾಹದ ಸುದ್ದಿ ಎಲ್ಲೆಡೆ ಟ್ರೆಂಡಿಂಗ್‌ನಲ್ಲಿದೆ. ವಿರೋಶ್ ವಿವಾಹದ ಹೆಸರು ಕೂಡ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯಾಗುತ್ತಿದೆ. ಹಲವು ವರ್ಷಗಳಿಂದ ಪ್ರೀತಿಸುತ್ತಿರುವ ವಿಜಯ್-ರಶ್ಮಿಕಾ ಫೆಬ್ರವರಿ 26 ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾದರು. ಅದಾದ ನಂತರ, ವಿಜಯ್ ಊರಲ್ಲಿ ಔತಣಕೂಟವಿತ್ತು, ಸತ್ಯ ನಾರಾಯಣ ವ್ರತ, ಇಡೀ ಹಳ್ಳಿಗೆ ಊಟ, ಹೈದರಾಬಾದ್‌ನಲ್ಲಿ ಅಭಿಮಾನಿಗಳಿಗೆ ಒಂದು ಔತಣಕೂಟ ಆಯೋಜಿಸಲಾಯಿತು. ಅಂತಿಮವಾಗಿ, ಚಲನಚಿತ್ರ ಮತ್ತು ರಾಜಕೀಯ ಸೆಲೆಬ್ರಿಟಿಗಳಿಗೆ ವಿವಾಹ ಆರತಕ್ಷತೆಯಲ್ಲಿ ಭಾಗವಹಿಸಿದರು.

ವಿರೋಶ್ ಆಫ್ ವೆಡ್ಡಿಂಗ್ ಸುಮಾರು ಒಂದು ವಾರದವರೆಗೆ ಟ್ರೆಂಡಿಂಗ್‌ನಲ್ಲಿತ್ತು. ವಿಜಯ್ ದೇವರಕೊಂಡ-ರಶ್ಮಿಕಾ ಅವರ ವಿವಾಹಕ್ಕೆ ಖರ್ಚು ಮಾಡಿದ ಮೊತ್ತ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.  ರಾಜಸ್ಥಾನದ ಉದಯಪುರದಲ್ಲಿ ನಡೆದ ಅದ್ದೂರಿ ವಿವಾಹಕ್ಕೆ ಹೆಚ್ಚು ಮೊತ್ತ ಖರ್ಚಾಗಿದೆ ಎಂದು ಹೇಳಲಾಗುತ್ತಿದೆ. ಕೆಲವೇ ಜನರ ಸಮ್ಮುಖದಲ್ಲಿ ಮದುವೆ ನಡೆದರೂ, ಅಪಾರ ಪ್ರಮಾಣದ ಹಣವನ್ನು ಖರ್ಚು ಮಾಡಲಾಗಿದೆ ಎನ್ನಲಾಗಿದೆ.

ವಿಜಯ್ ಅವರ ತವರು, ಸತ್ಯನಾರಾಯಣ ವ್ರತದೊಂದಿಗೆ, ಗ್ರಾಮಸ್ಥರಿಗೆ ಅದ್ಧೂರಿ ಔತಣಕೂಟವನ್ನು ಏರ್ಪಡಿಸಿತು. ಸಂಗೀತ ಕಾರ್ಯಕ್ರಮ, ಅಭಿಮಾನಿಗಳಿಗೆ ಹಬ್ಬ, ದೇಶಾದ್ಯಂತ ಸಿಹಿತಿಂಡಿಗಳ ವಿತರಣೆ, ಹಲವಾರು ದೇವಾಲಯಗಳಲ್ಲಿ ಅನ್ನಸಂತರ್ಪಣೆ ಮತ್ತು ಅಂತಿಮವಾಗಿ ಹೈದರಾಬಾದ್‌ನಲ್ಲಿ ಅದ್ಧೂರಿ ಸ್ವಾಗತ ಸಮಾರಂಭದಂತಹ ಕಾರ್ಯಕ್ರಮಗಳಿಗೆ ಭಾರಿ ಮೊತ್ತದ ಹಣವನ್ನು ಖರ್ಚು ಮಾಡಲಾಗಿದೆ ಎಂದು ವರದಿ ಆಗಿದೆ.

ಇದನ್ನೂ ಓದಿ: ಹೇಗಿದ್ದಾರೆ ನೋಡಿ ರಶ್ಮಿಕಾ ತಂದೆ-ತಾಯಿ, ತಂಗಿ; ರಿಸೆಪ್ಶನ್​ ಅಲ್ಲಿ ಗಮನ ಸೆಳೆದ ಫ್ಯಾಮಿಲಿ ಫೋಟೋ

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರ ವಿವಾಹಕ್ಕೆ 15 ಕೋಟಿ ಖರ್ಚಾಗಿದೆ ಎಂದು ಕೆಲವರು ಹೇಳಿದ್ದಾರೆ. ದೇಶದ ಪ್ರಮುಖ ಈವೆಂಟ್ ಮ್ಯಾನೇಜ್ಮೆಂಟ್ ಕಂಪನಿಗೆ ವಿವಾಹವನ್ನು ಆಯೋಜಿಸುವ ಜವಾಬ್ದಾರಿಯನ್ನು ವಹಿಸಲಾಗಿತ್ತು. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಅವರ ವಿವಾಹದ ವೆಚ್ಚವನ್ನು ಒಟ್ಟಾಗಿ ಭರಿಸಿದ್ದಾರಂತೆ. ಮದುವೆಗಾಗಿ ಅವರು ಸುಮಾರು 3 ಕೆಜಿ ಚಿನ್ನ ಮತ್ತು ದುಬಾರಿ ಬಟ್ಟೆಗಳನ್ನು ಖರೀದಿಸಿದ್ದಾರೆ ಎಂದು ವರದಿಯಾಗಿದೆ. ಇವರ ವಿವಾಹವನ್ನು ಪ್ರಸಾರ ಮಾಡಲು ಒಟಿಟಿ ಕಂಪನಿಗೆ ಹಕ್ಕು ನೀಡಲಾಗಿದೆ ಎನ್ನಲಾಗಿತ್ತು, ಈ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಯಾರಿಂದಲೂ ಸಹ ಸಾಧ್ಯವಾಗದ ವಿಶ್ವ ದಾಖಲೆ ನಿರ್ಮಿಸಿದ ಜೇಕಬ್ ಬೆಥೆಲ್ – Kannada News | Jacob bethell Creates New World Record in Cricket

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿನ ನಡೆದ ಭಾರತದ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಯುವ ದಾಂಡಿಗ ಜೇಕಬ್ ಬೆಥೆಲ್ (Jacob bethell) ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಬೆಥೆಲ್ ಕ್ರಿಕೆಟ್ ಇತಿಹಾಸದಲ್ಲೇ ಯಾರೂ ಸಹ ಮಾಡದ ವಿಶೇಷ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

Source link

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಹೆಚ್ಚಾಯ್ತು ಬಿಸಿಲಿನ ಝಳ! ಇನ್ನೂ ಕೆಲ ದಿನ ಇದೇ ಪರಿಸ್ಥಿತಿ – Kannada News | Bengaluru temperature: Dry weather in Karnataka, raise in temperature

ಬೆಂಗಳೂರಿನಲ್ಲಿ ಹೆಚ್ಚಾಯ್ತು ಬಿಸಿಲಿನ ಝಳ! ಇನ್ನೂ ಕೆಲ ದಿನ ಇದೇ ಪರಿಸ್ಥಿತಿ

ಬೆಂಗಳೂರು, ಮಾರ್ಚ್​ 06: ಇಂದು ಬೆಂಗಳೂರಿನಲ್ಲಿ ತಾಪಮಾನದಲ್ಲಿ  (Weather Forecast) ಕೊಂಚ ಏರಿಕೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ. ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಎಲ್ಲೆಲ್ಲಿ ಒಣ ಹವೆ?

ಇಂದಿನಿಂದ ಕೆಲ ದಿನ ರಾಜ್ಯದಲ್ಲಿ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದ್ದು, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಾರ್ಚ್​ ಎರಡನೇ ವಾರದಲ್ಲಿ ತಾಪಮಾನ ಹೆಚ್ಚಳ

ನಗರದಲ್ಲಿ ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಬೇಕು.

ಹೆಚ್ಚಾಗಿ ನೀರು, ತಂಪು ಪಾನೀಯಗಳು ಹಾಗೂ ಹಣ್ಣುಗಳನ್ನು ಸೇವಿಸಿ ದೇಹದ ತಾಪಮಾನ ನಿಯಂತ್ರಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಒಟ್ಟಿನಲ್ಲಿ, ಈ ವರ್ಷವೂ ಬೆಂಗಳೂರು ಮಂದಿಗೆ ಕಠಿಣ ಬೇಸಿಗೆ ಎದುರಾಗುವ ಸೂಚನೆಗಳಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಶ್ವಾನಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸತೀಶ್; ಸುತ್ತಿಕೊಂಡು ಬಂದ ಕರ್ಮ – Kannada News | Big Boss Satish Dog Controversy: Breeder Faces Legal Action Over Derogatory Animal Comments

ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ (Satish) ಅವರು ತಮ್ಮನ್ನು ತಾವು ಡಾಗ್ ಬ್ರೀಡರ್ ಎಂದು ಕರೆದುಕೊಂಡಿದ್ದಾರೆ. ಲಕ್ಷದಿಂದ ಹಿಡಿದು ಕೋಟಿವರೆಗಿನ ಡಾಗ್ ತಳಿಗಳನ್ನು ಖರೀದಿಸಿದ್ದಾಗಿ ಅವರು ಹೇಳುತ್ತಾರೆ. ಆದರೆ, ಅವರಿಗೆ ಪ್ರಾಣಿಗಳ ಮೇಲೆ ಸ್ವಲ್ಪವೂ ಪ್ರೀತಿ ಇದ್ದಂತೆ ಇಲ್ಲ. ಈ ವಿಷಯ ಪದೇ ಪದೇ ಸಾಬೀತಾಗುತ್ತಲೇ ಇದೆ. ಇತ್ತೀಚೆಗೆ ಸತೀಶ್ ಅವರ ವಿಡಿಯೋ ಒಂದು ವೈರಲ್ ಆಗಿತ್ತು. ಈ ವಿಡಿಯೋದಲ್ಲಿ ಅವರು ಶ್ವಾನಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಕೇಸ್ ಮಾಡಲಾಗಿದೆ.

ಸತೀಶ್ ಹಾಗೂ ಸೋಶಿಯಲ್ ಮೀಡಿಯಾ ಇನ್​​ಫ್ಲುಯೆನ್ಸರ್ ನಕ್ಕನ್​ಲೇ ಸುಭಾಷ್ ವಿಡಿಯೋ ಒಂದನ್ನು ಮಾಡಿದ್ದರು. ಈ ಸಂದರ್ಭದಲ್ಲಿ ಶ್ವಾನಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಸುಭಾಷ್ ಕೇಳಿದ ಪ್ರಶ್ನೆ ಅಸಹ್ಯವಾಗಿದ್ದರೆ, ಸತೀಶ್ ಕೊಟ್ಟ ಉತ್ತರ ಕೂಡ ಅಷ್ಟೇ ಕೆಟ್ಟದಾಗಿತ್ತು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಸುಭಾಷ್​ ಅವರಿಗಂತೂ ಪ್ರಾಣಿಗಳ ಬಗ್ಗೆ ಗೌರವ ಇಲ್ಲ. ಸತೀಶ್ ಡಾಗ್ ಬ್ರೀಡರ್. ಅವರಿಗಾದರೂ ಪ್ರಾಣಿಗಳ ಮೇಲೆ ಪ್ರೀತಿ ಬೇಡವೇ ಎಂದು ಅನೇಕರು ಪ್ರಶ್ನೆ ಮಾಡಿದ್ದರು. ‘ನಿಜವಾದ ಡಾಗ್​ ಬ್ರೀಡರ್​​ಗಳು ಶ್ವಾನಗಳ ಮೇಲೆ ಯಾವ ರೀತಿ ಪ್ರೀತಿ ತೋರಿಸುತ್ತಾರೆ, ಅವುಗಳನ್ನು ಎಷ್ಟು ಗೌರವಿಸುತ್ತಾರೆ ಎಂಬುದನ್ನು ನೋಡಿಲ್ಲ ಎಂದು ಎಲ್ಲಾದರೂ ನೋಡಿ ಕಲಿತಿಕೊಳ್ಳಿ’ ಎಂದು ಕೆಲವರು ಸತೀಶ್​​ಗೆ ಕಿವಿಮಾತು ಹೇಳಿದ್ದರು. ಈಗ ಸತೀಶ್ ತಮ್ಮ ಹೇಳಿಕೆಯಿಂದ ಸಂಕಷ್ಟ ಅನುಭವಿಸುವಂತಾಗಿದೆ.

ಇದನ್ನೂ ಓದಿ: ‘ನಾನು ಮೀಟರ್ ಇರೋವ್ನು, ಸಿಎಂ ಹೇಳಿದ್ರೂ ವಿಡಿಯೋ ಡಿಲೀಟ್ ಮಾಡಲ್ಲ’; ಸತೀಶ್

ಅನಿಮಲ್​ ವೆಲ್​​ಫೇರ್ ಸಪೋರ್ಟ್​ ಲಕ್ಷ್ಮೀ ಅವರು ದೂರು ದಾಖಲು ಮಾಡಿದ್ದಾರೆ. ಈ ಸಂಬಂಧ ಲಾಯರ್ ಕಿರಣ್ ಅವರು ಮಾಹಿತಿ ನೀಡಿದ್ದಾರೆ. ‘ಸೋಶಿಯಲ್ ಮೀಡಿಯದಲ್ಲಿ ಕೆಟ್ಟ ಕೆಟ್ಟ ವಿಡಿಯೋಗಳನ್ನು ಮಾಡಿ ಹಾಕುವ ಮುನ್ನ ಎಚ್ಚರ’ ಎಂದು ಅವರು ಕಿವಿ ಮಾತು ಹೇಳಿದ್ದಾರೆ. ಸತೀಶ್ ಅವರು ಏನೇ ಆದರೂ ಸರಿ ಪ್ರಚಾರ ಸಿಗಲಿ ಎಂದು ಬಯಸುತ್ತಾರೆ.ಅದು ಕೆಲವೊಮ್ಮೆ ಮಿತಿ ಮೀರಿದ್ದು ಇದೆ. ಈಗ ಅವರು ಮಾಡಿದ ತಪ್ಪಿಗೆ ತೊಂದರೆ ಅನುಭವಿಸುವಂತಾಗಿದೆ.

ಇತ್ತೀಚೆಗೆ ಮೂತ್ರ ಮಾಡುವಾಗಿನ ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದ ಸತೀಶ್, ಅದಕ್ಕೆ ಸುದೀಪ್ ಹಾಡು ಹಾಕಿದ್ದರು. iದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಯಿತು. ಆದರೆ, ಈ ಬಗ್ಗೆ ಅವರು ಅಷ್ಟಾಗಿ ತಲೆಕೆಡಿಸಿಕೊಂಡಿರಲಿಲ್ಲ. ಈಗ ಅವರು ಬೇರೆ ಪ್ರಕರಣದಲ್ಲಿ ಸಂಕಷ್ಟ ಎದುರಿಸುವಂತೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:10 am, Fri, 6 March 26

Source link

Sanju Samson: ನನಗಲ್ಲ, ಈ ಪ್ರಶಸ್ತಿ ಅವರಿಗೆ ಕೊಡ್ಬೇಕಿತ್ತು..! – Kannada News | Sanju Samson Says Jasprit Bumrah deserves the POTM award

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್​ ಪಂದ್ಯದಲ್ಲಿ ರೋಚಕ ಜಯ ಸಾಧಿಸಿ ಟೀಮ್ ಇಂಡಿಯಾ ಫೈನಲ್​ಗೇರಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ 42 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 89 ರನ್ ಬಾರಿಸಿದ್ದರು. ಈ ಸ್ಫೋಟಕ ಅರ್ಧಶತಕದ ನೆರವಿನೊಂದಿಗೆ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 253 ರನ್ ಕಲೆಹಾಕಿತು.

ಈ ಕಠಿಣ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡವು 20 ಓವರ್​ಗಳಲ್ಲಿ 246 ರನ್​ಗಳಿಸಿ ವಿರೋಚಿತವಾಗಿ 7 ರನ್​ಗಳಿಂದ ಸೋಲೊಪ್ಪಿಕೊಂಡಿದ್ದರು. ಈ ಸೋಲಿನೊಂದಿಗೆ ಇಂಗ್ಲೆಂಡ್ ತಂಡದ ಟಿ20 ವಿಶ್ವಕಪ್ ಅಭಿಯಾನ ಅಂತ್ಯವಾಯ್ತು. ಅತ್ತ ಗೆದ್ದು ಬೀಗಿದ ಟೀಮ್ ಇಂಡಿಯಾ ಫೈನಲ್​ಗೆ ಪ್ರವೇಶಿಸಿದೆ.

ಇನ್ನು ನಿರೀಕ್ಷೆಯಂತೆ ಈ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಸಂಜು ಸ್ಯಾಮ್ಸನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಈ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸ್ಯಾಮ್ಸನ್, ಈ ಗೌರವಕ್ಕೆ ಜಸ್​ಪ್ರೀತ್ ಬುಮ್ರಾ ಹೆಚ್ಚು ಅರ್ಹರು. ಹೀಗಾಗಿ ಅವರಿಗೆ ನೀಡಬೇಕಿತ್ತು ಎಂದರು.

ಬ್ಯಾಟಿಂಗ್‌ಗೆ ಪೂರಕವಾಗಿದ್ದ ಪಿಚ್‌ನಲ್ಲಿ ಜಸ್​ಪ್ರೀತ್ ಬುಮ್ರಾ ತಮ್ಮ 4 ಓವರ್‌ಗಳಲ್ಲಿ ಕೇವಲ 33 ರನ್ ನೀಡಿ 1 ವಿಕೆಟ್ ಪಡೆದಿದ್ದರು. ಅದರಲ್ಲೂ ವಿಶೇಷವಾಗಿ 16ನೇ ಓವರ್​ನಲ್ಲಿ ಕೇವಲ 8 ರನ್​ ನೀಡಿದ್ದರು. ಇದಾದ ಬಳಿಕ 18ನೇ ಓವರ್‌ನಲ್ಲಿ ಕೇವಲ 6 ರನ್ ಮಾತ್ರ ನೀಡಿ ಇಡೀ ಪಂದ್ಯದ ಗತಿಯನ್ನು ಬದಲಿಸಿದ್ದರು.

ಜಸ್​ಪ್ರೀತ್ ಬುಮ್ರಾ ಅವರ ಈ ಬೌಲಿಂಗ್​​ನಿಂದಾಗಿ ನಾವು ಇಂದು ಪಂದ್ಯ ಗೆದ್ದಿದ್ದೇವೆ. ಅವರು ಅಂತಹ ಬೌಲಿಂಗ್ ಮಾಡದಿದ್ದರೆ ನಾವು ಈ ಪಂದ್ಯ ಗೆಲ್ಲುತ್ತಿರಲಿಲ್ಲ. ಅವರು ‘ಒಂದು ಪೀಳಿಗೆಯ ಅಪರೂಪದ ಬೌಲರ್’. ಹಾಗಾಗಿ ಈ ಪ್ರಶಸ್ತಿ ಅವರಿಗೆ ಸಲ್ಲಬೇಕಿತ್ತು ಎಂದು ಸಂಜು ಸ್ಯಾಮ್ಸನ್ ಹೇಳಿದ್ದಾರೆ.

ಇದೀಗ ತನ್ನ ಭರ್ಜರಿ ಇನಿಂಗ್ಸ್​ಗೆ ದೊರಕಿದ್ದ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಯನ್ನು ಜಸ್​ಪ್ರೀತ್ ಬುಮ್ರಾಗೆ ಅರ್ಪಿಸುವ ಮೂಲಕ ಸಂಜು ಸ್ಯಾಮ್ಸನ್ ಎಲ್ಲರ ಮನ ಗೆದ್ದಿದ್ದಾರೆ. ಅದರಲ್ಲೂ ಟೀಮ್ ಇಂಡಿಯಾದ ಎರಡು ಗೆಲುವುಗಳಲ್ಲಿ ಸ್ಯಾಮ್ಸನ್ ಪ್ರಮುಖ ಪಾತ್ರವಹಿಸಿದ್ದಾರೆ.

ಇದನ್ನೂ ಓದಿ: IND vs ENG: ಟೀಮ್ ಇಂಡಿಯಾ ಗೆಲುವಿಗೆ ಇವರೇ ಕಾರಣ..!

ಇದಕ್ಕೂ ಮುನ್ನ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಅಜೇಯ 97 ರನ್ ಬಾರಿಸಿ ಟೀಮ್ ಇಂಡಿಯಾಗೆ ಗೆಲುವು ತಂದು ಕೊಟ್ಟಿದ್ದರು. ಇದೀಗ ಇಂಗ್ಲೆಂಡ್ ವಿರುದ್ಧ ನಿರ್ಣಾಯಕ ಇನಿಂಗ್ಸ್ ಆಡುವ ಮೂಲಕ ಭಾರತದ ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸಿದ್ದಾರೆ. ಈ ಮೂಲಕ ಬ್ಯಾಕ್ ಟು ಬ್ಯಾಕ್ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಗಿಟ್ಟಿಸಿಕೊಂಡಿದ್ದಾರೆ.

Source link

ಅಯ್ಯಯ್ಯೋ.. ಕುರ್ಚಿಯಿಂದ ಜಾರಿ ಬಿದ್ದ ನಾಗ ಚೈತನ್ಯ; ಪೆಟ್ಟಾಯ್ತಾ? – Kannada News | Naga Chaitanya Falldown From Chair in film Vrushakarma Event

ನಾಗ ಚೈತನ್ಯ ಅವರು ಕುರ್ಚಿಯ ಮೇಲೆ ಕುಳಿತುಕೊಳ್ಳಲು ಹೋಗಿ ಜಾರಿ ಬಿದ್ದ ಘಟನೆಯೊಂದು ನಡೆದಿದೆ. ಅವರ ಮುಂದಿನ ಸಿನಿಮಾ ವೃಷಕರ್ಮ ಚಿತ್ರದ ಈವೆಂಟ್ ಅಲ್ಲಿ ಭಾಗಿ ಆದರು. ಅವರು ಬಂದು ಕುರ್ಚಿ ಮೇಲೆ ಕೂರಲು ಪ್ರಯತ್ನಿಸಿದರು ಮತ್ತು ಅದು ಹಿಂದಕ್ಕೆ ಭಾಗಿತು. ಇದರಿಂದ ಅವರು ಬಿದ್ದರು. ಈ ಪರಿಸ್ಥಿತಿಯನ್ನು ಅವರು ನಗುತ್ತಲೇ ಹ್ಯಾಂಡಲ್ ಮಾಡಿದರು. ಅವರ ಬಗ್ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಕೆಲವೊಮ್ಮೆ ಸೆಲೆಬ್ರಿಟಿಗಳು ಈ ರೀತಿ ಆದಾಗ ಸಿಟ್ಟಾಗುತ್ತಾರೆ. ಅಲ್ಲಿದ್ದವರನ್ನು ಬಯ್ಯುತ್ತಾರೆ. ಆದರೆ, ಅವರು ಹಾಗೆ ಮಾಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version