ಶೃಂಗೇರಿ ಅಂಚೆ ಮತಗಳ ಟ್ಯಾಂಪರಿಂಗ್: ಚುನಾವಣಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಹೇಳಿದ್ದೇನು? – Kannada News | Sringeri Postal Vote Recount: Returning Officer Clarifies Process Amidst Tampering Allegations
ಚಿಕ್ಕಮಗಳೂರು, ಮೇ 03: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಹೈಕೋರ್ಟ್ ಆದೇಶದಂತೆ ಪೂರ್ಣಗೊಂಡಿದ್ದು, ಚುನಾವಣಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಅವರು ಚಿಕ್ಕಮಗಳೂರಿನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಟ್ಯಾಂಪರಿಂಗ್ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, ಆ ಆರೋಪಗಳು ಕ್ರಿಮಿನಲ್ ಅಪರಾಧ ವ್ಯಾಪ್ತಿಗೆ ಬರುತ್ತಿದ್ದು, ರಿಟರ್ನಿಂಗ್ ಆಫೀಸರ್ ಆಗಿ ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಮ್ಮ ವ್ಯಾಪ್ತಿ ಕೇವಲ ಅಂಚೆ ಮತಪತ್ರಗಳ ಮರು ಪರಿಶೀಲನೆ ಮತ್ತು ಮರು ಎಣಿಕೆಗೆ ಸೀಮಿತವಾಗಿದೆ ಎಂದು ತಿಳಿಸಿದ್ದಾರೆ….