ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 8ರ ದಿನಭವಿಷ್ಯ

ಶಂಕರಾಚಾರ್ಯರಿಂದ ರಚಿತವಾದ ತ್ರಿಪುರಸುಂದರಿ ಅಷ್ಟಕಂ ಶ್ರವಣ ಮಾಡಿ. ಒತ್ತಡ, ಅಂಜಿಕೆ ಹಾಗೂ ಭಾವನೆಗಳ ಏರಿಳಿತದಿಂದ ಹೊರಬರುವುದಕ್ಕೆ ಮಾರ್ಗೋಪಾಯ ಗೋಚರ ಆಗಲಿದೆ. ದೀರ್ಘ ಪ್ರಯಾಣ ಮಾಡುತ್ತಾ ಇದ್ದೀರಿ ಅಂತಾದಲ್ಲಿ ವಾಹನ ಚಾಲನೆಯಲ್ಲಿ ಎಚ್ಚರ ವಹಿಸಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ನಿಮಗೆ ಅಂದುಕೊಂಡಿದ್ದೆಲ್ಲ ಸರಿ ಎಂದೆನಿಸದರೆ ಸಾಲದು, ವಾಸ್ತವಕ್ಕೆ ಹತ್ತಿರ ಇರುವ ರೀತಿಯಲ್ಲಿ ಇದೆಯಾ ಎಂಬುದನ್ನು ಖಾತ್ರಿ ಮಾಡಿಕೊಳ್ಳುವುದು ಮುಖ್ಯವಾಗುತ್ತದೆ. ಇನ್ನು ನೀವಾಗಿಯೇ ಗಂಭೀರವಾದ ವಿಚಾರ ಮಾತನಾಡುತ್ತಿದ್ದೀರಿ ಎಂದಾದಲ್ಲಿ ಮಾತನಾಡುವಾಗ ಬಹಳ ಎಚ್ಚರಿಕೆಯಿಂದ ಇರಬೇಕು. ಏಕೆಂದರೆ ಹೇಳಿದ್ದೇ ಹೇಳಿ ಎದುರಿನಲ್ಲಿ ಇರುವವರಿಗೆ ನಿಮ್ಮ ಮೇಲೆ ಗೌರವ ಕಡಿಮೆ ಆಗುವಂತೆ ಮಾಡಿಕೊಳ್ಳಲಿದ್ದೀರಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಒಳ್ಳೆ ಮೊತ್ತವೇ ನೀಡಬಹುದು ಎಂಬ ನಿರೀಕ್ಷೆ ಇಟ್ಟುಕೊಂಡು, ಮಾಡಿದ ಕೆಲಸ ಅಥವಾ ಪ್ರಾಜೆಕ್ಟ್ ನಿಂದ ಬಹಳ ಕಡಿಮೆ ಹಣ ಸಿಗಬಹುದು. ಮನೆಯಿಂದ ಹೊರಗೆ ಊಟ- ತಿಂಡಿ ಮಾಡುವಂಥವರು ಸ್ವಚ್ಛತೆ ಬಗ್ಗೆ ಜಾಸ್ತಿ ಗಮನ ನೀಡಿ. ಸ್ನೇಹಿತರು ಅಥವಾ ಸಂಬಂಧಿಕರ ಒತ್ತಡಕ್ಕೆ ಮಣಿದು, ಮನೆಯ ಹೊರಗಿನಊಟ ಮಾಡಿದಿರೋ ಆರೋಗ್ಯ ಕೈ ಕೊಡುವ ಎಲ್ಲ ಸಾಧ್ಯತೆಗಳಿವೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ನಿರೀಕ್ಷೆಗೂ ಮೀರಿದ ಆದಾಯ ಬರುವಂಥ ಸೂಚನೆಗಳು ದೊರೆಯಲಿವೆ. ಮನರಂಜನೆಗೆ ಸಂಬಂಧಿಸಿದ ವೃತ್ತಿಯಲ್ಲಿ ಇರುವಂಥವರಿಗೆ ಬಹಳ ಒಳ್ಳೆ ಸಮಯ ಇದಾಗಿರಲಿದೆ. ಸಂಗೀತಗಾರರು, ಸ್ಟ್ಯಾಂಡ್ ಅಪ್ ಕಮೆಡಿಯನ್ ಗಳು, ಮ್ಯಾಜಿಕ್ ಮಾಡುವಂಥವರು ಮತ್ತು ಅದನ್ನೇ ತಮ್ಮ ವೃತ್ತಿಯನ್ನಾಗಿ ಆರಿಸಿಕೊಂಡವರಿಗೆ ಆದಾಯದಲ್ಲಿ ಹೆಚ್ಚಳ ಆಗಲಿದೆ. ಸಿಹಿ ಪದಾರ್ಥಗಳ ವಿಚಾರವಾಗಿ ಹತೋಟಿಯಲ್ಲಿರಿ.

ಲೇಖನ- ಸ್ವಾತಿ ಎನ್.ಕೆ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 9ರ ದಿನಭವಿಷ್ಯ 

ಉದ್ಯೋಗ ಬದಲಾವಣೆಗೆ ಪ್ರಯತ್ನ ಮಾಡುತ್ತಿರುವವರು ಅಥವಾ ಉದ್ಯೋಗ ಜೀವನ ಆರಂಭ ಮಾಡಬೇಕಿರುವವರು ಈಶ್ವರನಿಗೆ ಹಾಲಿನ ಅಭಿಷೇಕವನ್ನು ಮಾಡಿಸಬಹುದು, ಸಾಧ್ಯವಿದ್ದಲ್ಲಿ ನೀವೇ ಮನೆಯಲ್ಲಿ ಇಟ್ಟುಕೊಂಡಿರುವ ಶಿವಲಿಂಗಕ್ಕೆ ಅಭಿಷೇಕ ಮಾಡುವುದರಿಂದ ಅನುಕೂಲ ಒದಗಿ ಬರಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಬಹಳ ಸಮಯದಿಂದ ನೀವು ಅಂದುಕೊಳ್ಳುತ್ತಿದ್ದ ಹಲವು ವಿಷಯಗಳನ್ನು ತಾರ್ಕಿಕ ಅಂತ್ಯ ತಲುಪಿಸುವುದಕ್ಕೆ ನಿರ್ಧಾರ ಮಾಡುತ್ತೀರಿ. ಅದಕ್ಕಾಗಿ ಸಮಯ- ಹಣವನ್ನು ಸಹ ಮೀಸಲಿಡುವುದಕ್ಕೆ ತೀರ್ಮಾನವನ್ನು ಮಾಡಲಿದ್ದೀರಿ. ಈ ಕಾರಣದಿಂದಾಗಿ ನಿಂತು ಹೋಗಿದ್ದ ಕೆಲಸ- ಕಾರ್ಯಗಳಿಗೆ ಚಾಲನೆ ದೊರೆಯಲಿದೆ. ಅಷ್ಟೇ ಅಲ್ಲ, ವೇಗ ಕೂಡ ಸಿಗಲಿದೆ. ನೀವು ನಿರೀಕ್ಷೆ ಮಾಡದ ರೀತಿಯಲ್ಲಿ ಕೆಲವರು ನಿಮಗೆ ಬೆಂಬಲ ನೀಡಲಿದ್ದಾರೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಅನಾರೋಗ್ಯದ ಕಾರಣಕ್ಕೆ ಕೆಲವು ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸಬೇಕಾಗಲಿದೆ. ಇದಕ್ಕೆ ನೀವು ಅಂದುಕೊಂಡಿದ್ದಕ್ಕಿಂತ ಹೆಚ್ಚಿನ ವೆಚ್ಚ ಆಗಲಿದೆ. ಜತೆಗೆ ಇವೇ ಪರೀಕ್ಷೆಗಳನ್ನು ಇನ್ನೊಮ್ಮೆ ಮಾಡಿಸಿಕೊಳ್ಳಬೇಕಾದ ಸನ್ನಿವೇಶ ಸೃಷ್ಟಿ ಆಗಲಿದೆ. ಆದ್ದರಿಂದ ವೈದ್ಯರು ಸೂಚಿಸಿದ ಕಡೆಯಲ್ಲಿ ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ. ಎಲ್ಲಿ ಮತ್ತು ಯಾರಿಗೆ ಸ್ಪಷ್ಟತೆ ನೀಡಬೇಕಿದೆಯೋ ಅವರಿಗೆ ಸರಿಯಾದ ಉತ್ತರವನ್ನು ನೀಡಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ನಿಮ್ಮ ಆಪ್ತರು ಎನಿಸಿಕೊಂಡವರು ತಮ್ಮ ಮೇಲೆ ಬಂದ ನಿಂದೆ ಅಥವಾ ಆರೋಪವನ್ನು ನಿಮ್ಮ ಕಡೆಗೆ ತಿರುಗಿಸುವಂಥ ಸಾಧ್ಯತೆಗಳಿವೆ. ಫೋನ್ ರೆಕಾರ್ಡಿಂಗ್ ಅಥವಾ ನಿಮ್ಮದೇ ವಿಡಿಯೋ ಇಂಥದ್ದನ್ನು ಬಳಸಿಕೊಂಡು, ಕೆಲವರು ಪಿತೂರಿ ಮಾಡಬಹುದು. ಮುಕ್ತ ಮನಸ್ಸಿನಿಂದ ಇದ್ದಲ್ಲಿ ಸಮಸ್ಯೆಯಿಂದ ಹೊರಬರುವಂಥ ಮಾರ್ಗ ಗೋಚರ ಆಗಲಿದೆ. ಸುಖಾಸುಮ್ಮನೆ ಗಾಬರಿ ಆಗಬೇಡಿ. ಪರಿಸ್ಥಿತಿಯನ್ನು ಧೈರ್ಯವಾಗಿ ಎದುರಿಸಿ.

ಲೇಖನ- ಸ್ವಾತಿ ಎನ್.ಕೆ.

Source link

T20 World Cup: ತವರಿನಲ್ಲಿ ಐರ್ಲೆಂಡ್ ವಿರುದ್ಧ ಶ್ರೀಲಂಕಾಗೆ 20 ರನ್ ಜಯ – Kannada News | 2026 T20 World Cup: Sri Lanka Beat Ireland by 20 Runs in Colombo Opener

2026 ರ ಟಿ20 ವಿಶ್ವಕಪ್‌ನ (T20 World Cup 2026) ಆರನೇ ಪಂದ್ಯ ಶ್ರೀಲಂಕಾ ಮತ್ತು ಐರ್ಲೆಂಡ್ ( Sri Lanka vs Ireland) ನಡುವೆ ನಡೆಯಿತು. ಈ ಪಂದ್ಯವು ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಶ್ರೀಲಂಕಾ, ಐರ್ಲೆಂಡ್ ತಂಡವನ್ನು 20 ರನ್‌ಗಳಿಂದ ಸೋಲಿಸಿ ತವರಿನಲ್ಲಿ ಗೆಲುವಿನ ಶುಭಾರಂಭ ಮಾಡಿತು. ಈ ಪಂದ್ಯದಲ್ಲಿ ಐರ್ಲೆಂಡ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 20 ಓವರ್‌ಗಳಲ್ಲಿ 6 ವಿಕೆಟ್‌ಗಳಿಗೆ 163 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಐರ್ಲೆಂಡ್ 143 ರನ್ ಕಲೆಹಾಕಲಷ್ಟೇ ಶಕ್ತವಾಗಿ 20 ರನ್​ಗಳಿಂದ ಸೋಲೊಪ್ಪಿಕೊಂಡಿತು.

163 ರನ್‌ ದಾಖಲಿಸಿದ ಶ್ರೀಲಂಕಾ

ತವರು ನೆಲದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 6 ವಿಕೆಟ್ ನಷ್ಟಕ್ಕೆ 163 ರನ್ ಗಳಿಸಿತು. ಒಂದು ಹಂತದಲ್ಲಿ ಲಂಕಾ ತಂಡ 86 ರನ್ ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿತ್ತು. ಆದರೆ ಕಮಿಂದು ಮೆಂಡಿಸ್ ಐರಿಶ್ ಬೌಲರ್​ಗಳ ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಕೊನೆಯಲ್ಲಿ ಆಕ್ರಮಣಕಾರಿ ಬ್ಯಾಟಿಂಗ್ ಮಾಡಿದ ಕಮಿಂದು 19 ಎಸೆತಗಳಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್‌ಗಳೊಂದಿಗೆ 44 ರನ್ ಗಳಿಸಿದರು. ಕುಶಾಲ್ ಮೆಂಡಿಸ್ ಕೂಡ ಅದ್ಭುತ ಪ್ರದರ್ಶನ ನೀಡಿ 43 ಎಸೆತಗಳಲ್ಲಿ 5 ಬೌಂಡರಿ ಸೇರಿದಂತೆ ಅಜೇಯ 56 ರನ್ ಗಳಿಸಿದರು. ಹೀಗಾಗಿ ಶ್ರೀಲಂಕಾ 163 ರನ್‌ಗಳ ಸ್ಕೋರ್ ಗಳಿಸಿತು. ಐರ್ಲೆಂಡ್ ಪರ ಬ್ಯಾರಿ ಮೆಕಾರ್ಥಿ ಮತ್ತು ಜಾರ್ಜ್ ಡಾಕ್ರೆಲ್ ತಲಾ 2 ವಿಕೆಟ್ ಪಡೆದರು.

T20 World Cup: 2ನೇ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆ ಖಚಿತ

143 ರನ್​ಗಳಿಗೆ ಐರ್ಲೆಂಡ್ ಆಲೌಟ್

164 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಐರ್ಲೆಂಡ್ ತಂಡವು ಕಳಪೆ ಆರಂಭವನ್ನು ಪಡೆಯಿತು. ಐರ್ಲೆಂಡ್ ಪರ ರಾಸ್ ಅಡೈರ್ 34 ರನ್ ಗಳಿಸಿದರೆ, ಹ್ಯಾರಿ ಟೆಕ್ಟರ್ ಕೂಡ 40 ರನ್ ಗಳಿಸಿದರು. ಉಳಿದ ಐರಿಶ್ ಬ್ಯಾಟ್ಸ್‌ಮನ್‌ಗಳಿಗೆ ಲಂಕಾ ಸ್ಪಿನ್ ದಾಳಿಯ ಮುಂದೆ ಹೆಚ್ಚು ಹೊತ್ತು ಕ್ರೀಸ್​ನಲ್ಲಿ ನಿಲ್ಲಲುನ ಸಾಕಾಗಲಿಲ್ಲ. ಪರಿಣಾಮವಾಗಿ ಐರ್ಲೆಂಡ್ ತಂಡವು 19.5 ಓವರ್‌ಗಳಲ್ಲಿ ಎಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು ಕೇವಲ 143 ರನ್‌ಗಳನ್ನು ಗಳಿಸಿತು. ಶ್ರೀಲಂಕಾ ತಂಡದ ಮಹೀಶ್ ತೀಕ್ಷಣ ಮತ್ತು ವನಿಂದು ಹಸರಂಗ ತಲಾ ಮೂರು ವಿಕೆಟ್‌ಗಳನ್ನು ಪಡೆದರೆ ಮತೀಶ ಪತಿರಾನ ಕೂಡ ಎರಡು ವಿಕೆಟ್‌ಗಳನ್ನು ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:11 pm, Sun, 8 February 26

Source link

‘ದುಬೈ’ನಲ್ಲಿ ಸಿನಿಮಾ ಮುಹೂರ್ತ: ಕನಸು ಹಂಚಿಕೊಂಡ ಆರ್ ಚಂದ್ರು – Kannada News | R Chandru talks about his upcoming movies here is the video

ಕನ್ನಡದ ಜನಪ್ರಿಯ ನಿರ್ದೇಶಕರಲ್ಲಿ ಒಬ್ಬರಾಗಿರುವ ಆರ್ ಚಂದ್ರು (R Chandru), ನಿರ್ಮಾಪಕರೂ ಸಹ ಹೌದು. ‘ತಾಜ್ ಮಹಲ್’, ‘ಕಬ್ಜ’ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಇದೀಗ ಅವರ ನಿರ್ಮಾಣದ ‘ಫಾದರ್’ ಸಿನಿಮಾ ಶೀಘ್ರವೇ ಬಿಡುಗಡೆ ಆಗಲಿದೆ. ‘ಫಾದರ್’ ಸಿನಿಮಾದ ಬಿಡುಗಡೆ ಮಾಹಿತಿ ಹಂಚಿಕೊಂಡಿರುವ ಆರ್ ಚಂದ್ರು, ತಮ್ಮ ನಿರ್ದೇಶನದ ಹೊಸ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ‘ನಾನು ಹೊಸದೊಂದು ಸಿನಿಮಾ ಕತೆ ರೆಡಿ ಮಾಡಿಕೊಂಡಿದ್ದೀನಿ. ಈ ಬಾರಿ ಕಂಟೆಂಟ್ ಚೆನ್ನಾಗಿ ಮಾಡಿಕೊಂಡಿದ್ದೀನಿ. ದುಬೈಗೆ ಹೋಗಿದ್ದಾಗ, ಇಲ್ಲಿ ಆಫೀಸ್ ಮಾಡಿ, ಇಲ್ಲಿಯೂ ಸಿನಿಮಾ ಮಾಡೋಣವೇ ಅನಿಸಿತು’ ಎಂದು ಚಂದ್ರು ಹೇಳಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

T20 World Cup: ‘ಕೋಚ್ ಆಗಲು ನಾನು ರೆಡಿ’; ನೇಪಾಳ ತಂಡದ ಆಟಕ್ಕೆ ಆಫ್ರಿಕಾ ವೇಗಿ ಫಿದಾ – Kannada News | Dale Steyn Offers to Coach Nepal Cricket After Heroic T20 World Cup Fight vs England

2026 ರ ಟಿ20 ವಿಶ್ವಕಪ್ (T20 World Cup 2026) ಅಬ್ಬರದಿಂದ ಆರಂಭವಾಗಿದೆ. ಪ್ರಮುಖ ತಂಡಗಳ ಜೊತೆಗೆ, ಹೊಸ ತಂಡಗಳು ಸಹ ಈ ಪಂದ್ಯಾವಳಿಯಲ್ಲಿ ಭಾಗವಹಿಸಿವೆ. ನಡೆದಿರುವ 5 ಪಂದ್ಯಗಳಲ್ಲಿ ಹೊಸ ತಂಡಗಳು ಕೂಡ ಅದ್ಭುತ ಪ್ರದರ್ಶನ ನೀಡಿ ಪಂದ್ಯಾವಳಿಯನ್ನು ರೋಚಕಗೊಳಿಸಿವೆ. ಪಂದ್ಯಾವಳಿಯ ಮೊದಲ ಪಂದ್ಯದಲ್ಲಿಯೇ ನೆದರ್ಲ್ಯಾಂಡ್ಸ್, ಪಾಕಿಸ್ತಾನಕ್ಕೆ ಸೋಲಿನ ಭಯ ತೋರಿಸಿತ್ತು. ಯುಎಸ್ಎ ಕೂಡ ಹಾಲಿ ಚಾಂಪಿಯನ್ ಟೀಮ್ ಇಂಡಿಯಾ ವಿರುದ್ಧ ಗಮನಾರ್ಹ ಪ್ರದರ್ಶನ ನೀಡಿತ್ತು. ಇದೀಗ ಫೆಬ್ರವರಿ 8 ರಂದು ನಡೆದ ಪಂದ್ಯದಲ್ಲಿ ನೇಪಾಳ, ಇಂಗ್ಲೆಂಡ್ ತಂಡಕ್ಕೆ ಸಮನಾದ ಹೋರಾಟ ನೀಡಿತು. ಇಂಗ್ಲೆಂಡ್ ವಿರುದ್ಧ ನೇಪಾಳ ತಂಡದ ಪ್ರದರ್ಶನಕ್ಕೆ ಇಡೀ ವಿಶ್ವ ಕ್ರಿಕೆಟ್ ಸಲಾಂ ಹೊಡೆದಿದೆ. ಲೆಜೆಂಡರಿ ಆಟಗರರು ನೇಪಾಳ ತಂಡದ ಪ್ರದರ್ಶನವನ್ನು ಕೊಂಡಾಡಿದ್ದಾರೆ. ಇದರ ಜೊತೆಗೆ ದಕ್ಷಿಣ ಆಫ್ರಿಕಾ ತಂಡದ ಮಾಜಿ ಲೆಜೆಂಡರಿ ವೇಗಿ ಡೇಲ್ ಸ್ಟೈನ್, ನೇಪಾಳ ತಂಡದ ಕೋಚ್ ಆಗಲು ನಾನು ಸಿದ್ಧ ಎಂದಿದ್ದಾರೆ.

ಸೇವೆ ನೀಡಲು ಸಿದ್ಧನಿದ್ದೇನೆ

ಡೇಲ್ ಸ್ಟೇನ್ ನೇಪಾಳ ತಂಡಕ್ಕೆ ತರಬೇತಿ ನೀಡಲು ಮುಂದಾಗಿದ್ದು, ನೇಪಾಳ ತಂಡದೊಂದಿಗೆ ಕೆಲಸ ಮಾಡುವ ಬಯಕೆಯನ್ನು ವ್ಯಕ್ತಪಡಿಸಿ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಈ ಪಂದ್ಯದ ನಂತರ ಪೋಸ್ಟ್ ಹಂಚಿಕೊಂಡಿರುವ ಡೇಲ್ ಸ್ಟೇನ್, ‘ನೇಪಾಳ, ನಿಮಗೆ ಎಂದಾದರೂ ನನ್ನ ಅಗತ್ಯವಿದ್ದರೆ ನಾನು ನಿಮ್ಮ ತಂಡಕ್ಕೆ ಸೇವೆ ನೀಡಲು ಸಿದ್ಧನಿದ್ದೇನೆ’ ಎಂದು ಬರೆದಿದ್ದಾರೆ. ಡೇಲ್ ಸ್ಟೇನ್ ಅವರ ಈ ಪೋಸ್ಟ್ ಇದೀಗ ವೈರಲ್ ಆಗಿದೆ.

ಡೇಲ್ ಸ್ಟೇನ್ ಅವರ ಈ ಆಫರ್ ನೇಪಾಳ ಕ್ರಿಕೆಟ್‌ಗೆ ಸಿಕ್ಕ ದೊಡ್ಡ ಗೌರವವಾಗಿದೆ. ಅಲ್ಲದೆ ನೇಪಾಳ ತಂಡದ ಈ ಉನ್ನತ ಮಟ್ಟದ ಪ್ರದರ್ಶನ ಎಲ್ಲರನ್ನೂ ಅಚ್ಚರಿಗೊಳಿಸಿದೆ. ಅಷ್ಟಕ್ಕೂ ನೇಪಾಳ ಈ ಹಿಂದೆಯೂ ಈ ರೀತಿಯ ಅಚ್ಚರಿಯ ಪ್ರದರ್ಶನಗಳನ್ನು ನೀಡಿದ್ದು, ಈ ಹಿಂದೆ ದಕ್ಷಿಣ ಆಫ್ರಿಕಾ ವಿರುದ್ಧ ಕೇವಲ ಒಂದು ರನ್‌ನಿಂದ ಸೋತಿತ್ತು. ಮಾತ್ರವಲ್ಲದೆ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯನ್ನು ಸಹ ಗೆದ್ದಿದೆ.

ಪಂದ್ಯ ಹೀಗಿತ್ತು

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 20 ಓವರ್‌ಗಳಲ್ಲಿ 184 ರನ್ ಗಳಿಸಿತು. ತಂಡದ ಪರ ನಾಯಕ ಹ್ಯಾರಿ ಬ್ರೂಕ್ 32 ಎಸೆತಗಳಲ್ಲಿ 53 ರನ್ ಗಳಿಸಿರೆ, ಜಾಕೋಬ್ ಬೆಥೆಲ್ 35 ಎಸೆತಗಳಲ್ಲಿ 55 ರನ್ ಮತ್ತು ವಿಲ್ ಜಾಕ್ಸ್ 18 ಎಸೆತಗಳಲ್ಲಿ ಔಟಾಗದೆ 39 ರನ್ ಗಳಿಸಿ ತಂಡವನ್ನು ಈ ಉತ್ತಮ ಸ್ಕೋರ್​ಗೆ ಕೊಂಡೊಯ್ದರು.

ENG vs NEP: ಕೊನೆಯ 3 ಓವರ್​ಗಳಲ್ಲಿ ಆಂಗ್ಲರನ್ನು ನಡುಗಿಸಿದ ನೇಪಾಳ

ಈ 185 ರನ್‌ಗಳ ಗುರಿಯನ್ನು ಬೆನ್ನಟ್ಟುವಲ್ಲಿ ನೇಪಾಳ ಅದ್ಭುತ ಪ್ರದರ್ಶನ ನೀಡಿತು, ಆದರೆ ಅಂತಿಮವಾಗಿ ವಿಫಲವಾಯಿತು. ನೇಪಾಳ 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ ಕೇವಲ 180 ರನ್‌ಗಳನ್ನು ಗಳಿಸಲು ಸಾಧ್ಯವಾಯಿತು. ಅಂತಿಮ ಓವರ್‌ನಲ್ಲಿ ಗೆಲ್ಲಲು ಅವರಿಗೆ 10 ರನ್‌ಗಳು ಬೇಕಾಗಿದ್ದವು, ಆದರೆ ಕೇವಲ 5 ರನ್‌ಗಳನ್ನು ಗಳಿಸಲು ಸಾಧ್ಯವಾಯಿತು. ಆದಾಗ್ಯೂ, ಅಸೋಸಿಯೇಟ್ ರಾಷ್ಟ್ರವಾಗಿ ನೇಪಾಳವು ಪೂರ್ಣ ಸದಸ್ಯ ತಂಡಕ್ಕೆ ಕಠಿಣ ಹೋರಾಟವನ್ನು ನೀಡಿದ್ದರಿಂದ, ಈ ಸೋಲನ್ನು ಅನೇಕರು ಗೆಲುವಿಗಿಂತ ಕಡಿಮೆಯಿಲ್ಲ ಎಂದು ಪರಿಗಣಿಸುತ್ತಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ವಾರಣಾಸಿ’ ಸಿನಿಮಾ ಶೂಟಿಂಗ್​​ನ ಕಷ್ಟದ ಸನ್ನಿವೇಶ ಯಾವುದು: ವಿವರಿಸಿದ ರಾಜಮೌಳಿ – Kannada News | SS Rajamouli talks about difficult part to shoot in Varanasi movie

ರಾಜಮೌಳಿ (Rajamouli), ಈಗ ವಿಶ್ವದ ಟಾಪ್ ನಿರ್ದೇಶಕರುಗಳಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ರಾಜಮೌಳಿ ಸಿನಿಮಾಕ್ಕಾಗಿ ವಿಶ್ವದಾದ್ಯಂತ ಸಿನಿಮಾ ಪ್ರೇಮಿಗಳು ಎದುರು ನೋಡುತ್ತಿದ್ದಾರೆ. ‘ಆರ್​​ಆರ್​​ಆರ್’ ಸಿನಿಮಾದ ಬಳಿಕ ಅವರ ಜನಪ್ರಿಯತೆ ಪ್ಯಾನ್ ವರ್ಲ್ಡ್ ಮಟ್ಟಕ್ಕೆ ಏರಿದೆ. ‘ಆರ್​​ಆರ್​​ಆರ್’ ನೋಡಿದ ಕೆಲ ಹಾಲಿವುಡ್ ದಿಗ್ಗಜರೇ ರಾಜಮೌಳಿಗೆ ತಮ್ಮ ಇಂಡಸ್ಟ್ರಿಗೆ ಬಂದು ಬಿಡುವಂತೆ ಆಫರ್ ನೀಡಿದ್ದಾರೆ. ಆದರೆ ರಾಜಮೌಳಿ, ಭಾರತೀಯ ಚಿತ್ರರಂಗದಲ್ಲೇ ಮುಂದುವರೆಯುವುದಾಗಿ ಹೇಳಿದ್ದಾರೆ. ಇದೀಗ ‘ವಾರಣಾಸಿ’ ಸಿನಿಮಾ ನಿರ್ದೇಶನ ಮಾಡುತ್ತಿರುವ ರಾಜಮೌಳಿ, ಇಡೀ ಸಿನಿಮಾದ ಚಿತ್ರೀಕರಣದಲ್ಲಿ ಯಾವ ದೃಶ್ಯಗಳ ಚಿತ್ರೀಕರಣ ಕಷ್ಟಕರವಾಗಿತ್ತು ಎಂದು ವಿವರಿಸಿದ್ದಾರೆ.

‘ವಾರಣಾಸಿ’ ಸಿನಿಮಾವು ಟ್ರಾವೆಲ್ ಅಡ್ವೇಂಚರ್ ಮಾದರಿಯ ಕತೆ ಹೊಂದಿರುವುದಾಗಿ ಈ ಹಿಂದೆಯೇ ರಾಜಮೌಳಿ ಹೇಳಿದ್ದರು. ಸಿನಿಮಾನಲ್ಲಿ ರಾಮಾಯಣದ ಕತೆಯೂ ಸಹ ಇರಲಿದೆ ಎನ್ನಲಾಗಿತ್ತು, ಇದೀಗ ರಾಜಮೌಳಿ ಇದನ್ನು ಖಾತ್ರಿ ಪಡಿಸಿದ್ದು, ಟೀಸರ್​​ನಲ್ಲಿ ಸಹ ರಾಮಾಯಣಕ್ಕೆ ಸಂಬಂಧಿಸಿದ ಕೆಲ ದೃಶ್ಯದ ತುಣುಕುಗಳು ಇವೆ. ಅಸಲಿಗೆ ರಾಮಾಯಣಕ್ಕೆ ಸಂಬಂಧಿಸಿದ ದೃಶ್ಯಗಳ ಚಿತ್ರೀಕರಣವೇ ರಾಜಮೌಳಿಗೆ ಬಹಳ ಕಷ್ಟವಾಯ್ತಂತೆ.

ಸಂದರ್ಶನವೊಂದರಲ್ಲಿ ಮಾತನಾಡಿರುವ ರಾಜಮೌಳಿ, ‘ರಾಮಾಯಣಕ್ಕೆ ಸಂಬಂಧಿಸಿದ ದೃಶ್ಯಗಳು ಸಿನಿಮಾನಲ್ಲಿವೆ. ಈ ದೃಶ್ಯಗಳು ಸುಮಾರು 25 ನಿಮಿಷಗಳದ್ದಾಗಿದ್ದು, ಆ ದೃಶ್ಯಗಳ ಚಿತ್ರೀಕರಣವೇ ಬಹಳ ಸವಾಲಿನದ್ದು ಮತ್ತು ಅಷ್ಟೇ ಉತ್ಸಾಹಕಾರಿಯೂ ಆಗಿತ್ತು’ ಎಂದು ರಾಜಮೌಳಿ ಹೇಳಿದ್ದಾರೆ. ‘ಆ 25 ನಿಮಿಷದ ದೃಶ್ಯ, ಸಿನಿಮಾನಲ್ಲಿ ಒಂದೇ ಬಾರಿಗೆ ಬರುವುದಿಲ್ಲ ಬದಲಿಗೆ ಹಲವು ಬಾರಿ ಬಂದು ಹೋಗಿ, ಕೊನೆಗೆ ಒಂದು ಅದ್ಭುತ ಆಕ್ಷನ್ ದೃಶ್ಯವಾಗಿ ಮಾರ್ಪಾಡು ಪಡೆಯುತ್ತದೆ. ಹಾಗಾಗಿ ಆ ದೃಶ್ಯಗಳು ಕತೆಯ ಕಾರಣಕ್ಕೆ, ಸಿನಿಮಾ ಕಾರಣಕ್ಕೆ ಬಹಳ ಮಹತ್ವದ್ದು’ ಎಂದಿದ್ದಾರೆ ರಾಜಮೌಳಿ.

ಇದನ್ನೂ ಓದಿ:ಧರಣಿ ಮಾಡುತ್ತಾರಂತೆ ರಾಜಮೌಳಿ: ಎಲ್ಲಿ? ಯಾವ ಕಾರಣಕ್ಕೆ?

ಕೇವಲ 25 ನಿಮಿಷದ ದೃಶ್ಯವಾದರೂ ಅದನ್ನು ಚಿತ್ರೀಕರಣ ಮಾಡಲು ನಾವು ಬರೋಬ್ಬರಿ 60 ದಿನಗಳನ್ನು ತೆಗೆದುಕೊಂಡಿದ್ದೇವೆ. ಭಾರತದ ಹಲವಾರು ಸಿನಿಮಾಗಳು ಮಹಾಭಾರತ ಮತ್ತು ರಾಮಾಯಣದಿಂದ ಸ್ಪೂರ್ತಿ ಪಡೆದಿವೆ. ಆದರೆ ನಾವು ‘ವಾರಣಾಸಿ’ ಸಿನಿಮಾಕ್ಕಾಗಿ ರಾಮಾಯಣದ ಒಂದು ಭಾಗವನ್ನು ಚಿತ್ರೀಕರಣ ಮಾಡಿದ್ದೇವೆ’ ಎಂದಿದ್ದಾರೆ ರಾಜಮೌಳಿ.

‘ವಾರಣಾಸಿ’ ಸಿನಿಮಾನಲ್ಲಿ ಮಹೇಶ್ ಬಾಬು ರಾಮನ ಪಾತ್ರದಲ್ಲಿ ನಟಿಸಿದ್ದಾರೆ. ಪ್ರಿಯಾಂಕಾ ಚೋಪ್ರಾ ಸಿನಿಮಾದ ನಾಯಕಿ. ಪೃಥ್ವಿರಾಜ್ ಸುಕುಮಾರನ್ ಸಿನಿಮಾದ ವಿಲನ್ ಆಗಿ ನಟಿಸಿದ್ದಾರೆ. ಈ ಸಿನಿಮಾ ಭಾರತದ ಬಹುದೊಡ್ಡ ಬಜೆಟ್​​ನ ಸಿನಿಮಾಗಳಲ್ಲಿ ಒಂದಾಗಿದೆ. ಸಿನಿಮಾಕ್ಕಾಗಿ ಕೆಲವು ಹಾಲಿವುಡ್​ನ ಪ್ರಮುಖ ಸ್ಟುಡಿಯೋಗಳು ಸಹ ಕೆಲಸ ಮಾಡಿವೆ. ಹಾಲಿವುಡ್​ನ ಕೆಲವು ಖ್ಯಾತ ನಟರು ಸಹ ಈ ಸಿನಿಮಾನಲ್ಲಿ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಮಾಲೀಕನಿಂದ ಫಸ್ಟ್‌ ಪಾರ್ಟಿಗೆ ಹೋಗಿದ್ದೇಗೆ? ಲ್ಯಾಂಬೋರ್ಗಿನಿ ಕಳ್ಳಾಟ ರಹಸ್ಯ ಬಿಚ್ಚಿಟ್ಟ ಅಧಿಕಾರಿ – Kannada News | Bengaluru RTO Talks after Sized Lamborghini Car for forged documents

ಬೆಂಗಳೂರು, (ಫೆಬ್ರವರಿ 08): ಅದು ಕೋಟಿ ಕೋಟಿ ಮೌಲ್ಯದ ಐಷಾರಾಮಿ ಕಾರು. ಅಷ್ಟೊಂದು ದುಬಾರಿ ಹಣ ಸುರಿದು ಕಾರ್‌ ಖರೀದಿಸಿದ್ದ ಮಾಲೀಕ ನೋಂದಣಿ ಮಾಡಿಸದೇ ಕಳ್ಳಾಟವಾಡಿದ್ದ. ಒಂದಲ್ಲ, ಎರಡಲ್ಲ, ಬರೋಬ್ಬರಿ ಮೂರು ವರ್ಷ ನಂಬರ್‌ ಇಲ್ದೆ ಗಾಡಿ ಓಡಿಸಿ ಕಳ್ಳಾಟವಾಡಿದ್ದ. ಅದೇ ಕಾರು ಇಂದು (ಫೆಬ್ರವರಿ 08) ಸೀಜ್ ಆಗಿದೆ. ಲ್ಯಾಂಬೋರ್ಗಿನಿ ಉರಾಖಾನ್‌ ಕಾರು ಬರೋಬ್ಬರಿ 3 ಕೋಟಿ 51 ಲಕ್ಷ ರೂಪಾಯಿ ಬೆಲೆ ಬಾಳುತ್ತೆ. ಪಟ್ನಂ ಚಿರು ಹರ್ಷ ಎಂಬಾತ 2022 ರಲ್ಲಿ ಈ ಕಾರು ಖರೀದಿಸಿದ್ದು, ಹರ್ಷ ಇನ್ಪ್ರಾ construction pvt limited ಅನ್ನೋ ಕಂಪನಿ ಹೆಸರಿಗೆ ರಿಜಿಸ್ಟ್ರೇಷನ್ ಆಗಿದೆ. ತೆಲಂಗಾಣದಲ್ಲೇ ಕಾರ್‌ನ ನೋಂದಣಿ ಮಾಡಿಸುತ್ತೇವೆ ಅಂತಾ ಹೇಳಿದ್ದ ಮಾಲೀಕ, ಎಲೆಕ್ಟ್ರಾನಿಕ್‌ ಸಿಟಿ ಆರ್‌ಟಿಒದಲ್ಲಿ ತಾತ್ಕಾಲಿಕವಾಗಿ ನೋಂದಣಿ ಮಾಡಿಸಿದ್ದ. ಆದ್ರೆ ಮೂರು ವರ್ಷವಾದ್ರೂ ಪರ್ಮಮೆಂಟ್ ರಿಜಿಸ್ಟ್ರೇಷನ್ ಮಾಡಿಸಿಕೊಂಡಿಲ್ಲ. ಇದ್ರ ನಡುವೆ ಇದೇ ಕಾರನ್ನ ಹೆಚ್‌-1 ಕಾರ್‌ ಕೇರ್ ಕಂಪನಿಗೆ ಚಿರು ಮಾರಾಟ ಮಾಡಿದ್ದ.

ಇನ್ನು ಚಿರು ಅವರಿಂದ ಕಾರ್‌ ಖರೀದಿಸಿದ್ದ ಹೆಚ್‌-1 ಕಾರ್‌ ಕೇರ್ ಕೂಡಾ ಮೋಸದಾಟ ಮಾಡಿದೆ. ಈ ಕಾರ್‌ನ ಮಾಲೀಕ ನಾನೇ ಅನ್ನೋ ದುರುದ್ದೇಶದಿಂದ ಹೊಸ ಕಾರು ಎಂಬಂತೆ ನಕಲಿ ದಾಖಲೆ ಸೃಷ್ಟಿಸಿದೆ. 2025 ರಲ್ಲಿ ಈ ಲ್ಯಾಂಬೋರ್ಗಿನಿ ಕಾರು ಖರೀದಿ ಮಾಡಿರುವ ಹಾಗೆ ತೋರಿಸಿ ಸತತ ಮೂರು ವರ್ಷಗಳ ದಂಡವನ್ನು ಪಾವತಿಸದೆ ಕಸ್ತೂರಿ ನಗರ ಆರ್‌ಟಿಒದಲ್ಲಿ ಹೊಸದಾಗಿ ನೋಂದಣಿ ಮಾಡಿಸಿದ್ದಾರೆ. ಈ ಮೋಸದಾಟ ಗೊತ್ತಾಗ್ತಿದ್ದಂತೆ ಇಂದು ಕಾರ್‌ ಸೀಜ್ ಮಾಡಲಾಗಿದೆ. ಇನ್ನು ಈ ಬಗ್ಗೆ ಆರ್​​ಟಿಓ ಅಧಿಕಾರಿ ಇನ್ನಷ್ಟು ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: ಕಾರು ಖರೀದಿಸಿದ್ದು ಯಾರೋ, ನೋಂದಣಿ ಮಾಡಿಸಿದ್ದು ಇನ್ಯಾರದೋ ಹೆಸರಿಗೆ: ಲ್ಯಾಂಬೋರ್ಗಿನಿ ರಹಸ್ಯ ಬಯಲು

Source link

ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದ ಹಿಂದೂ ಪತ್ನಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ: ಭದ್ರಾವತಿಯಲ್ಲೊಂದು ವಿಚಿತ್ರ ಕೇಸ್ – Kannada News | A Husband complaint against wife Who forced conversion To Christian from Hindu at Shivamogga

ಶಿವಮೊಗ್ಗ, (ಫೆಬ್ರವರಿ 08): ಮಹಿಳೆಯೊಬ್ಬರು ಹಿಂದೂ ಧರ್ಮವನ್ನು ತೊರೆದು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದು, ಬಳಿಕ ಪತಿ ಹಾಗೂ ಮಕ್ಕಳನ್ನೂ ಸಹ ಮತಾಂತರಗೊಳ್ಳುವಂತೆ ಮಾನಸಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿಯಾದ ಬಿ. ವಿನಯ್ ಎಂಬುವವರು ತಮ್ಮ ಪತ್ನಿ ಪ್ರಿಯತಾ ಆರ್. ವಿರುದ್ಧ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನನ್ನ ಪತ್ನಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದಾಳೆ. ಈಗ ನನ್ನನ್ನೂ ಹಾಗೂ ನನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳನ್ನೂ ಮತಾಂತರಗೊಳ್ಳುವಂತೆ ಒತ್ತಾಯಿಸಿ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾಳೆ ಎಂದು ಆರೋಪಿಸಿದ್ದಾರೆ.

ವಿನಯ್ ಅವರು 2011ರಲ್ಲಿ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳೇಬೀಡು ಬನಶಂಕರಿ ಕಲ್ಯಾಣ ಮಂಟಪದಲ್ಲಿ ಪ್ರಿಯತಾ ಆರ್. ಅವರನ್ನು ಲಿಂಗಾಯತ ಕುಂಬಾರ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ವಿವಾಹವಾಗಿದ್ದರು. ಈ ದಂಪತಿಗೆ  ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಆರಂಭದಲ್ಲಿ ಸುಖವಾಗಿದ್ದ ಇವರ ಸಂಸಾರದಲ್ಲಿ ಬಿರುಕು ಮೂಡಿದ್ದು 2015ರ ನಂತರ ಎಂದು ವಿನಯ್ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಜ್ಯೋತಿಷಿ ಕಮಲಾಕರ್‌‌ ಭಟ್‌‌, ಸುಚಿತ್ರಾಳ ಸ್ಫೋಟಕ ಆಡಿಯೋ ವೈರಲ್‌: ಅಸಲಿ ಮುಖ ಬಯಲು

ಕ್ರೈಸ್ತ ಧರ್ಮದ ಕಡೆಗೆ ಆಕರ್ಷಿತರಾಗಿದ್ಹೇಗೆ?

2015ರಲ್ಲಿ ಶಿವಮೊಗ್ಗದ ಪ್ರತಿಷ್ಠಿತ ಪೋದಾರ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ಪ್ರಿಯತಾ ಶಿಕ್ಷಕಿಯಾಗಿ ಕೆಲಸಕ್ಕೆ ಸೇರಿದ್ದರು. ಅಲ್ಲಿ ಅದೇ ಶಾಲೆಯಲ್ಲಿದ್ದ ಮರಿಯಾ ಪ್ರಿಯದರ್ಶಿನಿ ಎಂಬ ಸಹೋದ್ಯೋಗಿಯ ಸಂಪರ್ಕ ಬೆಳೆದಿದೆ. ಮರಿಯಾ ಅವರ ಪ್ರಭಾವದಿಂದ ಪ್ರಿಯತಾ ಹಿಂದೂ ಧರ್ಮದ ಆಚರಣೆಗಳನ್ನು ಬಿಟ್ಟು ಕ್ರೈಸ್ತ ಧರ್ಮದ ಕಡೆಗೆ ಆಕರ್ಷಿತರಾಗಿದ್ದಾರೆ. ಕ್ರಮೇಣ ಅವರು ಸಂಪೂರ್ಣವಾಗಿ ಮತಾಂತರಗೊಂಡಿದ್ದಾರೆ ಎಂದು ಪತಿ ವಿನಯ್ ಆರೋಪಿಸಿದ್ದಾರೆ.

ಮತಾಂತರಗೊಂಡ ನಂತರ ಪ್ರಿಯತಾ ಅವರ ವರ್ತನೆಯಲ್ಲಿ ಭಾರೀ ಬದಲಾವಣೆ ಕಂಡುಬಂದಿದೆ. ಅವರು ನಿಯಮಿತವಾಗಿ ಚರ್ಚ್‌ಗೆ ಹೋಗಲಾರಂಭಿಸಿದರು. ಮನೆಯಲ್ಲಿಯೇ ಬೈಬಲ್ ತಂದು ಇಟ್ಟುಕೊಂಡು ಓದುವುದು, ಯೇಸುಕ್ರಿಸ್ತನನ್ನು ಪೂಜಿಸುವುದನ್ನು ರೂಢಿಸಿಕೊಂಡರು. ಪತಿ ಎಷ್ಟೇ ಬುದ್ಧಿವಾದ ಹೇಳಿದರೂ, ‘ನಾನು ಕ್ರೈಸ್ತ ಧರ್ಮ ಪಾಲಿಸುತ್ತಿದ್ದೇನೆ, ನೀವೂ ಅದನ್ನೇ ಪಾಲಿಸಿ’ ಎಂದು ಒತ್ತಾಯಿಸಿದ್ದಾರೆ.

ಕೇವಲ ಪತಿಯನ್ನು ಮಾತ್ರವಲ್ಲದೆ, ತಮ್ಮ ಹಿರಿಯ ಮಗಳಿಗೂ ಕ್ರೈಸ್ತ ಧರ್ಮವನ್ನೇ ಪಾಲಿಸುವಂತೆ ಪ್ರಿಯತಾ ಒತ್ತಾಯಿಸುತ್ತಿದ್ದರು ಎಂದು ವಿನಯ್ ದೂರಿದ್ದಾರೆ. ಕ್ರೈಸ್ತ ಧರ್ಮಕ್ಕೆ ಸೇರಿದ ವೆಬ್‌ಸೈಟ್‌ಗಳನ್ನು ಫಾಲೋ ಮಾಡುವುದು, ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಪ್ರಾರ್ಥನೆ ಸಲ್ಲಿಸುವುದು ಮತ್ತು ಪ್ರತಿ ತಿಂಗಳು ಧಾರ್ಮಿಕ ಚಟುವಟಿಕೆಗಳಿಗೆ ಹಣ ಪಾವತಿಸುವುದನ್ನು ಅಭ್ಯಾಸ ಮಾಡಿಕೊಂಡಿದ್ದರು.

ತವರು ಮನೆ ಸೇರಿದ ಪತ್ನಿ

ಮತಾಂತರದ ವಿಚಾರವಾಗಿ ಮನೆಯಲ್ಲಿ ನಿತ್ಯ ಜಗಳವಾಗುತ್ತಿತ್ತು. 2019ರಲ್ಲಿ ಒಮ್ಮೆ ತವರು ಮನೆಗೆ ಹೋಗಿದ್ದ ಪತ್ನಿಯನ್ನು, ಮಕ್ಕಳ ಭವಿಷ್ಯದ ದೃಷ್ಟಿಯಿಂದ ವಿನಯ್ ಅವರು 2020ರಲ್ಲಿ ಮನವೊಲಿಸಿ ಕರೆತಂದಿದ್ದರು. ಆದರೆ, 2024ರ ವೇಳೆಗೆ ಅವರ ವರ್ತನೆ ಮತ್ತಷ್ಟು ತೀವ್ರವಾಯಿತು. ‘ನನ್ನ ಮಾತನ್ನು ನೀವು ಕೇಳದಿದ್ದರೆ ನಾನು ಮನೆಯಲ್ಲಿ ಇರುವುದಿಲ್ಲ’ ಎಂದು ಹಠ ಹಿಡಿದ ಪ್ರಿಯತಾ, ಪತಿ ಮತ್ತು ಮಕ್ಕಳು ಮತಾಂತರಗೊಳ್ಳಲು ಒಪ್ಪದ ಕಾರಣ 2025ರಲ್ಲಿ ಗಂಡ-ಮಕ್ಕಳನ್ನು ಬಿಟ್ಟು ತವರು ಮನೆಗೆ ತೆರಳಿದ್ದಾರೆ. ಸ್ನೇಹಿತರ ಮೂಲಕ ಸಂಧಾನಕ್ಕೆ ಪ್ರಯತ್ನಿಸಿದಾಗ, ‘ನೀವು ಮತ್ತು ಮಕ್ಕಳು ಮತಾಂತರಗೊಂಡರೆ ಮಾತ್ರ ನಾನು ವಾಪಸ್ ಬರುತ್ತೇನೆ’ ಎಂದು ಕಡಾಖಂಡಿತವಾಗಿ ಹೇಳಿದ್ದಾರೆ ಎಂದು ವಿನಯ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕರ್ನಾಟದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

T20 World Cup: 2ನೇ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆ ಖಚಿತ – Kannada News | Team India Squad Changes for Namibia T20 WC: Sundar’s Comeback & Bumrah’s Fitness Update

ಅಮೆರಿಕ ವಿರುದ್ಧದ ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ 2026 ರ ಟಿ20 ವಿಶ್ವಕಪ್ (T20 World Cup 2026) ಅಭಿಯಾನವನ್ನು ಆರಂಭಿಸಿರುವ ಟೀಂ ಇಂಡಿಯಾ ತನ್ನ ಮುಂದಿನ ಪಂದ್ಯವನ್ನು ಫೆಬ್ರವರಿ 12 ರಂದು ನಮೀಬಿಯಾ (India vs Namibia) ವಿರುದ್ಧ ಆಡಲಿದೆ. ಮೊದಲ ಪಂದ್ಯಕ್ಕೆ ಭಾರತ ತಂಡದಲ್ಲಿ 3 ಬದಲಾವಣೆಗಳಾಗಿದ್ದವು. ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ ಹಾಗೂ ಸಂಜು ಸ್ಯಾಮ್ಸನ್ ಪ್ಲೇಯಿಂಗ್​ 11 ನಿಂದ ಹೊರಬಿದ್ದಿದ್ದರು. ಇದೀಗ ಎರಡನೇ ಪಂದ್ಯಕ್ಕೂ ಭಾರತದ ಆಡುವ 11 ರ ಬಳಗದಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದೆ. ನಮೀಬಿಯಾ ವಿರುದ್ಧದ ಪಂದ್ಯಕ್ಕೂ ಮುನ್ನ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಸೂರ್ಯಕುಮಾರ್ ಯಾದವ್ ತಿಳಿಸಿದ್ದಾರೆ. ಹೀಗಾಗಿ ಸುಂದರ್​ಗೆ ಪ್ಲೇಯಿಂಗ್​ನಲ್ಲಿ ಅವಕಾಶಕೊಟ್ಟರೆ ಯುಎಸ್​ಎ ವಿರುದ್ಧ ಆಡಿದ ತಂಡದಲ್ಲಿ ಬದಲಾವಣೆಯಾಗುವುದು ಖಚಿತ.

ಅಭಿಷೇಕ್​ಗೆ ಅನಾರೋಗ್ಯ

ಜ್ವರದಿಂದಾಗಿ ಅಮೆರಿಕ ವಿರುದ್ಧದ ಪಂದ್ಯವನ್ನು ತಪ್ಪಿಸಿಕೊಂಡಿದ್ದ ವೇಗಿ ಜಸ್ಪ್ರೀತ್ ಬುಮ್ರಾ ಕೂಡ ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಆಡುವ ಸಾಧ್ಯತೆಯಿದೆ. ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕೂಡ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಅಮೆರಿಕ ವಿರುದ್ಧದ ಪಂದ್ಯದಲ್ಲಿ ಗೋಲ್ಡನ್ ಡಕ್ ಆಗಿ ಔಟಾದ ಅಭಿಷೇಕ್ ಫೀಲ್ಡಿಂಗ್ ಮಾಡಿರಲಿಲ್ಲ. ಅವರ ಸ್ಥಾನದಲ್ಲಿ ಸಂಜು ಸ್ಯಾಮ್ಸನ್ ಫೀಲ್ಡಿಂಗ್ ಮಾಡಿದ್ದರು.

ಅಭಿಷೇಕ್ ಚೇತರಿಕೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲ. ನಮೀಬಿಯಾ ವಿರುದ್ಧದ ಪಂದ್ಯಕ್ಕೆ ಅಭಿಷೇಕ್‌ಗೆ ವಿಶ್ರಾಂತಿ ನೀಡಿದರೆ, ಸಂಜು ಸ್ಯಾಮ್ಸನ್-ಇಶಾನ್ ಕಿಶನ್ ಭಾರತದ ಆರಂಭಿಕರಾಗಿ ಆಡುವ ಸಾಧ್ಯತೆ ಇದೆ. ಆದರೆ ಮುಂದಿನ ಪಂದ್ಯಕ್ಕೆ ಇನ್ನು 4 ದಿನಗಳು ಬಾಕಿ ಇರುವುದರಿಂದ ಅಭಿಷೇಕ್ ಅಷ್ಟರೊಳಗೆ ಗುಣಮುಖರಾಗುವ ಸಾಧ್ಯತೆಯಿದೆ. ಹೀಗಾಗಿ ನಮೀಬಿಯಾ ವಿರುದ್ಧ ಅಭಿಷೇಕ್ ಕಣಕ್ಕಿಳಿಯುವುದು ಖಚಿತ. ಹೀಗಾಗಿ ಸಂಜುಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗುವ ಸಾಧ್ಯತೆ ಇಲ್ಲ.

U19 World Cup 2026: ಭಾರತಕ್ಕೆ ಬಂದ ಯುವ ಚಾಂಪಿಯನ್ಸ್​ಗೆ ಅದ್ಧೂರಿ ಸ್ವಾಗತ

ಸುಂದರ್, ಬುಮ್ರಾ ಇನ್

ಇನ್ನು ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಸಮಯದಲ್ಲಿ ಗಾಯಗೊಂಡಿದ್ದ ವಾಷಿಂಗ್ಟನ್ ಸುಂದರ್ ಟಿ20 ಸರಣಿ ಮತ್ತು ವಿಶ್ವಕಪ್‌ನ ಮೊದಲ ಪಂದ್ಯವನ್ನು ತಪ್ಪಿಸಿಕೊಂಡಿದ್ದರು. ಇದೀಗ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿರುವ ಅವರು ವಿಶ್ವಕಪ್ ತಂಡವನ್ನು ಸೇರಿಕೊಂಡಿದ್ದಾರೆ.

ಸುಂದರ್ ಅವರನ್ನು ಆಡುವ ಹನ್ನೊಂದರ ಬಳಗಕ್ಕೆ ಸೇರಿಸಿದರೆ, ಕಳಪೆ ಫಾರ್ಮ್‌ನಲ್ಲಿರುವ ರಿಂಕು ಸಿಂಗ್ ಅವರನ್ನು ಕೈಬಿಡುವ ಸಾಧ್ಯತೆಯಿದೆ. ಅವರು ಆಲ್‌ರೌಂಡರ್ ಆಗಿರುವುದರಿಂದ ಸುಂದರ್ ಅವರನ್ನು ಆಡಿಸುವ ಸಾಧ್ಯತೆ ಹೆಚ್ಚಿದೆ. ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಯುಎಸ್ ವಿರುದ್ಧದ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಅವರನ್ನು ಆಡಿಸಲಾಗಿತ್ತು. ಅಮೆರಿಕ ವಿರುದ್ಧ ಸಿರಾಜ್ ಮೂರು ವಿಕೆಟ್ ಕಬಳಿಸಿದ್ದರು. ಅವರ ಅದ್ಭುತ ಪ್ರದರ್ಶನದ ಹೊರತಾಗಿಯೂ, ಬುಮ್ರಾ ತಂಡಕ್ಕೆ ಮರಳಿದಾಗ ಸಿರಾಜ್ ಅವರನ್ನು ಆಡುವ ಹನ್ನೊಂದರ ಬಳಗದಿಂದ ಕೈಬಿಡಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೋಲಾರ: ಬೊಲೆರೊ ಪಲ್ಟಿಯಾಗಿ ಮೂವರು ಸಾವು; 10ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿಗೆ ಗಾಯ – Kannada News | Kolar Bolero Accident: 3 Laborers Dead, 10 Injured

ಪಲ್ಟಿಯಾಗಿರುವ ಬೊಲೆರೊ Image Credit source: tv9 kannada

ಕೋಲಾರ, ಫೆಬ್ರವರಿ 08: ಬೊಲೆರೊ ಪಲ್ಟಿಯಾಗಿ (Bolero Overturns) ಮೂವರು ಕಾರ್ಮಿಕರು ಸಾವನ್ನಪ್ಪಿರುವಂತಹ (death) ಘಟನೆ  ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕಾಲೋನಿ ಗೇಟ್​​ ಬಳಿ ನಡೆದಿದೆ. ಆಂಧ್ರದ ಮುನಿಯಮ್ಮ, ವೆಂಕಟಪ್ಪ ಹಾಗೂ ಮತ್ತೊಬ್ಬರು ಮೃತಪಟ್ಟಿದ್ದಾರೆ. ಹುಣಸೆಹಣ್ಣು ಬಿಡಿಸುವ ಕೆಲಸ ಮುಗಿಸಿಕೊಂಡು ಹೋಗುವಾಗ ದುರಂತ ಸಂಭವಿಸಿದೆ. ದುರಂತದಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಶ್ರೀನಿವಾಸಪುರ ಮತ್ತು ಆಂಧ್ರದ ಮದನಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿ: ಗರ್ಭಿಣಿ ಸಾವು

ಬೈಕ್​ಗೆ ಹಿಂದಿನಿಂದ ಬಂದು ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ತಿಂಗಳ ಗರ್ಭಿಣಿ ಮಹಿಳೆ ಸ್ಥಳದಲ್ಲೇ ಸಾವನ್ನಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಉತ್ತರ ತಾಲೂಕಿನ ಬಾಗಲೂರು ಗ್ರಾಮದ ಗುಂಡಪ್ಪ ಕ್ರಾಸ್​ನಲ್ಲಿ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ವೀರೆನಹಳ್ಳೀ ನಿವಾಸಿ ಮಾನಸಾ (29) ಭೀಕರ ಅಪಘಾತದಲ್ಲಿ ಸಾವನ್ನಪಿದ ನಾಲ್ಕು ತಿಂಗಳ ಗರ್ಭಿಣಿ.

ಇದನ್ನೂ ಓದಿ: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ರಸ್ತೆ ಅಪಘಾತ: ಒಂದೇ ದಿನ 8 ಜನ ಬಲಿ, ಹಲವರಿಗೆ ಗಾಯ

ಇಂದು ಬೆಳಗ್ಗೆ ಸಿಇಟಿ ಪರೀಕ್ಷೆ ಬರೆಯುವುದಕ್ಕೆ ಅಂತ ಮಾನಸಾ ಮನೆಯಿಂದ ಸ್ಕೂಟಿಯಲ್ಲಿ ಯಲಹಂಕದ ಕಡೆ ಬಾಗಲೂರು ಮೂಲಕ ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಸಿಮೆಂಟ್ ಮಿಕ್ಸರ್ ಲಾರಿ, ಬೈಕ್​ಗೆ ಡಿಕ್ಕಿ ಹೊಡೆದು ನಿಲ್ಲಿಸದೆ ಹಾಗೆ ಮುಂದಕ್ಕೆ ಸಾಗಿದ್ದು ಚಕ್ರದ ಅಡಿಗೆ ಸಿಲುಕಿ ಮಾನಸಾ ಸಾವನ್ನಪಿದ್ದಾರೆ.

ಇದನ್ನೂ ಓದಿ: ಕೈಕೊಟ್ಟ 3 ವರ್ಷ ಪ್ರೀತಿಸಿದ ಪ್ರೇಯಸಿ: ನೊಂದ ಬಾಡಿಬಿಲ್ಡರ್​​ ತೆಗೆದುಕೊಂಡಿದ್ದು ದುಡುಕಿನ ನಿರ್ಧಾರ

ಇನ್ನು ಇತ್ತೀಚೆಗೆ ಲಾರಿ ಚಾಲಕರ ಅತಿವೇಗ, ಅಜಾಗರೂಕತೆಯಿಂದ ಈ ರೀತಿ ಅಪಘಾತಗಳು ಸಂಭವಿಸುತ್ತಿದ್ದು ಯಮಸ್ವರೂಪಿ ಲಾರಿಗಳಿಗೆ ಬ್ರೇಕ್ ಹಾಕುವಂತೆ ಸ್ಥಳಿಯರು ಒತ್ತಾಯಿಸಿದ್ದಾರೆ. ಈ ಕುರಿತು ಚಿಕ್ಕಜಾಲ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಲಾರಿ ಸಮೇತ ಚಾಲಕನನ್ನ ವಶಕ್ಕೆ ಪಡೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 9:31 pm, Sun, 8 February 26

Source link

Exit mobile version