Headlines

ರಜನೀಕಾಂತ್ ಸಿನಿಮಾ: ಮೂರನೇ ಬಾರಿ ನಿರ್ದೇಶಕ ಬದಲು – Kannada News | Rajinikanth 173 movie director changed again

ರಜನೀಕಾಂತ್ (Rajinikanth) ಸಿನಿಮಾ ನಿರ್ಮಿಸಲು, ನಿರ್ದೇಶಿಸಲು ಜನ ಸಾಲು ಗಟ್ಟಿ ನಿಂತಿದ್ದಾರೆ. ಆದರೆ ಯಾಕೋ ರಜನೀಕಾಂತ್ ಅವರ ಹೊಸ ಸಿನಿಮಾಕ್ಕೆ ನಿರ್ದೇಶಕರುಗಳೇ ಸೆಟ್ ಆಗುತ್ತಿಲ್ಲ. ರಜನೀಕಾಂತ್ ಪ್ರಸ್ತುತ ‘ಜೈಲರ್ 2’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಅದಾದ ಬಳಿಕ ಕಮಲ್ ಹಾಸನ್ ಜೊತೆಗೆ ಹೊಸದೊಂದು ಸಿನಿಮಾನಲ್ಲಿ ನಟಿಸಲಿದ್ದಾರೆ. ಅದಾದ ಬಳಿಕ ಅವರ 173ನೇ ಸಿನಿಮಾ ಸೆಟ್ಟೇರಲಿಕ್ಕಿದೆ. ಈಗ ಸಮಸ್ಯೆ ಆಗಿರುವುದು ಇದೇ ಸಿನಿಮಾಕ್ಕೆ. ಈಗಾಗಲೇ ಎರಡು ನಿರ್ದೇಶಕರನ್ನು ಬದಲಾಯಿಸಲಾಗಿತ್ತು. ಈಗ ಮೂರನೇ ನಿರ್ದೇಶಕರೂ ಸಹ ಸಿನಿಮಾದಿಂದ ಹೊರನಡೆದಿದ್ದಾರೆ. ರಜನೀಕಾಂತ್ ಅವರ…

Read More

CBSE 10 Second Board Exam: CBSE 10ನೇ ತರಗತಿ ಎರಡನೇ ಬಾರಿಯ ಬೋರ್ಡ್ ಪರೀಕ್ಷಾ ವೇಳಾಪಟ್ಟಿ ಪ್ರಕಟ; ಮೇ 15ರಿಂದ ಪರೀಕ್ಷೆ ಆರಂಭ – Kannada News | CBSE Class 10th 2026 Second Board Exam Date Sheet Released: May 15 21 Schedule

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (CBSE) 2026ರ ಸಾಲಿನ 10ನೇ ತರಗತಿಯ ಎರಡನೇ ಬಾರಿಯ ಬೋರ್ಡ್ ಪರೀಕ್ಷೆಯ ದಿನಾಂಕ ಪಟ್ಟಿಯನ್ನು (Date Sheet) ಅಧಿಕೃತವಾಗಿ ಬಿಡುಗಡೆ ಮಾಡಿದೆ. ಮೊದಲ ಪ್ರಯತ್ನದಲ್ಲಿ ಅಂಕಗಳನ್ನು ಸುಧಾರಿಸಿಕೊಳ್ಳಲು ಬಯಸುವ ಅಥವಾ ಪರೀಕ್ಷೆಯಲ್ಲಿ ಹಿನ್ನಡೆ ಅನುಭವಿಸಿದ ವಿದ್ಯಾರ್ಥಿಗಳಿಗೆ ಇದು ಸುವರ್ಣವಕಾಶವಾಗಲಿದೆ. ಪರೀಕ್ಷಾ ಅವಧಿ ಮತ್ತು ವೇಳಾಪಟ್ಟಿ: ಮಂಡಳಿಯ ಪ್ರಕಟಣೆಯಂತೆ, ಈ ವಿಶೇಷ ಪರೀಕ್ಷೆಗಳು ಮೇ 15 ರಿಂದ ಪ್ರಾರಂಭವಾಗಿ ಮೇ 21ರವರೆಗೆ ನಡೆಯಲಿವೆ. ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಕೇವಲ ಒಂದು ವಾರದ ಅವಧಿಯಲ್ಲಿ ಎಲ್ಲಾ…

Read More

ಎರಡೆರಡು ವಿಶ್ವಕಪ್‌; ಟೀಂ ಇಂಡಿಯಾಗೆ ನಾಯಕರೇ ದೊಡ್ಡ ತಲೆನೋವು – Kannada News | ICC World Cup 2026: India Captains Suryakumar, Ayush Mhatre’s Form Concerns

2026 ರಲ್ಲಿ ಕ್ರಿಕೆಟ್ ಲೋಕದಲ್ಲಿ ಪ್ರಮುಖ ಐಸಿಸಿ (ICC) ಈವೆಂಟ್​ಗಳು ನಡೆಯಲಿವೆ. ಈ ಪಂದ್ಯಾವಳಿಗಳು ಜನವರಿಯಿಂದಲೇ ಪ್ರಾರಂಭವಾಗುತ್ತಿದ್ದು, ಅಂಡರ್-19 ಪುರುಷರ ವಿಶ್ವಕಪ್ ಮತ್ತು ಆ ನಂತರ 2026 ರ ಪುರುಷರ ಟಿ20 ವಿಶ್ವಕಪ್ (ICC World Cup 2026) ಪ್ರಮುಖ ಪಂದ್ಯಾವಳಿಗಳಾಗಿವೆ. ಭಾರತ ತಂಡವು ಎರಡೂ ಪಂದ್ಯಾವಳಿಗಳಲ್ಲಿ ಪ್ರಶಸ್ತಿ ಸ್ಪರ್ಧಿಗಳಾಗಿ ಪ್ರವೇಶಿಸಲಿದೆ. ಈ ಎರಡೂ ತಂಡಗಳಲ್ಲೂ ಪ್ರತಿಭಾವಂತೆ ಆಟಗಾರರಿದ್ದಾರೆ. ಆದಾಗ್ಯೂ, ಈ ವಿಶ್ವಕಪ್‌ಗಳ ಆರಂಭಕ್ಕೂ ಮೊದಲು, ಈ ಎರಡೂ ತಂಡಗಳ ನಾಯಕರು ತಂಡಕ್ಕೆ ದೊಡ್ಡ ಸಮಸ್ಯೆಯಾಗಿದ್ದಾರೆ. ಒಂದೆಡೆ…

Read More

ಮುಂಬೈನಲ್ಲಿ ಕರ್ನಾಟಕ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯ ಕನ್ನಡ ಪ್ರೇಮಕ್ಕೆ ಇದೇ ಸಾಕ್ಷಿ – Kannada News | Shilpa Shetty opened a Karnataka theme restaurant in Mumbai

ಶಿಲ್ಪಾ ಶೆಟ್ಟಿ (Shilpa Shetty) ಬಾಲಿವುಡ್​​ನ ಸ್ಟಾರ್ ನಟಿ ಆಗಿರುವ ಜೊತೆಗೆ ಬಲು ಯಶಸ್ವಿ ಉದ್ಯಮಿಯೂ ಸಹ ಹೌದು. ಮಂಗಳೂರು ಮೂಲದವರಾದರೂ ಸಹ ಶಿಲ್ಪಾ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿಯೇ. ಬಾಲ್ಯದಿಂದಲೂ ಮುಂಬೈನಲ್ಲೇ ಬೆಳೆದಿದ್ದರೂ ಸಹ ತಮ್ಮ ಮೂಲವಾದ ಕರ್ನಾಟಕವನ್ನು ಶಿಲ್ಪಾ ಶೆಟ್ಟಿ ಮರೆತಿಲ್ಲ. ಇತ್ತೀಚೆಗಷ್ಟೆ ಮುಂಬೈನಲ್ಲಿ ಹೋಟೆಲ್ ಒಂದನ್ನು ಶಿಲ್ಪಾ ಶೆಟ್ಟಿ ಪ್ರಾರಂಭ ಮಾಡಿದ್ದು, ಕರ್ನಾಟಕ ಥೀಮ್​​​ನ ಹೋಟೆಲ್ ಇದಾಗಿದೆ. ಮಾತ್ರವಲ್ಲದೆ ಇದಕ್ಕೆ ಇರಿಸಿರುವುದು ಸಹ ಕನ್ನಡದ ಹೆಸರನ್ನೇ. ಶಿಲ್ಪಾ ಶೆಟ್ಟಿ ಈಗಾಗಲೇ ಬಾಸ್ಟಿಯನ್ ಹೆಸರಿನಲ್ಲಿ ಮುಂಬೈನಲ್ಲಿ…

Read More

ಪಂಜಾಬ್ ಲಾಟರಿಯಲ್ಲಿ 6 ಕೋಟಿ ಗೆದ್ದ 80 ವರ್ಷದ ನಿವೃತ್ತ ಪೋಸ್ಟ್ ಮಾಸ್ಟರ್ – Kannada News | Delhi 80 year old retired postmaster wins Rs 6 crore Punjab Baisakhi Bumper lottery

ನವದೆಹಲಿ, ಏಪ್ರಿಲ್ 22: ದೆಹಲಿಯ 80 ವರ್ಷದ ನಿವೃತ್ತ ಪೋಸ್ಟ್ ಮಾಸ್ಟರ್ ಪಂಜಾಬ್ ರಾಜ್ಯ ಡಿಯರ್ ಬೈಸಾಖಿ ಬಂಪರ್ ಲಾಟರಿಯಲ್ಲಿ (Bumper Lottery) 6 ಕೋಟಿ ರೂ. ಪ್ರಥಮ ಬಹುಮಾನವನ್ನು ಗೆದ್ದಿದ್ದಾರೆ. ದೆಹಲಿಯ ನಿವಾಸಿಯಾದ 80 ವರ್ಷದ ಓಂ ಪ್ರಕಾಶ್ ಲುಧಿಯಾನದ ಘಂಟಾ ಘರ್ ನಲ್ಲಿರುವ ಅಂಗಡಿಯಿಂದ 500 ರೂ.ಗೆ ಲಾಟರಿ ಟಿಕೆಟ್ ಖರೀದಿಸಿದ್ದರು. ಬಿ 520729 ಸಂಖ್ಯೆಯ ಅವರ ಲಾಟರಿ ಟಿಕೆಟ್ ಏಪ್ರಿಲ್ 19ರಂದು ಘೋಷಿಸಲಾದ ಡ್ರಾದಲ್ಲಿ ಮೊದಲ ಬಹುಮಾನವನ್ನು ಪಡೆದುಕೊಂಡಿದೆ. ಹೀಗಾಗಿ, ರಾತ್ರಿ ಬೆಳಗಾಗುವಷ್ಟರಲ್ಲಿ…

Read More

ಗಿಲ್ಲಿಗೆ ಇಷ್ಟ ಆಯ್ತು ಈ ಸೀರಿಯಲ್ ಟೈಟಲ್ ಟ್ರ್ಯಾಕ್

ರಾಣಿ ಸೀರಿಯಲ್ ಮಾರ್ಚ್ 9ರಿಂದ ಪ್ರಸಾರ ಆರಂಭಿಸಿದೆ. ಈ ಧಾರಾವಾಹಿಯ ಹಾಡು ಗಮನ ಸೆಳೆಯುವ ರೀತಿಯಲ್ಲಿ ಇದೆ. ಈ ಹಾಡನ್ನು ಗಿಲ್ಲಿ ನಟ ಅವರು ಇಷ್ಟಪಟ್ಟಿದ್ದಾರೆ. ಅವರ ಹೊಸ ವಿಡಿಯೋ ವೈರಲ್ ಆಗಿದೆ. ಅವರು ಹಾಡನ್ನು ಯಾಕೆ ಇಷ್ಟಪಟ್ಟಿದ್ದೇನೆ ಎಂಬುದನ್ನು ವಿವರಿಸಿದ್ದಾರೆ. ಗಿಲ್ಲಿ ಮಾತಿನಿಂದ ಧಾರಾವಾಹಿಗೆ ಒಂದಷ್ಟು ಹೈಪ್ ಸಿಕ್ಕಿದೆ. ಅವರು ಹೇಳಿದ ಹಾಡಿನ ವಿಡಿಯೋ ಇಲ್ಲಿದೆ ನೋಡಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

DC vs GT: 600 ಸಿಕ್ಸರ್​ಗಳು..! ಟಿ20 ಕ್ರಿಕೆಟ್​ನಲ್ಲಿ ದಾಖಲೆ ಬರೆದ ಜೋಸ್ ಬಟ್ಲರ್

ಐಪಿಎಲ್ 2026 ರ 14 ನೇ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ ಟೈಟಾನ್ಸ್ ತಂಡದ ಪರ ಜೋಸ್ ಬಟ್ಲರ್ ಅಬ್ಬರದ ಬ್ಯಾಟಿಂಗ್‌ ಮಾಡಿ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ 600 ಸಿಕ್ಸರ್​ಗಳ ಗಡಿಯನ್ನು ದಾಟಿದರು. ಜೋಸ್ ಬಟ್ಲರ್ ಕೇವಲ 27 ಎಸೆತಗಳಲ್ಲಿ 52 ರನ್​ಗಳ ಬಿರುಸಿನ ಇನ್ನಿಂಗ್ಸ್ ಆಡಿದರು. ಈ ಇನ್ನಿಂಗ್ಸ್‌ನಲ್ಲಿ, ಬಟ್ಲರ್…

Read More

Video: ಹಾವಿನ ಜತೆಗೆ ಯುವತಿಯ ಚೆಲ್ಲಾಟ, ಮುಂದೇನಾಯ್ತು ನೋಡಿ – Kannada News | A young woman tried to hold a snake in her hand without any fear

ಹಾವು (Snakes) ಕಂಡ್ರೆ ಯಾರಿಗೆ ತಾನೇ ಭಯವಿಲ್ಲ ಹೇಳಿ. ಬಹುತೇಕ ಜನರು ಈ ಹಾವುಗಳ ಹೆಸರನ್ನು ಕೇಳಿಯೇ ಬೆಚ್ಚಿ ಬೀಳುತ್ತಾರೆ. ಇನ್ನು ಹಾವುಗಳು ಮನೆಯೊಳಗೆ ಎಂಟ್ರಿ ಕೊಟ್ಟರೆ ಸಾಕು, ಅಲ್ಲಿ ನಿಲ್ಲುವ ಧೈರ್ಯವಂತೂ ಮಾಡಲ್ಲ. ಆದರೆ ಇನ್ನು ಕೆಲವರು ಭಂಡ ಧೈರ್ಯದಲ್ಲಿ ಯಾವುದೇ ಸಾಧನಗಳಿಲ್ಲದೇ ಬರಿಗೈಯಲ್ಲಿ ಹಾವನ್ನು ಹಿಡಿಯುವ ಪ್ರಯತ್ನ ಮಾಡ್ತಾರೆ. ಇದೀಗ ಯುವತಿಯೊಬ್ಬಳು (young woman) ಹಾವಿನೊಂದಿಗೆ ಚೆಲ್ಲಾಟವಾಡಿದ್ದಾಳೆ. ಕೋಪಗೊಂಡ ಹಾವು ಈ ಯುವತಿಯ ಮೇಲೆ ಪ್ರತಿ ದಾಳಿ ನಡೆಸಿದೆ. ಈ ಭಯಾನಕ ವಿಡಿಯೋ ಸೋಶಿಯಲ್…

Read More

Budget 2026: ಕೇಂದ್ರ ಬಜೆಟ್ 2026: ಯಾವುದು ಅಗ್ಗ, ಯಾವುದು ದುಬಾರಿ? – Kannada News | Union Budget 2026: Items That Get Cheaper and Costlier

ನವದೆಹಲಿ, ಫೆಬ್ರವರಿ 01: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಭಾನುವಾರ ತಮ್ಮ ದಾಖಲೆಯ 9ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಭೌಗೋಳಿಕ ರಾಜಕೀಯ ಪ್ರಕ್ಷುಬ್ದತೆ, ಆರ್ಥಿಕ ಏರಿಳಿತ ಮತ್ತು ವ್ಯಾಪಾರ ಯುದ್ಧದ ನಡುವೆಯೂ, ಆದಾಯ ತೆರಿಗೆ ಸ್​ಲ್ಯಾಬ್​ಗಳು ಮತ್ತು ಮತ್ತು ದರಗಳಲ್ಲಿನ ಸಂಭವನೀಯ ಬದಲಾವಣೆಗಳ ಮೇಲೆ ಗಮನಹರಿಸಲಾಗಿದೆ. ಮದ್ಯವು ಹೆಚ್ಚು ದುಬಾರಿಯಾಗಿದೆ ಮತ್ತು ಚರ್ಮದ ಬೂಟುಗಳು, ಕ್ಯಾನ್ಸರ್ ಮತ್ತು ಮಧುಮೇಹ ಔಷಧಿಗಳು ಅಗ್ಗವಾಗಿವೆ ಎಂದು ಬಜೆಟ್​ನಲ್ಲಿ ತಿಳಿಸಲಾಗಿದೆ. ಚರ್ಮ ಮತ್ತು ಜವಳಿ ಉಡುಪುಗಳನ್ನು ರಫ್ತು ಮಾಡುವ…

Read More

ಜವಾಬ್ದಾರಿಯುತ ರಾಷ್ಟ್ರಗಳ ಸೂಚ್ಯಂಕ: ಜಾಗತಿಕ ಶಕ್ತಿಯ ಲೆಕ್ಕಾಚಾರವನ್ನೇ ಬದಲಿಸಿದ ಭಾರತ – Kannada News | Responsible Nations Index: How India Is Reframing Global Power

ಜವಾಬ್ದಾರಿಯುತ ರಾಷ್ಟ್ರಗಳ ಸೂಚ್ಯಂಕ ಜಾಗತಿಕವಾಗಿ ವಿವಿಧ ದೇಶಗಳನ್ನು ವಿವಿಧ ರೀತಿಯಲ್ಲಿ ಅಳೆಯಲು ಬೇರೆ ಬೇರೆ ಸೂಚ್ಯಂಕಗಳಿವೆ. ಇವೆಲ್ಲವನ್ನೂ ರಚಿಸುವ ಏಜೆನ್ಸಿಗಳೆಲ್ಲವೂ ಪಾಶ್ಚಿಮಾತ್ಯರದ್ದೇ ಆಗಿವೆ. ಬಡತನ, ಪ್ರಜಾತಂತ್ರ, ಸಾಮಾಜಿಕ ಭದ್ರತೆ, ಭ್ರೂಣಹತ್ಯೆ, ಅಲ್ಪಸಂಖ್ಯಾತ ರಕ್ಷಣೆ ಇತ್ಯಾದಿ ನಾನಾ ವಿಷಯಗಳಿಗೆ ಗ್ಲೋಬಲ್ ಇಂಡೆಕ್ಸ್​ಗಳಿವೆ. ಇವುಗಳಲ್ಲಿ ಭಾರತಕ್ಕೆ ಸಿಗುವ ಸ್ಥಾನಮಾನ ಅಷ್ಟಕಷ್ಟೇ. ಭಾರತದಲ್ಲಿ ಪ್ರಜಾತಂತ್ರಾತ್ಮಕ ವ್ಯವಸ್ಥೆ ಶಿಥಿಲವಾಗಿದೆ ಎಂದು ಕೆಲ ಏಜೆನ್ಸಿಗಳು ವರದಿ ಮಾಡುವುದಿದೆ. ಯಾವ ಮಾನದಂಡ ಅಥವಾ ಅಳತೆಗೋಲು ಇಟ್ಟುಕೊಂಡು ದೇಶಗಳ ಪರಿಸ್ಥಿತಿಯನ್ನು ಅಂದಾಜಿಸುತ್ತಾರೆ ಎಂಬುದು ಸಂಶಯಕ್ಕೆ ಎಡೆ ಮಾಡುವಂತಿರುತ್ತದೆ….

Read More