Headlines

ಹಣೆಗೆ ಗುಂಡಿಟ್ಟು ಸಾಯಿಸುತ್ತೇವೆ: ಗಾಯಕ ಬಾದ್​ಶಾಗೆ ಬಿಷ್ಣೋಯ್ ಗ್ಯಾಂಗ್​ನಿಂದ ಬೆದರಿಕೆ

ಖ್ಯಾತ ರ‍್ಯಾಪರ್ ಮತ್ತು ಗಾಯಕ ಬಾದ್‌ಶಾ (Badshah) ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ಕಡೆ ಜೈಲಿನಲ್ಲಿರುವ ಕುಖ್ಯಾತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಕೊಲೆ ಬೆದರಿಕೆ ಬಂದಿದ್ದರೆ, ಮತ್ತೊಂದೆಡೆ ಕಾನೂನು ಕ್ರಮಗಳ ಅಡಿಯಲ್ಲಿ ಅವರ ಬಂಧನಕ್ಕೆ ಸಿದ್ಧತೆ ನಡೆಯುತ್ತಿದೆ. ಬಾದ್‌ಶಾ ಅವರ ಇತ್ತೀಚಿನ ‘ಟಟೀರಿ’ (Tateeree) ಹಾಡು ಈಗ ಅವರಿಗೆ ದೊಡ್ಡ ಕಂಟಕವಾಗಿ ಪರಿಣಮಿಸಿದೆ. ಈ ಹಾಡಿನಲ್ಲಿ ಹರಿಯಾಣದ ಸಂಸ್ಕೃತಿ ಮತ್ತು ಮಹಿಳೆಯರನ್ನು ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ ಎಂಬ ಆರೋಪದ ಬೆನ್ನಲ್ಲೇ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಅವರಿಗೆ ಪ್ರಾಣ…

Read More

Recruitment 2026: ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗಾವಕಾಶ; ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ನೇಮಕಾತಿ

ಬೆಂಗಳೂರಿನಲ್ಲಿರುವ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಸಂಸ್ಥೆಯಾದ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ (Dr. B.R.A.D.C.L) ಅಧಿಕೃತ ಅಧಿಸೂಚನೆಯ ಮೂಲಕ ವಿವಿಧ ಹುದ್ದೆಗಳ ಭರ್ತಿಗೆ ಚಾಲನೆ ನೀಡಿದೆ. ಪ್ರಸ್ತುತ ಕಾನೂನು ಸಲಹೆಗಾರರು (Legal Advisor) ಮತ್ತು ಕಂಪನಿ ಕಾರ್ಯದರ್ಶಿ (Company Secretary) ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಹುದ್ದೆಗಳ ವಿವರ ಮತ್ತು ಅರ್ಹತೆ: ಈ ನೇಮಕಾತಿ ಅಭಿಯಾನದ ಮೂಲಕ…

Read More

IND vs NZ: ಸಂಕಷ್ಟದಲ್ಲಿದ್ದ ತಂಡಕ್ಕೆ ಅಜೇಯ ಶತಕದ ಮೂಲಕ ಆಸರೆಯಾದ ಕೆಎಲ್ ರಾಹುಲ್ – Kannada News | Rahul’s Unbeaten 112 Rescues India in 2nd ODI vs NZ | Rajkot Match

ರಾಜ್‌ಕೋಟ್‌ನ ನಿರಂಜನ್ ಶಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಭರ್ಜರಿ ಶತಕ ಬಾರಿಸಿ ತಂಡಕ್ಕೆ ಆಸರೆಯಾಗಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್‌ ಆರಂಭಿಸಿದ ಟೀಂ ಇಂಡಿಯಾಕ್ಕೆ ಪ್ರಮುಖ ಆಟಗಾರರ ವಿಕೆಟ್ ಪತನ ಆಘಾತವನ್ನುಂಟು ಮಾಡಿತ್ತು. ಆದರೆ ಈ ಪಂದ್ಯದಲ್ಲಿ ತಂಡದ ಪರ ತಾಳ್ಮೆಯ ಇನ್ನಿಂಗ್ಸ್ ಕಟ್ಟಿದ ರಾಹುಲ್, ತಂಡವನ್ನು ಸಂಕಷ್ಟದಿಂದ ಪಾರು ಮಾಡಿದಲ್ಲದೆ, ತಮ್ಮ ಏಕದಿನ ವೃತ್ತಿಜೀವನದ 8ನೇ ಶತಕವನ್ನು ಪೂರ್ಣಗೊಳಿಸಿದರು. ಕೊನೆಯವರೆಗೂ ಅಜೇಯರಾಗಿ…

Read More

ಮನೆಕೆಲಸದಾಕೆಯೇ ವಿಲನ್; ಮಾಲೀಕರ ಮನೆಯಲ್ಲಿ ನಕಲಿ ಇಡಿ ದಾಳಿ ನಡೆಸಿ ಲಕ್ಷಗಟ್ಟಲೆ ಹಣ ದೋಚಿದ ಮಹಿಳೆ! – Kannada News | Two Including Housemaid Arrested For Fake ED Raid robs Rs 4 lakh At Employers house In Delhi

ನವದೆಹಲಿ, ಫೆಬ್ರವರಿ 26: ಮಹಿಳೆಯೊಬ್ಬಳು ತನಗೆ ಕೆಲಸ ನೀಡಿದ್ದ ಮನೆಯ ಒಡೆಯನ ಮನೆಗೇ ಕನ್ನ ಹಾಕಲು ಪ್ಲಾನ್ ಮಾಡಿದ್ದಳು. ಅದಕ್ಕಾಗಿ ಆಕೆ ಹೆಣೆದ ಪ್ಲಾನ್ ಅಂತಿಂಥದ್ದಲ್ಲ. ಮನೆಕೆಲಸ ಮಾಡುತ್ತಿದ್ದ ಆಕೆಗೆ ಆ ಮನೆಯ ಎಲ್ಲ ವಿಚಾರವೂ ಗೊತ್ತಿತ್ತು. ಆ ಮನೆಯಲ್ಲಿ ಸಾಕಷ್ಟು ಹಣ, ಒಡವೆಯಿದೆ ಎಂಬುದು ಕೂಡ ತಿಳಿದಿತ್ತು. ಹೀಗಾಗಿ, ಅದನ್ನೆಲ್ಲ ದೋಚಲು ಆಕೆ ಪ್ಲಾನ್ ಮಾಡಿದ್ದಳು. ಆದರೆ, ಕದ್ದುಕೊಂಡು ಹೋದರೆ ತಾನು ಖಂಡಿತ ಸಿಕ್ಕಿಹಾಕಿಕೊಳ್ಳುತ್ತೇನೆ ಎಂಬುದು ಆಕೆಗೆ ತಿಳಿದಿತ್ತು. ಹೀಗಾಗಿ, ತನ್ನ ಗೆಳೆಯರ ಜೊತೆ ಸೇರಿ ಇಡಿ…

Read More

ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: ಸಾವಿನ ದವಡೆಯಿಂದ 8 ಜನ ಜಸ್ಟ್​ ಮಿಸ್!​​

ಬೆಂಗಳೂರು, ಜನವರಿ 10: ಇಂದಿರಾನಗರದಲ್ಲಿ ಕಾರು ಅಪಘಾತ ಸಂಭವಿಸಿದ್ದು, ಕೂದಲೆಳೆ ಅಂತರದಲ್ಲಿ 8 ಜನರು ಪಾರಾಗಿದ್ದಾರೆ. ಗುರುವಾರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮದ್ಯಪಾನ ಮಾಡಿ ಚಾಲಕ ಕಾರು ಚಲಾಯಿಸಿದ್ದಾನೆ. ಎಡಕ್ಕೆ ತಿರುಗಿಸದೇ ನೇರವಾಗಿ ಡಿವೈಡರ್​​​​ರನ್ನು ಹಾರಿಸುವ ಮೂಲಕ ಹೋಟೆಲ್​ಗೆ ಡಿಕ್ಕಿ ಹೊಡೆದಿದೆ. ಕಾರು ಡಿವೈಡರ್​ ಹಾರಿ ತಮ್ಮೆಡೆಗೆ ಬರುತ್ತಿರುವುದನ್ನ ಕಂಡ ಯುವಕ-ಯುವತಿಯರ ತಂಡ ಸೇರಿದಂತೆ ಇಬ್ಬರು ಬೈಕ್​ ಚಾಲಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಜೀವನ್ ಭೀಮಾ‌ನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ…

Read More

VIDEO: ಬ್ಯಾಟ್ಸ್​ಮನ್​ನಿಂದ ಗಾಯಗೊಂಡ ಶ್ರೇಯಸ್ ಅಯ್ಯರ್

ಗುಜರಾತ್ ಟೈಟಾನ್ಸ್ (GT) ವಿರುದ್ಧದ ಪಂದ್ಯದ ವೇಳೆ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಗಾಯಗೊಂಡಿದ್ದರು. ಹೀಗೆ ಗಾಯಗೊಂಡಿದ್ದು ಪಂಜಾಬ್ ಕಿಂಗ್ಸ್ ಬ್ಯಾಟರ್​ನಿಂದ. ಅಂದರೆ ಕೂಪರ್ ಕೊನೊಲಿ ಬಾರಿಸಿದ ಚೆಂಡು ಶ್ರೇಯಸ್ ಅಯ್ಯರ್ ಅವರ ಕೈಗೆ ಬಲವಾಗಿ ಬಡಿದಿದೆ. ಇನ್ನಿಂಗ್ಸ್‌ನ 12ನೇ ಓವರ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಕೂಪರ್ ಕೊನೊಲಿ ಹೊಡೆದ ವೇಗದ ‘ಸ್ಟ್ರೈಟ್ ಡ್ರೈವ್’ ಚೆಂಡು ನಾನ್-ಸ್ಟ್ರೈಕರ್ ಎಂಡ್‌ನಲ್ಲಿದ್ದ ಶ್ರೇಯಸ್ ಅಯ್ಯರ್ ಅವರ ಮಣಿಕಟ್ಟಿಗೆ ನೇರವಾಗಿ ಬಡಿಯಿತು. ತೀವ್ರ ನೋವಿನಿಂದ ಅಯ್ಯರ್ ಮೈದಾನದಲ್ಲೇ ಕುಸಿದು ಬಿದ್ದ…

Read More

ಬಿಸಿಲಿನ ತಾಪಕ್ಕೆ ಬೆಂದ ಕರುನಾಡು: ಈ ಜಿಲ್ಲೆಗಳಲ್ಲಿ ಸಂಜೆ ಮಳೆ ಸಂಭವ; ಹವಾಮಾನ ಇಲಾಖೆ ನೀಡಿದ ಎಚ್ಚರಿಕೆ ಏನು? – Kannada News | Bengaluru Weather Today: Scorching 37°C Heat, Karnataka Temperature Alert and Tips

ಬೆಂಗಳೂರು, ಏ.14: ಇಂದು (ಏ.14) ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಬಿಸಿಲಿನ ಶಾಖ ಹೆಚ್ಚಾಗಲಿದೆ. ಈ ಬಗ್ಗೆ ಹವಾಮಾನ ವರದಿ ಮಾಹಿತಿ ನೀಡಿದೆ. ರಾಜಧಾನಿಯಲ್ಲಿ ಇಂದು ಗರಿಷ್ಠ ತಾಪಮಾನ 35°C ರಿಂದ 37°C ಆಸುಪಾಸಿನಲ್ಲಿ ಇರಲಿದೆ. ಬೆಳಿಗ್ಗೆಯಿಂದಲೇ ಬಿಸಿಲ ಧಗೆ ಇರಲಿದ್ದು, ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ಕಂಡುಬರಬಹುದು ಎಂದು ಹೇಳಲಾಗಿದೆ. ಇನ್ನು ಮಂಗಳೂರು, ಉಡುಪಿ ಮತ್ತು ಕಾರವಾರ ಭಾಗಗಳಲ್ಲಿ ತಾಪಮಾನದ ಜೊತೆಗೆ ತೇವಾಂಶ ಹೆಚ್ಚಿರಲಿದ್ದು, ಸೆಖೆಯ ಅನುಭವ ಜಾಸ್ತಿ ಇರಲಿದೆ. ಗರಿಷ್ಠ ತಾಪಮಾನ…

Read More

ಮಗಳ ಜೊತೆಗೆ ಸಖತ್ ಆಗಿ ಸ್ಟೆಪ್ ಹಾಕಿದ ನಟ ಗಣೇಶ್: ವಿಡಿಯೋ – Kannada News | Ganesh’s daughter Charithriya Ganesh shared a video with her dad

ಗಣೇಶ್ (Ganesh), ಕನ್ನಡ ಚಿತ್ರರಂಗದ ಸ್ಟಾರ್ ನಟರಲ್ಲಿ ಒಬ್ಬರು. ಇತ್ತೀಚೆಗಷ್ಟೆ ನಟ ಗಣೇಶ್ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಹಲವಾರು ಅಭಿಮಾನಿಗಳು ಗಣೇಶ್ ಅವರ ಹುಟ್ಟುಹಬ್ಬಕ್ಕೆ ಅವರಿಗೆ ಶುಭಾಶಯಗಳನ್ನು ಕೋರಿದ್ದಾರೆ. ಆದರೆ ವಿಶೇಷವಾಗಿ ಶುಭಾಶಯ ಕೋರಿರುವುದು ಗಣೇಶ್ ಅವರ ಪುತ್ರಿ ಚಾರಿತ್ರ್ಯ. ಗಣೇಶ್ ಪುತ್ರಿ ಚಾರಿತ್ರ್ಯ, ತಾವು ತಂದೆ ಗಣೇಶ್ ಜೊತೆಗೆ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಎಲ್ಲ ವಿಷಯಗಳಲ್ಲೂ ತಮಗೆ ಬೆಂಬಲವಾಗಿ ಇದ್ದಿದ್ದಕ್ಕೆ ಮತ್ತು ಎಲ್ಲವನ್ನೂ ತಮಗೆ ಕಲಿಸಿಕೊಟ್ಟಿದ್ದಕ್ಕೆ ಗಣೇಶ್​​ಗೆ ಧನ್ಯವಾದಗಳನ್ನು ಪುತ್ರಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ದ್ವೇಷವನ್ನು ನಿಷ್ಕಾರವಾಗಿ ಮಾಡುವರು.. – Kannada News | Daily Horoscope for June 27, 2026: Satursday Astrology Predictions

ಮೇಷ ರಾಶಿ: ಉಕ್ಕಿ ಬರುವ ಪ್ರವಾಹವನ್ನು ತಡೆಯಲು ಅಲ್ಪ ಶಕ್ತಿ ಸಾಲದು. ಅಧಿಕಾರದ ದುರುಪಯೋಗವನ್ನು ಮಾಡಿಕೊಳ್ಳುವಿರಿ. ಇದರಿಂದ ನಿಮ್ಮ ಕೆಳಗಿನವರು ಸಿಟ್ಟಗೊಂಡಾರು.‌ ನಿಮ್ಮ ಕೆಲಸದ ಮೇಲೆ ಇದರ ಪರಿಣಾಮವಿರಲಿದೆ. ನಿಮ್ಮ ನಂಬಿ ಹಣವನ್ನು ಕೊಡಬಹುದು. ಅದನ್ನು ಉಳಿಸಿಕೊಳ್ಳಿ. ಸರಿಯಾಗಿ ಸಮಯವನ್ನು ಬಳಸಿ. ಇನ್ನೊಬ್ಬರ ವಸ್ತುವನ್ನು ಕೇಳಿ ಪಡೆಯಿರಿ. ಆಪ್ತರ ಮಾತಿನಿಂದ ನಿಮ್ಮ ಕೆಲವು ಅಭಿಪ್ರಾಯವು ಬದಲಾಗುವುದು. ವೃಷಭ ರಾಶಿ: ತಂದೆಯಿಂದ ಬರಬಹುದಾದ ಧನವು ವಿಳಂಬವಾಗಲಿದೆ. ಎಂದೋ ಆಗಬೇಕಿದ್ದ ಕಾರ್ಯ ಕೊನೆಗೂ ತಾನಾಗಿಯೇ ಘಟಿಸಿದ್ದು, ಖುಷಿ ಇಲ್ಲದೇ ಬೇಸರವೂ…

Read More

ಯಶಸ್ವಿಯಾಗಿ 25 ದಿನ ಪೂರೈಸಿದ ‘ಲವ್ ಮಾಕ್ಟೇಲ್ 3’ ಸಿನಿಮಾ; ಹ್ಯಾಟ್ರಿಕ್ ಗೆಲುವು – Kannada News | Darling Krishna starrer Love Mocktail 3 movie completes 25 days successful run in theatres

ಮಾರ್ಚ್ 19ರಂದು ಕನ್ನಡದ ‘ಲವ್ ಮಾಕ್ಟೇಲ್ 3’ ಸಿನಿಮಾ ಬಿಡುಗಡೆ ಆಗಿತ್ತು. ಡಾರ್ಲಿಂಗ್ ಕೃಷ್ಣ (Darling Krishna) ನಿರ್ದೇಶನ ಮಾಡಿ, ನಾಯಕನಾಗಿ ನಟಿಸಿರುವ ಈ ಸಿನಿಮಾದ ರಿಲೀಸ್ ಅಷ್ಟು ಸುಲಭವಾಗಿ ಇರಲಿಲ್ಲ. ಭಾರಿ ನಿರೀಕ್ಷೆ ಮೂಡಿಸಿದ್ದ ‘ಧುರಂಧರ್ 2’ ಚಿತ್ರದ ಎದುರು ಕನ್ನಡದ ಈ ಸಿನಿಮಾ ರಿಲೀಸ್ ಆಗಬೇಕಿತ್ತು. ಪ್ರಬಲ ಪೈಪೋಟಿಯ ನಡುವೆಯೂ ಈ ಸಿನಿಮಾ ಯಶಸ್ವಿಯಾಗಿ 25 ದಿನಗಳನ್ನು ಪೂರೈಸಿಕೊಂಡಿದೆ. ಇದರಿಂದ ಚಿತ್ರತಂಡಕ್ಕೆ ಬಹಳ ಖುಷಿ ಆಗಿದೆ. ವಿಶೇಷವಾಗಿ ಫ್ಯಾಮಿಲಿ ಪ್ರೇಕ್ಷಕರು ‘ಲವ್ ಮಾಕ್ಟೇಲ್ 3’…

Read More