ಕರಾಚಿ ಉಗ್ರರ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಪಾಕಿಸ್ತಾನದ ಆರೋಪಕ್ಕೆ ದೆಹಲಿ ತಿರುಗೇಟು – Kannada News | India rejected Pakistan’s Karachi blast claims calls it baseless
ನವದೆಹಲಿ, ಜೂನ್ 28: ಪಾಕಿಸ್ತಾನದ ಕರಾಚಿಯಲ್ಲಿ ಇತ್ತೀಚೆಗೆ ಸಿಂಧ್ ರೇಂಜರ್ಸ್ ಕಾಂಪೌಂಡ್ ಮೇಲೆ ನಡೆದ ದಾಳಿಯ ಹಿಂದೆ ನವದೆಹಲಿಯ ಕೈವಾಡವಿದೆ ಎಂಬ ಪಾಕಿಸ್ತಾನದ (Pakistan) ಆರೋಪವನ್ನು ಭಾರತ ತಳ್ಳಿಹಾಕಿದೆ. ಈ ಹೇಳಿಕೆ “ಆಧಾರರಹಿತ” ಎಂದು ಕರೆದಿರುವ ಭಾರತ ಪಾಕಿಸ್ತಾನದಿಂದಲೇ ಕಾರ್ಯಾಚರಣೆ ನಡೆಸುತ್ತಿರುವ ಭಯೋತ್ಪಾದಕ ಮೂಲಸೌಕರ್ಯಗಳನ್ನು ಧ್ವಂಸಗೊಳಿಸುವುದರತ್ತ ಇಸ್ಲಮಾಬಾದ್ ಗಮನ ಹರಿಸಬೇಕು ಎಂದು ಭಾರತ ಒತ್ತಾಯಿಸಿದೆ. ಕರಾಚಿ ದಾಳಿಗೆ ಭಾರತವೇ ಕಾರಣ ಎಂದು ಬಿಂಬಿಸಲು ಯತ್ನಿಸುತ್ತಿರುವ ಪಾಕಿಸ್ತಾನದ ವರದಿಗಳ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ…