Headlines

ಕೊಪ್ಪಳದ ಅಜ್ಜನ ಜಾತ್ರೆಗಿಂದು ಕೊನೆಯ ದಿನ: ಮಹಾದಾಸೋಹದಲ್ಲಿ ಗೋದಿ ಹುಗ್ಗಿ ಪ್ರಸಾದ – Kannada News | Koppalas Gavimath Fair: 18 Day Dasoha end with 85 Quintals of Godi Huggi

ಕೊಪ್ಪಳ, ಜನವರಿ 18: ದಕ್ಷಿಣ ಭಾರತದ ಕುಂಭಮೇಳವೆಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಗವಿಮಠದ ಮಹಾದಾಸೋಹಕ್ಕೆ ಇಂದು ಕೊನೆಯ ದಿನ. 18 ದಿನಗಳ ಕಾಲ ನಡೆದ ಮಹಾರಥೋತ್ಸವ ಹಿನ್ನೆಲೆ ದಾಸೋಹವನ್ನು ಏರ್ಪಡಿಸಲಾಗಿತ್ತು. ಜಾತ್ರೆಯ ಕೊನೆಯ ದಿನದಂದು ಭಕ್ತರಿಗೆ ವಿಶೇಷವಾಗಿ ಗೋಧಿ ಹುಗ್ಗಿಯನ್ನು ಪ್ರಸಾದವಾಗಿ ನೀಡಲಾಗಿದೆ. ನಿನ್ನೆ ಮಧ್ಯರಾತ್ರಿಯಿಂದಲೇ ಸುಮಾರು 85 ಕ್ವಿಂಟಾಲ್ ಗೋಧಿ ಹುಗ್ಗಿ ಸಿದ್ಧಪಡಿಸಲಾಗಿತ್ತು. 25 ಕ್ವಿಂಟಾಲ್ ಗೋಧಿ, 50 ಕ್ವಿಂಟಾಲ್ ಬೆಲ್ಲ, ಕಡ್ಲೆಬೇಳೆ ಮತ್ತು ಕೊಬ್ಬರಿಯನ್ನು ಬಳಸಿ ಈ ಬೃಹತ್ ಪ್ರಮಾಣದ ಗೋಧಿ ಹುಗ್ಗಿಯನ್ನು ಎಂಟು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 28ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ತಮಾಷೆಗೆ ಎಂದು ಆರಂಭಿಸಿದ ಮಾತು ಹೊಸ ವ್ಯವಹಾರವನ್ನೋ ವ್ಯಾಪಾರವನ್ನೋ ಆರಂಭಿಸುವ ಮಟ್ಟಕ್ಕೆ ಒಯ್ಯಲಿದೆ. ನಿಮ್ಮ ಗುಣ- ಸ್ವಭಾವಕ್ಕೆ ಶಿಸ್ತಿನ ಚೌಕಟ್ಟು ಹಾಕಲು ಮುಂದಾಗಲಿದ್ದೀರಿ. ಹಿಂದೆಲ್ಲ ದಾಕ್ಷಿಣ್ಯಕ್ಕೆ ಸಿಲುಕಿಕೊಂಡು, ಒಪ್ಪಿಕೊಂಡು ಬಿಡುತ್ತಿದ್ದ ಕೆಲಸ- ಕಾರ್ಯಗಳಂಥ ಸುಳಿಗೆ ಇನ್ನು ಮುಂದೆ ಸಿಕ್ಕಿಹಾಕಿಕೊಳ್ಳಬಾರದು ಎಂಬ ದೃಢವಾದ ನಿಶ್ಚಯ ಮಾಡುತ್ತೀರಿ. ಆದಾಯದಲ್ಲಿ ಏರಿಕೆ ಮಾಡಿಕೊಳ್ಳಲು ದೊರೆಯುವ ಅವಕಾಶಗಳ ಪೈಕಿ ಯಾವುದಕ್ಕೆ ಆಯ್ಕೆ ಮಾಡಿಕೊಳ್ಳುತ್ತೀರಿ ಎಂಬುದರ ಸ್ಪಷ್ಟತೆ…

Read More

GT vs RCB: 4,4,4,4,4.. ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಕೊಹ್ಲಿ – Kannada News | IPL 2026: Virat Kohli’s Explosive Start vs GT; 5 Fours in Rabada Over for RCB

ಐಪಿಎಲ್ 2026 ರ 42ನೇ ಪಂದ್ಯವು ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಲೀಗ್​ನಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿಗೆ ಮೊದಲ ಎರಡು ಓವರ್​​ಗಳಲ್ಲಿ ಸ್ಫೋಟಕ ಆರಂಭ ಸಿಕ್ಕಿತು. ಅದರಲ್ಲೂ ರಬಾಡ ಬೌಲ್ ಮಾಡಿದ 2ನೇ ಓವರ್​ನಲ್ಲಿ ವಿರಾಟ್ ಕೊಹ್ಲಿ ಬೌಂಡರಿಗಳ ಮಳೆಗರೆದರು. ಈ ಪಂದ್ಯದಲ್ಲಿ ಆರ್​ಸಿಬಿ…

Read More

ಇದ್ದಕ್ಕಿದ್ದಂತೆ ಗಂಡ ನಾಪತ್ತೆ, ಮೈದುನನ ಜತೆ ಪತ್ನಿ ಮದುವೆ, 25 ವರ್ಷಗಳ ಬಳಿಕ ಬಂದ ಮೊದಲ ಪತಿ

ಬಿಜ್ನೋರ್, ಏಪ್ರಿಲ್ 07: ಇದ್ದಕ್ಕಿದ್ದಂತೆ ಗಂಡ ನಾಪತ್ತೆಯಾಗಿದ್ದ, ಕುಟುಂಬದವರು ಮಹಿಳೆಯನ್ನು ಮೈದುನನಿಗೆ ಕೊಟ್ಟು ಮದುವೆ(Marriage) ಮಾಡಿದ್ದರು. ಈಗ 25 ವರ್ಷಗಳ ಬಳಿಕ ಮೊದಲ ಪತಿ ಮನೆಗೆ ಮರಳಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್​ನಲ್ಲಿ ನಡೆದಿದೆ.25 ವರ್ಷಗಳಿಂದ ಕಾಣೆಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಅವರ ಕುಟುಂಬದೊಂದಿಗೆ ಮತ್ತೆ ಸೇರಿಸಿದ್ದಾರೆ. ಪಂಜಾಬ್ ನಿವಾಸಿಯಾದ ಈ ವ್ಯಕ್ತಿ ನಹ್ತೌರ್ ಮಾರುಕಟ್ಟೆಯಲ್ಲಿ ಪತ್ತೆಯಾದಾಗಿದ್ದಾರೆ. ಮೂರು ದಿನಗಳ ಹಿಂದೆ, ನಹ್ತೌರ್‌ನ ನಯಾ ಬಜಾರ್‌ನಲ್ಲಿ ಹರಿದ ಬಟ್ಟೆ ಮತ್ತು ಉದ್ದನೆಯ ಗಡ್ಡವನ್ನು ಬಿಟ್ಟಿದ್ದ ಮಧ್ಯ ವಯಸ್ಕ ವ್ಯಕ್ತಿಯೊಬ್ಬರು…

Read More

Horoscope Today 28 February​: ಇಂದು ಈ ರಾಶಿಯವರಿಗೆ ಪ್ರೀತಿಸಿದವರೊಂದಿಗೆ ವಿವಾಹ ಯೋಗ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 28, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಪಾಲ್ಗುಣಮಾಸ, ಶಿಶಿರ ಋತು, ಶುಕ್ಲಪಕ್ಷ ದ್ವಾದಶಿ, ಪುನರ್ವಸು ನಕ್ಷತ್ರದ ಈ ದಿನದಲ್ಲಿ ರವಿ ಕುಂಭರಾಶಿಯಲ್ಲಿ ಮತ್ತು ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುತ್ತಿದ್ದಾರೆ. ಇಂದು ಬ್ಯಾಂಕ್ ರಜೆ, ನಾಲ್ಕನೇ ಶನಿವಾರ ಹಾಗೂ ಫೆಬ್ರವರಿ ಮಾಸದ ಕೊನೆಯ ದಿನವೂ ಹೌದು. ಶಿವನ ಸಮುದ್ರ, ಶರವು ಮಹಾಗಣಪತಿ, ಸತ್ಯಾಂಗಲ…

Read More

Hanuman Flag Vastu: ಮನೆಯ ಮೇಲೆ ಹಾರಾಡಲಿ ಹನುಮದ್ ಧ್ವಜ; ಇಲ್ಲಿದೆ ಅಸಲಿ ವಾಸ್ತು ರಹಸ್ಯ! – Kannada News | Hanuman Flag Vastu: Benefits, Placement and Home Protection

ಮನೆಯ ಮೇಲ್ಛಾವಣಿಯ ಮೇಲೆ ಹನುಮದ್ ಧ್ವಜImage Credit source: Pinterest ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರದಲ್ಲಿ ಮನೆಯ ಪ್ರತಿಯೊಂದು ವಸ್ತುವಿಗೂ ವಿಶೇಷ ಪ್ರಾಮುಖ್ಯತೆ ಇರುತ್ತದೆ. ಸನಾತನ ಧರ್ಮದಲ್ಲಿ ಆಂಜನೇಯ ಸ್ವಾಮಿಯನ್ನು ಸಕಲ ಭಯ ನಿವಾರಕ, ಸಂಕಟಮೋಚನ ಎಂದು ಆರಾಧಿಸಲಾಗುತ್ತದೆ. ಸಾಮಾನ್ಯವಾಗಿ ಅನೇಕರು ತಮ್ಮ ಮನೆಯ ಮೇಲ್ಛಾವಣಿಯ (ಟೆರೇಸ್) ಮೇಲೆ ಹನುಮಂತನ ಚಿತ್ರವಿರುವ ಕೆಂಪು ಅಥವಾ ಕೇಸರಿ ಧ್ವಜವನ್ನು ಹಾರಿಸುವುದನ್ನು ನೀವು ನೋಡಿರಬಹುದು. ಕೆಲವರು ಇದನ್ನು ಕೇವಲ ಒಂದು ಧಾರ್ಮಿಕ ಪದ್ಧತಿ ಎಂದು ಭಾವಿಸುತ್ತಾರೆ. ಆದರೆ ಇದರ ಹಿಂದೆ…

Read More

ರೈಲಿನ ಬೋರ್ಡ್​ ಬರೆಸಲು ಕೂಡ ಪಾಕಿಸ್ತಾನದ ಬಳಿ ಹಣವಿಲ್ಲ, ಸೀಮೆ ಸುಣ್ಣದಲ್ಲಿ ಮಾರ್ಗದ ಹೆಸರು ಬರೆದ ರೈಲ್ವೆ ಇಲಾಖೆ – Kannada News

ಕರಾಚಿ, ಜೂನ್ 07: ಇಂದಿನ ಅತ್ಯಾಧುನಿಕ ಡಿಜಿಟಲ್ ಯುಗದಲ್ಲೂ ಕೆಲವೊಮ್ಮೆ ಹಳೆಯ ಕಾಲದ ಸರಳ ಆಚರಣೆಗಳು ಮತ್ತು ಮಿತವ್ಯಯದ ಕ್ರಮಗಳು ಜನರ ಗಮನವನ್ನು ಸೆಳೆಯುತ್ತವೆ. ಲಾಹೋರ್‌ನಿಂದ ಕರಾಚಿಯವರೆಗೆ ಸರಿಸುಮಾರು 1,000 ಕಿಲೋಮೀಟರ್‌ಗಳ ಸುದೀರ್ಘ ಮಾರ್ಗದಲ್ಲಿ 16 ಗಂಟೆಗಳ ಕಾಲ ಯಶಸ್ವಿಯಾಗಿ ಸಂಚರಿಸುವ ಪಾಕಿಸ್ತಾನ ರೈಲ್ವೆ(Railway)ಯ ಎಕ್ಸ್‌ಪ್ರೆಸ್ ರೈಲೊಂದರ ವಿಡಿಯೋ ಪ್ರಸ್ತುತ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದ್ದು, ಭಾರಿ ಸದ್ದು ಮಾಡುತ್ತಿದೆ. ಈ ಕುರಿತು ಎಬಿಪಿ ಲೈವ್ ವರದಿ ಮಾಡಿದೆ. ವಿದ್ಯುತ್ ಅಥವಾ ಡಿಜಿಟಲ್ ಬೋರ್ಡ್‌ಗಳ ದುಬಾರಿ…

Read More

ಸಿಎಂ ಬದಲಾದರೇ ಇಡೀ ಸಂಪುಟವೇ ಬದಲು! ಮಹತ್ವದ ಬದಲಾವಣೆಗೆ ಸಿದ್ಧವಾಗಿದೆ ಪ್ಲಾನ್

ಮುಖ್ಯಮಂತ್ರಿ ಬದಲಾದರೇ ಇಡೀ ತಂಡವೇ ಬದಲು!Image Credit source: tv9 ಬೆಂಗಳೂರು, ಮೇ 28: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ರಾಜೀನಾಮೆ ಪ್ರಕ್ರಿಯೆ ಬೆನ್ನಲ್ಲೇ, ರಾಜ್ಯ ಸಚಿವ ಸಂಪುಟದಲ್ಲಿ ಅತ್ಯಂತ ಪ್ರಮುಖ ಹಾಗೂ ಮಹತ್ವದ ಬದಲಾವಣೆಗಳಿಗೆ ಹೈಕಮಾಂಡ್ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದೆ ಎಂಬುದು ತಿಳಿದುಬಂದಿದೆ. ಸಾಂವಿಧಾನಿಕ ನಿಯಮಗಳ ಪ್ರಕಾರ, ಮುಖ್ಯಮಂತ್ರಿಯೊಬ್ಬರು ರಾಜೀನಾಮೆ ನೀಡಿದ ತಕ್ಷಣ ಅವರ ಇಡೀ ಸಚಿವ ಸಂಪುಟವು ಸ್ವಯಂಚಾಲಿತವಾಗಿ ರದ್ದಾಗುತ್ತದೆ ಮತ್ತು ಸಚಿವರು ತಮ್ಮ ಸ್ಥಾನಗಳನ್ನು ಕಳೆದುಕೊಳ್ಳುತ್ತಾರೆ. ಹೊಸ ಮುಖ್ಯಮಂತ್ರಿ ಅಧಿಕಾರ ವಹಿಸಿಕೊಂಡ…

Read More

ಪತ್ನಿಗೆ ಮಚ್ಚಿನಿಂದ ಹೊಡೆದ ಪತಿ: ಓಡೋಡಿ ಬಂದು ಜೀವ ಉಳಿಸಿತು ಖಾಕಿ! – Kannada News | Nelamangala Domestic Violence: Police Rescue Wife from Machete Assault

ಮಹಿಳೆಯನ್ನ ಆಸ್ಪತ್ರೆಗೆ ದಾಖಲಿಸಿದ ಪೊಲೀಸ್​ ನೆಲಮಂಗಲ, ಜನವರಿ 22: ದಂಪತಿ (couple) ಜಗಳದಲ್ಲಿ ಮಚ್ಚಿನಿಂದ ಹಲ್ಲೆಗೊಳಗಾಗಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ನೆಲಮಂಗಲ ಗ್ರಾಮಾಂತರ ಪೊಲೀಸರಿಂದ (police) ಒಂದು ಜೀವ ಉಳಿದಿದೆ. ನೆಲಮಂಗಲ ತಾಲೂಕಿನ ಗೋವಿಂದಪುರದಲ್ಲಿ ಘಟನೆ ನಡೆದಿದೆ. ಸದ್ಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ನಡೆದದ್ದೇನು? ನಗ್ಮಾ (25) ಹಲ್ಲೆಗೊಳಾಗಾದ ಪತ್ನಿ. ಸಲ್ಮಾನ್ (26) ಮಚ್ಚಿನಿಂದ ಹಲ್ಲೆ ಮಾಡಿದ ಪತಿ. ಬಳ್ಳಾರಿ ಮೂಲದ ದಂಪತಿ ಎರಡು…

Read More

ಹಾರ್ದಿಕ್ ಪಾಂಡ್ಯಗೆ ಬಿಗ್ ಶಾಕ್ ನೀಡಲು ಮುಂದಾದ ಮುಂಬೈ ಇಂಡಿಯನ್ಸ್​

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಮುಂಬೈ ಇಂಡಿಯನ್ಸ್ ತಂಡಕ್ಕೆ ಮೇಜರ್ ಸರ್ಜರಿ ಮಾಡಲು ಎಂಐ ಟೀಮ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ. ಅದರ ಮೊದಲ ಹೆಜ್ಜೆಯಾಗಿ ಮುಂಬೈ ಇಂಡಿಯನ್ಸ್​ ತಂಡದ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ (Hardik Pandya) ಅವರ ತಲೆದಂಡವಾಗಲಿದೆ. (PC: IPL) ಎಕ್ಸ್​​ಪ್ರೆಸ್ ಸ್ಪೋರ್ಟ್ಸ್ ವರದಿ ಪ್ರಕಾರ, ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವದಿಂದ ಕೆಳಗಿಳಿಸಲು ನಿರ್ಧರಿಸಲಾಗಿದೆ. ಕಳೆದ ಮೂರು ಸೀಸನ್​ಗಳಲ್ಲಿ ಪಾಂಡ್ಯ ನಾಯಕತ್ವದಲ್ಲಿ ಕಣಕ್ಕಿಳಿದಿರುವ…

Read More