ಶಿಕ್ಷಣ ಇಲಾಖೆಯಲ್ಲಿ ಸರ್ಜರಿ: 5 ವರ್ಷ ಮೇಲ್ಪಟ್ಟ ನೌಕರರಿಗೆ ಕಡ್ಡಾಯ ವರ್ಗಾವಣೆ; ಡೆಡ್‌ಲೈನ್ ಸಹ ಫಿಕ್ಸ್! – Kannada News | Major Reshuffle in Karnataka Education Department: Mandatory Transfer for Employees Serving Over 5 Years, Deadline Fixed

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಧಾರವಾಡ, ಮೇ 18: ರಾಜ್ಯದಲ್ಲಿನ (Karnataka) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮುಖ್ಯಸ್ಥರುಗಳ ಕಚೇರಿಯಲ್ಲಿ ಬೀಡುಬಿಟ್ಟಿರುವ ನೌಕರರನ್ನು ಬದಲಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ. 5 ವರ್ಷಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿದವರ ಪಟ್ಟಿ ಸಿದ್ಧಪಡಿಸಿ ಮೇ 28ರೊಳಗಾಗಿ ಕಡ್ಡಾಯ ವರ್ಗಾವಣೆಗೆ (transfer) ಸೂಚಿಸುವ ಮೂಲಕ ಶಿಕ್ಷಣ ಇಲಾಖೆ ದಿಟ್ಟ ಹೆಜ್ಜೆ ಇಟ್ಟಿದೆ. ಹೀಗಾಗಿ ಧಾರವಾಡ ಆಯುಕ್ತಾಲಯ ವ್ಯಾಪ್ತಿಯ ಬರೋಬ್ಬರಿ 1,026 ಬೋಧಕೇತರ ನೌಕರರಿಗೆ ಈಗ…

Read More

Video: ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್ – Kannada News | Chaos in Westwood: U Haul Plows Into Crowd at Anti Iran Regime Rally in Los Angeles

ವಾಷಿಂಗ್ಟನ್, ಜನವರಿ 12: ಇರಾನ್‌ನಲ್ಲಿ ನಡೆಯುತ್ತಿರುವ ದೊಡ್ಡ ಪ್ರಮಾಣದ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಇದುವರೆಗೆ 500 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಕ್ರಮ ಕೈಗೊಳ್ಳುವಂತೆ ನಿರಂತರವಾಗಿ ಎಚ್ಚರಿಕೆ ನೀಡುತ್ತಿದ್ದಾರೆ. ಏತನ್ಮಧ್ಯೆ, ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಅಪಘಾತವೊಂದು ಸಭವಿಸಿದೆ. ಇರಾನ್‌ನ ಗಡಿಪಾರುಗೊಂಡ ರಾಜಕುಮಾರ ಮೊಹಮ್ಮದ್ ರೆಜಾ ಪಹ್ಲವಿ ಅವರ ಬೆಂಬಲಿಗರು ಇರಾನ್‌ನಲ್ಲಿ ನಡೆಯುತ್ತಿರುವ ಪ್ರತಿಭಟನಾಕಾರರನ್ನು ಬೆಂಬಲಿಸಿ ಬೀದಿಗಿಳಿದಾಗ ಈ ಘಟನೆ ಸಂಭವಿಸಿದೆ. ಟ್ರಕ್ ಮೆರಣಿಗೆಯಲ್ಲಿ ಪಾಲ್ಗಂಡಿದ್ದ ಜನರ ಮೇಲೆ ಹರಿದಿದೆ….

Read More

AI Impact Summit: ಎಐ ಪ್ರಯೋಜನ ಪಡೆಯುವುದರ ಜತೆ ಅದರಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್ – Kannada News | Ashwini Vaishnaw Calls for Collective Action to Tackle AI Risks at India AI Impact Summit 2026

ನದೆಹಲಿ, ಫೆಬ್ರವರಿ 19:ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಎಐ ಇಂಪ್ಯಾಕ್ಟ್​ ಶೃಂಗಸಭೆ ಆರಂಭಗೊಂಡಿದೆ. ವಿಶ್ವದ ಅನೇಕ ನಾಯಕುಗಳು ಈ ಶೃಂಗಸಭೆಗೆ ಸಾಕ್ಷಿಯಾಗಿದ್ದಾರೆ. ಈ ಸದರ್ಭದಲ್ಲಿ ಕೇಂದ್ರಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, ಎಐನಿಂದ ಪ್ರಯೋನ ಪಡೆಯುವುದರ ಜತೆ ಅದರಿಂದಾಗುವ ಅಪಾಯಗಳ ತಗ್ಗಿಸುವ ಉಪಾಯವನ್ನು ಕೂಡ ಕಂಡುಕೊಳ್ಳಬೇಕೆಂದರು. ತಂತ್ರಜ್ಞಾನದ ಿಜಾದ ಮೌಲ್ಯವು ಸಮಾಜದ ಕಟ್ಟ ಕಡೆಯ ವ್ಯಕ್ತಿಯವರೆಗೆ ತಲುಪುವುದರಲ್ಲಿದೆ. ತಂತ್ರಜ್ಞಾನವನ್ನು ಪ್ರಜಾಪ್ರಭುತ್ವಗೊಳಿಸುವುದು, ಅದನ್ನು ದೊಡ್ಡ ಪ್ರಮಾಣದಲ್ಲಿ ಕಾರ್ಯಗತಗೊಳಿಸುವುದು ಮತ್ತು ಅದನ್ನು ಎಲ್ಲರಿಗೂ ಲಭ್ಯವಾಗುವಂತೆ ಮಾಡುವುದು ಸರ್ಕಾರದ ದೃಷ್ಟಿಕೋನವಾಗಿದೆ ಎಂದು ಅವರು…

Read More

ಬೆಂಗಳೂರು ವಿಶಾಖಪಟ್ಟಣ ವಿಶೇಷ ರೈಲು ಅವಧಿ ವಿಸ್ತರಣೆ: ಇನ್ಮುಂದೆ ನಾಯಂಡಹಳ್ಳಿಯಲ್ಲಿ ಈ 4 ರೈಲುಗಳಿಗೆ ಇರುತ್ತೆ ನಿಲುಗಡೆ – Kannada News | Bengaluru–Visakhapatnam Special Train Extended Till March 30; Four Trains Get Halt at Nayandahalli

ಬೆಂಗಳೂರು, ಫೆಬ್ರವರಿ 16: ಹೋಳಿ ಹಬ್ಬದ (Holi Festival) ಹಿನ್ನೆಲೆ ಹೆಚ್ಚುವರಿ ಪ್ರಯಾಣಿಕರ ದಟ್ಟಣೆ ನಿವಾರಣೆಗೆ ಭಾರತೀಯ ರೈಲ್ವೆ (Indian Railways) ಮಹತ್ವದ ಕ್ರಮ ಕೈಗೊಂಡಿದೆ. ವಿಶಾಖಪಟ್ಟಣ ಮತ್ತು ಎಸ್​ಎಂವಿಟಿ ಬೆಂಗಳೂರು ನಡುವೆ ಸಂಚರಿಸುವ ವಿಶೇಷ ರೈಲು ಸೇವೆಯ ಅವಧಿಯನ್ನು ವಿಸ್ತರಿಸಿದೆ. ರೈಲು ಸಂಖ್ಯೆ 08581 ಬೆಂಗಳೂರು ಕಡೆಗೆ ಬರುವ ವಿಶಾಖಪಟ್ಟಣಂ–ಎಸ್‌ಎಂವಿಟಿ ಬೆಂಗಳೂರು ವಾರಾಂತ್ಯ ಎಕ್ಸ್‌ಪ್ರೆಸ್‌ (ಭಾನುವಾರ ಸಂಚಾರ) ಅನ್ನು ಮಾರ್ಚ್ 29ರವರೆಗೆ ವಿಸ್ತರಿಸಲಾಗಿದೆ. ಅದೇ ರೀತಿ ರೈಲು ಸಂಖ್ಯೆ 08582 ಎಸ್‌ಎಂವಿಟಿ ಬೆಂಗಳೂರು–ವಿಶಾಖಪಟ್ಟಣಂ ವಾರಾಂತ್ಯ ಎಕ್ಸ್‌ಪ್ರೆಸ್‌…

Read More

ಎರಡೂ ಕಾಲು ಕತ್ತರಿಸಿದ್ದ ಸಿಪಿಐಂ ಕ್ರೌರ್ಯವನ್ನು ರಾಜ್ಯಸಭೆಯಲ್ಲಿ ವಿವರಿಸಿದ್ದ ಸದಾನಂದನ್ ಮಾಸ್ಟರ್​ಗೆ ಪ್ರಧಾನಿ ಮೋದಿ ಮೆಚ್ಚುಗೆ – Kannada News | PM Modi Writes Appreciation Letter to Rajya Sabha MP C Sadanandan Master After Maiden Speech on 1994 CPIM Attack

ಸದಾನಂದನ್ ಮಾಸ್ಟರ್​, ಪ್ರಧಾನಿ ಮೋದಿImage Credit source: TV9 Network ನವದೆಹಲಿ, ಫೆಬ್ರವರಿ 7: ರಾಜ್ಯಸಭೆಯಲ್ಲಿ (Rajya Sabha) ಚೊಚ್ಚಲ ಭಾಷಣದ ಮೂಲಕ ಗಮನ ಸೆಳೆದ ಕೇರಳದ ಬಿಜೆಪಿ ಸದಸ್ಯ ಸಿ. ಸದಾನಂದನ್ ಮಾಸ್ಟರ್ (C.Sadanandan Master) ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ (Narendra Modi), ಪತ್ರ ಬರೆದು ಅಭಿನಂದಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾಡಿದ ಭಾಷಣದಲ್ಲಿ 1994ರ ಜನವರಿ 25ರಂದು ಸಿಪಿಐಎಂ ಕಾರ್ಯಕರ್ತರಿಂದ ನಡೆದ ಹಲ್ಲೆ ಹಾಗೂ ಅದರಿಂದ ಕಾಲು ಕಳೆದುಕೊಂಡ ಘಟನೆ ಕುರಿತು ಮನಕಲಕುವಂತೆ…

Read More

2 ಮುಹೂರ್ತ ಮಿಸ್, ಈ ಬಾರಿ ತಪ್ಪಲ್ಲ: ಯತೀಂದ್ರಗೆ ಡಿಕೆಶಿ ಆಪ್ತರ ಟಾಂಗ್ – Kannada News | Karnataka Congress Power Struggle: DK Shivakumar Camp Hits Back After Yathindra’s ‘5 Years CM’ Statement

ಡಿಕೆ ಶಿವಕುಮಾರ್, ಸಿದ್ದರಾಮಯ್ಯImage Credit source: tv9 ಬೆಂಗಳೂರು, ಫೆಬ್ರವರಿ 7: ಕಾಂಗ್ರೆಸ್​ನಲ್ಲಿ (Congress) ಅಧಿಕಾರದ ಪಗಟೆಯಾಟ ನಿಂತಿಲ್ಲ. ಗದ್ದುಗೆ ಏರಲು ಒಂದು ಬಣ ರಣತಂತ್ರ ಹೆಣೆಯುತ್ತಿದ್ದರೆ, ಪಟ್ಟ ಬಿಟ್ಟುಕೊಡದಿರಲು ಮತ್ತೊಂದು ಬಣ ಪಟ್ಟು ಹಿಡಿದು ಕುಳಿತಿದೆ. ಇದರ ಮಧ್ಯೆ ಸಿಎಂ ಸಿದ್ದರಾಮಯ್ಯ (Siddaramaiah) ಪುತ್ರ ಯತೀಂದ್ರ ಆಡಿದ ಮಾತು ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಕಿಚ್ಚು ಹೊತ್ತಿಸಿದೆ. ಮೈಸೂರಿನಲ್ಲಿ ಮಾತನಾಡಿದ ಯತೀಂದ್ರ, 5 ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಎಂದಿದ್ದಾರೆ. ಯತೀಂದ್ರ ಮತ್ತೆ ಈ ಮಾತು ಹೇಳುವುದಕ್ಕೂ ಕಾರಣವಿದೆ….

Read More

‘ಅಣ್ಣಯ್ಯ’ ಸೀರಿಯಲ್ ನಟ ವಿಕಾಶ್ ಹೊಸ ಸಿನಿಮಾ ‘ಪಾರ್ಥನ್ ಪರಪಂಚ’ – Kannada News | Vikash Uthaiah new movie Parthan Parapancha shooting in Bengaluru

ಕಿರುತೆರೆಯ ‘ಅಣ್ಣಯ್ಯ’ ಸೀರಿಯಲ್ ಮೂಲಕ ಖ್ಯಾತಿ ಪಡೆದ ನಟ ವಿಕಾಶ್ ಉತ್ತಯ್ಯ (Vikash Uthaiah) ಅವರು ಈಗ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರು ನಟಿಸುತ್ತಿರುವ ‘ಪಾರ್ಥನ್ ಪರಪಂಚ’ (Parthan Parapancha) ಸಿನಿಮಾಗೆ ಚಿತ್ರೀಕರಣ ನಡೆಯುತ್ತಿದೆ. ಇದೊಂದು ಕೋರ್ಟ್ ಹಾಲ್ ಡ್ರಾಮಾ ಸಿನಿಮಾ. ಶ್ರೀಹರ್ಷ ಎಂ.ಎನ್. ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ‘ಸಿರಿ ಸಿನಿಮಾಸ್’ ಮೂಲಕ ಸೀತಾ ಹರ್ಷವರ್ಧನ್ ಅವರು ನಿರ್ಮಾಣ‌‌ ಮಾಡುತ್ತಿದ್ದಾರೆ. ವಿಕಾಶ್ ಜೊತೆ ಮಂದಾರ, ರಂಗಾಯಣ ರಘು, ಅಮಿತ್, ಸಂಪತ್ ಮೈತ್ರೇಯ ಮುಖ್ಯ…

Read More

IPL 2026: ಐಪಿಎಲ್ RAPP ಲಿಸ್ಟ್ ಪ್ರಕಟ: 1,307 ಆಟಗಾರರಿಗೆ ಸ್ಥಾನ – Kannada News | BCCI Announced The RAPP sheet For IPL 2026

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026)​ ಮಿನಿ ಹರಾಜಿಗಾಗಿ ಬರೋಬ್ಬರಿ 1390 ಆಟಗಾರರು ಹೆಸರು ನೊಂದಾಯಿಸಿಕೊಂಡಿದ್ದರು. ಈ 1390 ಆಟಗಾರರಲ್ಲಿ ಹರಾಜಿಗೆ ಆಯ್ಕೆಯಾಗಿದ್ದು ಕೇವಲ 359 ಆಟಗಾರರು ಮಾತ್ರ. ಇವರಲ್ಲಿ 77 ಆಟಗಾರರನ್ನು ಮಾತ್ರ ಖರೀದಿಸಲಾಗಿತ್ತು. ಅಂದರೆ ಬರೋಬ್ಬರಿ 1313 ಆಟಗಾರರು ಅವಕಾಶ ವಂಚಿತರಾಗಿದ್ದರು. ಇದೀಗ ಅವಕಾಶ ವಂಚಿತರಾದ ಆಟಗಾರರ ಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. ಅದು ಕೂಡ RAPP ಲಿಸ್ಟ್​ನಲ್ಲಿ ಎಂಬುದು ವಿಶೇಷ. ಏನಿದು RAPP ಲಿಸ್ಟ್​? RAPP ಲಿಸ್ಟ್ ಎಂದರೆ ರಿಜಿಸ್ಟರ್ ಅವೇಲೇಬಲ್…

Read More

IPL 2026: ನಿನ್ನ ಮುಖ ತೋರಿಸಬೇಡ… ಕಾರಣವೇನು? – Kannada News | PBKS vs LSG Viral Moment: Shreyas Iyer hiding the face of Shashank Singh

ಐಪಿಎಲ್​ನ 29ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಭರ್ಜರಿ ಜಯ ಸಾಧಿಸಿದರೂ, ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಚರ್ಚೆಯಾಗುತ್ತಿರುವುದು ಪಂದ್ಯದ ನಂತರ ನಡೆದ ಒಂದು ತಮಾಷೆಯ ಘಟನೆ. ಪಂಜಾಬ್ ಕಿಂಗ್ಸ್​ ತಂಡದ ನಾಯಕ ಶ್ರೇಯಸ್ ಅಯ್ಯರ್ ತನ್ನ ಸಹ ಆಟಗಾರ ಶಶಾಂಕ್ ಸಿಂಗ್ ಅವರ ಮುಖವನ್ನು ಕ್ಯಾಮೆರಾ ಮತ್ತು ಕೋಚ್‌ನಿಂದ ಮರೆಮಾಚಲು ಪ್ರಯತ್ನಿಸಿದ ವಿಡಿಯೋ ಈಗ ವೈರಲ್ ಆಗಿದೆ. ಕಾರಣವೇನು? ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ದೊಡ್ಡ ಮೊತ್ತ ಪೇರಿಸಿದರೂ, ಫೀಲ್ಡಿಂಗ್ ವಿಷಯದಲ್ಲಿ ಶಶಾಂಕ್…

Read More

ಎಲ್ಲಾ ಪಂದ್ಯಗಳನ್ನು ಗೆದ್ದರೂ ಆಸ್ಟ್ರೇಲಿಯಾ ಇನ್ನೂ ಕೂಡ ಸೆಮಿಫೈನಲ್​ಗೇರಿಲ್ಲ! – Kannada News | Why Australia Women Haven’t Sealed Semis Spot Yet

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026 ರಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡವು ಭರ್ಜರಿ ಪ್ರದರ್ಶನ ಮುಂದುವರಿಸಿದೆ. ಆಡಿದ ನಾಲ್ಕೂ ಪಂದ್ಯಗಳನ್ನು ಗೆಲುವು ದಾಖಲಿಸಿರುವ ಆಸೀಸ್ ಪಡೆ ಒಟ್ಟು 8 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಇದಾಗ್ಯೂ ಆಸ್ಟ್ರೇಲಿಯಾ ತಂಡ ಅಧಿಕೃತವಾಗಿ ಸೆಮಿಫೈನಲ್​ಗೇರಿಲ್ಲ ಎಂಬುದು ವಿಶೇಷ. ಸತತ ನಾಲ್ಕು ಪಂದ್ಯಗಳನ್ನು ಗೆದ್ದು, +4.724 ರಷ್ಟು ಬೃಹತ್ ನೆಟ್ ರನ್ ರೇಟ್ ಹೊಂದಿದ್ದರೂ ಸಹ ಆಸೀಸ್ ಪಡೆಯ ಸೆಮಿಫೈನಲ್​ ಎಂಟ್ರಿ ಖಚಿತವಾಗದಿರಲು ಮುಖ್ಯ ಕಾರಣ ಈ ಕೆಳಗಿನಂತಿದೆ. ಸೆಮಿಫೈನಲ್​ಗೇರಿಲ್ಲ ಯಾಕೆ?…

Read More