Headlines

Video: ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ, ಮೂವರು ಸಾವು – Kannada News | Three Killed in Taiwan Knife Attack; Smoke Devices Thrown at Taipei Station

ತೈಪೆ, ಡಿಸೆಂಬರ್ 20: ತೈವಾನ್​ನಲ್ಲಿ ವ್ಯಕ್ತಿಯೊಬ್ಬ ತೈಪೆ ರೈಲು ನಿಲ್ದಾಣದ ಬಳಿ ಜನರ ಮೇಲೆ ಮನಬಂದಂತೆ ದಾಳಿ ನಡೆಸಿದ್ದಾನೆ. ಘಟನೆಯಲ್ಲಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಶಂಕಿತನು ಮೊದಲು ತೈಪೆಯ ಮುಖ್ಯ ರೈಲು ನಿಲ್ದಾಣದ ಬಳಿ ಸ್ಮೋಕ್ ಬಾಂಬ್ ಎಸೆದಿದ್ದ.ಇದು ಪ್ರಯಾಣಿಕರಲ್ಲಿ ಭಯವನ್ನು ಉಂಟುಮಾಡಿತು. ಜನರು ಆ ಪ್ರದೇಶದಿಂದ ಓಡಿ ಹೋಗಲು ಮುಂದಾದಾಗ ಆತ ಚಾಕುವಿನಿಂದ ದಾಳಿ ನಡೆಸಿದ್ದಾನೆ. ಕೂಡಲೇ ಮಾಹಿತಿ ಪಡೆದ ಪೊಲೀಸರು ಶಂಕಿತನನ್ನು ಪತ್ತೆಹಚ್ಚಲು ಪೊಲೀಸರು ದೊಡ್ಡ ಪ್ರಮಾಣದ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಆ ವ್ಯಕ್ತಿ ಕಟ್ಟಡದ…

Read More

ಅಪ್ರಾಪ್ತ ಮಕ್ಕಳ ಮೇಲೆ ಕಾಂಗ್ರೆಸ್‌ ಮುಖಂಡನ ಪೈಶಾಚಿಕ ಕೃತ್ಯ: ಕಬ್ಬಿಣದ ರಾಡ್‌ನಿಂದ ಏಟು; ಪೊಕ್ಸೋ ಅಡಿಯಲ್ಲಿ ಕೇಸ್! – Kannada News | Bengaluru Congress Leader Anand Naidu Booked Under POCSO for Assaulting Minors

ಬೆಂಗಳೂರು, ಏಪ್ರಿಲ್ 28: ರಾಜಧಾನಿಯಲ್ಲಿ ಕಾಂಗ್ರೆಸ್‌ (Congress) ಮುಖಂಡನೊಬ್ಬ ಅಕ್ರಮ ಸಂಬಂಧದ ವಿಚಾರವಾಗಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಉತ್ತರ ಜಿಲ್ಲಾ ಡಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಆನಂದ್ ನಾಯ್ಡು ಎಂಬಾತನ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಗಂಭೀರ ಪ್ರಕರಣ ದಾಖಲಾಗಿದೆ. ಏನಿದು ಘಟನೆ? ದೂರುದಾರ ರಾಘವೇಂದ್ರ ಎಂಬುವವರ ಪತ್ನಿಯ ಜೊತೆ ಕಾಂಗ್ರೆಸ್ ಮುಖಂಡ ಆನಂದ್ ನಾಯ್ಡು ಅಕ್ರಮ…

Read More

ಶಿವಮೊಗ್ಗದಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯ ಕೊಲೆ: ಅಸಲಿಗೆ ಅಲ್ಲಿ ನಡೆದಿದ್ದೇನು ಗೊತ್ತೇ? ಆಘಾತಕಾರಿ ಮಾಹಿತಿ ಬಯಲು – Kannada News | Shivamogga SSLC Student Murder: surprising Details Emerge in Soolabailu Assault Case

ಶಿವಮೊಗ್ಗ, ಫೆಬ್ರವರಿ 24: ಶಿವಮೊಗ್ಗದ (Shivamogga) ಹೊರವಲಯದ ಸೂಳೆಬೈಲು ಸರಕಾರಿ ಪ್ರೌಢಶಾಲೆಯಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಯ (SSLC Exam) ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ಸ್ಪೇಶಲ್ ಕ್ಲಾಸ್ ತೆಗೆದುಕೊಳ್ಳಲಾಗುತ್ತಿತ್ತು. ಇದೇ ಸೂಳೆಬೈಲು ಬಡಾವಣೆಯ ಸಂಕೇತ್ ಕ್ಲಾಸ್ ಮುಗಿಸಿಕೊಂಡು ವಾಪಸ್ ಮನೆಯತ್ತ ಹೋಗುವಾಗ ಸ್ನೇಹಿತ ಗಿರೀಶ್ ಮೇಲೆ ಅದೇ ಬಡಾವಣೆಯ ಐವರು ಬಾಲಕರು ಏಕಾಏಕಿ ಹಲ್ಲೆ ಮಾಡುತ್ತಿದ್ದರು. ಈ ನಡುವೆ ಗಿರೀಶ್​ನನ್ನು ಬಚಾವ್ ಮಾಡಲು ಅಲ್ಲಿಗೆ ಸಂಕೇತ್ ಹೋಗಿದ್ದಾನೆ. ಆ ಐವರು ಬಾಲಕರು ಸಂಕೇತ್ ಮೇಲೆ ಹಲ್ಲೆ ಮಾಡಿದ್ದಾರೆ. ಇದರಿಂದ ಸಂಕೇತ್ ಅಲ್ಲಿಯೇ…

Read More

ಏನಿದು ಮೀಲ್ ಪ್ರೆಪ್ ಟ್ರೆಂಡ್? ನಿಜವಾಗಿಯೂ ಇದು ಸಮಯ, ಹಣ ಉಳಿಸುವುದರ ಜೊತೆಗೆ ಆರೋಗ್ಯ ಕಾಪಾಡುತ್ತಾ? – Kannada News | Meal Prep Guide: Best Foods, Benefits And Storage Tips

ಇಂದಿನ ಬ್ಯುಸಿ ಜೀವನಶೈಲಿಯಲ್ಲಿ ಮೀಲ್ ಪ್ರೆಪ್ (Meal Prep) ಜನಪ್ರಿಯವಾಗುತ್ತಿದೆ. ಅಂದರೆ, ಕೆಲವು ದಿನ ಅಥವಾ ವಾರಕ್ಕೆ ಬೇಕಾಗುವ ಆಹಾರವನ್ನು ಮುಂಚಿತವಾಗಿಯೇ ಯೋಜಿಸಿ ತಯಾರಿಸಿ ಇಟ್ಟುಕೊಳ್ಳುವುದು. ಇದರಿಂದ ಪ್ರತಿದಿನ ಅಡುಗೆ ಮಾಡುವ ತೊಂದರೆ ಕಡಿಮೆಯಾಗುವುದರ ಜೊತೆಗೆ ಆರೋಗ್ಯಕರ ಆಹಾರವನ್ನು ನಿಯಮಿತವಾಗಿ ಸೇವಿಸಲು ಸಹಾಯವಾಗುತ್ತದೆ. ಅಷ್ಟೇಅಲ್ಲ, ವಾರದ ಬಜೆಟ್ ಅನ್ನು ನಿಯಂತ್ರಿಸಲು ಕೂಡ ಅತ್ಯಂತ ಪರಿಣಾಮಕಾರಿ ವಿಧಾನವಾಗಿದೆ. ಆದರೆ ಮೀಲ್ ಪ್ರೆಪ್‌ಗೆ ಸೂಕ್ತ ಆಹಾರಗಳು ಯಾವವು, ತಯಾರಿಸಿಟ್ಟುಕೊಳ್ಳುವ ಮೊದಲು ಯಾವ ರೀತಿ ಮುನ್ನೆಚ್ಚರಿಕೆ ವಹಿಸಬೇಕು ಎಂಬುದನ್ನು ತಿಳಿದುಕೊಳ್ಳಿ. ಸಮಯ…

Read More

ಡಿಕೆಶಿ ಪರ ಹಿಂದುಳಿದ ಮಠಾಧೀಶರಿಂದ ಬ್ಯಾಟಿಂಗ್; ಹೈಕಮಾಂಡ್​ಗೆ ಪತ್ರ ಬರೆದು ಪೋಸ್ಟ್ – Kannada News | Kalaburagi backward community Seers Push DK Shivakumar for Karnataka CM Post

ಕಲಬುರಗಿ, ಡಿಸೆಂಬರ್ 22: ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ  ಆಡಳಿತ ಹಂಚಿಕೆ ಸಂಬಂಧಿಸಿದ ಚರ್ಚೆ ಮತ್ತೊಮ್ಮೆ ಜೋರಾಗಿದೆ. ಇಲ್ಲಿಯವರೆಗೂ ಸಿಎಂ ಸಿದ್ದರಾಮಯ್ಯಗೆ ಹಿಂದುಳಿದ ವರ್ಗಗಳು ಸಾಥ್ ಕೊಡುತ್ತಲೇ ಬಂದಿವೆ. ಆದರೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಒತ್ತಾಯದೊಂದಿಗೆ ಹಿಂದುಳಿದ ಸಮುದಾಯದ ಮಠಾಧೀಶರು ಮುನ್ನಡೆಸಿರುವ ಮಹತ್ವದ ಚಳವಳಿ ಕಲಬುರಗಿಯಲ್ಲಿ ಆರಂಭವಾಗಿದೆ. ಬ್ರಹ್ಮ ಶ್ರೀ ನಾರಾಯಣ ಗುರುಶಕ್ತಿಪೀಠದ ರಾಜ್ಯಾಧ್ಯಕ್ಷರಾದ ಪ್ರಣವಾನಂದ ಶ್ರೀಗಳ ನೇತೃತ್ವದಲ್ಲಿ ಹಿಂದುಳಿದ ಮಠಾಧೀಶರ ಮಹಾಸಭೆ ಡಿಕೆಶಿ ಪರ ಬಹಿರಂಗ ಬೆಂಬಲ ವ್ಯಕ್ತಪಡಿಸಿದೆ. ಈ…

Read More

ಸಂಪುಟ ಸಭೆಯಲ್ಲಿ ಕಿಡಿ ಹೊತ್ತಿಸಿದ ದಾವಣಗೆರೆ ದಂಗಲ್: ಮುಸ್ಲಿಂ ನಾಯಕರ ತಲೆದಂಡಕ್ಕೆ ಸಚಿವರ ಆಕ್ಷೇಪ – Kannada News | Congress Rift Widens Over Davanagere By poll: Ministers Clash in Cabinet Meeting Over Action Against Muslim Leaders

ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಜಮೀರ್ ಅಹ್ಮದ್ ಖಾನ್ ಜೊತೆ ಮಾತನಾಡುತ್ತಿರುವುದುImage Credit source: tv9 ಬೆಂಗಳೂರು, ಏಪ್ರಿಲ್ 17: ದಾವಣಗೆರೆ ದಕ್ಷಿಣ ಉಪಚುನಾವಣೆಯ ಫಲಿತಾಂಶದ ಹಣೆಬರಹ ಇನ್ನಷ್ಟೇ ಹೊರಬೀಳಬೇಕಿದೆ. ಆದರೆ, ಕಾಂಗ್ರೆಸ್ (Congress) ನಾಯಕರ ನಡುವಿನ ಶೀತಲ ಸಮರ ಮಾತ್ರ ಬೀದಿಗೆ ಬಂದಿದ್ದು, ಪಕ್ಷದ ಒಗ್ಗಟ್ಟು ಮೂರಾಬಟ್ಟೆಯಾಗಿದೆ. ಮುಸ್ಲಿಂ ನಾಯಕರ (Muslim Leaders) ವಿರುದ್ಧ ತೆಗೆದುಕೊಂಡ ಕಠಿಣ ಕ್ರಮಗಳು ಈಗ ಸರ್ಕಾರದ ಒಳಗೂ ಸಂಚಲನ ಮೂಡಿಸಿವೆ. ಎಂಎಲ್​ಸಿ ಅಬ್ದುಲ್ ಜಬ್ಬಾರ್ ಅಮಾನತು ಮತ್ತು…

Read More

ಬಂಗಾಳಿ ಧೋತಿ ಧರಿಸಿ ಬಿಜೆಪಿ ಕಚೇರಿಗೆ ಭರ್ಜರಿ ಎಂಟ್ರಿ ಕೊಟ್ಟ ಪ್ರಧಾನಿ ಮೋದಿ – Kannada News | PM Modi arrives at BJP headquarters in Delhi wearing a Bengali dhoti for victory speech

ನವದೆಹಲಿ, ಮೇ 4: ಪಶ್ಚಿಮ ಬಂಗಾಳ (West Bengal Elections) ಮತ್ತು ಅಸ್ಸಾಂನಲ್ಲಿ ಬಿಜೆಪಿ ಭಾರೀ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ಮೋದಿ (PM Modi Speech) ಆಗಮಿಸಿದ್ದಾರೆ. ತಾವು ಹೋಗುವ ರಾಜ್ಯಗಳಲ್ಲಿ ಅಲ್ಲಿನ ಸಾಂಪ್ರದಾಯಿಕ ಉಡುಗೆ ತೊಡುವ ಮೂಲಕ ಗಮನ ಸೆಳೆಯುವ ಪ್ರಧಾನಿ ಮೋದಿ ಬಂಗಾಳದ ಐತಿಹಾಸಿಕ ಗೆಲುವನ್ನು ಸಂಭ್ರಮಿಸಲು ಮತ್ತು ಬಂಗಾಳದ ಜನತೆಗೆ ತಮ್ಮ ಕೃತಜ್ಞತೆ ಸಲ್ಲಿಸಲು ಇಂದಿನ ಭಾಷಣಕ್ಕೆ ಬಂಗಾಳಿ ಧೋತಿಯನ್ನು ಧರಿಸಿ ಆಗಮಿಸಿದ್ದಾರೆ. ಪ್ರಧಾನಿ…

Read More

ಡ್ರೋನ್ ದಾಳಿ ವೇಳೆ ಅಮೆರಿಕದ ಯುದ್ಧ ವಿಮಾನದಿಂದ ಹೊರಬಿದ್ದ ಪೈಲಟ್ ಇರಾನ್ ವಶದಲ್ಲಿ?

ಟೆಹ್ರಾನ್, ಏಪ್ರಿಲ್ 3: ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಅಮೆರಿಕದ ಎಫ್ -35 ಮತ್ತು ಎಫ್ -15ಇ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ್ದು, ಇರಾನ್‌ನಲ್ಲಿ (Iran War) ಅಮೆರಿಕದ ಪೈಲಟ್​ನನ್ನು ಸೆರೆಹಿಡಿಯಲಾಗಿದೆ ಎಂದು ಇರಾನ್ ಮಾಧ್ಯಮ ಇಂದು ವರದಿ ಮಾಡಿದೆ. ಆದರೆ, ಈ ಸುದ್ದಿ ನಿಜವೇ ಎಂಬುದಕ್ಕೆ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಐಆರ್‌ಜಿಸಿ ಏರೋಸ್ಪೇಸ್ ಫೋರ್ಸ್ ಡಿಕ್ಕಿ ಹೊಡೆದ ಎಫ್ -35 ಯುದ್ಧ ವಿಮಾನದಿಂದ ಅಮೆರಿಕದ ಪೈಲಟ್ ನೈಋತ್ಯ ಇರಾನ್ ಕಡೆಗೆ ಜಿಗಿದಿದ್ದಾರೆ ಎಂದು ತಸ್ನಿಮ್ ಸುದ್ದಿ ಸಂಸ್ಥೆ…

Read More

ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ

ದಾವಣಗೆರೆ, (ಮೇ 01): ಕರ್ನಾಟಕದಲ್ಲಿ ಎರಡು ವಿಧಾನಭಾ ಕ್ಷೇತ್ರಗಳ ಉಪಚುನಾವಣೆ ರಂಗೇರಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ತಮ್ಮ ಅಭ್ಯರ್ಥಿ ಗೆಲುವಿಗೆ ಬಿರು ಬಿಸಿಲಿನಲ್ಲೂ ಗಲ್ಲಿ ಗಲ್ಲಿ ಸುತ್ತುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಸಹ ಬಾಗಲಕೋಟೆಯಲ್ಲಿ ಮೂರು ದಿನ ತಮ್ಮ ಅಭ್ಯರ್ಥಿ ಉಮೇಶ್ ಮೇಟಿ ಪರವಾಗಿ ಭರ್ಜರಿ ಪ್ರಚಾರ ಮಾಡಿ ಇದೀಗ ದಾವಣೆಗೆರೆ ಅಖಾಡಕ್ಕಿಳಿದಿದ್ದಾರೆ. ಹೌದು…ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಾಗಲಕೋಟೆ ಮುಗಿಸಿಕೊಂಡು ಇಂದು (ಮೇ 01) ದಾವಣಗೆರೆಗೆ ಕಾಲಿಟ್ಟಿದ್ದು, ತಮ್ಮ ಅಭ್ಯರ್ಥಿ ಸಮರ್ಥ್ ಪರವಾಗಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಆದ್ರೆ,…

Read More

ಶಿವಮೊಗ್ಗ: ರಸ್ತೆ ಅಗಲೀಕರಣ ವೇಳೆ ಭೀಕರ ದುರಂತ; ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವು

ಶಿವಮೊಗ್ಗ, ಏಪ್ರಿಲ್​ 09: ರಸ್ತೆ ಅಗಲೀಕರಣ ವೇಳೆ ಗುಡ್ಡ ಕುಸಿದು ಓರ್ವ ಹೊರ ರಾಜ್ಯದ ಕಾರ್ಮಿಕ ಸೇರಿ ಮೂವರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್​ನಲ್ಲಿ ನಡೆದಿದೆ. ರಾಘವೇಂದ್ರ(37), ರಾಜು(30) ಮತ್ತು ಶಬ್ಬೀರ್(40) ಮೃತರು. ಘಟನಾ ಸ್ಥಳದಲ್ಲಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತಷ್ಟು ಮಾಹಿತಿ ಅಪ್​ಡೇಟ್ ಆಗಲಿದೆ. Source link

Read More