Headlines

ಹಾರ್ಮುಜ್ ಜಲಸಂಧಿ ರಕ್ಷಣೆಗೆ ಬರಲು ಭಾರತವೂ ಸೇರಿ ಹಲವು ರಾಷ್ಟ್ರಗಳಿಗೆ ಅಮೆರಿಕ ಮನವಿ

ನವದೆಹಲಿ, ಮಾರ್ಚ್ 16: ಜಗತ್ತಿನ ಪ್ರಮುಖ ತೈಲ ಮಾರ್ಗಗಳಲ್ಲಿ ಒಂದೆನಿಸಿರುವ ಹಾರ್ಮುಜ್ ಜಲಸಂಧಿಯಲ್ಲಿ (Strait of Hormuz) ತೈಲ ಹಡಗುಗಳ ಸಾಗಣೆಗೆ ರಕ್ಷಣೆ ಒದಗಿಸಲು ಅಮೆರಿಕವು ಹಲವು ದೇಶಗಳ ನೆರವು ಯಾಚಿಸುತ್ತಿದೆ. ಇರಾನ್ ಯುದ್ಧದಿಂದಾಗಿ ಈ ಹಾರ್ಮುಜ್ ಸ್ಟ್ರೇಟ್ ಬಹುತೇಕ ಸ್ಥಗಿತಗೊಂಡಿದೆ. ತೈಲ ಹೊತ್ತ ಕೆಲವೇ ಕೆಲವು ಹಡಗುಗಳ ಮಾತ್ರ ಆಗಾಗ್ಗೆ ಹೊರಬರುತ್ತಿವೆ. ಇದರ ಪರಿಣಾಮವಾಗಿ ಜಾಗತಿಕವಾಗಿ ತೈಲ ಬೆಲೆ ಗಗನಕ್ಕೇರುತ್ತಿದೆ. ಇದೇ ವೇಳೆ, ಹಾರ್ಮುಜ್ ಜಲಸಂಧಿಯಲ್ಲಿ ತೈಲ ಹಡಗುಗಳನ್ನು ಸಾಗಿಸಲು ಬಿಡುವುದಿಲ್ಲ ಎಂದು ಇರಾನ್ ಹೇಳಿರುವ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 20ರ ದಿನಭವಿಷ್ಯ – Kannada News | December 20 Numerology Prediction: Your Birth Number’s Daily Fortune and Astrology

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಬಾಯಿ ಬಿಟ್ಟು ನಿಮ್ಮ ಮನಸ್ಸಲ್ಲಿ ಇರುವುದನ್ನು ಹೇಳದೆ ಇದ್ದಲ್ಲಿ ನಿಮ್ಮ ನಿರೀಕ್ಷೆ ಏನು ಎಂಬುದು ಇತರರಿಗೆ ತಿಳಿಯುವುದಾದರೂ ಹೇಗೆ? ಇವೆಲ್ಲ ಅರ್ಥ ಆಗಬೇಕಲ್ಲವಾ ಎಂದು ಅಂದುಕೊಳ್ಳುವ ಬದಲು ನಿಮ್ಮ ಅಪೇಕ್ಷೆ ಏನು ಅನ್ನುವುದನ್ನು ಹೇಳಿಬಿಡಿ. ವಿವಾಹಿತರಿಗೆ ಸಂಗಾತಿಯ ಜತೆಗೆ ಉತ್ತಮ ಸಮಯ ಕಳೆಯುವ ಯೋಗ ಇದೆ. ಕಾರು ಖರೀದಿ, ಮನೆ ನಿರ್ಮಾಣ, ಸೈಟು ಖರೀದಿ ಇಂಥ ವಿಷಯಗಳ ಬಗ್ಗೆ ಚರ್ಚೆ…

Read More

IPL 2026: ಆಮೆಗತಿಯ ಶತಕ ಬಾರಿಸಿ ಫ್ಯಾನ್ಸ್​ಗೆ ನಿದ್ದೆ ಬರಿಸಿದ ಐವರು ಆಟಗಾರರಿವರು

ಐಪಿಎಲ್​ಗಾಗಿ (IPL) ಕಾಯುವಿಕೆಗೆ ಅಂತ್ಯ ಹಾಡುವ ಸಮಯ ಬಂದಿದೆ. ಮುಂದಿನ ವಾರದಿಂದ ಕ್ರಿಕೆಟ್ ಅಂಗಳದಲ್ಲಿ ಅಭಿಮಾನಿಗಳ ಗದ್ದಲ ಜೋರಾಗಲಿದೆ. ದೇಶ- ವಿದೇಶದ ಸ್ಟಾರ್ ಆಟಗಾರರು ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಅಬ್ಬರಿಸಲು ಸಿದ್ಧರಾಗಿದ್ದಾರೆ. ಐಪಿಎಲ್ ಎಂದರೆ ನಮಗೆಲ್ಲ ನೆನಪಾಗುವುದು ಬ್ಯಾಟರ್​​ಗಳ ಅಬ್ಬರ, ಬೌಲರ್​ಗಳ ದಯಾನೀಯ ಸ್ಥಿತಿ. ಏಕದಿನ ಹಾಗೂ ಟೆಸ್ಟ್ ಮಾದರಿಯಲ್ಲಿ ಸಾಮಾನ್ಯವಾಗಿದ್ದ ಶತಕಗಳು ಇದೀಗ ಟಿ20 ಮಾದರಿಯಲ್ಲೂ ಸರ್ವೆ ಸಾಮಾನ್ಯವಾಗಿವೆ. ಅದರಲ್ಲೂ ಕೆಲವೇ ಕೆಲವು ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ಬ್ಯಾಟ್ಸ್‌ಮನ್​ಗಳು ಅಭಿಮಾನಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದ್ದಾರೆ….

Read More

ಅರಬ್ಬಿ ಸಮುದ್ರದಲ್ಲಿ ಅಮೆರಿಕದ ಮಿಲಿಟರಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ: ಓರ್ವ ಸಿಬ್ಬಂದಿ ನಾಪತ್ತೆ – Kannada News | US Military Helicopter Emergency Lands in Arabian Sea, Crew Member Missing

ಮನಾಮ, ಜುಲೈ 02: ಮಧ್ಯಪ್ರಾಚ್ಯದಲ್ಲಿ ಇರಾನ್(Iran) ಜೊತೆಗಿನ ಉದ್ವಿಗ್ನತೆಯ ಮಧ್ಯೆಯೇ ಅರಬ್ಬಿ ಸಮುದ್ರದಲ್ಲಿ ಅಮೆರಿಕ ನೌಕಾಪಡೆಗೆ (US Navy) ಸೇರಿದ ಯುದ್ಧ ಹೆಲಿಕಾಪ್ಟರ್ ಒಂದು ತುರ್ತು ಪರಿಸ್ಥಿತಿಯಿಂದಾಗಿ ಸಮುದ್ರದ ನೀರಿನ ಮೇಲೆಯೇ ಲ್ಯಾಂಡಿಂಗ್ ಮಾಡಿದೆ. ಹೆಲಿಕಾಪ್ಟರ್‌ನಲ್ಲಿದ್ದ ನಾಲ್ವರು ಸಿಬ್ಬಂದಿಗಳ ಪೈಕಿ ಮೂವರನ್ನು ಯಶಸ್ವಿಯಾಗಿ ರಕ್ಷಿಸಲಾಗಿದ್ದು, ನಾಪತ್ತೆಯಾಗಿರುವ ಮತ್ತೊಬ್ಬ ಸಿಬ್ಬಂದಿಗಾಗಿ ಸಮುದ್ರದಲ್ಲಿ ಬೃಹತ್ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಅಮೆರಿಕದನೌಕಾಪಡೆ ನೀಡಿರುವ ಅಧಿಕೃತ ಮಾಹಿತಿಯ ಪ್ರಕಾರ, ಮುಂಜಾನೆ 3.30 ರ ಸುಮಾರಿಗೆ ಸಂಭವಿಸಿದೆ. ಅಪಘಾತಕ್ಕೀಡಾದ ಹೆಲಿಕಾಪ್ಟರ್ ಅನ್ನು ‘MH-60S ಸೀ…

Read More

‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ

ದುನಿಯಾ ವಿಜಯ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 3ನೇ ಸಿನಿಮಾ ‘ಸಿಟಿ ಲೈಟ್ಸ್’ (City Lights) ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ‘ಸಲಗ’, ‘ಭೀಮ’ ಬಳಿಕ ವಿಜಯ್ ಕುಮಾರ್ ಅವರು ಆ್ಯಕ್ಷನ್-ಕಟ್ ಹೇಳಿರುವ ಸಿನಿಮಾ ಇದು. ಈ ಸಿನಿಮಾದಿಂದ ಇತ್ತೀಚೆಗೆ ‘ಬಾವ ಬಾವ’ ಹಾಡನ್ನು ಬಿಡುಗಡೆ ಮಾಡಲಾಗಿತ್ತು. ಆ ಮೂಲಕ ‘ಸಿಟಿ ಲೈಟ್ಸ್‌’ ಸಿನಿಮಾದ ಪ್ರಚಾರಕ್ಕೆ ಚುರುಕು ಮುಟ್ಟಿಸಲಾಯಿತು. ಈ ಚಿತ್ರದ ಮೂಲಕ ಪುತ್ರಿ ಮೋನಿಷಾ ವಿಜಯ್‌ ಕುಮಾ‌ರ್ (Monisha Vijay Kumar) ಅವರನ್ನು ಚಿತ್ರರಂಗಕ್ಕೆ ಪರಿಚಯಿಸಲಾಗುತ್ತಿದೆ. ಅವರ…

Read More

ಪವಿತ್ರಾ ಮನೆಯೂಟಕ್ಕೆ ತಡೆ ಒಡ್ಡಲು ಮುಂದಾದ ಪೊಲೀಸರು: ಜೈಲೂಟವೇ ಗತಿ? – Kannada News | Pavithra Gowda got home food in Jail, police to file application to court

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣ ಆರೋಪಿ ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನಗಳನ್ನು ದೂಡುತ್ತಿದ್ದಾರೆ. ಸುಪ್ರೀಂಕೋರ್ಟ್​​ನಲ್ಲಿ ಕೊಲೆ ಆರೋಪಿಗಳ ಜಾಮೀನು ರದ್ದಾದ ಬಳಿಕ ಪವಿತ್ರಾ ಗೌಡ ಸತತವಾಗಿ ಜಾಮೀನಿಗಾಗಿ ಪ್ರಯತ್ನ ಮಾಡುತ್ತಲೇ ಇದ್ದಾರೆ. ಆದರೆ ಜಾಮೀನು ಸಿಕ್ಕಿಲ್ಲ. ಆದರೆ ಈಗ ಜೈಲಿನಲ್ಲಿಯೇ ಕೆಲವು ಸವಲತ್ತುಗಳನ್ನು ಪಡೆದುಕೊಳ್ಳಲು ನ್ಯಾಯಾಲಯದ ಮೊರೆ ಹೋಗಿದ್ದರು. ಅದರಲ್ಲಿ ಮನೆಯೂಟವೂ ಒಂದಾಗಿತ್ತು. ಪವಿತ್ರಾ ಗೌಡ ಅವರ ಮನೆ ಊಟದ ಬೇಡಿಕೆಯನ್ನು ಇತ್ತೀಚೆಗಷ್ಟೆ ನ್ಯಾಯಾಲಯ ಒಪ್ಪಿತ್ತು. ಅದರಂತೆ ಜನವರಿ 2 ರಿಂದ…

Read More

ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ ‘ರಾಷ್ಟ್ರಭಾಷೆ’ಯ ಚರ್ಚೆ! – Kannada News | Sanjay Bangar Sparks ‘Rashtrabhasha’ Debate on KL Rahul

ವಡೋದರಾದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ಕೆಎಲ್ ರಾಹುಲ್, ವಾಷಿಂಗ್ಟನ್ ಸುಂದರ್​ಗೆ ತಮಿಳಿನಲ್ಲಿ ಸಲಹೆಗಳನ್ನು ನೀಡುತ್ತಿದ್ದರು. ಸುಂದರ್​ಗೆ ಚೆಂಡನ್ನು ಹೇಗೆ ಎಸೆಯಬೇಕೆಂದು ತಮಿಳಿನಲ್ಲಿ ಹೇಳುತ್ತಿರುವ ಕೆಎಲ್ ರಾಹುಲ್ ಧ್ವನಿ ಸ್ಟಂಪ್ ಮೈಕ್​ನಲ್ಲಿ ಸೆರೆಯಾಗಿದೆ. ಅತ್ತ ಕೆಎಲ್ ರಾಹುಲ್​ಗೆ ತಮಿಳು ಬರುತ್ತಿದ್ದು, ಇತ್ತ ತಮಿಳುನಾಡು ಮೂಲದ ಕ್ರಿಕೆಟಿಗನೊಂದಿಗೆ ತಮಿಳಿನಲ್ಲೇ ಸಂಬೋಧಿಸುತ್ತಿದ್ದರು. ಇದನ್ನು ಕೇಳಿದ ಕಾಮೆಂಟೇಟರ್ ವರುಣ್ ಆರೋನ್, ಸುಂದರ್​ ಜೊತೆ ಕೆಎಲ್ ರಾಹುಲ್ ತಮಿಳಿನಲ್ಲಿ ಮಾತನಾಡಬೇಕಾಗುತ್ತದೆ. ಇದರಿಂದ ಅವರಿಗೆ ಬೇಗ…

Read More

ತ್ರಿಷಾ ಬರ್ತ್​​​ಡೇ ದಿನ ದಳಪತಿ ವಿಜಯ್ ರಾಜಕೀಯ ಭವಿಷ್ಯ; ಚುನಾವಣೆಗೂ ಮುನ್ನವೇ ಡಿವೋರ್ಸ್?

ಸದ್ಯ ತಮಿಳುನಾಡು ಚುನಾವಣಾ ದಿನಾಂಕ ಘೋಷಣೆ ಆಗಿದೆ. ಏಪ್ರಿಲ್ 23ರಂದು ಒಂದೇ ಹಂತದಲ್ಲಿ ರಾಜ್ಯದ 234 ಕ್ಷೇತ್ರಗಳಿಗೂ ಚುನಾವಣೆ ನಡೆಯಲಿದೆ. ದಳಪತಿ ವಿಜಯ್ ಅವರ ಟಿವಿಕೆ (ತಮಿಳಗ ವೆಟ್ರಿ ಕಳಗಮ್) ಪಕ್ಷ ಎಲ್ಲಾ ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ. ಹೀಗಿರುವಾಗಲೇ ಕೆಲವೊಂದು ಅಚ್ಚರಿಯ ವಿಷಯ ಬೆಳಕಿಗೆ ಬಂದಿದೆ. ವಿಜಯ್ ಅವರು ಚುನಾವಣೆಗೂ ಮೊದಲೇ ಡಿವೋರ್ಸ್ ಪಡೆದುಕೊಳ್ಳುತ್ತಾರಾ ಎಂಬ ಪ್ರಶ್ನೆ ಕಾಡಿದೆ. ತ್ರಿಷಾ ಬರ್ತ್​​​ಡೇ ದಿನ ವಿಜಯ್ (Vijay) ರಾಜಕೀಯ ಭವಿಷ್ಯ ನಿರ್ಧಾರ ಆಗಲಿದೆ. ವಿಜಯ್ ಅವರ ಪತ್ನಿ ಸಂಗೀತಾ…

Read More

ಭಾರತದ ವಿರುದ್ಧದ ಸರಣಿ ಆರಂಭಕ್ಕೂ ಮುನ್ನವೇ ನ್ಯೂಝಿಲೆಂಡ್​ಗೆ ಆಘಾತ – Kannada News | Michael Bracewell in doubt for India T20Is

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿಯು ನಾಳೆಯಿಂದ (ಜ.21) ಶುರುವಾಗಲಿದೆ. ಈ ಸರಣಿ ಆರಂಭಕ್ಕೂ ಮುನ್ನವೇ ಕಿವೀಸ್ ಪಡೆಗೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಮೈಕೆಲ್​ ಬ್ರೇಸ್​ವೆಲ್ ಇಡೀ ಸರಣಿಯಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಇಂದೋರ್​ನಲ್ಲಿ ನಡೆದ ಭಾರತದ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಮೈಕೆಲ್ ಬ್ರೇಸ್​ವೆಲ್ ಕಾಲು ನೋವಿಗೆ ಒಳಗಾಗಿ ಮೈದಾನ ತೊರೆದಿದ್ದರು. ಇದೀಗ ಈ ಗಾಯದ ಕಾರಣ ಸಂಪೂರ್ಣ ಟೂರ್ನಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಮೈಕೆಲ್…

Read More

ಇತಿಹಾಸದಲ್ಲೇ ಮೊದಲು… ಟೀಮ್ ಇಂಡಿಯಾ ಕ್ಯಾಪ್ಟನ್ ಹೆಗಲಿಗೆ ಬೇಡದ ದಾಖಲೆ! – Kannada News | Team India Captain Shreyas Iyer Creates unwanted Record

ಟೀಮ್ ಇಂಡಿಯಾವನ್ನು ಟಿ20 ಕ್ರಿಕೆಟ್​ನಲ್ಲಿ ಈವರೆಗೆ 15 ನಾಯಕರುಗಳು ಮುನ್ನಡೆಸಿದ್ದಾರೆ. ಈ ಹದಿನೈದು ನಾಯಕರುಗಳಲ್ಲಿ ಹದಿನಾಲ್ಕು ಕ್ಯಾಪ್ಟನ್​ಗಳು ಬರೆಯದ ಅನಗತ್ಯ ದಾಖಲೆಯೊಂದು ಶ್ರೇಯಸ್ ಅಯ್ಯರ್ ಪಾಲಾಗಿದೆ. ಅದು ಸಹ ಸೋಲುಗಳೊಂದಿಗೆ..! ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಪಂದ್ಯದಲ್ಲಿ ಭಾರತ ತಂಡ 4 ವಿಕೆಟ್‌ಗಳ ಸೋಲನ್ನು ಅನುಭವಿಸಿದೆ. ಇದರೊಂದಿಗೆ ನಾಯಕ ಶ್ರೇಯಸ್ ಅಯ್ಯರ್ ಅವರ ಗೆಲುವಿನ ಕಾಯುವಿಕೆ ಮತ್ತಷ್ಟು ಸುದೀರ್ಘವಾಗಿದೆ. ನಾಯಕನಾಗಿ ಜವಾಬ್ದಾರಿ ವಹಿಸಿಕೊಂಡ ಆರಂಭದ ನಾಲ್ಕೂ ಪಂದ್ಯಗಳಲ್ಲಿ ಒಂದೂ ಜಯ ಕಾಣದ ಭಾರತದ ಮೊದಲ ಕ್ಯಾಪ್ಟನ್ ಎಂಬ…

Read More