Headlines

RCB ಬರೋಬ್ಬರಿ 72 ವರ್ಷ ತೆಗೆದುಕೊಳ್ಳಲಿದೆ… ರಾಯುಡು ವ್ಯಂಗ್ಯ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು ನಡುವಿನ “ಸೋಷಿಯಲ್ ಮೀಡಿಯಾ ವಾರ್” ಹೊಸದೇನಲ್ಲ. ಈ ವ್ಯಂಗ್ಯದ ವಾರ್ ಈ ಬಾರಿ ಕೂಡ ಮುಂದುವರೆದಿದೆ. ಆದರೆ, ಈ ಸಲ ರಾಯುಡು “72 ವರ್ಷಗಳ” ಲೆಕ್ಕಾಚಾರದೊಂದಿಗೆ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಏನಿದು 72 ವರ್ಷಗಳ ಲೆಕ್ಕಚಾರ? ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಲಿ ಚಾಂಪಿಯನ್ ಪಟ್ಟದೊಂದಿಗೆ ಕಣಕ್ಕಿಳಿಯುತ್ತಿದೆ. ಈ ಚಾಂಪಿಯನ್ ಪಟ್ಟವನ್ನು…

Read More

ಟ್ರೇಡಿಂಗ್ ಆ್ಯಪ್​ಗಳಿಗೆ ವೆರಿಫೈಡ್ ಲೇಬಲ್; ವಂಚಕರನ್ನು ದೂರ ಇಡಲು ಸೆಬಿ ಹೊಸ ಕ್ರಮ

ನವದೆಹಲಿ, ಮಾರ್ಚ್ 26: ಆನ್​ಲೈನ್​ನಲ್ಲಿ ಸಾಕಷ್ಟು ವಂಚನೆಗಳಾಗುತ್ತವೆ. ವಾಟ್ಸಾಪ್, ಟೆಲಿಗ್ರಾಮ್ ಇತ್ಯಾದಿ ಮೆಸೇಜಿಂಗ್ ಪ್ಲಾಟ್​ಫಾರ್ಮ್​ಗಳಲ್ಲಿ ವಂಚಕ ವೆಬ್​ಸೈಟ್​ಗಳಿಗೆ ದಾರಿ ಕೊಡುವ ನಕಲಿ ಲಿಂಕ್​ಗಳನ್ನು ಹಾಕಿ ಯಾಮಾರಿಸುವವರು ಬಹಳ ಇದ್ದಾರೆ. ಹಾಗೆಯೇ, ಷೇರು ಮಾರುಕಟ್ಟೆಯಲ್ಲಿ ಟ್ರೇಡಿಂಗ್ ಮೂಲಕ ಅದ್ಬುತವಾಗಿ ಸಂಪಾದನೆ ಮಾಡಬಹುದು ಎಂದು ಪುಸಲಾಯಿಸಿ, ನಕಲಿ ಟ್ರೇಡಿಂಗ್ ಆ್ಯಪ್​ಗಳನ್ನು ಡೌನ್​ಲೋಡ್ ಮಾಡಿಕೊಳ್ಳುವಂತೆ ಮಾಡಲಾಗುತ್ತದೆ. ಇಂತಹ ಹಲವು ಪ್ರಕರಣಗಳು ಬೆಳಕಿಗೆ ಬಂದಿರುವುದುಂಟು. ಇವಕ್ಕೆ ಕಡಿವಾಣ ಹಾಕಲು ಮತ್ತು ಹೂಡಿಕೆದಾರರನ್ನು ವಂಚಕರಿಂದ ರಕ್ಷಿಸಲು ಸೆಬಿ (SEBI) ಹೊಸ ಉಪಾಯ ಮಾಡಿದೆ. ಷೇರು…

Read More

ಭೋಜಶಾಲಾದಲ್ಲಿ ಶುಕ್ರವಾರ ಹಿಂದೂಗಳು ಪೂಜೆ , ಮುಸ್ಲಿಮರು ನಮಾಜ್ ಮಾಡಲು ಸುಪ್ರೀಂ ಅನುಮತಿ – Kannada News | Supreme Court Clears Way for Saraswati Puja and Friday Prayers at Bhojshala

ಧಾರ್, ಜನವರಿ 22: ಭೋಜಶಾಲಾದಲ್ಲಿ ಶುಕ್ರವಾರ ಹಿಂದೂಗಳು ಪೂಜೆ ಮಾಡಲು, ಮುಸ್ಲಿಮರು ನಮಾಜ್ ಮಾಡಲು ಸುಪ್ರೀಂಕೋರ್ಟ್(Supreme Court)​ ಅನುಮತಿ ನೀಡಿದೆ. ಮಧ್ಯಪ್ರದೇಶದ ಧಾರ್ ಜಿಲ್ಲೆಯ ಐತಿಹಾಸಿಕ ಭೋಜಶಾಲೆಯ ಕುರಿತಾದ ದೀರ್ಘಕಾಲದ ವಿವಾದದ ಹೊಸ ಅರ್ಜಿಯ ಕುರಿತು ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಇಂದು ಒಂದು ಮಹತ್ವದ ತೀರ್ಪು ನೀಡಿದೆ. ವಸಂತ ಪಂಚಮಿಯಂದು ಸರಸ್ವತಿ ಪೂಜೆ ಮತ್ತು ಭೋಜಶಾಲೆಯಲ್ಲಿ ನಮಾಜ್ ಮಾಡಲು ಎರಡೂ ಧರ್ಮದವರಿಗೆ ಜಾಗವನ್ನು ಹಂಚಿಕೊಳ್ಳಲು ನ್ಯಾಯಾಲಯ ಅನುಮತಿ ನೀಡಿದೆ. ಮುಸ್ಲಿಂ ಸಮುದಾಯಕ್ಕೆ ಶುಕ್ರವಾರದಂದು ಮಧ್ಯಾಹ್ನ 1…

Read More

Puja Room Vastu: ಪೂಜಾ ಕೋಣೆಯಲ್ಲಿ ಈ ವಸ್ತುಗಳನ್ನು ಇಡಲೇಬೇಡಿ; ಸಮಸ್ಯೆ ತಪ್ಪಿದ್ದಲ್ಲ! – Kannada News | Puja Room Vastu: Avoid These 5 Things for Positive Energy and Harmony at Home

ಹಿಂದೂ ಧರ್ಮದಲ್ಲಿ ವಾಸ್ತು ಶಾಸ್ತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಮನೆ ನಿರ್ಮಾಣದಿಂದ ವಸ್ತುಗಳ ಜೋಡಣೆಯ ವರೆಗೂ ವಾಸ್ತು ಶಾಸ್ತ್ರದಲ್ಲಿ ಹಲವು ನಿಯಮಗಳಿವೆ. ಇದಲ್ಲದೆ, ಮನೆಯಲ್ಲಿರುವ ಪೂಜಾ ಕೊಠಡಿಗೆ ಸಂಬಂಧಿಸಿದ ವಿಷಯಗಳನ್ನು ವಾಸ್ತು ಸ್ಪಷ್ಟಪಡಿಸಿದೆ. ಈ ವಾಸ್ತು ನಿಯಮಗಳನ್ನು ನಿರ್ಲಕ್ಷಿಸುವುದರಿಂದ ಜೀವನದಲ್ಲಿ ಅನೇಕ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ಮುರಿದ ವಿಗ್ರಹ: ಪೂಜಾ ಕೊಠಡಿಯಲ್ಲಿ ಎಂದಿಗೂ ಮುರಿದ ದೇವರ ವಿಗ್ರಹಗಳನ್ನು ಇಡಬೇಡಿ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಪೂಜಾ ಕೋಣೆಯಲ್ಲಿ ಮುರಿದ ವಿಗ್ರಹಗಳನ್ನು ಪೂಜಿಸುವುದರಿಂದ ನಕಾರಾತ್ಮಕತೆ ಹೆಚ್ಚಾಗುತ್ತದೆ,…

Read More

ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ – Kannada News | Karnataka River Diversion: Sri Gangadharendra Saraswati Swamiji Explains Oppose to Bedthi Aghanashini Project

ಕಾರವಾರ, ಜನವರಿ 11: ಬೇಡ್ತಿ-ವರದಾ ಮತ್ತು ಅಘನಾಶಿನಿ-ವೇದಾವತಿ ನದಿ ಜೋಡಣೆಗೆ ವಿರೋಧಿಸಿ ಇಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪಟ್ಟಣದಲ್ಲಿ ಬೃಹತ್ ಸಮಾವೇಶ ನಡೆಯಿತು. ಸ್ವರ್ಣವಲ್ಲಿ ಗಂಗಾಧರೇಂದ್ರ ಸರಸ್ವತಿ ಶ್ರೀ ಸಮಾವೇಶದ ನೇತೃತ್ವವಹಿಸಿದ್ದರು. ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ ಅವರು, ಯೋಜನೆ ಜಾರಿಯಾದರೆ ನದಿಯ ಸಹಜ ನೀರಿನ ಹರಿವು ಕಡಿಮೆಯಾಗಿ ಅಂತರ್ಜಲ ಮಟ್ಟ ಕುಸಿಯುತ್ತದೆ. ಇಡೀ ಜಿಲ್ಲೆ ಬರಪೀಡಿತವಾಗುವ ಅಪಾಯವಿದೆ. ಈ ಯೋಜನೆಯು ವೈಜ್ಞಾನಿಕವಾಗಿ ಮಾರಕವಾಗಿದ್ದು, ಶಾಶ್ವತ ವಿನಾಶಕ್ಕೆ ಕಾರಣವಾಗುತ್ತದೆ ಎಂದಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು…

Read More

Winzo game Fraud: ಎಐ ಬಳಸಿ 700 ಕೋಟಿ ರೂ. ವಂಚನೆ! ವಿಂಜೋ ಗೇಮಿಂಗ್ ವಿರುದ್ಧ ಇ.ಡಿ ಚಾರ್ಜ್‌ಶೀಟ್ – Kannada News | Winzo Gaming App Fraud: ED Uncovers Rs.3522 Cr Scam, Files Chargesheet

ವಿಂಜೋ ಗೇಮಿಂಗ್ ವಿರುದ್ಧ ಇ.ಡಿ ಚಾರ್ಜ್‌ಶೀಟ್ ಬೆಂಗಳೂರು, ಜನವರಿ 26: ವಿಂಜೋ ಗೇಮಿಂಗ್ ಆ್ಯಪ್‌ಗೆ (WinZo gaming app) ಸಂಬಂಧಿಸಿದ ಅಕ್ರಮ ಹಣಕಾಸು ಮತ್ತು ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆ ಪೂರ್ಣಗೊಳಿಸಿ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದೆ. ತನಿಖೆ ವೇಳೆ ಭಾರೀ ಪ್ರಮಾಣದ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಸಂಬಂಧಿಸಿದ ಸ್ಫೋಟಕ ಮಾಹಿತಿಗಳು ಬೆಳಕಿಗೆ ಬಂದಿವೆ. 690 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಸೀಜ್ 2021–22ರ ಸಾಲಿನಲ್ಲಿ ಮಾತ್ರವೇ ಸುಮಾರು 3,522 ಕೋಟಿ ರೂಪಾಯಿ…

Read More

ಸ್ಯಾಂಡಲ್​​ವುಡ್​ ಕಡೆಗಣಿಸಿದ ಫಿಲ್ಮ್​​ಫೇರ್​​ಗೆ ಛೀಮಾರಿ ಹಾಕಿದ ಕನ್ನಡಿಗರು

ಕನ್ನಡ ಚಿತ್ರರಂಗವನ್ನು ಅನೇಕ ಕಡೆಗಳಲ್ಲಿ ಕಡೆಗಣಿಸುವ ಕೆಲಸ ಆಗುತ್ತಲೇ ಬರುತ್ತಿದೆ. ಈ ಮೊದಲು ಸೈಮಾ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂದ ನಟರನ್ನು ಕಡೆಗಣಿಸಿದ ಬಗ್ಗೆ ಟೀಕೆ ವ್ಯಕ್ತವಾಗಿತ್ತು. ಈಗ ಫಿಲ್ಮ್​​ಫೇರ್ (Filma Fare) ಅದೇ ತಪ್ಪನ್ನು ಮಾಡಿದೆ. ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಕನ್ನಡ ಚಿತ್ರರಂಗವನ್ನು ಕಡೆಗಣಿಸಿದ್ದು ಎಷ್ಟು ಸರಿ ಎಂಬ ಚರ್ಚೆ ಶುರುವಾಗಿದೆ. ತಪ್ಪನ್ನು ತಿದ್ದುಕೊಂಡು ಅವರು ಕ್ಷಮೆ ಕೇಳಬೇಕು ಎಂಬ ಆಗ್ರಹಕೂಡ ವ್ಯಕ್ತವಾಗಿದೆ. ಫಿಲ್ಮ್​ ಫೇರ್ ಅವಾರ್ಡ್ ಆರಂಭ ಆಗಿದ್ದು 1954ರಲ್ಲಿ. ಹಿಂದಿ…

Read More

ಇಶಾ ಫೌಂಡೇಶನ್​ ಸ್ಮಶಾನ ನಿರ್ಮಿಸುವುದರ ವಿರುದ್ಧ ಹೈಕೋರ್ಟ್​​ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾ – Kannada News | Madras High Court Dismisses Plea Against Construction Of Gasifier Crematorium By Isha Foundation

ಚೆನ್ನೈ, ಜನವರಿ 28: ಸದ್ಗುರು ಜಗ್ಗಿ ವಾಸುದೇವ್ ನೇತೃತ್ವದ ಇಶಾ ಫೌಂಡೇಶನ್ (Isha Foundation) ನಿರ್ಮಿಸುತ್ತಿರುವ ಗ್ಯಾಸ್ ಆಧಾರಿತ ಸ್ಮಶಾನದ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ. ಆ ಸ್ಮಶಾನವು ಸಾಮಾಜಿಕ ಕಲ್ಯಾಣಕ್ಕೆ ಸೇವೆ ಸಲ್ಲಿಸುತ್ತದೆ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿಲ್ಲ ಎಂದು ನ್ಯಾಯಾಲಯ ಹೇಳಿದೆ. ಇಶಾ ಫೌಂಡೇಶನ್ ಸ್ಮಶಾನ ನಿರ್ಮಾಣ ಮಾಡುವುದರ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ. ಇಶಾ ಫೌಂಡೇಶನ್​ನಿಂದ ಕಾಲಭೈರವ ಧಗನ ಮಂಟಪದ ನಿರ್ಮಾಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಮದ್ರಾಸ್…

Read More

ಸಂಬಂಧದಲ್ಲಿ ಪ್ರೀತಿ, ಆತ್ಮೀಯತೆಯನ್ನು ಹೆಚ್ಚಿಸಲು ಸಂಗಾತಿಗಳಿಬ್ಬರ ಬೆಳಗಿನ ದಿನಚರಿ ಹೀಗಿದ್ದರೆ ಚೆಂದ – Kannada News | To increase love, intimacy in a relationship, couples should follow this principle in their morning routine

ಮುನಿಸು, ಪರಸ್ಪರ ಸಮಯ ಕಳೆಯದೆ ಇರುವುದು ಇಂತಹ ಸಣ್ಣ ಸಣ್ಣ ಸಂಗತಿಗಳು ಸಂಬಂಧದಲ್ಲಿ ಅಂತರವನ್ನು ಸೃಷ್ಟಿಸುವಂತೆ  ಸಕಾರಾತ್ಮಕ ಅಭ್ಯಾಸಗಳು ಸಂಬಂಧವನ್ನು (relationship) ಬಲಪಡಿಸುವಲ್ಲಿ ದೊಡ್ಡ ಪಾತ್ರವನ್ನು ವಹಿಸುತ್ತವೆ. ಆದರೆ ಇಂದಿನ ಈ ಬಿಡುವಿಲ್ಲದ ಜೀವನಶೈಲಿಯ ಕಾರಣದಿಂದಾಗಿ ವಿಶೇಷವಾಗಿ ಸಂಗಾತಿಗಳಿಗೆ ಪರಸ್ಪರ ಸಮಯವನ್ನು ಕಳೆಯುವುದು ಸವಾಲಿನ ಕೆಲಸವಾಗಿದೆ. ಕಾರ್ಯನಿರತ ಜೀವನದಲ್ಲಿ ನಿಮ್ಮ ಸಂಗಾತಿಯೊಂದಿಗೆ ದಿನಗಟ್ಟಲೆ ಮಾತನಾಡಲು, ಸಮಯ ಕಳೆಯಲು ಸಾಧ್ಯವಾಗದಿದ್ದರೂ, ಬೆಳಗಿನ ದಿನಚರಿಯಲ್ಲಿ ಸಂಗಾತಿಗಳಿಬ್ಬರು ಈ ಒಂದಷ್ಟು ಕೆಲಸಗಳನ್ನು ಮಾಡುವ ಮೂಲಕ ದಾಂಪತ್ಯ, ಪ್ರೀತಿಯ ಬಂಧವನ್ನು ಬಲಪಡಿಸಿಕೊಳ್ಳಬಹುದು. ಪ್ರೀತಿಯನ್ನು…

Read More

ಪಿಎಸ್‌ಐ ಪ್ರಕರಣ: ನನ್ನ ಗಂಡ ರಾಡ್‌ನಿಂದ ಹೊಡೆದು, ದಿಂಬಿನಿಂದ ಉಸಿರುಗಟ್ಟಿಸಿ ಹಿಂಸೆ ನೀಡುತ್ತಿದ್ದ – Kannada News | Vijayapura PSI Controversy: Anuradha Speaks Out on Domestic Violence and Allegations

ವಿಜಯಪುರ, ಡಿ.30: ವಿಜಯಪುರ ಪಿಎಸ್‌ಐ ಪ್ರಕರಣಕ್ಕೆ ಸಂಬಂಧಿಸಿದಂತೆ, ತನ್ನ ಪತಿ ಭೀಮಶಂಕರ್ ಮತ್ತು ಅತ್ತೆ ಶಾರದಾಬಾಯಿ ಮಾಡಿದ ಆರೋಪಗಳನ್ನು ಅನುರಾಧಾ ಹೋಳಕರ್ ನಿರಾಕರಿಸಿದ್ದಾರೆ. ತಾನು ಪಿಎಸ್‌ಐ ಮನೋಹರ್ ಕಂಚಗಾರ ಅವರೊಂದಿಗೆ ಓಡಿ ಹೋಗಿಲ್ಲ ಎಂದು ಸ್ಪಷ್ಟಪಡಿಸಿರುವ ಅನುರಾಧಾ, ಅಂಚೆಪಾಳ್ಯದಲ್ಲಿ ತನ್ನ ಮಗಳೊಂದಿಗೆ ವಾಸವಾಗಿರುವುದಾಗಿ ತಿಳಿಸಿದ್ದಾರೆ. ತನ್ನ ಪತಿ ಭೀಮಶಂಕರ್ ಐದು ವರ್ಷಗಳ ಕಾಲ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಅನುರಾಧಾ ಆರೋಪಿಸಿದ್ದಾರೆ. ರಾಡ್‌ನಿಂದ ಹೊಡೆಯುವುದು, ದಿಂಬಿನಿಂದ ಉಸಿರುಗಟ್ಟಿಸಲು ಯತ್ನಿಸುವುದು ಮತ್ತು ಕುತ್ತಿಗೆಗೆ ಉರುಳು ಹಾಕಿದಂತಹ…

Read More