Headlines

ತಲೆಸ್ನಾನದ ಸಂದರ್ಭದಲ್ಲಿ ಮಾಡುವ ಈ ತಪ್ಪುಗಳು ಸಹ ಕೂದಲು ಉದುರಲು ಮುಖ್ಯ ಕಾರಣ – Kannada News | These mistakes of when washing hair can cause hair loss

ಇಂದಿನ ದಿನಗಳಲ್ಲಿ ಕೂದಲು ಉದುರುವಿಕೆ (Hair Fall) ಸಮಸ್ಯೆ ತೀರಾ ಹೆಚ್ಚಿದೆ. ಅದೆಷ್ಟೇ ಕೂದಲ ಆರೈಕೆ ಮಾಡಿದರೂ ಸಹ ಹೆಚ್ಚಿನವರಿಗೆ ಕೂದಲು ಉದುರುವ ಸಮಸ್ಯೆ ಮಾತ್ರ ಕಡಿಮೆ ಆಗ್ತಿಲ್ಲ. ಇದಕ್ಕೆಲ್ಲಾ ನಾವು ತಿನ್ನುವ ಆಹಾರ, ನಮ್ಮ ಜೀವನಶೈಲಿ ಮುಖ್ಯ ಕಾರಣ. ಈ ಕಾರಣದಿಂದಾಗಿ ಎಷ್ಟೇ ಆರೈಕೆ ಮಾಡಿದರೂ ಕೂದಲು ಉದುರುವ ಸಮಸ್ಯೆ ಮಾತ್ರ ಕಡಿಮೆ ಆಗುವುದಿಲ್ಲ. ಇದಲ್ಲದೆ ತಲೆ ಸ್ನಾನ ಮಾಡುವ ಸಂದರ್ಭದಲ್ಲಿ ಮಾಡುವ ಕೆಲವೊಂದು ತಪ್ಪುಗಳ ಸಹ ಕೂದಲು ಉದುರಲು ಮುಖ್ಯ ಕಾರಣವಂತೆ. ಹೌದು ಕೂದಲು…

Read More

IND vs ENG: ಸೆಮಿಫೈನಲ್​ನಲ್ಲೂ ನಂಬಿಕೆ ಉಳಿಸಿಕೊಳ್ಳದ ಅಭಿಷೇಕ್ ಶರ್ಮಾ

ಇಂಗ್ಲೆಂಡ್ ವಿರುದ್ಧದ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾರಿಂದ ಒಂದೊಳ್ಳೆ ಇನ್ನಿಂಗ್ಸ್​ನ ನಿರೀಕ್ಷೆ ಇಡಲಾಗಿತ್ತು. ಏಕೆಂದರೆ ಇಡೀ ವಿಶ್ವಕಪ್​ನಲ್ಲಿ ಅಭಿಷೇಕ್ ಶರ್ಮಾ ಒಂದು ಅರ್ಧಶತಕವನ್ನು ಬಾರಿಸಿದ್ದನ್ನು ಬಿಟ್ಟರೆ ಉಳಿದ ಪಂದ್ಯದಲ್ಲಿ ಪರಿಣಾಮಕಾರಿಯಾಗಿಲ್ಲ. ಹೀಗಾಗಿ ಮಾಡು ಇಲ್ಲವೇ ಮಡಿ ಪಂದ್ಯದಲ್ಲಾದರೂ ಅಭಿಷೇಕ್ ಅಬ್ಬರಿಸುತ್ತಾರಾ ಎಂದು ನಿರೀಕ್ಷಿಸಲಾಗಿತ್ತು. ಆದರೆ ಆ ನಿರೀಕ್ಷೆ ಹುಸಿಯಾಗಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಭಾರತವನ್ನು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಅದರಂತೆ…

Read More

ಹಾರ್ಮುಜ್ ಜಲಸಂಧಿ ಅಮೆರಿಕ, ಇಸ್ರೇಲ್, ಯೂರೋಪ್​ಗೆ ಮಾತ್ರ ಬಂದ್; ಬೇರೆ ದೇಶಗಳಿಗಿಲ್ಲ ತಡೆ: ಇರಾನ್ ಸ್ಪಷ್ಟನೆ – Kannada News | Hormuz Strait Is Only Closed To US, Israel, Europe, says Iran

ನವದೆಹಲಿ, ಮಾರ್ಚ್ 5: ಹಾರ್ಮುಜ್ ಜಲಸಂಧಿಯಲ್ಲಿ ತೈಲ ನೌಕೆಗಳನ್ನು ಸಾಗಲು ಬಿಡುವುದಿಲ್ಲ ಎಂದು ಹೇಳಿ ತಡೆ ಹಾಕಿದ್ದ ಇರಾನ್ ದೇಶ ಈಗ ತನ್ನ ನಿಲುವನ್ನು ಸಡಿಲಿಸಿದೆ. ಅಮೆರಿಕ, ಇಸ್ರೇಲ್, ಯೂರೋಪ್ ಹಾಗೂ ಅವರ ಇತರ ಪಶ್ಚಿಮ ಮಿತ್ರರಿಗೆ ಮಾತ್ರ ಈ ಮಾರ್ಗದಿಂದ ತೈಲ ಪೂರೈಕೆಗೆ ಅವಕಾಶ ಕೊಡುವುದಿಲ್ಲ ಎಂದು ಇರಾನ್​ನ ಇಸ್ಲಾಮಿಕ್ ರೆವಲ್ಯೂಶನರಿ ಗಾರ್ಡ್ ಕಾರ್ಪ್ಸ್ ಸೇನೆ ಹೇಳಿದೆ. ಇದರೊಂದಿಗೆ, ಭಾರತ ಹಾಗೂ ಇತರ ಹಲವು ದೇಶಗಳು ತುಸು ನಿರಾಳಗೊಂಡಂತಾಗಿದೆ. ಹಾರ್ಮುಜ್ ಜಲಸಂಧಿಯು ಪಶ್ಚಿಮ ಏಷ್ಯಾ ಭಾಗದಲ್ಲಿ…

Read More

Video: ತನ್ನ ಮುಂದೆ ಡ್ಯಾನ್ಸ್ ಮಾಡ್ತಿದ್ದ ಪುಟ್ಟ ಹುಡುಗಿಯನ್ನು ಅಟ್ಟಾಡಿಸಿಕೊಂಡು ಹೋದ ಹುಂಜ – Kannada News | A rooster chased away a little girl, video goes viral

ಪುಟ್ಟ ಮಕ್ಕಳೇ (little kids) ಹಾಗೆ, ತುಂಟಾಟ ಮಾಡುವುದರಲ್ಲಿ ಎತ್ತಿದ ಕೈ. ಏನೋ ಮಾಡಲು ಹೋಗಿ ಎಡವಟ್ಟು ಮಾಡಿಕೊಳ್ಳುವುದೇ ಹೆಚ್ಚು. ಈ ಪುಟ್ಟ ಹುಡುಗಿಯದ್ದು (little girl) ಅದೇ ಕಥೆ. ಹುಂಜದ ಮುಂದೆ ಕುಣಿದಾಡುತ್ತಿದ್ದಂತೆ ಪುಟ್ಟ ಹುಡುಗಿಯನ್ನು ಅಟ್ಟಾಡಿಸಿಕೊಂಡು ಹೋದ ವಿಡಿಯೋ ಸದ್ಯ ವೈರಲ್ ಆಗಿದೆ. ಈ ವಿಡಿಯೋ ನೆಟ್ಟಿಗರ ಮೊಗದಲ್ಲಿ ನಗು ತರಿಸಿದೆ. trollhaiklu_.ka10 ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಶಾಲಾ ಸಮವಸ್ತ್ರ ಧರಿಸಿರುವ ಪುಟ್ಟ ಹುಡುಗಿಯೊಬ್ಬಳು ಹುಂಜ ಮುಂದೆ ಡ್ಯಾನ್ಸ್ ಮಾಡುತ್ತಿದ್ದಾರೆ….

Read More

ಮುಸ್ಲಿಮರು ಬಸವಕಲ್ಯಾಣ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಕಲ್ಲು ತೂರಿದ್ಯಾಕೆ? ಅಸಲಿ ಕಾರಣ ಬಿಚ್ಚಿಟ್ಟ ಎಸ್ಪಿ – Kannada News | Bidar SP Talks about thousand Of Muslims Protest Infront of basavakalyana police station And Stone Pelting

ಬೀದರ್, (ಮಾರ್ಚ್ 05): ಜಿಲ್ಲೆಯ ಬಸವಕಲ್ಯಾಣ ಪೊಲೀಸ್ ಠಾಣೆಗೆ ( basavakalyana police station) ಸಾವಿರಾರು ಮುಸ್ಲಿಮರು (Muslim) ಮುತ್ತಿಗೆ ಯತ್ನಿಸಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ತಮ್ಮ ಶಿಕ್ಷಕರ ಮೇಲೆ ಹಿಂದೂ ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮಾರ್ಚ್ 3ರಂದು ಸಹಸ್ರಾರು ಮುಸ್ಲಿಮರು ಬಸವಕಲ್ಯಾಣ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದು, ಅಲ್ಲಾಹು ಅಕ್ಬರ್, ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ಇದೇ ವೇಳೆ ಕೆಲವರು ಪೊಲೀಸ್ ವ್ಯಾನ್​ ಮೇಲೆ ಕಲ್ಲು…

Read More

ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿದವರಿಗೆ ಸೋನು ಸೂದ್ ಕಡೆಯಿಂದ ಉಚಿತ ವಸತಿ ಸೌಲಭ್ಯ – Kannada News | Sonu Sood offers free accommodation for stranded travellers in Dubai crisis

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಅಮೆರಿಕ-ಇರಾನ್ ಸಂಘರ್ಷದ ನಡುವೆ, ವಿಮಾನಯಾನ ರದ್ದತಿಯಿಂದಾಗಿ ದುಬೈನಲ್ಲಿ ಸಿಲುಕಿರುವ ನೂರಾರು ಪ್ರವಾಸಿಗರ ನೆರವಿಗೆ ಬಾಲಿವುಡ್ ನಟ ಸೋನು ಸೂದ್ (Sonu Sood) ಧಾವಿಸಿದ್ದಾರೆ. ಸಂಕಷ್ಟದಲ್ಲಿ ಇರುವವರಿಗೆ ಉಚಿತವಾಗಿ ವಸತಿ ಸೌಲಭ್ಯ ಕಲ್ಪಿಸುವುದಾಗಿ ಘೋಷಿಸುವ ಮೂಲಕ ಅವರು ಮತ್ತೊಮ್ಮೆ ತಮ್ಮ ದೊಡ್ಡ ಗುಣವನ್ನು ಪ್ರದರ್ಶಿಸಿದ್ದಾರೆ. ಈ ಹಿಂದೆ 2020-21ರ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಲಕ್ಷಾಂತರ ವಲಸೆ ಕಾರ್ಮಿಕರನ್ನು ಅವರ ಮನೆಗಳಿಗೆ ತಲುಪಿಸುವ ಮೂಲಕ ಸೋನು ಸೂದ್ ದೇಶಾದ್ಯಂತ ಅಪಾರ ಪ್ರೀತಿ ಗಳಿಸಿದ್ದರು. ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲೂ…

Read More

ಶಿವಮೊಗ್ಗದ ಹೊಸನಗರದಲ್ಲಿ ಸಮಂತಾ ಹೋಳಿ: ಗಂಡನ ಜೊತೆ ಸಂಭ್ರಮ – Kannada News | Samantha Ruth Prabhu celebrates Holi 2026 in Hosanagara Shivamogga

ಖ್ಯಾತ ನಟಿ ಸಮಂತಾ ರುತ್ ಪ್ರಭು ಅವರು ಮದುವೆ ಬಳಿಕ ಸಖತ್ ಜಾಲಿಯಾಗಿದ್ದಾರೆ. ‘ಮಾ ಇಂಟಿ ಬಂಗಾರಂ’ (Maa Inti Bangaram) ಸಿನಿಮಾದ ಶೂಟಿಂಗ್​​ನಲ್ಲಿ ಅವರು ಬ್ಯುಸಿಯಾಗಿದ್ದಾರೆ. ವಿಶೇಷ ಏನೆಂದರೆ, ಈ ಸಿನಿಮಾದ ಚಿತ್ರೀಕರಣ ಕರ್ನಾಟಕದಲ್ಲಿ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಸಮಂತಾ ರುತ್ ಪ್ರಭು (Samantha Ruth Prabhu) ಅವರು ಶೂಟಿಂಗ್ ಮಾಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಹೋಳಿ ಹಬ್ಬ ಆಚರಿಸಿದ್ದಾರೆ. ಗಂಡ ರಾಜ್ ನಿಡಿಮೋರು ಹಾಗೂ ಚಿತ್ರತಂಡದ ಜೊತೆ ಸಮಂತಾ ರುತ್ ಪ್ರಭು…

Read More

ಇನಾಂ ದತ್ತಾತ್ರೇಯ ದರ್ಗಾದಲ್ಲಿ ಉರುಸ್​​ ಆಚರಣೆಗೆ ತಾರತಮ್ಯ: ಕಾಂಗ್ರೆಸ್​​ ವಿರುದ್ಧ ತಿರುಗಿಬಿದ್ದ ಮುಸ್ಲಿಮರು – Kannada News | Chikkamagaluru Datta Peeta Urus Row: Muslim Community spark on congress government

ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾImage Credit source: tv9 kannada ಚಿಕ್ಕಮಗಳೂರು, ಮಾರ್ಚ್​ 05: ವಿವಾದಿತ ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಉರುಸ್ ಆಚರಣೆ ವೇಳೆ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮುಸ್ಲಿಂ (Muslims) ಸಮುದಾಯದವರು ರಾಜ್ಯ ಕಾಂಗ್ರೆಸ್ ಸರ್ಕಾರದ ತಿರುಗಿ ಬಿದ್ದಿದ್ದಾರೆ. ಗೋರಿಗಳ ಮೇಲೆ ಹಸಿರು ಬಟ್ಟೆ, ಗಂಧ ಲೇಪನ ಮಾಡದ ಹಿನ್ನಲೆ ಜನ ಶಕ್ತಿ ಸೇರಿದಂತೆ ಮುಸ್ಲಿಂ ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತ ಸಾಲಿನಲ್ಲಿರುವ…

Read More

ಖಮೇನಿ ಸಾವಿಗೆ ಭಾರತ ಸಂತಾಪ; ಇರಾನ್ ರಾಯಭಾರಿಯನ್ನು ಭೇಟಿ ಮಾಡಿದ ವಿದೇಶಾಂಗ ಕಾರ್ಯದರ್ಶಿ ಮಿಶ್ರಿ – Kannada News | India Condoles Iran Supreme Leader Khamenei’s Death Foreign Secretary Meets Iran Ambassador

ನವದೆಹಲಿ, ಮಾರ್ಚ್ 5: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯ ನಿಧನಕ್ಕೆ ಭಾರತ ಸಂತಾಪ ಸೂಚಿಸಿದೆ. ಭಾರತದ ಪರವಾಗಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಇಂದು ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ali Khamenei) ಅವರ ಸಂತಾಪ ಸೂಚಿಸುವ ಪುಸ್ತಕಕ್ಕೆ ಸಹಿ ಹಾಕಿದ್ದಾರೆ. ಇಸ್ಲಾಮಿಕ್ ಗಣರಾಜ್ಯದ 86 ವರ್ಷದ ಮಾಜಿ ಸರ್ವೋಚ್ಚ ನಾಯಕ ಖಮೇನಿ 1989ರಿಂದ ಇರಾನ್ ದೇಶವನ್ನು ಆಳುತ್ತಿದ್ದರು. ಶನಿವಾರ ಮುಂಜಾನೆ ಅಮೆರಿಕ ಮತ್ತು ಇಸ್ರೇಲ್ ಪ್ರಾರಂಭಿಸಿದ ಜಂಟಿ ಮಿಲಿಟರಿ…

Read More

ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು – Kannada News | Kalaburagi: Complaint Filed Over Alleged Burqa Insult During Holi

ಕಲಬುರಗಿ, ಮಾರ್ಚ್​ 05: ಜಿಲ್ಲೆಯ ಆಳಂದ ತಾಲೂಕಿನ ನಿಂಬರ್ಗಾ ಗ್ರಾಮದಲ್ಲಿ ಹೋಳಿ ಹಬ್ಬದ ಆಚರಣೆ ವೇಳೆ ಬುರ್ಖಾ ಹಾಕಿಕೊಂಡು ಬಣ್ಣ ಹಚ್ಚಿ ಅವಮಾನ ಮಾಡಿರುವ ಆರೋಪ ಕೇಳಿಬಂದಿದೆ. ಓರ್ವ ವ್ಯಕ್ತಿಗೆ ಬುರ್ಖಾ ಹಾಕಿಸಿ ಬಣ್ಣ ಹಚ್ಚಿದ್ದಾರೆ. ಆ ಮೂಲಕ ಹಿಂದೂ ಯುವಕರು ಬುರ್ಖಾಗೆ ಅವಮಾನಿಸಿದ್ದಾರೆಂದು ದಲಿತ ಸೇನೆ ಮುಖಂಡ ಸಮೀರ್ ಆವಂಟಿ ನಿಂಬರ್ಗಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಿಎನ್‌ಎಸ್ ಕಾಯ್ದೆ 2003ರ ಸೆಕ್ಷನ್ 196 ಹಾಗೂ 299ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ….

Read More