Headlines

ಕರ್ನಾಟಕ ಸಿಎಂ ರೇಸ್​​ನಲ್ಲಿದ್ದಾರಾ ಮಲ್ಲಿಕಾರ್ಜುನ ಖರ್ಗೆ?: ಸ್ವತಃ ಎಐಸಿಸಿ ಅಧ್ಯಕ್ಷರಿಂದಲೇ ಸಿಕ್ಕು ಸ್ಪಷ್ಟನೆ – Kannada News | Mallikarjuna Kharge Addresses Karnataka CM Change Speculation Amidst Political Buzz

ಕಲಬುರಗಿ, ಏಪ್ರಿಲ್​​ 30: ಮಾಧ್ಯಮಗಳೊಂದಿಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ರಾಜ್ಯದ ನಾಯಕತ್ವ ಮತ್ತು ಮುಖ್ಯಮಂತ್ರಿ ಬದಲಾವಣೆ ಕುರಿತು ಹರಿದಾಡುತ್ತಿರುವ ಗೊಂದಲಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿನ ಗೊಂದಲಗಳನ್ನು ಆದಷ್ಟು ಬೇಗನೆ ಬಗೆಹರಿಸುವುದಾಗಿ ಅವರು ತಿಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಇತ್ತೀಚೆಗೆ ಕಾಂಗ್ರೆಸ್‌ನ 40-50 ಶಾಸಕರು ದೆಹಲಿಗೆ ಟಿಕೆಟ್ ಕಾಯ್ದಿರಿಸಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಖರ್ಗೆ, ಅವರ ಹೇಳಿಕೆಯನ್ನು ತಳ್ಳಿಹಾಕಿದ್ದಾರೆ. ಖರ್ಗೆ ಅವರೇ ಸಿಎಂ ಆದರೆ ಉತ್ತಮ ಎಂಬ ಗೃಹ…

Read More

ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್? – Kannada News | Trisha Krishnan reportedly offered Rs 12 Cr remuneration for Rajinikanth Kamal Haasan movie

ರಜನಿಕಾಂತ್ ಮತ್ತು ಕಮಲ್ ಹಾಸನ್ (Kamal Haasan) ಒಟ್ಟಿಗೆ ನಟಿಸಲಿರುವ ಹೊಸ ಸಿನಿಮಾಗೆ ನಾಯಕಿ ಯಾರು ಎಂಬ ಪ್ರಶ್ನೆ ಎಲ್ಲರ ಮನದಲ್ಲೂ ಮೂಡಿದೆ. ತ್ರಿಶಾ ಕೃಷ್ಣನ್ (Trisha Krishnan) ಹೆಸರು ಬಲವಾಗಿ ಕೇಳಿಬರುತ್ತಿದೆ. ಕಳೆದ 22 ವರ್ಷಗಳಿಂದ ಚಿತ್ರರಂಗದಲ್ಲಿ ಟಾಪ್ ನಟಿಯಾಗಿ ಮಿಂಚುತ್ತಿರುವ ತ್ರಿಶಾ ಅವರು ಈ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಎಂಬ ಗಾಸಿಪ್ ಹಬ್ಬಿದೆ. ಈ ಸಿನಿಮಾಗಾಗಿ ಅವರು ದೊಡ್ಡ ಸಂಭಾವನೆ ಪಡೆಯಲಿದ್ದಾರೆ ಎನ್ನಲಾಗಿದೆ. ನೆಲ್ಸನ್ ದಿಲೀಪ್ ಕುಮಾರ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ತ್ರಿಶಾ…

Read More

‘ವೆಲ್ಕಮ್ ಟು ದಿ ಜಂಗಲ್’: ದೇಶಾದ್ಯಂತ ಪ್ರದರ್ಶಕರಿಗೆ ದೊಡ್ಡ ಬೇಡಿಕೆಯಿಟ್ಟ ವಿತರಕರು – Kannada News | Welcome To The Jungle release Strategy Distributor Demands maximum shows in Multiplex and Single Screens

ಮುಂಬೈ: ಬಾಲಿವುಡ್ ಮಲ್ಟಿಸ್ಟಾರರ್ ಸಿನಿಮಾ ‘ವೆಲ್ಕಮ್ ಟು ದಿ ಜಂಗಲ್’ (Welcome To The Jungle) ಈ ವಾರ (ಜೂನ್ 25) ತೆರೆಗೆ ಬರಲು ಸಿದ್ಧವಾಗಿದೆ. ಅಕ್ಷಯ್ ಕುಮಾರ್ ಸೇರಿದಂತೆ ಹತ್ತಾರು ಸ್ಟಾರ್ ನಟರಿರುವ ಈ ಬಿಗ್ ಬಜೆಟ್ ಸಿನಿಮಾವನ್ನು ದೇಶಾದ್ಯಂತ ಅತ್ಯಂತ ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡಲು ವಿತರಕ ಸಂಸ್ಥೆ ‘ಸ್ಟಾರ್ ಸ್ಟುಡಿಯೋ 18’ (Star Studio 18) ಭರ್ಜರಿ ಮಾಸ್ಟರ್ ಪ್ಲಾನ್ ಮಾಡಿದೆ. ಚಿತ್ರಮಂದಿರಗಳ ಮಾಲೀಕರಿಗೆ ವಿತರಕರು ಕಳುಹಿಸಿರುವ ಇಮೇಲ್‌ನಲ್ಲಿ ಶೋಗಳ ಹಂಚಿಕೆ ಕುರಿತು…

Read More

ಕಪ್ಪೆಚಿಪ್ಪು ಸಂಗ್ರಹದ ವೇಳೆ ಭಟ್ಕಳದಲ್ಲಿ ದುರಂತ: ಮನಕಲಕುವಂತಿದೆ ಜಲಸಮಾಧಿಯಾದ 11 ಮಂದಿಯ ಕುಟುಂಬದ ಕಥೆಗಳು – Kannada News | Uttara Kannada Drowning: Heartbreaking Stories Emerge from Bhatkal Tragedy

ಕಾರವಾರ, ಮೇ 25: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಂಗರೆ ಬಳಿ ಸಂಭವಿಸಿದ ಕಪ್ಪೆಚಿಪ್ಪು ಸಂಗ್ರಹ ದುರಂತದಲ್ಲಿ ಒಟ್ಟು 11 ಮಂದಿ ಜಲಸಮಾಧಿಯಾಗಿದ್ದಾರೆ. ಮೃತಪಟ್ಟ 11 ಮಂದಿಯ ಪೈಕಿ ಎಂಟು ಮಂದಿ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ಅವರ ಸಾಮೂಹಿಕ ಅಂತ್ಯಸಂಸ್ಕಾರವನ್ನು ಇಂದು (ಮೇ 24) ನೆರವೇರಿಸಲಾಯಿತು. ನಿನ್ನೆ ಮೂವರ ಅಂತ್ಯಕ್ರಿಯೆಗಳನ್ನು ನಡೆಸಲಾಗಿತ್ತು. ಕಪ್ಪೆಚಿಪ್ಪು ಹೆಕ್ಕಲು ತೆರಳಿದ್ದವರಲ್ಲಿ ಮಹಾದೇವ್ ನಾಯಕ್ ಮತ್ತು ಲಕ್ಷ್ಮಿ ನಾಯಕ್ ದಂಪತಿ ಕೂಡ ಸೇರಿದ್ದರು. ಇವರ ಅಕಾಲಿಕ ನಿಧನದಿಂದ ಮಕ್ಕಳಾದ ದರ್ಶನ್ ಮತ್ತು…

Read More

ರಜನೀಕಾಂತ್ ನಟನೆಯ ‘ಜೈಲರ್ 2’ ಸಿನಿಮಾ ಬಿಡುಗಡೆ ಮುಂದೂಡಿಕೆ: ಕಾರಣ? – Kannada News | Rajinikanth starrer Jailer 2 movie release date postpone

ಸೂಪರ್‌ಸ್ಟಾರ್ ರಜನಿಕಾಂತ್ (Rajinikanth) ನಟನೆಯ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ. ಸಿನಿಮಾದ ಮೊದಲ ಭಾಗ ದೊಡ್ಡ ಹಿಟ್ ಆಗಿತ್ತು. ನಿರ್ದೇಶಕ ನೆಲ್ಸನ್, ರಜನೀಕಾಂತ್ ಅವರ ಜೊತೆಗೆ ಇನ್ನೂ ಕೆಲವು ಸ್ಟಾರ್ ನಟರನ್ನು ಒಟ್ಟಿಗೆ ಕರೆ ತಂದು ಒಳ್ಳೆಯ ಮಾಸ್ ಸಿನಿಮಾವನ್ನು ನೀಡಿದ್ದರು. ಇದೇ ಕಾರಣಕ್ಕೆ ‘ಜೈಲರ್ 2’ ಸಿನಿಮಾದ ಬಗ್ಗೆಯೂ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ. ಈ ಹಿಂದೆ ‘ಜೈಲರ್ 2’ ಸಿನಿಮಾ ಜೂನ್ 12 ರಂದು ಬಿಡುಗಡೆ ಆಗಲಿದೆ…

Read More

13 ವರ್ಷಗಳ ನಂತರ ಸ್ವಂತ ಮನೆ ಬಿಟ್ಟು ಬೆಂಗಳೂರಿನ ಬಾಡಿಗೆ ಮನೆಗೆ ಬಂದ ಮಹಿಳೆ!: ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್ ಆಯ್ತು ‘ನಮ್ಮ ಬೆಂಗಳೂರು’ ಜರ್ನಿ – Kannada News

ಬೆಂಗಳೂರು, ಜೂ,2: ದಶಕಗಳ ಕಾಲ ಬದುಕಿದ ಮನೆಯನ್ನು ಬಿಟ್ಟು ಹೊಸ ನಗರಕ್ಕೆ, ಹೊಸ ವಾತಾವರಣಕ್ಕೆ ಸ್ಥಳಾಂತರಗೊಳ್ಳುವುದು ಯಾರಿಗಾದರೂ ಭಾವುಕ ಕ್ಷಣವೇ ಸರಿ. ಇಂತಹದ್ದೇ ಒಂದು ಸನ್ನಿವೇಶವನ್ನು ಎದುರಿಸಿದ ಕರಿಷ್ಮಾ ಕೌಲ್ (Karishma Koul) ಎಂಬ ಮಹಿಳೆ, ಗುರಗಾಂವ್‌ನಿಂದ ಬೆಂಗಳೂರಿಗೆ ಸ್ಥಳಾಂತರಗೊಂಡ ತಮ್ಮ ಅನುಭವ ಮತ್ತು ಹೊಸ ಬಾಡಿಗೆ ಮನೆಯ ಝಲಕ್ ಅನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರಿ ಗಮನ ಸೆಳೆದಿದೆ. ಕರಿಷ್ಮಾ ಕೌಲ್ ತಮ್ಮ ಇನ್‌ಸ್ಟಾಗ್ರಾಮ್ ವೀಡಿಯೊದಲ್ಲಿ ಪ್ರೀತಿಯಿಂದ ನೆಟ್ಟಿಗರನ್ನು ಸ್ವಾಗತಿಸಿದ್ದಾರೆ. “ಹಾಯ್, ಬೆಂಗಳೂರಿನಲ್ಲಿರುವ ನಮ್ಮ…

Read More

ಕುತ್ತಿಗೆಯ ಭಾಗದಲ್ಲಿ ಕಪ್ಪಾಗುವುದಕ್ಕೆ ಕಾರಣವೇನು? ಇದು ಯಾವ ಕಾಯಿಲೆಯ ಮುನ್ಸೂಚನೆ?

ನೀವು ಗಮನಿಸಿರಬಹುದು ಬಹಳಷ್ಟು ಜನರಿಗೆ ಗಲ್ಲ ಮತ್ತು ಕುತ್ತಿಗೆ ಭಾಗದಲ್ಲಿ ಕಪ್ಪಾಗುತ್ತದೆ (Dark Neck). ಆರಂಭದಲ್ಲಿ ಇದು ಅಷ್ಟು ಗಾಢವಾಗಿ ಕಂಡುಬರದಿರಬಹುದು ಆದರೆ ಮುಂದೆ ಅದು ಕಪ್ಪಾಗಿರುವುದು ಎಲ್ಲರಿಗೂ ಕಂಡುಬರಬಹುದು. ಇದನ್ನು ಸಾಮಾನ್ಯವಾಗಿ ಸೂರ್ಯನ ಬೆಳಕಿನಿಂದ ಆಗುವಂತದ್ದು ಅಥವಾ ಕೊಳೆ ಇದ್ದ ಪರಿಣಾಮ ಈ ರೀತಿ ಆಗುತ್ತಿರಬಹುದು ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಈ ರೀತಿ ಸಮಸ್ಯೆಯಾದಾಗ ಅದನ್ನು ಅಸಡ್ಡೆ ಮಾಡಬಾರದು. ಏಕೆಂದರೆ ಇದು ಕೆಲವೊಮ್ಮೆ ಚರ್ಮದ ಸಮಸ್ಯೆ ಅಥವಾ ದೇಹದ ಒಳಗಿನ ಕಾಯಿಲೆಯ ಸೂಚನೆಯಾಗಿರಬಹುದು. ಈ…

Read More

ಸಿಸಿಬಿ ಪೊಲೀಸರ ಮೆಗಾ ರೇಡ್​​: ಪ್ರತಿಷ್ಠಿತ ಅಪಾರ್ಟ್​ಮೆಂಟ್​ನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್​​ ಸೀಜ್​ – Kannada News | Bengaluru CCB Mega Raid: Rs 10 Cr Drugs Seized, Peddlers Arrested

ಬೆಂಗಳೂರು, ಮಾರ್ಚ್​​ 03: ಡ್ರಗ್ಸ್​​ ದಂಧೆಕೋರರಿಗೆ ಬೆಂಗಳೂರು ಪೊಲೀಸರು ಭರ್ಜರಿ ಶಾಕ್​​ ಕೊಟ್ಟಿದ್ದಾರೆ. ನಗರದ ಪ್ರತಿಷ್ಠಿತ ಅಪಾರ್ಟ್​ಮೆಂಟ್​ನಲ್ಲಿ ಡ್ರಗ್ಸ್ ಪತ್ತೆ ಮಾಡಲಾಗಿದ್ದು, ಬರೋಬ್ಬರಿ 10 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ಸಿಸಿಬಿ ವಶಕ್ಕೆ ಪಡೆದಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕೇರಳ ಮೂಲದ ಅಶ್ವಿನ್(27), ಮೊಬಿನಾ(25) ಬಂಧಿತ ಆರೋಪಿಗಳಾಗಿದ್ದು, LSD, ಹೈಡ್ರೋ ಗಾಂಜಾ ಮತ್ತು ಚರಸ್​​ನ ಆರೋಪಿಗಳಿಂದ ಸೀಜ್​​ ಮಾಡಲಾಗಿದೆ. LSD ಸ್ಟ್ರಿಪ್ಸ್​​ಗಳನ್ನು ಕರ್ನಾಟಕದಲ್ಲಿ ವಶಪಡಿಸಿಕೊಂಡಿರೋದು ಇದೇ ಮೊದಲು ಎನ್ನಲಾಗಿದೆ. ಡ್ರಗ್ಸ್​​ ಮಾರಾಟಕ್ಕೆ ಖತರ್ನಾಕ್​​…

Read More

IND vs ENG: 14 ರನ್​ಗೆ ಜೀವದಾನ ನೀಡಿದ ಆಂಗ್ಲ ನಾಯಕ; 89 ರನ್ ಚಚ್ಚಿದ ಸಂಜು ಸ್ಯಾಮ್ಸನ್ – Kannada News | Sanju Samson’s T20 World Cup Semifinal Heroics: 89 Runs & Unique Record

ಸಂಜು ಸ್ಯಾಮ್ಸನ್ (Sanju Samson).. ಭಾರತ ಟಿ20 ವಿಶ್ವಕಪ್ (T20 World Cup) ತಂಡದಲ್ಲಿ ಎರಡನೇ ಆರಂಭಿಕ ಆಟಗಾರನಾಗಿ ಸ್ಥಾನ ಪಡೆದಿದ್ದರು. ಹೀಗಾಗಿ ಸಂಜುಗೆ ಲೀಗ್ ಹಂತದಲ್ಲಿ ಆಡಲು ಹೆಚ್ಚಿನ ಅವಕಾಶಗಳು ಸಿಗಲಿಲ್ಲ. ಅಭಿಷೇಕ್ ಅನಾರೋಗ್ಯದಿಂದ ಲೀಗ್ ಹಂತದಲ್ಲಿ ಏಕೈಕ ಪಂದ್ಯವನ್ನಾಡಿದ್ದ ಸಂಜುಗೆ ಆ ಬಳಿಕ ಆಡಲು ಅವಕಾಶ ಸಿಕ್ಕಿದ್ದು, ಸೂಪರ್ 8 ಸುತ್ತಿನ ಕೊನೆಯ ಪಂದ್ಯದಲ್ಲಿ. ಅದು ವೆಸ್ಟ್ ಇಂಡೀಸ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಆಡುವ ಅವಕಾಶ ಪಡೆದಿದ್ದ ಸಂಜು, ಟೀಂ ಇಂಡಿಯಾದ ಆಪತ್ಬಾಂಧವನಾಗಿಬಿಟ್ಟರು. ಬೃಹತ್…

Read More

ಚಿಕ್ಕಬಳ್ಳಾಪುರ: ಮೊಮ್ಮಗಳ 40 ದಿನದ ಶಿಶುವನ್ನೇ ಕೊಂದಳೇ ಅಜ್ಜಿ? ಚೇಳೂರಿನಲ್ಲಿ ಮರ್ಯಾದಾ ಹತ್ಯೆ ಶಂಕೆ – Kannada News | Chikkaballapur: Suspicion Over 40 Day Old Infant’s Death in Chelur, Grandmother Under Scanner

ಸಾಂದರ್ಭಿಕ ಚಿತ್ರ (ಒಳಚಿತ್ರದಲ್ಲಿ ಆರೋಪಿ) ಚಿಕ್ಕಬಳ್ಳಾಪುರ, ಡಿಸೆಂಬರ್ 25: ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಚೇಳೂರು ಪಟ್ಟಣದಲ್ಲಿ 40 ದಿನದ ನವಜಾತ ಗಂಡು ಶಿಶು ಸಾವಿನ ಪ್ರಕರಣ ಇದೀಗ ತೀವ್ರ ಅನುಮಾನಗಳಿಗೆ ಕಾರಣವಾಗಿದೆ. ಈ ಘಟನೆಯಲ್ಲಿ ಮರ್ಯಾದೆ ಹತ್ಯೆ ಶಂಕೆ ವ್ಯಕ್ತವಾಗಿದ್ದು, ಶಿಶುವಿನ ಸಾವಿನಲ್ಲಿ ಅಜ್ಜಿಯ ಕೈವಾಡವಿರಬಹುದೆಂಬ ಆರೋಪ ಕೇಳಿಬಂದಿದೆ. ಅಪ್ರಾಪ್ತ ಮೊಮ್ಮಗಳು ಹಿಂದೂ ಯುವಕನನ್ನು ಪ್ರೀತಿಸಿ ಮದುವೆ ಮಾಡಿಕೊಂಡಿದ್ದಕ್ಕೆ ದ್ವೇಷ ಹೊಂದಿದ್ದ ಅನ್ಯಕೋಮಿಗೆ ಸೇರಿದ ಅಜ್ಜಿ, ಮೊಮ್ಮಗಳ 40 ದಿನದ ನವಜಾತ ಶಿಶುವನ್ನು ಕೊಂದಿರಬಹುದೆಂಬ ಶಂಕೆ ವ್ಯಕ್ತವಾಗಿದೆ….

Read More