Headlines

“ನೀನೇ ಖುಷಿಯಾಗಿರು, ನಾನು ಈ ಪ್ರಪಂಚವನ್ನೇ ಬಿಟ್ಟು ಹೋಗುತ್ತಿದ್ದೇನೆ”: ಸ್ಟೇಟಸ್ ಹಾಕಿಕೊಂಡು ವಿದ್ಯಾರ್ಥಿ ನೀರಿಗೆ ಬಿದ್ದು ಆತ್ಮಹತ್ಯೆ – Kannada News | Turuvekere Student Suicide: Dhanush’s Emotional Statuses Unveil Tragic End

ತುಮಕೂರು, ಫೆ.26: ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ನಡೆದ ಡಿಪ್ಲೊಮಾ ವಿದ್ಯಾರ್ಥಿ ಧನುಷ್ (19) ಸಾವಿನ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದ್ದ ಧನುಷ್, ವಾಟ್ಸಾಪ್ ಮತ್ತು ಫೇಸ್‌ಬುಕ್‌ನಲ್ಲಿ ಭಾವನಾತ್ಮಕ ಸ್ಟೇಟಸ್ ಹಾಕಿ ಆತ್ಮಹತ್ಯೆಗೆ ಶರಣಾಗಿರುವುದು ಈಗ ಬೆಳಕಿಗೆ ಬಂದಿದೆ. ತುರುವೇಕೆರೆ ತಾಲೂಕಿನ ಗೋಪ್ಪೆನಹಳ್ಳಿ ನಿವಾಸಿಯಾದ ಧನುಷ್, ಪಟ್ಟಣದ ಸರ್ಕಾರಿ ಡಿಪ್ಲೊಮಾ ಕಾಲೇಜಿನಲ್ಲಿ ಎರಡನೇ ವರ್ಷದ ವ್ಯಾಸಂಗ ಮಾಡುತ್ತಿದ್ದ. ನಿನ್ನೆ ಬೆಳಿಗ್ಗೆ ಕಾಲೇಜಿಗೆ ಹೋಗುವುದಾಗಿ ಮನೆಯಿಂದ ಬಂದಿದ್ದ ಆತ ಸಂಜೆಯಾದರೂ ವಾಪಸ್ ಹೋಗಿರಲಿಲ್ಲ. ಪೋಷಕರು…

Read More

ಲಕ್ಕುಂಡಿಯಲ್ಲಿ ಎಲ್ಲೇ ಆಗೆದರೂ ಸಿಗುತ್ತಂತೆ ಬಂಗಾರ! ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಈರಪ್ಪ ಕಣವಿ – Kannada News | Lakkundis Golden Secret: Tales of Ancient Treasure, Cursed Greed, and Government Searches in Gadag

ಗದಗ, ಜನವರಿ 12: ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮನೆ ಪಾಯ ಅಗೆಯುವಾಗ ನಿಧಿ ಸಿಕ್ಕ ವಿಚಾರ ಈಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಈರಪ್ಪ ಕಣವಿ ಎಂಬವರು ‘ಟಿವಿ9’ ಜತೆ ಮಾತನಾಡಿದ್ದು, ಈ ಗ್ರಾಮದಲ್ಲಿ ಮಳೆಗಾಲದಲ್ಲಿ ಹಿಂದೆಲ್ಲ ಮಣ್ಣು ಅಗೆಯುವಾಗ ಚಿನ್ನದ ತುಂಡುಗಳು ಕಾಣಿಸುತ್ತಿದ್ದವು ಎಂದಿದ್ದಾರೆ. ಗ್ರಾಮದಲ್ಲಿ ಎಲ್ಲೇ ಅಗೆದರೂ ಬಂಗಾರ ಸಿಗುತ್ತಿತ್ತು. ಆದರೆ, ಈ ನಿಧಿ ಆಸೆಯ ಹಿಂದೆ ಹೋದವರು ರಕ್ತಕಾರಿ ಸತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಕಾರಣದಿಂದಾಗಿ,…

Read More

RSS ಬಗ್ಗೆ ಅವಹೇಳನಕಾರಿ ಮಾತು: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸಿಡಿದೆದ್ದ ಬಿಜೆಪಿ, ದೂರು ದಾಖಲು

ಬೆಂಗಳೂರು, (ಏಪ್ರಿಲ್ 07): ಅಸ್ಸಾಂ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಆರ್​​ಎಸ್​ಎಸ್ (RSS)​ ಹಾಗೂ ಬಿಜೆಪಿ ವಿರುದ್ಧ ವಿವದಾತ್ಮಕ ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (AICC President mallikarjun kharge) ವಿರುದ್ಧ ಕರ್ನಾಟಕ ಬಿಜೆಪಿ ದೂರು ನೀಡಿದೆ. ಶಾಸಕರಾದ ಸಿ.ಕೆ.ರಾಮಮೂರ್ತಿ, ಮುನಿರಾಜು ನೇತೃತ್ವದ ಬಿಜೆಪಿ (BJP) ಇಂದು (ಏಪ್ರಿಲ್ 07) ಬೆಂಗಳೂರಿನ (Bengaluru) ಡಿಜಿ & ಐಜಿಪಿ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದೂರು ನೀಡಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರ ವಿರುದ್ಧ ಬಹಿರಂಗವಾಗಿ…

Read More

ಜಾಗತಿಕ ಫ್ಯಾಷನ್ ವೇದಿಕೆಯಲ್ಲಿ ಮಿಂಚಿದ ಶ್ರೀಲೀಲಾ: ವಿದೇಶಿ ಬ್ರ್ಯಾಂಡಿಗೆ ರಾಯಭಾರಿ – Kannada News | Sreeleela in Milan fashion week, She replaced Rashmika as Onitsuka Tiger brand ambassador

ಬೆಂಗಳೂರಿನ ಚೆಲುವೆ ನಟಿ ಶ್ರೀಲೀಲಾ (Sreeleela), ಸ್ಯಾಂಡಲ್​​ವುಡ್, ಟಾಲಿವುಡ್ ಬಳಿಕ ಈಗ ಬಾಲಿವುಡ್ ಮತ್ತು ಕಾಲಿವುಡ್​​ಗಳಲ್ಲಿ ಸಖತ್ ಹೆಸರು ಮಾಡುತ್ತಿದ್ದಾರೆ. ಸಿನಿಮಾಗಳ ಜೊತೆಗೆ ಜಾಹೀರಾತುಗಲ್ಲಿಯೂ ಬ್ಯುಸಿ ಆಗಿದ್ದ ಈ ಚೆಲುವೆ ಇದೀಗ ಫ್ಯಾಷನ್ ಲೋಕಕ್ಕೂ ಕಾಲಿರಿಸಿದ್ದಾರೆ. ಹಿಂದೆಲ್ಲ ಕೆಲ ಸಣ್ಣ-ಪುಟ್ಟ ಫ್ಯಾಷನ್ ಶೋಗಳಲ್ಲಿ ಪಾಲ್ಗೊಂಡಿದ್ದ ಶ್ರೀಲೀಲಾ ಇದೀಗ ವಿಶ್ವ ಪ್ರಸಿದ್ಧ ಫ್ಯಾಷನ್ ಶೋ ಆಗಿರುವ ಮಿಲಾನ್ ಫ್ಯಾಷನ್ ವೀಕ್​​​ನ ವೇದಿಕೆಯ ಮೇಲೆ ಬೆಕ್ಕಿನ ನಡಿಗೆ ನಡೆದಿದ್ದಾರೆ. ಇತ್ತೀಚೆಗೆ ಇಟಲಿಯ ಮಿಲಾನ್‌ನಲ್ಲಿ ನಡೆದ ಪ್ರತಿಷ್ಠಿತ ‘ಮಿಲಾನ್ ಫ್ಯಾಶನ್ ವೀಕ್’ನಲ್ಲಿ…

Read More

ಬೆಂಗಳೂರಿಗೆ ಜಲಾಘಾತದ ಭೀತಿ: 142 ಕೆರೆಗಳ ನೀರು ಕುಡಿಯಲು ಅಯೋಗ್ಯ ಎಂದ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ – Kannada News | Bengalurus Water Crisis Deepens: 142 Lakes Unfit for Drinking, Pollution Board Reveals

ಬೆಂಗಳೂರು, ಫೆಬ್ರವರಿ 26: ಬೇಸಿಗೆ ಆರಂಭಕ್ಕೂ ಮುನ್ನವೇ ಬೆಂಗಳೂರಿಗೆ ಜಲಾಘಾತದ ಭೀತಿ ಎದುರಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ವರದಿಯ ಪ್ರಕಾರ, ನಗರದ 142 ಕೆರೆಗಳ ನೀರು ಕುಡಿಯಲು ಯೋಗ್ಯವಲ್ಲ ಎಂದು ತಿಳಿದುಬಂದಿದೆ. ಈ ಕೆರೆಗಳಲ್ಲಿ 50 ಕೆರೆಗಳು ಡಿ ವರ್ಗದಲ್ಲಿದ್ದರೆ, ಉಳಿದ 92 ಕೆರೆಗಳು ಇ ವರ್ಗದಲ್ಲಿವೆ. ಇ ವರ್ಗವೆಂದರೆ ಅತ್ಯಂತ ಕಳಪೆ ಗುಣಮಟ್ಟದ ನೀರನ್ನು ಹೊಂದಿದ್ದು, ಸಂಸ್ಕರಿಸಿದ ನಂತರವೂ ಕುಡಿಯಲು ಯೋಗ್ಯವಲ್ಲ. ಮೋರಿ ನೀರು ಮತ್ತು ಕೈಗಾರಿಕಾ ತ್ಯಾಜ್ಯಗಳು ಕೆರೆಗಳ ಒಡಲು ಸೇರುತ್ತಿರುವುದೇ ಈ ಕಲುಷಿತಕ್ಕೆ…

Read More

‘ಮಾರ್ಕ್’ ಚಿತ್ರದ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸಿಕ್ತು ಸ್ಪಷ್ಟನೆ – Kannada News | Kichcha Sudeep Reveal the real Number of Mark Movie First Day Collection

‘ಮಾರ್ಕ್’ ಸಿನಿಮಾ ಮೊದಲ ದಿನ ‘45’ ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ಎಂಟರ್​​ಟೇನ್​​ಮೆಂಟ್ ಟ್ರ್ಯಾಕರ್ ರಮೇಶ್ ಬಾಲ ಅವರು 15 ಕೋಟಿ ರೂಪಾಯಿ ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್​ನ ಸುದೀಪ್ ರೀಟ್ವೀಟ್ ಮಾಡಿಕೊಂಡರು. ಈ ಬಗ್ಗೆ ಸುದೀಪ್​​ಗೆ ಪ್ರಶ್ನೆ ಮಾಡಲಾಗಿದೆ. ಇದಕ್ಕೆ ಸುದೀಪ್ ಉತ್ತರಿಸಿದ್ದಾರೆ. ‘ಅಷ್ಟು ಹಣ ನಮ್ಮ ಖಾತೆಗೆ ಬಂದಿದೆ ಎಂಬುದಷ್ಟೇ ಗೊತ್ತಿದೆ. ಹಂಚಿಕೆದಾರರು ಖುಷಿಯಾಗಿದ್ದಾರೆ, ನಿರ್ಮಾಪಕರು ಖುಷಿಯಾಗಿದ್ದಾರೆ’ ಎಂದು ಸುದೀಪ್ ವಿವರಿಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

ಬೈಕ್​​ ಟ್ಯಾಕ್ಸಿ: ಹೈಕೋರ್ಟ್​​ ಆದೇಶದ ವಿರುದ್ಧ ಸುಪ್ರೀಂಗೆ SLP ಸಲ್ಲಿಸುತ್ತಾ ರಾಜ್ಯ ಸರ್ಕಾರ? – Kannada News | Karnataka Bike Taxi Battle: Private Transport Unions Urge Govt to Appeal Against HC Order in Supreme Court

ಬೈಕ್​​ ಟ್ಯಾಕ್ಸಿಗೆ ಮತ್ತೆ ಸಂಕಷ್ಟ? ಬೆಂಗಳೂರು, ಜನವರಿ 31: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಹಿನ್ನೆಲೆ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್​​ಗೆ SLP ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯ ಖಾಸಗಿ ಸಾರಿಗೆ ಒಕ್ಕೂಟ ಮನವಿ ಮಾಡಿದೆ. ಈ ಕುರಿತು ಮಾತನಾಡಿರುವ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಅಧ್ಯಕ್ಷ ನಟರಾಜ ಶರ್ಮಾ, ಬೈಕ್ ಟ್ಯಾಕ್ಸಿಯವರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯನವರಿಗೆ ರಾಹುಲ್ ಪತ್ರ ಬರೆದು, ಬೈಕ್ ಟ್ಯಾಕ್ಸಿಯವರಿಗೆ ಅನುಕೂಲ ಮಾಡಿಕೊಡಿ ಎಂದು ಹೇಳಿದ್ದಾರೆ. ಹೀಗಾಗಿ…

Read More

ಗೆಳತಿಯ ಕತ್ತು ಸೀಳಿ ಪ್ರಿಯಕರ ಪರಾರಿ

ಲಕ್ನೋ, ಏಪ್ರಿಲ್ 06: ಯುವಕನೊಬ್ಬ ತನ್ನ ಗೆಳತಿಯ ಕತ್ತು ಸೀಳಿ ಕೊಲೆ(Murder) ಮಾಡಿ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಆಕೆಯ ಪ್ರಿಯಕರ ಮತ್ತವನ ಸ್ನೇಹಿತರು ಸೇರಿ ಈ ಕೃತ್ಯವೆಸಗಿದ್ದಾರೆ. ಇಬ್ಬರ ನಡುವೆ ಸಣ್ಣ ಪುಟ್ಟ ವಿಚಾರಕ್ಕೆ ಜಗಳ ನಡೆಯುತ್ತಲೇ ಇತ್ತು. ಆಕೆಗಿನ್ನು 17 ವರ್ಷ ವಯಸ್ಸು. ಶನಿವಾರ ರಾತ್ರಿ ಡಿಯೋರಿಯಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಳು ಬಾಲಕಿಯ ಕತ್ತು ಸೀಳಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ನೌತನ್ ಹಥಿಯಾಗಢ ಗ್ರಾಮದ ನಿವಾಸಿ ಅಂಜಲಿಯನ್ನು ಶಿವಂ…

Read More

ಅಂದು ಲೇವಡಿ ಮಾಡಿ, ಇಂದು ತಲೆಬಾಗಿ ನಿಂತ ಸೂರ್ಯ..! – Kannada News | SuryaKumar Yadav bowing down to Sanju Sanson after his match winning innings

T20 World Cup 2026: ಟಿ20 ವಿಶ್ವಕಪ್​ನ 52ನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಸ್ಮರಣೀಯ ಇನಿಂಗ್ಸ್ ಆಡಿದ್ದಾರೆ. ಈ ಇನಿಂಗ್ಸ್​ನೊಂದಿಗೆ ಸ್ಯಾಮ್ಸನ್ ಭಾರತ ತಂಡಕ್ಕೆ ಭರ್ಜರಿ ಗೆಲುವನ್ನೂ ಸಹ ತಂದು ಕೊಟ್ಟಿದ್ದಾರೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್​ಗೆ ಲಗ್ಗೆಯಿಟ್ಟಿದೆ. ಇಂಟ್ರೆಸ್ಟಿಂಗ್ ವಿಷಯ ಎಂದರೆ ಈ ಬಾರಿಯ ವಿಶ್ವಕಪ್​ನ ಆರಂಭಿಕ ಪಂದ್ಯಗಳಲ್ಲಿ ಸ್ಯಾಮ್ಸನ್​ಗೆ ಅವಕಾಶ ಸಿಕ್ಕಿರಲಿಲ್ಲ. ಅದರಲ್ಲೂ ನಮೀಬಿಯ ವಿರುದ್ಧದ ಪಂದ್ಯದಿಂದ ಅಭಿಷೇಕ್ ಶರ್ಮಾ ಹೊರಗುಳಿದಿದ್ದ ಕಾರಣ ಸ್ಯಾಮ್ಸನ್ ಅವರನ್ನು ಕಣಕ್ಕಿಳಿಸಲಾಗಿತ್ತು. ಆದರೆ ಪಾಕಿಸ್ತಾನ್ ಮತ್ತು ನೆದರ್​ಲೆಂಡ್ಸ್…

Read More

IND vs WI: ಭಾರತ- ವಿಂಡೀಸ್ ಪಂದ್ಯ ರದ್ದಾದರೆ ಯಾರಿಗೆ ಸೆಮಿಫೈನಲ್ ಟಿಕೆಟ್? – Kannada News | India vs West Indies T20 WC Semi Final Decider: NRR Battle and Rain Impact

2026ರ ಟಿ20 ವಿಶ್ವಕಪ್​ನ (T20 World Cup 2026) ಸೂಪರ್ 8 ಸುತ್ತಿನಲ್ಲಿ ಒಂದು ಪಂದ್ಯವನ್ನು ಸೋತು ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿರುವ ಟೀಂ ಇಂಡಿಯಾ ಇದೀಗ ಸೆಮಿಫೈನಲ್​ಗೇರಬೇಕೆಂದರೆ ತನ್ನ ಮುಂದಿನ ಪಂದ್ಯವನ್ನು ಗೆಲ್ಲಲೇಬೇಕಾಗಿದೆ. ಅದರಂತೆ ಈ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಎದುರಿಸುತ್ತಿರುವ ಟೀಂ ಇಂಡಿಯಾ (India vs West Indies) ಗೆಲ್ಲುವ ಇರಾದೆಯೊಂದಿಗೆ ಕಣಕ್ಕಿಳಿಯಲಿದೆ. ಮಾರ್ಚ್ 1, 2026 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯವು…

Read More