Headlines

PM Narendra Modi: ವಿಶ್ವದ ಅತ್ಯಂತ ಜನಪ್ರಿಯ, ವಿಶ್ವಾಸಾರ್ಹ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ

ನವದೆಹಲಿ, ಮಾರ್ಚ್ 26: ಮಾರ್ನಿಂಗ್ ಕನ್ಸಲ್ಟ್ ವಿಶ್ವದ ಅತ್ಯಂತ ವಿಶ್ವಾಸಾರ್ಹ ಮತ್ತು ಜನಪ್ರಿಯ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಗ್ಲೋಬಲ್ ಲೀಡರ್ ಅಪ್ರೂವಲ್ ರ‍ೇಟಿಂಗ್ ಟ್ರ್ಯಾಕರ್​​ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ(Narendra Modi) ಮೊದಲನೇ ಸ್ಥಾನವನ್ನು ಪಡೆದಿದ್ದಾರೆ. ಶೇ. 68ರಷ್ಟು ಜನ ಮೋದಿಯವರ ಮೇಲೆ ನಂಬಿಕೆಯನ್ನು ಇಟ್ಟುಕೊಂಡಿದ್ದಾರೆ ಎನ್ನುತ್ತದೆ ಈ ಸಮೀಕ್ಷಾ ವರದಿ. ಈ ಸಮೀಕ್ಷೆಯು ಮಾರ್ಚ್​ 2026ರ ಮೊದಲ ವಾರದ ದತ್ತಾಂಶವನ್ನು ಆಧರಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜನಪ್ರಿಯತೆಯ ರೇಟಿಂಗ್ ಕೇವಲ ಶೇ….

Read More

Video: ಮೊದಲ ಬಾರಿಗೆ ಕ್ಯಾಬ್ ಬುಕ್ ಮಾಡಿದ ತಾಯಿ, ಗೆದ್ದಂತೆ ಸಂಭ್ರಮಿಸಿದ ಮಗಳು – Kannada News | Mother learns to book a cab under daughter’s guidance

ಹೆತ್ತವರು (parents) ತಮ್ಮ ಮಕ್ಕಳಿಗೆ ಜೀವನ ಅನುಭವಗಳನ್ನು ಹೇಳಿ ಕೊಡುತ್ತಾರೆ. ಮಕ್ಕಳ ಯಶಸ್ಸು, ಸಾಧನೆಯನ್ನು ಕಂಡು ಖುಷಿ ಪಡುತ್ತಾರೆ. ಆದರೆ ಈ ಮಕ್ಕಳು ಕೂಡ ತಮ್ಮ ತಾಯಿ ತಂದೆಗೆ ಸ್ಮಾರ್ಟ್ ಫೋನ್ ಹಾಗೂ ಕಂಪ್ಯೂಟರ್ ಬಳಕೆ ಹೇಗೆ ಮಾಡುವುದೆಂದು ಹೇಳಿ ಕೊಡುವುದನ್ನು ನೋಡಬಹುದು. ಇದೀಗ ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಮಹಿಳೆಯೊಬ್ಬಳು ತನ್ನ ಮಗಳ ಸಹಾಯದಿಂದ ಕ್ಯಾಬ್ ಬುಕ್ ಮಾಡುವುದು ಹೇಗೆಂದು ಕಲಿಯುತ್ತಿದ್ದಾಳೆ. ಈ ವಿಡಿಯೋ ಸದ್ಯ ವೈರಲ್ ಆಗಿದ್ದು , ಈ ದೃಶ್ಯ ನೆಟ್ಟಿಗರ ಹೃದಯ…

Read More

ವಯಸ್ಸಾದವರು ಮನೆಯಲ್ಲಿದ್ದಾರಾ? ಹಾಗಿದ್ರೆ ಈ ಆರೋಗ್ಯ ಸಮಸ್ಯೆಗಳು ಬರದಂತೆ ಎಚ್ಚರಿಕೆ ವಹಿಸಿ – Kannada News | How To Protect Seniors During Seasonal Changes: Expert Care Tips

ದೇಶದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಹವಾಮಾನದಲ್ಲಿ ನಿರಂತರ ಬದಲಾವಣೆ ಕಾಣಿಸುತ್ತಿದ್ದು, ಇದರ ಪರಿಣಾಮ ಹಿರಿಯರ ಆರೋಗ್ಯದ (Elderly Health) ಮೇಲೆ ಹೆಚ್ಚು ಪರಿಣಾಮ ಬೀಳಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಬೇಸಿಗೆಯ ನಡುವೆ ಮಳೆ, ತಣ್ಣನೆಯ ಗಾಳಿ ಹಾಗೂ ತಾಪಮಾನದಲ್ಲಿ ಏರುಪೇರು ಕಾಣಿಸಿಕೊಳ್ಳುವುದರಿಂದ ದೇಹಕ್ಕೆ ಹೊಸ ಪರಿಸ್ಥಿತಿಗೆ ಹೊಂದಿಕೊಳ್ಳುವುದು ಕಷ್ಟವಾಗಬಹುದು. ವಯಸ್ಸು ಹೆಚ್ಚಾದಂತೆ ದೇಹದ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಇದರಿಂದ ವೈರಲ್ ಸೋಂಕು, ಜ್ವರ, ಶೀತ, ಉಸಿರಾಟದ ತೊಂದರೆ ಮತ್ತು ನೋವುಗಳ ಸಮಸ್ಯೆ…

Read More

ಸೊಳ್ಳೆ ಓಡಿಸಲು ಬಳಸುವ ಅಗರಬತ್ತಿಗಳಿಂದ ಬರಬಹುದು ಗಂಭೀರ ಕಾಯಿಲೆ! ಸಮೀಕ್ಷೆಯಲ್ಲಿ ಆತಂಕಕಾರಿ ಮಾಹಿತಿ ಬಹಿರಂಗ – Kannada News | Is Your Mosquito Agarbatti Safe? How To Identify Legal Vs Illegal Brands

ಮನೆಗಳಲ್ಲಿ ಸೊಳ್ಳೆಗಳಿಂದ ರಕ್ಷಿಸಿಕೊಳ್ಳಲು ಅನೇಕರು ಸೊಳ್ಳೆ ಅಗರಬತ್ತಿ (Mosquito Agarbatti), ಕಾಯಿಲ್ ಮತ್ತು ವಿವಿಧ ಮಸ್ಕಿಟೋ ರಿಪೆಲೆಂಟ್‌ಗಳನ್ನು ಬಳಸುತ್ತಾರೆ. ಇವು ಸೊಳ್ಳೆಗಳನ್ನು ದೂರವಿಡಲು ಸಹಾಯ ಮಾಡಿದರೂ, ಎಲ್ಲ ಉತ್ಪನ್ನಗಳು ಸಂಪೂರ್ಣ ಸುರಕ್ಷಿತವಾಗಿರುತ್ತವೆ ಎನ್ನುವುದು ತಪ್ಪು ಕಲ್ಪನೆ. ಅದರಲ್ಲಿಯೂ ಇತ್ತೀಚೆಗೆ ಬಿಡುಗಡೆಯಾದ ಎಚ್ಐಸಿಎ (Home Insect Control Association) ಎಂಬ ಸಮೀಕ್ಷೆ ಈ ಬಗ್ಗೆ ಆತಂಕವನ್ನು ವ್ಯಕ್ತಪಡಿಸಿದ್ದು ಇವು ಸೊಳ್ಳೆಗಳನ್ನು ಸಾಯಿಸುವುದರ ಜೊತೆಗೆ ನಮ್ಮ ಆರೋಗ್ಯವನ್ನು ಹಾಳು ಮಾಡುತ್ತದೆ. ಹಾಗಾಗಿ ಸಿಐಆರ್ ನೋಂದಣಿ ಸಂಖ್ಯೆ ಇಲ್ಲದ ಸೊಳ್ಳೆ ನಿವಾರಕ…

Read More

ದಿಢೀರ್ 15 ಪದಾಧಿಕಾರಿಗಳ ವಜಾ: ಹೈಕಮಾಂಡ್​​ನ ಈ ದಿಟ್ಟ ಕ್ರಮಕ್ಕೆ ಕರ್ನಾಟಕ ಕಾಂಗ್ರೆಸ್​​ನಲ್ಲಿ ಸಂಚಲನ – Kannada News | Karnataka Youth Congress 15 office bearers removed By IYC

ಬೆಂಗಳೂರು, (ಮೇ 17): ಕರ್ನಾಟಕ ಯುವ ಕಾಂಗ್ರೆಸ್‌ನ (Karnataka Youth Congress) 15 ಪದಾಧಿಕಾರಿಗಳನ್ನು ಏಕಾಏಕಿ ವಜಾ ಮಾಡಲಾಗಿದೆ. ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಹಾಗೂ ಎಂಟು ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಹಲವರ ಮೇಲೆ ಶಿಸ್ತುಕ್ರಮ ಜರುಗಿಸಲಾಗಿದೆ. ಸಂಘಟನಾ ಚಟುವಟಿಕೆಗಳಲ್ಲಿ ಭಾಗವಹಿಸದ ಮತ್ತು ಕರ್ತವ್ಯ ಲೋಪವೆಸಗಿದ ಹಿನ್ನೆಲೆಯಲ್ಲಿ ಹೈಕಮಾಂಡ್ ಈ ಕಠಿಣ ನಿರ್ಧಾರ ಕೈಗೊಂಡಿದೆ. ​ಕರ್ತವ್ಯ ಲೋಪ ಹಾಗೂ ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ನಿಷ್ಕ್ರಿಯರಾಗಿದ್ದ ಕಾರಣಕ್ಕಾಗಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ…

Read More

Video: ಬೆಂಗಳೂರು ಬಲು ದುಬಾರಿ; 1.3 ಲಕ್ಷ ರೂ ತಿಂಗಳ ಖರ್ಚು ಎಂದ ದಂಪತಿ – Kannada News | Couple reveals their monthly expenses in Bengaluru

ಬೆಂಗಳೂರು, ಮೇ 12: ಬೆಂಗಳೂರು (Bengaluru) ಅಂದ್ರೆ ದುಬಾರಿ ಅನ್ನೋದು ಅನೇಕರ ಅಭಿಪ್ರಾಯ. ಇನ್ನೊಂದೆಡೆ ಗಂಡ ಹೆಂಡತಿ ಇಬ್ಬರೂ ದುಡಿದ್ರೂ ಈ ನಗರದಲ್ಲಿ ತಿಂಗಳ ಖರ್ಚು ವೆಚ್ಚಗಳನ್ನು ತೂಗಿಸಿಕೊಂಡು ಹೋಗೋದು ಕಷ್ಟ. ಹೀಗಿರುವಾಗ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ದಂಪತಿ ತಿಂಗಳಿಗೆ ಸುಮಾರು 1.3 ಲಕ್ಷ ರೂ. ಖರ್ಚು ಮಾಡುತ್ತಿದ್ದು, ಆರ್ಥಿಕ ಹೊರೆಯಾಗುತ್ತಿದೆ ಎಂದು ಹೇಳಿದ್ದಾರೆ. ದಂಪತಿ ಮಾಡಿದ ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ. ಬೆಂಗಳೂರಿನಲ್ಲಿ ಉತ್ಪನ್ನ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿರುವ ರಾಧಿಕಾ ಹಾಗೂ…

Read More

ಹಾರ್ಮುಜ್ ಜಲಸಂಧಿ ಮಾರ್ಗ ತೆರೆಯುವ ಸುಳಿವು ನೀಡಿದ ಟ್ರಂಪ್

ವಾಷಿಂಗ್ಟನ್, ಮೇ 24: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಜೊತೆಗಿನ ಶಾಂತಿ ಒಪ್ಪಂದ ಹಾಗೂ ಜಾಗತಿಕ ಇಂಧನ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು (Strait of Hormuz) ಸಂಚಾರಕ್ಕೆ ಮುಕ್ತಗೊಳಿಸುವ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ. ಡೊನಾಲ್ಡ್ ಟ್ರಂಪ್ ಅವರು ಈ ಬಗ್ಗೆ ತಮ್ಮ ‘ಟ್ರುತ್ ಸೋಶಿಯಲ್’ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಇರಾನ್ ಹಾಗೂ ಇತರ ಸಂಬಂಧಿತ ದೇಶಗಳೊಂದಿಗೆ ಶಾಂತಿಗೆ ಸಂಬಂಧಿಸಿದ ‘ತಿಳಿವಳಿಕೆ ಪತ್ರ’ (MoU) ಬಹುತೇಕ ಅಂತಿಮ ಹಂತಕ್ಕೆ ತಲುಪಿದೆ ಎಂದು ತಿಳಿಸಿದ್ದಾರೆ. ಈ ಒಪ್ಪಂದದ…

Read More

ಔಷಧಿ ತೆಗೆದುಕೊಳ್ಳುವಾಗ ಮಾಡುವ ಈ 3 ತಪ್ಪುಗಳು ಆರೋಗ್ಯಕ್ಕೆ ಅಪಾಯಕಾರಿಯಾಗಬಹುದು ಎಚ್ಚರ!

ಅನಾರೋಗ್ಯ ಬಂದಾಗ ಔಷಧಿ (Medicine) ನಮ್ಮ ಆರೋಗ್ಯ ಸುಧಾರಿಸಲು ಸಹಾಯ ಮಾಡುತ್ತದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಔಷಧಿ ಸೇವಿಸುವ ವಿಧಾನದಲ್ಲಿ ಮಾಡುವ ಕೆಲವು ಸಾಮಾನ್ಯ ತಪ್ಪುಗಳು ಆರೋಗ್ಯಕ್ಕೆ ಹಾನಿ ಉಂಟುಮಾಡಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ವಿಶೇಷವಾಗಿ ಸ್ವಯಂ ಔಷಧಿ ಸೇವನೆ, ಡೋಸ್ ಮಧ್ಯದಲ್ಲಿ ನಿಲ್ಲಿಸುವುದು ಮತ್ತು ವೈದ್ಯರ ಸಲಹೆ ಇಲ್ಲದೆ ಔಷಧಿ ಬದಲಾಯಿಸುವುದು ದೊಡ್ಡ ಅಪಾಯಕ್ಕೆ ಕಾರಣವಾಗಬಹುದು. ಹೌದು, ಇದನ್ನು ನಾವು ಸಾಮಾನ್ಯ ಎಂದು ನಿರ್ಲಕ್ಷ್ಯ ಮಾಡುತ್ತೇವೆ ಆದರೆ ಘಾಜಿಯಾಬಾದ್ ಜಿಲ್ಲಾ ಆಸ್ಪತ್ರೆಯ ಫಾರ್ಮಾಸಿಸ್ಟ್…

Read More

ಬಂಗಾಳಿಗಳನ್ನು ಅಲ್ಪಸಂಖ್ಯಾತರಾಗಲು ಬಿಡುವುದಿಲ್ಲ; ಚುನಾವಣಾ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ ಭರವಸೆ

ಕೊಲ್ಕತ್ತಾ, ಏಪ್ರಿಲ್ 11: ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ. ದಕ್ಷಿಣ ದಿನಾಜ್‌ಪುರ ಜಿಲ್ಲೆಯಲ್ಲಿ ಇಂದು ನಡೆದ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಟಿಎಂಸಿಯ ಲೂಟಿ ಮತ್ತು ಸುಳ್ಳಿನ ರಾಜಕೀಯ, ಭಯದ ಆಳ್ವಿಕೆ ಶೀಘ್ರದಲ್ಲೇ ಕೊನೆಗೊಳ್ಳಲಿದೆ ಎಂದು ಹೇಳಿದ್ದಾರೆ. ಹಾಗೇ, ಬಂಗಾಳಿಗಳು ಅಲ್ಪಸಂಖ್ಯಾತರಾಗಲು ಬಿಜೆಪಿ ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಟಿಎಂಸಿಗೆ ಯಾವುದೇ ಉದ್ದೇಶ ಅಥವಾ ನೀತಿ ಇಲ್ಲದ ಕಾರಣದಿಂದಾಗಿ ಇತರ ರಾಜ್ಯಗಳಲ್ಲಿ…

Read More

ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ – Kannada News | Dhruva Sarja condolence to Ba Ma Harish for loosing his son

ಸಿನಿಮಾ ನಿರ್ಮಾಪಕ ಮತ್ತು ಕನ್ನಡ ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಭಾಮಾ ಹರೀಶ್ (Ba Ma Harish) ಅವರ ಪುತ್ರ ಉಲ್ಲಾಸ್ ನಿನ್ನೆ ನಿಧನ ಹೊಂದಿದ್ದಾರೆ. ಕೇವಲ 29 ವರ್ಷ ವಯಸ್ಸಿಗೆ ಹೃದಯಾಘಾತದಿಂದ ಅವರು ಅಸುನೀಗಿದ್ದಾರೆ. ಭಾಮಾ ಹರೀಶ್ ಮತ್ತು ಕುಟುಂಬ ತೀವ್ರ ಆಘಾತಕ್ಕೆ ಒಳಗಾಗಿದೆ. ತೀವ್ರ ದುಃಖದಲ್ಲಿದೆ. ಚಿತ್ರರಂಗದ ಹಲವು ಗಣ್ಯರು ಇಂದು ಭಾಮಾ ಹರೀಶ್ ಅವರ ನಿವಾಸಕ್ಕೆ ಭೇಟಿ ನೀಡಿ ಉಲ್ಲಾಸ್ ಅವರ ಅಂತಿಮ ದರ್ಶನ ಪಡೆದುಕೊಳ್ಳುವ ಜೊತೆಗೆ ಭಾಮಾ ಹರೀಶ್ ಅವರನ್ನು ಸಂತೈಸಿದ್ದಾರೆ….

Read More