ಮರ್ಯಾದಾ ಹತ್ಯೆ ಭೀತಿ; ತಂದೆಯಿಂದ ರಕ್ಷಣೆ ಕೋರಿ ಮಗಳಿಂದಲೇ ಹೈಕೋರ್ಟ್ಗೆ ಅರ್ಜಿ! – Kannada News | Bengaluru Woman Seeks High Court Protection from Father Over Forced Marriage and Honor Killing Fear
ಬೆಂಗಳೂರು, ಏಪ್ರಿಲ್ 21: ತನ್ನ ಒಪ್ಪಿಗೆಯಿಲ್ಲದೆ ನಿಶ್ಚಯ ಮಾಡಿರುವ ಮದುವೆಯನ್ನು ಬೇಡ ಎಂದಿದ್ದಕ್ಕೆ ಮರ್ಯಾದಾ ಹತ್ಯೆ ಭೀತಿಯಿಂದ ಬೆಂಗಳೂರಿನ ಯುವತಿ ತಂದೆಯಿಂದ ರಕ್ಷಣೆ ಕೋರಿ ಹೈಕೋರ್ಟ್ (High Court) ಮೆಟ್ಟಿಲೇರಿದ್ದಾಳೆ. ವೈಟ್ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿರುವ ಕಾಜಲ್ ರಾಜಪುರೋಹಿತ್ ಎಂಬ ಯುವತಿ, ತನ್ನ ತಂದೆ ಅಶೋಕ್ ರಾಜಪುರೋಹಿತ್ ವಿರುದ್ಧ ರಿಟ್ ಅರ್ಜಿ ಸಲ್ಲಿಸಿದ್ದಾಳೆ. ಮದುವೆ ಬೇಡ ಎಂದರೂ ತಂದೆಯ ಬಲವಂತ, ಮದುವೆಗೆ ತಯಾರಿ! ಕಳೆದ ಎರಡು ವರ್ಷಗಳಿಂದ ಉದ್ಯೋಗದಲ್ಲಿರುವ ಯುವತಿಗೆ ಮದುವೆಯ ಮೇಲೆ ಆಸಕ್ತಿಯಿರಲಿಲ್ಲ. ತನ್ನ ಅಕ್ಕನಿಗೂ…