Headlines

SSLC ಪರೀಕ್ಷೆಯ ತೃತೀಯ ಭಾಷೆ ಅಂಕಕ್ಕೆ ಕೊಕ್: ನಿರ್ಧಾರ ಪರಿಶೀಲಿಸುವಂತೆ ಸಿಎಸ್​​ಗೆ ರಾಜ್ಯಪಾಲರ ಪತ್ರ

ಬೆಂಗಳೂರು, ಏಪ್ರಿಲ್​​ 03: SSLC ಹಿಂದಿ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​ ನೀಡುವ ರಾಜ್ಯ ಸರ್ಕಾರದ ನಿರ್ಧಾರ ವಿಚಾರ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿಗೆ ರಾಜ್ಯಪಾಲರು ಪತ್ರ ಬರೆದಿದ್ದಾರೆ. ಈ ಕುರಿತು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಲೆಟರ್​​ ಬರೆದಿದ್ದು, ಸರ್ಕಾರದ ನಿರ್ಧಾರವನ್ನು ಮರು ಪರಿಶೀಲನೆ ಮಾಡುವಂತೆ ತಿಳಿಸಲಾಗಿದೆ.  SSLC ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳನ್ನು ನೀಡದೆ ಕೇವಲ ಗ್ರೇಡ್‌ ನೀಡುವ ನಿರ್ಧಾರವನ್ನು ಮರು ಪರಿಶೀಲಿಸಿ. ಭಾಷಾವೈವಿಧ್ಯತೆ, ಜಾಗೃತಿ, ಬೌದ್ಧಿಕ ಬೆಳವಣಿಗೆಯನ್ನು ಬೆಳೆಸುವಲ್ಲಿ ತೃತೀಯ…

Read More

SC, ST ಮೇಲಿನ ದೌರ್ಜನ್ಯ ತನಿಖೆ ಮಾಡುವ DCREಯಲ್ಲಿಯೇ ಮೇಲ್ಜಾತಿ ಅಧಿಕಾರಿಗಳಿಂದ ದಲಿತ ಅಧಿಕಾರಿಗೆ ಕಿರುಕುಳ ಆರೋಪ! – Kannada News | Dcre inspector alleges harassment by senior officers files complaint with dg

ಮೇಲ್ಜಾತಿ ಅಧಿಕಾರಿಗಳಿಂದ ದಲಿತ ಅಧಿಕಾರಿಗೆ ಕಿರುಕುಳ ಆರೋಪ Image Credit source: Tv9 Kannada ಬೆಂಗಳೂರು, ಏಪ್ರಿಲ್​​ 20: ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಮೇಲಿನ ದೌರ್ಜನ್ಯ ಕೇಸ್ ತನಿಖೆ ನಡೆಸುವ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದಲ್ಲಿಯೇ (DCRE) ಮೇಲ್ಜಾತಿ ಅಧಿಕಾರಿಗಳಿಂದ ದಲಿತ ಅಧಿಕಾರಿಗೆ ಕಿರುಕುಳ ಆರೋಪ ಕೇಳಿಬಂದಿದೆ. DCRE ಕೇಂದ್ರ ಕಚೇರಿ SP ಕರಿಬಸನಗೌಡ ಹಾಗೂ DySP ಮಹೇಶ್ವರಗೌಡ ಮೇಲೆ ಆರೋಪ ಮಾಡಲಾಗಿದ್ದು, ಈ ಬಗ್ಗೆ ಪಶ್ಚಿಮ ವಲಯ DCRE ಪೊಲೀಸ್…

Read More

ಸುತ್ತೂರು ಜಾತ್ರೆ ಟ್ರಾಫಿಕ್​ ಜಾಮ್‌ನಲ್ಲಿ ಸಿಲುಕಿದ ಸಿಎಂ ಕಾರು: ಅಧಿಕಾರಿಗಳು ಹರಸಾಹಸ – Kannada News | Mysuru: CM Siddaramaiah Car Stuck in Suttur Jatra Traffic; watch video

ಮೈಸೂರು, ಜನವರಿ 18: ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಜಾತ್ರಾ ಮಹೋತ್ಸವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಕಾರು ಟ್ರಾಫಿಕ್​ ಜಾಮ್‌ನಲ್ಲಿ ಸಿಲುಕಿದ ಘಟನೆ ನಡೆದಿದೆ. ಸುಮಾರು 3 ಕಿ.ಮೀ ಜಾಮ್​​ ಉಂಟಾಗಿದ್ದು, ಸಿಎಂ ಸಿದ್ದರಾಮಯ್ಯ ಅವರ ವಾಹನಕ್ಕೆ ದಾರಿ ಮಾಡಲು ಪೊಲೀಸ್ ಅಧಿಕಾರಿಗಳು ಹರಸಾಹಸ ಪಟ್ಟರು. ಖುದ್ದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ರಸ್ತೆಗಿಳಿದರು. ಈ ವೇಳೆ ಸವಾರನಿಗೆ ಕಾಲಿನಲ್ಲಿ ಒದೆಯಲು ಎಸ್​ಪಿ ಮುಂದ್ದಾಗಿದ್ದು, ದೃಶ್ಯ ಮೊಬೈಲ್‌ನಲ್ಲಿ ಸೆರೆ ಆಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು…

Read More

ಬೀಗ ಹಾಕಿದ್ದ ಮನೆಯಿಂದ ಬರ್ತಿತ್ತು ದುರ್ನಾಥ: ಬಾಗಿಲು ತೆರೆದು ನೋಡಿದ್ರೆ ಕಂಡಿದ್ದು ಯುವಕನ ಬೆತ್ತಲೆ ಶವ! – Kannada News | Murder Mystery: Unidentified Decomposed Body Found in Rental Home; Tenants Missing

ಶವ ಪತ್ತೆಯಾಗಿರುವ ಮನೆImage Credit source: Tv9 Kannada ನೆಲಮಂಗಲ, ಫೆಬ್ರವರಿ 28: ಯುವಕನೋರ್ವನ ಕೈಕಾಲು ಕಟ್ಟಿ, ಬಾಯಿಗೆ ಟೇಪ್ ಸುತ್ತಿ, ರಾಡ್​​ನಿಂದ ಹಲ್ಲೆ ಮಾಡಿದ್ದಲ್ಲದೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬಾಗಲಗುಂಟೆ ಪೊಲೀಸ್ ಠಾಣಾವ್ಯಾಪ್ತಿಯ ವಿಜಯಲಕ್ಷ್ಮೀ ಬಡಾವಣೆಯಲ್ಲಿ ನಡೆದಿದೆ. ನಟರಾಜ್​​ ಎಂಬವರು ಬಾಡಿಗೆಗೆ ನೀಡಿದ್ದ ಮನೆಯಿಂದ ದುರ್ನಾಥ ಬರುತ್ತಿದ್ದ ಹಿನ್ನೆಲೆ ಪರೀಕ್ಷಿಸಿದಾಗ ನಾಲ್ಕೈದು ದಿನಗಳ ಹಿಂದೆಯೇ ಕೊಲೆ ಮಾಡಿರುವ ಕಾರಣ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತ ವ್ಯಕ್ತಿ ಯಾರೆಂಬ ಬಗ್ಗೆ…

Read More

Hindu Rituals: ಜನಿವಾರವನ್ನು ಎಲ್ಲೆಂದರಲ್ಲಿ ತೆಗೆಯಬಾರದು ಏಕೆ? ಯಜ್ಞೋಪವೀತ ಧಾರಣೆ ಮಹತ್ವ ಇಲ್ಲಿ ತಿಳಿಯಿರಿ – Kannada News | Yagnopaveetha: Sacred Janivara Rules, Significance and When to Change

ಯಜ್ಞೋಪವೀತ ಅಥವಾ ಜನಿವಾರImage Credit source: Pinterest ಹಿಂದೂ ಸಂಪ್ರದಾಯದಲ್ಲಿ ಯಜ್ಞೋಪವೀತ ಅಥವಾ ಜನಿವಾರಕ್ಕೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ಇದನ್ನು ಬ್ರಾಹ್ಮಣ, ಕ್ಷತ್ರಿಯ ಮತ್ತು ವೈಶ್ಯ ಸಮುದಾಯದವರು ಉಪನಯನ ಸಂಸ್ಕಾರದ ನಂತರ ಧರಿಸುತ್ತಾರೆ. ಯಜ್ಞೋಪವೀತವು ಕೇವಲ ದಾರವಲ್ಲ, ಅದು ಧರಿಸಿದವನಿಗೆ ತನ್ನ ಕರ್ತವ್ಯ ಮತ್ತು ಶಿಸ್ತಿನ ನೆನಪು ಮಾಡಿಕೊಡುವ ಒಂದು ದೈವಿಕ ಸಾಧನವಾಗಿದೆ. ಎಲ್ಲೆಂದರಲ್ಲಿ ಜನಿವಾರ ತೆಗೆಯಬಾರದು ಯಾಕೆ? ಸಾಮಾನ್ಯವಾಗಿ ಯಜ್ಞೋಪವೀತ(ಜನಿವಾರ) ವನ್ನು ಒಮ್ಮೆ ಧರಿಸಿದ ನಂತರ ದೇಹದಿಂದ ಬೇರ್ಪಡಿಸಬಾರದು. ಆದರೆ ಕೆಲವು ನಿರ್ದಿಷ್ಟ ಸಂದರ್ಭಗಳಲ್ಲಿ ಹಳೆಯದನ್ನು…

Read More

ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೆಲಾ – Kannada News | Ram Charan and Upasana Konidela welcome twins Chiranjeevi shares the news

ಟಾಲಿವುಡ್ ನಟ ರಾಮ್ ಚರಣ್ (Ram Charan) ಅವರ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೆಲಾ (Upasana Konidela) ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಒಂದು ಹೆಣ್ಣು ಹಾಗೂ ಒಂದು ಗಂಡು ಮಗು ಜನಿಸಿದೆ. ಈ ಮೊದಲು, ಅಂದರೆ 2023ರಲ್ಲಿ ಈ ದಂಪತಿಗೆ ಹೆಣ್ಣು ಮಗು ಜನಿಸಿತ್ತು. ಮಗುವಿಗೆ ಕ್ಲಿನ್ ಕಾರಾ ಎಂದು ಹೆಸರು ಇಟ್ಟಿದ್ದರು. ಈಗ ಅವಳಿ ಮಕ್ಕಳು (Twins) ಜನಿಸಿದ ಸುದ್ದಿಯನ್ನು ರಾಮ್ ಚರಣ್ ತಂದೆ ಮೆಗಾ…

Read More

ಚೆಕ್ ಬೌನ್ಸ್ ಕೇಸ್; ಜಾಮೀನು ಪಡೆದು ನಿಟ್ಟುಸಿರು ಬಿಟ್ಟ ರಾಜ್​ಪಾಲ್ ಯಾದವ್ – Kannada News | Actor Rajpal Yadav gets bail in Cheque Bounce case

ಹಿಂದಿ ಚಿತ್ರರಂಗದ ಖ್ಯಾತ ನಟ ರಾಜ್​ಪಾಲ್ ಯಾದವ್ (Rajpal Yadav) ಅವರು ತಿಹಾರ್ ಜೈಲು ಸೇರಿದ್ದರು. 9 ಕೋಟಿ ರೂಪಾಯಿ ಸಾಲ ಮತ್ತು ಚೆಕ್ ಬೌನ್ಸ್ ಪ್ರಕರಣದಲ್ಲಿ ಅವರನ್ನು ಜೈಲಿಗೆ ಕಳಿಸಲಾಗಿತ್ತು. ಈಗ ಅವರು ಜಾಮೀನು ಪಡೆದುಕೊಂಡಿದ್ದಾರೆ. ಇಂದು (ಫೆಬ್ರವರಿ 16) ರಾಜ್​ಪಾಲ್ ಯಾದವ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು (Bail) ನೀಡಿದೆ. ಮಧ್ಯಾಹ್ನ 3 ಗಂಟೆ ಒಳಗೆ 1.3 ಕೋಟಿ ರೂಪಾಯಿ ಹಣವನ್ನು ಪಾವತಿ ಮಾಡುವಂತೆ ಸೂಚಿಸಲಾಗಿತ್ತು. ಹಣ ಹೊಂದಿಸಿದ ಬಳಿಕ ಅವರಿಗೆ ಜಾಮೀನು ನೀಡಲಾಯಿತು….

Read More

ಪೆಟ್ರೋಲ್ ಬೆಲೆ ಏರಿಕೆ ಸಿಟ್ಟಿಗೆ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಬೆಂಕಿ ಹಚ್ಚಿದ ಕಿರಾತಕರು – Kannada News | Gwalior Petrol Pump Attack: Worker Set Ablaze Over Fuel Price Rage, Father Injured

ಭೋಪಾಲ್, ಜೂನ್ 25: ಪೆಟ್ರೋಲ್(Petrol) ಬೆಲೆ ಏರಿಕೆಯ ಕೋಪಕ್ಕೆ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ನಡೆದಿದೆ. ಬೆಂಕಿಯ ಜ್ವಾಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಮಗನನ್ನು ರಕ್ಷಿಸಲು ಹೋಗಿದ್ದ ತಂದೆಗೂ ಬೆಂಕಿ ತಗುಲಿದೆ. ಗ್ವಾಲಿಯರ್‌ನ ಪೆಟ್ರೋಲ್ ಪಂಪ್‌ನಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷದ ಆಕಾಶ್ ಸೆಂಗಾರ್ ಹಲ್ಲೆಗೆ ಒಳಗಾದ ದುರ್ದೈವಿ. ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಮೂವರು ಯುವಕರು ಬುಲೆಟ್ ಬೈಕ್‌ನಲ್ಲಿ ಪೆಟ್ರೋಲ್ ಹಾಕಿಸಲು ಬಂದಿದ್ದರು. ಇಂಧನದ ದರದ ವಿಚಾರವಾಗಿ ಅವರು ಬಂಕ್…

Read More

ಕೋಗಿಲು ಮನೆಗಳ ತೆರವು: ಕೇರಳ ಸಿಎಂ, ಎಂಪಿ ಎಂಟ್ರಿ ಬೆನ್ನಲ್ಲೇ ಹೊಸ ಮನೆ ನೀಡಲು ತೀರ್ಮಾನ – Kannada News | Bengaluru Kogilu Demolition: Karnataka Government Ready to Provide New Houses

ಬೆಂಗಳೂರು, ಡಿಸೆಂಬರ್​ 28: ನಗರದ ಕೋಗಿಲು (kogilu) ಲೇಔಟ್​​ನ ಅಕ್ರಮ ಒತ್ತುವರಿ ತೆರವು ಕಾರ್ಯಚರಣೆ, ಸದ್ಯ ರಾಷ್ಟ್ರ ರಾಜಕಾರಣದಲ್ಲಿ ಕದನ ಸೃಷ್ಟಿಸಿದೆ. ನಿನ್ನೆಯಿಂದ ಈ ವಿಚಾರಕ್ಕೆ ಕೇರಳ ಸರ್ಕಾರ ಎಂಟ್ರಿ ಕೊಟ್ಟಿದ್ದು, ಹಂತಹಂತವಾಗಿ ರಾಜ್ಯ ಸರ್ಕಾರವನ್ನ ಟೀಕಿಸುವ ಕೆಲಸ ಮಾಡುತ್ತಿದೆ. ಈ ಮಧ್ಯೆ ಕೋಗಿಲು ಲೇಔಟ್ ಸಂತ್ರಸ್ತರಿಗೆ ಬೇರೆ ಕಡೆ ವಸತಿ ನೀಡಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ವಸತಿ ಸಚಿವ ಜಮೀರ್ ಅಹ್ಮದ್ (Zameer Ahmed)​​ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. 180 ಮನೆ ನೀಡಲು ಒಪ್ಪಿಗೆ…

Read More

ರಾಘವ್ ಲಾರೆನ್ಸ್ ರಾಜಕೀಯ ಪ್ರವೇಶ, ನಿರ್ಧಾರ ಅಭಿಮಾನಿಗಳ ಕೈಯಲ್ಲಿ – Kannada News | Raghava Lawrence interested in joining politics leaved decision to fans

ಸಿನಿಮಾ ನಟ, ನಿರ್ದೇಶಕ ಮತ್ತು ಜನಪ್ರಿಯ ಕೋರಿಯೋಗ್ರಾಫರ್ ರಾಘವ್ ಲಾರೆನ್ಸ್ (Raghav Lawrence) ಸಿನಿಮಾಗಳ ಜೊತೆಗೆ ತಮ್ಮ ಸಾಮಾಜಿಕ ಕಾರ್ಯದಿಂದಲೂ ಬಲು ಜನಪ್ರಿಯರು. ದಶಕಕ್ಕೂ ಹೆಚ್ಚು ಸಮಯದಿಂದಲೂ ರಾಘವ್ ಲಾರೆನ್ಸ್ ತಮ್ಮನ್ನು ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಹಲವಾರು ಮಕ್ಕಳಿಗೆ ಶಿಕ್ಷಣ ಕೊಡಿಸಿದ್ದಾರೆ. ಅಂಗವಿಕಲರಿಗೆ ಬದುಕಲು ಆಸರೆ ಒದಗಿಸಿದ್ದಾರೆ. ಹಲವು ಮಹಿಳೆಯರಿಗೆ ಆಟೊ ರಿಕ್ಷಾ ಕೊಡಿಸಿ ಜೀವನ ಸಾಗಿಸಲು ನೆರವಾಗಿದ್ದಾರೆ. ಇನ್ನೂ ಅನೇಕ ಸಾಮಾಜಿಕ ಸೇವೆಗಳನ್ನು ಅವರು ಮಾಡುತ್ತಾ ಬಂದಿದ್ದಾರೆ. ಇದೀಗ ರಾಘವ್ ಲಾರೆನ್ಸ್ ರಾಜಕೀಯಕ್ಕೆ ಕಾಲಿರಿಸಲು ಮುಂದಾಗಿದ್ದು,…

Read More