ಪಶ್ಚಿಮ ಬಂಗಾಳದಲ್ಲಿ ಎಸ್​ಐಆರ್​ಗೆ ಫೆ. 21ರವರೆಗೆ ಗಡುವು ವಿಸ್ತರಿಸಿದ ಸುಪ್ರೀಂ ಕೋರ್ಟ್ – Kannada News | Supreme Court extends deadline for SIR in West Bengal by one week

ನವದೆಹಲಿ, ಫೆಬ್ರವರಿ 9: ಪಶ್ಚಿಮ ಬಂಗಾಳದಲ್ಲಿ ದಾಖಲೆಗಳ ಪರಿಶೀಲನೆ ಮತ್ತು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಫೆಬ್ರವರಿ 14ರವರೆಗೆ ಇದ್ದ ಗಡುವನ್ನು ವಿಸ್ತರಿಸಿದೆ. ಮತಪಟ್ಟಿ ವಿಶೇಷ ಪರಿಷ್ಕರಣೆ (SIR) ಕುರಿತ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ (Supreme Court) ಪಶ್ಚಿಮ ಬಂಗಾಳದ ಡಿಜಿಪಿಗೆ ನೋಟಿಸ್ ಜಾರಿ ಮಾಡಿದೆ. ವೈಯಕ್ತಿಕ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ಡಿಜಿಪಿಗೆ ನಿರ್ದೇಶನ ನೀಡಿದೆ.

ಚುನಾವಣಾ ಆಯೋಗದ ಪರವಾಗಿ SIR ಕರ್ತವ್ಯಗಳಲ್ಲಿ ತೊಡಗಿರುವ ಅಧಿಕಾರಿಗಳಿಗೆ ಬೆದರಿಕೆ ಮತ್ತು ಹಿಂಸಾಚಾರದ ದೂರುಗಳಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳದ ಡಿಜಿಪಿಗೆ ಶೋಕಾಸ್ ನೋಟಿಸ್ ನೀಡಿದೆ. ಹಾಗೇ, ಪಶ್ಚಿಮ ಬಂಗಾಳದ SIR ಕುರಿತ ವಿಚಾರಣೆಯ ಸಂದರ್ಭದಲ್ಲಿ SIR ಪ್ರಕ್ರಿಯೆಯಲ್ಲಿ ಸುಪ್ರೀಂ ಕೋರ್ಟ್ ಯಾವುದೇ ಅಡಚಣೆಗೆ ಅನುಮತಿ ನೀಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: Video:ಸುಪ್ರೀಂನಲ್ಲಿ ಎಸ್​ಐಆರ್ ವಿರುದ್ಧ ತಾವೇ ಸಲ್ಲಿಸಿದ್ದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ ಬ್ಯಾನರ್ಜಿ

ತಮ್ಮ ಲಿಖಿತ ಸಲ್ಲಿಕೆಗಳನ್ನು ಉಲ್ಲೇಖಿಸಿ, ಚುನಾವಣಾ ಆಯೋಗದ ಪರ ವಕೀಲ ಶ್ಯಾಮ್ ದಿವಾನ್ ಅವರು ಫೆಬ್ರವರಿ 14ರೊಳಗೆ ಸಂಪೂರ್ಣ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸಲು ನಿರ್ಧರಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಇದು ವಿಷಯದ ತುರ್ತುಸ್ಥಿತಿಯನ್ನು ಒತ್ತಿಹೇಳುತ್ತದೆ ಎಂದ ಅವರು ಫೆಬ್ರವರಿ 4ರಂದು ನ್ಯಾಯಾಲಯವು ಮಾಡಿದ ಅವಲೋಕನಗಳನ್ನು ಸಹ ಉಲ್ಲೇಖಿಸಿದರು. ದಿವಾನ್ ಪ್ರಕಾರ, ಕರಡು ಮತದಾರರ ಪಟ್ಟಿಯಲ್ಲಿ ಸುಮಾರು 7.08 ಕೋಟಿ ಮತದಾರರಿದ್ದಾರೆ. ಇವರಲ್ಲಿ ಸುಮಾರು 6.75 ಕೋಟಿ ಮತದಾರರನ್ನು ಈಗಾಗಲೇ ಗುರುತಿಸಲಾಗಿದೆ. ಅವರನ್ನು ಅಸ್ತಿತ್ವದಲ್ಲಿರುವ ದಾಖಲೆಗಳೊಂದಿಗೆ ಲಿಂಕ್ ಮಾಡಲಾಗಿದೆ. ಆದರೆ ಸುಮಾರು 32 ಲಕ್ಷ ಮತದಾರರನ್ನು ಇನ್ನೂ ಗುರುತಿಸಲಾಗಿಲ್ಲ. ತಾರ್ಕಿಕ ವ್ಯತ್ಯಾಸ ಪ್ರಕ್ರಿಯೆಯ ಮೂಲಕ ಸುಮಾರು 1.36 ಕೋಟಿ ಮತದಾರರನ್ನು ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ ರಾಜ್ಯ ಚುನಾವಣಾ ಆಯೋಗ (SIR) ಮತ್ತು ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಎಸ್‌ಐಆರ್ ಪ್ರಕ್ರಿಯೆಯ ಕಾನೂನುಬದ್ಧತೆಯನ್ನು ಪ್ರಶ್ನಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಅರ್ಜಿಯಲ್ಲಿ ಭಾರತೀಯ ಚುನಾವಣಾ ಆಯೋಗ (ಇಸಿಐ) ರಾಜಕೀಯ ಪಕ್ಷಪಾತ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಮತದಾರರ ಪರಿಷ್ಕರಣೆ ಪ್ರಕ್ರಿಯೆಯನ್ನು ನಡೆಸುತ್ತಿರುವ ವಿಧಾನವು ಸಮಾಜದ ಅಂಚಿನಲ್ಲಿರುವ ವರ್ಗಗಳಿಗೆ ಸೇರಿದ ಲಕ್ಷಾಂತರ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲು ಕಾರಣವಾಗುತ್ತದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಎಸ್​ಐಆರ್ ಒತ್ತಡದಿಂದ ಬಂಗಾಳದಲ್ಲಿ 150 ಜನ ಸಾವು; ಸುಪ್ರೀಂ ಕೋರ್ಟ್​ನಲ್ಲಿ ಮಮತಾ ಬ್ಯಾನರ್ಜಿ ವಾದ

ಎಸ್‌ಐಆರ್ ಪ್ರಕ್ರಿಯೆಯ ಸಮಯದಲ್ಲಿ ಯಾವುದೇ ಮತದಾರರ ಹೆಸರನ್ನು ಅದರಲ್ಲೂ ವಿಶೇಷವಾಗಿ ತಾರ್ಕಿಕ ವ್ಯತ್ಯಾಸ ವರ್ಗದ ಅಡಿಯಲ್ಲಿ ಇರಿಸಲಾದ ಮತದಾರರ ಹೆಸರನ್ನು ಡಿಲೀಟ್ ಮಾಡದಂತೆ ಚುನಾವಣಾ ಆಯೋಗಕ್ಕೆ ಮಧ್ಯಂತರ ನಿರ್ದೇಶನಗಳನ್ನು ನೀಡುವಂತೆ ಅವರು ಕೋರಿದ್ದಾರೆ. ಹಿಂದಿನ ವಿಚಾರಣೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ಅವರ ಮನವಿಯ ಮೇರೆಗೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿತ್ತು. ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹೇಗೆ ನಿಗದಿಯಾಗುತ್ತೆ ನಮ್ಮ ಮೆಟ್ರೋ ಟಿಕೆಟ್ ದರ? ಯಾರು ಹೆಚ್ಚಳ ಮಾಡ್ತಾರೆ? ಇಲ್ಲಿದೆ ವಿವರ – Kannada News | How Will BMRCL Implement Metro Fare Price Hike? here Is Details

ಬೆಂಗಳೂರು, (ಫೆಬ್ರವರಿ 09): ಶೇ.5ರಷ್ಟು ಬೆಂಗಳೂರು ನಮ್ಮ ಮೆಟ್ರೋ (Namma Metro) ಟಿಕೆಟ್​ ದರ ಹೆಚ್ಚಳಕ್ಕೆ ಬಿಎಂಆರ್​​ಸಿಎಲ್ (BMRCL) ಮುಂದಾಗಿತ್ತು. ಆದ್ರೆ, ಕೇಂದ್ರ ಸರ್ಕಾರದ ಸೂಚನೆ ಬೆನ್ನಲ್ಲೇ ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಯನ್ನ ಬಿಎಂಆರ್​​ಸಿಎಲ್ ಕೈ ಬಿಟ್ಟಿದೆ. ಹೀಗಾಗಿ ಮೆಟ್ರೋ ದರ ಯಥಾಸ್ಥಿತಿ ಮುಂದುವರಿಯಲಿದೆ. ಆದ್ರೆ ಇಲ್ಲಿ ನಾವು ಗಮನಿಸಬೇಕಿರುವುದು ಏನು ಅಂದ್ರೆ ತಾತ್ಕಾಲಿಕವಾಗಿ ಅಷ್ಟೇ ತಡೆ ಹಿಡಿದಿರುವುದು. ಹೀಗಾಗಿ ಮುಂದೆ ಯಾವ ಕ್ಷಣದಲ್ಲಿ ಯಾವ ನಿರ್ಧಾರ ಆದ್ರೂ ಅಚ್ಚರಿ ಏನಿಲ್ಲ.ಇಲ್ಲಿ ನಾವು ಸ್ಪಷ್ಟವಾಗಿ ಗಮನಿಸಬೇಕಿರುವುದು ಏನು ಅಂದ್ರೆ, ಮೆಟ್ರೋ ದರ ಏರಿಕೆಯಲ್ಲಿ ನೇರವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾತ್ರ ಇರುವುದಿಲ್ಲ. ಪ್ರಸ್ತಾವನೆ ಸಲ್ಲಿಸಬಹುದು ಅಷ್ಟೇ, ಆದ್ರೆ ಎಲ್ಲವೂ ಫೇರ್ ಫಿಕ್ಸೇಷನ್ ಕಮಿಟಿ ಶಿಫಾರಸ್ಸಿನಂತೆ ದರ ನಿಗದಿ ಆಗುತ್ತೆ.

ಹೇಗೆ ಹೆಚ್ಚಳವಾಗುತ್ತೆ ಮೆಟ್ರೋ ಟಿಕೆಟ್ ದರ?

ಮೆಟ್ರೋ O ಮತ್ತು M ಕಾಯ್ದೆ 2002ರಂತೆ ದರ ನಿಗದಿ ಆಗುತ್ತೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ದರ ನಿಗದಿ ಸಮತಿ ರಚನೆ ಮಾಡಲಾಗುತ್ತೆ. ಸಮಿತಿಯಲ್ಲಿ ಹೈಕೋರ್ಟ್​​ನ ನಿವೃತ್ತ ಅಥವಾ ಹಾಲಿ ಜಡ್ಜ್ ಇರುತ್ತಾರೆ. ಹಿರಿಯ ಪ್ರಧಾನ ಕಾರ್ಯದರ್ಶಿ ಅಥವಾ ಅಪರ ಮುಖ್ಯ ಕಾರ್ಯದರ್ಶಿ, ಕೇಂದ್ರ ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಇರಲಿದ್ದಾರೆ. ಇನ್ನು ದರ ಏರಿಕೆಗೆ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ ಅಥವಾ ಮೆಟ್ರೋ ಸಂಸ್ಥೆ ಪ್ರಸ್ತಾಪ ಮಾಡಬಹುದು. ಆದ್ರೆ ನೇರವಾಗಿ ದರ ಹೆಚ್ಚಳ ಮಾಡುವ ಅಧಿಕಾರ ಯಾವ ಸರ್ಕಾರಕ್ಕೂ ಇರುವುದಿಲ್ಲ. ಸಮಿತಿಯ ನಿರ್ಧಾರವೇ ದರ ಪರಿಷ್ಕರಣೆ ಅಂತಿಮ ಆಗುತ್ತೆ.
ಕಳೆದ ವರ್ಷ ಅಂದ್ರೆ 2025ರ ಫೆಬ್ರವರಿ 9ರಂದು ಶೇ.51ರಷ್ಟು ದರ ಏರಿಕೆ ಮಾಡಿ ಸಮಿತಿ ಆದೇಶ ಮಾಡಿತ್ತು. ದರ ಏರಿಕೆ ಆಗಿ ಇಂದಿಗೆ ಕರೆಕ್ಟ್​ ಒಂದು ವರ್ಷ ಆಗಲಿದೆ. 2017ರಿಂದ 2025ರ ವರೆಗೂ ದರ ನಿಗದಿಯಾಗದ ಹಿನ್ನೆಲೆ ಮುಂದಿನ ಪ್ರತಿವರ್ಷವೂ ಶೇ. 5 ರಷ್ಟು ದರ ಹೆಚ್ಚಳಕ್ಕೆ ಸಮಿತಿ ಅನುಮತಿನೂ ಕೊಟ್ಟಿತ್ತು. ಅದರಂತೆಯೇ ಇಂದು ಶೇ.5ರಷ್ಟು ದರ ಹೆಚ್ಚಳಕ್ಕೆ BMRCL ಮುಂದಾಗಿತ್ತು. ಆದ್ರೆ ಇದೀಗ ತಡೆ ಹಿಡಿಯಲಾಗಿದೆ. ಆದ್ರೆ ದರ ಏರಿಕೆ ವಿಚಾರದಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಮಧ್ಯೆ ಗುದ್ದಾಟ ಮಾತ್ರ ಜೋರಾಗಿಯೇ ನಡೆಯುತ್ತಿದೆ.

ಇದನ್ನೂ ಓದಿ: ಗುಡ್​​ನ್ಯೂಸ್: ಕೇಂದ್ರದ ಒಂದೇ ಸೂಚನೆಗೆ ಮೆಟ್ರೋ ಟಿಕೆಟ್ ದರ ಏರಿಕೆ ಕೈಬಿಟ್ಟ BMRCL

ಆರ್​.ವಿ ಮೆಟ್ರೋ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ ಬಿಜೆಪಿ ದೊಡ್ಡ ಹಂಗಾಮವನ್ನೇ ಮಾಡಿತು. ಸಂಸದ ತೇಜಸ್ವಿ ಸೂರ್ಯ, ಶಾಸಕ ರಾಮಮೂರ್ತಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಖಾಲಿ ಟ್ರಂಕ್​ ಹಿಡಿದು, ಮೆಟ್ರೋದಲ್ಲಿ ಪ್ರಯಾಣಕ್ಕೆ ಮುಂದಾಗಿದ್ದರು. ಆದ್ರೆ ಪೊಲೀಸರು ಮೆಟ್ರೋ ಒಳಗೆ ಬಿಡಲಿಲ್ಲ. ಈ ವೇಳೆ ಸಂಸದರು, ಪೊಲೀಸರ ನಡುವೆ ವಾಗ್ವಾದ ನಡೆದಿದ್ದು, ತೀವ್ರ ಆಕ್ರೋಶಕ್ಕೂ ಕಾರಣವಾಗಿತ್ತು. ಜನಾಕ್ರೋಶ ಹೆಚ್ಚಾಗ್ತಿದ್ದಂತೆಯೇ ತಾತ್ಕಾಲಿಕವಾಗಿ ದರ ಹೆಚ್ಚಳಕ್ಕೆ ತಡೆ ಕೊಡಲಾಗಿದೆ. ಆದ್ರೆ BMRCL ಸಿಪಿಆರ್​ಒ ಯಶವಂತ್​ ಚೌಹಾಣ್ ಮಾತು ಕೇಳಿದ್ರೆ ಜನರಿಗೆ ಬರೆ ಬೀಳೋದು ಪಕ್ಕಾನಾ? ಅನ್ನೋ ಅನುಮಾನವೂ ಮೂಡ್ತಿದೆ. ಯಾಕೆಂದ್ರೆ ತಾತ್ಕಾಲಿಕವಾಗಿ ತಡೆ ಹಿಡಿದ್ರೂ ಕೂಡ, ಅದಕ್ಕೆ ಇಂತಿಷ್ಟು ಅವಧಿ ಅಂತಾ ಇರೋದಿಲ್ಲ ಅಂದಿರೋದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 6:19 pm, Mon, 9 February 26

Source link

ಹೇಗೆ ನಿಗದಿಯಾಗುತ್ತೆ ನಮ್ಮ ಮೆಟ್ರೋ ಟಿಕೆಟ್ ದರ? ಯಾರು ಹೆಚ್ಚಳ ಮಾಡ್ತಾರೆ? ಇಲ್ಲಿದೆ ವಿವರ – Kannada News | How Will BMRCL Implement Metro Fare Price Hike? here Is Details

ಬೆಂಗಳೂರು, (ಫೆಬ್ರವರಿ 09): ಶೇ.5ರಷ್ಟು ಬೆಂಗಳೂರು ನಮ್ಮ ಮೆಟ್ರೋ (Namma Metro) ಟಿಕೆಟ್​ ದರ ಹೆಚ್ಚಳಕ್ಕೆ ಬಿಎಂಆರ್​​ಸಿಎಲ್ (BMRCL) ಮುಂದಾಗಿತ್ತು. ಆದ್ರೆ, ಕೇಂದ್ರ ಸರ್ಕಾರದ ಸೂಚನೆ ಬೆನ್ನಲ್ಲೇ ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಯನ್ನ ಬಿಎಂಆರ್​​ಸಿಎಲ್ ಕೈ ಬಿಟ್ಟಿದೆ. ಹೀಗಾಗಿ ಮೆಟ್ರೋ ದರ ಯಥಾಸ್ಥಿತಿ ಮುಂದುವರಿಯಲಿದೆ. ಆದ್ರೆ ಇಲ್ಲಿ ನಾವು ಗಮನಿಸಬೇಕಿರುವುದು ಏನು ಅಂದ್ರೆ ತಾತ್ಕಾಲಿಕವಾಗಿ ಅಷ್ಟೇ ತಡೆ ಹಿಡಿದಿರುವುದು. ಹೀಗಾಗಿ ಮುಂದೆ ಯಾವ ಕ್ಷಣದಲ್ಲಿ ಯಾವ ನಿರ್ಧಾರ ಆದ್ರೂ ಅಚ್ಚರಿ ಏನಿಲ್ಲ.ಇಲ್ಲಿ ನಾವು ಸ್ಪಷ್ಟವಾಗಿ ಗಮನಿಸಬೇಕಿರುವುದು ಏನು ಅಂದ್ರೆ, ಮೆಟ್ರೋ ದರ ಏರಿಕೆಯಲ್ಲಿ ನೇರವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾತ್ರ ಇರುವುದಿಲ್ಲ. ಪ್ರಸ್ತಾವನೆ ಸಲ್ಲಿಸಬಹುದು ಅಷ್ಟೇ, ಆದ್ರೆ ಎಲ್ಲವೂ ಫೇರ್ ಫಿಕ್ಸೇಷನ್ ಕಮಿಟಿ ಶಿಫಾರಸ್ಸಿನಂತೆ ದರ ನಿಗದಿ ಆಗುತ್ತೆ.

ಹೇಗೆ ಹೆಚ್ಚಳವಾಗುತ್ತೆ ಮೆಟ್ರೋ ಟಿಕೆಟ್ ದರ?

ಮೆಟ್ರೋ O ಮತ್ತು M ಕಾಯ್ದೆ 2002ರಂತೆ ದರ ನಿಗದಿ ಆಗುತ್ತೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ದರ ನಿಗದಿ ಸಮತಿ ರಚನೆ ಮಾಡಲಾಗುತ್ತೆ. ಸಮಿತಿಯಲ್ಲಿ ಹೈಕೋರ್ಟ್​​ನ ನಿವೃತ್ತ ಅಥವಾ ಹಾಲಿ ಜಡ್ಜ್ ಇರುತ್ತಾರೆ. ಹಿರಿಯ ಪ್ರಧಾನ ಕಾರ್ಯದರ್ಶಿ ಅಥವಾ ಅಪರ ಮುಖ್ಯ ಕಾರ್ಯದರ್ಶಿ, ಕೇಂದ್ರ ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಇರಲಿದ್ದಾರೆ. ಇನ್ನು ದರ ಏರಿಕೆಗೆ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ ಅಥವಾ ಮೆಟ್ರೋ ಸಂಸ್ಥೆ ಪ್ರಸ್ತಾಪ ಮಾಡಬಹುದು. ಆದ್ರೆ ನೇರವಾಗಿ ದರ ಹೆಚ್ಚಳ ಮಾಡುವ ಅಧಿಕಾರ ಯಾವ ಸರ್ಕಾರಕ್ಕೂ ಇರುವುದಿಲ್ಲ. ಸಮಿತಿಯ ನಿರ್ಧಾರವೇ ದರ ಪರಿಷ್ಕರಣೆ ಅಂತಿಮ ಆಗುತ್ತೆ.
ಕಳೆದ ವರ್ಷ ಅಂದ್ರೆ 2025ರ ಫೆಬ್ರವರಿ 9ರಂದು ಶೇ.51ರಷ್ಟು ದರ ಏರಿಕೆ ಮಾಡಿ ಸಮಿತಿ ಆದೇಶ ಮಾಡಿತ್ತು. ದರ ಏರಿಕೆ ಆಗಿ ಇಂದಿಗೆ ಕರೆಕ್ಟ್​ ಒಂದು ವರ್ಷ ಆಗಲಿದೆ. 2017ರಿಂದ 2025ರ ವರೆಗೂ ದರ ನಿಗದಿಯಾಗದ ಹಿನ್ನೆಲೆ ಮುಂದಿನ ಪ್ರತಿವರ್ಷವೂ ಶೇ. 5 ರಷ್ಟು ದರ ಹೆಚ್ಚಳಕ್ಕೆ ಸಮಿತಿ ಅನುಮತಿನೂ ಕೊಟ್ಟಿತ್ತು. ಅದರಂತೆಯೇ ಇಂದು ಶೇ.5ರಷ್ಟು ದರ ಹೆಚ್ಚಳಕ್ಕೆ BMRCL ಮುಂದಾಗಿತ್ತು. ಆದ್ರೆ ಇದೀಗ ತಡೆ ಹಿಡಿಯಲಾಗಿದೆ. ಆದ್ರೆ ದರ ಏರಿಕೆ ವಿಚಾರದಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಮಧ್ಯೆ ಗುದ್ದಾಟ ಮಾತ್ರ ಜೋರಾಗಿಯೇ ನಡೆಯುತ್ತಿದೆ.

ಇದನ್ನೂ ಓದಿ: ಗುಡ್​​ನ್ಯೂಸ್: ಕೇಂದ್ರದ ಒಂದೇ ಸೂಚನೆಗೆ ಮೆಟ್ರೋ ಟಿಕೆಟ್ ದರ ಏರಿಕೆ ಕೈಬಿಟ್ಟ BMRCL

ಆರ್​.ವಿ ಮೆಟ್ರೋ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ ಬಿಜೆಪಿ ದೊಡ್ಡ ಹಂಗಾಮವನ್ನೇ ಮಾಡಿತು. ಸಂಸದ ತೇಜಸ್ವಿ ಸೂರ್ಯ, ಶಾಸಕ ರಾಮಮೂರ್ತಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಖಾಲಿ ಟ್ರಂಕ್​ ಹಿಡಿದು, ಮೆಟ್ರೋದಲ್ಲಿ ಪ್ರಯಾಣಕ್ಕೆ ಮುಂದಾಗಿದ್ದರು. ಆದ್ರೆ ಪೊಲೀಸರು ಮೆಟ್ರೋ ಒಳಗೆ ಬಿಡಲಿಲ್ಲ. ಈ ವೇಳೆ ಸಂಸದರು, ಪೊಲೀಸರ ನಡುವೆ ವಾಗ್ವಾದ ನಡೆದಿದ್ದು, ತೀವ್ರ ಆಕ್ರೋಶಕ್ಕೂ ಕಾರಣವಾಗಿತ್ತು. ಜನಾಕ್ರೋಶ ಹೆಚ್ಚಾಗ್ತಿದ್ದಂತೆಯೇ ತಾತ್ಕಾಲಿಕವಾಗಿ ದರ ಹೆಚ್ಚಳಕ್ಕೆ ತಡೆ ಕೊಡಲಾಗಿದೆ. ಆದ್ರೆ BMRCL ಸಿಪಿಆರ್​ಒ ಯಶವಂತ್​ ಚೌಹಾಣ್ ಮಾತು ಕೇಳಿದ್ರೆ ಜನರಿಗೆ ಬರೆ ಬೀಳೋದು ಪಕ್ಕಾನಾ? ಅನ್ನೋ ಅನುಮಾನವೂ ಮೂಡ್ತಿದೆ. ಯಾಕೆಂದ್ರೆ ತಾತ್ಕಾಲಿಕವಾಗಿ ತಡೆ ಹಿಡಿದ್ರೂ ಕೂಡ, ಅದಕ್ಕೆ ಇಂತಿಷ್ಟು ಅವಧಿ ಅಂತಾ ಇರೋದಿಲ್ಲ ಅಂದಿರೋದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸೋಶಿಯಲ್‌ ಮೀಡಿಯಾ ಪೋಸ್ಟ್‌ಗಳ ವಿರುದ್ಧ FIR ಹಾಕುವ ಪೊಲೀಸರಿಗೆ ಹೊಸ ಮಾರ್ಗಸೂಚಿ – Kannada News | Karnataka DGP Saleem new guidelines To Police For FIR Against social media posts

ಬೆಂಗಳೂರು, (ಫೆಬ್ರವರಿ 09): ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರಿಂದ ಪೊಲೀಸರ (Police) ಮೇಲೆ ಸಾಕಷ್ಟು ಆರೋಪಗಳು ಕೇಳಿಬರುತ್ತಿರುವುದು ವರದಿಯಾಗಿವೆ. ಹೀಗಾಗಿ ರಾಜ್ಯದ ಪೊಲೀಸರಿಗೆ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ, ಐಜಿಪಿ) ಎಂಎ ಸಲೀಂ (DG IGP dr Saleem) ಮಹತ್ವದ ಸೂಚನೆ ನೀಡಿದ್ದರು. ಪೊಲೀಸರು ಜನರ ಜೊತೆ ಹೇಗೆ ನಡೆದುಕೊಳ್ಳಬೇಕೆಂದು ಮಾರ್ಗಸೂಚಿಯನ್ನು ಹೊರಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ದಾಖಲಿಸುವುದು ಮತ್ತು ಆರೋಪಿಗಳನ್ನು ಬಂಧಿಸುವ ಕುರಿತು ಡಿಜಿ, ಐಜಿಪಿ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ. ಎರಡು ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ ನೀಡಿದ
ತೀರ್ಪಿನ ಮೇಲೆ ಮಾರ್ಗಸೂಚಿ ಪ್ರಕಟಿಸಿದ್ದಾರೆ.

ಇತ್ತೀಚಿನ ಪ್ರಕರಣವೊಂದರಲ್ಲಿ ನೀಡಿದ ನಿರ್ದೇಶನಗಳನ್ನು ಪಾಲಿಸುವಂತೆ ರಾಜ್ಯದ ಎಲ್ಲ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ನಿಯಮಗಳನ್ನು ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳು ಮತ್ತು ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ತಿಳಿಸಲಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿನ ಪೋಸ್ಟ್‌ಗಳ ಬಗ್ಗೆ ಪ್ರಾಥಮಿಕ ವಿಚಾರಣೆ ನಡೆಸದೆಯೇ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳುತ್ತಿರುವುದು ಕಂಡುಬಂದಿದ್ದು, ಇದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಸಾರ್ವಜನಿಕರೊಂದಿಗೆ ಹೇಗೆ ವರ್ತಿಸಬೇಕು? ಪೊಲೀಸರಿಗೆ ಮಾರ್ಗಸೂಚಿ ಬಿಡುಗಡೆ

ಹೊಸ ಮಾರ್ಗಸೂಚಿಯ 8 ಪ್ರಮುಖ ಅಂಶಗಳು ಇಂತಿವೆ

ದೂರುದಾರರ ಅರ್ಹತೆ ಪರಿಶೀಲನೆ: ಮಾನಹಾನಿ ಅಥವಾ ಅಂತಹುದೇ ಪ್ರಕರಣಗಳಲ್ಲಿ ದೂರು ನೀಡುವವರು ಕಾನೂನಿನ ಪ್ರಕಾರ ‘ನೊಂದ ವ್ಯಕ್ತಿ’ ಆಗಿರಬೇಕು. ಸಂಬಂಧವಿಲ್ಲದ ಮೂರನೇ ವ್ಯಕ್ತಿ ನೀಡುವ ದೂರುಗಳನ್ನು (ಗಂಭೀರ ಅಪರಾಧಗಳನ್ನು ಹೊರತುಪಡಿಸಿ) ಸ್ವೀಕರಿಸಬಾರದು.

ಪ್ರಾಥಮಿಕ ವಿಚಾರಣೆ ಕಡ್ಡಾಯ:ದೂರಿನಲ್ಲಿ ಉಲ್ಲೇಖಿಸಲಾದ ವಿಷಯವು ಮೇಲ್ನೋಟಕ್ಕೆ ಅಪರಾಧವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಎಫ್‌ಐಆರ್ ದಾಖಲಿಸುವ ಮುನ್ನ ಕಡ್ಡಾಯವಾಗಿ ಪ್ರಾಥಮಿಕ ವಿಚಾರಣೆ ನಡೆಸಬೇಕು.

ಹಿಂಸಾಚಾರಕ್ಕೆ ಪ್ರಚೋದನೆ ಇದ್ದರೆ ಮಾತ್ರ ಕೇಸ್: ದ್ವೇಷ ಬಿತ್ತುವುದು, ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವುದು ಅಥವಾ ದೇಶದ್ರೋಹದಂತಹ ಆರೋಪಗಳಿದ್ದಾಗ, ಹಿಂಸಾಚಾರಕ್ಕೆ ಪ್ರಚೋದನೆ ನೀಡುವಂತಹ ಸ್ಪಷ್ಟ ಸಾಕ್ಷ್ಯಗಳಿದ್ದರೆ ಮಾತ್ರ ಪ್ರಕರಣ ದಾಖಲಿಸಬೇಕು. ಕೇದಾರನಾಥ್ ಸಿಂಗ್ ಮತ್ತು ಶ್ರೇಯಾ ಸಿಂಘಾಲ್ ಪ್ರಕರಣದ ತೀರ್ಪುಗಳನ್ನು ಇಲ್ಲಿ ಪರಿಗಣಿಸಬೇಕು.

ರಾಜಕೀಯ ಟೀಕೆಗಳಿಗೆ ರಕ್ಷಣೆ:ಕಟುವಾದ ಅಥವಾ ಆಕ್ಷೇಪಾರ್ಹ ರಾಜಕೀಯ ಭಾಷಣ/ಪೋಸ್ಟ್‌ಗಳಿಗೆ ಯಾಂತ್ರಿಕವಾಗಿ ಕೇಸ್ ದಾಖಲಿಸಬಾರದು. ಸಂವಿಧಾನದ 19(1)(ಎ) ಅಡಿಯಲ್ಲಿರುವ ವಾಕ್ ಸ್ವಾತಂತ್ರ್ಯವನ್ನು ಗೌರವಿಸಬೇಕು. ಪೋಸ್ಟ್‌ನಿಂದ ಸಾರ್ವಜನಿಕ ಶಾಂತಿಗೆ ತಕ್ಷಣದ ಅಪಾಯವಿದ್ದರೆ ಮಾತ್ರ ಕಾನೂನು ಕ್ರಮ ಕೈಗೊಳ್ಳಬೇಕು.

ಮಾನಹಾನಿ ಅಸಂಜ್ಞೇಯ ಅಪರಾಧ:ಮಾನಹಾನಿಯು ‘ಅಸಂಜ್ಞೇಯ ಅಪರಾಧ’ ಆಗಿರುವುದರಿಂದ ಪೊಲೀಸರು ನೇರವಾಗಿ ಎಫ್‌ಐಆರ್ ದಾಖಲಿಸುವಂತಿಲ್ಲ. ದೂರುದಾರರಿಗೆ ನ್ಯಾಯಾಲಯದ (ಮ್ಯಾಜಿಸ್ಟ್ರೇಟ್) ಮೊರೆ ಹೋಗಲು ಸೂಚಿಸಬೇಕು.

ಬಂಧನದ ನಿಯಮಗಳು:ಸುಪ್ರೀಂ ಕೋರ್ಟ್‌ನ ಅರ್ನೇಶ್ ಕುಮಾರ್ ಪ್ರಕರಣದ ಮಾರ್ಗಸೂಚಿಯಂತೆ, ಅನಗತ್ಯವಾಗಿ ಅಥವಾ ಯಾಂತ್ರಿಕವಾಗಿ ಯಾರನ್ನೂ ಬಂಧಿಸಬಾರದು.

ಕಾನೂನು ಸಲಹೆ ಪಡೆಯಬೇಕು :ರಾಜಕೀಯ ಪೋಸ್ಟ್‌ಗಳು ಅಥವಾ ಸೂಕ್ಷ್ಮ ವಿಚಾರಗಳಿಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸುವ ಮುನ್ನ ಸರ್ಕಾರಿ ಅಭಿಯೋಜಕರಿಂದ ಕಾನೂನು ಸಲಹೆ ಪಡೆಯುವುದು ಕಡ್ಡಾಯ.

ಒಂದು ವೇಳೆ ದೂರುಗಳು ಸುಳ್ಳು, ದ್ವೇಷಪೂರಿತ ಅಥವಾ ರಾಜಕೀಯ ಪ್ರೇರಿತ ಎಂದು ಕಂಡುಬಂದರೆ, ಅಂತಹ ಪ್ರಕರಣಗಳನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌) ಸೆಕ್ಷನ್ 176(1) ಅಡಿಯಲ್ಲಿ ಮುಕ್ತಾಯಗೊಳಿಸಬೇಕು ಎಂದು ಮಾರ್ಗಸೂಚಿಯಲ್ಲಿ ಖಡಕ್ ಆಗಿ ಸೂಚನೆ ನೀಡಲಾಗಿದೆ. ಈ ಮೂಲಕ ಪ್ರತಿಯೊಂದಕ್ಕೂ ಎಫ್​ಐಆರ್ ದಾಖಲಿಸುವದಕ್ಕೆ ಕಡಿವಾಣ ಹಾಕಿದಂತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 4:11 pm, Mon, 9 February 26

Source link

ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ: ನಾನು ಬಡವ ಕಣಮ್ಮ – Kannada News | Homemaker’s Cries for 12,000 Item Goes Viral, Ignites Marital Finance Discussion

ಮಹಿಳೆಯೊಬ್ಬಳು ತಾನು ಕೇಳಿದ 12 ಸಾವಿರ ರೂ. ವಸ್ತುವನ್ನು ಪತಿ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಮಹಿಳೆ 12 ಸಾವಿರ ರೂ. ಬಟ್ಟೆ ಕೊಡಿಸುತ್ತಾರೆ ಎಂದು ಅಂಗಡಿಯಲ್ಲಿ ಒಂದು ಗಂಟೆ ಕೂತಿದ್ದಾಳೆ, ಆದ್ರೂ ಗಂಡ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ್ದಾರೆ. ಇದಕ್ಕೆ ಗಂಡ ನಿರಾಕರಿಸಿದ್ದಾನೆ. ಈ ಕಾರಣಕ್ಕೆ ಚಿಕ್ಕ ಮಕ್ಕಳಂತೆ ಕಣ್ಣೀರು ಹಾಕಿದ್ದಾಳೆ. ಮಾಧ್ಯಮ ವರ್ಗದಲ್ಲಿ ಇಂತಹ ಆಸೆಗಳು ಸಹಜ, ಆದರೆ ಇಂತಹ ಆಸೆಗಳನ್ನು ಈಡೇರಿಸುವ ಮುನ್ನ ಮನೆಯ ಗಂಡಸಿನ ಪರಿಸ್ಥಿತಿಯನ್ನು ನೋಡಬೇಕು ಎಂದು ನೆಟ್ಟಿಗರು ಹೇಳಿದ್ದಾರೆ. ವಿಡಿಯೋದಲ್ಲಿ ಆಕೆಯ ಪುಟ್ಟ ಮಗು ತಾಯಿಯ ಕಣ್ಣೀರನ್ನು ಒರೆಸಿ ಸಮಾಧಾನ ಮಾಡುವುದನ್ನು ನೋಡಬಹುದು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟುಹಾಕಿದೆ. ಒಬ್ಬಳೇ ಮನೆಯಲ್ಲಿ ಕೆಲಸ ಮಾಡುವ ಗೃಹಿಣಿಗೆ ತನ್ನ ಆಸೆಗಳನ್ನು ಈಡೇರಿಸಿಕೊಳ್ಳಲು ಪತಿಯ ಮೇಲೆಯೇ ಅವಲಂಬಿತಳಾಗಬೇಕಾದ ಅಸಹಾಯಕತೆ ಇದು ಎಂದು ಒಂದು ಕಡೆ ವಾದವಾದರೆ. ಇನ್ನೊಂದು ಕಡೆ ಇಂದಿನ ದಿನಗಳಲ್ಲಿ ₹12,000 ಎಂಬುದು ಒಂದು ಮಧ್ಯಮ ವರ್ಗದ ಕುಟುಂಬಕ್ಕೆ ದೊಡ್ಡ ಮೊತ್ತ. ಕೇವಲ ಒಂದು ವಸ್ತುವಿಗಾಗಿ ಇಷ್ಟು ಹಣ ಖರ್ಚು ಮಾಡುವುದು ಸರಿಯಲ್ಲ. ಹಣದ ಮೌಲ್ಯ ತಿಳಿಯದೆ ಕಣ್ಣೀರು ಹಾಕುವುದು ಸಣ್ಣ ಬುದ್ಧಿ ಎಂದು ಹೇಳಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಓರ್ವ ವ್ಯಕ್ತಿ 19 ಖಾತೆಗಳ ಮೂಲಕ 11.48 ಕೋಟಿ ರೂ ವ್ಯವಹಾರ: ಪೊಲೀಸರ ರೋಚಕ ಕಾರ್ಯಚರಣೆ – Kannada News | Shivamogga Cyber Police Arrest Fraudster: 11.48 Cr Scam via 19 Bank Accounts

ಶಿವಮೊಗ್ಗ, ಫೆಬ್ರವರಿ 09: ಶಿವಮೊಗ್ಗ (shivamogga) ಸೈಬರ್ ಪೊಲೀಸರು ಕಾರ್ಯಾಚರಣೆ ನಡೆಸಿ ಆನ್​ಲೈನ್ ವಂಚಕ (cyber crime) ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶರತ್ ಕುಮಾರ್ ಕೆ ಬಂಧಿತ ಆರೋಪಿ. ಸದ್ಯ ಬಂಧಿತನಿಂದ ಬಳಕೆ ಆಗದ ಬೇರೆ ಬೇರೆ ಜನರ ವಿವಿಧ ಬ್ಯಾಂಕ್​ಗಳ 18 ಪಾಸ್​ ಬುಕ್, 07 ಚೆಕ್ ಬುಕ್, 25 ಎಟಿಎಂ ಕಾರ್ಡ್, ಎರಡು ಮೊಬೈಲ್​​ ಸೇರಿದಂತೆ ಎರಡು ಕ್ಯೂ ಆರ್ ಕೋಡ್ ಸ್ಕ್ಯಾನರ್​​ ಸೀಜ್ ಮಾಡಿದ್ದಾರೆ. ಸೈಬರ್ ವಂಚನೆ ಕೇಸ್​ನಲ್ಲಿ ಆರೋಪಿಗೆ ಸದ್ಯ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

19 ಖಾತೆ, 96ಕ್ಕೂ ಹೆಚ್ಚು ಪ್ರಕರಣ, 55.43 ಕೋಟಿ ರೂ ವ್ಯವಹಾರ

ನಿತ್ಯ ಒಂದಲ್ಲಾ ಒಂದು ಆನ್​ಲೈನ್ ವಂಚನೆ ಪ್ರಕರಣಗಳು ದಾಖಲಾಗುತ್ತಿವೆ. ಜನರು ಯಾವುದೋ ಆಮಿಷಕ್ಕೊಳಗಾಗಿ ತಮ್ಮ ಖಾತೆಯಿಂದ ಲಕ್ಷಾಂತರ ರೂ ಕಳೆದುಕೊಳ್ಳುತ್ತಾರೆ. ಎಲ್ಲೋ ದೂರದಲ್ಲಿ ಕುಳಿತು ಜನರನ್ನು ವಂಚನೆ ಮಾಡುವ ದೊಡ್ಡ ಜಾಲವೇ ಇದೆ. ಈ 19 ಖಾತೆಗಳ ಕುರಿತು ದೇಶದಲ್ಲಿ 96ಕ್ಕೂ ಹೆಚ್ಚು ಪ್ರಕರಣಗಳಿವೆ. ಈ ಖಾತೆಗಳ ಮೂಲಕ 55.43 ಕೋಟಿ ರೂ ಹಣಕಾಸಿನ ವ್ಯವಹಾರ ಆಗಿದೆ.

ಇದನ್ನೂ ಓದಿ: ಹುಬ್ಬಳ್ಳಿ ಆಟೋ ಚಾಲಕನ ಖಾತೆಯಿಂದ ಕೋಟ್ಯಂತರ ರೂ ವರ್ಗಾವಣೆ: ಏನಿದು ಹಣದ ರಹಸ್ಯ?

ಇತ್ತ ಶಿವಮೊಗ್ಗ ಸೈಬರ್ ಪೊಲೀಸರಿಗೆ ಅನೇಕ ಆನ್​ಲೈನ್ ವಂಚನೆ ಪ್ರಕರಣಗಳ ಬಗ್ಗೆ ದೂರು ಬಂದಿದ್ದವು. ಸೈಬರ್ ಪೊಲೀಸ್ ತಂಡವು ಈ ವಂಚಕನ ಬೆನ್ನುಬಿದ್ದಿತ್ತು. ಶಿವಮೊಗ್ಗ ಹಳೇ ತುಂಗಾ ನಗರದ ಶರತ್ ಕುಮಾರ್ ಎಂಬ ವ್ಯಕ್ತಿ ಸೈಬರ್ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈತ ಓದಿದ್ದು ಕೇವಲ ಎಸ್​ಎಸ್​ಎಲ್​​ಸಿ ಮಾತ್ರ. ತನ್ನ ಬುದ್ಧಿವಂತಿಕೆಯಿಂದ ಬಳಕೆ ಮಾಡದ 19 ವಿವಿಧ ಬ್ಯಾಂಕ್​ಗಳ ಖಾತೆಯನ್ನು ತಾನು ಬಳಕೆ ಮಾಡಿದ್ದಾನೆ. ಈ ಖಾತೆಗಳನ್ನು ತನ್ನದ ಎಂದು ನಿರ್ವಹಣೆ ಮಾಡಿದ್ದಾನೆ. ಈ ವಿವಿಧ 19 ಖಾತೆಗಳಿಂದ ಈತ 11.48 ಕೋಟಿ ರೂ ಹಣ ವರ್ಗಾವಣೆ ಮಾಡಿದ್ದಾನೆ.

19 ವಿವಿಧ ಬ್ಯಾಂಕ್ ಖಾತೆದಾರರನ್ನು ತನ್ನ ಬುದ್ದಿವಂತಿಕೆಯಿಂದ ಬಳಕೆ ಮಾಡಿಕೊಂಡಿದ್ದಾನೆ. ಹೀಗೆ ಯಾವುದೇ ಹಣಕಾಸಿನ ವ್ಯವಹಾರ ಇರದೇ ಇರುವ 19 ಖಾತೆಗಳನ್ನು ಈತ ಗುರುತಿಸಿದ್ದಾನೆ. ಬಳಿಕ ಅವರಿಗೆ ವಿಶ್ವಾಸಕ್ಕೆ ತೆಗೆದುಕೊಂಡು ಅವರಿಂದ ಪಾಸ್ ಬುಕ್ ಮತ್ತು ಬ್ಯಾಂಕ್ ಕೊಟ್ಟಿರುವ ಸಿಮ್​ಗಳನ್ನು ಪಡೆದಿದ್ದಾನೆ. ಬಡ ಮತ್ತು ಖಾತೆ ಬಳಕೆ ಮಾಡಲು ಬಾರದ ಅನಕ್ಷರಸ್ಥರನ್ನು ಈತ ಟಾರ್ಗೆಟ್​ ಮಾಡಿದ್ದ. ಹೀಗೆ 19 ಖಾತೆಗಳನ್ನು ಈತ ಆಪರೇಟ್ ಮಾಡುತ್ತಿದ್ದ.

ಲಕ್ಷಾಂತರ ರೂ ವರ್ಗಾವಣೆ

ದೇಶದಲ್ಲಿ ಅನೇಕ ಆನ್​ಲೈನ್ ದೋಖಾ ಕೇಸ್​ಗಳು ನಡೆದಿವೆ. ಈ ಕೇಸ್​ಗಳಲ್ಲಿ ಬಳಕೆ ಮಾಡಿದ್ದು ಇದೇ 19 ಖಾತೆಗಳು. ಸದ್ಯ ಸೈಬರ್ ಪೊಲೀಸರು ವಂಚನೆ ಕೇಸ್​ಗಳ ತನಿಖೆ ಸಂದರ್ಭದಲ್ಲಿ ಶರತ್ ಕುಮಾರ್ ವಂಚನೆ ಮಾಡಿರುವುದನ್ನು ಪತ್ತೆ ಮಾಡಿದ್ದಾರೆ. ಈತ ಮತ್ತೊಬ್ಬರ ಖಾತೆ ಬಳಕೆ ಮಾಡಿ ಅವರ ಖಾತೆಯಲ್ಲಿ ಲಕ್ಷಾಂತರ ರೂ ಹಣದ ವರ್ಗಾವಣೆ ಮಾಡಿದ್ದಾನೆ. ಈ ವಿಷಯ ಖಾತೆದಾರರನಿಗೆ ಗೊತ್ತಾಗುತ್ತಿದ್ದಂತೆ ಆತ ಶಾಕ್ ಆಗಿದ್ದ. ಮೋಸ ಹೋದ ವ್ಯಕ್ತಿಯೂ ಸೈಬರ್ ಪೊಲೀಸರಿಗೆ ದೂರು ಕೊಟ್ಟಿದ್ದ. ಸದ್ಯ ಸೈಬರ್ ಪೊಲೀಸರು ಆನ್​ಲೈನ್ ದೋಖಾ ಮಾಡುತ್ತಿದ್ದ ಶರತ್ ಕುಮಾರ್​ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಖಾತೆ ನೀಡಿವರಿಗೂ ಸಂಕಷ್ಟ

ಓದಿದ್ದು ಎಸ್​ಎಸ್​ಎಲ್​ಸಿ, ಈತ ವ್ಯವಹಾರ ಮಾಡಿದ್ದು ಮಾತ್ರ ಕೋಟಿ ಕೋಟಿ. ಯಾರದೋ ದುಡ್ಡನ್ನು ಈತ ಮತ್ತು ಈತನ ವಂಚಕರ ಜಾಲ ಯಲ್ಲಮ್ಮನ ಜಾತ್ರೆ ಮಾಡಿದೆ. ಈಗ ಒಬ್ಬ ವಂಚಕ ಬಲೆಗೆ ಬಿದ್ದಿದ್ದಾನೆ. 19 ಖಾತೆ, 55 ಕೋಟಿಗೂ ಅಧಿಕ ವ್ಯವಹಾರದ ನಂಟಿನ ತನಿಖೆ ಚುರುಗೊಂಡಿದೆ. ಒಂದಿಷ್ಟು ಹಣದಾಸೆಗೆ ಖಾತೆ ವ್ಯವಹಾರವನ್ನು ಬಿಟ್ಟುಕೊಟ್ಟ ಖಾತೆದಾರರು ಈಗ ಸಂಕಷ್ಟಕ್ಕೆ ಸಿಲುಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 4:56 pm, Mon, 9 February 26

Source link

ಭಯದಿಂದ ಪ್ರಧಾನಿ ಮೋದಿ ಸದನಕ್ಕೆ ಗೈರು; ಕಾಂಗ್ರೆಸ್ ಮಹಿಳಾ ಸಂಸದರಿಂದ ಲೋಕಸಭಾ ಸ್ಪೀಕರ್‌ಗೆ ಪತ್ರ – Kannada News | PM Modi Skipped session Out Of Fear Congress Women MPs Write To Lok Sabha Speaker Om Birla

ನವದೆಹಲಿ, ಫೆಬ್ರವರಿ 9: ಕಾಂಗ್ರೆಸ್ ಪಕ್ಷದ ಮಹಿಳಾ ಸಂಸದೀಯ ಸದಸ್ಯರ ಗುಂಪೊಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ಪ್ರಧಾನಿ ನರೇಂದ್ರ ಮೋದಿ (PM Modi) ಹೆದರಿಕೆಯಿಂದ ಸದನಕ್ಕೆ ಬರುತ್ತಿಲ್ಲವೇ ವಿನಃ ನಾವು ಹಾಕಿದ ಬೆದರಿಕೆಯ ಒತ್ತಡದಿಂದಲ್ಲ. ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಮಯದಲ್ಲಿ ಪ್ರಧಾನಿ ಗೈರುಹಾಜರಾಗಿರುವುದಕ್ಕೆ ಭದ್ರತಾ ಕಾಳಜಿ ಕಾರಣವಲ್ಲ, ಭಯವೇ ಇದಕ್ಕೆ ಕಾರಣ ಎಂದು ಟೀಕಿಸಿದ್ದಾರೆ. ವಿರೋಧ ಪಕ್ಷದ ಮಹಿಳಾ ಸದಸ್ಯರ ವಿರುದ್ಧ ಸ್ಪೀಕರ್ ಅವರ ಹೇಳಿಕೆಗಳು ಸುಳ್ಳು, ಆಧಾರರಹಿತ ಮತ್ತು ಮಾನನಷ್ಟಕರ ಎಂದು ಸಂಸದರು ಪತ್ರದಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರವು ವಿರೋಧ ಪಕ್ಷದ ಸಂಸದೀಯ ಹಕ್ಕುಗಳನ್ನು ಹತ್ತಿಕ್ಕುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಕಾಂಗ್ರೆಸ್ ಸಂಸದೆ ಎಸ್. ಜೋತಿಮಣಿ ನೇತೃತ್ವದ ಮತ್ತು ಹಲವಾರು ಮಹಿಳಾ ಸಂಸದರು ಸಹಿ ಮಾಡಿದ ಪತ್ರವು ತಮ್ಮ ಪ್ರತಿಭಟನೆಗಳು ಶಾಂತಿಯುತ ಮತ್ತು ಪ್ರಜಾಪ್ರಭುತ್ವದ ಮಾನದಂಡಗಳೊಳಗೆ ನಡೆದಿವೆ ಎಂದು ಪ್ರತಿಪಾದಿಸಿದೆ. ಕಳೆದ ವಾರ ಲೋಕಸಭೆಯಲ್ಲಿ ಪ್ರಧಾನಿ ಮೋದಿ ಧನ್ಯವಾದ ನಿರ್ಣಯದ ಚರ್ಚೆಗೆ ತಮ್ಮ ನಿಗದಿತ ಉತ್ತರವನ್ನು ನೀಡಲಿಲ್ಲ. 22 ವರ್ಷಗಳಲ್ಲಿ ಪ್ರಧಾನಿಯೊಬ್ಬರು ಕೆಳಮನೆಯಲ್ಲಿ ಚರ್ಚೆಗೆ ಪ್ರತಿಕ್ರಿಯಿಸಲು ಸಾಧ್ಯವಾಗದ ಮೊದಲ ನಿದರ್ಶನ ಇದು. ಇದಾದ ನಂತರ ಪದೇ ಪದೇ ಮುಂದೂಡಿಕೆಗಳ ನಡುವೆಯೂ ಧನ್ಯವಾದ ನಿರ್ಣಯವನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.

ಇದನ್ನೂ ಓದಿ: ಕಾಂಗ್ರೆಸ್ ಏನೋ ಪ್ಲಾನ್ ಮಾಡಿದೆಯೆಂದು ನಾನೇ ಪ್ರಧಾನಿ ಮೋದಿಗೆ ಗೈರಾಗಲು ಸೂಚಿಸಿದ್ದೆ; ಸ್ಪೀಕರ್ ಓಂ ಬಿರ್ಲಾ

ಪ್ರಧಾನಿ ಮೋದಿ ಮಾತನಾಡಲು ನಿಗದಿಪಡಿಸಿದಾಗ ಕೆಲವು ಕಾಂಗ್ರೆಸ್ ಸಂಸದರು ಪ್ರಧಾನಿಯವರ ಕುರ್ಚಿಯನ್ನು ಸುತ್ತುವರೆಯಬಹುದು ಮತ್ತು ಏನಾದರೂ ಅಹಿತಕರವಾದುದು ಸಂಭವಿಸಬಹುದು ಎಂಬ ಗುಪ್ತ ಮಾಹಿತಿ ನನಗೆ ಬಂದಿತ್ತು ಎಂದು ಸ್ಪೀಕರ್ ಓಂ ಬಿರ್ಲಾ ಈ ಹಿಂದೆ ಹೇಳಿದ್ದರು. ಹೀಗಾಗಿಯೇ ಆ ಸಮಯದಲ್ಲಿ ಸದನಕ್ಕೆ ಹಾಜರಾಗದಂತೆ ನಾನೇ ಪ್ರಧಾನಿ ಮೋದಿಗೆ ಸಲಹೆ ನೀಡಿದ್ದೆ ಎಂದು ಹೇಳಿದ್ದರು. ವಿರೋಧ ಪಕ್ಷದ ನಡವಳಿಕೆಯನ್ನು ಅವರು ಟೀಕಿಸಿದ್ದರು.

ಆದರೆ, ಕಾಂಗ್ರೆಸ್ ನಾಯಕರು ಸ್ಪೀಕರ್ ಹೇಳಿಕೆಯನ್ನು ಬಲವಾಗಿ ವಿರೋಧಿಸಿದ್ದರು. ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಧಾನಿ ಮೋದಿ ಸ್ಪೀಕರ್ ಹಿಂದೆ ಅಡಗಿಕೊಂಡು ಚರ್ಚೆಯನ್ನು ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಲೋಕಸಭೆ ಅಧಿವೇಶನದಲ್ಲಿ ಸ್ಪೀಕರ್ ಮೇಲೆ ಪೇಪರ್ ಎಸೆದಿದ್ದ 8 ಸಂಸದರ ಅಮಾನತು

ಇಂದು ಬರೆದ ಪತ್ರದಲ್ಲಿ ಆಡಳಿತ ಪಕ್ಷದಿಂದ ಮೋದಿ ಒತ್ತಡ ಎದುರಿಸುತ್ತಿದ್ದಾರೆ ಎಂಬ ಸ್ಪೀಕರ್ ಹೇಳಿಕೆಯ ಬಗ್ಗೆ ಮಹಿಳಾ ಸಂಸದರು ಕಳವಳ ವ್ಯಕ್ತಪಡಿಸಿದ್ದಾರೆ. ಸ್ಪೀಕರ್ ನಿಷ್ಪಕ್ಷಪಾತವಾಗಿರಬೇಕು. ಚರ್ಚೆಯ ಸಮಯದಲ್ಲಿ ರಾಹುಲ್ ಗಾಂಧಿಗೆ ಮಾತನಾಡಲು ಪದೇ ಪದೇ ಅವಕಾಶ ನಿರಾಕರಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಕಳೆದ ವಾರದ ಆರಂಭದಲ್ಲಿ 8 ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿದ್ದನ್ನು ಸಹ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಬಿಜೆಪಿ ಸಂಸದರು ಮಾಜಿ ಪ್ರಧಾನ ಮಂತ್ರಿಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಲು ಮತ್ತು ವಿರೋಧ ಪಕ್ಷದ ಸದಸ್ಯರನ್ನು ದಂಡಿಸಲು ಅವಕಾಶ ನೀಡುವುದನ್ನು ಮಹಿಳಾ ಸಂಸದರು ಆಕ್ಷೇಪಿಸಿದ್ದಾರೆ. ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಮತ್ತು ಭಾರತ-ಚೀನಾ ಸಂಬಂಧಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ರಾಹುಲ್ ಗಾಂಧಿ ಮಾತನಾಡಲು ಅವಕಾಶ ನೀಡಬೇಕೆಂಬ ಬೇಡಿಕೆಗಳನ್ನು ಇಟ್ಟುಕೊಂಡು ವಿರೋಧ ಪಕ್ಷದ ಪ್ರತಿಭಟನೆಗಳು ನಡೆದಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs AUS: 3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ – Kannada News | Indian Women’s Cricket Team Australia Tour 2024: T20, ODI & Test Series Schedule, Squads

ಒಂದೆಡೆ ಪುರುಷರ ತಂಡ ಭಾರತದಲ್ಲಿ ಟಿ20 ವಿಶ್ವಕಪ್ ಆಡುತ್ತಿದ್ದರೆ, ಇನ್ನೊಂದೆಡೆ ಭಾರತ ಮಹಿಳಾ ತಂಡ ಆಸ್ಟ್ರೇಲಿಯಾ ಪ್ರವಾಸವನ್ನು ಕೈಗೊಂಡಿದೆ. ಈ ಪ್ರವಾಸದಲ್ಲಿ ಟೀಂ ಇಂಡಿಯಾ ಟಿ20, ಏಕದಿನ ಹಾಗೂ ಟೆಸ್ಟ್ ಸರಣಿಯನ್ನು ಆಡಲಿದೆ. ಭಾರತದ ಈ ಪ್ರವಾಸ ಫೆಬ್ರವರಿ 15 ರಿಂದ ಆರಂಭವಾಗಲಿರುವ ಟಿ20 ಸರಣಿಯೊಂದಿಗೆ ಆರಂಭವಾಗಲಿದ್ದು, ಮಾರ್ಚ್​ 6 ರಿಂದ 9 ರವರೆಗೆ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯದೊಂದಿಗೆ ಅಂತ್ಯವಾಗಲಿದೆ.

ಈ ಪ್ರವಾಸವು ಟಿ20 ಸರಣಿಯೊಂದಿಗೆ ಆರಂಭವಾಗಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟಿ20ಪಂದ್ಯ ಫೆಬ್ರವರಿ 15 ರಂದು ಸಿಡ್ನಿಯಲ್ಲಿ ನಡೆಯಲಿದೆ. ಎರಡನೇ ಟಿ20ಪಂದ್ಯ ಫೆಬ್ರವರಿ 19 ರಂದು ಹೋಬಾರ್ಟ್‌ನಲ್ಲಿ ನಡೆಯಲಿದೆ. ಮೂರನೇ ಪಂದ್ಯ ಫೆಬ್ರವರಿ 21 ರಂದು ಅಡಿಲೇಡ್ ಓವಲ್‌ನಲ್ಲಿ ನಡೆಯಲಿದೆ. ಆ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ಫೆಬ್ರವರಿ 24 ರಂದು ಆರಂಭವಾಗಲಿದೆ. ಮೊದಲ ಪಂದ್ಯ ಬ್ರಿಸ್ಬೇನ್‌ನಲ್ಲಿ ನಡೆಯಲಿದ್ದು, ಎರಡನೇ ಏಕದಿನ ಪಂದ್ಯ ಫೆಬ್ರವರಿ 27 ರಂದು ಹೋಬಾರ್ಟ್‌ನಲ್ಲಿ ನಡೆಯಲಿದೆ. ಮೂರನೇ ಏಕದಿನ ಪಂದ್ಯ ಮಾರ್ಚ್ 1 ರಂದು ಹೋಬಾರ್ಟ್‌ನಲ್ಲಿ ನಡೆಯಲಿದೆ. ಆ ಬಳಿಕ ಏಕೈಕ ಟೆಸ್ಟ್ ಪಂದ್ಯ ಮಾರ್ಚ್​ 6 ರಿಂದ 9 ರವರೆಗೆ ಪರ್ತ್​ ಮೈದಾನದಲ್ಲಿ ನಡೆಯಲಿದೆ.

ಟಿ20 ಸರಣಿಗೆ ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ರೇಣುಕಾ ಠಾಕೂರ್, ಶ್ರೀ ಚರಣಿ, ವೈಷ್ಣವಿ ಶರ್ಮಾ, ಕ್ರಾಂತಿ ಗೌಡ್, ಸ್ನೇಹ ರಾಣಾ, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಜಿ ಕಮಲಿನಿ (ವಿಕೆಟ್ ಕೀಪರ್), ಅರುಂಧತಿ ರೆಡ್ಡಿ, ಅಮಾನ್‌ಜೋತ್ ಕೌರ್,ಜೆಮಿಮಾ ರಾಡ್ರಿಗಸ್, ಭಾರತಿ ಫುಲ್ಮಾಲಿ, ಶ್ರೇಯಾಂಕಾ ಪಾಟೀಲ್.

ಏಕದಿನ ಸರಣಿಗೆ ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ರೇಣುಕಾ ಠಾಕೂರ್, ಶ್ರೀ ಚರಣಿ, ವೈಷ್ಣವಿ ಶರ್ಮಾ, ಕ್ರಾಂತಿ ಗೌಡ್, ಸ್ನೇಹ ರಾಣಾ, ದೀಪ್ತಿ ಶರ್ಮಾ,ರಿಚಾ ಘೋಷ್ (ವಿಕೆಟ್ ಕೀಪರ್), ಜಿ ಕಮಲಿನಿ (ವಿಕೆಟ್ ಕೀಪರ್),ಕಾಶ್ವೀ ಗೌತಮ್, ಅಮನ್ಜೋತ್ ಕೌರ್, ಜೆಮಿಮಾ ರಾಡ್ರಿಗಸ್, ಹರ್ಲೀನ್ ಡಿಯೋಲ್.

ಟೆಸ್ಟ್ ತಂಡ: ಹರ್ಮನ್‌ಪ್ರೀತ್ ಕೌರ್ (ಸಿ), ಸ್ಮೃತಿ ಮಂಧಾನ (ವಿಸಿ) , ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಅಮನ್‌ಜೋತ್ ಕೌರ್, ರಿಚಾ ಘೋಷ್ (ಡಬ್ಲ್ಯುಕೆ), ಉಮಾ ಚೆಟ್ರಿ (ಡಬ್ಲ್ಯುಕೆ), ಪ್ರತೀಕಾ ರಾವಲ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ರೇಣುಕಾ ಸಿಂಗ್ ಠಾಕೂರ್, ಸ್ನೇಹ ರಾಣಾ, ಕ್ರಾಂತಿ ಗೌಡ್, ವೈಷ್ಣವಿ ಶರ್ಮಾ, ಸಯಾಲಿ ಸತ್ಘರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಟಿವಿಯಲ್ಲೂ ದಾಖಲೆ ಬರೆದ ‘ಕಾಂತಾರ ಚಾಪ್ಟರ್ 1’; ಜೀ ಕನ್ನಡದಲ್ಲಿ ಪ್ರಸಾರ – Kannada News | Kantara Chapter 1 movie gets record breaking TVR on Zee Kannada Television premiere

‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಯು ‘ಕಾಂತಾರ ಚಾಪ್ಟರ್ 1’ (Kantara Chapter 1) ಸಿನಿಮಾವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿತು. ಚಿತ್ರಮಂದಿರದಲ್ಲಿ ಮತ್ತು ಒಟಿಟಿಯಲ್ಲಿ ಈ ಸಿನಿಮಾ ಹಲವು ದಾಖಲೆಗಳನ್ನು ಬರೆಯಿತು. ಅಲ್ಲದೇ, ಕಿರುತೆರೆಯಲ್ಲಿ ಪ್ರಸಾರ ಆದಾಗಲೂ ಬ್ಲಾಕ್‌ ಬಸ್ಟರ್ ಸಿನಿಮಾ ಎನಿಸಿಕೊಂಡಿದೆ. ಈ ಸಿನಿಮಾದ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ‘ಜೀ ಕನ್ನಡ’ (Zee Kannada) ವಾಹಿನಿಯಲ್ಲಿ ಆಯಿತು. ಅದರಲ್ಲಿ ಅತ್ಯುತ್ತಮ ಟಿಆರ್‌ಪಿ ಗಳಿಸಿದೆ. ಆ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

2026ರ ಜನವರಿ 24ರಂದು ಸಂಜೆ 7 ಗಂಟೆಗೆ ‘ಜೀ ಕನ್ನಡ’ ವಾಹಿನಿಯಲ್ಲಿ ‘ಕಾಂತಾರ ಚಾಪ್ಟರ್ 1’ ಸಿನಿಮಾ ಪ್ರಸಾರ ಆಯಿತು. ಈ ಪ್ರೀಮಿಯರ್​ನಿಂದ ನಗರ ಮತ್ತು ಗ್ರಾಮೀಣ ಪ್ರದೇಶ ಸೇರಿ ಒಟ್ಟು 11.56 ಟಿವಿಆರ್ ದಾಖಲಿಸಿತು. ನಗರ ಪ್ರದೇಶದಲ್ಲಿ 9.30 ಟಿವಿಆರ್ ದಾಖಲಿಸಿದೆ. ಇದು ಕನ್ನಡ ಮನರಂಜನಾ ಕ್ಷೇತ್ರದಲ್ಲಿ ಒಂದು ಮೈಲಿಗಲ್ಲಾಗಿದೆ.

2025ರ ಅಕ್ಟೋಬರ್ 2ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ‘ಕಾಂತಾರ ಚಾಪ್ಟರ್ 1’ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಅಭೂತಪೂರ್ವ ಯಶಸ್ಸು ಕಂಡಿತ್ತು. ವಿಮರ್ಶಕರಿಂದ ಮತ್ತು ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ಗಳಿಸಿತ್ತು. ರಿಷಬ್ ಶೆಟ್ಟಿ ಅವರ ರಚನೆ ಮತ್ತು ನಿರ್ದೇಶನದಲ್ಲಿ ಮೂಡಿಬಂದ ಈ ಚಿತ್ರವನ್ನು ವಿಜಯ್ ಕಿರಗಂದೂರು ಅವರು ‘ಹೊಂಬಾಳೆ ಫಿಲ್ಮ್ಸ್’ ಮೂಲಕ ನಿರ್ಮಿಸಿದ್ದಾರೆ.

‘ಕಾಂತಾರ ಚಾಪ್ಟರ್ 1’ ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರು ಸಂಗೀತ ನೀಡಿದ್ದಾರೆ. ಅರವಿಂದ್ ಎಸ್. ಕಶ್ಯಪ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಟಿವಿಯಲ್ಲಿ ಸಿನಿಮಾ ನೋಡಿದ ಪ್ರೇಕ್ಷಕರು ಕೂಡ ಭಾರಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ‘ಹೊಂಬಾಳೆ ಫಿಲ್ಮ್ಸ್’ ನಿರ್ಮಾಣದ ಮುಂದಿನ ಸಿನಿಮಾಗಳ ಮೇಲೆ ಪ್ರೇಕ್ಷಕರಿಗೆ ನಿರೀಕ್ಷೆ ಹೆಚ್ಚುವಂತಾಗಿದೆ.

ಇದನ್ನೂ ಓದಿ: ರಿಷಬ್ ಶೆಟ್ಟಿ ವಿವಾಹ ವಾರ್ಷಿಕೋತ್ಸವ: ಪತ್ನಿ ಪ್ರಗತಿ ಶೆಟ್ಟಿಗೆ ಹೊಗಳಿಕೆಯ ಸುರಿಮಳೆ

ಟ್ರೇಡ್ ವಿಶ್ಲೇಷಕರ ಪ್ರಕಾರ, ಪ್ರೈಮ್-ಟೈಮ್‌ನಲ್ಲಿ ಕನ್ನಡ ಸಿನಿಮಾವೊಂದರ ಟೆಲಿವಿಷನ್ ಪ್ರೀಮಿಯರ್ ಈ ಮಟ್ಟದ ರೇಟಿಂಗ್ ಪಡೆಯುವುದು ಅಪರೂಪ. ಇದು ‘ಕಾಂತಾರ ಚಾಪ್ಟರ್ 1’ ಚಿತ್ರದ ಸಾಂಸ್ಕೃತಿಕ ಪ್ರಭಾವ ಮತ್ತು ಕಮರ್ಷಿಯಲ್ ಯಶಸ್ಸನ್ನು ಪ್ರತಿಬಿಂಬಿಸುತ್ತದೆ. ಸಿನಿಮಾದಲ್ಲಿ ಇರುವ ಗಟ್ಟಿಯಾದ ಕಥಾಹಂದರವು ಕುಟುಂಬ ಸಮೇತರಾಗಿ ವೀಕ್ಷಿಸುವ ಪ್ರೇಕ್ಷಕರನ್ನು ಸೆಳೆದುಕೊಂಡಿದೆ ಎಂದು ಹೊಂಬಾಳೆ ಫಿಲ್ಮ್ಸ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಜಪಾನ್, ಡಚ್ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ: ತಮಿಳುನಾಡು ಡಿಸಿಎಂ ಹೆಸರು ಉಲ್ಲೇಖ – Kannada News | Bengaluru Bomb Hoax: Japan, Dutch Embassies Targeted; TN DyCM Name Mentioned

ಬೆಂಗಳೂರು, ಫೆಬ್ರವರಿ 09: ನಗರದಲ್ಲಿರುವ ಜಪಾನ್, ಡಚ್ ರಾಯಭಾರಿ ಕಚೇರಿಗಳಿಗೆ ಇ-ಮೇಲ್ ಮೂಲಕ ಹುಸಿ ಬಾಂಬ್​​ ಬೆದರಿಕೆ ಹಾಕಲಾಗಿದ್ದು, ಕಳೆದ 10 ದಿನಗಳ ಅಂತರದಲ್ಲಿ ದೂತವಾಸ ಕಚೇರಿಗಳಿಗೆ 2ನೇ ಬಾರಿಗೆ ಹಾಕಿರುವ ಬೆದರಿಕೆ ಇದಾಗಿದೆ. ಬೆಳಗ್ಗೆ 8.40ಕ್ಕೆ ರಾಯಭಾರ ಕಚೇರಿ ಮೇಲ್ ಐಡಿಗೆ ಬೆದರಿಕೆ ಇ-ಮೇಲ್ ಬಂದ ಹಿನ್ನೆಲೆ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿವೆ. ಈ ವೇಳೆ ಯಾವುದೇ ಸ್ಫೋಟಕ ಸಾಮಗ್ರಿ ಪತ್ತೆಯಾಗದ ಕಾರಣ ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ಪೊಲೀಸರು ದೃಢಪಡಿಸಿದ್ದಾರೆ.

ಇ-ಮೇಲ್​ನಲ್ಲಿ ಉದಯನಿಧಿ ಸ್ಟಾಲಿನ್ ಹೆಸರು ಉಲ್ಲೇಖ

ಇನ್ನು ಬಾಂಬ್ ಬೆದರಿಕೆ ಇ-ಮೇಲ್​ನಲ್ಲಿ ಅಪರಿಚಿತರು ತಮಿಳುನಾಡಿನ ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಹೆಸರು ಉಲ್ಲೇಖ ಮಾಡಿದ್ದಾರೆ. ಕೋರಮಂಡಲ್ ಹೋಟೆಲ್​ನ ಕೊಠಡಿ ಸಂಖ್ಯೆ 536ರಲ್ಲಿ ಸ್ಟಾಲಿನ್ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ್ದಾರೆ. ವಿಐಪಿ ಪರಿಚಯ ಮಾಡಿಸುತ್ತೇನೆಂದು ಹೋಟೆಲ್​ಗೆ ಕರೆಸಿ ಕೃತ್ಯ ಎಸಗಲಾಗಿದ್ದು, ಅರ್ಜುನ್ ದೊರೆ ರಾಜಶೇಖರ್ ಎಂಬಾತ ಮಹಿಳೆಯನ್ನು ಕರೆದೊಯ್ದಿದ್ದ. ಹೋಟೆಲ್​​ಗೆ ಹೋದಾಗ ಸ್ಟಾಲಿನ್ ಅರೆಬೆತ್ತಲಾಗಿ ಕುಳಿತಿದ್ದರು. ಈ ಬಗ್ಗೆ ದೂರು ನೀಡಿದ್ದರೂ ತಮಿಳುನಾಡು ಪೊಲೀಸರು ಕೇಸ್ ಹಾಕಿಲ್ಲ. ಪ್ರಕರಣ ದಾಖಲಿಸದ ಹಿನ್ನೆಲೆಯಲ್ಲಿ ಜಪಾನ್ ದೂತಾವಾಸದ ಶೌಚಾಲಯದಲ್ಲಿ 4 RDX, IED ಬಾಂಬ್ ಇಟ್ಟಿದ್ದೇವೆ ಎಂದು ಉಲ್ಲೇಖಿಸಿರೋದು ಕಂಡುಬಂದಿದೆ.

ಇದನ್ನೂ ಓದಿ: ಇಟಲಿ, ಜಪಾನ್ ಬಳಿಕ ನೆದರ್​​ಲ್ಯಾಂಡ್ ರಾಯಭಾರಿ ಕಚೇರಿಗೆ ಬಾಂಬ್​ ಬೆದರಿಕೆ ಸಂದೇಶ

ಇತ್ತೀಚೆಗಷ್ಟೇ ನೆದರ್‌ಲ್ಯಾಂಡ್ ರಾಯಭಾರಿ ಕಚೇರಿಗೂ ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು. ಆರ್​​ಟಿ ನಗರದ ಗಂಗಾನಗರದಲ್ಲಿರುವ ನೆದರ್‌ಲ್ಯಾಂಡ್ ರಾಯಭಾರಿ ಕಚೇರಿಗೆ ಜನವರಿ 29ರಂದು ಕಿಡಿಗೇಡಿಗಳು ಇ-ಮೇಲ್ ಕಳುಹಿಸಿ 5 RDX ಮತ್ತು ಐಇಡಿ ಬಳಸಿ ಸ್ಫೋಟ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದರು. ಈ ಕುರಿತು ರಾಯಭಾರಿ ಕಚೇರಿ ಅಧಿಕಾರಿ ಭಾಸ್ಕರ್ ಸುಬ್ರಹ್ಮಣಿ ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಿಸಿದ್ದರು. ಹಲಸೂರಿನಲ್ಲಿರುವ ಇಟಾಲಿಯನ್ ಕಾನ್ಸುಲೇಟ್ ಕಚೇರಿಗೂ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಕಾರಣ ಇಟಾಲಿಯನ್ ಕಾನ್ಸುಲೇಟ್ ಭದ್ರತಾ ವ್ಯವಸ್ಥಾಪಕ ಜಿಯೋಡೊಮೆನಿಕ್ ಒ ಮಿಲಾನೋ ಹಲಸೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version