ವ್ಯಕ್ತಿಯ ಮರ್ಮಾಂಗ ಕತ್ತರಿಸಿ ಹತ್ಯೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್: ಕೊಲೆಗೆ ಸಾಥ್ ಕೊಟ್ಟು ಡ್ರಾಮಾ ಮಾಡಿದ್ದ ಹೆಂಡ್ತಿ, ಮಗ! – Kannada News | Belagavi: Wife, Son Among Four Arrested in Brutal Kittur Murder Over Property Dispute

ವ್ಯಕ್ತಿಯ ಮರ್ಮಾಂಗ ಕತ್ತರಿಸಿ ಹತ್ಯೆ ಪ್ರಕರಣ ಬಯಲಿಗೆಳೆದ ಪೊಲೀಸರು (ಒಳಚಿತ್ರದಲ್ಲಿ ಕಲ್ಮೇಶ್)Image Credit source: tv9

ಬೆಳಗಾವಿ, ಫೆಬ್ರವರಿ 26: ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಹೊರವಲಯದಲ್ಲಿ ವ್ಯಕ್ತಿಯ ಮರ್ಮಾಂಗ ಕತ್ತರಿಸಿ ಅಮಾನುಷವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಇದೀಗ ಸ್ಫೋಟಕ ತಿರುವು ಸಿಕ್ಕಿದೆ. ಕೊಲೆಯಾದ ವ್ಯಕ್ತಿಯ ಪತ್ನಿ ಹಾಗೂ ಮಗನೇ ಕೃತ್ಯಕ್ಕೆ ಸಾಥ್ ನೀಡಿ, ನಂತರ ನಾಟಕವಾಡಿದ್ದರು ಎಂಬ ಆಘಾತಕಾರಿ ವಿಚಾರ ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಫೆಬ್ರವರಿ 20ರಂದು ಹಿರೇನಂದಿಹಳ್ಳಿ ಗ್ರಾಮ ಹೊರವಲಯದ ಜಮೀನಿನಲ್ಲಿ ಶವ ಪತ್ತೆಯಾಗಿತ್ತು. ನಂತರ ಮೃತ ವ್ಯಕ್ತಿ ಹಿರೇನಂದಿಹಳ್ಳಿ ಗ್ರಾಮದ ಕಲ್ಮೇಶ್ ಕೋಟಿ ಎಂದು ಗುರುತಿಸಲಾಯಿತು. ತುಮಕೂರಿನಲ್ಲಿ ಹೋಮ್ ಕೇರ್ ಉದ್ಯೋಗದಲ್ಲಿ ತೊಡಗಿದ್ದ ಕಲ್ಮೇಶ್, ಶಿವರಾತ್ರಿ ಹಬ್ಬದ ಪ್ರಯುಕ್ತ ಊರಿಗೆ ಬಂದಿದ್ದ ವೇಳೆ ಸಂಚು ರೂಪಿಸಿ ಕೊಲೆಗೈಯಲಾಗಿತ್ತು.

ಪಾರ್ಟಿ ನೆಪದಲ್ಲಿ ಜಮೀನಿಗೆ ಕರೆದೊಯ್ದು ಕೊಲೆ

‘ಪಾರ್ಟಿ ಮಾಡಿ ಬರೋಣ’ ಎಂದು ಹೇಳಿ ಜಮೀನಿಗೆ ಕರೆದೊಯ್ದ ಆರೋಪಿಗಳು, ಹಲ್ಲೆ ಮಾಡಿ, ಮರ್ಮಾಂಗ ಕತ್ತರಿಸಿ ಕೊಲೆ ಮಾಡಿದ್ದರು. ಕೊಲೆಗೈದ ಬಳಿಕ ಆರೋಪಿಗಳಲ್ಲಿ ಒಬ್ಬ ತನ್ನ ಅಕ್ಕನಿಗೆ ಕರೆ ಮಾಡಿ ವಿಷಯ ತಿಳಿಸಿದ್ದ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಪತ್ನಿ–ಮಗನ ಡ್ರಾಮಾ ಬಯಲು

ಪ್ರಕರಣಕ್ಕೆ ಮತ್ತಷ್ಟು ಟ್ವಿಸ್ಟ್ ನೀಡಿದ ಸಂಗತಿ ಎಂದರೆ, ಕೊಲೆಗೆ ಸಾಥ್ ನೀಡಿದ್ದೇ ಪತ್ನಿ ಮತ್ತು ಪುತ್ರ ಎಂಬುದು. ಶವ ಪತ್ತೆಯಾದ ನಾಲ್ಕು ದಿನಗಳ ಬಳಿಕ ಗುರುತು ಪತ್ತೆಗೆ ಬಂದು ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿದ್ದ ಪತ್ನಿ ಕಸ್ತೂರಿ ಕೋಟಿ ಹಾಗೂ ಪುತ್ರ ಕಿರಣ್ ಕೋಟಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಗೆ ಕೈಜೋಡಿಸಿದ ಕಲ್ಮೇಶ್ ಬಾಮೈದ ಮಲ್ಲೇಶ ಅಂಬಣ್ಣವರ (32) ಹಾಗೂ ಅವನ ಸ್ನೇಹಿತ ಮುದುಕಪ್ಪ ಕೋಲೇಕರ್ ಅವರನ್ನು ಕೂಡ ಕಿತ್ತೂರು ಠಾಣೆ ಪೊಲೀಸರು ಬಂಧಿಸಿ ಹಿಂಡಲಗಾ ಜೈಲಿಗೆ ರವಾನಿಸಿದ್ದಾರೆ.

12 ವರ್ಷಗಳ ದಾಂಪತ್ಯ ಕಲಹ, ಮೂರು ಎಕರೆ ಆಸ್ತಿಯೇ ಮೂಲ ಕಾರಣ

ಕಲ್ಮೇಶ್ ಮತ್ತು ಪತ್ನಿ ಕಸ್ತೂರಿ ಕಳೆದ 12 ವರ್ಷಗಳಿಂದ ದಾಂಪತ್ಯ ಕಲಹದ ಹಿನ್ನೆಲೆ ದೂರವಿದ್ದು, ಕಸ್ತೂರಿ ಪುತ್ರನೊಂದಿಗೆ ಕುಂದಗೋಳದಲ್ಲಿರುವ ತವರು ಮನೆಯಲ್ಲಿ ವಾಸವಾಗಿದ್ದರು. ದಂಪತಿಗೆ ಒಬ್ಬ ಪುತ್ರ ಹಾಗೂ ಒಬ್ಬ ಪುತ್ರಿ ಇದ್ದಾರೆ. ಐದು ವರ್ಷಗಳ ಹಿಂದೆ ಪುತ್ರಿಯ ಮದುವೆಗೆ 8 ಲಕ್ಷ ರೂಪಾಯಿ ಸಾಲವನ್ನು ಸಹೋದರ ಮಲ್ಲೇಶ ಅಂಬಣ್ಣವರಿಂದ ಪಡೆದಿದ್ದ ಕಸ್ತೂರಿ, ಕಲ್ಮೇಶ್ ಹೆಸರಿನ ಮೂರು ಎಕರೆ ಪಿತ್ರಾರ್ಜಿತ ಜಮೀನನ್ನು ಅಡಮಾನ ಇಟ್ಟು ಹಣ ಪಡೆದಿದ್ದಳು.

ಆದರೆ, ಜಮೀನು ಬರೆದುಕೊಡಲು ಕಲ್ಮೇಶ್ ನಿರಾಕರಿಸಿದ್ದಲ್ಲದೆ, ಸಾಲ ಮರುಪಾವತಿಗಾಗಿ ಒತ್ತಾಯಿಸುತ್ತಿದ್ದ. ಇದರಿಂದ ಬೇಸತ್ತ ಕಸ್ತೂರಿ, ತನ್ನ ಸಹೋದರರೊಂದಿಗೆ ಸಭೆ ನಡೆಸಿ ಸಂಚು ರೂಪಿಸಿದ್ದಳು ಎನ್ನಲಾಗಿದೆ. ಪತಿ ಸತ್ತರೆ ಜಮೀನು ತನ್ನ ಹೆಸರಿಗೆ ಬರುತ್ತದೆ ಎಂಬ ಲೆಕ್ಕಾಚಾರದಲ್ಲಿ ಕಲ್ಮೇಶ್ ಕಥೆ ಮುಗಿಸಲು ಸಂಚು ರೂಪಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಮಾರಕಾಸ್ತ್ರಗಳಿಂದ ಕೊಚ್ಚಿ, ಮರ್ಮಾಂಗ ಕತ್ತರಿಸಿ ವ್ಯಕ್ತಿಯ ಬರ್ಬರ ಹತ್ಯೆ!

ಮೊದಲಿನಿಂದಲೇ ಕೊಲೆ ಬಗ್ಗೆ ಹಲವು ಆಯಾಮಗಳಲ್ಲಿ ತನಿಖೆ ನಡೆಸಿದ್ದ ಕಿತ್ತೂರು ಪೊಲೀಸರು, ಆಸ್ತಿಯ ಲೆಕ್ಕಾಚಾರವೇ ಕೊಲೆಗೆ ಮೂಲ ಕಾರಣ ಎಂಬುದನ್ನು ಪತ್ತೆಹಚ್ಚಿದ್ದಾರೆ. ನಾಲ್ವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ; ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಜಾತಿ ನಿಂದನೆ ಮಾಡಿದ ಅಪ್ಪ-ಮಗ – Kannada News | Karnataka Moral Policing: Arrests in Mangaluru, Bengaluru Bus Incident Sparks Outrage

ಮಂಗಳೂರು, ಫೆ.26: ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ (Moral Policing) ಪ್ರಕರಣ ಬೆಳಕಿಗೆ ಬಂದಿದೆ. ರೈಲ್ವೆ ಹಳಿಯಲ್ಲಿ ಕುಳಿತಿದ್ದ ಅಪ್ರಾಪ್ತ ವಿದ್ಯಾರ್ಥಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಆರೋಪದ ಮೇಲೆ ತಂದೆ ಮತ್ತು ಮಗನನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಹೊರವಲಯದ ಅತ್ತಾವರ ಬಾಬುಗುಡ್ಡೆ ಎಂಬಲ್ಲಿ ಈ ಘಟನೆ ನಡೆದಿದೆ. ಅಪ್ರಾಪ್ತ ಬಾಲಕ ಮತ್ತು ಬಾಲಕಿ ರೈಲ್ವೆ ಹಳಿಯ ಬಳಿ ಕುಳಿತಿದ್ದರು. ಈ ವೇಳೆ ಅಲ್ಲಿಗೆ ಬಂದ ಸ್ಟೀವನ್ ಮೊಂತೇರೋ ಮತ್ತು ಆತನ ಪುತ್ರ ಅವಿಲ್ ಎಂಬುವವರು ವಿದ್ಯಾರ್ಥಿಗಳ ವಿಡಿಯೋ ಮಾಡಲಾರಂಭಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಅಡ್ಡಗಟ್ಟಿದ ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಬಾಲಕನ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಕೇವಲ ಹಲ್ಲೆಯಷ್ಟೇ ಅಲ್ಲದೆ, ವಿದ್ಯಾರ್ಥಿಗಳ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವ ಮೂಲಕ ವಿದ್ಯಾರ್ಥಿಗಳ ಮಾನಹಾನಿಗೆ ಯತ್ನಿಸಿದ್ದಾರೆ ಎಂದು ಹೇಳಲಾಗಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿಗಳು, ಅಪ್ರಾಪ್ತ ವಿದ್ಯಾರ್ಥಿಗಳ ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ್ದಾರೆ.

ಇನ್ನು ಈ ಪ್ರಕರಣದಲ್ಲಿ ಬಂಧಿತರನ್ನು ಸ್ಟೀವನ್ ಮೊಂತೇರೋ ಮತ್ತು ಆತನ ಪುತ್ರ ಅವಿಲ್ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಅಟ್ರಾಸಿಟಿ (SC/ST Act) ಹಾಗೂ ಬಿಎನ್‌ಎಸ್ (BNS) ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿ ಎಫ್‌ಐಆರ್ ದಾಖಲಿಸಿ ಇಬ್ಬರನ್ನೂ ಬಂಧಿಸಲಾಗಿದೆ. ಇದೀಗ ಈ ಬಗ್ಗೆ ಹೆಚ್ಚಿನ ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ ಜನರಿಗೆ ಬಿಗ್​​ ಶಾಕ್: ಈ ನೀರು ಕುಡಿದ್ರೆ ಕಿಡ್ನಿ ಸಮಸ್ಯೆ ಬರುವುದು ಖಂಡಿತ! ಅಘಾತಕಾರಿ ವರದಿ ಬಯಲು

ಬೆಂಗಳೂರು ಬಸ್ಸಿನಲ್ಲಿ ನೈತಿಕ ಪೊಲೀಸ್‌ಗಿರಿ

22 ವರ್ಷದ ಯುವಕ ಮತ್ತು ಆತನ ಗೆಳತಿ ಬೆಂಗಳೂರಿನಿಂದ ಪ್ರಯಾಣಿಸಲು ಖಾಸಗಿ ಸ್ಲೀಪರ್ ಬಸ್‌ನಲ್ಲಿ 3 ಬರ್ತ್‌ಗಳನ್ನು ಬುಕ್ ಮಾಡಿದ್ದರು. ಹೆಚ್ಚು ಜಾಗವಿರಲಿ ಮತ್ತು ಆರಾಮದಾಯಕವಾಗಿ ಪ್ರಯಾಣಿಸಲಿ ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದ್ದರು. ಆದರೆ ಬಸ್ ಹತ್ತಿದ ನಂತರ ಕಂಡಕ್ಟರ್ ಇವರಿಬ್ಬರನ್ನು ಒಟ್ಟಿಗೆ ಕುಳಿತುಕೊಳ್ಳದಂತೆ ತಡೆದಿದ್ದಾರೆ. ಇಬ್ಬರೂ ವಯಸ್ಕರಾಗಿದ್ದರೂ ಮತ್ತು ಅಧಿಕೃತ ಟಿಕೆಟ್ ಹೊಂದಿದ್ದರೂ, ಕಂಡಕ್ಟರ್ ಇಬ್ಬರನ್ನು ಪ್ರತ್ಯೇಕ ಸೀಟುಗಳಲ್ಲಿ ಮಲಗುವಂತೆ ಒತ್ತಾಯಿಸಿದ್ದಾರೆ.ನಿಮ್ಮ ಪೋಷಕರಿಗೆ ಫೋನ್ ಮಾಡಿ” ಇಲ್ಲವೆಂದರೆ “ಪೊಲೀಸರಿಗೆ ದೂರು ನೀಡುತ್ತೇವೆ” ಎಂದು ಕಂಡಕ್ಟರ್ ನೈತಿಕ ಪೊಲೀಸ್‌ಗಿರಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಹಿಮಗಟ್ಟಿದ ಪ್ಯಾಂಗಾಂಗ್ ತ್ಸೋ ಸರೋವರದಲ್ಲಿ ಮ್ಯಾರಥಾನ್ – Kannada News | Runners Conquer Icy Terrain as Pangong Frozen Lake Marathon 2026 Wraps Up

ಪ್ಯಾಂಗಾಂಗ್, ಫೆಬ್ರವರಿ 26: ಹಿಮಗಟ್ಟಿರುವ ಪ್ಯಾಂಗಾಂಗ್ ತ್ಸೊ ಸರೋವರದಲ್ಲಿ ಮ್ಯಾರಥಾನ್ ಆಯೋಜಿಸಲಾಗಿತ್ತು. ಲಡಾಖ್‌ನ ಲೇಹ್‌ನಲ್ಲಿದೆ. ನೀರಿನ ಮೇಲ್ಮೈ ಸಂಪೂರ್ಣವಾಗಿ ಹಿಮದಿಂದ ಆವೃತವಾಗಿರುತ್ತದೆ, ಭಾರತದ ಲಡಾಖ್‌ನ ಪ್ಯಾಂಗಾಂಗ್ ಸರೋವರ ಮತ್ತು ಸಿಕ್ಕಿಂನ ತ್ಸೊಂಗೊ ಸರೋವರ ಎರಡರಲ್ಲೂ ಇದೇ ರೀತಿಯ ಅನುಭವ ಕಾಣಬಹುದು.ಇವು ನೀಲಿ ಅಥವಾ ಬಿಳಿ ಬಣ್ಣದ ಐಸ್ ಶೀಟ್‌ನಂತೆ ಕಾಣುತ್ತವೆ.ಟಿಬೆಟ್‌ನಂತಹ ಎತ್ತರದ ಪ್ರದೇಶಗಳಲ್ಲಿ ಇವು ಸಾಮಾನ್ಯವಾಗಿ ಕಂಡುಬರುತ್ತವೆ.ಈ ಸರೋವರಗಳ ಮೇಲೆ ನಡೆಯುವುದು, ಸ್ಕೇಟಿಂಗ್ ಮಾಡುವುದು ಸಾಹಸೀ ಪ್ರವಾಸಿಗರಿಗೆ ರೋಮಾಂಚನವನ್ನು ನೀಡುತ್ತದೆ.ಹಿಮಗಟ್ಟಿದ ಸರೋವರಗಳ ಮೇಲೆ ನಡೆಯುವಾಗ ಸುರಕ್ಷತೆಯ ಬಗ್ಗೆ ಎಚ್ಚರ ವಹಿಸುವುದು ಮುಖ್ಯ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಝಿಂಬಾಬ್ವೆ ವಿರುದ್ಧ ಭಾರತ ಎಷ್ಟು ರನ್​ಗಳಿಂದ ಗೆಲ್ಲಬೇಕು? – Kannada News | India’s Scenarios to Reach a Positive NRR

T20 World Cup 2026: ಟಿ20 ವಿಶ್ವಕಪ್​ನ 48ನೇ ಪಂದ್ಯದಲ್ಲಿ ಭಾರತ ಮತ್ತು ಝಿಂಬಾಬ್ವೆ ತಂಡಗಳು ಮುಖಾಮುಖಿಯಾಗಲಿದೆ. ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಈ ಮ್ಯಾಚ್​ನಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಭಾರತ ತಂಡ ತನ್ನ ಸೆಮಿಫೈನಲ್​ ಹಾದಿಯನ್ನು ಸುಗಮಗೊಳಿಸಬಹುದು. ಅದರಲ್ಲೂ ನೆಟ್ ರನ್​ ರೇಟ್ ಹೆಚ್ಚಿಸಿಕೊಂಡರೆ ಮಾತ್ರ ಟೀಮ್ ಇಂಡಿಯಾದ ಸೆಮಿಫೈನಲ್ ಲೆಕ್ಕಾಚಾರ ಸರಳವಾಗಲಿದೆ. ಹಾಗಿದ್ರೆ ಝಿಂಬಾಬ್ವೆ ವಿರುದ್ಧ ಭಾರತ ತಂಡ ಎಷ್ಟು ರನ್​ಗಳ ಅಂತರದಿಂದ ಗೆದ್ದರೆ ನೆಟ್ ರನ್ ರೇಟ್​ ಪಾಸಿಟಿವ್ (+0.000 ಕ್ಕಿಂತ ಹೆಚ್ಚು) ಮಾಡಿಕೊಳ್ಳಬಹುದು ಎಂದು ನೋಡುವುದಾದರೆ…

ಮೊದಲು ಬ್ಯಾಟಿಂಗ್ ಮಾಡಿದರೆ:

  • ಝಿಂಬಾಬ್ವೆ ವಿರುದ್ಧ ಟೀಮ್ ಇಂಡಿಯಾ ಮೊದಲು ಬ್ಯಾಟ್ ಮಾಡಿದರೆ ಕನಿಷ್ಠ 77 ರನ್​ಗಳ ಅಂತರದಿಂದ ಜಯಗಳಿಸಬೇಕು. ಅಂದರೆ ಟೀಮ್ ಇಂಡಿಯಾ 200 ರನ್​ಗಳಿಸಿದರೆ, ಝಿಂಬಾಬ್ವೆ ತಂಡವನ್ನು 123 ರನ್ ಅಥವಾ ಅದಕ್ಕಿಂತ ಕಡಿಮೆ ಮೊತ್ತಕ್ಕೆ ನಿಯಂತ್ರಿಸಬೇಕು.
  • ಭಾರತ ತಂಡವು ಮೊದಲು ಬ್ಯಾಟ್ ಮಾಡಿ 180 ರನ್ ಗಳಿಸಿದರೆ, ಝಿಂಬಾಬ್ವೆ ತಂಡವನ್ನು 103 ರನ್ ಅಥವಾ ಅದಕ್ಕಿಂತ ಕಡಿಮೆ ಮೊತ್ತಕ್ಕೆ ಕಟ್ಟಿಹಾಕಬೇಕು. ಅಂದರೆ ಟೀಮ್ ಇಂಡಿಯಾ ಕನಿಷ್ಠ 77 ರನ್​ಗಳ ಅಂತರದಿಂದ ಗೆದ್ದರೆ ಮಾತ್ರ ನೆಟ್ ರನ್ ರೇಟ್ ಪಾಸಿಟಿವ್ ಆಗಲಿದೆ.

ಚೇಸಿಂಗ್ ಮಾಡಿದರೆ:

  • ಝಿಂಬಾಬ್ವೆ ತಂಡವು ಮೊದಲು ಬ್ಯಾಟ್ ಮಾಡಿ 150 ರನ್​ಗಳ ಗುರಿ ನೀಡಿದರೆ, ಈ ಗುರಿಯನ್ನು ಟೀಮ್ ಇಂಡಿಯಾ 11 ಓವರ್​ಗಳಲ್ಲಿ ಚೇಸ್ ಮಾಡಬೇಕು.
  • ಒಂದು ವೇಳೆ ನ್ಯೂಝಿಲೆಂಡ್ 180 ರನ್​ಗಳಿಸಿದರೆ, ಭಾರತ ತಂಡವು 181 ರನ್​ಗಳನ್ನು ಕೇವಲ 11.4 ಓವರ್​ಗಳಲ್ಲಿ ಕಲೆಹಾಕಬೇಕು. ಅಂದರೆ 70 ಎಸೆತಗಳಲ್ಲಿ ಪಂದ್ಯವನ್ನು ಪೂರ್ಣಗೊಳಿಸಬೇಕು.
  • ಇನ್ನು ಝಿಂಬಾಬ್ವೆ ತಂಡವು 200 ರನ್​ಗಳ ಗುರಿ ನೀಡಿದರೆ, ಟೀಮ್ ಇಂಡಿಯಾ ಈ ಮೊತ್ತವನ್ನು ಕೇವಲ 12 ಓವರ್​ಗಳಲ್ಲಿ ಮುಟ್ಟಬೇಕು.

ಅಂದರೆ ಮೊದಲು ಬ್ಯಾಟ್ ಮಾಡಿದರೆ ಕನಿಷ್ಠ 77 ರನ್​ಗಳ ಜಯ ಸಾಧಿಸಿದರೆ ಮಾತ್ರ ಟೀಮ್ ಇಂಡಿಯಾದ ನೆಟ್ ರನ್ ರೇಟ್ +0.000 ಕ್ಕಿಂತ ಹೆಚ್ಚು ಆಗಲಿದೆ. ಇನ್ನು ಚೇಸಿಂಗ್ ಮಾಡಿದರೆ ಅತೀ ಕಡಿಮೆ ಎಸೆತಗಳಲ್ಲಿ ಗುರಿ ಬೆನ್ನತ್ತಿದರೆ ಮಾತ್ರ ಪಾಸಿಟಿವ್ ನೆಟ್ ರನ್ ರೇಟ್ ಪಡೆದುಕೊಳ್ಳಬಹುದು.

ಹೀಗಾಗಿ ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸುವುದು ಅನಿವಾರ್ಯ. ಏಕೆಂದರೆ ಬೃಹತ್ ಮೊತ್ತ ಪೇರಿಸಿದರೆ ಮಾತ್ರ 77 ರನ್​ಗಳ ಅಂತರದಿಂದ ಗೆಲ್ಲಲು ಸಾಧ್ಯ. ಇನ್ನು ಅತೀ ಕಡಿಮೆ ಓವರ್​ಗಳಲ್ಲಿ ಗುರಿ ತಲುಪಿದರೆ ಮಾತ್ರ +0.000 ಕ್ಕಿಂತ ಹೆಚ್ಚಿ ನೆಟ್ ರನ್ ರೇಟ್ ಪಡೆದುಕೊಳ್ಳಬಹುದು. ಹೀಗಾಗಿ ಝಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ದಾಂಡಿಗರಿಂದ ಹೊಡಿಬಡಿ ಆಟವನ್ನು ನಿರೀಕ್ಷಿಸಬಹುದು.

ಸೆಮಿಫೈನಲ್ ಹಾದಿ:

ಭಾರತವು ಝಿಂಬಾಬ್ವೆ ಮತ್ತು ವೆಸ್ಟ್ ಇಂಡೀಸ್ ಎರಡೂ ತಂಡಗಳ ವಿರುದ್ಧ ಗೆದ್ದರೆ 4 ಅಂಕಗಳನ್ನು ಪಡೆಯುತ್ತದೆ. ಅತ್ತ ಸೌತ್ ಆಫ್ರಿಕಾ ತನ್ನ ಉಳಿದ ಪಂದ್ಯಗಳನ್ನು ಗೆದ್ದರೆ, ಅಂದರೆ ವೆಸ್ಟ್ ಇಂಡೀಸ್ ಹಾಗೂ ಝಿಂಬಾಬ್ವೆ ವಿರುದ್ಧ ಗೆದ್ದರೆ ಟೀಮ್ ಇಂಡಿಯಾಗೆ ನೆಟ್​ ರನ್ ರೇಟ್ ಆಧಾರದಲ್ಲಿ ಗೆಲ್ಲಬೇಕಾದ ಅನಿವಾರ್ಯತೆ ಎದುರಾಗುವುದಿಲ್ಲ.

ಇದನ್ನೂ ಓದಿ: ಟಾಟಾ ಕಡೆಯಿಂದ ವೈಭವ್ ಸೂರ್ಯವಂಶಿಗೆ ಸಿಕ್ತು ಭರ್ಜರಿ ಗಿಫ್ಟ್

ಒಂದು ವೇಳೆ ಇಂದಿನ ಮೊದಲ ಪಂದ್ಯದಲ್ಲಿ (3 ಗಂಟೆಗೆ) ವೆಸ್ಟ್ ಇಂಡೀಸ್ ತಂಡವು ಸೌತ್ ಆಫ್ರಿಕಾ ವಿರುದ್ಧ ಗೆದ್ದರೆ, ಟೀಮ್ ಇಂಡಿಯಾ ಝಿಂಬಾಬ್ವೆ ವಿರುದ್ಧ ಅಮೋಘ ಗೆಲುವು ದಾಖಲಿಸುವುದು ಅನಿವಾರ್ಯ. ಏಕೆಂದರೆ ಕೊನೆಯ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿದರೂ ನೆಟ್ ರನ್ ರೇಟ್ ಪರಿಗಣನೆಗೆ ಬರಲಿದೆ. ಹೀಗಾಗಿ ಝಿಂಬಾಬ್ವೆ ವಿರುದ್ಧದ ಪಂದ್ಯದ ಮೂಲಕವೇ ಟೀಮ್ ಇಂಡಿಯಾ ತನ್ನ ನೆಟ್ ರನ್ ರೇಟ್​ ಅನ್ನು ಹೆಚ್ಚಿಸಿಕೊಳ್ಳಬೇಕಿದೆ.

Source link

ಬಲಗೈಯಲ್ಲಿ ಭಗವದ್ಗೀತೆ ಹಿಡಿದು ಪ್ರಮಾಣವಚನ ಸ್ವೀಕರಿಸಿದ ಕೀನ್ಯಾ ಶಾಸಕ – Kannada News | Kenya Assembly Leader Caleb Takes Bhagavad Gita Oath: Global Faith and ISKCON Connection

ಕೀನ್ಯಾ, ಫೆಬ್ರವರಿ 26: ಕೀನ್ಯಾದ ಯುವ ನಾಯಕರೊಬ್ಬರು ಬಲಗೈಯಲ್ಲಿ ಭಗವದ್ಗೀತೆ(Bhagavad Gita) ಹಿಡಿದು ಪ್ರಮಾಣವಚನ ಸ್ವೀಕರಿಸಿರುವ ಫೋಟೊ ಎಲ್ಲೆಡೆ ವೈರಲ್ ಆಗಿದೆ. ಈ ಯುವ ನಾಯಕನ ಹೆಸರು ಕ್ಯಾಲೆಬ್. ಮೊಂಬಾಸಾದ ಕೌಂಟಿಯಲ್ಲಿರುವ ವಿಧಾನಸಭೆಯಲ್ಲಿ ಈ ಐತಿಹಾಸಿಕ ಘಟನೆ ನಡೆದಿದೆ. ಮೊಂಬಾಸಾ ಕೌಂಟಿಯ ಚಂಗಮ್ವೆ ಕ್ಷೇತ್ರವನ್ನು ಪ್ರತಿನಿಧಿಸುವ ಯುವ ಶಾಸಕ ಕ್ಯಾಲೆಬ್ ಪ್ರಮಾಣವಚನ ಸ್ವೀಕರಿಸಲು ಭಗವದ್ಗೀತೆಯೊಂದಿಗೆ ಬಂದಿದ್ದರು.

ಈ ಕುರಿತು ಇಸ್ಕಾನ್​ನ ಓಂಕಾರ ಮುಕುಂದ ದಾಸ್ ಮಾತನಾಡಿ, ಈ ನಡೆ ನಾಟಕೀಯವಲ್ಲ, ಪ್ರಚಾರಕ್ಕೂ ಅಲ್ಲ ಆ ಭಾವ ಅವರ ಹೃದಯಲ್ಲಿ ಹುಟ್ಟಿಕೊಂಡಿರುವುದು, ಅದೇ ಸತ್ಯ, ಹಾಗೂ ಇದು ಉದ್ದೇಶ ಪೂರ್ವಕ ನಡೆ ಎಂದರು. ಸಾರ್ವಜನಿಕ ಹುದ್ದೆಯು ಹೆಚ್ಚಾಗಿ ಪ್ರಬಲ ಧಾರ್ಮಿಕ ಸಂಪ್ರದಾಯಗಳೊಂದಿಗೆ ಹೆಣೆದುಕೊಂಡಿರುವ ರಾಷ್ಟ್ರದಲ್ಲಿ, ಭಗವದ್ಗೀತೆಯ ಮೇಲೆ ಪ್ರಮಾಣ ಮಾಡುವ ಕ್ಯಾಲೆಬ್ ಅವರ ನಿರ್ಧಾರವು ಹೊಸ ಭರವಸೆಯನ್ನು ಹುಟ್ಟುಹಾಕಿದೆ.

ಕ್ಯಾಲೆಬ್ ಹರೇ ಕೃಷ್ಣ ಸಮುದಾಯದಲ್ಲಿರುವ ಭಕ್ತ, ಅವರ ಅಣ್ಣನ ಮೂಲಕ ಇಸ್ಕಾನ್ ಜತೆ ಸೇರಿಕೊಂಡರು. ಮೊಂಬಾಸಾದ ವಿದ್ಯಾರ್ಥಿಗಳಲ್ಲಿ ವೈಷ್ಣವ ಸಂಸ್ಕೃತಿಯನ್ನು ಹರಡಲು 2021 ರಲ್ಲಿ ಸ್ಥಾಪಿಸಲಾದ ವಿಶ್ವವಿದ್ಯಾಲಯ ಆಧಾರಿತ ಉಪಕ್ರಮವಾದ ದಿ ಬೆಟರ್ ಯು ಕ್ಲಬ್‌ನ ಅಧ್ಯಕ್ಷರಾಗಿ, ಕ್ಯಾಲೆಬ್ ಕ್ಲಬ್ ಅನ್ನು 180 ಸದಸ್ಯರನ್ನು ಬೆಳೆಸಲು ಸಹಾಯ ಮಾಡಿದ್ದಾರೆ.

ಮತ್ತಷ್ಟು ಓದಿ: ‘ಪಠ್ಯದಲ್ಲಿ ಭಗವದ್ಗೀತೆ ಸೇರಿಸಿ ಎಂದು ಹೇಳಿದ್ದೇನೆ ಹೊರತು ಮತಾಂತರ ಮಾಡಿ ಎಂದಿಲ್ಲ’: ಸಿಎಂಗೆ ಹೆಚ್​​ಡಿಕೆ ಟಾಂಗ್

ವಿಧಾನಸಭೆಯ ಸದಸ್ಯರ ಸಮ್ಮುಖದಲ್ಲಿ ಕ್ಯಾಲೆಬ್ ಅವರು ಭಗವದ್ಗೀತೆ ಆ್ಯಸ್ ಇಟ್ ಈಸ್ ಪುಸ್ತಕವನ್ನು ಎತ್ತಿ ಪ್ರಮಾಣ ವಚನ ಸ್ವೀಕರಿಸಿದರು. ಮೊಂಬಾಸಾ ಯುವ ಅಸೆಂಬ್ಲಿ ಕೀನ್ಯಾ ಯುವ ಅಸೆಂಬ್ಲಿ ಚೌಕಟ್ಟಿನಡಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಇದು ಯುವ ನಾಯಕರಿಗೆ ಔಪಚಾರಿಕ ರಾಜಕೀಯಕ್ಕೆ ಮುಂಚೆ ಜವಾಬ್ದಾರಿಯನ್ನು ಅಭ್ಯಾಸ ಮಾಡುವ ವೇದಿಕೆಯಾಗಿದೆ.

ಈ ಮೊದಲು ಕೆನಡಾದ ವಿದೇಶಾಂಗ ಸಚಿವೆಯಾದ ಅನಿತಾ ಆನಂದ್ ಭಗವದ್ಗೀತೆ ಹಿಡಿದು ಪ್ರಮಾಣವಚನ ಸ್ವೀಕರಿಸಿದ್ದರು. ಇನ್ನು ಅಮೆರಿಕದಲ್ಲಿ ಕಾಶ್ ಪಟೇಲ್ ಎಫ್​ಬಿಐ ಡೈರೆಕ್ಟರ್ ಆದ ಬಳಿಕ ಅವರೂ ಕೂಡ ಭಗವದ್ಗೀತೆ ಹಿಡಿದು ಪ್ರಮಾಣವಚನ ಸ್ವೀಕರಿಸಿದ್ದರು. ಇಂಡಿಯನ್ ಆಸ್ಟ್ರೇಲಿಯನ್ ಸಂಸದ ವರುಣ್ ಘೋಷ್ ಕೂಡ ಹೀಗೆಯೇ ಮಾಡಿದ್ದರು. ಆದರೆ ಅವರೆಲ್ಲರೂ ಮೂಲತಃ ಭಾರತೀಯರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Chandra Grahan: ಚಂದ್ರಗ್ರಹಣದ ವೇಳೆ ಅಂತ್ಯಕ್ರಿಯೆ ನಡೆಸಬಹುದೇ? ಶಾಸ್ತ್ರಗಳು ಹೇಳುವುದೇನು? – Kannada News | Chandra Grahan and Sutak: Can Last Rites Be Performed During Eclipse?

ಜ್ಯೋತಿಷ್ಯ ಹಾಗೂ ಧಾರ್ಮಿಕ ನಂಬಿಕೆಗಳ ಪ್ರಕಾರ ಗ್ರಹಣ ಮತ್ತು ಅದರ ಸೂತಕ ಅವಧಿಯನ್ನು ಅಶುಭ ಸಮಯವೆಂದು ಪರಿಗಣಿಸಲಾಗುತ್ತದೆ. ಗ್ರಹಣದ ಸಮಯದಲ್ಲಿ ಪ್ರಕೃತಿಯಲ್ಲಿ ಸೂಕ್ಷ್ಮ ಶಕ್ತಿಗಳ ಚಲನವಲನ ಹೆಚ್ಚುತ್ತದೆ ಮತ್ತು ವಾತಾವರಣದಲ್ಲಿ ನಕಾರಾತ್ಮಕತೆ ಉಂಟಾಗುತ್ತದೆ ಎಂಬ ನಂಬಿಕೆ ಇದೆ. ವರ್ಷದ ಮೊದಲ ಚಂದ್ರಗ್ರಹಣ ಮಾರ್ಚ್ 3ರಂದು ಫಾಲ್ಗುಣ ಮಾಸದ ಹುಣ್ಣಿಮೆಯಂದು ಸಂಭವಿಸಲಿದೆ. ಈ ಚಂದ್ರಗ್ರಹಣವು ಸಿಂಹ ರಾಶಿ ಮತ್ತು ಪೂರ್ವ ಫಾಲ್ಗುಣಿ ನಕ್ಷತ್ರದಲ್ಲಿ ಸಂಭವಿಸಲಿದೆ ಎಂದು ಜ್ಯೋತಿಷ್ಯಶಾಸ್ತ್ರಜ್ಞರು ಹೇಳಿದ್ದಾರೆ.

ಈ ಬಾರಿ ಚಂದ್ರಗ್ರಹಣವು ಭಾರತದಲ್ಲಿಯೂ ಗೋಚರಿಸುವುದರಿಂದ, ಅದರ ಸೂತಕ ಅವಧಿ ಅನ್ವಯಿಸುತ್ತದೆ. ಶಾಸ್ತ್ರಗಳ ಪ್ರಕಾರ ಚಂದ್ರಗ್ರಹಣದ ಸೂತಕ ಅವಧಿ ಗ್ರಹಣ ಆರಂಭಕ್ಕೆ ಒಂಬತ್ತು ಗಂಟೆಗಳ ಮೊದಲು ಪ್ರಾರಂಭವಾಗುತ್ತದೆ. ಸೂತಕ ಅವಧಿಯಲ್ಲಿ ದೇವಾಲಯದ ಬಾಗಿಲುಗಳನ್ನು ಮುಚ್ಚುವುದು, ಪೂಜೆ–ಪಾಠಗಳನ್ನು ನಿಲ್ಲಿಸುವುದು ಮತ್ತು ಆಹಾರ ಸೇವನೆಯನ್ನು ತಡೆಯುವುದು ರೂಢಿಯಾಗಿದೆ. ಈ ಸಮಯದಲ್ಲಿ ಜಪ–ತಪ, ಮಂತ್ರಪಠಣ ಮಾಡುವುದು ಮಾತ್ರ ಶುಭಕರವೆಂದು ಹೇಳಲಾಗುತ್ತದೆ.

ಇಂತಹ ಸಂದರ್ಭಗಳಲ್ಲಿ ಜನರಿಗೆ ಉದ್ಭವಿಸುವ ಪ್ರಮುಖ ಪ್ರಶ್ನೆ ಎಂದರೆ – ಗ್ರಹಣದ ಸಮಯದಲ್ಲಿ ಯಾರಾದರೂ ನಿಧನರಾದರೆ ಅಂತ್ಯಕ್ರಿಯೆ ನಡೆಸಬಹುದೇ? ಶಾಸ್ತ್ರಗಳ ಪ್ರಕಾರ ಗ್ರಹಣ ಅಥವಾ ಸೂತಕ ಅವಧಿಯಲ್ಲಿ ಅಂತಿಮ ವಿಧಿಗಳನ್ನು ನೆರವೇರಿಸುವುದು ಅಶುಭವೆಂದು ಪರಿಗಣಿಸಲಾಗಿದೆ. ಈ ಸಮಯದಲ್ಲಿ ನಡೆಸುವ ವಿಧಿಗಳು ಆತ್ಮದ ಶಾಂತಿಯ ಪ್ರಯಾಣಕ್ಕೆ ಅಡ್ಡಿಯಾಗಬಹುದು ಮತ್ತು ಕುಟುಂಬದ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬ ನಂಬಿಕೆ ಇದೆ.

ಇದನ್ನೂ ಓದಿ: ಮಾ.03 ವರ್ಷದ ಮೊದಲ ಚಂದ್ರಗ್ರಹಣ; ಇದು ಭಾರತದಲ್ಲಿ ಗೋಚರಿಸುತ್ತಾ?

ಆದ್ದರಿಂದ, ಗ್ರಹಣದ ಸಮಯದಲ್ಲಿ ಮರಣ ಸಂಭವಿಸಿದರೆ, ಮೃತದೇಹವನ್ನು ಯಥಾಶಕ್ತಿ ಸಂರಕ್ಷಿಸಿ ಗ್ರಹಣ ಸಂಪೂರ್ಣವಾಗಿ ಮುಗಿಯುವವರೆಗೆ ಕಾಯುವುದು ಉತ್ತಮವೆಂದು ಶಾಸ್ತ್ರಗಳು ಸೂಚಿಸುತ್ತವೆ. ಚಂದ್ರ ಅಥವಾ ಸೂರ್ಯಗ್ರಹಣ ಸಾಮಾನ್ಯವಾಗಿ ಕಡಿಮೆ ಅವಧಿಯದ್ದಾಗಿರುವುದರಿಂದ, ಆ ಸಮಯ ಮುಗಿದ ನಂತರ ಶುದ್ಧಿ ವಿಧಿಗಳನ್ನು ನೆರವೇರಿಸಿ ಅಂತ್ಯಕ್ರಿಯೆಗಳನ್ನು ಮಾಡುವುದು ಶುಭಕರವೆಂದು ಪರಿಗಣಿಸಲಾಗುತ್ತದೆ. ಸೂತಕ ಅವಧಿಯಲ್ಲಿಯೂ ಅಂತಿಮ ವಿಧಿಗಳನ್ನು ಸಾಧ್ಯವಾದಷ್ಟು ತಪ್ಪಿಸಲು ಸಲಹೆ ನೀಡಲಾಗಿದೆ.

ಒಟ್ಟಿನಲ್ಲಿ, ಗ್ರಹಣದ ಸಮಯದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಿ, ಗ್ರಹಣ ಮುಗಿದ ಬಳಿಕ ಶುದ್ಧಿ ಆಚರಣೆಗಳನ್ನು ನೆರವೇರಿಸಿ ಕಾರ್ಯಗಳನ್ನು ಮುಂದುವರಿಸುವುದು ಶಾಸ್ತ್ರೋಕ್ತ ಕ್ರಮವೆಂದು ನಂಬಲಾಗುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಚಿಕ್ಕಬಳ್ಳಾಪುರ ಜನರಿಗೆ ಬಿಗ್​​ ಶಾಕ್: ಈ ನೀರು ಕುಡಿದ್ರೆ ಕಿಡ್ನಿ ಸಮಸ್ಯೆ ಬರುವುದು ಖಂಡಿತ! ಅಘಾತಕಾರಿ ವರದಿ ಬಯಲು – Kannada News | Contaminated Water Alert: Fluoride, Nitrate Risks in Villages and Solutions

ಚಿಕ್ಕಬಳ್ಳಾಪುರ, ಫೆ.26: ಜಿಲ್ಲೆಯ ಜನತೆಗೆ ಕುಡಿಯುವ ನೀರಿನ ಆತಂಕ ಎದುರಾಗಿದೆ. ಜಿಲ್ಲೆಯ 1,274 ಹಳ್ಳಿಗಳ ಪೈಕಿ ನೂರಾರು ಗ್ರಾಮಗಳಲ್ಲಿ ಕುಡಿಯುವ ನೀರು ಬಳಕೆಗೆ ಯೋಗ್ಯವಾಗಿಲ್ಲ ಎಂಬ ಆಘಾತಕಾರಿ ಮಾಹಿತಿ ಗುಣಮಟ್ಟ ಪರೀಕ್ಷಾ ವರದಿಯಿಂದ ಬಯಲಾಗಿದೆ. ನೀರಿನಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದ ಪ್ಲೋರೈಡ್ (Fluoride) ಮತ್ತು ನೈಟ್ರೇಟ್ (Nitrate) ಪತ್ತೆಯಾಗಿರುವುದು ಸಾರ್ವಜನಿಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಜಿಲ್ಲಾ ಆರೋಗ್ಯಾಧಿಕಾರಿ ಎಸ್.ಎಸ್. ಮಹೇಶಕುಮಾರ್ ನೀಡಿರುವ ಮಾಹಿತಿಯಂತೆ, ಅಶುದ್ಧ ನೀರಿನ ಸೇವನೆಯಿಂದ ಹಲ್ಲು ಮತ್ತು ಮೂಳೆಗಳ ಬೆಳವಣಿಗೆ ಕುಂಠಿತ, ಮೂಳೆ ಸವೆತ, ಅತಿಯಾದ ಸುಸ್ತು ಮತ್ತು ಎದೆಯುಸಿರು ಸಮಸ್ಯೆಯಾಗಿದೆ. ಕಿಡ್ನಿ (ಮೂತ್ರಪಿಂಡ) ಮತ್ತು ಲಿವರ್ (ಯಕೃತ್ತು) ಸಮಸ್ಯೆಗಳು ಹಾಗೂ ಬಹು ಅಂಗಾಂಗ ವೈಫಲ್ಯದ ಸಾಧ್ಯತೆ ಎಂದು ಹೇಳಿದ್ದಾರೆ.

ಕೇವಲ ನೀರಲ್ಲದೆ ತರಕಾರಿಗಳ ಮೂಲಕವೂ ಪ್ಲೋರೈಡ್ ಸೇರುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಮಕ್ಕಳ ಯೂರಿನ್ ಪರೀಕ್ಷೆ ನಡೆಸಲಾಗುತ್ತಿದೆ. ಟಿವಿ9 ಗೆ ಮಾಹಿತಿ ನೀಡಿದ ಜಿ.ಪಂ. ಸಿ.ಇ.ಓ ಡಾ. ನವೀನ್ ವೈ ಭಟ್, ಅಶುದ್ಧ ನೀರನ್ನು ತಡೆಗಟ್ಟಲು ಕೈಗೊಂಡಿರುವ ಕ್ರಮಗಳನ್ನು ವಿವರಿಸಿದ್ದಾರೆ. ಒಟ್ಟು 1,274 ಹಳ್ಳಿಗಳ ಪೈಕಿ 1,175 ಗ್ರಾಮಗಳಲ್ಲಿ (ಶೇ. 92ರಷ್ಟು) ಘಟಕಗಳನ್ನು ಸ್ಥಾಪಿಸಲಾಗಿದೆ. ಜನರ ಅನುಕೂಲಕ್ಕಾಗಿ ಪ್ರತಿ ಎರಡು ಕಿಲೋಮೀಟರ್‌ಗೆ ಒಂದರಂತೆ ಶುದ್ಧ ನೀರಿನ ಘಟಕ ಅಳವಡಿಸಲಾಗಿದೆ. ಜಿಲ್ಲೆಯ 10 ಗ್ರಾಮಗಳಲ್ಲಿ (ಚಿಕ್ಕಬಳ್ಳಾಪುರ-3, ಗೌರಿಬಿದನೂರು-5, ಶಿಡ್ಲಘಟ್ಟ-2) ನೀರು ಅತ್ಯಂತ ಅಶುದ್ಧವಾಗಿದ್ದು, ಆಯಾ ಪಂಚಾಯಿತಿಗಳಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿ ಬಿಟ್ಟು ಬೆಂಗಳೂರು ಸೇರಿದಂತೆ ಇತರ ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟ ‘ಸಾಧಾರಣ’

ನಿಮ್ಮ ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದ ನೀರನ್ನು ಮಾತ್ರ ಕುಡಿಯಲು ಬಳಸಿ. ಸುಸ್ತು ಅಥವಾ ಕೀಲು ನೋವು ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅಗತ್ಯ. ಪ್ಲೊರೈಡ್ ಪ್ರಭಾವ ತಗ್ಗಿಸಲು ಕ್ಯಾಲ್ಸಿಯಂ ಮತ್ತು ವಿಟಮಿನ್ ಸಿ ಸಮೃದ್ಧವಾಗಿರುವ ಆಹಾರ ಸೇವಿಸಿ ಎಂದು ಎಚ್ಚರಿಕೆಯನ್ನು ಕೂಡ ನೀಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:45 am, Thu, 26 February 26

Source link

ಇನ್​ಸ್ಟಾಗ್ರಾಂನಲ್ಲಿ 100 ಮಿಲಿಯನ್ ಫಾಲೋವರ್ಸ್​ ಹೊಂದುವ ಮೂಲಕ ಇತಿಹಾಸ ಸೃಷ್ಟಿಸಿದ ಮೋದಿ, ಟ್ರಂಪ್​​ರನ್ನು ಹಿಂದಿಕ್ಕಿದ ಪ್ರಧಾನಿ – Kannada News | Narendra Modi Sets Instagram Record: 100 Million Followers, Surpassing Trump

ನವದೆಹಲಿ, ಫೆಬ್ರವರಿ 26: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಜನಪ್ರಿಯತೆ ವಿಶ್ವಾದ್ಯಂತ ಪ್ರತಿಧ್ವನಿಸುತ್ತಿದೆ. ಈಗ ಪ್ರಧಾನಿ ಮೋದಿ ಅವರ ಹೆಸರಿಗೆ ಮತ್ತೊಂದು ವಿಶಿಷ್ಟ ದಾಖಲೆ ಸೇರ್ಪಡೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಮಾಧ್ಯಮ ವೇದಿಕೆ ಇನ್​ಸ್ಟಾಗ್ರಾಂನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಗುರುವಾರ, ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್ಸ್​​ಗಳನ್ನು ಹೊಂದುವ ಮೂಲಕ ಐತಿಹಾಸಿಕ ಮೈಲಿಗಲ್ಲನ್ನು ದಾಟಿದ ವಿಶ್ವದ ಮೊದಲ ನಾಯಕ ಮತ್ತು ರಾಜಕಾರಣಿಯಾಗಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕೂಡ ಹಿಂದಿಕ್ಕಿ ಮಂದೆ ಸಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು 2014ರಲ್ಲಿ ಮೆಟಾದ ವೇದಿಕೆಯಾದ ಇನ್​ಸ್ಟಾಗ್ರಾಂ ಅಕೌಂಟ್ ತೆರೆದಿದ್ದರು. ಪ್ರಧಾನಿ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗಿಂತ ಎರಡು ಪಟ್ಟು ಹೆಚ್ಚು ಇನ್‌ಸ್ಟಾಗ್ರಾಂ ಫಾಲೋವರ್ಸ್ಗಳನ್ನು ಹೊಂದಿದ್ದಾರೆ. ಪ್ರಧಾನಿ ಮೋದಿ ನಂತರ, ಡೊನಾಲ್ಡ್ ಟ್ರಂಪ್ 43.2 ಮಿಲಿಯನ್ ಫಾಲೋವರ್ಸ್​ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಮತ್ತಷ್ಟು ಓದಿ: ಅಪ್ಪುಗೆ, ನಗು, ತಮಾಷೆ; ಇಸ್ರೇಲ್​ ಪ್ರಧಾನಿಯಿಂದ ಮೋದಿಗೆ ಆತ್ಮೀಯ ಸ್ವಾಗತ

ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ 15 ಮಿಲಿಯನ್ ಫಾಲೋವರ್ಸ್​​ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಬ್ರೆಜಿಲ್ ಅಧ್ಯಕ್ಷರು 14.4 ಮಿಲಿಯನ್ ಫಾಲೋವರ್ಸ್​ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ ಮತ್ತು ಟರ್ಕಿಶ್ ಅಧ್ಯಕ್ಷ ತಯ್ಯಿಪ್ ಎರ್ಡೋಗನ್ 11.6 ಮಿಲಿಯನ್ ಫಾಲೋವರ್ಸ್​ಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ. ಅಂತಿಮವಾಗಿ, ಅರ್ಜೆಂಟೀನಾ ಅಧ್ಯಕ್ಷ ಜೇವಿಯರ್ ಮೈಲಿ 6.4 ಮಿಲಿಯನ್ ಫಾಲೋವರ್ಸ್​ಗಳನ್ನು ಹೊಂದಿದ್ದಾರೆ.

ಈ ದತ್ತಾಂಶವು ಪ್ರಧಾನಿ ಮೋದಿಯವರ ಜಾಗತಿಕ ವ್ಯಾಪ್ತಿ ಮತ್ತು ಪ್ರಪಂಚದಾದ್ಯಂತದ ಯುವಜನರಲ್ಲಿ ಅವರ ಜನಪ್ರಿಯತೆಯನ್ನು ತೋರಿಸುತ್ತದೆ. ಭಾರತದೊಳಗೆ ಸಹ, ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ನಾಯಕರ ನಡುವೆ ಫಾಲೋವರ್ಸ್​​ಗಳ ಸಂಖ್ಯೆಯಲ್ಲಿ ಗಮನಾರ್ಹ ವ್ಯತ್ಯಾಸವಿದೆ.

ಭಾರತವನ್ನೇ ಪರಿಗಣಿಸಿದರೆ, ಪ್ರಧಾನಿ ಮೋದಿ ನಂತರ ಇನ್‌ಸ್ಟಾಗ್ರಾಮ್‌ನಲ್ಲಿ ಅತಿ ಹೆಚ್ಚು ಫಾಲೋವರ್‌ಗಳನ್ನು ಹೊಂದಿರುವ ಎರಡನೇ ವ್ಯಕ್ತಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್. 16.1 ಮಿಲಿಯನ್ ಫಾಲೋವರ್‌ಗಳನ್ನು ಹೊಂದಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಧಾನಿ ಮೋದಿಗಿಂತ ಬಹಳ ಹಿಂದಿದ್ದಾರೆ.

ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸುಮಾರು 12.6 ಮಿಲಿಯನ್ ಫಾಲೋವರ್‌ಗಳನ್ನು ಹೊಂದಿರುವ ಮೂರನೇ ಸ್ಥಾನದಲ್ಲಿದ್ದಾರೆ.

Narendra Modi (50)

​​
ಪ್ರಧಾನಿ ಮೋದಿ ಅವರು ಇಸ್ರೇಲ್‌ಗೆ ಎರಡು ದಿನಗಳ ಅಧಿಕೃತ ಭೇಟಿಯಲ್ಲಿದ್ದಾರೆ ಮತ್ತು ಬುಧವಾರ ಅವರಿಗೆ ಇಸ್ರೇಲಿ ಸಂಸತ್ತು ನೆಸ್ಸೆಟ್‌ನ ಅತ್ಯುನ್ನತ ಗೌರವವಾದ ಸ್ಪೀಕರ್ ಆಫ್ ದಿ ನೆಸ್ಸೆಟ್ ಪದಕವನ್ನು ಪ್ರದಾನ ಮಾಡಿದೆ.ಇಸ್ರೇಲ್ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಮಾಡಿದ ಭಾಷಣದ ನಂತರ ಪದಕವನ್ನು ಪ್ರದಾನ ಮಾಡಲಾಯಿತು.

ತಮ್ಮ ಭಾಷಣದ ನಂತರ, ಪ್ರಧಾನಿ ಮೋದಿ ಅವರು ಇಸ್ರೇಲ್ ಸಂಸತ್ತಿನ ಸದಸ್ಯರೊಂದಿಗೆ, ನೆಸ್ಸೆಟ್ ಜೊತೆ ಸಂವಾದ ನಡೆಸಿದರು.ಪ್ರಧಾನಿ ಮೋದಿ ಅವರು ತಮ್ಮ ಭಾಷಣದ ಸಮಯದಲ್ಲಿ ಎದ್ದು ನಿಂತು ಚಪ್ಪಾಳೆ ತಟ್ಟಿದ್ದಾರೆ. ತಮ್ಮ ಭಾಷಣದಲ್ಲಿ, ಇಸ್ರೇಲ್‌ನ ಪರಿಶ್ರಮ, ಧೈರ್ಯ ಮತ್ತು ಸಾಧನೆಗಳನ್ನು ಭಾರತದಲ್ಲಿ ಬಹಳವಾಗಿ ಮೆಚ್ಚಲಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಟಾಟಾ ಕಡೆಯಿಂದ ವೈಭವ್ ಸೂರ್ಯವಂಶಿಗೆ ಸಿಕ್ತು ಭರ್ಜರಿ ಗಿಫ್ಟ್ – Kannada News | Tata Motors gifts Tata Curvv to Vaibhav Suryavanshi

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರಲ್ಲಿ ಅತ್ಯದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದ ವೈಭವ್ ಸೂರ್ಯವಂಶಿಗೆ (Vaibhav Suryavanshi) ಟಾಟಾ ಕಾರ್ ಲಭಿಸಿದೆ. ಐಪಿಎಲ್​ನಲ್ಲಿ ಅತ್ಯುತ್ತಮ ಸ್ಟ್ರೈಕ್ ರೇಟ್​ನೊಂದಿಗೆ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಆಟಗಾರನಿಗೆ ನೀಡಲಾಗುವ ಟಾಟಾ ಕರ್ವ್ ಕಾರು ಕಳೆದ ಬಾರಿ ರಾಜಸ್ಥಾನ್ ರಾಯಲ್ಸ್ ತಂಡದ ಯುವ ದಾಂಡಿಗ ವೈಭವ್ ಸೂರ್ಯವಂಶಿ ಪಾಲಾಗಿತ್ತು.

Source link

‘ಟಾಕ್ಸಿಕ್’ ರನ್​​​ಟೈಮ್: ಒಂದು ಕಲ್ಲಿಗೆ ‘ಎರಡು’ ಹಕ್ಕಿ ಹೊಡೆದರೇ ಯಶ್? – Kannada News | Yash starrer Toxic Runtime leak, movie may release in sequel

ಯಶ್ (Yash) ನಟಿಸಿರುವ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಮೂರು ವಾರಗಳಷ್ಟೆ ಬಾಕಿ ಇದೆ. ಸಿನಿಮಾದ ಪ್ರೀ ರಿಲೀಸ್ ಸೇಲ್ಸ್ ಬಹುತೇಕ ಪೂರ್ಣಗೊಂಡಿದ್ದು, ಸಿನಿಮಾದ ಪಾತ್ರಗಳ ಪೋಸ್ಟರ್, ಅದ್ಧೂರಿ ಟೀಸರ್ ಎಲ್ಲವೂ ಬಿಡುಗಡೆ ಆಗಿವೆ. ಇದೀಗ ಯಶ್ ಮತ್ತು ಇತರೆ ತಾರಾಗಣ ಪ್ರಚಾರಕ್ಕೆ ಅಖಾಡಕ್ಕೆ ಇಳಿಯಬೇಕಿದೆ. ಚಿತ್ರತಂಡ, ಸಿನಿಮಾದ ಬಗ್ಗೆ ಅಧಿಕೃತವಾಗಿ ಹೆಚ್ಚಿನ ಮಾಹಿತಿಗಳನ್ನು ಬಿಟ್ಟುಕೊಡುತ್ತಿಲ್ಲ ಇದೇ ಕಾರಣಕ್ಕೆ ಸಿನಿಮಾದ ಬಗ್ಗೆ ಹಲವು ರೀತಿಯ ಊಹಾಪೋಹಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇದೀಗ ಸಿನಿಮಾದ ರನ್​​ಟೈಮ್ ಜೊತೆಗೆ ಮತ್ತೊಂದು ಸುದ್ದಿಯೂ ಸಹ ಸಖತ್ ವೈರಲ್ ಆಗುತ್ತಿದೆ.

‘ಟಾಕ್ಸಿಕ್’ ಸಿನಿಮಾ ಇನ್ನೂ ಸೆನ್ಸಾರ್ ಆಗಿಲ್ಲ. ಆದರೆ ಶೀಘ್ರವೇ ಸಿನಿಮಾ ಸೆನ್ಸಾರ್ ಆಗುವ ಸಾಧ್ಯತೆ ಇದೆ. ಏಕೆಂದರೆ ಈಗಾಗಲೇ ಸಿನಿಮಾದ ವಿರುದ್ಧ ಸೆನ್ಸಾರ್ ಮಂಡಳಿಗೆ ದೂರು ಹೋಗಿರುವುದರಿಂದ ಸಿನಿಮಾಕ್ಕೆ ಸೆನ್ಸಾರ್ ಸಮಸ್ಯೆ ಎದುರಾಗುವ ಸಾಧ್ಯತೆ ಇರುವ ಕಾರಣ, ಚಿತ್ರತಂಡವು ಯೋಜಿತ ಸಮಯಕ್ಕಿಂತಲೂ ಮುಂಚಿತವಾಗಿಯೇ ಸೆನ್ಸಾರ್​​ ಮಂಡಳಿಗೆ ಸಿನಿಮಾವನ್ನು ಕಳಿಸಲಿದೆ. ಬಹುಷಃ ಮುಂದಿನ ವಾರ ಸಿನಿಮಾಕ್ಕೆ ಸೆನ್ಸಾರ್ ಆಗುವ ಸಾಧ್ಯತೆ ಇದೆ.

ಆದರೆ ಆ ಒಳಗೆ ಸಿನಿಮಾದ ರನ್​​ಟೈಮ್ ಅಂದರೆ ಸಿನಿಮಾದ ಒಟ್ಟು ಅವಧಿ ಲೀಕ್ ಆಗಿದ್ದು, ‘ಟಾಕ್ಸಿಕ್’ ಸಿನಿಮಾದ ಒಟ್ಟು ರನ್​​ಟೈಮ್ ಕೇವಲ 2 ಗಂಟೆ 20 ನಿಮಿಷ ಎನ್ನಲಾಗುತ್ತಿದೆ. ಇದು ಕೆಲವು ಯಶ್ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರೆ ಇನ್ನು ಕೆಲವರಿಗೆ ಡಬಲ್ ಖುಷಿಯನ್ನು ಸಹ ತಂದಿದೆ. ಈಗೆಲ್ಲ ಸಿನಿಮಾಗಳು 3 ಗಂಟೆ ವರೆಗೆ ರನ್​​ಟೈಮ್ ಹೊಂದಿರುತ್ತವೆ, ಕೆಲ ಸಿನಿಮಾಗಳು ಮೂರು ಗಂಟೆಗೂ ಹೆಚ್ಚಿನ ರನ್​​ಟೈಮ್ ಅನ್ನು ಸಹ ಹೊಂದಿವೆ. ಆದರೆ ‘ಟಾಕ್ಸಿಕ್’ ಸಿನಿಮಾ ಬಹಳ ಕಡಿಮೆ ರನ್​​ಟೈಮ್ ಹೊಂದಿರುವುದು ಆಶ್ಚರ್ಯ ತಂದಿದೆ.

ಇದನ್ನೂ ಓದಿ:ಯಶ್ ‘ಟಿಕೆಟ್’ ಲುಕ್ ಎಐ ಎಂದವರಿಗೆ ಸಿಕ್ತು ಉತ್ತರ; ಯಶ್ ಮೇಕೋವರ್ ನೋಡಿ

‘ಟಾಕ್ಸಿಕ್’ ಸಿನಿಮಾ ಸೀಕ್ವೆಲ್​​​ನಲ್ಲಿ ಬಿಡುಗಡೆ ಆಗುತ್ತಿರುವ ಕಾರಣದಿಂದಾಗಿ ಸಿನಿಮಾದ ರನ್​​ಟೈಮ್​​ ಕಡಿಮೆ ಮಾಡಲಾಗಿದೆ ಎಂಬ ಸುದ್ದಿಗಳು ಕೇಳಿ ಬರುತ್ತಿವೆ. ‘ಟಾಕ್ಸಿಕ್’ ಸಿನಿಮಾ ಟೀಸರ್ ಸೀಕ್ವೆಲ್​​ನ ಬಗ್ಗೆ ಸಣ್ಣ ಸುಳಿವು ನೀಡಿದೆ. ‘ಟಾಕ್ಸಿಕ್’ ಸಿನಿಮಾ ಅಪ್ಪ-ಮಗನ ಕತೆ ಆಗಿರುವ ಕಾರಣ, ಮೊದಲ ಭಾಗದಲ್ಲಿ ರಾಯನ ಇತಿಹಾಸ, ಅವರ ಸಾಹಸಗಳನ್ನು ತೋರಿಸಿ, ಕ್ಲೈಮ್ಯಾಕ್ಸ್​​ನಲ್ಲಿ ಅವನ ಮಗ ಟಿಕೆಟ್​ ಪಾತ್ರವನ್ನು ಇಂಟ್ರೊಡ್ಯೂಸ್ ಮಾಡಿಸುವ ಸಾಧ್ಯತೆ ಇದ್ದು, ಈ ಇಬ್ಬರ ನಡುವಿನ ಜಿದ್ದಾಜಿದ್ದಿನ ಕತೆಯನ್ನು ಎರಡನೇ ಭಾಗದಲ್ಲಿ ತೋರಿಸುವ ಯೋಜನೆ ಇದ್ದಂತಿದೆ.

ಇದೇ ಕಾರಣಕ್ಕೆ ‘ಟಾಕ್ಸಿಕ್’ ಸಿನಿಮಾದ ರನ್​​ಟೈಮ್ ಕಡಿಮೆ ಮಾಡಿ ಎರಡೂ ಕತೆಯನ್ನು ನಿರ್ದೇಶಕರು ಎರಡು ಭಾಗಗಳಿಗೆ ವಿಸ್ತರಿಸಿದಂತಿದ್ದಾರೆ. ಅಲ್ಲದೆ, ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್​​ಗಾಗಿ ಸುಮಾರು ಮೂರು ವರ್ಷಕ್ಕೂ ಹೆಚ್ಚು ಅವಧಿಯನ್ನು ಖರ್ಚು ಮಾಡಲಾಗಿದ್ದು, ಈ ಅವಧಿಯನ್ನು ಕೇವಲ 2:20 ನಿಮಿಷದ ಸಿನಿಮಾ ಮಾತ್ರವನ್ನೇ ಚಿತ್ರೀಕರಿಸಲಾಗಿದೆ ಎಂದರೆ ನಂಬಲು ತುಸು ಕಷ್ಟವೇ. ‘ಟಾಕ್ಸಿಕ್’ ಸಿನಿಮಾವನ್ನು ಗೀತು ಮೋಹನ್​​​ದಾಸ್ ನಿರ್ದೇಶಿಸಿದ್ದು, ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version