349 ರನ್ ಬಾರಿಸಿಯೂ ಅಫ್ಘನ್ ವಿರುದ್ಧ ಸೋತ ಟೀಂ ಇಂಡಿಯಾ – Kannada News

ತ್ರಿಕೋನ ಏಕದಿನ ಸರಣಿಗಾಗಿ ಶ್ರೀಲಂಕಾ ಪ್ರವಾಸ ಮಾಡಿರುವ (Sri Lanka Triangular Series) ಭಾರತ ಎ ತಂಡ ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ತಂಡವನ್ನು ಮಣಿಸುವ ಮೂಲಕ ಪ್ರವಾಸವನ್ನು ಗೆಲುವಿನೊಂದಿಗೆ ಆರಂಭಿಸಿತ್ತು. ಆದರೆ ಎರಡನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ಎ ತಂಡವನ್ನು ಎದುರಿಸಿದ್ದ ಭಾರತ ಎ ಪಡೆ ( Afghanistan A vs India A) 349 ರನ್​ಗಳ ಬೃಹತ್ ಮೊತ್ತವನ್ನು ಕಲೆಹಾಕಿದ ಹೊರತಾಗಿಯೂ ಸೋಲಿಗೆ ಕೊರಳೊಡ್ಡಬೇಕಾಯಿತು. ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಎರಡನೇ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿತು. ಹೀಗಾಗಿ ಮಳೆ ಪೀಡಿತ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 49 ಓವರ್‌ಗಳಲ್ಲಿ 349 ರನ್ ಕಲೆಹಾಕಿತು. ಆದರೆ ಅಫ್ಘನ್ ಇನ್ನಿಂಗ್ಸ್ ಆರಂಭಕ್ಕೂ ಮುನ್ನ ಮಳೆ ಬಂದ ಕಾರಣ ಪಂದ್ಯವನ್ನು 38 ಓವರ್​ಗಳಿಗೆ ಸೀಮಿತಗೊಳಿಸಲಾಯಿತು.

38 ಓವರ್​ಗಳಲ್ಲಿ 294 ರನ್ ಗುರಿ

ಹೀಗಾಗಿ ಅಫ್ಘನ್ ತಂಡಕ್ಕೆ 38 ಓವರ್​ಗಳಲ್ಲಿ 294 ರನ್ ಗುರಿ ನೀಡಲಾಯಿತು. ಈ ಗುರಿ ಬೆನ್ನಟ್ಟಿದ ಅಫ್ಘನ್ ತಂಡ 25.5 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 177 ರನ್ ಕಲೆಹಾಕಿದ್ದಾಗ ಮತ್ತೆ ಮಳೆ ಆಟಕ್ಕೆ ಅಡ್ಡಿಪಡಿಸಿತು. ಎಷ್ಟೇ ಕಾದರೂ ಮಳೆ ನಿಲ್ಲದ ಕಾರಣ ಡಕ್ವರ್ತ್​ ಲೂಯಿಸ್ ನಿಯಮದಡಿಯಲ್ಲಿ ಅಂಪೈರ್​ಗಳು ಅಫ್ಘಾನಿಸ್ತಾನ ತಂಡವನ್ನು ವಿಜಯಿ ಎಂದು ಘೋಷಿಸಿದರು.

ಭಾರತದ ಭರ್ಜರಿ ಬ್ಯಾಟಿಂಗ್

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಪರ ವೈಭವ್ 44 ರನ್ ಗಳಿಸಿದರೆ, ಪ್ರಿಯಾಂಶ್ ಆರ್ಯ 8 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಪ್ರಭ್ಸಿಮ್ರಾನ್ ಸಿಂಗ್ 39 ಎಸೆತಗಳಲ್ಲಿ ಅರ್ಧಶತಕ ಗಳಿಸಿ 84 ರನ್​ಗಳ ಇನ್ನಿಂಗ್ಸ್ ಆಡಿದರು. ಅದ್ಭುತ ಫಾರ್ಮ್​ನಲ್ಲಿರುವ ರುತುರಾಜ್ ಗೈಕ್ವಾಡ್ 65 ಎಸೆತಗಳಲ್ಲಿ ಅರ್ಧಶತಕ ಗಳಿಸಿ 66 ರನ್ ಗಳಿಸಿ ಔಟಾದರು. ಆದರೆ ಆಯುಷ್ ಬದೋನಿ ತಮ್ಮ ಖಾತೆ ತೆರೆಯಲೂ ವಿಫಲರಾದರು. ನಾಯಕ ತಿಲಕ್ ವರ್ಮಾ 60 ಎಸೆತಗಳಲ್ಲಿ ಅರ್ಧಶತಕ ಪೂರೈಸಿ 66 ರನ್ ಗಳಿಸಿ ಔಟಾದರೆ, ವಿಪ್ರಜ್ ನಿಗಮ್ 8 ರನ್ ಗಳಿಸುವಷ್ಟರಲ್ಲಿ ವಿಕೆಟ್ ಕಳೆದುಕೊಂಡರು. ಇತ್ತ ಅಫ್ಘಾನಿಸ್ತಾನ ಪರ ಅಬ್ದುಲ್ಲಾ ಅಹ್ಮದ್‌ಜೈ 5 ವಿಕೆಟ್‌ಗಳ ಗೊಂಚಲು ಪಡೆದರು.

ಅಫ್ಘನ್ ತಂಡದಿಂದಲೂ ತಕ್ಕ ಹೋರಾಟ

ಮೇಲೆ ಹೇಳಿದಂತೆ ಮಳೆಯಿಂದಾಗಿ ಅಫ್ಘನ್ ತಂಡಕ್ಕೆ 38 ಓವರ್​ಗಳಲ್ಲಿ 294 ರನ್​ಗಳ ಗುರಿ ನಿಗಧಿಪಡಿಸಲಾಯಿತು. ಈ ಗುರಿ ಬೆನ್ನಟ್ಟಿದ ಅಫ್ಘಾನಿಸ್ತಾನ ‘ಎ’ ಪರ ನಾಯಕ ಇಮ್ರಾನ್ ಮಿರ್ ಅಜೇಯ 75 ರನ್ ಗಳಿಸಿದರೆ, ಬಹೀರ್ ಶಾ ಅಜೇಯ 51 ರನ್ ಬಾರಿಸಿದರು. ಹಸನ್ ಇಸಾಖಿಲ್ 29 ಎಸೆತಗಳಲ್ಲಿ 34 ರನ್ ಗಳಿಸುವ ಮೂಲಕ ಅಫ್ಘಾನ್ ತಂಡಕ್ಕೆ ಉತ್ತಮ ಆರಂಭ ನೀಡಿದರು. ಅಂತಿಮವಾಗಿ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದರಿಂದ ಡಿಎಲ್ಎಸ್ ವಿಧಾನದ ಮೂಲಕ ಅಫ್ಘನ್ ತಂಡವನ್ನು ವಿಜಯಿ ಎಂದು ಘೋಷಿಸಲಾಯಿತು. ಇತ್ತ ಭಾರತ ಎ ಪರ ಅರ್ಷದ್ ಖಾನ್ ಮತ್ತು ಅನುಕುಲ್ ರಾಯ್ ಮೊದಲ ಎರಡು ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸ್ಪೈಡರ್ ಮ್ಯಾನ್ ಹೊಸ ಸಿನಿಮಾ ಬಿಡುಗಡೆ, ಭಾರತದಲ್ಲೇ ಮೊದಲು – Kannada News

ಭಾರತದ ‘ಸ್ಪೈಡರ್ ಮ್ಯಾನ್’ (Spider Man) ಅಭಿಮಾನಿಗಳಿಗೆ ಖುಷಿ ಸುದ್ದಿ, ಹೊಸ ಸ್ಪೈಡರ್ ಮ್ಯಾನ್ ಸಿನಿಮಾ ‘ಸ್ಪೈಡರ್-ಮ್ಯಾನ್: ಬ್ರಾಂಡ್ ನ್ಯೂ ಡೇ’ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ವಿಶೇಷವೆಂದರೆ ಭಾರತದಲ್ಲಿ ಮಾತ್ರ, ಒಂದು ದಿನ ಮುಂಚಿತವಾಗಿ ಬಿಡುಗಡೆ ಆಗಲಿದ್ದು, ವಿಶ್ವದಲ್ಲಿ ಎಲ್ಲರಿಗಿಂತಲೂ ಮೊದಲು ಭಾರತೀಯ ಅಭಿಮಾನಿಗಳು ಸಿನಿಮಾವನ್ನು ನೋಡಬಹುದಾಗಿದೆ. ಭಾರತದಲ್ಲಿ ಬಿಡುಗಡೆ ಆದ ಒಂದು ದಿನದ ಬಳಿಕ ವಿಶ್ವದಾದ್ಯಂತ ‘ಸ್ಪೈಡರ್​​ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಸಿನಿಮಾ ಬಿಡುಗಡೆ ಆಗುತ್ತಿದೆ. ಭಾರತದಲ್ಲಿ ಅಡ್ವಾನ್ಸ್ ಬುಕಿಂಗ್ ದಿನಾಂಕವನ್ನು ಸಹ ಘೋಷಣೆ ಮಾಡಲಾಗಿದೆ.

‘ಸ್ಪೈಡರ್ ಮ್ಯಾನ್’ ಹೊಸ ಸಿನಿಮಾ ವಿಶ್ವದಾದ್ಯಂತ ಜುಲೈ 31 ರಂದು ಬಿಡುಗಡೆ ಆಗಲಿದೆ. ಆದರೆ ಭಾರತದಲ್ಲಿ ಈ ಸಿನಿಮಾ ಒಂದು ದಿನ ಮುಂಚಿತವಾಗಿ ಅಂದರೆ ಜುಲೈ 30ರಂದೇ ಬಿಡುಗಡೆ ಆಗಲಿದೆ. ಭಾರತದಲ್ಲಿ ಇಂಗ್ಲೀಷ್ ಮಾತ್ರವಲ್ಲದೆ, ಹಿಂದಿ, ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡ ಭಾಷೆಗಳಲ್ಲಿ ಸಿನಿಮಾ ಬಿಡುಗಡೆ ಆಗಲಿದೆ. ಸಿನಿಮಾದ ಅಡ್ವನ್ಸ್ ಬುಕಿಂಗ್ ಭಾರತದಲ್ಲಿ ಜುಲೈ 17ರಿಂದ ಆರಂಭವಾಗಲಿದೆ.

ಆದರೆ ಯುನೈಟೆಡ್ ಸ್ಟೇಟ್ಸ್‌ನ ಅಮೆಜಾನ್ ಪ್ರೈಮ್ ಸದಸ್ಯರು ‘ಸ್ಪೈಡರ್-ಮ್ಯಾನ್: ಬ್ರಾಂಡ್ ನ್ಯೂ ಡೇ’ ಚಿತ್ರವನ್ನು ವೀಕ್ಷಿಸುವ ವಿಶೇಷ ಅವಕಾಶವನ್ನು ಪಡೆಯಲಿದ್ದಾರೆ. ವಿಶೇಷ ಅರ್ಲಿ-ಆಕ್ಸೆಸ್ ಸ್ಕ್ರೀನಿಂಗ್ ಕಾರ್ಯಕ್ರಮದ ಮೂಲಕ, ಪ್ರೈಮ್ ಸದಸ್ಯರು ಜುಲೈ 29ರಂದು ದೇಶಾದ್ಯಂತದ ಆಯ್ದ ಚಿತ್ರಮಂದಿರಗಳಲ್ಲಿ ಈ ಬಹುನಿರೀಕ್ಷಿತ ಸೂಪರ್‌ಹೀರೋ ಚಿತ್ರವನ್ನು ವೀಕ್ಷಿಸಬಹುದು. ಇದು ಯುಎಸ್ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಗೊಳ್ಳುವ ಎರಡು ದಿನಗಳ ಮೊದಲೇ ದೊರಕುವ ಸೌಲಭ್ಯವಾಗಿದೆ.

ಇದನ್ನೂ ಓದಿ:ಆಲಿಯಾ ಭಟ್ ‘ಆಲ್ಫಾ’ ಹಾಲಿವುಡ್ ಚಿತ್ರದ ಕಾಪಿ? ಸಿಕ್ಕಿತು ಸಾಕ್ಷಿ

‘ಸ್ಪೈಡರ್-ಮ್ಯಾನ್: ನೋ ವೇ ಹೋಮ್’ (2021)ರಲ್ಲಿ ಬಿಡುಗಡೆ ಆಗಿತ್ತು. ಆ ಸಿನಿಮಾದ ಅಂತ್ಯದಲ್ಲಿ ಸ್ಪೈಡರ್​ಮ್ಯಾನ್ ಆಪ್ತ ಗೆಳೆಯರ ಸ್ಪೈಡರ್ ಮ್ಯಾನ್ ಇರುವುದನ್ನೇ ಮರೆತು ಹೋಗಿದ್ದಾರೆ. ಈಗ ಗೆಳೆಯರಿಲ್ಲದೆ, ಆಪ್ತರಿಲ್ಲದೆ ಸ್ಪೈಡರ್​​ಮ್ಯಾನ್ ಜೀವನ ಹೇಗಿರಲಿದೆ, ಈಗ ಸ್ಪೈಡರ್​ ಮ್ಯಾನ್​​ಗೆ ಹೊಸ ಕಂಟಕ ಏನು ಎದುರಾಗಲಿದೆ. ಅವುಗಳಿಂದ ಸ್ಪೈಡರ್​​ಮ್ಯಾನ್ ಹೇಗೆ ಪಾರಾಗಲಿದ್ದಾನೆ ಎಂಬುದು ಸಿನಿಮಾದ ಕತೆ ಆಗಿರಲಿದೆ. ‘ಸ್ಪೈಡರ್​ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಸಿನಿಮಾದ ಟೀಸರ್ ಈಗಾಗಲೇ ಬಿಡುಗಡೆ ಆಗಿದ್ದು, ದೊಡ್ಡ ಹಿಟ್ ಆಗಿದೆ. ಒಂದು ಬಿಲಿಯನ್​​ಗೂ ಅಧಿಕ ವೀಕ್ಷಣೆಗಳನ್ನು ಯೂಟ್ಯೂಬ್​​ನಲ್ಲಿ ಅದು ಪಡೆದುಕೊಂಡಿದೆ.

ಐದು ವರ್ಷಗಳ ನಂತರ ಟಾಮ್ ಹಾಲೆಂಡ್ ಅವರು ‘ಸ್ಪೈಡರ್-ಮ್ಯಾನ್: ಬ್ರಾಂಡ್ ನ್ಯೂ ಡೇ’ ಮೂಲಕ ಸೋಲೋ ಸ್ಪೈಡರ್-ಮ್ಯಾನ್ ಸಿನಿಮಾ ಮೂಲಕ ಮರಳುತ್ತಿದ್ದಾರೆ. ವಿಶೇಷವೆಂದರೆ ಇದೇ ತಿಂಗಳು ಅವರ ನಟನೆಯ ಬಹು ನಿರೀಕ್ಷಿತ ಸಿನಿಮಾ ‘ದಿ ಆಡಸ್ಸಿ’ ಸಿನಿಮಾ ಬಿಡುಗಡೆ ಆಗುತ್ತಿದೆ. ಆ ಸಿನಿಮಾ ಬಿಡುಗಡೆ ಆದ ಒಂದು ತಿಂಗಳ ಬಳಿಕ ‘ಸ್ಪೈಡರ್​​ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 7:10 pm, Thu, 11 June 26

Source link

‘ಸೌಂದರ್ಯ’ ಸಿನಿಮಾ ಬಾಲನಟಿ ನೆನಪಿದ್ದಾರಾ? ಈಗ ಹೇಗಿದ್ದಾರೆ ನೋಡಿ? – Kannada News

ಬಾಲನಟ-ಬಾಲನಟಿಯಾಗಿ ಚಿತ್ರರಂಗಕ್ಕೆ (Movie) ಎಂಟ್ರಿ ಕೊಟ್ಟ ಹಲವರು ಆ ನಂತರ ನಾಯಕರಾಗಿಯೋ, ನಾಯಕಿಯರಾಗಿಯೋ ಚಿತ್ರರಂಗದಲ್ಲಿ ಉಳಿದುಕೊಳ್ಳುವುದು ಹೆಚ್ಚು. ಈಗ ಚಾಲ್ತಿಯಲ್ಲಿರುವ ಹಲವು ನಟ-ನಟಿಯರು ಖುದ್ದು ಬಾಲನಟ-ನಟಿಯಾಗಿ ಎಂಟ್ರಿ ಕೊಟ್ಟಿದ್ದವರೇ. ಆದರೆ ಕೆಲವರು ಮಾತ್ರ ಬಾಲನಟರಾಗಿ ಮಿಂಚಿ ಆ ನಂತರ ಮರೆ ಆಗಿದ್ದಾರೆ. ಅವರಲ್ಲಿ ಶ್ರಿಯಾ ಶರ್ಮಾ ಸಹ ಒಬ್ಬರು. ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಬಾಲನಟಿಯಾಗಿ ನಟಿಸಿದ್ದ ಶ್ರಿಯಾ ಶರ್ಮಾ, ಈಗ ಚಿತ್ರರಂಗದಿಂದ ದೂರ ಉಳಿದಿದ್ದಾ. ಅಂದಹಾಗೆ ಅವರು ಈಗ ಏನು ಮಾಡುತ್ತಿದ್ದಾರೆ? ಈಗ ಹೇಗೆ ಕಾಣುತ್ತಾರೆ? ಇಲ್ಲಿದೆ ಮಾಹಿತಿ…

2005 ರಲ್ಲಿ ಬಿಡುಗಡೆ ಆದ ತೆಲುಗಿನ ಹಿಟ್ ಸಿನಿಮಾ ‘ಜೈ ಚಿರಂಜೀವ’ ನಲ್ಲಿ ಚಿರಂಜೀವಿ ಅವರ ಸಹೋದರಿಯ ಮಗಳ ಪಾತ್ರದಲ್ಲಿ ನಟಿಸುವ ಮೂಲಕ ಚಿತ್ರರಂಗಕ್ಕೆ ಕಾಲಿರಿಸಿದ್ದ ಶ್ರಿಯಾ ಶರ್ಮಾ, ತಮ್ಮ ಮುದ್ದಾದ ಮುಖ ಹಾಗೂ ಚುರುಕು ನಟನೆಯಿಂದ ಬಲು ಬೇಗನೆ ದೊಡ್ಡ ಜನಪ್ರಿಯತೆ ಗಳಿಸಿದರು. ಆ ಸಮಯದಲ್ಲಿ ಬಿಡುಗಡೆ ಆದ ಹಲವಾರು ಸಿನಿಮಾಗಳಲ್ಲಿ ಶ್ರಿಯಾ ಬಾಲನಟಿಯಾಗಿ ನಟಿಸಿದರು. ಕನ್ನಡದಲ್ಲಿ ರಮೇಶ್ ಅರವಿಂದ್ ನಟಿಸಿದ್ದ 2007 ರಲ್ಲಿ ಬಿಡುಗಡೆ ಆದ ‘ಸೌಂದರ್ಯ’ ಸಿನಿಮಾನಲ್ಲಿ, ರಮೇಶ್ ಅವರ ಪುತ್ರಿಯ ಪಾತ್ರದಲ್ಲಿ ಶ್ರಿಯಾ ನಟಿಸಿದ್ದರು. ರಜನೀಕಾಂತ್ ನಟನೆಯ ‘ರೋಬೊ’, ‘ಮಗಧೀರ’, ‘ಊಸರವಳ್ಳಿ’ ಸೇರಿದಂತೆ ಹಲವು ಹಿಂದಿ ಸಿನಿಮಾಗಳು, ತೆಲುಗು, ತಮಿಳು ಸಿನಿಮಾಗಳಲ್ಲಿ ಬಾಲನಟಿಯಾಗಿ ಶ್ರಿಯಾ ಮಿಂಚಿದ್ದರು. ಸುಮಾರು 150ಕ್ಕೂ ಹೆಚ್ಚು ಜಾಹೀರಾತುಗಳಲ್ಲಿ ಸಹ ನಟಿಸಿದ್ದರು.

ಆದರೆ ಈಗ ಅವರು ಚಿತ್ರರಂಗದಿಂದ ದೂರ ಉಳಿದಿದ್ದಾರೆ. 2012 ರ ವರೆಗೆ ಬಾಲನಟಿಯಾಗಿ ನಟಿಸಿದ ಶ್ರಿಯಾ, ಆ ಬಳಿಕ ತೆಲುಗು ಚಿತ್ರರಂಗಕ್ಕೆ ನಾಯಕಿಯಾಗಿಯೂ ಎಂಟ್ರಿ ಕೊಟ್ಟರು. 2015 ರಲ್ಲಿ ‘ಗಾಯಕುಡು’ ಸಿನಿಮಾನಲ್ಲಿ ನಾಯಕಿಯಾದರು. ಬಳಿಕ ಹಿಂದಿಯ ‘ಬಿಲ್ಲು ಗೇಮರ್’ ಸಿನಿಮಾನಲ್ಲೂ ನಾಯಕಿ. 2016ರಲ್ಲಿ ಬಂದ ತೆಲುಗಿನ ‘ನಿರ್ಮಲಾ ಕಾನ್ವೆಂಟ್’ ಸಿನಿಮಾನಲ್ಲೂ ನಾಯಕಿ ಆದರು. ಆದರೆ ಅವರಿಗೆ ನಾಯಕಿಯಾಗಿ ಯಶಸ್ಸು ಸಿಗಲಿಲ್ಲ.

ಶ್ರಿಯಾ ಶರ್ಮಾ ಈಗ ವಕೀಲೆ ಆಗಿದ್ದಾರೆ. ಅದ್ಭುತ ಬಾಲನಟಿಯಾಗಿದ್ದ ಶ್ರಿಯಾ ಶರ್ಮಾ ಒಳ್ಳೆಯ ವಿದ್ಯಾರ್ಥಿ ಸಹ ಆಗಿದ್ದರು. ಕಾನೂನು ಪದವಿ ಪೂರೈಸಿ ವಕೀಲೆಯಾಗಿ ತಮ್ಮ ವೃತ್ತಿಜೀವನವನ್ನು ರೂಪಿಸಿಕೊಂಡಿದ್ದಾರೆ. ಸದ್ಯ ಅವರು ಮುಂಬೈನಲ್ಲಿ ಅಡ್ವೊಕೇಟ್ ಆಗಿ ಪ್ರಾಕ್ಟೀಸ್ ಮಾಡುತ್ತಿದ್ದು, ಕಾರ್ಪೊರೇಟ್ ಕಾನೂನು ಕ್ಷೇತ್ರದಲ್ಲಿ ಲಾಯರ್ ಆಗಿ ನೆಲೆಸಿದ್ದಾರೆ.

ಸಿನಿಮಾಗಳಿಂದ ದೂರವಾದರೂ ಸಹ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿದ್ದಾರೆ. ತಮ್ಮ ಸುಂದರ ಚಿತ್ರಗಳನ್ನು ಶ್ರಿಯಾ ಶರ್ಮಾ ಹಂಚಿಕೊಳ್ಳುತ್ತಲೇ ಇರುತ್ತಾರೆ. ಬಾಲನಟಿಯಾಗಿ ರಂಜಿಸಿದ್ದ ಆ ಪುಟ್ಟ ಬಾಲಕಿ, ಈಗ ಒಬ್ಬ ಜವಾಬ್ದಾರಿಯುತ ಲಾಯರ್ ಆಗಿ ಬದಲಾಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 5:44 pm, Thu, 11 June 26

Source link

ಹಾಲು ಹಾಕಿದ ಚಹಾ ಕುಡಿದರೆ ಅಸಿಡಿಟಿ ಆಗುತ್ತಾ? ಹಾಗಿದ್ರೆ ಈ ಸಿಂಪಲ್ ಟ್ರಿಕ್ ಪಾಲಿಸಿ ನೋಡಿ – Kannada News

ಇತ್ತೀಚಿನ ದಿನಗಳಲ್ಲಿ ಗ್ಯಾಸ್ (Gas Problem), ಅಸಿಡಿಟಿ ಮತ್ತು ಜೀರ್ಣಕ್ರಿಯೆ ಸಮಸ್ಯೆಗಳು ಸಾಮಾನ್ಯವಾಗುತ್ತಿವೆ. ಅದರಲ್ಲಿಯೂ ಕೆಲವರಿಗೆ ಹಾಲು ಹಾಕಿದ ಚಹಾ ಕುಡಿದ ಕೆಲವೇ ಸಮಯದಲ್ಲಿ ಹೊಟ್ಟೆ ಉಬ್ಬರ, ಎದೆ ಉರಿ, ಗ್ಯಾಸ್ ಅಥವಾ ಅಜೀರ್ಣ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ದಿನವನ್ನು ಚಹಾದಿಂದಲೇ ಆರಂಭಿಸುವವರ ಸಂಖ್ಯೆ ಹೆಚ್ಚಾದರೂ, ಕುಡಿಯಬಾರದ ಸಮಯದಲ್ಲಿ ಅಥವಾ ಸರಿಯಾದ ರೀತಿಯಲ್ಲಿ ಚಹಾ ಸೇವಿಸದಿರುವುದು ಜೀರ್ಣಾಂಗ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಹಾಗಾದರೆ ಹಾಲಿನ ಚಹಾ ಮತ್ತು ಅಸಿಡಿಟಿಗಿರುವ ಸಂಬಂಧವೇನು, ಈ ರೀತಿ ಸಮಸ್ಯೆಯನ್ನು ತಪ್ಪಿಸಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹಾಲಿನ ಚಹಾ ಮತ್ತು ಅಸಿಡಿಟಿಗಿರುವ ಸಂಬಂಧ:

ತಜ್ಞರ ಪ್ರಕಾರ, ಕೆಲವರಲ್ಲಿ ಹಾಲಿನಲ್ಲಿರುವ ಲ್ಯಾಕ್ಟೋಸ್‌ ಎಂಬ ಅಂಶ ಸರಿಯಾಗಿ ಜೀರ್ಣವಾಗುವುದಿಲ್ಲ. ದೇಹದಲ್ಲಿ ಲ್ಯಾಕ್ಟೇಸ್‌ ಎಂಬ ಎನ್ಜೈಮ್‌ ಕಡಿಮೆಯಿದ್ದರೆ ಹಾಲು ಜೀರ್ಣಿಸಲು ಕಷ್ಟವಾಗುತ್ತದೆ. ಇದರಿಂದ ಹೊಟ್ಟೆ ಉಬ್ಬರ, ಗ್ಯಾಸ್‌, ಆಸಿಡಿಟಿ ಮತ್ತು ಕೆಲವೊಮ್ಮೆ ಅತಿಸಾರವೂ ಕಾಣಿಸಬಹುದು. ಅದರಲ್ಲಿಯೂ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವ ಅಭ್ಯಾಸ ಹಲವರಲ್ಲಿದೆ. ಆದರೆ ಚಹಾದಲ್ಲಿರುವ ಕ್ಯಾಫಿನ್‌ ಹೊಟ್ಟೆಯಲ್ಲಿ ಹೆಚ್ಚುವರಿ ಆಸಿಡ್‌ ಉತ್ಪತ್ತಿ ಮಾಡಬಹುದು. ಇದರಿಂದ ಎದೆ ಉರಿ, ಹುಳಿ ತೇಗು ಹಾಗೂ ಆಸಿಡ್‌ ರಿಫ್ಲಕ್ಸ್‌ ಸಮಸ್ಯೆಗಳು ಉಂಟಾಗಬಹುದು. ವಿಶೇಷವಾಗಿ ದಿನದಲ್ಲಿ ಹಲವಾರು ಬಾರಿ ಚಹಾ ಕುಡಿಯುವವರಲ್ಲಿ ಈ ತೊಂದರೆ ಹೆಚ್ಚಾಗಿ ಕಂಡುಬರಬಹುದು.

ಚಹಾ ಕುಡಿಯುವ ಸಮಯವೂ ಮುಖ್ಯ:

ಸಾಮಾನ್ಯವಾಗಿ ಯಾವ ಸಮಯದಲ್ಲಿ ಚಹಾ ಕುಡಿಯುತ್ತೇವೆ ಎಂಬುದು ಕೂಡ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಬೆಳಿಗ್ಗೆ ಹೆಚ್ಚು ಗಟ್ಟಿಯಾಗಿರುವ ಹಾಲಿನಿಂದ ಮಾಡಿದ ಚಹಾ ಅಥವಾ ಸಂಜೆ ತಡವಾಗಿ ಚಹಾ ಸೇವಿಸುವುದರಿಂದ ಕೆಲವರಿಗೆ ಅಜೀರ್ಣ ಸಮಸ್ಯೆ ಕಾಣಿಸಬಹುದು. ಆದ್ದರಿಂದ ಮಿತ ಪ್ರಮಾಣದಲ್ಲಿ ಮಾತ್ರ ಚಹಾ ಸೇವಿಸುವುದು ಉತ್ತಮ.

ಇದನ್ನೂ ಓದಿ: ಗ್ಯಾಸ್ ಮತ್ತು ಹೊಟ್ಟೆ ಉಬ್ಬರ ಸಮಸ್ಯೆಗೆ ಆಹಾರ ಮಾತ್ರವಲ್ಲ, ನಿಮ್ಮ ಈ ಅಭ್ಯಾಸಗಳು ಕಾರಣವಾಗಿರಬಹುದು!

ಅಸಿಡಿಟಿಗೆ ಕಾರಣವಾಗುವ ಇತರ ಅಭ್ಯಾಸಗಳು:

ತೈಲಯುಕ್ತ ಆಹಾರ, ಜಂಕ್‌ ಫುಡ್‌, ಮೈದಾ ಪದಾರ್ಥಗಳು ಹಾಗೂ ದೈಹಿಕ ಚಟುವಟಿಕೆ ಕೊರತೆ ಜೀರ್ಣಶಕ್ತಿಯನ್ನು ದುರ್ಬಲಗೊಳಿಸುತ್ತವೆ. ಸರಿಯಾದ ವ್ಯಾಯಾಮ ಇಲ್ಲದಿದ್ದರೆ ಮೆಟಾಬಾಲಿಸಂ ನಿಧಾನವಾಗಿ ಅಸಿಡಿಟಿ ಸಮಸ್ಯೆ ಹೆಚ್ಚಾಗಬಹುದು. ದಿನಕ್ಕೆ ಕನಿಷ್ಠ 30 ನಿಮಿಷ ವಾಕಿಂಗ್ ಅಥವಾ ವ್ಯಾಯಾಮ ಮಾಡುವುದು ಅಗತ್ಯ.

ಗ್ಯಾಸ್ ಮತ್ತು ಅಸಿಡಿಟಿ ತಪ್ಪಿಸಲು ಏನು ಮಾಡಬೇಕು?

  • ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯಬೇಡಿ
  • ದಿನಕ್ಕೆ 2–3 ಕಪ್‌ಗಿಂತ ಹೆಚ್ಚು ಚಹಾ ಸೇವಿಸಬೇಡಿ
  • ಚಹಾ ಜೊತೆ ಹಗುರವಾದ ಆಹಾರ ಸೇವಿಸಿ
  • ಹೆಚ್ಚು ನೀರು ಕುಡಿಯಿರಿ
  • ಜಂಕ್‌ ಫುಡ್‌ ಮತ್ತು ಎಣ್ಣೆ ಪದಾರ್ಥಗಳನ್ನು ಕಡಿಮೆ ಮಾಡಿ
  • ನಿಯಮಿತ ವ್ಯಾಯಾಮ ಮತ್ತು ಸರಿಯಾಗಿ ನಿದ್ರೆ ಮಾಡಿ

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:30 pm, Thu, 11 June 26

Source link

ದೈಹಿಕ, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ನಿತ್ಯ ತಿನ್ನಿ ಈ ಗಿಡದ ಎಲೆ – Kannada News

ಗಿಡಮೂಲಿಕೆಗಳ ರಾಣಿ ಎಂದೇ ಕರೆಯಲ್ಪಡುವ ತುಳಸಿ (Tulsi) ಸಸ್ಯವನ್ನು ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ಈ ಸಸ್ಯಕ್ಕೆ ಪೂಜ್ಯನೀಯ ಸ್ಥಾನವನ್ನು ನೀಡಲಾಗಿರುವುದರಿಂದ ಮನೆಗಳಲ್ಲಿ ಈ ಪವಿತ್ರ ಗಿಡವನ್ನು ನೆಟ್ಟು ಪೂಜಿಸಲಾಗುತ್ತದೆ. ಧಾರ್ಮಿಕ ಮಹತ್ವವನ್ನು ಪಡೆದಿರುವ ತುಳಸಿ ಹಲವಾರು ಔಷಧೀಯ ಗುಣಗಳನ್ನು ಸಹ ಹೊಂದಿದೆ. ತುಳಸಿ ಎಲೆಯಲ್ಲಿ ವಿಟಮಿನ್‌ ಎ, ಸಿ, ಕೆ ಮತ್ತು ಕ್ಯಾಲ್ಸಿಯಂ, ಮೆಗ್ನೇಸಿಯಂ, ರಂಜಕ, ಕಬ್ಬಿಣದಂತಹ ಹಲವಾರು ಪೋಷಕಾಂಶಗಳು, ಉತ್ಕರ್ಷಣ ನಿರೋಧಕಗಳಿದ್ದು, ಪ್ರತಿನಿತ್ಯ ತುಳಸಿ ಎಲೆಯನ್ನು ಸೇವನೆ ಮಾಡುವುದರಿಂದ ಸಾಕಷ್ಟು ದೈಹಿಕ ಮತ್ತು ಮಾನಸಿಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಹಾಗಿದ್ದರೆ ತುಳಸಿ ಎಲೆಯ ಸೇವನೆಯಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಅನ್ನೋದನ್ನು ನೋಡೋಣ ಬನ್ನಿ.

ತುಳಸಿ ಎಲೆಯ ಸೇವನೆಯಿಂದ ಲಭಿಸುವ  ಪ್ರಯೋಜನಗಳೇನು?

ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ: ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ತುಳಸಿ ಎಲೆಗಳು ಹೆಚ್ಚಿನ ಮಟ್ಟದ ಉತ್ಕರ್ಷಣ ನಿರೋಧಕಗಳು ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದ್ದು, ಇದು ದೇಹವನ್ನು ಒಳಗಿನಿಂದ ಶುದ್ಧೀಕರಿಸಲು ಮತ್ತು ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ತುಳಸಿ ಎಲೆಗಳನ್ನು ತಿನ್ನುವುದರಿಂದ ದೇಹವು ಸೋಂಕುಗಳ ವಿರುದ್ಧ ಹೋರಾಡಲು ಶಕ್ತಿಯನ್ನು ನೀಡುತ್ತದೆ. ಇದರ ಜೊತೆಗೆ, ಇದು ಶೀತ, ಕೆಮ್ಮು, ಗಂಟಲು ನೋವು ಮತ್ತು ಉಸಿರಾಟದ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಒತ್ತಡವನ್ನು ನಿವಾರಿಸುತ್ತದೆ: ತುಳಸಿ ಎಲೆಗಳು ಅಡಾಪ್ಟೋಜೆನಿಕ್ ಗುಣಗಳನ್ನು ಹೊಂದಿದ್ದು, ಇದು ದೇಹದಲ್ಲಿನ ಒತ್ತಡದ ಹಾರ್ಮೋನ್ ‘ಕಾರ್ಟಿಸೋಲ್’ ಮಟ್ಟವನ್ನು ನಿಯಂತ್ರಿಸುತ್ತದೆ ಮತ್ತು ಉದ್ವೇಗವನ್ನು ಕಡಿಮೆ ಮಾಡುತ್ತದೆ, ಮನಸ್ಸಿನ ಶಾಂತಿಯನ್ನು ಹೆಚ್ಚಿಸುತ್ತವೆ. ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಗಳನ್ನು ಅಗಿಯುವುದರಿಂದ ದೇಹದಲ್ಲಿನ ಒತ್ತಡದ ಮಟ್ಟ ಕಡಿಮೆಯಾಗುತ್ತದೆ ಮತ್ತು ಮನಸ್ಸಿಗೆ ಶಾಂತಿ ಸಿಗುತ್ತದೆ. ಇದಲ್ಲದೆ ತುಳಸಿ ಚಹಾವನ್ನು ಕೂಡ ಸೇವಿಸಬಹುದು. ತುಳಸಿಯು ಆತಂಕ, ಚಿಂತೆ ಮತ್ತು ಖಿನ್ನತೆಯಂತಹ ಮಾನಸಿಕ ಸಮಸ್ಯೆಗಳಿಂದ ರಕ್ಷಿಸುತ್ತದೆ ,ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ.

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ: ತುಳಸಿ ಎಲೆಗಳು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಈ ಎಲೆಗಳು ನೈಸರ್ಗಿಕ ಉರಿಯೂತ ನಿವಾರಕ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸುವ ಗುಣಗಳನ್ನು ಹೊಂದಿವೆ, ಇದು ಗ್ಯಾಸ್, ಅಜೀರ್ಣ, ಹೊಟ್ಟೆ ನೋವು ಮತ್ತು ಮಲಬದ್ಧತೆಯಂತಹ ಹೊಟ್ಟೆಯ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ತುಳಸಿ ಎಲೆಗಳು ಕರುಳಿನಲ್ಲಿರುವ ಬ್ಯಾಕ್ಟೀರಿಯಾವನ್ನು ಸಮತೋಲನಗೊಳಿಸುತ್ತದೆ ಮತ್ತು ಜೀರ್ಣಾಂಗ ವ್ಯವಸ್ಥೆಯನ್ನು ಸಾಮಾನ್ಯವಾಗಿಸುತ್ತದೆ. ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಗಳನ್ನು ತಿನ್ನುವುದರಿಂದ ಹೊಟ್ಟೆ ತಂಪಾಗುತ್ತದೆ. ತುಳಸಿ ಎಲೆಯ ನಿಯಮಿತ ಸೇವನೆಯು ಕರುಳಿನ ಆರೋಗ್ಯವನ್ನು ಸುಧಾರಿಸುತ್ತದೆ.

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ: ತುಳಸಿ ಎಲೆಗಳನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿರುತ್ತದೆ. ಈ ಎಲೆಗಳು ದೇಹದಲ್ಲಿನ ಇನ್ಸುಲಿನ್ ಮಟ್ಟವನ್ನು ಸಮತೋಲನಗೊಳಿಸುತ್ತದೆ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ತುಳಸಿ ಎಲೆಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಮಧುಮೇಹದ ಅಪಾಯ ಕಡಿಮೆಯಾಗುತ್ತದೆ.

ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ: ತುಳಸಿ ಎಲೆಗಳು ಹೃದಯಕ್ಕೂ ತುಂಬಾ ಪ್ರಯೋಜನಕಾರಿ. ತುಳಸಿ ಎಲೆಗಳು ದೇಹದಲ್ಲಿನ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಹೃದಯ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡುತ್ತದೆ. ರಕ್ತನಾಳಗಳನ್ನು ಆರೋಗ್ಯಕರವಾಗಿರಿಸುತ್ತದೆ. ಅಲ್ಲದೆ ತುಳಸಿ ಎಲೆಗಳು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ:  ಉತ್ತಮ ನಿದ್ರೆ ಪಡೆಯಲು ಬಯಸಿದರೆ ಬೆಡ್‌ರೂಮ್‌ನಲ್ಲಿ ಗಿಡಗಳನ್ನಿಡಿ

ಸಕಾರಾತ್ಮಕ ಶಕ್ತಿ ಹೆಚ್ಚುತ್ತದೆ: ತುಳಸಿ ಗಿಡ ಇರುವ ಸ್ಥಳವು ಶಾಂತಿ ಮತ್ತು ಸಕಾರಾತ್ಮಕ ಕಂಪನಗಳಿಂದ ತುಂಬಿರುತ್ತದೆ ಎಂದು ಹೇಳಲಾಗುತ್ತದೆ. ಬೆಳಿಗ್ಗೆ ಮತ್ತು ಸಂಜೆ ತುಳಸಿ ಗಿಡದ ಬಳಿ ದೀಪ ಹಚ್ಚುವುದರಿಂದ ಮನಸ್ಸಿಗೆ ಒಂದು ರೀತಿಯ ಶಾಂತಿ ಲಭಿಸುತ್ತದೆ, ಸಕಾರಾತ್ಮಕ ಶಕ್ತಿಯೂ ಹೆಚ್ಚುತ್ತದೆ.

ಗಾಳಿಯನ್ನು ಶುದ್ಧೀಕರಿಸುತ್ತದೆ: ತುಳಸಿ ದಿನದ 24 ಗಂಟೆಗಳ ಕಾಲ ಆಮ್ಲಜನಕವನ್ನು ಬಿಡುಗಡೆ ಮಾಡುತ್ತದೆ ಮತ್ತು ಗಾಳಿಯಲ್ಲಿರುವ ವಿಷಕಾರಿ ಅನಿಲಗಳನ್ನು ಹೀರಿಕೊಳ್ಳುತ್ತದೆ, ಗಾಳಿಯನ್ನು ಶುದ್ಧೀಕರಿಸುತ್ತದೆ. ಅಲ್ಲದೆ ಈ ಗಿಡದ ಪರಿಮಳವು ಸೊಳ್ಳೆಗಳು ಮತ್ತು ಕೀಟಗಳು ಮನೆಯೊಳಗೆ ಪ್ರವೇಶಿಸದಂತೆ ತಡೆಯುತ್ತದೆ.

ತುಳಸಿ ಎಲೆಗಳನ್ನು ಯಾವಾಗ ತಿನ್ನಬೇಕು?

  • ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಗಳನ್ನು ತಿನ್ನುವುದು ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿ.
  • ನೀವು ತುಳಸಿ ಎಲೆಯ ಚಹಾ ಅಥವಾ ರಸವನ್ನು ಸಹ ಕುಡಿಯಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ‘ಪೊಲೀಸ್ ಕಂಪ್ಲೈಂಟ್’ ಜೂನ್ 12ಕ್ಕೆ ಬಿಡುಗಡೆ – Kannada News

ಮಹಿಳಾ ಪ್ರಧಾನ ಕಥಾಹಂದರ ಇರುವ ಸಿನಿಮಾಗಳಿಗೆ ಅದರದ್ದೇ ಆದ ಪ್ರೇಕ್ಷಕರ ವರ್ಗವಿದೆ. ಆದರೆ ಕನ್ನಡ ಚಿತ್ರರಂಗದಲ್ಲಿ ಇತ್ತೀಚೆಗೆ ಅಂಥ ಸಿನಿಮಾಗಳ ಸಂಖ್ಯೆ ಕಡಿಮೆ ಆಗಿದೆ. ಈಗ ರಾಗಿಣಿ ದ್ವಿವೇದಿ (Ragini Dwivedi) ಮತ್ತು ವರಲಕ್ಷ್ಮೀ ಶರತ್ ಕುಮಾರ್ ಅಭಿನಯಿಸಿರುವ ಮಹಿಳಾ ಪ್ರಧಾನ ಸಿನಿಮಾ ‘ಪೊಲೀಸ್ ಕಂಪ್ಲೈಂಟ್’ ಬಿಡುಗಡೆಗೆ ಸಜ್ಜಾಗಿದೆ. ಜೂನ್ 12ರಂದು ಈ ಚಿತ್ರ ರಿಲೀಸ್ ಆಗಲಿದೆ. ನವೀನ್ ಚಂದ್ರ, ಕೃಷ್ಣ ಸಾಯಿ ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ರವಿಶಂಕರ್, ಶರತ್ ಲೋಹಿತಾಶ್ವ, ಅನಿಲ್ ರಾಜ್, ಸಪ್ತಗಿರಿ, ಪೃಥ್ವಿರಾಜ್, ಜೆಮಿನಿ ಸುರೇಶ್ ಮುಂತಾದವರು ‘ಪೊಲೀಸ್ ಕಂಪ್ಲೈಂಟ್’ (Police Complaint) ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ಸಂಜೀವ ಮೆಗೋಟಿ ಅವರು ‘ಪೊಲೀಸ್ ಕಂಪ್ಲೈಂಟ್’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಮೊದಲು ಅವರು ಪೂಜಾ ಗಾಂಧಿ ನಟನೆಯ ‘ಅನು’, ‘ದಂಡು’, ‘ಆಪ್ತ’, ‘ಆದಿ ಪರ್ವ’ ಮುಂತಾದ ಸಿನಿಮಾಗಳಿಗೆ ಆ್ಯಕ್ಷನ್-ಕಟ್ ಹೇಳಿದ್ದರು. ‘ಎಂ.ಎಸ್.ಕೆ. ಪ್ರಮೀದಾಶ್ರೀ ಫಿಲ್ಮ್ಸ್’ ಮೂಲಕ ‘ಪೊಲೀಸ್ ಕಂಪ್ಲೈಂಟ್’ ಸಿನಿಮಾ ನಿರ್ಮಾಣ ಆಗಿದೆ. ತೆಲುಗಿನಲ್ಲಿ ಹಲವು ಸಿನಿಮಾ ಮಾಡಿರುವ ನಟ ಕೃಷ್ಣಸಾಯಿ ಅವರಿಗೆ ಕನ್ನಡದಲ್ಲಿ ನಾಯಕ ನಟನಾಗಿ ಇದು ಮೊದಲ ಸಿನಿಮಾ.

‘ಪೊಲೀಸ್ ಕಂಪ್ಲೈಂಟ್’ ಸಿನಿಮಾದ ಬಗ್ಗೆ ನಿರ್ದೇಶಕ ಸಂಜೀವ ಮೆಗೋಟಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ‘ಸುಮಾರು 10 ವರ್ಷದ ನಂತರ ಕನ್ನಡದಲ್ಲಿ ಸಿನಿಮಾ ನಿರ್ದೇಶಿಸಿ ಪ್ರೇಕ್ಷಕರ ಮುಂದೆ ತರುತ್ತಿರುವುದಕ್ಕೆ ಖುಷಿಯಾಗುತ್ತಿದೆ. ಇದೊಂದು ಆ್ಯಕ್ಷನ್, ಹಾರರ್-ಥ್ರಿಲ್ಲರ್ ಕಥಾಹಂದರ ಇರುವ ಸಿನಿಮಾ. ನಾವು ಮಾಡಿದ ಕರ್ಮ ಹೇಗೆ ನಮ್ಮನ್ನು ಕಾಡುತ್ತದೆ ಎಂಬ ಒಂದು ಎಳೆಯನ್ನು ಇಟ್ಟುಕೊಂಡು ಈ ಸಿನಿಮಾ ಮಾಡಿದ್ದೇವೆ. ಕನ್ನಡ ಮತ್ತು ತೆಲುಗಿನ ಸುಮಾರು 50ಕ್ಕೂ ಹೆಚ್ಚಿನ ಕಲಾವಿದರು ಈ ಸಿನಿಮಾದ ವಿವಿಧ ಪಾತ್ರಗಳಲ್ಲಿ ನಟಿಸಿದ್ದಾರೆ’ ಎಂದು ಅವರು ಹೇಳಿದರು.

ನಟಿ ವರಲಕ್ಷ್ಮೀ ಶರತ್ ಕುಮಾರ್ ಅವರು ಈ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿಯ ಪಾತ್ರ ಮಾಡಿದ್ದಾರೆ. ಚಿತ್ರದ ಬಗ್ಗೆ ಮಾತನಾಡಿದ ಅವರು, ‘ಇದು ಹೊಸ ತಲೆಮಾರಿನ ಪ್ರೇಕ್ಷಕರಿಗೆ ಬಹುಬೇಗ ಕನೆಕ್ಟ್ ಆಗುವ ಸಿನಿಮಾ. ಇದರಲ್ಲಿ ಮನಮುಟ್ಟುವ ಕಥೆಯ ಜೊತೆಗೆ ಸಮಾಜಕ್ಕೆ ಉತ್ತಮ ಸಂದೇಶ ಕೂಡ ಇದೆ. ಆ್ಯಕ್ಷನ್, ಥ್ರಿಲ್ಲರ್, ಸಸ್ಪೆನ್ಸ್ ಹೀಗೆ ಎಲ್ಲ ರೀತಿಯ ಮನರಂಜನೆ ಇದೆ’ ಎಂದಿದ್ದಾರೆ.

ಇದನ್ನೂ ಓದಿ: ರಾಗಿಣಿ ದ್ವಿವೇದಿ ಹೊಸ ಸಿನಿಮಾಗೆ ಜಗ್ಗೇಶ್ ಮಕ್ಕಳ ನಿರ್ದೇಶನ; ಕೆ. ಮಂಜು ನಿರ್ಮಾಣ

ನಟಿ ರಾಗಿಣಿ ದ್ವಿವೇದಿ ಕೂಡ ಈ ಚಿತ್ರದ ಬಗ್ಗೆ ಮಾತನಾಡಿದ್ದಾರೆ. ‘ನನ್ನ ವೃತ್ತಿಜೀವನದಲ್ಲಿ ಪೊಲೀಸ್ ಕಂಪ್ಲೈಂಟ್ ಒಂದು ವಿಭಿನ್ನ ಸಿನಿಮಾ. ಇದರಲ್ಲಿ ತಾಯಿ ಹಾಗೂ ಮಗುವಿನ ಸಂಬಂಧದ ಸುತ್ತ ನನ್ನ ಪಾತ್ರ ಸಾಗುತ್ತದೆ. ಆ್ಯಕ್ಷನ್, ಹಾರರ್ ಜೊತೆಗೆ ಎಮೋಶನ್ಸ್ ಸಹ ಸಿನಿಮಾದಲ್ಲಿದೆ. ಎಲ್ಲಾ ರೀತಿಯ ಪ್ರೇಕ್ಷಕರಿಗೂ ಈ ಸಿನಿಮಾ ಇಷ್ಟವಾಗಲಿದೆ’ ಎಂದು ರಾಗಿಣಿ ದ್ವಿವೇದಿ ಅವರು ಹೇಳಿದರು. ಆರೋಹಣ ಸುಧೀಂದ್ರ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ಹರೀಶ್ ಸೊಂಡೇಕೊಪ್ಪ ಅವರು ಛಾಯಾಗ್ರಹಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ODI World Cup 2027: ಈ ದಿನದಿಂದ ಆರಂಭವಾಗಲಿದೆ 2027 ರ ಏಕದಿನ ವಿಶ್ವಕಪ್‌; ವೇಳಾಪಟ್ಟಿ ಬಹಿರಂಗ – Kannada News

2027 ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗೆ ಈಗಾಗಲೇ ಎಲ್ಲಾ ತಂಡಗಳು ತಮ್ಮ ತಯಾರಿಯನ್ನು ಶುರು ಮಾಡಿವೆ. ಅದರ ಭಾಗವಾಗಿ ಕಳೆದ ಬಾರಿಯ ರನ್ನರ್ ಅಪ್ ಟೀಂ ಇಂಡಿಯಾ ಕೂಡ ವಿವಿಧ ತಂಡಗಳ ವಿರುದ್ಧ ಏಕದಿನ ಸರಣಿಯನ್ನು ಆಡುತ್ತಿದೆ. ಮುಂಬರುವ ಏಕದಿನ ವಿಶ್ವಕಪ್​ಗೆ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾ ಜಂಟಿಯಾಗಿ ಆತಿಥ್ಯವಹಿಸುತ್ತಿವೆ ಎಂಬ ಸುದ್ದಿ ಈ ಹಿಂದೆಯೇ ಖಚಿತವಾಗಿತ್ತು. ಇದೀಗ ಈ ಮೆಗಾ ಟೂರ್ನಿ ಯಾವಾಗ ಆರಂಭವಾಗಿ ಎಲ್ಲಿಯವರೆಗೆ ನಡೆಯಲಿದೆ ಎಂಬುದರ ಬಗ್ಗೆ ಮಾಹಿತಿ ಹೊರಬಿದ್ದಿದೆ.

ESPNcricinfo ವರದಿಯ ಪ್ರಕಾರ, ಏಕದಿನ ವಿಶ್ವಕಪ್ ಅಕ್ಟೋಬರ್ 4, 2027 ರಂದು ಪ್ರಾರಂಭವಾಗಲಿದ್ದು, ನವೆಂಬರ್ 21, 2027 ರವರೆಗೆ ನಡೆಯಲಿದೆ. ಈ ಪಂದ್ಯಾವಳಿಯಲ್ಲಿ ಒಟ್ಟು 54 ಪಂದ್ಯಗಳು ನಡೆಯಲಿದ್ದು, ಈ ವಿಶ್ವ ಸಮರ ಸುಮಾರು ಒಂದೂವರೆ ತಿಂಗಳುಗಳ ಕಾಲ ನಡೆಯಲಿದೆ. ಈ ಟೂರ್ನಿಯಲ್ಲಿ ವಿಶ್ವದ ಅಗ್ರ 14 ತಂಡಗಳು ಟ್ರೋಫಿ ಗೆಲುವಿಗಾಗಿ ಪರಸ್ಪರ ಸೆಣಸಾಡಲಿವೆ. ಮೇ ತಿಂಗಳಲ್ಲಿ ಅಹಮದಾಬಾದ್‌ನಲ್ಲಿ ನಡೆದ ಐಸಿಸಿ ಮಂಡಳಿ ಸಭೆಯಲ್ಲಿ ವಿಶ್ವಕಪ್‌ ವೇಳಾಪಟ್ಟಿಯ ಬಗ್ಗೆ ತೀರ್ಮಾನಕ್ಕೆ ಬರಲಾಗಿದೆ. ಆದರೆ ಜುಲೈನಲ್ಲಿ ಎಡಿನ್‌ಬರ್ಗ್‌ನಲ್ಲಿ ನಡೆಯುವ ಐಸಿಸಿ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ವರದಿಯಾಗಿದೆ.

2027 ರ ಏಕದಿನ ವಿಶ್ವಕಪ್ ವೇಳಾಪಟ್ಟಿ

2027 ರ ವಿಶ್ವಕಪ್ ಹಿಂದಿನ ಆವೃತ್ತಿಯಾದ 2023 ರ ಆವೃತ್ತಿಗಿಂತ ಗಮನಾರ್ಹವಾಗಿ ಭಿನ್ನವಾಗಿರುತ್ತದೆ. ಅಂದರೆ 2003 ರಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಮಾದರಿಯಲ್ಲಿ ಈ ಬಾರಿಯ ವಿಶ್ವಕಪ್ ನಡೆಸಲು ತೀರ್ಮಾನಿಸಲಾಗಿದೆ. ಆ ಪ್ರಕಾರ, ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿರುವ 14 ತಂಡಗಳನ್ನು ತಲಾ ಏಳು ತಂಡಗಳ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ನಂತರ ಪ್ರತಿ ಗುಂಪಿನಿಂದ ಅಗ್ರ ಮೂರು ತಂಡಗಳು ಸೂಪರ್ ಸಿಕ್ಸ್ ಸುತ್ತಿಗೆ ಮುನ್ನಡೆಯುತ್ತವೆ. ನಂತರ ಸೂಪರ್ ಸಿಕ್ಸ್‌ನ ಅಗ್ರ ನಾಲ್ಕು ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಪಡೆಯುತ್ತಿವೆ. ಈ ಸುತ್ತಿನಲ್ಲಿ ಗೆದ್ದ ಎರಡು ತಂಡಗಳು ನವೆಂಬರ್ 21 ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಪ್ರಶಸ್ತಿಗಾಗಿ ಕಾದಾಡಲಿವೆ.

ಯಾವ ದೇಶದಲ್ಲಿ ಎಷ್ಟು ಪಂದ್ಯಗಳು ನಡೆಯಲಿವೆ?

ಮೇಲೆ ಹೇಳಿದಂತೆ ಈ ಪಂದ್ಯಾವಳಿಯು ಮೂರು ದೇಶಗಳಲ್ಲಿ ನಡೆಯಲಿದ್ದು, ದಕ್ಷಿಣ ಆಫ್ರಿಕಾ ಪ್ರಮುಖ ಆತಿಥೇಯವಾಗಿದೆ. ವರದಿಗಳ ಪ್ರಕಾರ, ದಕ್ಷಿಣ ಆಫ್ರಿಕಾದ ಎಂಟು ಕ್ರೀಡಾಂಗಣಗಳು ಪಂದ್ಯಾವಳಿಯ ಹೆಚ್ಚಿನ ಪಂದ್ಯಗಳು ಮತ್ತು ನಾಕೌಟ್ ಟೈಗಳನ್ನು ಆಯೋಜಿಸುತ್ತವೆ. ಇವುಗಳಲ್ಲಿ ಜೋಹಾನ್ಸ್‌ಬರ್ಗ್‌ನ ವಾಂಡರರ್ಸ್ ಕ್ರೀಡಾಂಗಣ, ಕೇಪ್ ಟೌನ್‌ನ ನ್ಯೂಲ್ಯಾಂಡ್ಸ್ ಕ್ರೀಡಾಂಗಣ ಮತ್ತು ಡರ್ಬನ್‌ನ ಕಿಂಗ್ಸ್‌ಮೀಡ್ ಕ್ರೀಡಾಂಗಣ ಸೇರಿವೆ. ಜಿಂಬಾಬ್ವೆಯ ಎರಡು ನಗರಗಳಾದ ಹರಾರೆ ಮತ್ತು ಬುಲವಾಯೊದಲ್ಲಿ ಪಂದ್ಯಗಳು ನಡೆಯಲಿವರ. ನಮೀಬಿಯಾದ ಎರಡು ಮೈದಾನಗಳಲ್ಲಿ ಪಂದ್ಯಗಳು ನಡೆಯಲಿವೆ.

ಯಾವ 14 ತಂಡಗಳಿಗೆ ಅವಕಾಶ ಸಿಗುತ್ತದೆ?

ಆತಿಥೇಯ ದಕ್ಷಿಣ ಆಫ್ರಿಕಾ ಮತ್ತು ಜಿಂಬಾಬ್ವೆ 2027 ರ ಏಕದಿನ ವಿಶ್ವಕಪ್‌ಗೆ ನೇರ ಪ್ರವೇಶ ಪಡೆದಿವೆ. ಇದರ ಜೊತೆಗೆ, ಐಸಿಸಿ ಶ್ರೇಯಾಂಕದಲ್ಲಿ ಅಗ್ರ ಎಂಟು ತಂಡಗಳು ಸಹ ನೇರವಾಗಿ ಅರ್ಹತೆ ಪಡೆಯುತ್ತವೆ. ಆತಿಥೇಯ ನಮೀಬಿಯಾ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಅರ್ಹತಾ ಸುತ್ತನ್ನು ಆಡಬೇಕಾಗುತ್ತದೆ. ಉಳಿದ ಮೂರರಿಂದ ನಾಲ್ಕು ಸ್ಥಾನಗಳಿಗೆ ಅರ್ಹತಾ ಪಂದ್ಯಾವಳಿಯಲ್ಲಿ ಗೆದ್ದ ತಂಡಗಳು ಆಯ್ಕೆಯಾಗಲಿವೆ.

Source link

ಅಡ್ಡ ಬಂದ ನಾಗರ ಹಾವು: ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್ – Kannada News

ಚಿಕ್ಕಮಗಳೂರು, ಜೂ.11: ರಸ್ತೆಗೆ ಏಕಾಏಕಿ ಅಡ್ಡ ಬಂದ ನಾಗರ ಹಾವನ್ನು ತಪ್ಪಿಸಲು ಹೋದ ಬೈಕ್ ಸವಾರನ ಎಡವಟ್ಟಿನಿಂದಾಗಿ, ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಸರಣಿ ಅಪಘಾತ ನಡೆದಿರುವ ವಿಲಕ್ಷಣ ಘಟನೆ ಚಿಕ್ಕಮಗಳೂರಿನ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ. ಅಪಘಾತದ ರಭಸಕ್ಕೆ ಕೆಎಸ್‌ಆರ್‌ಟಿಸಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ನುಗ್ಗಿದ್ದು, ಅದೃಷ್ಟವಶಾತ್ ಭಾರಿ ಪ್ರಾಣಾಪಾಯವೊಂದು ಕೂದಲೆಳೆತದಲ್ಲಿ ತಪ್ಪಿದೆ. ಬೈಕ್ ಸವಾರರಿಬ್ಬರು ನಾರಾಯಣಪುರ ಗೇಟ್ ರಸ್ತೆಯಲ್ಲಿ ಚಲಿಸುತ್ತಿದ್ದಾಗ ಬೃಹತ್ ಗಾತ್ರದ ನಾಗರ ಹಾವೊಂದು ಏಕಾಏಕಿ ರಸ್ತೆಗೆ ಅಡ್ಡ ಬಂದಿದೆ. ಹಾವನ್ನು ಕಂಡು ಆತಂಕಗೊಂಡ ಬೈಕ್ ಚಾಲಕ ತಕ್ಷಣವೇ ರಸ್ತೆ ಮಧ್ಯದಲ್ಲೇ ಜೋರಾಗಿ ಬ್ರೇಕ್ ಹಾಕಿದ್ದಾನೆ. ಈ ವೇಳೆ ಅದೇ ಮಾರ್ಗದಲ್ಲಿ ಬೈಕ್‌ನ ಹಿಂಬದಿಯಲ್ಲೇ ಬರುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್ ಚಾಲಕನಿಗೆ ತಕ್ಷಣವೇ ಬ್ರೇಕ್ ಹಾಕಲು ಸಾಧ್ಯವಾಗದೆ ಮುಂದಿದ್ದ ಬೈಕ್‌ಗೆ ಜೋರಾಗಿ ಗುದ್ದಿದೆ. ಬೈಕ್‌ಗೆ ಡಿಕ್ಕಿ ಹೊಡೆಯುತ್ತಿದ್ದಂತೆ ಬಸ್ ಚಾಲಕ ವಾಹನವನ್ನು ನಿಯಂತ್ರಿಸಲು ಒತ್ತಡದಲ್ಲಿ ಬ್ರೇಕ್ ಹಾಕಿದ್ದಾನೆ. ಆದರೆ, ವೇಗವಾಗಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ರಸ್ತೆ ಬದಿಯಲ್ಲಿದ್ದ ತೋಟದ ಬೇಲಿಯನ್ನು ಮುರಿದುಕೊಂಡು ಒಳಗಡೆ ನುಗ್ಗಿದೆ. ಅಪಘಾತದ ಸಮಯದಲ್ಲಿ ಬಸ್‌ನಲ್ಲಿ ಹಲವಾರು ಪ್ರಯಾಣಿಕರಿದ್ದರೂ, ಚಾಲಕನ ಸಮಯಪ್ರಜ್ಞೆಯಿಂದಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್ ತೋಟಕ್ಕೆ ನುಗ್ಗುತ್ತಿದ್ದಂತೆ ಒಳಗಿದ್ದ ಪ್ರಯಾಣಿಕರು ಆತಂಕದಿಂದ ಕಿರುಚಾಡಿದ್ದಾರೆ. ಈ ಭೀಕರ ಅಪಘಾತದಲ್ಲಿ ಬೈಕಿನಲ್ಲಿದ್ದ ಇಬ್ಬರು ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಅಜ್ಜಂಪುರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಅಜ್ಜಂಪುರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ

ಸಿನಿಮಾಗಳಲ್ಲಿ (Cinema) ಆಕ್ಷನ್ ಸಾಮಾನ್ಯ. ಹೀರೋ ನಿಂತು ಸ್ಟೈಲ್ ಆಗಿ ಕೈ ಬೀಸಿದರೆ ವಿಲನ್​​ಗಳು ಮಾರು ದೂರ ಹೋಗಿ ಬೀಳುತ್ತಾರೆ, ಅಭಿಮಾನಿಗಳು ಚಪ್ಪಾಳೆ ಹೊಡೆಯುತ್ತಾರೆ. ಇಲ್ಲಿ ಹೀರೋಗೆ ಹೆಚ್ಚು ಕಷ್ಟವಿಲ್ಲ, ಅವನ ಶ್ರಮವೂ ಏನೂ ಇಲ್ಲ. ಆದರೆ ಹಾಗೆ ಹಾರಿ ಬೀಳುವ ಫೈಟರ್​​ಗಳದ್ದು ಎಷ್ಟು ಕಷ್ಟದ ಮತ್ತು ಎಷ್ಟು ರಿಸ್ಕಿ ಕೆಲಸ ಗೊತ್ತೆ? ಇಲ್ಲೊಂದು ವಿಡಿಯೋ ಇದೆ ನೋಡಿ, ನಟಿಯೊಬ್ಬರು ಹಾರಿ ಬೀಳುವ ದೃಶ್ಯವಿದು, ಸಾಕಷ್ಟು ಸೆಕ್ಯುರಿಟಿ ತೆಗೆದುಕೊಳ್ಳಲಾಗಿದೆ, ಆದರೂ ಹಾಗೆ ಹಾರಿ ಬೀಳುವುದು ಎಷ್ಟು ಅಪಾಯಕಾರಿ ಎಂಬುದು ಈ ವಿಡಿಯೋನಲ್ಲಿ ಕಾಣುತ್ತದೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ಭಾರತ U19 ತಂಡಕ್ಕೆ ಆಯ್ಕೆಯಾದ ರಾಹುಲ್ ದ್ರಾವಿಡ್ ಪುತ್ರ – Kannada News

ಈ ವರ್ಷದ ಆರಂಭದಲ್ಲಿ ಆಯುಷ್ ಮ್ಹಾತ್ರೆ ನಾಯಕತ್ವದಲ್ಲಿ ಭಾರತ ಅಂಡರ್-19 ತಂಡವು (India U19 Squad 2026) ಅಂಡರ್-19 ವಿಶ್ವಕಪ್ ಗೆದ್ದಿತು. ವೈಭವ್ ಸೂರ್ಯವಂಶಿ, ವಿಹಾನ್ ಮಲ್ಹೋತ್ರಾ ಮತ್ತು ಅಭಿಗ್ಯಾನ್ ಕುಂಡು ಅವರಂತಹ ಯುವ ಪ್ರತಿಭೆಗಳು ತಂಡವನ್ನು ಚಾಂಪಿಯನ್ ಮಾಡುವಲ್ಲಿ ಶ್ರಮಿಸಿದ್ದವು. ಇದೀಗ ಭಾರತ ಅಂಡರ್ 19 ತಂಡ ಶ್ರೀಲಂಕಾ ಪ್ರವಾಸಕ್ಕೆ ಸಿದ್ಧವಾಗಿದೆ. ಈ ಪ್ರವಾಸದಲ್ಲಿ ಭಾರತ ಯುವ ಪಡೆ ಮೂರು ಪಂದ್ಯಗಳ ಏಕದಿನ ಸರಣಿ ಮತ್ತು ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಪ್ರವಾಸಕ್ಕೆ ಭಾರತ ಅಂಡರ್ 19 ತಂಡವನ್ನು ಸಹ ಬಿಸಿಸಿಐ ಪ್ರಕಟಿಸಿದೆ. ಆದರೆ ಈ ಬಾರಿ ತಂಡದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ತಂಡದಲ್ಲಿ ವೈಭವ್ ಆಗಲಿ ಆಯುಷ್ ಆಗಲಿ ಇಲ್ಲ. ಆದಾಗ್ಯೂ ತಂಡದಲ್ಲಿ ಮಾಜಿ ಟೀಂ ಇಂಡಿಯಾ ನಾಯಕ ರಾಹುಲ್ ದ್ರಾವಿಡ್ ಅವರ ಕಿರಿಯ ಮಗ ಅನ್ವಯ್ ದ್ರಾವಿಡ್ ( Anvay Dravid) ಆಯ್ಕೆಯಾಗಿರುವುದು ಅಭಿಮಾನಿಗಳ ಸಂತೋಷವನ್ನು ಇಮ್ಮಡಿಗೊಳಿಸಿದೆ.

ಎರಡು ಸರಣಿಗಳಿಗೆ ತಂಡ ಪ್ರಕಟ

ಬಿಸಿಸಿಐ ಜೂನಿಯರ್ ಕ್ರಿಕೆಟ್ ಸಮಿತಿಯು ಮುಂಬರುವ ಶ್ರೀಲಂಕಾ ಪ್ರವಾಸಕ್ಕಾಗಿ 19 ವರ್ಷದೊಳಗಿನವರ ಭಾರತ ಪುರುಷರ ತಂಡದ ತಂಡವನ್ನು ಆಯ್ಕೆ ಮಾಡಿದೆ. ಮೇಲೆ ಹೇಳಿದಂತೆ ಈ ಪ್ರವಾಸದಲ್ಲಿ ಭಾರತ ತಂಡವು ಮೂರು ಏಕದಿನ ಪಂದ್ಯಗಳು ಮತ್ತು ಎರಡು ರೆಡ್-ಬಾಲ್ ಪಂದ್ಯಗಳನ್ನು ಆಡಲಿದೆ. ಈ ತಂಡದ ನಾಯಕತ್ವವನ್ನು ಯಶವರ್ಧನ್ ಸಿಂಗ್ ಚೌಹಾಣ್ ಅವರಿಗೆ ನೀಡಲಾಗಿದೆ. ಯಶ್ ವೈಟ್-ಬಾಲ್ ಮತ್ತು ರೆಡ್-ಬಾಲ್ ತಂಡಗಳೆರಡಕ್ಕೂ ನಾಯಕರಾಗಿರುತ್ತಾರೆ. ಲಕ್ಷ್ಯ ರಾಯ್‌ಚಂದಾನಿ ಎರಡೂ ತಂಡಗಳಿಗೆ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ. ಈ ಪ್ರವಾಸಕ್ಕಾಗಿ ಅನ್ವಯ್ ದ್ರಾವಿಡ್ ಅವರನ್ನು ಏಕದಿನ ತಂಡದಲ್ಲಿ ಮಾತ್ರ ಆಯ್ಕೆ ಮಾಡಲಾಗಿದ್ದು, ರೆಡ್-ಬಾಲ್ ಸರಣಿಗೆ ಆಯ್ಕೆ ಮಾಡಲಾಗಿಲ್ಲ.

ಏಕದಿನ ಸರಣಿಗೆ ಭಾರತ ತಂಡ: ಸಾಗರ್ ವಿರ್ಕ್, ಲಕ್ಷ ರಾಯಚಂದನಿ (ಉಪನಾಯಕ), ಯಶ್ಬರ್ಧನ್ ಸಿಂಗ್ ಚೌಹಾಣ್ (ನಾಯಕ), ವಿನೀತ್ ವಿ ಕೆ, ಅರ್ಜುನ್ ರಜಪೂತ್, ಕುಶಾಗ್ರಾ ಓಜಾ, ರಜತ್ ಬಘೇಲ್ (ವಿಕೆಟ್ ಕೀಪರ್), ಅನ್ವಯ್ ದ್ರಾವಿಡ್ (ವಿಕೆಟ್ ಕೀಪರ್), ಅನ್ಮೋಲ್ಜೀತ್ ಸಿಂಗ್, ವುಟ್ಕುರಿ ಯಶ್ವೀರ್ ಗೌಡ್, ರೋಹಿತ್ ಅನಿಲ್ ಯಾದವ್, ಶವಿನ್ ವಿ, ಕಾವ್ಯಾ ಪರೇಶ್ ಪಟೇಲ್, ಮೋಹಿತ್ ಉಲ್ವಾ, ಇಶಾನ್ ಸೂದ್

ರೆಡ್ ಬಾಲ್ ಸರಣಿಗೆ ಭಾರತ ತಂಡ: ಸಾಗರ್ ವಿರ್ಕ್, ಲಕ್ಷ ರಾಯಚಂದನಿ (ಉಪನಾಯಕ), ಯಶ್ಬರ್ಧನ್ ಸಿಂಗ್ ಚೌಹಾಣ್ (ನಾಯಕ), ಪಟೇಲ್ ಕುಶ್, ಮನಲ್ ಚೌಹಾಣ್, ಕುಶಾಗ್ರಾ ಓಜಾ, ಮಾನವ್ ಕೃಷ್ಣ (ವಿಕೆಟ್ ಕೀಪರ್), ಆರ್ಯನ್ ಸಂದೇಶ್ ಸಕ್ಪಾಲ್ (ವಿಕೆಟ್ ಕೀಪರ್), ಹೇಮಚುದೇಶನ್ ಜೆ, ಬಿ ಕೆ ಕಿಶೋರ್, ರೋಹಿತ್ ಅನಿಲ್ ಯಾದವ್, ಕಾವ್ಯಾ ಪರೇಶ್ ಪಟೇಲ್, ಪ್ರಿಯಾಂಶು ಸಿಂಗ್, ಪ್ರಣವ್ ರಾಘವೇಂದ್ರ, ಚಿಗುರುಪತಿ ವೆಂಕಟ

ಶ್ರೀಲಂಕಾ ಪ್ರವಾಸದ ಸಂಪೂರ್ಣ ವೇಳಾಪಟ್ಟಿ

  • ಮೊದಲನೇ ಏಕದಿನ ಪಂದ್ಯ: ಜುಲೈ 4, 2026, ಹಂಬಂಟೋಟ, ಬೆಳಿಗ್ಗೆ 10 ಗಂಟೆ
  • ಎರಡನೇ ಏಕದಿನ ಪಂದ್ಯ: ಜುಲೈ 6, 2026, ಹಂಬಂಟೋಟ, ಬೆಳಿಗ್ಗೆ 10 ಗಂಟೆ
  • ಮೂರನೇ ಏಕದಿನ ಪಂದ್ಯ: ಜುಲೈ 9, 2026, ಹಂಬಂಟೋಟ, ಬೆಳಿಗ್ಗೆ 10 ಗಂಟೆ

ರೆಡ್ ಬಾಲ್ ಸರಣಿ

  • ಮೊದಲ ಪಂದ್ಯ: ಜುಲೈ 13 ರಿಂದ 16, ಗಾಲೆ, ಬೆಳಿಗ್ಗೆ 10 ಗಂಟೆ
  • ಎರಡನೇ ಪಂದ್ಯ: ಜುಲೈ 20 ರಿಂದ 23, ಕೊಲಂಬೊ, ಬೆಳಿಗ್ಗೆ 10 ಗಂಟೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version