Headlines

IND vs SL: ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಜಸ್ಪ್ರೀತ್ ಬುಮ್ರಾ ಔಟ್ – Kannada News | Jasprit Bumrah Ruled Out of India Sri Lanka Test Series; Team India Faces Setback

ಭಾರತ ಹಾಗೂ ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಇದೇ ಆಗಸ್ಟ್ 15 ರಿಂದ ಆರಂಭವಾಗಲಿದೆ. ಈ ಸರಣಿಗಾಗಿ ಟೀಂ ಇಂಡಿಯಾ ಇನ್ನೇರಡು ದಿನಗಳಲ್ಲಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಏಕೆಂದರೆ ಈ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾ, ಶ್ರೀಲಂಕಾದ ಸ್ಥಳೀಯ ತಂಡದ ವಿರುದ್ಧ ಆಗಸ್ಟ್ 6 ರಿಂದ ಅಭ್ಯಾಸ ಪಂದ್ಯವನ್ನು ಆಡಲಿದೆ. ಈ ಸರಣಿಗಾಗಿ ಈಗಾಗಲೇ ತಂಡವನ್ನು ಸಹ ಪ್ರಕಟಿಸಲಾಗಿದೆ. ಈ ತಂಡದಲ್ಲಿ ವೇಗಿ ಜಸ್ಪ್ರೀತ್ ಬುಮ್ರಾರನ್ನು ಸಹ ಆಯ್ಕೆ ಮಾಡಲಾಗಿತ್ತು. ಆದರೆ ಇದೀಗ…

Read More

ದುಲೀಪ್ ಟ್ರೋಫಿಗೆ 4 ತಂಡಗಳು ಪ್ರಕಟ – Kannada News | Duleep Trophy 2026: 4 Regional Zone Squads Announced

ರಾಷ್ಟ್ರೀಯ ರೆಡ್-ಬಾಲ್ ಕ್ರಿಕೆಟ್ ಸೀಸನ್​ನ ಆರಂಭವನ್ನು ಸೂಚಿಸುವ ಪ್ರಸಿದ್ಧ ದುಲೀಪ್ ಟ್ರೋಫಿ ಟೂರ್ನಿಗೆ ಕೌಂಟ್‌ಡೌನ್ ಶುರುವಾಗಿದೆ. ಆರು ತಂಡಗಳ ನಡುವಣ ಈ ಕದನಕ್ಕಾಗಿ ಈಗಾಗಲೇ ನಾಲ್ಕು ತಂಡಗಳನ್ನು ಪ್ರಕಟಿಸಲಾಗಿದೆ. ಈ ನಾಲ್ಕು ವಲಯ ತಂಡಗಳಲ್ಲಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ… ವೆಸ್ಟ್ ಝೋನ್ (ಪಶ್ಚಿಮ ವಲಯ): ರುತುರಾಜ್ ಗಾಯಕ್ವಾಡ್ (ನಾಯಕ), ಶಮ್ಸ್ ಮುಲಾನಿ, ಪೃಥ್ವಿ ಶಾ, ಸರ್ಫರಾಝ್ ಖಾನ್, ಮುಶೀರ್ ಖಾನ್, ಶಾರ್ದೂಲ್ ಠಾಕೂರ್, ತನುಷ್ ಕೋಟ್ಯಾನ್, ತುಷಾರ್ ದೇಶಪಾಂಡೆ, ಹರ್ವಿಕ್ ದೇಸಾಯಿ, ಉರ್ವಿಲ್ ಪಟೇಲ್, ಶಿವಾಲಿಕ್…

Read More

ರಾಜಕೀಯಕ್ಕಿಂತ ರಾಜ್ಯದ ರೈತರು, ಜನರ ಹಿತ ಮುಖ್ಯ: ಸರ್ವಪಕ್ಷಗಳ ಸಭೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಅಭಿಮತ – Kannada News | CM DK Shivakumar Leads All Party Meet; Leaders Unite to Protect Karnataka’s Water Interests

ಬೆಂಗಳೂರು, ಆಗಸ್ಟ್​​ 02: ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ವಿವಾದವನ್ನು ಮೈಗೆ ಅಂಟಿಸಿಕೊಂಡೇ ಬೆಳೆದಿದ್ದೇವೆ. ರಾಜಕೀಯಕ್ಕಿಂತ ರಾಜ್ಯದ ರೈತರು, ಜನರ ಹಿತ ಮುಖ್ಯ ಎಂದು ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದಾರೆ. ರಾಜಕಾರಣವನ್ನು ಪಕ್ಕಕ್ಕಿಟ್ಟು ರಾಜ್ಯದ ಹಿತಕ್ಕಾಗಿ ಎಲ್ಲಾ ಪಕ್ಷಗಳೂ ಒಟ್ಟಿಗೇ ನಿಂತಿರುವ ಚರಿತ್ರೆ ನಮ್ಮ ರಾಜ್ಯಕ್ಕೆ ಇದೆ. ಕುಡಿಯುವ ನೀರಿಗೆ ಆದ್ಯತೆ ನೀಡಬೇಕು ಎಂಬುದು ನಮ್ಮ ನಿಲುವಾಗಿದ್ದು, ಇದಕ್ಕೆ ತಾವೆಲ್ಲರೂ ಸಹಮತ ಹೊಂದಿದ್ದೀರಿ ಅಂತಾ ಗೊತ್ತಿದೆ. CWRC,…

Read More

‘ಕಾವೇರಿ ನಮ್ಮ ಜನರನ್ನು ಬೆಸೆಯಲಿ, ವಿಭಜಿಸದಿರಲಿ’: ತಮಿಳುನಾಡು ಸಿಎಂ ವಿಜಯ್‌ಗೆ ಪತ್ರ ಬರೆದ ಬಿ.ವೈ. ವಿಜಯೇಂದ್ರ – Kannada News | BY Vijayendra Writes to Tamil Nadu CM Vijay Over Cauvery River Issue

ಬೆಂಗಳೂರು, ಆಗಸ್ಟ್ 02: ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಕಾವೇರಿ ನೀರು ಹಂಚಿಕೆ ಹಾಗೂ ಮೇಕೆದಾಟು ಯೋಜನೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರಿಗೆ ಮಹತ್ವದ ಪತ್ರ ಬರೆದಿದ್ದಾರೆ. “ಕಾವೇರಿ ನದಿ ಉಭಯ ರಾಜ್ಯಗಳ ಜನರನ್ನು ಬೆಸೆಯುವ ಕೊಂಡಿಯಾಗಬೇಕೇ ವಿನಃ ವಿಭಜಿಸುವ ಶಕ್ತಿಯಾಗಬಾರದು” ಎಂದು ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ. ಸೌಹಾರ್ದಯುತ ಮಾತುಕತೆಗೆ ವಿಜಯೇಂದ್ರ ಕರೆ Today, I wrote to the Hon’ble Chief Minister of…

Read More

ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’ ಪ್ರದರ್ಶನ – Kannada News | Cauvery Row Urvashi Theatre replaces Vijay starrer Jana Nayagan with Kannada Film Karavali

ಕರ್ನಾಟಕ ಮತ್ತು ತಮಿಳುನಾಡು ನಡುವೆ ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ವಿವಾದ ಹೆಚ್ಚಾಗಿದೆ. ಈ ಸಂದರ್ಭದಲ್ಲಿ ತಮಿಳುನಾಡು ಸಿಎಂ ವಿಜಯ್ ನಟನೆಯ ‘ಜನ ನಾಯಗನ್’ (Jana Nayagan) ಸಿನಿಮಾದ ಪ್ರದರ್ಶನಕ್ಕೆ ಕರ್ನಾಟಕದಲ್ಲಿ ವಿರೋಧ ವ್ಯಕ್ತವಾಗಿದೆ. ಜನಾಕ್ರೋಶದ ಬಳಿಕ ಹಲವು ಚಿತ್ರಮಂದಿರಗಳಲ್ಲಿ ಈ ಸಿನಿಮಾದ ಪ್ರದರ್ಶನವನ್ನು ನಿಲ್ಲಿಸಲಾಗಿದೆ. ಬೆಂಗಳೂರಿನ ಪ್ರಸಿದ್ಧ ‘ಊರ್ವಶಿ’ ಚಿತ್ರಮಂದಿರದಲ್ಲಿ ಕೂಡ ‘ಜನ ನಾಯಗನ್’ ಬದಲಿಗೆ ಕನ್ನಡದ ‘ಕರಾವಳಿ’ ಸಿನಿಮಾವನ್ನು ಪ್ರದರ್ಶಿಸಲಾಗುತ್ತಿದೆ. ಕಳೆದ ಒಂದು ವಾರದಿಂದ ‘ಊರ್ವಶಿ’ ಥಿಯೇಟರ್​ನಲ್ಲಿ ‘ಜನ ನಾಯಗನ್’ ಪ್ರದರ್ಶನ ಕಾಣುತ್ತಿತ್ತು….

Read More

ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ, ಅರಾಜಕತೆಗಲ್ಲ: ನೀಟ್ ಪ್ರತಿಭಟನೆಗಳ ಕುರಿತು ಸ್ಮೃತಿ ಇರಾನಿ ಖಡಕ್ ಹೇಳಿಕೆ – Kannada News | Smriti Irani on NEET Protests: Right to Dissent, Not Anarchy Govt’s Firm Stance on Reforms

ನವದೆಹಲಿ, ಆಗಸ್ಟ್ 02: ನೀಟ್ (NEET-UG) ಪರೀಕ್ಷಾ ಅಕ್ರಮ ಖಂಡಿಸಿ ನಡೆದ ಪ್ರತಿಭಟನೆಗಳು ಜೆನ್​ ಝಿ (Gen-Z) ಯುವಜನತೆ ಹಾಗೂ ನರೇಂದ್ರ ಮೋದಿ ಸರ್ಕಾರದ ನಡುವಿನ ಬಿರುಕನ್ನು ತೋರಿಸುತ್ತವೆ ಎಂಬ ವಾದಗಳನ್ನು ಮಾಜಿ ಕೇಂದ್ರ ಶಿಕ್ಷಣ ಸಚಿವೆ ಮತ್ತು ಬಿಜೆಪಿ ಹಿರಿಯ ನಾಯಕಿ ಸ್ಮೃತಿ ಇರಾನಿ ತೀವ್ರವಾಗಿ ತಳ್ಳಿಹಾಕಿದ್ದಾರೆ. ಪರೀಕ್ಷಾ ಪೇಪರ್ ಸೋರಿಕೆ ತಡೆಯಲು ಕೇಂದ್ರ ಸರ್ಕಾರವು ತಕ್ಷಣವೇ ಹಾಗೂ ಅತ್ಯಂತ ನಿರ್ಣಾಯಕವಾಗಿ ಕಾನೂನಾತ್ಮಕ ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ. ‘ಇಂಡಿಯಾ ಟುಡೇ’ಗೆ ನೀಡಿದ ವಿಶೇಷ…

Read More

EPFO rules: 2-3 ವರ್ಷ ಕೆಲಸ ಇಲ್ಲದಿದ್ದಾಗ ಹಳೆಯ ಇಪಿಎಫ್ ಖಾತೆ ಏನಾಗುತ್ತದೆ? – Kannada News | What happens to EPF account after being unemployed for 3 years, here are few EPFO rules

ಉನ್ನತ ಶಿಕ್ಷಣ, ಕುಟುಂಬದ ಜವಾಬ್ದಾರಿ, ಆರೋಗ್ಯ ಸಮಸ್ಯೆಗಳು, ನಿರುದ್ಯೋಗ ಇತ್ಯಾದಿ ಕಾರಣಗಳಿಂದಾಗಿ ಜನರು ಕೆಲಸದಿಂದ ಕೆಲ ತಿಂಗಳು, ವರ್ಷಗಳು ಹೊರಗಿರುವುದು ಸಾಮಾನ್ಯ. ಈ ಸಂದರ್ಭದಲ್ಲಿ ಇಪಿಎಫ್ ಖಾತೆಯ (EPF) ಹಣ ಏನಾಗುತ್ತದೆ ಎಂಬ ಆತಂಕ ಹಲವರಲ್ಲಿರುತ್ತದೆ. ಹಾಗೆಯೇ, ಕೆಲಸ ಬದಲಿಸಿದಾಗ ಹಳೆಯ ಪಿಎಫ್ ಅಕೌಂಟ್ ಏನಾಗುತ್ತದೆ? ಭವಿಷ್ಯ ನಿಧಿ ಸಂಸ್ಥೆಯ ವೆಬ್​ಸೈಟ್​ನಲ್ಲಿ ನೀಡಲಾಗಿರುವ ಮಾಹಿತಿ ಪ್ರಕಾರ, ಪಿಎಫ್ ಅಕೌಂಟ್ ನಿಷ್ಕ್ರಿಯವಾಗಿದ್ದರೂ ಸಮಸ್ಯೆ ಇರುವುದಿಲ್ಲ. ನೀವು ಕೆಲಸವನ್ನು ನಿಲ್ಲಿಸಿದ ತಕ್ಷಣ ನಿಮ್ಮ EPF ಖಾತೆ ಮುಚ್ಚಿಹೋಗುವುದಿಲ್ಲ. ನಿಮ್ಮ ಖಾತೆಯಲ್ಲಿರುವ…

Read More

ಪ್ರವಾಹ ಸಂತ್ರಸ್ತರ ನೆರವಿಗೆ ನಿಂತ RCB ಮಾಲಕಿ: ವಿಡಿಯೋ ವೈರಲ್! – Kannada News | RCB Co Owner Ananya Birla Wins Hearts with On Ground Flood Relief in Assam

ಅಸ್ಸಾಂ ರಾಜ್ಯವು ಈ ವರ್ಷ ಭೀಕರ ಪ್ರವಾಹ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಲಕ್ಷಾಂತರ ಜನರ ಬದುಕು ತಲ್ಲಣಗೊಂಡಿದೆ. ಇಂತಹ ಕಷ್ಟದ ಸಮಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸಹ-ಮಾಲಕಿ ಹಾಗೂ ಉದ್ಯಮಿ ಅನನ್ಯಾ ಬಿರ್ಲಾ ನೆರವಿನ ಹಸ್ತ ಚಾಚಿದ್ದಾರೆ. ರಂಗಕ್ಕಿಳಿದ ಬಿರ್ಲಾ ಫೌಂಡೇಶನ್: ಅನನ್ಯಾ ಬಿರ್ಲಾ ಅವರು ತಮ್ಮ ‘ಅನನ್ಯಾ ಬಿರ್ಲಾ ಫೌಂಡೇಶನ್’ ಮೂಲಕ ಸ್ಥಳೀಯ ಸಂಸ್ಥೆಗಳೊಂದಿಗೆ ಕೈಜೋಡಿಸಿ ದೊಡ್ಡ ಮಟ್ಟದ ಪರಿಹಾರ ಅಭಿಯಾನವನ್ನು ಕೈಗೆತ್ತಿಕೊಂಡಿದ್ದಾರೆ. ಕೇವಲ ಹಣಕಾಸಿನ ನೆರವು ನೀಡುವುದಷ್ಟೇ ಅಲ್ಲದೆ, ಪ್ರವಾಹದಿಂದ ತತ್ತರಿಸಿರುವ ಜೋರ್ಹತ್…

Read More

CIMS Recruitment 2026: ವೈದ್ಯಕೀಯ ವೃತ್ತಿಪರರಿಗೆ ಸಿಹಿ ಸುದ್ದಿ; ಚಾಮರಾಜನಗರ CIMS ನಲ್ಲಿ 49 ಹುದ್ದೆಗಳಿಗೆ ಅರ್ಜಿ ಆಹ್ವಾನ! – Kannada News | CIMS Recruitment 2026: Apply Offline for 49 Teaching and Medical Officer Posts in Karnataka

ವೈದ್ಯಕೀಯ ವೃತ್ತಿಪರರಿಗೆ ಸಿಹಿ ಸುದ್ದಿ ಕರ್ನಾಟಕ ಸರ್ಕಾರದಿಂದ ವೈದ್ಯರಿಗೆ ಇಲ್ಲಿದೆ ಸುವರ್ಣಾವಕಾಶ. ವೈದ್ಯಕೀಯ ವೃತ್ತಿಯಲ್ಲಿರುವ ಅಭ್ಯರ್ಥಿಗಳಿಗೆ ಹಾಗೂ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಉನ್ನತ ವೃತ್ತಿಜೀವನ ಕಟ್ಟಿಕೊಳ್ಳಲು ಬಯಸುವವರಿಗೆ ಕರ್ನಾಟಕ ಸರ್ಕಾರವು ಅತ್ಯುತ್ತಮ ಉದ್ಯೋಗಾವಕಾಶ ಒಂದನ್ನು ನೀಡಿದೆ. ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು (CIMS) ಖಾಲಿ ಇರುವ ಬೋಧಕ ಸಿಬ್ಬಂದಿ ಹಾಗೂ ವೈದ್ಯಾಧಿಕಾರಿ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ವಿವಿಧ ವಿಭಾಗಗಳಲ್ಲಿ ಒಟ್ಟು 49 ಹುದ್ದೆಗಳ ಭರ್ತಿ: ಚಾಮರಾಜನಗರ CIMS…

Read More

ಪುಟಿನ್ ಅಮರತ್ವದ ಕನಸು ನನಸಾಗಲಿದೆಯೇ?: ವಯಸ್ಸಾಗುವುದನ್ನು ತಡೆಯಲು ಜೀನ್ ಥೆರಪಿ

ಮಾಸ್ಕೋ, ಆಗಸ್ಟ್​ 02: ಮನುಷ್ಯರು ಎಂದಾದರೂ ಅಮರರಾಗಲು ಅಥವಾ ತಮ್ಮ ಜೀವಿತಾವಧಿಯನ್ನು ದ್ವಿಗುಣಗೊಳಿಸಲು ಸಾಧ್ಯವೇ? ಈ ಜಾಗತಿಕ ಪ್ರಶ್ನೆಗೆ ರಷ್ಯಾದ ಪ್ರಸಿದ್ಧ ‘ಸ್ಕೋಲ್ಕೊವೊ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ’ಯ ವಿಜ್ಞಾನಿಗಳು ಧನಾತ್ಮಕ ಉತ್ತರ ಕಂಡುಕೊಂಡಿದ್ದಾರೆ. ಗಣಿತದ ಮಾದರಿಗಳು ಮತ್ತು ಡಿಎನ್‌ಎ ತಂತ್ರಜ್ಞಾನವನ್ನು ಆಧರಿಸಿ ನಡೆಸಿರುವ ನೂತನ ಸಂಶೋಧನೆಯ ಪ್ರಕಾರ, ಮಾನವನ ಜೀವಿತಾವಧಿಯನ್ನು ಕನಿಷ್ಠ 194 ವರ್ಷಗಳವರೆಗೆ ವಿಸ್ತರಿಸಲು ಸಾಧ್ಯ ಎಂದು ವಿಜ್ಞಾನಿಗಳು ಪ್ರತಿಪಾದಿಸಿದ್ದಾರೆ. ಈ ಸಂಶೋಧನಾ ವರದಿಯು ಪ್ರಸಿದ್ಧ ‘NPG ಏಜಿಂಗ್’ ವೈಜ್ಞಾನಿಕ ಜರ್ನಲ್‌ನಲ್ಲಿ ಪ್ರಕಟಗೊಂಡ ಬೆನ್ನಲ್ಲೇ…

Read More